Author: kannadanewsnow05

ಹಾಸನ : ಪ್ರಜ್ವಲ್‌ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ, ಯಾರು ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಹೇಳಿದ್ದಾರೆ. ಹೊಳೆನರಸೀಪುರದ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ದನು ಸ್ಮರಣಾರ್ಥ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದ ಅವರು, ಈ ವೇಳೆ ಪ್ರಜ್ವಲ್‌ ರೇವಣ್ಣ ಈ ಗ್ರಾಮಕ್ಕೆ ಕೊಡುಗೆ ಕೊಟ್ಟಿದ್ದಾರೆ. ಅವರು ಶೀಘ್ರದಲ್ಲೇ ಬಿಡುಗಡೆಯಾಗುತ್ತಾರೆ. ನಾವು, ನೀವು ಎಲ್ಲರೂ ಒಟ್ಟಿಗೆ ಸ್ವಾಗತ ಮಾಡೋಣ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ. ಮುಂದಕ್ಕೂ ರಾಜಕೀಯ ಏನು ಅನ್ನೋದು ನನಗೂ ಗೊತ್ತಿದೆ ಎಂದಿದ್ದಾರೆ. ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ ಆಗುತ್ತೆ ಮುಂದಿನ ನಾಲ್ಕೈದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬದಲಾವಣೆ ಆಗುತ್ತದೆ. ಎಂದು ಜೆಡಿಎಸ್ ಎಂ ಎಲ್ ಸಿ ರೇವಣ್ಣ ಸ್ಪೋಟಕವಾದ ಹೇಳಿಕೆ ನೀಡಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅವರು ಮಾತನಾಡಿದರು. ಚಾಕೇನಹಳ್ಳಿಕಟ್ಟಿ ಗ್ರಾಮದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದು, ನಾಲ್ಕೈದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ…

Read More

ಬೆಂಗಳೂರು : ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು ನನಗೆ ಬಹಳ ಇಷ್ಟ. ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು? ಎಂದು ನಟ ಕಿಶೋರ್ ಹೇಳಿಕೆ ನೀಡಿದ್ದಾರೆ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರಧಾನ ಹಾಗೂ ಸಮಾರೋಪ ಸಮಾರಂಭದಲ್ಲಿ ನಟ ಕಿಶೋರ್ ಈ ಹೇಳಿಕೆ ನೀಡಿದರು. ಸಿದ್ದರಾಮಯ್ಯ ಮಾಂಸ ಸೇವಿಸಿ ದೇವಸ್ಥಾನಕ್ಕೆ ಹೋಗುತ್ತೇನೆ ಅಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತು ನನಗೆ ಬಹಳ ಇಷ್ಟ ಆಯಿತು. ಬೆಂಗಳೂರಿನ ಸುಲೋಚನಾ ಸಭಾಂಗಣದಲ್ಲಿ ನಟಕಿಶೋರ್ ಹೇಳಿಕೆ ನೀಡಿದರು. ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ತೆರೆ ಬಿದ್ದಿದ್ದು, ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ನಟ ಕಿಶೋರ್ ಮಾತನಾಡಿದರು.ಸಿಎಂ ಸಿದ್ದರಾಮಯ್ಯ ಅವರಂತಹ ವ್ಯಕ್ತಿತ್ವ ಇರುವುದು ಬಹಳ ಮುಖ್ಯ ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು? ಎಂದು ನಟಕಿಶೋರ್ ಇದೆ ವೇಳೆ ಹೇಳಿಕೆ ನೀಡಿದರು.

Read More

ಹಾಸನ : ಮುಂದಿನ ನಾಲ್ಕೈದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬದಲಾವಣೆ ಆಗುತ್ತದೆ. ಎಂದು ಜೆಡಿಎಸ್ ಎಂ ಎಲ್ ಸಿ ರೇವಣ್ಣ ಸ್ಪೋಟಕವಾದ ಹೇಳಿಕೆ ನೀಡಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಜಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅವರು ಮಾತನಾಡಿದರು. ಚಾಕೇನಹಳ್ಳಿಕಟ್ಟಿ ಗ್ರಾಮದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದು, ನಾಲ್ಕೈದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬದಲಾಗುತ್ತದೆ. ಆಗ ಕಾಂಗ್ರೆಸ್ ಪಕ್ಷದ ಕಡೆ ಹೋಗಿರುವ ಅವರ ಕಥೆ ಏನಾಗಬಹುದು? ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ ಆಯ್ತು ಅಂದುಕೊಳ್ಳೋಣ ಆಗ ಬಂದು ಎಚ್ ಡಿ ರೇವಣ್ಣ ಅವರಿಗೆ ಜೈ ಅಂತಾರೆ ಇದೇ ಕಥೆ. ಕೆಲವೇ ತಿಂಗಳಲ್ಲಿ ಸರ್ಕಾರ ಬದಲಾಗುತ್ತದೆ. ಎಂದು ಸ್ಪೋಟಕವಾದ ಹೇಳಿಕೆ ನೀಡಿದರು.

Read More

ಬೆಂಗಳೂರು : ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಈ ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಲತಾಣ ಎಕ್ಸ್ ನಲ್ಲಿ ಘಟನೆಯನ್ನು ತೀವ್ರವಾಗಿ ಖಂಡಿಸಿ ಟ್ವೀಟ್ ಮಾಡಿದ್ದಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.…

Read More

ತುಮಕೂರು : ತುಮಕೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಮನೆಯಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಸೈಕೋ ಆರೋಪಿಯನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ತುಮಕೂರಿನ NEPS ಠಾಣೆ ಪೊಲೀಸರು ಶರತ್ ಇರುವ ಸೈಕೋ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಬಂಧಿತ ಶರತ್ ತುಮಕೂರಿನ ಖಾಸಗಿ ಕಾಲೇಜಿನಲ್ಲಿ ಶರತ್ ಇಂಜಿನಿಯರಿಂಗ್ ಓದುತ್ತಿದ ಎನ್ನಲಾಗಿದೆ. ಇಂಜಿನಿಯರಿಂಗ್ ವಿದ್ಯಾರ್ಥಿ ಶರತ್ ಎಸ್ಐಟಿ ಬ್ಯಾಕ್ ಗೇಟ್ ನಲ್ಲಿ ಶರತ್ ರೂಮ್ ಮಾಡಿಕೊಂಡಿದ್ದ ಅತಿಯಾಗಿ ಬ್ಲೂ ಫಿಲಂ ನೋಡುತ್ತಿದ್ದ ಎಂದು ತಿಳಿದು ಬಂದಿದೆ. ಇಂಜಿನಿಯರಿಂಗ್ ವಿದ್ಯಾರ್ಥಿ ಬ್ಲೂ ಫಿಲಂ ನೋಡಿ ಶರತ್ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಎನ್ನಲಾಗಿದೆ. ಮೂಲತಃ ವಿದ್ಯಾರ್ಥಿ ಶರತ್ ಚಿಕ್ಕನಾಯಕನಹಳ್ಳಿ ಮೂಲದವನು ಎಂದು ತಿಳಿದುಬಂದಿದೆ.

Read More

ವಿಜಯಪುರ : ವಿಜಯಪುರದಲ್ಲಿ ಬಾಲಕಿಯರ ವಸತಿ ನಿಲಯದಿಂದ ಕೆಬಿಎಸ್‌ ನಂ.4ಕ್ಕೆ ಬರುವ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ತೋರಿದ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ನಗರದ ಕೆಬಿಎಸ್ ನಂಬರ್‌ 4ರ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ, ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಶಿಕ್ಷಕರಿಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ವಿದ್ಯಾರ್ಥಿನಿಯರೊಂದಿಗೆ ಅಸಭ್ಯ, ಅನುಚಿತವಾಗಿ ವರ್ತಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ ಜಗದೀಶ ಅಕ್ಕಿ ಹಾಗೂ ಸಹ ಶಿಕ್ಷಕ ಎಂ‌.ಕೆ.ಪಾಟೀಲ ಅವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ವಿಜಯಪುರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ತಿಳಿಸಿದ್ದಾರೆ. ವಿಜಯಪುರ ನಗರದ ಸ್ಟೇಷನ್‌ ರಸ್ತೆಯಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ನಿಲಯ ಹಾಗೂ ಸರ್ಕಾರಿ ಮೆಟ್ರಿಕ್‌ ಪೂರ್ವ ಪರಿಶಿಷ್ಟ ಪಂಗಡದ ಬಾಲಕಿಯರ ವಸತಿ ನಿಲಯದಿಂದ ಕೆಬಿಎಸ್‌ ನಂ.4ಕ್ಕೆ ಬರುವ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನುವುದು ಸಾಬೀತಾಗಿದೆ ಈ ಹಿನ್ನೆಲೆ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.

Read More

ಗದಗ : ರಾಜ್ಯದಲ್ಲಿ ಇಂದು ಮತ್ತೊಂದು ಘೋರವಾದ ದುರಂತ ಸಂಭವಿಸಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರು ಪಾಲಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೋರಲಹಳ್ಳಿಯಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಮೃತರನ್ನು ಶರಣಪ್ಪ ಬಡಿಗೇರ್ (34) ಮಹೇಶ್ (36) ಹಾಗೂ ಗುರುನಾಥ (38) ನೀರು ಪಾಲಾಗಿದ್ದಾರೆ. ಆಂಜನೇಯನ ದರ್ಶನ ಪಡೆದು ನದಿಗೆ ಮೂವರು ಈಜಲು ಇಳಿದಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿಯಿಂದ ಐವರು ಸ್ನೇಹಿತರ ತಂಡ ಇಲ್ಲಿ ಬಂದಿತ್ತು.ದೇವರ ದರ್ಶನ ಪಡೆದು ನದಿಯಲ್ಲಿ ಈಜಲು ತೆರಳಿದ್ದಾರೆ. ಅಲ್ಲದೆ ಇಂದು ಶರಣಪ್ಪ ಬಡಿಗೇರ್ ಹುಟ್ಟುಹಬ್ಬ ಕೂಡ ಇತ್ತು. ಈ ಹಿನ್ನೆಲೆಯಲ್ಲಿ ಶರಣಪ್ಪ ಸ್ನೇಹಿತರೊಂದಿಗೆ ಆಂಜನೇಯನ ದೇವಸ್ಥಾನಕ್ಕೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಈಜಲು ಬಾರದಿದ್ದರೂ ಕೂಡ ಮಹೇಶ್ ಬಡಿಗೇರ್ ನದಿಗೆ ಇಳಿದಿದ್ದಾನೆ. ಈಜಲು ಬಾರದೆ ನದಿಯಲ್ಲಿ ಮಹೇಶ್ ಕೊಚ್ಚಿಕೊಂಡು ಹೋಗುತ್ತಿದ್ದ ಇದನ್ನು ನೋಡಿದ ಶರಣಪ್ಪ ಮತ್ತು ಗುರುನಾಥ್ ಆತನನ್ನು ರಕ್ಷಿಸಲು ನದಿಗೆ ಇಳಿದಿದ್ದಾರೆ. ಆದರೆ ಈ ವೇಳೆ ಮೂವರು ನದಿಯಲ್ಲಿ…

Read More

ತುಮಕೂರು : ಇತ್ತೀಚಿಗೆ ವ್ಹಿಲಿಂಗ್ ಮಾಡುವ ಪುಂಡರ ಅಟ್ಟಹಾಸ ಮಿತಿಮೀರಿದು, ಇದೀಗ ತುಮಕೂರಿನಲ್ಲಿ ಘೋರವಾದ ಘಟನೆ ಸಂಭವಿಸಿದೆ. ವ್ಹಿಲಿಂಗ್ ಪುಂಡರ ಅಟ್ಟಹಾಸಕ್ಕೆ ಹಾಲು ತರಲು ಹೋಗಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತುಮಕೂರಿನ ಟೂಡ ಕಚೇರಿ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹೇಮಾದ್ರಿ ವಿದ್ಯಾಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ತಿಪ್ಪೇಸ್ವಾಮಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ತುಮಕೂರಿನ ಸತ್ಯಮಂಗಲದಲ್ಲಿ ಹೇಮಾದ್ರಿ ಸಂಸ್ಥೆ ಇದೆ. ಬೆಳಿಗ್ಗೆ ಹಾಲು ತರಲು ಮನೆಯಿಂದ ತಿಪ್ಪೇಸ್ವಾಮಿ ಹೊರಗಡೆ ಬಂದಿದ್ದರು. ಇವಳೇ ವೀಲಿಂಗ್ ಮಾಡುತ್ತಿದ್ದ ಪುಂಡರ ಬೈಕ್ ಡಿಕ್ಕಿಯಾಗಿತ್ತು. ಬೈಕ್ ಡಿಕ್ಕಿಯಾಗಿ ತಿಪ್ಪೇಸ್ವಾಮಿ ಅವರ ತಲೆ ಮತ್ತು ಕಾಲಿಗೆ ಗಂಭೀರವಾಗಿ ಗಾಯಗಳಾಗಿತ್ತು. ತಿಪ್ಪೇಸ್ವಾಮಿಯನ್ನು ಕೂಡಲೇ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ತಿಪ್ಪೇಸ್ವಾಮಿ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ, ಬೆಂಗಳೂರಿನಲ್ಲಿ ನಡೆದಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿವೇಕ್ ಇದೀಗ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳ ಹಿಂದೆ ನೇಣು ಬಿಗಿದುಕೊಂಡು ವಿವೇಕ್ ಆತ್ಮಹತ್ಯೆಗೆ ಯತ್ನಿಸಿದ್ದರು. ಐಸಿಐಸಿಐ ಬ್ಯಾಂಕ್ ನಲ್ಲಿ ವಿವೇಕ್ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಮೃತ ವಿವೇಕ್ ಪತ್ನಿಯಿಂದ ಇದೀಗ ತಲಘಟ್ಟಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಎರಡು ಮೂರು ದಿನದಿಂದ ವಿವೇಕ್ ಡಲ್ ಆಗಿದ್ದರು. ಆದರೆ ಇದಕ್ಕೆ ಕಾರಣ ತಿಳಿದು ಬಂದಿಲ್ಲ ಸಾವಿರ ನಿಖರ ಕಾರಣ ಪತ್ತೆ ಮಾಡುವಂತೆ ವಿವೇಕ್ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮನೆಯಲ್ಲಿ ಯಾವುದೇ ಡೆತ್ ನೋಟ್ ಸಹ ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ವಿವೇಕ್ ಮೃತದೇಹ ಹಸ್ತಾಂತರಿಸಲಾಗಿದೆ.

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ ಕಳೆದ 12 ದಿನಗಳಿಂದ ಕೂಡ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಇಂದು ಬಂಟ್ವಾಳ ತಾಲೂಕಿನ ಸುತ್ತಮುತ್ತಲು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಇದೀಗ ನಾಪತ್ತೆಯಾಗಿದ್ದ ದಿಗಂತ್ ಉಡುಪಿಯಲ್ಲಿ ಡಿ ಮಾರ್ಟ್ ನಲ್ಲಿ ಕೊನೆಗೂ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಹೌದು ದಿಗಂತ್ ಗಾಗಿ ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೋಲೀಸರ ತಂಡ ಹುಡುಕಾಟ ನಡೆಸಿದ್ದರು.ಡಿ‌ಎಆರ್ ತಂಡದ 30 ಪೋಲೀಸರು, ರೈಲ್ವೆ ಪೋಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮೆರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು. ದಿಗಂತ್​ಗಾಗಿ ಪೊಲೀಸರು ಕಳೆದ 12 ದಿನಗಳಿಂದ ಹುಡುಕಾಟ ನಡೆಸಿದ್ದಾರೆ. ವಿವಿಧ ಆಯಾಮಗಳಲ್ಲಿ 40 ಕ್ಕೂ ಅಧಿಕ ಪೋಲೀಸರ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಬಂಟ್ವಾಳ ಸಬ್ ಡಿವಿಜನ್​ನ ಸುಮಾರು 9 ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್​ಗಳು. ಎಸ್.ಐ.ಗಳು ಹಾಗೂ…

Read More