Author: kannadanewsnow05

ಚಾಮರಾಜನಗರ : ರಾಜ್ಯದಲ್ಲಿ ಇಂದು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಾಲ್ಯ ವಿವಾಹ ಮತ್ತು ಬಾಲಕಿಯ ನಿಶ್ಚಿತಾರ್ಥವನ್ನು ಅಧಿಕಾರಿಗಳು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಚಾಮರಾಜನಗರದ ಎಪಿ ಮೊಹಲ್ಲಾದಲ್ಲಿ ಬಾಲ್ಯ ವಿವಾಹಕ್ಕೆ ಅಧಿಕಾರಿಗಳು ಬ್ರೇಕ್ ಹಾಕಿದ್ದು, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಪೊಲೀಸರು ಬಾಲ್ಯ ವಿವಾಹವನ್ನು ತಡೆದಿದ್ದಾರೆ. ಬಳಿಕ ಪೋಷಕರಿಗೆ ಈ ಕುರಿತು ಅರಿವು ಮೂಡಿಸಿದರು. ಇನ್ನು 2ನೇ ಪ್ರಕಾರಣವೂ ಚಾಮರಾಜನಗರ ತಾಲೂಕಿನ ಬಿಸಿಲವಾಡಿ ಗ್ರಾಮದಲ್ಲಿ ನಡೆದಿದ್ದು, ಯುವಕನ ಜೊತೆಗೆ ಬಾಲಕಿಗೆ ನಿಶ್ಚಿತಾರ್ಥ ನೆರವೇರಿಸುತ್ತಿದ್ದರು. ಬಾಲಕಿಗೆ ನಿಶ್ಚಿತಾರ್ಥದ ಬಗ್ಗೆ ಮಕ್ಕಳ ಸಹಾಯವಾಣಿಗೆ ದೂರಿ ಸಲ್ಲಿಕೆಯಾಗಿದೆ. ತಕ್ಷಣ ಅಧಿಕಾರಿಗಳು ದೂರನ್ನು ಆಧರಿಸಿ ಬಿಸಲವಾಡಿ ಗ್ರಾಮಕ್ಕೆ ಧಾವಿಸಿ ಬಾಲಕಿಯ ನಿಶ್ಚಿತಾರ್ಥಕ್ಕೆ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಅಲ್ಲಿದ್ದ ಎಲ್ಲರಿಗೂ ಸಹ ಬಾಲ್ಯ ವಿವಾಹದ ಕುರಿತು ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದ್ದಾರೆ. ಈ ವೇಳೆ ಎರಡು ಕಡೆ ಪೋಷಕರಿಂದ ಅಧಿಕಾರಿಗಳು ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದ್ದಾರೆ. ಮಕ್ಕಳ ರಕ್ಷಣಾ ಘಟಕ ಮಕ್ಕಳ…

Read More

ದಕ್ಷಿಣಕನ್ನಡ : ಎಷ್ಟು ದಿನ ಅಂತ ಲವ್ ಜಹಾದ್ ಬಗ್ಗೆ ಮಾತನಾಡುತ್ತಿರೋಣ? ಎಷ್ಟು ದಿನ ಅಂತ ನಮ್ಮ ಹೆಣ್ಣು ಮಕ್ಕಳನ್ನೇ ನೋಡುತ್ತಿರಿ? ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ, ಮದುವೆಯಾಗಿ ಎಂದು ದಕ್ಷಿಣ ಕನ್ನಡದ ಉಳ್ಳಾಲ ತಾಲೂಕಿನ ಕುತ್ತಾರೂನಲ್ಲಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಅನ್ಯ ಧರ್ಮದವರನ್ನು ಪ್ರೀತಿಸಿ, ಮದುವೆಯಾಗಿ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ದಕ್ಷಿಣ ಕನ್ನಡದ ಉಳ್ಳಾಲ ತಾಲೂಕಿನ ಕುತ್ತಾರೂನಲ್ಲಿ ಕಾರ್ಯಕ್ರಮದಲ್ಲಿ ಎಲ್ಲಿವರೆಗೂ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಿರೋಣ? ಸ್ವಲ್ಪ ಬದಲಾವಣೆ ತರೋಣ. ಹುಡುಗಿ ಸಿಗಲಿಲ್ಲ ಅಂತ ಎಷ್ಟು ದಿನ ನೀವು ಹೇಳುತ್ತೀರಿ? ಎಷ್ಟು ದಿನ ಅಂತ ನಮ್ಮದೇ ಹೆಣ್ಣು ಮಕ್ಕಳನ್ನು ನೋಡ್ತೀರಾ?ಅನ್ಯ ಧರ್ಮದೇವತೆಯನ್ನು ಪ್ರೀತಿಸಿ ಮದುವೆಯಾಗಿ ಎಂದು ಹೇಳಿಕೆ ನೀಡಿದ್ದಾರೆ.

Read More

ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್ ಪಕರಣ ಕೆ ಇದೀಗ ಮತ್ತೊಂದು ತಿರುಗು ಸಿಕ್ಕಿದ್ದು ರನ್ಯಾರಾವ್ ಮತ್ತು ಉದ್ಯಮಿಯ ಪುತ್ರ ಸ್ನೇಹಿತರಾಗಿದ್ದರು ಎಂದು ಹೇಳಲಾಗಿದ್ದು ಇದೀಗ ವಿಚಾರಣೆಯ ಬಳಿಕ ಉದ್ಯಮಿಯ ಪುತ್ರನನ್ನು DRI ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ವಿಚಾರಣೆ ನಡೆಸಿದ ಬಳಿಕ ಡಿ ಆರ್ ಐ ಅಧಿಕಾರಿಗಳು ಉದ್ಯಮಿಯ ಪುತ್ರನನ್ನು ಅರೆಸ್ಟ್ ಮಾಡಿದ್ದಾರೆ. ಉದ್ಯಮಿ ಪುತ್ರ ಹಾಗೂ ರನ್ಯಾ ರಾವ್ ಸ್ನೇಹಿತರಾಗಿದ್ದರು. ಇದೀಗ ಡಿ ಆರ್ ಐ ಅಧಿಕಾರಿಗಳಿಂದ ಉದ್ಯಮಿಯ ಪುತ್ರ ಬಂಧನವಾಗಿದೆ. ಫೈವ್ ಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗನನ್ನು ಅರೆಸ್ಟ್ ಮಾಡಲಾಗಿದೆ. ಉದಿನಿ ಪುತ್ರರನ್ನು ಅರೆಸ್ಟ್ ಮಾಡಿರುವ ಗಡಿಯಾರ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಉದ್ಯಮಿ ಪುತ್ರ ತರುಣ್ ರಾಜು ನನ್ನು ಅರೆಸ್ಟ್ ಮಾಡಿದ್ದಾರೆ. ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ನಟಿ ರನ್ಯಾ ರಾವ್ ಲಿಂದ…

Read More

ಬೆಂಗಳೂರು : ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೇಜಸ್ವಿ ಸೂರ್ಯ ಅವರು ಭಾನುವಾರ ನಡೆದ ಅದ್ಧೂರಿ ಆರತಕ್ಷತೆಗೂ ಮುನ್ನ ವಿಶೇಷ ಮನವಿಯೊಂದನ್ನು ಮಾಡಿದ್ದರು. ಆರತಕ್ಷತೆಗೆ ಬರುವವರು ದಯವಿಟ್ಟು ಹೂವಿನ ಬೊಕ್ಕೆಗಳು ಹಾಗೂ ಡ್ರೈಫ್ರೂಟ್ಸ್‌ಗಳನ್ನು ತರಬೇಡಿ ಎಂದು ಸವಿನಯದಿಂದ ಮನವಿ ಮಾಡಿದ್ದರು.ಹೂವಿನ ಬೊಕ್ಕೆಗಳಿಗೆ ಸುಮ್ಮನೆ ದುಂದು ವೆಚ್ಚ ಮಾಡಬೇಡಿ. ಕೇವಲ ಒಂದು ನಿಮಿಷದಲ್ಲಿ ಆ ಹೂವನ್ನು ಸ್ವೀಕರಿಸಿ, ಪಕ್ಕಕ್ಕೆ ಇಡಲಾಗುತ್ತೆ. ಇದೆಲ್ಲ ಸುಮ್ಮನೆ ವೇಸ್ಟ್‌ ಎಂದು ಹೇಳಿಕೆ ನೀಡಿದ್ದರು. ಆರತಕ್ಷತೆ ಕಾರ್ಯಕ್ರಮಕ್ಕೆ ಹೂವಿನ ಬೊಕ್ಕೆಗಳು, ಡ್ರೈಫ್ರೂಟ್ಸ್‌ಗಳನ್ನು ದಯವಿಟ್ಟು ತರಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದರು. ಇದಕ್ಕೆ ಫೇಸ್ ಬುಕ್ ಹಾಗೂ ಯು ಟ್ಯೂಬ್ ಲೈವ್ ನಲ್ಲಿ ಕಾರಣವನ್ನೂ ಸಹ ಕೊಟ್ಟಿದ್ದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ತೇಜಸ್ವಿ ಸೂರ್ಯ ಅವರ ಇಂತಹ ಹೇಳಿಕೆಗಳು ಅನುಚಿತ ಮತ್ತು ತಮ್ಮ ಜೀವನಕ್ಕಾಗಿ ಪುಷ್ಪ ಕೃಷಿಯನ್ನು ಅವಲಂಬಿಸಿರುವ ಲಕ್ಷಾಂತರ ರೈತರ ಶ್ರಮವನ್ನು ದುರ್ಬಲಗೊಳಿಸುತ್ತವೆ ಎಂದು ದಕ್ಷಿಣ ಭಾರತ ಪುಷ್ಪ ಕೃಷಿ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್ ಹೇಳಿದ್ದಾರೆ. ತೇಜಸ್ವಿ ಸೂರ್ಯ…

Read More

ಬೆಂಗಳೂರು : ವಿಧಾನಸಭೆಯಲ್ಲಿ ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆಯಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಇಂದು ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ ಮಂಡಿಸಿದ್ದಾರೆ. ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ವಿಧೇಯಕ ಮಂಡಿಸಿದ ನಂತರ ಪೊಲೀಸರನ್ನು ಗ್ರೇಟರ್ ಬೆಂಗಳೂರು ಆಡಳಿತದ ಅಡಿ ತರಲು ಚಿಂತನೆ ನಡೆಸಲಾಗಿತ್ತಿದೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಗ್ರೇಟರ್ ಬೆಂಗಳೂರು ಅಧ್ಯಕ್ಷರಾಗಿ ಇರುತ್ತಾರೆ. ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ತೆರಿಗೆ ವಿಚಾರವನ್ನು ಕೂಡ ಇದರಲ್ಲಿ ಪ್ರಸ್ತಾಪ ಮಾಡಲಾಗಿದೆ. ಪೊಲೀಸರನ್ನು ಗ್ರೇಟರ್ ಬೆಂಗಳೂರು ಆಡಳಿತದ ಅಡಿ ತರಲು ಚಿಂತನೆ ನಡೆಸಲಾಗಿದೆ. ಬಿಡಿಎ ಅಧ್ಯಕ್ಷರು ಸಹ ಗ್ರೇಟರ್ ಬೆಂಗಳೂರು ಸದಸ್ಯರಾಗಿರುತ್ತಾರೆ. ಬಿಬಿಎಂಪಿ ಮುಖ್ಯ ಆಯುಕ್ತರು ಡಿಫ್ಯಾಕ್ಟೋ ಸದಸ್ಯರಾಗಿರುತ್ತಾರೆ. ಸದಸ್ಯರು ಹಾಗೂ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುತ್ತೇವೆ ಎಂದರು. ವಿಶೇಷ ತಜ್ಞರ ಸಮಿತಿ ಮಾಡುತ್ತಿದ್ದೇವೆ. ಆರ್ ವೆಂಕಟೇಶ ಸಮಿತಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಇರುತ್ತದೆ. ಮೂಲಭೂತ ಸೌಕರ್ಯ ಸಾಮಾಜಿಕ ವ್ಯವಸ್ಥೆ ನಿರ್ವಹಣೆ ಸೇರಿದಂತೆ ಒಟ್ಟು 6 ಸಮಿತಿ…

Read More

ರಾಯಚೂರು : ಇತ್ತೀಚಿಗೆ ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ದಂಧೆ ಹೆಚ್ಚುತ್ತಿದ್ದು, ಇದೀಗ ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಪೊಲೀಸ್ ಕಾನ್ಸ್ಟೇಬಲ್ ಮೇಲೆ ದುಷ್ಕರ್ಮಿಗಳು ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚೀಕಲಪರ್ವಿ ಎಂಬಲ್ಲಿ ನಡೆದಿದೆ. ಹೌದು ಮಾನ್ವಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಹೆಚ್ ಲಕ್ಷ್ಮಣ ಮೇಲೆ ಹಲ್ಲೆ ನಡೆಸಲಾಗಿದೆ. ಹೋಂ ಗಾರ್ಡ್ ಜೊತೆಗೆ ಕಾನ್ಸ್ಟೇಬಲ್ ಲಕ್ಷ್ಮಣ ಅವರು ತಪಾಸಣೆಗೆ ಎಂದು ತೆರಳಿದ್ದರು.ಅಕ್ರಮ ಮರಳು ತಪಾಸಣೆಗೆ ತೆರಳಿದ್ದ ಕಾನ್ಸ್ಟೇಬಲ್ ಲಕ್ಷ್ಮಣ ಮೇಲೆ ಹಲ್ಲೆ ನಡೆಸಿದ್ದಾರೆ. ಚಿಕ್ಕಲಪರ್ವಿ ಗ್ರಾಮದ ಬಳಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ವಾಹನ ತಡೆಯಲು ಪಿಸಿ ಲಕ್ಷ್ಮಣ ಹೋಗಿದ್ದಾರೆ. ಈ ವೇಳೆ ಕಾನ್ಸ್ಟೇಬಲ್ ಲಕ್ಷ್ಮಣ ಮೇಲೆ ದುಃಖರಮಿಗಳು ಹಲ್ಲೆ ನಡೆಸಿದ್ದಾರೆ ಕಾನ್ಸ್ಟೇಬಲ್ ಲಕ್ಷ್ಮಣ್ಗೆ ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪಟ್ಟಣದ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ‘ಗ್ರೇಟರ್ ಬೆಂಗಳೂರು’ ಕುರಿತು ಇಂದು ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ  ವಿಧೇಯಕ ಮಂಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಎಂದರೇನು? ಬೆಂಗಳೂರನ್ನು ಏಳು ಭಾಗವಾಗಿ ಅಥವಾ ಇರುವ ಒಂದು ಪಾಲಿಕೆಯನ್ನು 7 ಪಾಲಿಕೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ಈ ಬೆಳವಣಿಗೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ-2024 ಅನ್ನು ಸರ್ಕಾರ ಪರಿಚಯಿಸಿದೆ. ಇದರ ಅಡಿಯಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಬೆಂಗಳೂರಿಗೆ ಮೂರು ಹಂತದ ಆಡಳಿತ ನೀಡುವುದು ಇದರ ಉದ್ದೇಶವಾಗಿದೆ.ಕಾಂಗ್ರೆಸ್‌ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಸರಣಿ ಸಭೆಗಳು ನಡೆದಿದ್ದವು. ಗ್ರೇಟರ್ ಬೆಂಗಳೂರು ಬಿಲ್‌ ಅನ್ನು ಈಚೆಗೆ ರಾಜ್ಯ ಸರ್ಕಾರವು ಪ್ರಸ್ತಾಪಿಸಿತ್ತು.

Read More

ಕೋಲಾರ : ಬಾಗಲಕೋಟೆಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಕುರಿಗಳ್ಳರನ್ನು ರೇಡ್ ಹ್ಯಾಂಡ್ ಆಗಿ ಹಿಡಿದ ವ್ಯಕ್ತಿಯನ್ನು ಕೊಡಲಿಯಿಂದ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕೆರೂರದ ಹಳಗೇರಿ ಗ್ರಾಮದ ಟೋಲ್ ನಾಕಾ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ಶರಣಪ್ಪ ಜಮ್ಮನಕಟ್ಟಿ (23) ಎಂದು ತಿಳಿದುಬಂದಿದೆ. ಶರಣಪ್ಪ ಕುರಿ ದಡ್ಡಿಯ ಮೇಲೆ ಕುರಿಗಳರು ದಾಳಿ ನಡೆಸಿ ಕಳ್ಳತನಕ್ಕೆ ಎತ್ನಿಸಿದ್ದಾರೆ ಈ ವೇಳೆ ಶರಣಪ್ಪ ರೆಡ್ ಹ್ಯಾಂಡಾಗಿ ಕಳ್ಳರನ್ನು ಹಿಡಿದಿದ್ದಾನೆ. ಮೂವರಲ್ಲಿ ಯಾಕೂb ಎನ್ನುವ ಕಳ್ಳನನ್ನು ಶರಣಪ್ಪ ಹಿಡಿದಿದ್ದಾನೆ. ಆದರೆ ಇನ್ನಿಬ್ಬರು ಆರೋಪಿಗಳು ಕೊಡಲಿಯಿಂದ ಶರಣಪ್ಪ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಯಾಕೂಬ್ ನನ್ನು ಬಿಡಿಸಿಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಗಂಭೀರವಾಗಿ ಹಲ್ಲೆಗೊಳಗಾದ ಶರಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಕೆರೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Read More

ಬೆಂಗಳೂರು : ಮೈಸೂರು ಜಿಲ್ಲೆಯ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ವಿನಾಯಿತಿ ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಪ್ರಕರಣದ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಅರ್ಜಿಯಲ್ಲಿ ಹಾಸನ ಮೈಸೂರಿಗೆ ತೆರಳದಂತೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲು ಮನವಿ ಮಾಡಲಾಯಿತು. ಭವಾನಿ ರೇವಣ್ಣ ಅರ್ಜಿಗೆ ಎಸ್ಪಿಪಿ ಪ್ರೊ. ರವಿವರ್ಮಕುಮಾರ್ ಈ ವೇಳೆ ಆಕ್ಷೇಪ ವ್ಯಕ್ತಪಡಿಸಿದರು. ಅತ್ಯಾಚಾರ ಸಂತ್ರಸ್ತೇ ಅಪಹರಣ ಕೇಸ್ನಲ್ಲಿ ಭವಾನಿ ಕಿಂಗ್ ಪಿನ್ ಆಗಿದ್ದಾರೆ. ಪ್ರಜ್ವಲ್ ರೇವಣ್ಣನಿಂದ ನೂರಾರು ಸಂತ್ರಸ್ತ ಮಹಿಳೆಯರು ಇದ್ದಾರೆ. ಅವರಲ್ಲಿ ಕೇವಲ ನಾಲ್ಕು ಮಹಿಳೆಯರು ಮಾತ್ರ ದೂರು ನೀಡಿದ್ದಾರೆ. ಜಾಮೀನು ಷರತ್ತು ಸಡಲಿಸಿದರೆ ಸಾಕ್ಷ್ಯಾಧಾರ ನಾ ಶಕ್ಕೆ ಪ್ರಯತ್ನಿಸಬಹುದು. ಹೀಗಾಗಿ ಜಾಮೀನು ಷರತ್ತು ಸಡಿಲಿಸದಂತೆ ಮನವಿ ಮಾಡಿದರು. ಈ ವೇಳೆ ನ್ಯಾ.ಪ್ರದೀಪ್ ಸಿಂಗ್ ಯೆರೂರು ಅವರಿದ್ದ ಪೀಠ ಆದೇಶ ಕಾಯ್ದಿರಿಸಿದರು.

Read More

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಕಳೆದ ಹಲವು ತಿಂಗಳಿನಿಂದ ಸರಣಿ ಆತ್ಮಾತ್ಯ ಪ್ರಕರಣಗಳು ನಡೆದಿದೆವು ಈ ಒಂದು ಆತ್ಮಹತ್ಯೆ ತಡೆಗೆ ರಜೆ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಇದೀಗ ವಿಧಾನಸಭೆಯಲ್ಲಿ ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರ ಗೊಳಿಸಲಾಯಿತು. ಹೌದು ಇಂದು ವಿಧಾನಸಭೆಯಲ್ಲಿ ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರವಾಗಿದ್ದು, ಕಿರು ಮೈಕ್ರೋಸಾಲ, ಸಣ್ಣ ಸಾಲದ ಕಿರುಕುಳ ತಡೆ ಕುರಿತು ವಿಧೇಯಕವನ್ನು ಸ್ಪೀಕರ್ ಯುಟಿ ಖಾದರ್ ಅಂಗೀಕಾರ ಮಾಡಿದರು.ಇತ್ತೀಚಿಗೆ ಸಚಿವ ಪ್ರಿಯಾಂಕ್ ಖರ್ಗೆ ಮೈಕ್ರೋ ಫೈನಾನ್ಸ್ ತಡೆಗೆ ಮಸೂದೆಯನ್ನು ಮಂಡನೆ ಮಾಡಿದ್ದರು. ಇದೀಗ ಮೈಕ್ರೋ ಫೈನಾನ್ಸ್ ವಿದೇಯಕವನ್ನು ಸ್ಪೀಕರ್ ಯುಟಿ ಖಾದರ್ ಅಂಗೀಕರಿಸಿದ್ದಾರೆ.

Read More