Author: kannadanewsnow05

ಬೆಂಗಳೂರು : ಡಿಐಜಿಪಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಕಳೆದ ಜನವರಿ 7ರಂದು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಸರ್ಕಾರ ವರ್ಗಾಯಿಸಿತ್ತು. ರಾಜ್ಯ ಸರ್ಕಾರದ ವರ್ಗಾವಣೆ ಆದೇಶ ಪ್ರಶ್ನಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮೊರೆ ಹೋಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರಿಗೆ ಹಿನ್ನಡೆಯಾಗಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸಿಎಟಿ ವಜಾಗೊಳಿಸಿದೆ. ಬಳ್ಳಾರಿ ವಲಯದ ಡಿಐಜಿಪಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಕಳೆದ ಜನವರಿ 7ರಂದು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ (ಡಿಸಿಆರ್​ಇ) ಸರ್ಕಾರ ವರ್ಗಾಯಿಸಿತ್ತು. ಇದನ್ನು ಪ್ರಶ್ನಿಸಿ ಸಿಎಟಿಗೆ ವರ್ತಿಕಾ ಅವರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯವು ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದ್ದು, ಅರ್ಜಿದಾರರ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ವರ್ಗಾವಣೆಗೆ ಕಾರಣವೇನು? ಜನವರಿ 1ರಂದು ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಅವರ ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಅವರ ಬೆಂಬಲಿಗರ…

Read More

ಆಂಧ್ರಪ್ರದೇಶ : ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೂವರು ಸಾವನಪ್ಪಿರುವ ಘಟನೆ ಆಂಧ್ರಪ್ರದೇಶದ ಜಡಚರ್ಲ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನ ರಾಮರೆಡ್ಡಿ (52) ಮೇಘ (50) ಹಾಗು ಮಹದೇವಪ್ಪ (65) ಎಂದು ತಿಳಿದುಬಂದಿದೆ. ರಾಮರೆಡ್ಡಿ ಮತ್ತು ಮೇಘಾ ದಂಪತಿ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗೋಗಿ ಗ್ರಾಮದವರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇವರಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಸಾವಿರ ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ಇಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ ಹಮ್ಮಿಕೊಂಡಿದೆ. ಈ ಒಂದು ಸಾಧನ ಸಮಾವೇಶದ ಕುರಿತು ಜೆಡಿಎಸ್ ಕಿಡಿ ಕಾರಿದ್ದು, ಟ್ವೀಟ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ರಾಕ್ಷಸರ ದುರಾಡಳಿತಕ್ಕೆ ಸಾವಿರ ದಿನದ ಸೂತಕ ಎಂದು ವಾಗ್ದಾಳಿ ನಡೆಸಿದೆ. ಜನ ವಿರೋಧಿ ಕಾಂಗ್ರೆಸ್ ಸರ್ಕಾರದ “ನಿರರ್ಥಕ 1000 ದಿನಗಳ” ಪಟ್ಟಿ. 👉 ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್- 1 👉 ರಾಜ್ಯದಲ್ಲಿ 2800ಕ್ಕೂ ಹೆಚ್ಚು ರೈತರ ಆತ್ಮಹತ್ಯೆ 👉 2.80 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರು ನೇಮಕಾತಿ ಇಲ್ಲ 👉 ಬಾಕಿ ಹಣ ನೀಡದೆ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ 👉 ಸರ್ಕಾರದ ಕಿರುಕುಳಕ್ಕೆ ಅಧಿಕಾರಿಗಳ ಸರಣಿ ಆತ್ಮಹತ್ಯೆ 👉 ರಸ್ತೆ ಗುಂಡಿ ಅಪಘಾತಕ್ಕೆ ಅಮಾಯಕರು ಬಲಿ 👉 ದಲಿತರ 25,000 ಸಾವಿರ ಕೋಟಿ ದುರ್ಬಳಕೆ 👉 ಅಬಕಾರಿ ಇಲಾಖೆಯಲ್ಲಿ6000 ಕೋಟಿ ಹಗರಣ‌ 👉 ಗೃಹಲಕ್ಷ್ಮಿ ಹಣ 5…

Read More

ಮೇಘಾಲಯ : ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮೇಘಾಲಯದ ಶಿಲ್ಲಂಗ್ ಗೆ ಹೊರಟಿದ್ದ 6E-7304 ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಹೌದು ಇಂಡಿಗೋ ವಿಮಾನಕ್ಕೆ ಅಪರಿಚಿತರಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಮೇಘಾಲಯದಿಂದ ಶಿಲಾಂಗಗೆ ತೆರಳುತ್ತಿದ್ದ ವೇಳೆ ಈ ಸಂದೇಶ ಬಂದಿದೆ ತಕ್ಷಣ ಸುರಕ್ಷಿತವಾಗಿ ಎಲ್ಲಾ ಪ್ರಯಾಣಿಕರು ವಿಮಾನದಿಂದ ಕೆಳಗಡೆ ಇಳಿದಿದ್ದಾರೆ.

Read More

ಮಂಗಳೂರು : ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ಅವ್ಯವಸ್ಥೆ ಕಂಡು ಬಂದಿದೆ. ಪ್ರಾಣಿಗಳ ಸಾವಿಗೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಇದೀಗ ಹೊಣೆಯಾಗಿದೆ. ಪಿಲಿಕುಳದಲ್ಲಿ ಪ್ರಾಣಿಗಳ ಸಾವಿನ ರಹಸ್ಯ ಇದೀಗ ಬಯಲಾಗಿದೆ. ವಿಷಾಹಾರ ಸೇವನೆಯೇ ಪ್ರಾಣಿಗಳ ಸಾವಿಗೆ ಕಾರಣವಾಗಿದೆ. ಮೃತ ಜಿಂಕೆಯೊಂದರ ಮರಣೋತ್ತರ ವರದಿಯಲ್ಲಿ ವಿಷಾಹಾರ ಸೇವನೆ ಮಾಡಿರುವುದು ಬಹಿರಂಗವಾಗಿದೆ. ಪ್ರಾಣಿಯ ದೇಹದಲ್ಲಿ ಹೈಡ್ರೋಸೈನೆಡ್ ಮತ್ತು ನೈಟ್ರೇಟ್ ಅಂಶಗಳು ಪತ್ತೆಯಾಗಿವೆ. ಸುಮಾರು ನಾಲ್ಕರಿಂದ 150ಕ್ಕೂ ಅಧಿಕ ಪ್ರಾಣಿಗಳ ಆ ಸ್ವಾಭಾವಿಕ ಸಾವಾಗಿದ್ದು, ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಪ್ರಯೋಗಾಲಯದಿಂದ ವರದಿ ಬಹಿರಂಗವಾಗಿದೆ. ಪ್ರಾಣಿಗಳಿಗೆ ನೀಡಲಾಗಿದೆ ತರಕಾರಿ ಎಲೆಗಳಿಂದಲೇ ಪ್ರಾಣಕ್ಕೆ ಕುತ್ತು ತಂದಿದೆ. ಎಲೆಕೋಸು ಮತ್ತು ಹೂಕೋಸು ಬೆಳಗ್ಗೆ ಅತಿಯಾದ ಕೀಟನಾಶಕ ಬಳಕೆ ಮಾಡಿರುವುದು ಬೆಳಗೆಗೆ ಬಂದಿದೆ. ಇದನ್ನು ಶುಚಿಗೊಳಿಸದೆ ನೇರವಾಗಿ ಪ್ರಾಣಿಗಳಿಗೆ ನೀಡಲಾಗುತ್ತಿತ್ತು. ಈ ವಿಷಪೂರಿತ ಅಂಶಗಳು ಮೃಗಾಲಯದ ಪ್ರಾಣಿಗಳ ಸಾವಿಗೆ ಕಾರಣವಾಗಿದೆ. ಇಲ್ಲಿವರೆಗೂ ಕಡ ಮೃಗಾಲಯದಲ್ಲಿ ಕಳೆದ ನಾಲ್ಕು ವರ್ಷದಲ್ಲಿ 150 ಮೂಕ ಪ್ರಾಣಿಗಳ ಮಾರಣಹೋಮ ಹಾಗಿದೆ. ಹುಲಿ, ಜಿಂಕೆ, ಸಾಂಬಾರ್…

Read More

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಈ ಬಾರಿ ಬೀದರದಲ್ಲಿ ಆಯೋಜಿಸಲಾಗುತ್ತಿರುವ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ತಂಡಗಳನ್ನು ಕಳುಹಿಸಿಕೊಡುವಂತೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಗಾಯತ್ರಿ ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ತಂಡ ಮನವಿ ಮಾಡಿತು. ಸಂಘದ ಮನವಿ ಸ್ವೀಕರಿಸಿ ಮಾತನಾಡಿದ ನಿರ್ದೇಶಕಿ ಗಾಯತ್ರಿ ಅವರು, ಕಲಾ ತಂಡಗಳನ್ನು ನೀಡುವುದಾಗಿ ಭರವಸೆ ನೀಡಿದ್ದಲ್ಲದೆ, ಸಮ್ಮೇಳನಕ್ಕೆ ಶುಭ ಹಾರೈಸಿದರು. ಬೀದರ್ ಜಿಲ್ಲಾ ಘಕದ ಜಿಲ್ಲಾಧ್ಯಕ್ಷ ಅನಂದ ದೇವಪ್ಪ, ಅಪ್ಪಾರಾವ ಸೌದಿ, ಶಿವಕುಮಾರ ಸ್ವಾಮಿ, ನಂದಕುಮಾರ ಕರಂಜಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಬೆಂಗಳೂರು : ರಾಜ್ಯದಲೊಬ್ಬ ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಬ್ಯಾಂಕ್ ದರೋಡೆ ಮಾಡಿದ್ದಾನೆ. ಅಸಿಸ್ಟೆಂಟ್ ಮ್ಯಾನೇಜರ್ ನಿಂದಲೇ ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಕುಮಾರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಇಂಡಿಯನ್ ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿದ್ದವರ ಚಿನ್ನವನ್ನು ಕಿರಣ್ ಕದ್ದಿದ್ದಾನೆ. ಬೆಂಗಳೂರಿನ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಕಳ್ಳತನವಾಗಿದೆ. ಆನ್ ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಅದಕ್ಕಾಗಿ ನಾಲ್ಕು ಕೋಟಿ ಮೌಲ್ಯದ  ಚಿನ್ನಾಭರಣ ಕದ್ದು ಆನ್ಲೈನ್ ಜೂಜಾಟಕ್ಕೆ ಬಳಸಿದ್ದಾನೆ. ಸದ್ಯ ಆರೋಪಿ ಕಿರಣ್ ಅನ್ನು ಪೊಲೀಸರ ಅರೆಸ್ಟ್ ಮಾಡಿದ್ದಾರೆ.

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಕಳ್ಳನೊಬ್ಬ ಚಿನ್ನಾಭರಣ ನಗದು ಹಣ ಕದ್ದು ಪುರಾರಿಯಾಗುತ್ತಿದ್ದವನು ಸ್ಥಳೀಯರು ಹಿಡಿದು ಗೋಸ ಕೊಟ್ಟಿರುವ ಘಟನೆ ಸಾಗರದ ಕಾಣಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೋಂಕೇರಿ ಎಂಬಲ್ಲಿ ಈ ಒಂದು ಘಟನೆ ನಡೆದಿದೆ. ಚಿನ್ನಾಭರಣ ಕದ್ದು ಪರಾರಿ ಆಗುತ್ತಿದ್ದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಗೂಸ ಕೊಟ್ಟಿದ್ದಾರೆ. ಅರೆಬೆತ್ತಲೆ ಆಗಿ ಮೆರವಣಿಗೆ ಮಾಡಿಕೊಂಡು ತಂದಿದ್ದಾರೆ. ಸಾಗರದ ಕನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಂಕೇರಿ ಎಂಬಲ್ಲಿ ಈ ಒಂದು ಘಟನೆ ನಡೆದಿದ್ದು ರೈತ ಕಬ್ಬಳ್ಳಿ ಹುಚ್ಚಪ್ಪ ಎಂಬ ರೈತನ ಮನೆಯಲ್ಲಿ ಕಳ್ಳತನವಾಗಿತ್ತು. ಕಿಟಕಿ ಬಾಗಿಲು ಮುರಿದು ಚಿನ್ನಾಭರಣ ಮತ್ತು ಹಣ ದೋಸ್ತಿದ್ದ 50,000 ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

Read More

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು, ಹಲವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಗ್ಗುವಳ್ಳಿ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದು, 13 ಜನರಿಗೆ ಗಾಯಗಳಾಗಿವೆ. ಓರ್ವ ಸ್ಥಳದಲ್ಲಿಯೇ ಸಾವನಪ್ಪಿದ್ದು ಮತ್ತೊರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮಾಳಿಗೆ ಹಟ್ಟಿ ಗ್ರಾಮದ ಮಂಜುನಾಥ್ (34) ಸ್ಥಳದಲ್ಲಿ ಸಾವನ್ನಪ್ಪಿದ್ದರೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ಹೋಳಿಯಪ್ಪ (48) ಸಾವನಪ್ಪಿದ್ದಾರೆ. ಮೃತರು ಹೊಸದುರ್ಗ ತಾಲೂಕಿನ ಮಾಳಿಗೆ ಹಟ್ಟಿ ಗ್ರಾಮದವರು ಎಂದು ತಿಳಿದುಬಂದಿದೆ. ಚಿತ್ರದುರ್ಗ ಜಿಲ್ಲೆಯ ತಾಲೂಕಿನ ಮಾಳಿಗೆ ಹಟ್ಟಿ ಗ್ರಾಮದ ಬಗ್ಗೆ ತಿಳಿದು ಬಂದಿದೆ ಗ್ರಾಮಸ್ಥರು ಮೂರು ಟ್ರಾಕ್ಟರ್ ಗಳಲ್ಲಿ ಗಳಲ್ಲಿ ಕಲ್ಲತ್ತಿಗಿರಿ ದೇಗುಲಕ್ಕೆ ಬಂದಿದ್ದರು ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ತೆರಳುವಾಗ ಈ ಅಪಘಾತ ಸಂಭವಿಸಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಕೆಎಎಫ್ ಕ್ರಿಯೇಟಿವ್ ಶಾಪ್ ಸಂಪೂರ್ಣವಾಗಿ ಸುಟ್ಟು ಬಸ್ಮವಾಗಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯಾದ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೋಲಿಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Read More