Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ : ಉಡುಪಿಯಲ್ಲಿ ಇಂದು ಸರ್ಕಾರಿ ಪ್ರೌಢಶಾಲೆಯಲ್ಲಿ ಇದ್ದಂತಹ 35 ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ನಡೆಸಿರುವ ಘಟನೆ, ಉಡುಪಿಯ ಒಳಕಾಡು ವಾರ್ಡ್ ನಲ್ಲಿರುವ ಪ್ರೌಢಶಾಲೆಯಲ್ಲಿ ನಡೆದಿದೆ. ಹೌದು ಶಾಲೆಯಲ್ಲಿದ್ದ 35ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ನಡೆಸಿದೆ.ಹೆಜ್ಜೇನು ದಾಳಿ ಮಾಡಿದ ತಕ್ಷಣ ಮಕ್ಕಳನ್ನು ಆಸ್ಪತ್ರೆ ಕರೆದೊಯ್ಯಲು SDMC ಸದಸ್ಯ ಬಂದಿದ್ದಾನೆ. ಈ ಗೆಳೆಯ SDMC ಸದಸ್ಯನ ಮೇಲೂ ಕೂಡ ಹೆಜ್ಜೆನು ದಾಳಿ ಮಾಡಿದೆ. ಸರ್ಕಾರಿ ಶಾಲೆಯ ತರಗತಿಯ ಪಕ್ಕದಲ್ಲಿ 5 ಹೆಜ್ಜೆನು ಗೂಡುಗಳು ಇವೆ. ಸದ್ಯ ಜಿಲಾಸ್ಪತ್ರೆಯ ಐಸಿಯುವಿನಲ್ಲಿ SDMC ಸದಸ್ಯನಿಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ.
ಕೊಪ್ಪಳ : ಇಂದು ಕೊಪ್ಪಳದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಸ್ಟೀಲ್ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಅಲ್ಲಾಗ್ರಾಮದ ಬಳಿ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಈ ದುರಂತ ನಡೆದಿದೆ. ಹೌದು ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ 9 ಜನ ಅಸ್ವಸ್ಥರಾಗಿದ್ದು, ಹೊಸಪೇಟೆ ಬಳಿ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಈ ಒಂದು ಘಟನೆ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಓರ್ವ ಕಾರ್ಮಿಕ ಮೃತಪಟ್ಟು, ಹತ್ತಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ಅಲ್ಲಾನಗರ ಗ್ರಾಮದ ನಿವಾಸಿ ಮಾರುತಿ ಕೊರಗಲ್ (24) ಮೃತವ್ಯಕ್ತಿ ಎಂದು ಗುರುತಿಸಲಾಗಿದೆ. ಓರ್ವ ಕಾರ್ಮಿಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಕೊಪ್ಪಳ ತಾಲೂಕಿನ ಅಲ್ಲಾನಗರ ಗ್ರಾಮದ ಬಳಿಯ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ 10 ಜನ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.…
ಉತ್ತರಪ್ರದೇಶ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ದೇಶದ ಎಲ್ಲಾ ರಾಜ್ಯಗಳು ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳಿಂದ ಅನೇಕ ಜನರು ಭೇಟಿ ನೀಡುತ್ತಿದ್ದಾರೆ. ಇದೀಗ ಪ್ರಯಾಗ್ ರಾಜ್ ನಲ್ಲಿ ವಿಮಾನ ವಿಳಂಬವಾಗಿದ್ದಕ್ಕೆ ಅನ್ನ ನೀರಿಲ್ಲದೆ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಹೌದು ತಾಂತ್ರಿಕ ದೋಷದಿಂದ ಸ್ಪೈಸ್ ಜೆಟ್ ವಿಮಾನ ಹಾರಾಟ ಇದೀಗ ವಿಳಂಬವಾಗಿದೆ. ಪ್ರಯಾಗ್ ರಾಜ್ ನಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನ ಇದೀಗ ವಿಳಂಬವಾಗಿದೆ. ಗಂಟೆಗಟ್ಟಲೆ ವಿಳಂಬವಾಗಿದ್ದರಿಂದ ವಿಮಾನ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಮಧ್ಯಾಹ್ನ 2:10ಕ್ಕೆ ಹೊರಡಬೇಕಿದ್ದ ವಿಮಾನ SG664 ಸಂಜೆಯಾದರೂ ವಿಮಾನ ಹೊರಡದಿದ್ದಕ್ಕೆ ಪ್ರಯಾಣಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಬೆಳಗ್ಗೆಯಿಂದ ವಿಮಾನ ನಿಲ್ದಾಣದಲ್ಲಿ ಕನ್ನಡಿಗರು ಕಾದು ಕುಳಿತಿದ್ದಾರೆ. ಅನ್ನ, ನೀರಿಲ್ಲದೆ ನೂರಾರು ವಿಮಾನ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ರಾತ್ರಿ 11 15ಕ್ಕೆ ವಿಮಾನ ಟೇಕ್ ಆಫ್ ಆಗುವುದಾಗಿ ಸಿಬ್ಬಂದಿಗಳು ಹೇಳುತ್ತಿದ್ದಾರೆ. ಸದ್ಯ ಸ್ಪೈಸ್ ಜೆಟ್ ವಿಮಾನ ಯಾನ ಸಂಸ್ಥೆಯ ವಿರುದ್ಧ ಸದ್ಯ ಪ್ರಯಾಣಿಕರು ಆಕ್ರೋಶ ಹೊರ…
ಚಿಕ್ಕಬಳ್ಳಾಪುರ : ಮೂರ್ಚೆ ರೋಗ ಇದ್ದಂತಹ ಯುವಕನೊಬ್ಬ ಅಸ್ವಸ್ಥಗೊಂಡು ಬೋಲೇರೋ ವಾಹನದಲ್ಲಿ ಮಲಗಿದ್ದಲ್ಲಿಯೇ ಸಾವನಪ್ಪಿದ್ದು, ವಾಹನದ ಮಾಲೀಕ ಬಂಧು ನೋಡಿದಾಗ ಯುವಕವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಲ್ಲಿ ನಡೆದಿದೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಒಂದು ಘಟನೆ ನಡೆದಿದೆ. ಗೌರಿಬಿದನೂರು ನಗರದ ನಿವಾಸಿ ಸಲ್ಮಾನ್ ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಮೂರ್ಛೆ ರೋಗದಿಂದ ಬಳಲುತ್ತಿದ್ದ ಸಲ್ಮಾನ್ ಅಸ್ವಸ್ಥಗೊಂಡು ವಾಹನದಲ್ಲಿ ಕುಳಿತಿದ್ದ. ವಾಹನದ ಮಾಲೀಕ ಬಂದು ನೋಡಿದಾಗ ಸಲ್ಮಾನ್ ಮೃತಪಟ್ಟಿದ್ದ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಕಲಬುರ್ಗಿ : ಆಕಸ್ಮಿಕ ಬೆಂಕಿಯಿಂದಾಗಿ 8 ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಜೇವರ್ಗಿ ತಾಲೂಕಿನ ಬುಟ್ನಾಳ ರಸ್ತೆಯಲ್ಲಿರುವ 8 ಅಂಗಡಿಗಳು ಆಕಸ್ಮಿಕ ಬೆಂಕಿಯಿಂದಾಗಿ ಸುಟ್ಟು ಕರಕಲಾಗಿವೆ . ದೇವೇಂದ್ರ, ಮನೋಹರ, ಶ್ರೀಶೈಲ್, ಪ್ರಕಾಶ್, ಮೋಹನ್ ಹಾಗೂ ಬಸವರಾಜ್ ಎಂಬುವವರ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಈ ವೇಳೆ 8 ಅಂಗಡಿಯಲ್ಲಿದ್ದ ಸಾಗುವಾನಿ ಬಾಗಿಲಗಳು, ಯಂತ್ರಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾಸ್ಥಳಕ್ಕೆ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಮೋಹನ್ ಲಾಲ್ ಎನ್ನುವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರಿಂದ ಆರೋಪಿಯನ್ನು ಬಂಧಿಸಲಾಗಿದೆ. ರಾಜಸ್ಥಾನದಲ್ಲಿ ಬೆಂಗಳೂರು ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಆರೋಪಿಗೆ ಶ್ವೇತಾ ಚಿನ್ನಾಭರಣ ಕೊಟ್ಟಿದ್ದ ಆರೋಪ ಕೇಳಿ ಬಂದಿತ್ತು. ಮೋಹನ್ ಲಾಲ್ ಗೆ ಸುಮಾರು 1ಕೆಜಿ 800 ಗ್ರಾಂ ಚಿನ್ನಾಭರಣ ಕೊಟ್ಟಿದ್ದ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಮೋಹನ್ ಲಾಲ್ ಪರಾರಿಯಾಗಿದ್ದ. ಸದ್ಯ ಆತನನ್ನು ರಾಜಸ್ಥಾನದಲ್ಲಿ ಬಂಧಿಸಿ ಬೆಂಗಳೂರು ಪೊಲೀಸರು ಕರೆತಂದಿದ್ದಾರೆ. ಆರೋಪಿಯನ್ನು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ವ್ಯಕ್ತಿಯೊಬ್ಬರು 10 ಸಾವಿರಕ್ಕೆ ಕಾರು ಬುಕ್ ಮಾಡಿ ಬಳಿಕ ಕ್ಯಾನ್ಸಲ್ ಮಾಡಿದ್ದರು. ನಂತರ ಕಸ್ಟಮರ್ ಕೇರ್ ಗೆ ಕರೆ ಮಾಡಿ ಹಣ ವಾಪಸ್ ನೀಡುವಂತೆ ತಿಳಿಸಿದಾಗ ಇದೇ ವೇಳೆ ಸೈಬರ್ ವಂಚಕರು ವ್ಯಕ್ತಿಯಿಂದ ಸುಮಾರು 20 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನ ಇಂದಿರಾನಗರ ನಿವಾಸಿ ಕೆ. ಸುಮನಾ ಪ್ರಸಾದ್ ಎಂಬುವರು ವಂಚನೆಗೊಳಗಾಗಿದ್ದು,ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸುಮನಾ ಪ್ರಸಾದ್ ಅವರು ಕೆಲಸ ನಿಮಿತ್ತ ಹೊರ ಹೋಗಲು ಜ.23ರಂದು ಕಾರು ಬಾಡಿಗೆ ಪಡೆಯಲು ಗೂಗಲ್ನಲ್ಲಿ ಶೋಧ ನಡೆಸಿದ್ದರು. ಈ ವೇಳೆ ಸ್ಪೇನಿ ಕಾರ್ ಎಂಬ ವೆಬ್ಸೈಟ್ನಲ್ಲಿ ಕಾರನ್ನ ಬುಕ್ ಮಾಡಿ ಕ್ಯೂ ಆರ್ ಕೋಡ್ ಮೂಲಕ 10 ಸಾವಿರ ರೂಪಾಯಿ ಪಾವತಿಸಿದ್ದರು. ಬಳಿಕ ಆರ್ಡರ್ ರದ್ದು ಮಾಡಿದ್ದರು. ಗೂಗಲ್ ಮುಖಾಂತರ ಕಸ್ಟಮರ್ ಕೇರ್ ನಂಬರ್ ಪಡೆದು ಹಣ ವಾಪಸ್ ನೀಡುವಂತೆ ಮನವಿ ಮಾಡಿದ್ದರು. ಈ ವೇಳೆ ವಾಟ್ಸಪ್ ಮೂಲಕ ಶೇರ್ ದಿ…
ಮೈಸೂರು : ಇಂದು ಮೈಸೂರಲ್ಲಿ ಘೋರ ದುರಂತ ಸಂಭವಿಸಿದ್ದು, ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿದಿದೆ. ಈ ವೇಳೆ ಅವಶೇಷಗಳ ಕಟ್ಟಡದ ಅವಶೇಷಗಳ ಅಡಿ ಓರ್ವ ಕಾರ್ಮಿಕ ಸಿಲುಕಿದ್ದಾನೆ ಎಂದು ಹೇಳಲಾಗುತ್ತಿದೆ. ಹೌದು ಕಾಲೇಜು ಕಟ್ಟಡ ಕಾಮಗಾರಿಯ ವೇಳೆ ಕಿಟಕಿ ತೆಗೆಯುವಾಗ ಕಾಲೇಜು ಕಟ್ಟಡ ಕುಸಿದಿದೆ. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಕಟ್ಟಡದ ಅವಶೇಷಗಳ ಅಡಿ ಸದ್ದಾಂ (32) ಎನ್ನುವ ಕಾರ್ಮಿಕ ಸಿಲುಕಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಗೌಡಾಯಿಸಿ ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ ಪೊಲೀಸರು ಕೂಡ ಘಟನೆ ಸ್ಥಳಕ್ಕೆ ದೌಡಯಿಸಿದ್ದಾರೆ.
ತುಮಕೂರು : ತುಮಕೂರಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರೆ. ತುಮಕೂರಿನ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ಹೌದು ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ಈ ದುರಂತ ಸಂಭವಿಸಿದ್ದು, ಬತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವಾಗ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿದೆ. ಈ ವೇಳೆ ಟ್ಯಾಂಕ್ ಬಳಿ ಕೆಲಸ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.ಇನ್ನು ಉಳಿದ ಮೂವರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿದ್ದು, ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ಇಂದು ಮೈಸೂರಲ್ಲಿ ಘೋರ ದುರಂತ ಸಂಭವಿಸಿದ್ದು, ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿದಿದೆ. ಈ ವೇಳೆ ಅವಶೇಷಗಳ ಕಟ್ಟಡದ ಅವಶೇಷಗಳ ಅಡಿ ಓರ್ವ ಕಾರ್ಮಿಕ ಸಿಲುಕಿದ್ದಾನೆ ಎಂದು ಹೇಳಲಾಗುತ್ತಿದೆ. ಹೌದು ಕಾಲೇಜು ಕಟ್ಟಡ ಕಾಮಗಾರಿಯ ವೇಳೆ ಕಿಟಕಿ ತೆಗೆಯುವಾಗ ಕಾಲೇಜು ಕಟ್ಟಡ ಕುಸಿದಿದೆ. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಕಟ್ಟಡದ ಅವಶೇಷಗಳ ಅಡಿ ಸದ್ದಾಂ (32) ಎನ್ನುವ ಕಾರ್ಮಿಕ ಸಿಲುಕಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಯಿಸಿ, ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ ಪೊಲೀಸರು ಕೂಡ ಘಟನೆ ಸ್ಥಳಕ್ಕೆ ದೌಡಯಿಸಿದ್ದಾರೆ.











