Author: kannadanewsnow05

ಬೆಂಗಳೂರು : ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಇಂದು ರಿಲೀಸ್ ಆಗಿ ಅಬ್ಬರಿಸುತ್ತಿದೆ. ಏಕಪರದೆ ಚಿತ್ರಮಂದಿರಗಳಲ್ಲಿ ಚಿತ್ರವನ್ನು ಜನರು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಹುತೇಕ ಕಡೆಗಳಲ್ಲಿ ಮುಂಜಾನೆ 6.30ಕ್ಕೆ ಶೋ ಆಯೋಜನೆ ಮಾಡಲಾಗಿತ್ತು. ಮೊದಲ ಶೋ ನೋಡಿ ಬಂದ ಅಭಿಮಾನಿಗಳು ತಮ್ಮ ವಿಮರ್ಶೆ ತಿಳಿಸುತ್ತಿದ್ದಾರೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಇತ್ತ ಅವರ ‘ಡೆವಿಲ್’ ಸಿನಿಮಾ ರಿಲೀಸ್ ಆಗಿದೆ. ಮಾಸ್ ಡೈಲಾಗ್, ಟ್ವಿಸ್ಟ್​ಗಳನ್ನು ಒಳಗೊಂಡ ಕಥೆಗಳ ಮೂಲಕ ಫ್ಯಾನ್ಸ್​ಗೆ ಮಿಲನ ಪ್ರಕಾಶ್ ಖುಷಿ ನೀಡಿದ್ದಾರೆ. ಈ ಚಿತ್ರವನ್ನು ಫ್ಯಾನ್ಸ್ ಹೆಚ್ಚು ಖುಷಿಯಿಂದ ನೋಡುತ್ತಿದ್ದಾರೆ. ‘ನಾವು ಗೆದ್ವಿ’ ಎಂದು ಎಲ್ಲರೂ ಹಾಕಿಕೊಳ್ಳುತ್ತಿದ್ದಾರೆ. ಇದೆ ವೇಳೆ ಮಾಧ್ಯಮಗಳೊಂದಿಗೆ ಸಹೋದರ ದಿನಕರ್ ತೂಗುದೀಪ್ ಅವರು ಮಾತನಾಡಿ, ಸಿನಿಮಾ ರಿಲೀಸ್ ವೇಳೆ ದರ್ಶನ್ ಅಭಿಮಾನಿಗಳ ಜೊತೆ ಇರುತ್ತಾರೆ ಅಂತ ಅಭಿಮಾನಿಗಳು ಅಂದುಕೊಂಡಿದ್ದರು ಆದರೆ ಅದು ಆಗಲಿಲ್ಲ ಅಂತ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಕಾನೂನು ಆದೇಶದ…

Read More

ಚಿತ್ರದುರ್ಗ : ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಜಿ ಆರ್ ಹಳ್ಳಿ ಬಳಿ ಈ ಒಂದು ದುರಂತ ಸಂಭವಿಸಿದೆ. ಜಿ.ಆರ್ ಹಳ್ಳಿ ನಿವಾಸಿಯಾದ ಮಾರುತಿ (19) ಹಾಗೂ ವಿಶ್ವನಾಥ್ (23) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಕುರಿ ಮೇಕೆಗಳಿಗೆ ಹೊಂಡದಲ್ಲಿ ಇಬ್ಬರು ನೀರು ಕುಡಿಸುವಾಗ ಆಕಸ್ಮಿಕವಾಗಿ ಮಾರುತಿ ಮತ್ತು ವಿಶ್ವನಾಥ್ ಕಾಲು ಜಾರಿ ಬಿದ್ದಿದ್ದಾರೆ.ಘಟನೆ ಕುರಿತು ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಕಳೆದ ಕೆಲವು ತಿಂಗಳುಗಳ ಹಿಂದೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್‌ ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿ ಮಹತ್ವದ ಆದೇಶ ಪ್ರಕಟಿಸಿದೆ.ಈ ಪ್ರಕರಣ ನ್ಯಾಯಾಲಯಕ್ಕೆ ಬಾರಬಾರದಿತ್ತು. ಜನೌಷಧಿ ಅಂಗಡಿ ಇಡಲು ಅವಕಾಶ ಕೊಡದೇ ಇದ್ದರೆ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಕಾಣುತ್ತದೆ ಎಂದು ಅಭಿಪ್ರಾಯಪಟ್ಟು ಸರ್ಕಾರದ ಆದೇಶವನ್ನು ರದ್ದು ಮಾಡಿದೆ. ಜನೌಷಧಿ ಅಂಗಡಿಯವರ ಲೀಸ್ ತಿಂಗಳು ಮುಗಿದ ಹಿನ್ನೆಲೆ ಅವರಿಗೆ ಸರ್ಕಾರಿ ಆಸ್ಪತ್ರೆ ಆವರಣದಿಂದ ಹೊರಗೆ ಔಷಧಿ ಅಂಗಡಿ ಇಡಲು ಸೂಚಿಸಲಾಗಿದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ಜನೌಷಧಿ ಅಂಗಡಿಯಲ್ಲಿ ಕಡಿಮೆ ಬೆಲೆಗೆ ಹಣ ಪಾವತಿಸಿ ಔಷಧಿ ತೆಗೆದುಕೊಳ್ಳುತ್ತಾರೆ. ಹೀಗಾಗಿ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಎರಡು ಕಡೆಯ ವಾದ ಆಲಿಸಿದ ನ್ಯಾಯಾಲಯ, 120 ಚದರ ಅಡಿ ಜಾಗದಲ್ಲಿ ಜನೌಷಧಿ ಇಟ್ಟು ಬಡವರಿಗೆ…

Read More

ಚಾಮರಾಜನಗರ :ಕಳೆದ ಕೆಲವು ದಿನಗಳಿಂದ ಚಾಮರಾಜನಗರ, ಮೈಸೂರು ಸೇರಿದಂತೆ ಆ ಭಾಗದ ಹಲವು ಜಿಲ್ಲೆಗಳಲ್ಲಿ ಹುಲಿ ದಾಳಿಯಿಂದ ಹಲವರು ಬಲಿಯಾಗಿದ್ದರು. ಅಲ್ಲದೆ ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೂ ಕೂಡ ಹುಲಿ ದಾಳಿ ಇನ್ನು ನಿಂತಿಲ್ಲ. ಇದೀಗ ಹುಲಿ ದಾಳಿ ಉಪಟಳ ನಿಂತಿತು ಎಂಬ ಆಶಾಭಾವ ಮೂಡಿದ ಹೊತ್ತಲ್ಲೇ ರೈತನ ಮೇಲೆ ಹುಲಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಗ್ರಾಮದಲ್ಲಿ ನಡೆದಿದೆ. ಕುಂದಕೆರೆ ಗ್ರಾಮದ ಮಲಿಯಪ್ಪ (60) ಹುಲಿ ದಾಳಿಗೊಳಗಾದ ರೈತ ಎಂದು ತಿಳಿದುಬಂದಿದೆ. ರೈತ ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುವಾಗ ಪೊದೆಯಲ್ಲಿ ಅಡಗಿದ್ದ ಹುಲಿ ಏಕಾಏಕಿ ಹಸುವಿನ ಮೇಲೆ ಎಗರಿ ದಾಳಿ ಮಾಡಿದೆ.‌ ಕೂಡಲೇ ಮಲಿಯಪ್ಪ ಹಸು ಬಿಡಿಸಲು ಕೂಗಿಕೊಂಡಾಗ ರೈತನ ಮೇಲೆ ದಾಳಿ ಮಾಡಿದ್ದು ಕಣ್ಣು, ಹಣೆ, ತಲೆ ಹಿಂಬದಿ ಭಾಗಕ್ಕೆ ಕಚ್ಚಿ, ಪರಚಿ ತೀವ್ರವಾಗಿ ಗಾಯಗೊಳಿಸಿದೆ.

Read More

ಬೆಂಗಳೂರು : ರಾಜ್ಯದ ಜೈಲುಗಳಲ್ಲಿನ ಅಕ್ರಮಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ತಕ್ಷಣವೇ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ‌ ನೇಮಕಗೊಳಿಸಲಾಗಿದೆ.​ ಈ ಹಿಂದೆ ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ.ದಯಾನಂದ್ ಅವರನ್ನು ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇತ್ತೀಚೆಗೆ, ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಮಾದಕ ವಸ್ತು ಹಾಗೂ ಸಿಗರೇಟ್‌ ಪ್ಯಾಕ್‌ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜೈಲಿನ ವಾರ್ಡನ್‌ನನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSESF) ಅಧಿಕಾರಿಗಳು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

Read More

ಬೆಳಗಾವಿ : ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಮಂಡಿಸಿದರು. ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ, ಕೋಮುಗಲಭೆ, ಕಾನೂಜು ಸುವ್ಯವಸ್ಥೆ ಹದಗೆಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕ ತಂದಿದೆ. ದ್ವೇಷ ಭಾಷಣ ಎಂದರೇನು? ಯಾವುದೇ ವ್ಯಕ್ತಿ ಪೂರ್ವಕಲ್ಪಿತ ಹಿತಾಸಕ್ತಿಯನ್ನು ಸಾಧಿಸುವ ಉದ್ದೇಶದಿಂದ ಬದುಕಿರುವ ವ್ಯಕ್ತಿ ಅಥವಾ ಮೃತ ವ್ಯಕ್ತಿಗಳ ವರ್ಗ ಅಥವಾ ಗುಂಪು ಅಥವಾ ಸಮುದಾಯದ ವಿರುದ್ಧ ಹಾನಿ, ಅಸಾಮರಸ್ಯ ಅಥವಾ ವೈರತ್ವ ಅಥವಾ ದ್ವೇಷದ, ಕೆಡುಕಿನ ಭಾವನೆ ಮೂಡಿಸುವ ಉದ್ದೇಶದೊಂದಿಗೆ ಸಾರ್ವಜನಿಕ ನೋಟದಲ್ಲಿ ಮೌಖಿಕವಾಗಿ, ಲಿಖಿತ ರೂಪದ ಪದದಲ್ಲಿ ಅಥವಾ ಸಂಕೇತಗಳ ಮೂಲಕ…

Read More

ಬೆಳಗಾವಿ : ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಲಿಂಗಾಯತ ಪಂಚಮಸಾಲಿ ಹೋರಾಟಗಾರರನ್ನು ಪೊಲೀಸರು ನಗರದ ಸಂಗೊಳ್ಳಿ‌ ರಾಯಣ್ಣ ವೃತ್ತದಲ್ಲಿ ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಮತ್ತು ರಾಜ್ಯ ಸರ್ಕಾರದ ವಿರುದ್ಧ ಪಂಚಮಸಾಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ವೇಳೆ ಕಳೆದ ವರ್ಷ ಡಿಸೆಂಬರ್​ 10 ರಂದು ನಡೆದಿದ್ದ ಲಾಠಿಚಾರ್ಜ್ ಘಟನೆ ಖಂಡಿಸಿ ಲಿಂಗಾಯತ ಪಂಚಮಸಾಲಿ ದೌರ್ಜನ್ಯ ದಿನಾಚರಣೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ನಗರದ ಗಾಂಧಿ ಭವನದಿಂದ ಸುವರ್ಣ ವಿಧಾನಸೌಧವರೆಗೆ ಮೌನ ಪ್ರತಿಭಟನಾ ರ‍್ಯಾಲಿ ಉದ್ದೇಶಿಸಲಾಗಿತ್ತು. ಈ ವೇಳೆ ಕೂಡಲಸಂಗಮ ಪಂಚಮಸಾಲಿ‌ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿ‌.ಸಿ‌‌. ಪಾಟೀಲ್, ಅರವಿಂದ ಬೆಲ್ಲದ, ಸಿದ್ದು ಸವದಿ, ಮಾಜಿ ಶಾಸಕ ಡಾ‌. ವಿಶ್ವನಾಥ ಪಾಟೀಲ ಸೇರಿ ಅನೇಕರು ಭಾಗಿಯಾಗಿದ್ದರು.

Read More

ಹಾವೇರಿ : ಹಾವೇರಿಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಶಿಕ್ಷಕ ಜಗದೀಶ್ ಗೆ ಪೋಷಕರು ಹಾಗೂ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಸವಣೂರು ಪಟ್ಟಣದ ಸರ್ಕಾರಿ ಉರ್ದು ಉನ್ನತಿಕರಿಸದ ಶಾಲೆಯ ಶಿಕ್ಷಕನಿಗೆ ಥಳಿಸಿದ್ದಾರೆ.ಅಲ್ಲದೇ ಚಪ್ಪಲಿ ಹಾರ ಹಾಕಿ ಶಿಕ್ಷಕನನ್ನು ಸವಣೂರು ಠಾಣೆಗೆ ವಿದ್ಯಾರ್ಥಿನಿಯರ ಪೋಷಕರು ಕರೆತಂದಿದ್ದಾರೆ. ಧರ್ಮದೇಟು ನೀಡಿ ಜಗದೀಶ್ ನನ್ನು ಪೊಲೀಸರಿಗೆ ಪೋಷಕರು ಒಪ್ಪಿಸಿದ್ದಾರೆ

Read More

ಬೆಳಗಾವಿ : ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಮಾಡುವಂತೆ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಂಭಾಗ ರೈತರು ಶ್ರವಣ ಸೋದ ಮುತ್ತಿಗೆ ಹಾಕಲು ಯತ್ನಿಸಿದರು. ವಿವಿಧ ಬೇಡಿಕೆ ಈಡೇರಿಕೆಗೆ ಬೆಳಗಾವಿಯ ಸುವರ್ಣ ಸೌಧದ ಬಳಿ ರೈತರು ಸಿಡಿದೆದ್ದಿದ್ದಾರೆ. ಸರ್ಕಾರದ ವಿರುದ್ಧ ರೈತರು ಸಮರ ಸಾರಿದ್ದಾರೆ.ಇದೇ ಸಂದರ್ಭದಲ್ಲಿ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವ ಆರ್ ಬಿ ತಿಮ್ಮಾಪುರ್ ಕಾರಿಗೆ ರೈತರು ಹಾಕಿದ ಘಟನೆ ಕೂಡ ನಡೆಯಿತು. ಬೆಳಗಾವಿಯ ಸುವರ್ಣ ಗಾರ್ಡನ್ ದಿಂದ ಸುವರ್ಣ ಸೌಧ ಮತ್ತಿಗಿದೆ ರೈತರು ಯತ್ನಿಸಿದ್ದಾರೆ ಪೊಲೀಸರು ಹಾಗೂ ರೈತರ ನಡುವೆ ತಳ್ಳಾಟ ನೂಕಾಟ ನೆಡೆದಿದೆ. ಆದರೆ ಪೊಲೀಸರು ಅವರನ್ನು ಮಾರ್ಗ ಮಧ್ಯೆ ತಡೆದಿದ್ದಾರೆ. ಅಧಿವೇಶನ ಆರಂಭವಾದ ದಿನದಿಂದ ಬಿಜೆಪಿ ನಾಯಕರು ರೈತರ ಜೊತೆಗೆ ಹೋರಾಟಕ್ಕೆ ಮುಂದಾಗಿದ್ದರು. ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದ ಘಟನೆ ನಡೆದಿತ್ತು.

Read More

ದಾವಣಗೆರೆ : ದಾವಣಗೆರೆಯಲ್ಲಿ ಕಳ್ಳತನ ಮಾಡಿದ ಚಿನ್ನಾಭರಣ ಮಧ್ಯಪ್ರದೇಶದಲ್ಲಿ ಜಪ್ತಿ ಮಾಡಿಕೊಳ್ಳಲಾಗಿದೆ. ಮಧ್ಯಪ್ರದೇಶದ ಕುಖ್ಯಾತ ಬ್ಯಾಂಡ್ ಬಜಾ ಗ್ಯಾಂಗ್ ಸದಸ್ಯರಿಂದ ಈ ಒಂದು ಚಿನ್ನಾಭರಣ ಕಳ್ಳತನ ನಡೆದಿತ್ತು ದಾವಣಗೆರೆ ಗ್ರಾಮಾಂತರ ವಿಭಾಗದ ಪೊಲೀಸರು ಇದೀಗ ಮಧ್ಯಪ್ರದೇಶದಲ್ಲಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ ಸುಮಾರು 51.49 ಲಕ್ಷ ಚಿನ್ನಾಭರಣ ಜಪ್ತಿ ಮಾಡಿಕೊಳಲಾಗಿದೆ. ಪ್ರತಿಷ್ಠಿತ ಮದುವೆ ಸಮಾರಂಭಗಳಲ್ಲಿ ಗಮನ ಬೇರೆ ಸೆಳೆದು ಕಳ್ಳತನ ಮಾಡುತ್ತಿದ್ದರು. ನವಂಬರ್ 14 ರಂದು ಅಪೂರ್ವ ರೆಸಾರ್ಟ್ ನಲ್ಲಿ ಈ ಗ್ಯಾಂಗ್ ಕಳ್ಳತನ ಮಾಡಿತು. ಮದುವೆ ಸಮಾರಂಭದಲ್ಲಿ ಬಾಲಕಿ ನೃತ್ಯ ಮಾಡುತ್ತಿದ್ದ ವೇಳೆ ಕಳ್ಳತನ ಮಾಡಿದ್ದರು. ಚಿನ್ನಾಭರಣವಿದ್ದ ಬ್ಯಾಂಕ್ ಕೆಳಗೆ ಚಪ್ಪಾಳೆ ತಟ್ಟುವಷ್ಟರಲ್ಲಿ ಕಳ್ಳತನ ಮಾಡಿದ್ದರು 535 ಗ್ರಾಂ ಆಭರಣವಿದ್ದ ಬ್ಯಾಂಕ್ ಎಗರಿಸಲಾಗಿತ್ತು ಬ್ಯಾಗ್ ಎಗರಿಸಿ ಕರಣ ವರ್ಮ ಮತ್ತು ವಿನೀತ್ ಸಿಸೋಡಿಯ ಮಧ್ಯಪ್ರದೇಶಕ್ಕೆ ಪರಾರಿಯಾಗಿದ್ದರು. ಮಧ್ಯಪ್ರದೇಶಕ್ಕೆ ತೆರಳಿ ಕಳ್ಳರಿಗಾಗಿ ಶೋಧ ನಡೆಸಿದರು. ನಗರದಲ್ಲಿ ವೇಷ ಬದಲಿಸಿ ದಾವಣಗೆರೆ ಪೊಲೀಸ್ರು ಶೋಧ ನೆಡೆಸಿದ್ದಾರೆ. ಮಧ್ಯವರ್ತಿಗೆ ಚಿನ್ನಾಭರಣ ಬಗ್ಗೆ ಕಳ್ಳರು ಮಾಹಿತಿ ನೀಡಿದ್ದರು.…

Read More