Author: kannadanewsnow05

ಬಳ್ಳಾರಿ : ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಇದೀಗ ಬಿರುಕು ಮೂಡಿದೆ. ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಬೆಂಬಲಿಗರು ದೂರು ನೀಡಿರುವ ವಿಚಾರವಾಗಿ ಇಂದು ಬಳ್ಳಾರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ನಾನು ಸಿಬಿಐ ನಂತಹ ಕೇಸ್ ಗಳನ್ನು ನೋಡಿದ್ದೇನೆ ಇದಕ್ಕೆಲ್ಲ ಜಗ್ಗುವುದಿಲ್ಲ ಬಗ್ಗುವುದಿಲ್ಲ ಎಂದು ಮತ್ತೆ ಗುಡುಗಿದ್ದಾರೆ. ಬಳ್ಳಾರಿಯಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಶ್ರೀರಾಮುಲು ಬೆಂಬಲಿಗರು ಎಸ್ಪಿಗೆ ದೂರು ನೀಡಿರುವ ವಿಚಾರವಾಗಿ ನಾನು ಸಿಬಿಐ ಅಂತಹ ಕೇಸ್ ಗಳನ್ನು ನೋಡಿದ್ದೇನೆ. ಇದನ್ನೆಲ್ಲ ಲೆಕ್ಕ ಇಡಲ್ಲ. ಇಂಥದಕ್ಕೆಲ್ಲಾ ನಾನು ಜಗ್ಗಲ್ಲ ಹೆದರಲ್ಲ. ಆಸ್ತಿ ವಿಚಾರಕ್ಕೆ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ವಹಿ ಮನಸು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಯಾವುದು ಸಹ ರಹಸ್ಯವಾಗಿ ಉಳಿಯಲ್ಲ ನಿಧಾನವಾಗಿ ಎಲ್ಲ ವಿಷಯ ಗೊತ್ತಾಗುತ್ತದೆ ಎಂದರು. ನಾನು ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ವರಿಷ್ಠರು ಸೂಚನೆ ಕೊಟ್ಟಿದ್ದಾರೆ ನಾನು ಅಲ್ಲೇ ಮಾತನಾಡುತ್ತೇನೆ. ಏನೇ ಇದ್ದರೂ…

Read More

ಉಡುಪಿ : ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯರ, ಯುವತಿಯರ ಹಾಗೂ ಪುಟ್ಟ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಉಡುಪಿಯಲ್ಲಿ ಐದು ವರ್ಷದ ಬಾಲಕಿಗೆ ಚಾಕ್ಲೇಟ್ ಆಮಿಷ ಒಡ್ಡಿ ದುಷ್ಕರ್ಮಿ ಒಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ಹೌದು 5 ವರ್ಷದ ಬಾಲಕಿಯೋರ್ವಳು ಅಂಗಡಿ ಬಳಿ ಬಂದಾಗ ಕಾಮುಕನೊಬ್ಬ ಚಾಕಲೇಟ್ ಅಮಿಷ ತೋರಿಸಿದ್ದಾನೆ. ಬಾಲಕಿ ಚಾಕ್ಲೇಟ್ ಆಮಿಷಕ್ಕೆ ಒಳಗಾಗಿ ವ್ಯಕ್ತಿಯ ಜೊತೆಗೆ ತೆರಳಿದ್ದಾಳೆ. ನಿರ್ಜನ ಪ್ರದೇಶಕ್ಕೆ ಕರೆದೋಯ್ದಿದ್ದಾನೆ. ಈ ವೇಳೆ ಆತ ಬಾಲಕಿಯ ಜೊತೆಗೆ ಅಸಭ್ಯವಾಗಿ ವರ್ತಿಸಿ ಖಾಸಗಿ ಅಂಗ ಮುಟ್ಟುತ್ತಿದ್ದಂತೆ, ಬಾಲಕಿ ಜೋರಾಗಿ ಕಿರುಚಿದ್ದಾಳೆ. ಇದರಿಂದ ಹೆದರಿದ ವ್ಯಕ್ತಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದುಷ್ಕರ್ಮಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

Read More

ಶಿವಮೊಗ್ಗ : ಮೈಕ್ರೋ ಫೈನಾನ್ಸ್ ಹಾಗೂ ಮೀಟರ್ ಬಡ್ಡಿ ದಂಧೆ ಕೋರರ ಕಿರುಕುಳ ಮಿತಿಮೀರಿರುತ್ತಿದ್ದು ಇವರ ಕಿರುಕುಳದಿಂದ ಇದೀಗ ರಾಜ್ಯದಲ್ಲಿ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಲಗಾರನ ಕಾಟಕ್ಕೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಎಡಗೋಡು ಗ್ರಾಮದಲ್ಲಿ ಸಾಲಗಾರರ ಕಾಟಕ್ಕೆ ಹೆದರಿ ವಿಷ ಸೇವಿಸಿ ಮಹೇಶ (48) ಎನ್ನುವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ವ್ಯಕ್ತಿಯ ಬಳಿ ಮಹೇಶ 5 ಸಾವಿರ ಸಾಲ ಪಡೆದಿದ್ದರು. 5 ಸಾವ್ ಅಸಲಿಗೆ ಬಡ್ಡಿ ಸೇರಿದಂತೆ 9 ಸಾವಿರ ರೂಪಾಯಿ ಸಾಲವಾಗಿತ್ತು. ಸಾಲ ಹಿಂದಿರುಗಿಸದಕ್ಕೆ ಸಾಲ ನೀಡಿದ ವ್ಯಕ್ತಿ ಮಹೇಶ್ ಅವರ ಬಳಿ ಇದ್ದಂತಹ ಬೈಕ್ ಕಿತ್ತುಕೊಂಡಿದ್ದ. ಇದರಿಂದ ಅವಮಾನ ತಳ್ಳಲಾರದೆ ವಿಷ ಸೇವಿಸಿ ಮಹೇಶ ಆತ್ಮಹತ್ಯೆ ಶರಣಾಗಿದ್ದಾರೆ. ಸದ್ಯ ಹಿರೇಎಡಗೋಡುನಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದೆ.ಘಟನೆ ಕುರಿತು ಅನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಮಹಿಳೆಯರುಗಳು ಅಚಾನಕ್ಕಾಗಿ ಬಸ್ಸಿನ ಕಿಟ್ಟಿ ಹೊರಗಡೆ ತಲೆ ಹಾಕಿದ್ದಾಳೆ. ಈ ವೇಳೆ ಪಕ್ಕದಲ್ಲಿ ವೇಗವಾಗಿ ಬಂದಂತಹ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ದೇಹದಿಂದ ರುಂಡ ಕಟ್ ಆಗಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಹೌದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟ್ಟಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಅಚಾನಕ್ ಆಗಿ ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದ ವೇಳೆ ಮುಂಭಾಗದಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆಯ ದೇಹದಿಂದ ರುಂಡ ಬೇರ್ಪಟ್ಟಿದೆ. ಕೆಎಸ್ಆರ್ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ತಲೆ ಪೀಸ್ ಆಗಿದೆ. ಬಸ್ ಕಿಟಕಿಯಿಂದ ತಲೆ ಆಚೆ ಹಾಕಿದರಿಂದ ಈ ವೇಳೆ ವೇಗವಾಗಿ ಬಂದಂತಹ ಗೂಡ್ಸ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯ ತಲೆ ಕಟ್ ಆಗಿದೆ. ಮೃತರನ್ನು ಹಾಲಹಳ್ಳಿ ನಿವಾಸಿ ಶಿವಲಿಂಗಮ್ಮ (58)…

Read More

ಚಿಕ್ಕಮಗಳೂರು : ತೋಟದಲ್ಲಿ ಅಲ್ಯೂಮಿನಿಯಂ ಏಣಿಯನ್ನು ಹೊಯ್ಯುತ್ತಿರುವ ವೇಳೆ ವಿದ್ಯುತ್ ತಂತಿ ತಗುಲಿ ಕೃಷಿಕರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ದೂರು ಸಮೀಪದ ಕೂದುವಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಕೆ.ಎಲ್ ಹೂವೆಗೌಡ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಯಾವುದೋ ಕೆಲಸಕ್ಕಾಗಿ ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ತೋಟದ ಮಧ್ಯ ಹಾದು ಹೋಗಿರುವ ವಿದ್ಯುತ್ ತಂತಿಗೆ ಏಣಿ ಟಚ್ ಆಗಿ ಸ್ಥಳದಲ್ಲಿ ಹೂವೆಗೌಡ ಸಾವನಪ್ಪಿದ್ದಾರೆ. ಘಟನೆ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಎಷ್ಟು ಜನರು ಊರು ಬಿಡುತ್ತಿದ್ದು, ಇದುವರೆಗೂ ರಾಜ್ಯದಲ್ಲಿ ಈ ಒಂದು ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಐದು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಇದೇ ವಿಚಾರವಾಗಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಮೈಕ್ರೋಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಹೆಂಡತಿಯರನ್ನೇ ಮಾರುವ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ಅವರ ಕಿರುಕುಳದಿಂದ ಜನರು ಊರು ಬಿಡುತ್ತಿದ್ದಾರೆ.ಫೈನಾನ್ಸ್ ಸಿಬ್ಬಂದಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮೀಟರ್ ಬಡ್ಡಿ ದಂಧೆ, ಜೂಜು, ಡ್ರಗ್ಸ್ ದಂಧೆ ನಡುವೆ ಲಿಂಕ್ ಇದೆ. ಎಲ್ಲಾ ದಂಧೆಗಳು ಒಂದಕ್ಕೊಂದು ಸಂಬಂಧ ಇರುವಂತಹ ವ್ಯವಹಾರವಾಗಿವೆ. ರಾಜ್ಯದಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದ್ ಸರ್ಕಾರದ ವಿರುದ್ಧ ವಿಧಾನಸಭೆಯ…

Read More

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಜೆ 5 ಗಂಟೆ ಮೇಲೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಾತಿಗೆ ಹೋಗುವಂತಿಲ್ಲ ಹಾಗೂ RBI ನಿಯಮದಂತೆ ಶೇ 17.07 ಕ್ಕಿಂತ ಹೆಚ್ಚು ಬಡ್ಡಿ ತೆಗೆದುಕೊಳ್ಳುವಂತಿಲ್ಲ ಎಂದು ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ವಸೂಲಿ ಮಾಡಲಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳಲು ನಿಮಗೆ ಅನುಮತಿ ಕೊಟ್ಟವರು ಯಾರು,? ಸಾಲ ವಸೂಲಿಗೆ ರೌಡಿಗಳನ್ನು ಇಟ್ಟುಕೊಂಡಿದ್ದೀರಾ? ಸಾಲ ತೀರಿಸಲು ಸಾಧ್ಯವೇ ಎಂಬುದನ್ನೂ ಗಮನಿಸದೇ ಒಬ್ಬನೇ ವ್ಯಕ್ತಿಗೆ ನಿಯಮ ಬಾಹಿರವಾಗಿ ಸಾಲ ನೀಡುವುದು ಸರಿಯಲ್ಲ. ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು…

Read More

ದಕ್ಷಿಣಕನ್ನಡ : ಇತ್ತೀಚೆಗೆ ಈ ಒಂದು ಸಾಮಾಜಿಕ ಜಾಲತಾಣದಲ್ಲಿ ಯುವಜನತೆ ಮುಳುಗಿದ್ದು, ಸ್ನೇಹ ಪ್ರೀತಿ ಪ್ರೇಮ ಅಂತ ತಮ್ಮ ಮುಂದಿನ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದೀಗ ಯುವತಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನೊಬ್ಬ ಇನ್ಸ್ಟಾಗ್ರಾಮ್ ನಲ್ಲಿ ಬೇರೆ ಹುಡುಗಿಯ ಫೋಟೋ ಲೈಕ್ ಮಾಡಿದ್ದಕ್ಕೆ, ಸಹಿಸದ ಆತನ ಪ್ರೇಯಸಿ ಆತನಿಗೆ ತರಾಟೆ ತೆಗೆದುಕೊಂಡಿದ್ದಾಳೆ. ಇದರಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಹೌದು ಆತ್ಮಹತ್ಯೆ ಮಾಡಿಕೊಂದ ಯುವಕನನ್ನು ಜಿಲ್ಲೆಯ ಬಂಟ್ವಾಳ‌ ತಾಲೂಕಿನ ಪೂಂಜಾಲಕಟ್ಟೆ ಕುಕ್ಕಿಪ್ಪಾಡಿಯ ಚೇತನ್ (25) ಎಂದು ತಿಳಿದುಬಂದಿದೆ.ಮೃತ ಚೇತನ್​ಗೆ ಕುಂದಾಪುರದ ಚೈತನ್ಯ ಎಂಬ ಯುವತಿಯು ಇನ್​ಸ್ಟ್ರಾಗ್ರಾಂನಲ್ಲಿ ಪರಿಚಯವಾಗಿದ್ದಳು. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು, ಸ್ನೇಹ ಪ್ರೀತಿಗೆ ತಿರುಗಿತ್ತು. ಕಳೆದ 8 ತಿಂಗಳ ಹಿಂದೆ ಇಬ್ಬರ ನಿಶ್ಚಿತಾರ್ಥವಾಗಿತ್ತು. ಜನವರಿ 21 ರಂದು ಚೇತನ್ ತನ್ನ ಪರಿಚಯದ ಬೇರೊಂದು ಯುವತಿಯ ಫೋಟೋಗೆ ಇನ್ಸ್ಟಾಗ್ರಾಮ್​ನಲ್ಲಿ ಲೈಕ್ ಕೊಟ್ಟಿದ್ದನು. ಇದನ್ನು ಪ್ರಶ್ನಿಸಲು ಚೈತನ್ಯ ಭಾವಿ ಪತಿ ಚೇತನ್ ಮನೆಗೆ ಬಂದಿದ್ದರು. ಈ…

Read More

ಬೆಂಗಳೂರು : ಇದೇ ಜನವರಿ 26ರಂದು ಗಣರಾಜ್ಯೋತ್ಸವ ದಿನದಂದು ನಮ್ಮ ಮೆಟ್ರೋ ರೈಲುಗಳು ಹೆಚ್ಚುವರಿಯಾಗಿ ಸಂಚರಿಸಲಿವೆ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳು ಸಂಚರಿಸಲಿವೆ ಎಂದು ಈ ಕುರಿತು BMRCL ಮಾಹಿತಿ ನೀಡಿದೆ. ಭಾನುವಾರ ಬೆಳಿಗ್ಗೆ 7ರ ಬದಲು 6 ಗಂಟೆಯಿಂದ ಮೆಟ್ರೋ ಸಂಚಾರ ಆರಂಭವಾಗಲಿದೆ. ಲಾಲ್ ಬಾಗ್ ನಲ್ಲಿ ಫ್ಲವರ್ ಶೋ, ಹಾಗೂ ಮಾದವಾರದ BIEC ಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಗಳಿಗೆ ತೆರಳುವವರಿಗೆ ಅನುಕೂಲವಾಗಲು ಹೆಚ್ಚುವರಿ ರೈಲು ಸಂಚರೀಸಲಿವೆ. ನಮ್ಮ ಮೆಟ್ರೋದ ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳು ಸಂಚಾರ ನಡೆಸಲಿವೆ. ಲಾಲ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಟೋಕನ್ ಬದಲು ಪೇಪರ್ ಟಿಕೆಟ್ ವಿತರಿಸಲಾಗುತ್ತದೆ.ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೆ ಪೇಪರ್ ಟಿಕೆಟ್ ವಿತರಿಸಲಾಗುತ್ತದೆ. ಫ್ಲ್ಯಾಟ್ ರೂ.30 ಯಂತೆ ಮೆಟ್ರೋದಲ್ಲಿ ಪೇಪರ್ ಟಿಕೆಟ್ ವಿತರಣೆ ಮಾಡಲಾಗುತ್ತದೆ.ಲಾಲ್ ಬಾಗ್ ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.ಈ ವೇಳೆ ಲಾಲ್ಬಾಗ್ನಲ್ಲಿ ಟೋಕನ್…

Read More

ಯಾದಗಿರಿ : ಒಂದು ಕಡೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರು ತಮ್ಮ ಮನೆ ಬಿಟ್ಟು ಊರನ್ನೇ ತೊರೆಯುತ್ತಿದ್ದಾರೆ. ಇನ್ನೊಂದು ಕಡೆ ಮೀಟರ್ ಬಡ್ಡಿ ದಂಧೆಗೆ ಹಲವರು ಸಾಲಗಾರರ ಕಿರುಕುಳಕ್ಕೆ ಒಳಗಾಗಿದ್ದು ಇನ್ನೂ ಕೆಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಇದೀಗ ಯಾದಗಿರಿಯಲ್ಲಿ ಕೊಟ್ಟ ಸಾಲ ಮರುಪಾವತಿಸುವುದಕ್ಕೆ ತಡವಾಗಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಆದರೆ ಚಿಕಿತ್ಸೆ ಫಲಿಸಿದೆ ಯುವಕ ಸಾವನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ ಹೌದು ಮೀಟರ್ ಬಡ್ಡಿ ದಂಧೆಕೋರರ ಅಟ್ಟಹಾಸಕ್ಕೆ ಯುವಕನೊಬ್ಬ ಬಲಿಯಾದ ಘಟನೆ ಯಾದಗಿರಿ ನಗರದ ಲಾಡೇಜಗಲ್ಲಿಯಲ್ಲಿ ನಡೆದಿದೆ. ಮೃತ ಯುವಕನನ್ನು ಖಾಸೀಂ ಅಲಿಯಾಸ್ ಬಿಲ್ಲಿ ಎಂದು ತಿಳಿದುಬಂದಿದೆ. ಈತ ಯಾಸೀನ್ ಎನ್ನುವವನ ಬಳಿ 35 ಸಾವಿರ ರೂ ಸಾಲ ಪಡೆದಿದ್ದನಂತೆ, ಮರು ಪಾವತಿಸುವುದು ತಡವಾಗಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದನಂತೆ. ಹಲ್ಲೆಗೆ ಒಳಗಾದ ಖಾಸಿಂ ಅನ್ನು ಕಲ್ಬುರ್ಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಸಲ್ಲಿಸಿದೆ ಖಾಸಿಂ ಇದೀಗ ಸಾವನಪ್ಪಿದ್ದಾನೆ. ಯಾಸಿನ್ ಬಳಿ 35 ಸಾವಿರ…

Read More