Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು 131 ದಿನಗಳ ಕಾಲ ಜೈಲಿನಲ್ಲಿ ಕಳೆದಿರುವ ನಟ ದರ್ಶನ ಅವರಿಗೆ ಇಂದು ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಾಯಂಕಾಲ ದರ್ಶನ ಅವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ದುರ್ಗಮ್ಮ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅಲ್ಲದೆ ಸಂಜೆ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ರಸ್ತೆ ಮಾರ್ಗವಾಗಿ ನಟ ದರ್ಶನ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಭಿಮಾನಿಗಳನ್ನ ನಿಯಂತ್ರಿಸುವ ಸಲುವಾಗಿ ಬಳ್ಳಾರಿಯಿಂದ ಆಂಧ್ರದ ಅನಂತಪುರ ರಸ್ತೆಯಿಂದ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪತ್ನಿ ತಂದಿರುವಂತಹ ಕಾರಿನಲ್ಲೇ ಸಂಜೆ ನಟ ದರ್ಶನ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಲ್ಲಿದ್ದ ನಟ ದರ್ಶನ ಅವರು, ಕಳೆದ 131 ದಿನಗಳ ಬಳಿಕ ಇಂದು ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನವರು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಬೆಂಗಳೂರಿನ ಸಿಸಿಹೆಚ್ 57 ರ ಜಡ್ಜ್ ಜೈಶಂಕರ್ ಅವರು ಬಳ್ಳಾರಿ ಜಿಲ್ಲೆಯಿಂದ ಬಿಡುಗಡೆ ಮಾಡುವಂತೆ ಆದೇಶ ಪ್ರತಿಯನ್ನು ಇಮೇಲ್ ಮೂಲಕ ರವಾನಿಸಲು ಸೂಚನೆ ನೀಡಿದ್ದಾರೆ. ಹಾಗಾಗಿ ರಿಲೀಸ್ ಕುರಿತಂತೆ ಆದೇಶದ ಪ್ರತಿ ಜೈಲಿನ ಅಧಿಕಾರಿಗಳಿಗೆ ತಲುಪುತ್ತಿದ್ದಂತೆ ನಟ ದರ್ಶನ ಅವರು ಬಿಡುಗಡೆಯಾಗಲಿದ್ದಾರೆ. ಇದರ ಮಧ್ಯ ನಾಳೆ ನಟ ದರ್ಶನ್ ಪುತ್ರ ವಿನೇಶ್ ನ 17ನೇ ವರ್ಷದ ಹುಟ್ಟುಹಬ್ಬ ಕೂಡ ಇದೆ. ಹಾಗಾಗಿ ನಟ ದರ್ಶನ್ ಇಂದು ಸಂಜೆನೇ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಏಕೆಂದರೆ ಕಳೆದ ನಾಲ್ಕು ತಿಂಗಳಿನಿಂದ ವಿನೇಶ್ ತಂದೆ ದರ್ಶನ ಅವರನ್ನು ಬಿಟ್ಟು ಇದ್ದಿದ್ದರಿಂದ ಬಹಳ ನೊಂದುಕೊಂಡಿದ್ದರು. ನಾಳೆ ಪುತ್ರ ವಿನೇಶ್ ಹುಟ್ಟುಹಬ್ಬದ…
ಬೆಂಗಳೂರು : ಪ್ರತಿ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಯವ ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷವಾದ ಹಿನ್ನೆಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವನ್ನು ಬಹಳಷ್ಟು ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದಂತೆ, ಬೆಂಗಳೂರಿನ ಎಲ್ಲಾ ಐಟಿ ಕಂಪನಿಗಳ ಮೇಲೆ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಹೌದು ನವೆಂಬರ್ 1ರಂದು ಎಲ್ಲ ಶಾಲೆ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳ ಕಟ್ಟಡ ಮೇಲೆ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು.ಬೆಂಗಳೂರು ಜಿಲ್ಲೆಯಲ್ಲಿ ಶೇ50 ರಷ್ಟು ಜನ ಹೊರಗಿನಿಂದ ಬಂದಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರ ಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು. ಬಾವುಟ ಹಾರಿಸುವ ಮೂಲಕ ಶ್ರದ್ಧಾ, ಭಕ್ತಿ ಗೌರವ ತೋರಿಸಬೇಕು ಎಂದು ಹೇಳಿದ್ದರು.ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂತ ಸರ್ಕಾರ…
ಬಳ್ಳಾರಿ : ಸುಮಾರು 131 ದಿನಗಳ ಬಳಿಕ ಜೈಲಿನಿಂದ ನಟ ದರ್ಶನ ಅವರು ಇಂದು ಬಿಡುಗಡೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳ ಹರ್ಷೋದ್ಗಾರ ಮುಗಿಲುಮಟ್ಟಿದ್ದು, ಇನ್ನೊಂದೆಡೆ ಬಳ್ಳಾರಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ. ಪೊಲೀಸರ ಈ ಒಂದು ನಡೆಗೆ ವ್ಯಾಪಾರಸ್ಥರು ವಿರೋಧಿಸಿದ್ದು , ನಾವು ಬಡ್ಡಿಗೆ ಹಣ ತಂದು ಹೂವಿಗೆ ಹಣ ಹಾಕಿದ್ದೇವೆ.ದಸರಾ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚು ವ್ಯಾಪಾರ ಆಗುತ್ತಿತ್ತು. ದುರ್ಗಾ ಸರ್ಕಲ್ ಬಳಿ ಬೀದಿ ಬದಿಯ ವ್ಯಾಪಾರಿ ಅಂಗಡಿ ಮುಂಗಟ್ಟು ಬಂದ್ ಮಾಡಿಸಿದ್ದಕ್ಕಾಗಿ ಪೊಲೀಸರ ವಿರುದ್ಧ ವ್ಯಾಪಾರಸ್ಥರು ಕೆಂಡಮಂಡಲ ಆಗಿದ್ದಾರೆ.
ಮಡಿಕೇರಿ : ಇತ್ತೀಚಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಇತ್ತೀಚೆಗೆ ಅಮರಾವತಿಯಲ್ಲಿ ಆಂಧ್ರ ಪ್ರದೇಶದ ರಾಜಧಾನಿ ನಿರ್ಮಾಣ ಕಾರ್ಯವನ್ನು ಪುನರಾರಂಭಿಸಿದ ನಂತರ, ತಮ್ಮ ಸರ್ಕಾರವು ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ನೀಡುವ ಶಾಸನವನ್ನು ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಘೋಷಿಸಿದ್ದರು. ಇದೀಗ ಕರ್ನಾಟಕ ರಾಜ್ಯದಲ್ಲಿ ಈ ಒಂದು ಜಿಲ್ಲೆಯಲ್ಲಿ ಒಂದು ಸಮಾಜವು ನಾಲ್ಕು ಮಕ್ಕಳನ್ನು ಹೆತ್ತರೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ. ಆ ಜಿಲ್ಲೆ ಯಾವುದು ಹಾಗೂ ಆ ಸಮಾಜ ಯಾವುದು ಅಂತ ತಿಳಿದುಕೊಳ್ಳಬೇಕಾ? ಅದೇ ಮಡಿಕೇರಿ ಜಿಲ್ಲೆಯ ಕೊಡಗಿನಲ್ಲಿ ಕೊಡವ ಸಂಸ್ಕೃತಿ ಉಳಿಸಲು ವಿಶಿಷ್ಟ ಪ್ರಯತ್ನವೊಂದನ್ನು ಕೈಗೊಳ್ಳಲಾಗಿದೆ. ಮನೆ ತುಂಬಾ ಮಕ್ಕಳು ಮಾಡುವ ಪೋಷಕರಿಗೆ 25 ಸಾವಿರ ರೂ.ದಿಂದ ಒಂದು ಲಕ್ಷ ರೂ. ದವರೆಗೆ ಬಹುಮಾನ ನೀಡಲಾಗುತ್ತಿದೆ. ಹೌದು ಪೊನ್ನಂಪೇಟೆ ತಾಲ್ಲೂಕಿನ ಟಿ ಶೆಟ್ಟಿಗೇರಿ ಕೊಡವ ಸಮಾಜ ಈ ವಿಶಿಷ್ಟ ಆಫರ್ ನೀಡಿದೆ. ಯಾವ ಕೊಡವ ಕುಟುಂಬದ ಮೂರು…
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಿದೆ ಅದರಲ್ಲಿ ಮಹಿಳೆಯರಿಗೆ ವಿಶೇಷವಾಗಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವುದಕ್ಕೆ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿವೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆ ನಿಲ್ಲಿಸಿ ಮೊದಲಿನಂತೆ ಟಿಕೆಟ್ ವ್ಯವಸ್ಥೆ ಜಾರಿ ಮಾಡುವುದರ ಕುರಿತು ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಹೌದು, ಈ ಕುರಿತಂತೆ ವಿಧಾನಸೌಧದ ಗ್ರ್ಯಾಂಡ್ ಮೆಟ್ಟಿಲು ಮೇಲೆ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಮಾತನಾಡಿದ್ದು, ಮತ್ತೆ ಟಿಕೆಟ್ ವ್ಯವಸ್ಥೆ ಜಾರಿ ಆಗುವ ಸುಳಿವು ಕೊಟ್ಟಿದ್ದಾರೆ. ನನಗೆ ಅನೇಕರು ಇಮೇಲ್ ಮುಖಾಂತರ ಹಾಗೂ ಮೆಸೇಜ್ ಮಾಡಿ ನಾವು ಬಸ್ನಲ್ಲಿ ದುಡ್ಡು ಕೊಟ್ಟು ಟಿಕೆಟ್ ತೆಗೆದುಕೊಳ್ಳುತ್ತೇವೆ ಉಚಿತ ಪ್ರಯಾಣ ಬೇಡ. ನಾವು ಹಣ ಕೊಟ್ಟು ಟಿಕೆಟ್ ತೆಗೆದುಕೊಳ್ಳುತ್ತೇವೆ ಆದರೆ ಬಸ್ ನಲ್ಲಿ ಟಿಕೆಟ್ ಪಡೆದುಕೊಂಡರು ಹಣ…
ಚಾಮರಾಜನಗರ : ಮದುವೆಗೆ ಹೆಣ್ಣು ಸಿಗುತ್ತಿಲ್ಲ ದಯವಿಟ್ಟು ಕರುಣೆ ತೋರಿಸಿ ವಧುವನ್ನ ಹುಡುಕಿ ಕೊಡು ಎಂದು ಮಲೆ ಮಹದೇಶ್ವರನನ್ನು ಮನಸಲ್ಲಿ ಪ್ರಾರ್ಥಿಸಿ ಯುವಕರ ದಂಡೊಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಬರಿಗಾಲಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ. ಹೌದು ಇಂತಹ ಒಂದು ಅಚ್ಚರಿ ಮೂಡಿಸುವಂತಹ ಸಂಪ್ರದಾಯ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ದೀಪಾವಳಿಯಂದು ಈ ಒಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಈ ರೀತಿ ಒಂದು ಸಂಪ್ರದಾಯವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಬಾರಿಯೂ ಕೂಡ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಯುವಕರ ದಂಡೇ ಬೆಟ್ಟಕ್ಕೆ ಹರಿದು ಬರುತ್ತಿದೆ. ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ ಯುವಕರು ವಧು ಸಿಗಲೆಂದು ಇಷ್ಟಾರ್ಥ ಇಟ್ಟುಕೊಂಡು ಬರಿಗಾಲು ಪಾದಯಾತ್ರೆ ನಡೆಸಿದ್ದಾರೆ. ಹೊಸಮಾಲಂಗಿಯಲ್ಲಿ 62 ಮಂದಿ ಯುವಕರಿಗೆ ಮದುವೆಯಾಗಿಲ್ಲ, ಎಷ್ಟು ಹುಡುಕಿದರೂ ವಧು ಸಿಗುತ್ತಿಲ್ಲ. ಮಾದಪ್ಪ ಕರುಣೆ ತೋರಿಸಿ ನಮಗೆ ಮದುವೆ ಮಾಡಿಸು…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ 131 ದಿನಗಳ ಬಳಿಕ ನಟ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹಾಗಾಗಿ ಇಂದು ಸಾಯಂಕಾಲ ನಟ ದರ್ಶನ್ ಅವರು ಬಳ್ಳಾರಿಗೆ ಎಲ್ಲಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಬಳ್ಳಾರಿ ಜೈಲಿಗೆ ಆದೇಶ ರವಾನೆಯಾಗಿದ್ದು, ಈ ಕುರಿತಂತೆ ಬೆಂಗಳೂರಿನ ಸಿಸಿಹೆಚ್ 57 ರ ಜಡ್ಜ್ ಜೈಶಂಕರ್ ಆದೇಶ ಹೊರಡಿಸಿದ್ದು, ಎಲ್ಲ ಕಾನೂನು ಪ್ರಕ್ರಿಯೆ ಮುಗಿದ ನಂತರ ಬಳಿಕ ಬಳ್ಳಾರಿ ಜೈಲಿಗೆ ಪೋಸ್ಟ್ ಮೂಲಕ ರಿಲೀಸ್ ಆದೇಶ ರವಾನಿಸಲು ಸೂಚಿಸಲಾಗಿದೆ. ಹೌದು ಬಳ್ಳಾರಿ ಸೆಂಟ್ರಲ್ ಜೈಲ್ ಗೆ ದರ್ಶನ್ ಬಿಡುಗಡೆ ಆದೇಶದ ಪ್ರತಿ ರವಾನೆಯಾಗಿದೆ. ಇ-ಮೇಲ್ ಮೂಲಕ ಜೈಲಿಗೆ ಆದೇಶ ರವಾನಿಸಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಸಿ ಸಿ ಹೆಚ್ 57ರ ನ್ಯಾಯಾಧೀಶರಾದ ಜೈ ಶಂಕರ್ ಅವರು ಆದೇಶಿಸಿದ್ದಾರೆ. ಅಲ್ಲದೆ ಪೋಸ್ಟ್ ಮೂಲಕವೂ ಕೂಡ ರಿಲೀಸ್ ಆದೇಶ ರವಾನಿಸಲು ಸೂಚನೆ ನೀಡಿದ್ದಾರೆ.…
ಶಿಗ್ಗಾವಿ ಬೈ ಎಲೆಕ್ಷನ್ : ನಾಳೆ ಅಜ್ಜಂಪೀರ್ ಖಾದ್ರಿ ಸ್ವಇಚ್ಛೆಯಿಂದ ನಾಮಪತ್ರ ಹಿಂಪಡೆಯುತ್ತಾರೆ : ಸಚಿವ ಜಮೀರ್ ಅಹ್ಮದ್
ಹುಬ್ಬಳ್ಳಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು ಈ ಹಿನ್ನಲೆಯಲ್ಲಿ ನಾಳೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸದಲ್ಲಿ ಇದ್ದರು. ಡಿಸಿ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾದ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು ಇಂದು ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದಲ್ಲಿ ಆಗಮಿಸಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ ವೇಳೆ ಜಮೀರ್ ಅಹ್ಮದ್ ಖಾನ್ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಜ್ಜಂಪೀರ್ ಖಾದ್ರಿ ನಾಳೆ ನಾಮಪತ್ರ ಹಿಂಪಡೆಯುತ್ತಾರೆ. ಸ್ವಇಚ್ಛೆಯಿಂದ ಅವರು ನಾಮಪತ್ರ ಹಿಂಪಡೆಯಲ್ಲಿದ್ದಾರೆ. ಈಗಾಗಲೇ ಖಾದ್ರಿ ಜೊತೆಗೆ ಸಿಎಂ ಸಿದ್ದರಾಮಯ್ಯ,…
ವಿಜಯನಗರ : ಇತ್ತೀಚಿಗೆ ಈ ಆನ್ಲೈನ್ ವಂಚನೆ, ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಗ್ರಾಹಕರೊಬ್ಬರ ಬ್ಯಾಂಕ್ ನಲ್ಲಿದ್ದ 9.7 ಲಕ್ಷ ರೂಪಾಯಿಯನ್ನು ಸೈಬರ್ ವಂಚಕರು ಓಟಿಪಿ ಕೂಡ ಇಲ್ಲದೆ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಈ ಒಂದು ಘಟನೆ ನಡೆದಿದ್ದು, ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ನಂದಿಹಳ್ಳಿಯ ಕಂಠಿ ವಿರೂಪಾಕ್ಷ ಹಣ ಕಳೆದುಕೊಂಡಿರುವರು. ಎರಡು ದಿನಗಳ ಹಿಂದೆಯಷ್ಟೇ ಜಮೀನು ಮಾರಾಟದ ಹಣ ಇವರ ಖಾತೆಗೆ ಜಮೆ ಆಗಿತ್ತು. ಆದರೆ ಅವರಿಗೆ ಬಂದಂತಹ ಒಂದು ಲಿಂಕ್ ನಿಂದ ಅವರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿಯನ್ನು ಸೈಬರ್ ವಂಚಕರು ದೋಚಿದ್ದಾರೆ. ಕೆನರಾ ಬ್ಯಾಂಕ್ ಲೋಗೋ ಇರುವ ಆಯಪ್ನ ಲಿಂಕ್ ಇವರ ಮೊಬೈಲ್ಗೆ ಸಂದೇಶ ಬಂದಿದೆ. ಬ್ಯಾಂಕ್ ಸಂದೇಶವೆಂದು ತಿಳಿದು ಲಿಂಕ್ ಬಳಸಿ ಆಯಪ್ ಡೌನ್ಲೋಡ್ ಮಾಡಿದ್ದಾರೆ. ನಂತರದ 30 ನಿಮಿಷದಲ್ಲಿ ಖಾತೆಯಲ್ಲಿದ್ದ ಹಣವೆಲ್ಲ ಖಾಲಿಯಾಗಿದೆ.ಖಾತೆಯಲ್ಲಿಹಣ ಇಲ್ಲದಿರುವುದು ತಿಳಿದು, ಬ್ಯಾಂಕ್ಗೆ ಹೋಗಿ ವಿಚಾರಿಸಿದಾಗ ವಂಚನೆಯಾಗಿರುವುದು ತಿಳಿದಿದೆ. ಬ್ಯಾಂಕ್…














