Author: kannadanewsnow05

ಹಾಸನ : ಇತ್ತೀಚಿಗೆ ರಾಜ್ಯದಲ್ಲಿ ಅಪಘಾತಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹಾಸನದಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು ನಿಯಂತ್ರಣ ತಪ್ಪಿ ಥಾರ್ ಜೀಪ್ ಒಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಘಟನೆ, ಹಾಸನ ತಾಲೂಕಿನ ತಾಲ್ಲೂಕಿನ ಶಂಕರನಹಳ್ಳಿ ಬಳಿ ನಡೆದಿದೆ. ಮೃತ ಯುವಕನನ್ನು ಅರಕಲಗೂಡು ತಾಲ್ಲೂಕು ಕೊಂಗಳ್ಳಿ ಗ್ರಾಮದ ನಿಶ್ಚಿತ್‌ (28) ಎಂದು ತಿಳಿದುಬಂದಿದೆ. ವೇಗವಾಗಿ ಬಂದಂತಹ ಥಾರ್‌ ಜೀಪ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸಂಪೂರ್ಣ ಜೀಪ್ ಜಖಂಗೊಂಡಿದೆ. ಜೀಪ್‌ನಲ್ಲಿ ನಾಲ್ವರು ಯುವಕರು ತೆರಳುತ್ತಿದ್ದರು. ಈ ವೇಳೆ ನಿಶ್ಚಿತ್‌ ಸ್ಥಳದಲ್ಲಿ ಸಾವನ್ನಪ್ಪಿದ್ದು ಉಳಿದ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೊರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More

ಬೆಳಗಾವಿ : ಜಿಲ್ಲೆಯಲ್ಲಿ ಇತ್ತೀಚೆಗೆ ಮಕ್ಕಳ ಮಾರಾಟ ಕೇಸ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಮಕ್ಕಳ ಕಿಡ್ನಾಪ್ ಕೇಸ್ ಗಳಲ್ಲಿ ಬೆಳಗಾವಿ ಪೊಲೀಸರು ಹಲವು ಪ್ರಕರಣಗಳನ್ನು ಬೇಧಿಸಿದ್ದು, ಇದೀಗ ಹುಕ್ಕೇರಿ ತಾಲ್ಲೂಕಿನ ಸುಲ್ತಾನಪುರದ 5 ವರ್ಷದ ಗಂಡು ಮಗುವನ್ನು ಮಾರಿದ್ದ ಪ್ರಕರಣ ಭೇದಿಸಿದ ಹುಕ್ಕೇರಿ ಠಾಣೆ ಪೊಲೀಸರು, ಮಹಾರಾಷ್ಟ್ರದ ಇಬ್ಬರು ಮಹಿಳೆಯರನ್ನು ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನ ಕೊಲ್ಹಾಪುರ ಜಿಲ್ಲೆಯ ಗಡಹಿಂಗ್ಲಜ್ ತಾಲೂಕಿನ ಮಾದ್ಯಾಳದ ಸಂಗೀತಾ ಹಮ್ಮನ್ನವರ, ರತ್ನಾಗಿರಿ ಜಿಲ್ಲೆಯ ಚಿಪಳುನ ತಾಲೂಕಿನ ನಿವಳಿಯ ಮೋಹನ ತಾವಡೆ ಮತ್ತು ಆತನ ಪತ್ನಿ ಸಂಗೀತಾ ತಾವಡೆ ಬಂಧಿತ ಆರೋಪಿಗಳು. ಇನ್ನಿಬ್ಬರು ಆರೋಪಿಗಳಾದ ನಂದಕುಮಾರ ಸೀತಾರಾಮ್ ಡೋರಲೇಕರ್ ಮತ್ತು ಆತನ ಪತ್ನಿ ನಂದಿನಿ ನಂದಕುಮಾರ ಡೋರಲೇಕರ್ ಪತ್ತೆಗೆ ಶೋಧ ಕಾರ್ಯವನ್ನು ಪೊಲೀಸರು ಮುಂದುವರೆಸಿದ್ದಾರೆ. ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ. ಪ್ರಕರಣ ಹಿನ್ನೆಲೆ? ಸುಲ್ತಾನಪುರದ ಅರ್ಚನಾ ಮಗದುಮ್ಮ ಹಾಗೂ ರಾಜು ಮಗದುಮ್ಮ ವಿವಾಹವಾಗಿದ್ದರು. ಇಬ್ಬರಿಗೂ ಇದು ಎರಡನೇ…

Read More

ಮಂಡ್ಯ : ಕಳೆದ ಕೆಲವು ದಿನಗಳ ಹಿಂದೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನಲ್ಲಿ ನಾಲ್ವರು ಮಕ್ಕಳೊಂದಿಗೆ ತಾಯಿಯೊಬ್ಬಳು ಆಲಮಟ್ಟಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿತ್ತು. ಇದೀಗ ಮಂಡ್ಯದಲ್ಲೂ ಕೂಡ ಅಂತಹದೇ ಘಟನೆ ನಡೆದಿದ್ದು, ಇಬ್ಬರು ಮಕ್ಕಳ ಜೊತೆಗೆ ತಾಯಿಯೊಬ್ಬಳು ವಿಸಿ ನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ನಡೆದಿದೆ. ಹೌದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ಇಬ್ಬರು ಮಕ್ಕಳೊಂದಿಗೆ ತಾಯಿ ಒಬ್ಬಳು ವಿಸಿನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಇನ್ನು ತಾಯಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ವಿಸಿ ನಾಲಿಗೆ ಹಾರಿದ್ದಾಳೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಮಹಿಳೆಯನ್ನು ರಕ್ಷಣೆ ಮಾಡಿದ್ದು ದುರಾದೃಷ್ಟ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ನಿಶಿಕಾ (8) ರಾಘವ್ (2) ನಿರುಪಾಲಾಗಿರುವ ಮಕ್ಕಳು ಎಂದು ತಿಳಿದುಬಂದಿದೆ. ನದಿಗೆ…

Read More

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಇಡೀ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದ್ದರು. ಈ ಸಮನ್ಸ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದರು. ಇದಿಗ ಸಿಎಂ ಪತ್ನಿ ಪಾರ್ವತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆದಿದ್ದು, ನ್ಯಾ.ಎಂ. ನಾಗಪ್ರಸನ್ನ ಮುಂದಿನ ವಿಚಾರಣೆಯವರೆಗೂ ಇಡಿ ನೀಡಿದ್ದ ಸಮನ್ಸ್ ಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಫೆಬ್ರವರಿ 10ರವರೆಗೆ ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಸಿಎಂ ಪತ್ನಿ ಪಾರ್ವತಿ ಪರವಾಗಿ ಸಂದೇಶ್ ಚೌಟ ಅವರು ವಾದ ಮಂಡಿಸಿದರೆ, ಸಚಿವ ಭೈರತಿ ಸುರೇಶ್ ಅವರ ಪರವಾಗಿ ಸಿವಿ ನಾಗೇಶ್ ಅವರು ವಾದ ಮಂಡಿಸಿದರು. ಭೈರತಿ ಸುರೇಶ್ ಯಾವುದೇ ಅನುಸೂಚಿತ ಕೇಸಿನ ಆರೋಪಿಯಲ್ಲ. ಆರೋಪಿ ಎಲ್ಲದಿದ್ದರೂ ಕೂಡ ಅವರಿಗೆ ಇಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಆಯುಕ್ತ ಡಿ ಬಿ ನಟೇಶ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮುಡಾ ಹಗರಣದ ವಿಚಾರವಾಗಿ ಕಳೆದ 2024 ಅಕ್ಟೋಬರ್ 28 29 ರಂದು ಇಡಿ ಕಾನೂನುಬಾಹಿರವಾಗಿ ನನ್ನ ಹೇಳಿಕೆ ಪಡೆದಿದೆ ಎಂದು ಇಡಿ ಸಮನ್ಸ್ ರದ್ದುಗೊಳಿಸಿ ಎಂದು ನಟೇಶ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಇಡಿ ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಅಕ್ಟೊಬರ್ ನಲ್ಲಿ ಇಡಿ ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ಮಾಜಿ ಆಯುಕ್ತ ನಟೇಶ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಹೇಮಂತ್ ಚಂದನ್ ಗೌಡ ಅವರಿದ್ದ ಪೀಠ ಇಡಿ ಸಮನ್ಸ್ ರದ್ದುಗೊಳಿಸಿ ಈ ಒಂದು ಆದೇಶ ಹೊರಡಿಸಿದ್ದಾರೆ. 2024 ರಲ್ಲಿ ಅಕ್ಟೋಬರ್ 28 29ರಂದು ಇಡಿ ತಮ್ಮ ಹೇಳಿಕೆ ಪಡೆದಿದೆ ತಮ್ಮ ಹೇಳಿಕೆ ಪಡೆದಿರುವುದು ಕಾನೂನು ಬಾಹಿರ ಹೀಗಾಗಿ PMLA ಕಾಯ್ದೆಯ ಅಡಿ ಶೋಧನೆ ವರದಿಗೆ ಮನವಿ ಮಾಡಿದರು. ಇಡಿ ಸಮಾಜ ರದ್ದು…

Read More

ಚಿಕ್ಕಬಳ್ಳಾಪುರ : ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ದರೋಡೆ ಘಟನೆಗಳು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಇದೀಗ ಚಿಕ್ಕಬಳ್ಳಾಪುರದಲ್ಲಿ ಅಂಗಡಿಗೆ ಖರೀದಿಗೆ ಎಂದು ನೆಪದಲ್ಲಿ ಬಂದಂತಹ ಇಬ್ಬರು ಖದೀಮರು ಹಾಡ ಹಗಲೇ ಮಾಂಗಲ್ಯ ಸರ ಕದ್ದು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗಡಿದಂ ಗ್ರಾಮದಲ್ಲಿ ಹಾಡಹಗಲೇ ಮಾಂಗಲ್ಯ ಸರ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಚಿಲ್ಲರೆ ಅಂಗಡಿ ನಡೆಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದಾರೆ. ಅಂಗಡಿಗೆ ಖರೀದಿ ನೆಪದಲ್ಲಿ ಬಂದಿದ್ದ ಇಬ್ಬರಿಂದ ಈ ಒಂದು ದುಷ್ಕೃತ್ಯ ನಡೆದಿದೆ. ಮಾಂಗಲ್ಯಸರ ಕಸಿದು ಪರಾರಿಯಾಗಿದ್ದಾರೆ ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಸರಗಳ್ಳತನ ನಡೆದಿದೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಧಾರವಾಡ : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಹೈಕೋರ್ಟಿನಲ್ಲಿ ವಾದ ಪ್ರತಿವಾದ ನಡೆಯಿತು. ಸಿಎಂ ಪರವಾಗಿ ಕಪಿಲ್ ಸಿಬಲ್, ಅಭಿಷೇಕ್ ಮನಸಿಂಗ್ವಿ, ಪ್ರೊ. ರವಿವರ್ಮ ಕುಮಾರ್ ವಾದಿಸಿದರೆ, ಅತ್ತ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರವಾಗಿ ಮಣಿಂದರ್ ಸಿಂಗ್ ಅವರು ವಾದಿಸಿದರು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ಆದೇಶವನ್ನು ಕಾಯ್ದಿರಿಸಿ ಆದೇಶಿಸಿದೆ. ಈ ವಿಚಾರವಾಗಿ, ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದು, 50:50 ಅನುಪಾತ ದಾಖಲೆ ತೋರಿಸಿದರೆ ಜೈಲಿಗೆ ಹೋಗುತ್ತೇನೆ. ಈ ಒಂದು 50:50 ಅನುಪಾತ ದಾಖಲೆ ತೋರಿಸಿದರೆ ನಾನೇ ಹೋಗುತ್ತೇನೆ. ಈ ಒಂದು ಅಧಿಸೂಚನೆ ಉಲ್ಲೇಖ ಇಲ್ಲ. ನನ್ನ ಮೇಲೆ ಯಾವ ಕೇಸ್ ಬೇಡ ನಾನೇ ಸ್ವತಹ ಜೈಲಿಗೆ ಹೋಗುತ್ತೇನೆ. ಸಿಎಂ ಗೆ ಇದು ನನ್ನ ಬಹಿರಂಗ ಸವಾಲು. UDD-118 2024 ಉಲ್ಲೇಖಿಸಿ 50:50 ಅನುಪಾತ ಅಂತಾರೆ. ಹಾಗಾದ್ರೆ…

Read More

ಮೈಸೂರು : ಅರಮನೆ ಮೈದಾನ ಬಳಸಿಕೊಳ್ಳುವ ಸಂಬಂಧ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿರುವ ವಿಚಾರವಾಗಿ ರಾಜ್ಯ ಸರ್ಕಾರ ನಮಗೆ ಯಾವುದೇ ಪರಿಹಾರ ಕೊಡುವ ಅಗತ್ಯವಿಲ್ಲ ಎಂದು ಸುತ್ತುರಿನಲ್ಲಿ ಬಿಜೆಪಿಯ ಸಂಸದ ಯದುವೀರ್ ಒಡೆಯರ್ ಹೇಳಿಕೆ ನೀಡಿದರು. ಇಂದು ಅವರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಯದುವೀರ್ ಒಡೆಯರ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಪರಿಹಾರ ಕೊಡುವ ಬದಲು ಟಿಡಿಆರ್ ಸರ್ಟಿಫಿಕೇಟ್ ಕೊಟ್ಟರೆ ಸಾಕು. ಸರ್ಕಾರ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಸುಪ್ರೀಂ ಕೋರ್ಟ್ ಆದೇಶ ಇದ್ದಾಗ ನಮ್ಮ ಮುಂದೆ ಯಾಕೆ ಬರುತ್ತಾರೆ? ಸಾರ್ವಜನಿಕ ಹಿತದೃಷ್ಟಿಗಾಗಿ ಅಂದರೆ ನಮ್ಮ ಆಸ್ತಿನೆ ಬೇಕಾ? ಎಂದು ಪ್ರಶ್ನಿಸಿದರು. ಈ ಹಿಂದೆ ಸದಾಶಿವ ನಗರ ಕೂಡ ಬೆಂಗಳೂರು ಅರಮನೆಗೆ ಸೇರಿತ್ತು. ನಾವು ಆಗಲೇ ಸಾಮಾಜಿಕ ನ್ಯಾಯದಲ್ಲಿ ಬಹಳಷ್ಟು ಜಮೀನು ಕೊಟ್ಟಿದ್ದೇವೆ. ಸಾಮಾನ್ಯರಿಗೆ ಏನು ಕಾನೂನು ಇದೆ ನಮಗೂ ಅದೇ ಕಾನೂನು ಅಲ್ವಾ. ಟಿಡಿಆರ್‌ ಬದಲು ನಗದು ರೂಪದಲ್ಲಿ ಪರಿಹಾರ ಹೇಳಬಹುದಿತ್ತು? ಸರ್ಕಾರದ ಖಜಾನೆಗೆ ಧಕ್ಕೆ ಆಗುತ್ತೆ…

Read More

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶ ನ್ಯಾ.ಎಂ ನಾಗಪ್ರಸನ್ನ ಅವರು, ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಸುವ ವಿಚಾರವಾಗಿ ಆದೇಶ ಪ್ರಕಟಿಸುವವರೆಗೂ ಹೈಕೋರ್ಟ್ ಗಡುವು ವಿಸ್ತರಿಸಿದೆ. ವಿಚಾರಣೆಯ ಆರಂಭದಲ್ಲಿ ರಾಜ್ಯ ಸರ್ಕಾರದ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ಲೋಕಾಯುಕ್ತ ತನಿಖೆ ತಾರತಮ್ಯಪೂರಿತವಾಗಿದ್ದಾಗ ಬೇರೆ ಸಂಸ್ಥೆಯಿಂದ ತನಿಖೆ ಕೋರಬಹುದು. ಈ ಕೇಸ್ ನಲ್ಲಿ ಇದ್ಯಾವುದು ಆಗದಿದ್ದರೂ ಸಿಬಿಐ ತನಿಖೆ ಕೋರುತ್ತಿದ್ದಾರೆ. ಲೋಕಾಯುಕ್ತ ಪೊಲೀಸರ ವರದಿಯಲ್ಲಿ ಏನಿದೆ ಎಂಬುದನ್ನು ಯಾರು ನೋಡಿಲ್ಲ ಎಂದು ಅವರು ವಾದ ಮಂಡಿಸಿದರು. ಲೋಕಾಯುಕ್ತ ರಾಜ್ಯ ಸರ್ಕಾರದ ಹಿಡಿತದಲ್ಲಿದೆ ಎಂದಿದ್ದಾರೆ. ಹಾಗಾದರೆ ಸಿಬಿಐ ಕೂಡ ಕೇಂದ್ರ ಸರ್ಕಾರದ ಹಿಡಿತದಲ್ಲಿದೆ. ಹೀಗಾಗಿ ಸಿಬಿಐ ಸ್ವತಂತ್ರ ತನಿಖಾ ಸಂಸ್ಥೆ ಎನ್ನಲಾಗುವುದಿಲ್ಲ. ಪೋಲೀಸರ ಮೇಲೆ…

Read More

ಬೆಂಗಳೂರು : ಉದ್ಯಮಿಯೊಬ್ಬರಿಗೆ ಹಲ್ಲೆ ಮಾಡಿ, ಗನ್ ತೋರಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಮಾಜಿ ರೌಡಿಶೀಟರ್ ಸೇರಿ ಇಬ್ಬರನ್ನು ಸದಾಶಿವನಗರ ಠಾಣೆ ಪೊಲೀಸರು ಬ್ರೆಸ್ಟ್ ಮಾಡಿದ್ದರು. ಆದರೆ ಇದೀಗ ಹೈಕೋರ್ಟ್ ಫೈಟರ್ ರವಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಹೌದು ಉದ್ಯಮಿ ಒಬ್ಬರಿಗೆ ಫೈಟರ್ ಅಭಿ ಗನ್ ತೋರಿಸಿ ಬೆದರಿಕೆ ಹಾಕಿದ್ದ. ಈ ವಿಚಾರವಾಗಿ ಉದ್ಯಮಿ ಸೋಮಶೇಖರ್ ಎನ್ನುವವರು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು.ಈ ಒಂದು ಊರಿನ ಅನ್ವಯ ಫೈಟರ್ ರವಿ ಹಾಗೂ ಆತನ ಗನ್ ಮ್ಯಾನ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಪೊಲೀಸರು ನಾಲ್ಕು ದಿನ ತೆಗೆದುಕೊಂಡಿದ್ದು ಇಂದು ಫೈಟರ್ ರವಿ ಪೊಲೀಸ್ ಕಸ್ಟಡಿ ಅಂತ್ಯವಾಗಿದೆ. ಹಾಗಾಗಿ ಹೈಕೋರ್ಟ್ ಕೂಡ ಫೈಟರ್ ಅವರಿಗೆ ಶರತ್ತು ಬದ್ಧ ಜಾಮೀನು ನೀಡಿದೆ. ಘಟನೆ ಹಿನ್ನೆಲೆ? ದೂರುದಾರ ಉದ್ಯಮಿ ಸೋಮಶೇಖರ್ ಅವರು ಪರಿಚಿತ ಶ್ರೀಕಾಂತ್ ಎಂಬುವವರಿಗೆ ೭೫ ಲಕ್ಷ ರೂ. ಸಾಲ ನೀಡಿದ್ದರು. ಈ ಸಾಲ ವಾಪಾಸ್ ನೀಡುವಂತೆ ಸೋಮಶೇಖರ್ ಆಗಾಗ…

Read More