Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಆಪರೇಷನ್ ಸಿಂಧೂರ್ ದಾಳಿ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು. ವಿಜ್ಞಾನಿಗಳಿಗೆ ಸೈನಿಕರಿಗೆ ನಾನು ಸೆಲ್ಯೂಟ್ ಹೇಳುತ್ತೇನೆ. ಆಪರೇಷನ್ ಸಿಂಧೂರವನ್ನು ಸೈನಿಕರು ಯಶಸ್ವಿಗೊಳಿಸಿದ್ದಾರೆ. ದೇಶದ ಪ್ರತಿ ತಾಯಿ ಮತ್ತು ಸಹೋದರಿಯರಿಗೂ ಈ ಪರಾಕ್ರಮ ಸಮರ್ಪಣೆ. ನಮ್ಮ ಭಾರತೀಯ ಸೇನೆ ಪಾಕಿಸ್ತಾನದ ಹೃದಯ ಭಾಗದಲ್ಲಿರುವ ಉಗ್ರರ ಸ್ಥಳಗಳನ್ನು ದ್ವಂಸ ಮಾಡಿದೆ ಎಂದು ತಿಳಿಸಿದರು. ಪಹಲ್ಗಾಮ್ ನಲ್ಲಿ 26 ಅಮಾಯಕರನ್ನು ಹತ್ಯೆಗೈದ ಬಳಿಕ ಉಗ್ರರು ಆರಾಮಾಗಿ ಓಡಾಡಿಕೊಂಡಿದ್ದರು. ದಾಳಿಯ ಮಾಸ್ಟರ್ ಮೈಂಡ್ ಗಳು ಆರಾಮಾಗಿ ಓಡಾಡಿಕೊಂಡಿದ್ದರು. ನಾವು ಒಬ್ಬೊಬ್ಬ ಉಗ್ರರನ್ನು ಹುಡುಕಿ ಕೊಂದಿದ್ದೇವೆ. ಪಾಕಿಸ್ತಾನದ ಕ್ಷಿಪಣಿ ಡ್ರೋನ್ ಗಳನ್ನು ಹೊಡೆದು ಹಾಕಿದ್ದೇವೆ. ಭಾರತ ನೇರವಾಗಿ ಪಾಕಿಸ್ತಾನದ ಹೃದಯಕ್ಕೆ ಹೊಡೆದಿದೆ. ನಮ್ಮ ಕ್ಷಿಪಣಿಗಳು ಅತ್ಯಂತ ನಿಖರವಾಗಿ ದಾಳಿ ಮಾಡಿವೆ. ಪಾಕಿಸ್ತಾನ ಗಡಿಯಲ್ಲಿ ಯುದ್ಧಕ್ಕೆ ಸಿದ್ಧವಾಗಿತ್ತು. ಆದರೆ ಭಾರತ ಅವರ ತಲೆಯ ಮೇಲೆಯೇ ಹೊಡೆದಿದೆ. ನಾವು ಉಗ್ರರ ಕೇಂದ್ರ ಸ್ಥಾನಗಳನ್ನು ದ್ವಂಸಗೊಳಿಸಿದ್ದೇವೆ. ಡ್ರೋನ್ ಗಳಿಂದ ಪಾಕಿಸ್ತಾನ ಏರ್ ಬೇಸ್…
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಯುವಜನತೆ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ವಿದೇಶದಲ್ಲಿ ಓದು ಮುಗಿಸಿ ಇತ್ತೀಚೆಗಷ್ಟೇ ಮನೆಗೆ ಬಂದಿದ್ದ ಯುವಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ದೇವಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಫಾರ್ಮ್ಹೌಸ್ನಲ್ಲಿ ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೈಯೇಶ್ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸದ್ಯ ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಿನ್ನೆ ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಏಕಾಏಕಿ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.
ನವದೆಹಲಿ : ಆಪರೇಷನ್ ಸಿಂಧೂರ್ ದಾಳಿ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು. ವಿಜ್ಞಾನಿಗಳಿಗೆ ಸೈನಿಕರಿಗೆ ನಾನು ಸೆಲ್ಯೂಟ್ ಹೇಳುತ್ತೇನೆ. ಆಪರೇಷನ್ ಸಿಂಧೂರವನ್ನು ಸೈನಿಕರು ಯಶಸ್ವಿಗೊಳಿಸಿದ್ದಾರೆ. ದೇಶದ ಪ್ರತಿ ತಾಯಿ ಮತ್ತು ಸಹೋದರಿಯರಿಗೂ ಈ ಪರಾಕ್ರಮ ಸಮರ್ಪಣೆ. ಪಾಕಿಸ್ತಾನದ ಉಗ್ರ ಸ್ಥಾನಗಳನ್ನು ಶುದ್ಧ ಮಾಡುವವರೆಗೂ ಯಾವುದೇ ಶಾಂತಿಯ ಮಾತಿಲ್ಲ ಎಂದು ಎಚ್ಚರಿಕೆ ನೀಡಿದರು. ನೀರು ಮತ್ತು ರಕ್ತ ಒಂದೇ ಹಾದಿಯಲ್ಲಿ ಹರಿಯುವುದಿಲ್ಲ. ಹಾಗೆಯೇ ವ್ಯಾಪಾರ ಮತ್ತು ಉಗ್ರವಾದ ಜೊತೆಯಾಗಿರಲು ಸಾಧ್ಯವಿಲ್ಲ. ಭಯೋತ್ಪಾದನೆ ನಿಲ್ಲಿಸದಿದ್ದರೆ, ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ. ಯಾವುದೇ ನ್ಯೂಕ್ಲಿಯರ್ ಬ್ಲಾಕ್ ಮೇಲ್ ಗೆ ನಾವು ಹೆದರಲ್ಲ ಉಗ್ರರು, ಉಗ್ರರಿಗೆ ಬೆಂಬಲ ನೀಡುವವರು ಇಬ್ಬರೂ ಒಂದೇ. ಆಪರೇಷನ್ ಸಿಂಧೂರ್ ಒಂದು ಮಾನದಂಡ ರೂಪಿಸಿದೆ. ಮೇಡ್ ಇನ್ ಇಂಡಿಯಾ ರಕ್ಷಣಾ ವ್ಯವಸ್ಥೆಯ ಸಮಯ ಬಂದಿದೆ. ಪಾಕಿಸ್ತಾನ ಬದುಕಬೇಕು ಅಂದರೆ ಉಗ್ರವಾದ ನಿಲ್ಲಿಸಬೇಕು ಭಯೋತ್ಪಾದನೆ ನಿಲ್ಲಿಸದಿದ್ದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ. ಪಾಕಿಸ್ತಾನದ ಉಗ್ರ ಸ್ಥಾನಗಳನ್ನು ಶುದ್ಧ ಮಾಡಲೇಬೇಕು. ಅಲ್ಲಿಯವರೆಗೆ ಶಾಂತಿಯ ಯಾವುದೇ…
ನವದೆಹಲಿ : ಆಪರೇಷನ್ ಸಿಂಧೂರ್ ದಾಳಿ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು. ವಿಜ್ಞಾನಿಗಳಿಗೆ ಸೈನಿಕರಿಗೆ ನಾನು ಸೆಲ್ಯೂಟ್ ಹೇಳುತ್ತೇನೆ. ಆಪರೇಷನ್ ಸಿಂಧೂರವನ್ನು ಸೈನಿಕರು ಯಶಸ್ವಿಗೊಳಿಸಿದ್ದಾರೆ. ದೇಶದ ಪ್ರತಿ ತಾಯಿ ಮತ್ತು ಸಹೋದರಿಯರಿಗೂ ಈ ಪರಾಕ್ರಮ ಸಮರ್ಪಣೆ. ಆಪರೇಷನ್ ಸಿಂಧೂರ್ ಇನ್ನು ಮುಗಿದಿಲ್ಲ ಸದ್ಯಕ್ಕೆ ನಿಂತಿದೆ ಎಂದು ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ನೀಡಿದರು. ಪಹಲ್ಗಾಮ್ ನಲ್ಲಿ 26 ಅಮಾಯಕರನ್ನು ಹತ್ಯೆಗೈದ ಬಳಿಕ ಉಗ್ರರು ಆರಾಮಾಗಿ ಓಡಾಡಿಕೊಂಡಿದ್ದರು. ದಾಳಿಯ ಮಾಸ್ಟರ್ ಮೈಂಡ್ ಗಳು ಆರಾಮಾಗಿ ಓಡಾಡಿಕೊಂಡಿದ್ದರು. ನಾವು ಒಬ್ಬೊಬ್ಬ ಉಗ್ರರನ್ನು ಹುಡುಕಿ ಕೊಂದಿದ್ದೇವೆ. ಪಾಕಿಸ್ತಾನದ ಕ್ಷಿಪಣಿ ಡ್ರೋನ್ ಗಳನ್ನು ಹೊಡೆದು ಹಾಕಿದ್ದೇವೆ. ಭಾರತ ನೇರವಾಗಿ ಪಾಕಿಸ್ತಾನದ ಹೃದಯಕ್ಕೆ ಹೊಡೆದಿದೆ. ನಮ್ಮ ಕ್ಷಿಪಣಿಗಳು ಅತ್ಯಂತ ನಿಖರವಾಗಿ ದಾಳಿ ಮಾಡಿವೆ. ಪಾಕಿಸ್ತಾನ ಗಡಿಯಲ್ಲಿ ಯುದ್ಧಕ್ಕೆ ಸಿದ್ಧವಾಗಿತ್ತು. ಆದರೆ ಭಾರತ ಅವರ ತಲೆಯ ಮೇಲೆಯೇ ಹೊಡೆದಿದೆ. ನಾವು ಉಗ್ರರ ಕೇಂದ್ರ ಸ್ಥಾನಗಳನ್ನು ದ್ವಂಸಗೊಳಿಸಿದ್ದೇವೆ. ಡ್ರೋನ್ ಗಳಿಂದ ಪಾಕಿಸ್ತಾನ ಏರ್ ಬೇಸ್ ಗಳ…
ನವದೆಹಲಿ : ಆಪರೇಷನ್ ಸಿಂಧೂರ್ ದಾಳಿ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು. ವಿಜ್ಞಾನಿಗಳಿಗೆ ಸೈನಿಕರಿಗೆ ನಾನು ಸೆಲ್ಯೂಟ್ ಹೇಳುತ್ತೇನೆ. ಆಪರೇಷನ್ ಸಿಂಧೂರವನ್ನು ಸೈನಿಕರು ಯಶಸ್ವಿಗೊಳಿಸಿದ್ದಾರೆ. ದೇಶದ ಪ್ರತಿ ತಾಯಿ ಮತ್ತು ಸಹೋದರಿಯರಿಗೂ ಈ ಪರಾಕ್ರಮ ಸಮರ್ಪಣೆ ಎಂದು ತಿಳಿಸಿದರು. ಏಪ್ರಿಲ್ 22ರಂದು ಉಗ್ರರು ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ದಾಳಿ ಮಾಡಿದರು. ನಿರ್ದೋಷಿ ಅಮಾಯಕ ನಾಗರೀಕರನ್ನು ಹತ್ಯೆ ಮಾಡಿದರು. ಧರ್ಮವನ್ನು ಕೇಳಿ ಅಮಾಯಕ ರನ್ನು ಕೊಂದರು ಹೆಂಡತಿ ಮಕ್ಕಳ ಮುಂದೆ ಭೀಕರವಾಗಿ ಕೊಂದರು. ಇದು ಉಗ್ರವಾದದ ಅತ್ಯಂತ ಕ್ರೂರವಾದ ಮುಖವಾಗಿತ್ತು. ನನಗೆ ಇದು ಅತ್ಯಂತ ದುಃಖ ತಂದ ವಿಚಾರವಾಗಿತ್ತು. ಉಗ್ರವಾದದ ವಿರುದ್ಧ ದೇಶದ ಎಲ್ಲರೂ ಒಂದಾಗಿ ನಿಂತಿದ್ದೆವು. ಮಣ್ಣಲ್ಲಿ ಮಣ್ಣು ಮಾಡಲು ಸೇನೆಗೆ ಸ್ವಾತಂತ್ರ್ಯ ಕೊಟ್ಟಿದ್ವಿ. ಸಿಂಧೂರ ಅಳಿಸಿದರೆ ಏನಾಗುತ್ತದೆ ಅಂತ ಅವರಿಗೆ ಗೊತ್ತಾಗಿದೆ. ಹೆಣ್ಣು ಮಕ್ಕಳ ಸಿಂಧೂರ್ ಅಳಿಸಿದ ಉಗ್ರರಿಗೆ ಈಗ ಗೊತ್ತಾಗಿದೆ. ಆಪರೇಷನ್ ಸಿಂಧೂರ ದೇಶದ ಹೆಣ್ಣು ಮಕ್ಕಳಿಗೆ ಸಮರ್ಪಣೆ. ಉಗ್ರವಾದಿಗಳು…
ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಕಾಳಗದಲ್ಲಿ ಅಮೆರಿಕ ಮಧ್ಯಸ್ಥಿಕೆ ವಹಿಸಿ ಕದನ ವಿರಾಮ ಘೋಷಿಸುವಲ್ಲಿ ಯಶಸ್ವಿಯಾಯಿತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಮಧ್ಯಸ್ಥಿಕೆ ವಹಿಸಿ ಈ ಒಂದು ಪಾಕಿಸ್ತಾನ ಮತ್ತು ಭಾರತದ ನಡುವೆ ಕದನ ವಿರಾಮ ಘೋಷಿಸಲು ಕಾರಣಿಕರ್ತರಾಗಿದ್ದಾರೆ. ಆದರೆ ಇದೀಗ ಮತ್ತೆ ಡೊನಾಲ್ಡ್ ಟ್ರಂಪ್ ಕದನ ವಿರಾಮದ ಕ್ರೆಡಿಟ್ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೌದು ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸುವಲ್ಲಿ ಡೊನಾಲ್ಡ್ ಟ್ರಂಪ್ ಕೂಡ ಮಹತ್ವದ ಪಾತ್ರವಹಿಸಿದ್ದರು ಎನ್ನಲಾಗುತ್ತಿದೆ. ಇದೀಗ ಡೊನಾಲ್ಡ್ ಟ್ರಂಪ್ ಮತ್ತೆ ಕದನ ವಿರಾಮದ ಕ್ರೆಡಿಟ್ ತೆಗೆದುಕೊಂಡಿದ್ದಾರೆ. ಪರಮಾಣು ಸಂಘರ್ಷವನ್ನು ನಾವು ತಡೆದಿದ್ದೇವೆ. ಅಕಸ್ಮಾತ್ ಕದನ ಮುಂದುವರಿಸಿದರೆ, ವ್ಯಾಪಾರ ಬಂದ್ ಮಾಡಲಾಗುತ್ತೆ ಅಂತ ಹೇಳಿದ್ದೆ. ಎರಡು ದೇಶಗಳ ಜೊತೆಗೆ ವ್ಯಾಪಾರ ಮಾಡಲ್ಲ ಅಂತ ಹೇಳಿದ್ದೆ. ಕರೆ ಮಾಡಿ ಹೇಳಿದ್ದಕ್ಕೆ ಇದೀಗ ಎರಡು ದೇಶಗಳು ಕದನ ವಿರಾಮ ಘೋಷಿಸಿವೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಪರಮಾಣು ಯುದ್ಧ ತಡೆದಿದ್ದೇವೆ. ಪರಮಾಣು…
ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಮುಂಭಾಗದಲ್ಲಿ ನಡೆದಿದೆ. ಮೃತ ಯುವಕರನ್ನು ಗ್ರಾಮದ ಶಕೀಲ್ (18) ಮಹಿಬೂಬ್ (20) ಎಂದು ಗುರುತಿಸಲಾಗಿದೆ. ಬೇಸಿಗೆ ಹಿನ್ನೆಲೆ ಇಂದು ಸ್ನೇಹಿತರ ಜೊತೆ ಭೀಮಾನದಿಗೆ ಈಜಾಡಲು ಬಂದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗು ಸ್ಥಳೀಯರ ಸಹಾಯದಿಂದ ನೀರಿನಿಂದ ಮೃತದೇಹವನ್ನು ತೆಗೆಯಲಾಗಿದ್ದು, ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಒಂದೆಡೆ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಉಗ್ರರ ನೆಲೆಗಳನ್ನು ನಾಶ ಮಾಡಿದೆ. ಅಲ್ಲದೆ ನೂರಕ್ಕೂ ಅಧಿಕ ಉಗ್ರರನ್ನು ಹತ್ಯೆಗೈದಿದೆ. ಇದರ ಮಧ್ಯ ಮಸೀದಿಯಲ್ಲಿದ್ದ ಕುರಾನ್ ಪುಸ್ತಕ ಕದ್ದೊಯ್ದು ಸುಟ್ಟು ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದೆ. ಹೌದು ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ. ಇಂದು ಪ್ರಾರ್ಥನೆಗೆಂದು ಬಂದಾಗ ಕುರಾನ್, ಹದೀಸ್ ಇಲ್ಲದಿರುವುದು ಬೆಳಕಿಗೆ ಬಂದಿದೆ. ಪ್ರಾರ್ಥನೆ ಮುಗಿಸಿದ ಬಳಿಕ ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಕಂಡುಬಂದಿದೆ. ಇದೀಗ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ ಬಳಿಕ ಇಂದು ಎರಡು ದೇಶದ DGMO ಮಹತ್ವದ ಸಭೆ ನಡೆಸಿದರು. ಇದಕ್ಕೂ ಮುನ್ನ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಆಪರೇಷನ್ ಸಿಂಧೂರ್…
ನವದೆಹಲಿ : ಆಪರೇಷನ್ ಸಿಂಧೂರ್ ಕುರಿತು ಭಾರತದ ಮೂರು ಸೇನಾ ಅಧಿಕಾರಿಗಳು ಇಂದು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು. ನವದೆಹಲಿಯ ಮೀಡಿಯಾ ಸೆಂಟರ್ ನಲ್ಲಿ ಸುದ್ದಿಗೋಷ್ಠಿ ನಡೆಸಿದರು.ಈ ವೇಳೆ ಮಾತು ಆರಂಭಿಸಿದ ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮೊದಲಿಗೆ ವಿರಾಟ್ ಕೊಹ್ಲಿಯ ಟೆಸ್ಟ್ ನಿವೃತ್ತಿಯ ಬಗ್ಗೆ ಮಾತನಾಡಿದರು. ನಾವು ಇಂದು ಕ್ರಿಕೆಟ್ ಬಗ್ಗೆ ಮಾತನಾಡಬಹುದು. ನಿಮಗೆಲ್ಲರಿಗೂ ತಿಳಿದಿರುವ ಹಾಗೆ ವಿರಾಟ್ ಕೊಹ್ಲಿ ಇಂದು ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಎಲ್ಲಾ ಭಾರತೀಯರಂತೆ ನನಗೂ ಕೂಡ ಕೊಹ್ಲಿ ನೆಚ್ಚಿನ ಕ್ರಿಕೆಟಿಗ.70 ರ ದಶಕದಲ್ಲಿ ನನ್ನ ಶಾಲೆಯ ದಿನಗಳಲ್ಲಿ ನಡೆದ ಒಂದು ಘಟನೆ ನನಗೆ ಈಗಲೂ ನೆನಪಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ಆಶಸ್ ಸರಣಿ ನಡೆದಿತ್ತು. ಈ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಇಂಗ್ಲೆಂಡ್, ಆಸ್ಟ್ರೇಲಿಯಾದ ಇಬ್ಬರು ಬೌಲರ್ಗಳ ಮುಂದೆ ದೂಳಿಪಟವಾಗಿತ್ತು. ಇಬ್ಬರು ಆಸೀಸ್ ವೇಗಿಗಳಾದ ಜೆಫ್ ಥಾಮ್ಸನ್ ಮತ್ತು ಡೆನ್ನಿಸ್ ಲಿಲ್ಲಿ ಇಂಗ್ಲಿಷ್ ಬ್ಯಾಟಿಂಗ್ ಲೈನ್ ಅಪ್ ಅನ್ನು ಛಿದ್ರಗೊಳಿಸಿದ್ದರು. ಜೆಫ್…
ಮಂಡ್ಯ : ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದಿದ್ದರು, ಈ ಸಂಬಂಧ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಂದೆಯ ಆರೋಗ್ಯದ ಬಗ್ಗೆ ಉತ್ತರ ನಿಖಿಲ್ ಕುಮಾರಸ್ವಾಮಿ ಇದೀಗ ಮಾಹಿತಿ ನೀಡಿ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ಕುಮಾರಸ್ವಾಮಿಯವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ. ಮೇ 14ರಂದು ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗುತ್ತಾರೆ. ಅವರ ತಂದೆ ತಾಯಿಯ ಕೆಲಸ ಕಾರ್ಯ ಶ್ರೀರಕ್ಷೆಯಾಗಿ ಆರೋಗ್ಯ ಕಾಪಾಡುತ್ತೆ. ನಾಡಿನ ಜನತೆಯ ಪ್ರೀತಿ, ಪ್ರಾರ್ಥನೆಗೆ ಕುಮಾರಸ್ವಾಮಿ ಚೆನ್ನಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.