Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ಬೆಂಗಳೂರಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ನಾಯಿ ಮುದ್ದು ಮಾಡು ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಪರಿಚಿತನಿಂದ ಯುವತಿಯ ಮೈ ಕೈ ಮುಟ್ಟಿ ವರ್ತನೆ ತೋರಿದ್ದಾನೆ. ಈ ಒಂದು ಘಟನೆ ನಡೆದಿದ್ದು ಬೆಂಗಳೂರಿನ ಜ್ಞಾನಭಾರತಿ ಬಳಿಯ ಉಪಕಾರ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರಲ್ಲಿ ವಾಕಿಂಗ್ ಗೆ ಎಂದು ಯುವತಿ ತನ್ನ ಮುದ್ದಿನ ನಾಯಿಯೊಂದಿಗೆ ತೆರಳಿದ್ದಾಳೆ ಈ ವೇಳೆ ಅಪಚಿತ ಕಾಮುಕನೊಬ್ಬ ಬಂದು ನಾಯಿಯನ್ನು ಮುಟ್ಟಬಹುದಾ ಎಂದು ಕೇಳಿ ಯುವತಿಯ ಮೈಕೈ ಮುಟ್ಟಿಯ ಅಸಭ್ಯ ವರ್ತನೆ ತೋರಿದ್ದಾನೆ. ಇದರಿಂದ ಯುವತಿ ಆತನ ಕಪಾಳಕ್ಕೆ ಬಾರಿಸಿದ್ದಾಳೆ, ಆದರೂ ಕೂಡ ಆತ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಭಯಗೊಂಡು ಯುವತಿ ಓಡಿದ್ದಾಳೆ. ಓಡುವ ವೇಳೆ ಆಕೆಯ ಬಳಿದಂತಹ ಮೊಬೈಲ್ ಅನ್ನು ಕಸಿದು ಕಾಮುಕ ಪರಾರಿಯಾಗಿದ್ದಾನೆ.
ಮಂಡ್ಯ :- ಮದ್ದೂರು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನ.5 ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಕೃಷಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಮದ್ದೂರು ತಾಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ವೇತಾ ( 38 ) ಎನ್ನಲಾಗಿದೆ. ಕಳೆದ ನ.5 ರಂದು ಮಧ್ಯಾಹ್ನದ ವೇಳೆ ಮದ್ದೂರು ನಗರದ ನ್ಯಾಯಾಲಯದ ಸಂಕೀರ್ಣದ ಮುಂಭಾಗ ಶ್ವೇತಾ ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಮಾರುತಿ ಸುಜುಕಿ ಸ್ವಿಫ್ಟ್ ಡಿಜೈರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಶ್ವೇತಾ ಅವರ ತಲೆ, ಕೈ ಕಾಲು ಗಂಭೀರ ಗಾಯವಾಗಿತ್ತು. ತಕ್ಷಣವೇ ವಾಹನ ಸವಾರರು ಹಾಗೂ ಸ್ಥಳೀಯರು ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಡಿಎಂಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸತತ ಹತ್ತು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ…
ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮಿಕ್ಸರ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಗದಗ ಎಮ್.ಜಿ.ಆರ್.ಡಿ.ಪಿ.ಆರ್ ವಿಶ್ವ ವಿದ್ಯಾಲಯ ಬಳಿ ನಡೆದಿದೆ. 9 ವರ್ಷದ ಮನೋಜ್ ಕಮತರ ಹಾಗೂ 18 ವರ್ಷದ ಆನಂದ ವಾರದ ಮೃತ ಯುವಕರು. ಮೃತರು ಗದಗ ತಾಲೂಕಿನ ನಾಗಾವಿಯ ಗ್ರಾಮದ ನಿವಾಸಿಗಳು ಎನ್ನಲಾಗಿದೆ.ಮೃತರು ಗದಗ ಜಿಮ್ಸ್ ನಿಂದ ನಾಗಾವಿ ಗ್ರಾಮಕ್ಕೆ ಹೊರಟಿದ್ದರು. ಅತಿಯಾದ ವೇಗದಲ್ಲಿ ಓವರ್ ಟೆಕ್ ಮಾಡುವ ವೇಳೆ ಎದುರು ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ವಾಹನಕ್ಕೆ ಹೊಡೆದಿದ್ದಾರೆ. ಗದಗ ಟು ಹೊನ್ನಳ್ಳಿ-57 ರಾಜ್ಯ ಹೆದ್ದಾರಿ ಇದಾಗಿದ್ದು, ನಾಗಾವಿ ಬಳಿಯ ಮಹಾತ್ಮ ಗಾಂಧಿ ಗ್ರಾಮೀಣಭಿವೃದ್ಧಿ ಪಂಚಾಯತ್ ರಾಜ್ ವಿಶ್ವ ವಿದ್ಯಾನಿಲಯದ ಗೇಟ್ ಬಳಿ ಅಪಘಾತ ನಡೆದಿದೆ.
ಚಾಮರಾಜನಗರ : ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಟ್ಟು ಕೊಡಲ್ಲ. ಡಿಕೆ ಶಿವಕುಮಾರ್ ಸುಮ್ಮನಿರಲ್ಲ. ಇವರಿಬ್ಬರ ತಿಕ್ಕಾಟದ ಮಧ್ಯೆ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತೆ. ಕರ್ನಾಟಕ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರಲಿದೆ. ಚುನಾವಣೆಯನ್ನು ಎದುರಿಸಲು ಬಿಜೆಪಿ ಜೆಡಿಎಸ್ ಸಿದ್ಧವಿದೆ. ಬಿಜೆಪಿ ಜೆಡಿಎಸ್ ಒಟ್ಟಾಗಿ ಮುಂಬರುವ ಚುನಾವಣೆ ಎದುರಿಸಲಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಬಿಹಾರ್ ಚುನಾವಣೆ ಬಳಿಕ ರಾಹುಲ್ ಗಾಂಧಿ ಡಮ್ಮಿ ಆಗಿದ್ದಾರೆ. ಇನ್ಮೇಲೆ ರಾಜ್ಯದಲ್ಲಿ ಏನಿದ್ರೂ ಸಿಎಂ ಸಿದ್ದರಾಮಯ್ಯ ಅವರದ್ದೇ ಪ್ರಾಬಲ್ಯ. ಡಿಸಿಎಂ ಡಿಕೆ ಅಸ್ತ್ರ ಬಿಹಾರ್ ಚುನಾವಣೆಯಲ್ಲಿ ವರ್ಕ್ ಔಟ್ ಆಗಿಲ್ಲ. ಡಿಸಿಎಂ ಡಿಕೆ ಶಿವಕುಮಾರ್ ಶಿವ ಹಾಗು ವಿಷ್ಣುವನ್ನು ನೋಡಿದ್ರು ಈಗ ಬ್ರಹ್ಮನನ್ನು ನೋಡುವುದೊಂದೇ ಬಾಕಿ ಎಂದು ತಿಳಿಸಿದರು. ಬಿಹಾರ್ ಚುನಾವಣೆ ಫಲಿತಾಂಶ ಎಲ್ಲವು ಉಲ್ಟಾ ಆಗೋಗಿದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಮಾತ್ರ ಪ್ರಾಬಲ್ಯವಾಗಿದೆ. ಚುನಾವಣೆ ಫಲಿತಾಂಶ ಬಳಿಕ ಸಿದ್ದರಾಮಯ್ಯ ಪ್ರಾಬಲ್ಯರಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಟ್ಟು ಕೊಡಲ್ಲ. ಡಿಕೆ ಶಿವಕುಮಾರ್…
ಬೆಳಗಾವಿ : ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ನಿನ್ನೆ ಒಟ್ಟು 28 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿದ್ದವು. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಈ ಕುರಿತು ಅಧಿಕಾರಿಗಳಿಗೆ ತನಿಖೆಗೆ ಆದೇಶ ನೀಡಿದ್ದರು. ನಿನ್ನೆ ತಾನೆ ಈ ಒಂದು ಘಟನೆ ನಡೆದಿದ್ದು ಇದೀಗ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಹೌದು ಬೆಳಗಾವಿಯ ಕಿತ್ತೂರು ರಾಣಿ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನಪ್ಪಿದೆ ಹಾಗಾಗಿ ಕೃಷ್ಣಮೂರ್ಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ನಿನ್ನೆ ಸಾವನಪ್ಪಿದ ಕೃಷ್ಣಮೃಗಗಳನ್ನು ಇಂದು ಸಾಮೂಹಿಕವಾಗಿ ಅಂತ್ಯಕ್ರಿಯೆ ಮಾಡಲಾಯಿತು. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿರು ಮೃಗಾಲಯದಲ್ಲಿ ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಇನ್ನುಳಿದ 9 ಕೃಷ್ಣಮೃಗಗಳಿಗೆ ಆರೈಕೆ ಮುಂದುವರೆದಿದೆ. ಕಿರು ಮೃಗಾಲಯದಲ್ಲಿ ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನವೆಂಬರ್ 13ರಂದು 8 ಕೃಷ್ಣ ಮೃಗಗಳು ಮೃತಪಟ್ಟಿದ್ದವು. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನಿಲ್…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿ ಬೈಕ್ ಒಂದು ಧಗಧಗನೆ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಸಜೀವ ದಹನಗೊಂಡಿರುವ ಘಟನೆ ಕಲಬುರ್ಗಿಯ ಮಹಾಗವ್ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗವ್ ಕ್ರಾಸ್ ಬಳಿ ತಡರಾತ್ರಿ ಕಾರು ಮತ್ತು ಬೈಕ್ ಮಧ್ಯ ಭೀಕರ ಅಪಘಾತ ಸಂಭವಿಸಿದೆ. ಬೈಕಿಗೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದಿದೆ. ಮೃತರನ್ನ ಆಕಾಶ ಧನವಂತ ಮತ್ತು ಸುಶೀಲ್ ಎಂದು ತಿಳಿದುಬಂದಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ. ಇಬ್ಬರು ಸಿರಗಾಪುರ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಮಹಾಗವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಅಂತ ಹೇಳಲಾಗುತ್ತಿತ್ತು. ಆದರೆ ಇದೀಗ ಪುರುಷರಿಗೂ ಕೂಡ ಕಳ್ಳರ ಕಾಟ ತಪ್ಪಿಲ್ಲ. ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ ನಡೆಸಲಾಗಿದೆ. ಹೌದು ಬೆಂಗಳೂರಿನಲ್ಲಿ ತಡರಾತ್ರಿ ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ದರೋಡೆಕೋರರು ಅಡ್ಡಗಟ್ಟಿ ದರೋಡೆ ನಡೆಸಿದ್ದಾರೆ. ಬೆಂಗಳೂರಿನ ಶಾಂತಿನಗರದ ಚರ್ಚ್ ರಸ್ತೆಯಲ್ಲಿ ಮೂವರಿಂದ ಈ ಒಂದು ಕೃತ್ಯ ಎಸಗಲಾಗಿದೆ. ನಿನ್ನೆ ದರೋಡೆ ಮಾಡಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರತಿರೋಧ ಒಡ್ಡಿದ ವ್ಯಕ್ತಿಯ ಮೇಲೆ ಮನ ಬಂದಂತೆ ಲಾಂಗ್ ನಿಂದ ದಾಳಿ ಸಹ ಮಾಡಿದ್ದಾರೆ. ಅಲ್ಲದೆ ಮೊಬೈಲ್ ಕದ್ದು ದರೋಡೆಕೋರರು ಪರಾರಿಯಾಗಿದ್ದಾರೆ.ವಿಲ್ಸನ್ ಗಾರ್ಡನ್ ಠಾಣೆಯ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ಮಡಿಕೇರಿ : ಮಡಿಕೇರಿಯಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು ಪತಿಯೊಬ್ಬ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ಸೂಸೈಡ್ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ.ಪತಿ ಜೈಲಿಗೆ ಹೋದ ಸಂದರ್ಭದಲ್ಲಿ ಪತ್ನಿ ಜ್ಯೋತಿ ತವರು ಮನೆ ಸೇರಿಕೊಂಡಿದ್ದರು. ಜೈಲಿಂದ ರಿಲೀಸ್ ಆಗಿದ್ದ ಕೀರ್ತನ್ ನಿನ್ನೆ (ನ.15) ಸಂಜೆ ಪತ್ನಿಯನ್ನ ತನ್ನ ಮನೆಗೆ ಕರೆತರಲು ಹೋಗಿದ್ದಾನೆ. ಎಷ್ಟೇ ಕರೆದರೂ ಪತ್ನಿ ಬರಲು ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಪತಿ ನಿನ್ನೆ ಸಂಜೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿಂದೆಯೂ ಸಾಕಷ್ಟು ಬಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೀರ್ತನ್ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇಂದು ಮೃತದೇಹ ಪತ್ತೆಯಾಗಿದ್ದು, ಮಡಿಕೇರಿ ಗ್ರಾಮಾಂತರ…
ಬೆಂಗಳೂರು : ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರ ರಚನೆ ಕುರಿತು ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಿದರು ಈ ವೇಳೆ ರಾಹುಲ್ ಗಾಂಧಿ ರಾಜ್ಯ ಸಚಿವ ಸಂಪುಟ ಪುನ ರಚನೆಗೆ ತಾತ್ವಿಕ ಒಪ್ಪಿಗೆ ನೀಡಿದರು ಎಂದು ಹೇಳಲಾಗಿತ್ತು ಆದರೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಸಚಿವ ಸಂಪುಟ ಪುನರಚನೆ ಮಾಡದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಸದ್ಯಕ್ಕೆ ಸಿದ್ದರಾಮಯ್ಯ ಸಂಪುಟಕ್ಕೆ ಯಾವುದೇ ಸರ್ಜರಿ ಇಲ್ಲ. ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೆ ಸದ್ಯಕ್ಕೆ ಫುಲ್ ಸ್ಟಾಪ್ ನೀಡಲಾಗಿದೆ. ಸಂಕ್ರಾಂತಿ ಬಳಿಕವಷ್ಟೇ ಸಂಪುಟಕ್ಕೆ ಸರ್ಜರಿ ಸಾಧ್ಯತೆ ಎನ್ನಲಾಗುತ್ತಿದೆ. ಸದ್ಯಕ್ಕೆ ಬದಲಾವಣೆ ಮಾಡದಂತೆ ಹೈಕಮಾಂಡ್ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳಗಾವಿ ಅಧಿವೇಶನ ಮುಗಿಸಿದ ಬಳಿಕವಷ್ಟೇ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ರಾಜ್ಯ ನಾಯಕರಿಗೆ ಈ ಬಗ್ಗೆ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಸಂಕ್ರಾತಿ ಬಳಿಕ…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಘೋರ ಘಟನೆ ಸಂಭವಿಸಿದ್ದು, ಕಾರು ರಿವರ್ಸ್ ತೆಗಿಯುವಾಗ ಚಾಲಕ ಮಗುವಿನ ಮೇಲೆ ಕಾರು ಹರಿಸಿದ್ದಾನೆ. ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಕಾರಿನ ಚಕ್ರಕ್ಕೆ ಸಿಲುಕಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ್ದಾನೆ. ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಒಂದು ವರ್ಷದ ಮಗು ನೂತನ ಎಂದು ತಿಳಿದುಬಂದಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಗುಡ್ಡದ ಅಳಿಯ ಬೆನಕ ಲೇಔಟ್ ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಕಾರು ಹರಿದು ಮೋಹನ್ ಎಂಬುವವರ ಮಗ ನೂತನ ಸಾವನಪ್ಪಿದ್ದಾನೆ. ನಿನ್ನೆ ಬೆಳಿಗ್ಗೆ ಮೋಹನ್ ಮನೆಗೆ ಅಕ್ಕ ದೇವಿಕಾ ಮತ್ತು ಭಾವ ಬಂದಿದ್ದರು. ಈ ವೇಳೆ ರಸ್ತೆಯ ಪಕ್ಕದಲ್ಲಿ ಆಟ ಆಡುತ್ತಿದ್ದ ಮಗುವನ್ನು ಚಾಲಕ ಗಮನಿಸಿಲ್ಲ. ಆಗ ನೂತನ ಮೇಲೆ ಕಾರು ಹರಿದು ಸ್ಥಳದಲ್ಲೇ ನೂತನ ಸಾವನಪ್ಪಿದ್ದಾನೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 106ರ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯಕ್ಕೆ…














