Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಈ ಬಾರಿಯ 2024-25ನೇ ಸಾಲಿನಲ್ಲಿ 13,000 ಕೋಟಿ ವಾರ್ಷಿಕ ರಾಜಸ್ವ ಸಂಗ್ರಹ ಗುರಿ ಇದೆ ಎಂದು ಸಾರಿಗೆ ಇಲಾಖೆಯ ರಾಜಸ್ವ ಪರಿಶೀಲನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಶಕ್ತಿ ಭವನದಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಹಾಗೂ ಸಾರಿಗೆ ಇಲಾಖೆಯ 2024-25 ನೇ ಸಾಲಿನ ರಾಜಸ್ವ ಸಂಗ್ರಹ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದದು. ಸಭೆಯಲ್ಲಿ ಹಿಂದಿನ ಸಾಲಿಗಿಂತ ಈ ಅವಧಿಯಲ್ಲಿ ಹೆಚ್ಚುವರಿ ರಾಜಸ್ವ ಸಂಗ್ರಹವಾಗಿದೆ. 308.98 ಕೋಟಿ ಹೆಚ್ಚುವರಿ ರಾಜಸ್ವ ಸಂಗ್ರಹ ಆಗಿದೆ. ಮಾಸಿಕ ಗುರಿ ನಿಗದಿಪಡಿಸಿಕೊಂಡು ನಿಗದಿತ ಗುರಿ ಸಾಧಿಸಬೇಕು.ಮಾರ್ಚ್ ಅಂತ್ಯದೊಳಗೆ ನಿಗದಿತ ಗುರಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಇಲಾಖೆಯ ರಾಜ್ಯಸ್ವ ಪರಿಶೀಲನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಲಾಖೆಯು 26,000 ಕೋಟಿ ರಾಜಸ್ವ ಸಂಗ್ರಹ ಗುರಿ ಹೊಂದಿದೆ. ಅಕ್ಟೋಬರ್ ತಿಂಗಳ ಅಂತ್ಯದವರೆಗೆ 13,724 ಕೋಟಿ ಸಂಗ್ರಹ ಆಗಿದೆ. ಮಾರ್ಚ್ ವರೆಗೆ ಪ್ರತಿ ತಿಂಗಳು 2400…
ಹಾಸನ : ಬಿಜೆಪಿ ಪಕ್ಷದ ವಿರುದ್ಧ ಆಗಾಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರ ಹಾಕುತ್ತಾರೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪುತ್ರ ಬಿ ವೈ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕುತ್ತಿರುತ್ತಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇಂದ್ರ ಈ ವಿಚಾರವಾಗಿ ಮಾತನಾಡಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದು ಬಿವೈ ವಿಜಯೇಂದ್ರ ತಿಳಿಸಿದರು. ಹಾಸನದಲ್ಲಿ ಹಾಸನಾಂಬೆ ದೇವಿ ದರ್ಶನ ಪಡೆದು ಸುದ್ದಿಗಾರರಿಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಯತ್ನಾಳ್, ಜಾರಕಿಹೊಳಿ ಅವರ ಅಸಮಾಧಾನ ಹೊರಹಾಕಲು ಬೇರೆ ವ್ಯವಸ್ಥೆ ಮಾಡಿಕೊಡಬೇಕು. ಆ ದಿಕ್ಕಿನಲ್ಲಿ ಯೋಚನೆ ಮಾಡುತ್ತಿದ್ದೇವೆ. ನಾನಂತೂ ಅದರ ಬಗ್ಗೆ ಏನು ತಲೆಕೆಡಿಸಿಕೊಳ್ಳುವ ಪ್ರಶ್ನೆ ಇಲ್ಲ. ಮಾಡಲು ಬೇಕಾದಷ್ಟು ಕೆಲಸವಿದೆ. ಸಂಘಟನೆ ಕೆಲಸ ಇದೆ, ಉಪಚುನಾವಣೆ ಇದೆ. ಇವತ್ತು ವಕ್ಫ್ ವಿಚಾರವಾಗಿ ಹೋರಾಟವನ್ನು ಕೈಗೊಳ್ಳಬೇಕಾಗುತ್ತದೆ ಎಂದರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಬಿಜೆಪಿಯಲ್ಲಿ…
ಬೆಂಗಳೂರು : ಯಶ್ ನಟನೆಯ ಟಾಕ್ಸಿಕ್ ಚಿತ್ರದ ಸೆಟ್ ನಿರ್ಮಾಣ ಮಾಡಲು ಮರಗಳಿಗೆ ಕೊಡಲಿ ಏಟು ಹಾಕಲಾಗಿದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಚ್ಎಂಟಿ ತನ್ನ ವಶದಲ್ಲಿದ್ದ ಜಮೀನನ್ನು ಮಾರಾಟ ಮಾಡಿದೆ. ಮರ, ಗಿಡ ಎಲ್ಲಾ ಕಡಿದು ಸಿನಿಮಾ ಚಿತ್ರೀಕರಣಕ್ಕೆ ಬಾಡಿಗೆ ಕೊಟ್ಟಿದ್ದಾರೆ, ದುಡ್ಡು ಮಾಡ್ತಿದ್ದಾರೆ. ಎಲ್ಲಾ ರೀತಿಯ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅವರಿಗೆ ಯಾವುದೇ ಅಧಿಕಾರ ಇಲ್ಲ’ ಎಂದು ಈಶ್ವರ ಖಂಡ್ರೆ ಅವರು ಹೇಳಿದ್ದಾರೆ. ಇಂದು ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಅರಣ್ಯ ಸಂರಕ್ಷಣೆ ಮಾಡುವುದು ನನ್ನ ಕರ್ತವ್ಯ. ಪ್ರಾಥಮಿಕ ಹಂತದಲ್ಲಿ ಅರಣ್ಯ ಇಲಾಖೆ ಮಾಹಿತಿ ಕೊಟ್ಟಿದೆ. ಒಳಗೊಳಗೆ ಏನಿದೆ ಅಂತ ತನಿಖೆ ಆಗಬೇಕು. ಅರಣ್ಯ ಇಲಾಖೆಯ ಜಾಗದಲ್ಲಿ ಸಣ್ಣ ವಿಲೇಜ್ ರೀತಿ ಸೆಟ್ ಹಾಕಿದ್ದಾರೆ. ಏನು ದೃಢೀಕರಣ ಬೇಕು? ಅಂಗೈ ಹುಣ್ಣಿಗೆ ಕನ್ನಡಿ ಅವಶ್ಯಕತೆ ಇಲ್ಲ ಎಂದರು. ಎಚ್ಎಂಟಿ ಸುಪ್ರೀಂ ಕೋರ್ಟ್ ಗೆ ಹೋಗಿದೆ ಅಲ್ಲಿ ವಿಚಾರಣೆಗೆ ಬರಬೇಕಿದೆ.ಅರಣ್ಯ ಪರವಾನಗಿ ತೆಗೆದುಕೊಂಡಿಲ್ಲ…
ಯಾದಗಿರಿ : ಯಾದಗಿರಿಯಲ್ಲಿ ಭೀಕರ ಅಪಘಾತ ನಡೆದಿದ್ದು, ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವನಿಗೆ ಗಂಭಿರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಬಳಿ ನಡೆದಿದೆ. ವೆಂಕಟೇಶ ಚವ್ಹಾಣ್(20) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೊಡೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು : ನಗರದ ಪೀಣ್ಯ ಬಳಿಯ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನ TAXIC ಚಿತ್ರದ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ ಮಾಡಲಾಗಿದೆ. ಹೀಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರ ಕಡಿದವರ ವಿರುದ್ಧ ಅರಣ್ಯ ಇಲಾಖೆಯ ವತಿಯಿಂದ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ ಹೌದು ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರದ ಶೂಟಿಂಗ್ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡದ ವಿರುದ್ಧ ಕ್ರಮ ಕೈಕೊಳ್ಳಲು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. ಇದರಿಂದ ‘ಟಾಕ್ಸಿಕ್’ ಚಿತ್ರೀಕರಣಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮರ ನಾಶ ಮಾಡಿರುವ ಪ್ರದೇಶವನ್ನು ವೀಕ್ಷಿಸಿದ ಸಚಿವ ಈಶ್ವರ್ ಖಂಡ್ರೆ ಅವರು, X ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಎಚ್.ಎಂ.ಟಿ. ವಶದಲ್ಲಿರುವ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುಡಾದ ಮಾಜಿ ಆಯುಕ್ತ ನಟೇಶನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸತತ 36 ಗಂಟೆಗಳಿಂದ ಇಡಿ ಅಧಿಕಾರಿಗಳು ಮುಡಾ ಹಗರಣಕ್ಕೆ ಸಂಬಂಧಿಸಿದವರ ಮನೆಯ ಮೇಲೆ ದಾಳಿ ಮಾಡಿದ್ದು ಅಲ್ಲದೆ, ಹಲವು ಮಹತ್ವದ ದಾಖಲೆ ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಆಯುಕ್ತ ನಟೇಶನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳ ಅಕ್ರಮ ಹಂಚಿಕೆಯಾಗಲು ಪ್ರಾಧಿಕಾರದ ಹಿಂದಿನ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಕಾರಣ ಎಂದು ಆರೋಪಿಸಲಾಗಿತ್ತು.ಹಾಗಾಗಿ ನಿನ್ನೆ ಇಡಿ ಅಧಿಕಾರಿಗಳು ನಟೇಶ್ ಮನೆಯ ಮೇಲೆ ದಾಳಿ ಮಾಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ, ತನಿಖೆಗೆ ನಟೇಶ್ ಅವರು ಸಹಕರಿಸಿಲ್ಲ ಎನ್ನಲಾಗಿದೆ. ನಾನು ಪ್ರಕರಣದಲ್ಲಿ ತಪ್ಪೆ ಮಾಡಿಲ್ಲ ಎಂದು ತಿಳಿಸಿದ್ದರು. ನಟೇಶ್ ಮುಡಾ ಆಯುಕ್ತರಾಗಿದ್ದಾಗ ಸಿಎಂ ಪತ್ನಿಗೆ ಸೈಟ್ ಹಂಚಿಕೆಯಾಗಿತ್ತು. ಈ ನೆಲೆಯಲ್ಲಿ…
ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಂತರ ಅಕ್ರಮಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಶಾಸಕ ಬಿ ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ MLC ಸಿ ಟಿ ರವಿ ಅವರು ರಾಜ್ಯದಲ್ಲಿ ರಾವಣನ ದರ್ಬಾರು ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯ ಕುಡುತೀನಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಸಿಟಿ ರವಿ ಜನರ ಕಲ್ಯಾಣಕ್ಕೆ ಖರ್ಚಾಗ ಬೇಕಿದ್ದ ಹಣ ಬಾರ್ ಗೆ ಹಾಕಿದ್ದಾರೆ. ಜನರ ಕಷ್ಟಕ್ಕೆ ಬಳಕೆಯಾಗಬೇಕಾದ ಹಣ ಅವರ ಹೆಂಡತಿರು, ಮಕ್ಕಳಿಗೆ ಒಡವೆ ಖರೀದಿ ಮಾಡಿದ್ದಾರೆ ಎಂದು ಕಿಡಿ ಕಾರಿದರು. ಈ ಪಾಪಕ್ಕೆ ಕ್ಷಮೆ ಇಲ್ಲ ಹೀಗಾಗಿ ಅವರಿಗೆ ಶಿಕ್ಷೆ ನೀಡಬೇಕು. ಜನ ಶಿಕ್ಷೆ ನೀಡಿದರೆ ರಾಜಕೀಯದಲ್ಲಿ ರಾವಣ ದರ್ಬಾರು ಇರಲ್ಲ. ರಾಜಕೀಯದಲ್ಲಿ ಯಾವಾಗ್ಲೂ ರಾಮನ ದರ್ಬಾರು ಇರಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಮಾಡುತ್ತಿರುವುದು ರಾವಣನ ದರ್ಬಾರು ಎಂದು…
ವಿಜಯಪುರ : ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಾದ ಪ್ರತಿವಾದಕ್ಕೂ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ಇಂದು ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿದೆ. ಸಿಂದಗಿ, ಪಡಗಾನೂರು, ಹಡಗಲಿ ಗ್ರಾಮಗಳಲ್ಲಿ ರೈತರ ಅಹವಾಲು ಆಲಿಸಿರುವ ಬಿಜೆಪಿ ತಂಡ ದಾಖಲೆ, ಮಾಹಿತಿಗಳನ್ನ ಸಂಗ್ರಹಿಸಿಕೊಂಡಿದೆ. ಸದ್ಯ ಎಲ್ಲ ಮಾಹಿತಿ ಸಂಗ್ರಹಿಸಿಕೊಂಡಿರುವ ಸಂಸದ ಗೋವಿಂದ ಕಾರಜೋಳ ನೇತೃತ್ವದ ತಂಡ ಡಿಸಿ ಟಿ ಭೂಬಾಲನ್ ಭೇಟಿ ಮಾಡಿದ್ದಾರೆ. ವಕ್ಫ್ ಆಸ್ತಿಗಳ ಇಂದೀಕರಣ ಮೊದಲಿನಿಂದಲೂ ಮಾಡುತ್ತ ಬಂದಿದ್ದಾರೆ. ಹಿಂದಿನಂತೆಯೆ ಈಗ ನಾವು ಇಂದೀಕರಣ ಮಾಡಿದ್ದೇವೆ ಎಂದು ಬಿಜೆಪಿ ಟೀಂ ಎದುರು ಡಿಸಿ ಸ್ಪಷ್ಟನೆ ನೀಡಿದರು. 2018-19ರಲ್ಲೂ ವಕ್ಫ್ 123 ಆಸ್ತಿಗಳ ಇಂದೀಕರಣ ಆಗಿವೆ. 112 ರೈತರ ಜಮೀನುಗಳಿಗೆ ನೋಟಿಸ್ ನೀಡಲಾಗಿದೆ. ಪ್ರತಿವರ್ಷ ಇಂದೀಕರಣ, ನೋಟಿಸ್ ಪ್ರಕ್ರಿಯೆ ಆಗುತ್ತಿದೆ. 2020-21ರಲ್ಲಿ 138 ರೈತರಿಗೆ ನೋಟಿಸ್ ನೀಡದೇ ಇಂದೀಕರಣ ವಕ್ಫ್ ಹೆಸರು ಸೇರ್ಪಡೆಯಾಗಿದೆ ಎಂದು ಜಿಲ್ಲಾಧಿಕಾರಿ ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ. ಅದೇ ರೀತಿಯಾಗಿ 2020-21ರಲ್ಲೂ ನೋಟಿಸ್ ನೀಡದೆ…
ಹಾವೇರಿ : ಮುಂದಿನ ತಿಂಗಳು ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.ಇಂದು ಹಾವೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲ್ ಅವರು ಮಾತನಾಡಿ, ನಾವು ಗೆಲುವಿನ ಅಂತರ ನೋಡುತ್ತಿಲ್ಲ. ಗೆಲುವು ಮಾತ್ರ ನೋಡುತ್ತಿದ್ದೇವೆ ಎಂದು ತಿಳಿಸಿದರು. ಈ ಬಾರಿ ಶಿಗ್ಗಾವಿಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದು ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ನೀಡಿದರು.ಯಾಸಿರ್ ಪಠಾಣ್ ಕೂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದಾನೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ಬಹಳ ಮಾತನಾಡಿದ್ದರು. 3 ಲಕ್ಷ 4 ಲಕ್ಷ ಲೀಡ್ ನಿಂದ ಗೆಲ್ಲುತ್ತೇವೆ ಅಂದರು ಏನಾಯ್ತು? ಎಂದರು. ಗ್ಯಾರಂಟಿ ಯೋಜನೆಗಳಿಂದಾಗಿ 9 ಸೀಟುಗಳನ್ನು ನಾವು ಗೆದ್ದಿದ್ದೇವೆ. ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದವರು ಬಿಜೆಪಿಯವರು.ಈಗ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ. ನಾವು ಗೆಲುವಿನ ಅಂತರ ನೋಡುತ್ತಿಲ್ಲ ಗೆಲುವು ಮಾತ್ರ ನೋಡುತ್ತಿದ್ದೇವೆ ಎಂದು ಹಾವೇರಿ ಜಿಲ್ಲಾ…
ಅಪ್ಪು ನಮ್ಮಲ್ಲಿ ಒಬ್ಬರಾಗಿ ಇನ್ನು ಇದ್ದಾರೆ : ಪುನೀತ್ ಸ್ಮಾರಕಕ್ಕೆ ಪೂಜೆ ನೆರವೇರಿಸಿದ ಬಳಿಕ ಶಿವರಾಜ್ ಕುಮಾರ್ ಹೇಳಿಕೆ
ಬೆಂಗಳೂರು : ಇಂದು ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮರೆಯಾಗಿ ಇಂದಿಗೆ ಮೂರು ವರ್ಷ. ಅವರ ನೆನಪು ಕನ್ನಡಿಗರಲ್ಲಿ ಅಷ್ಟೆ ಅಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ಅವರ ನೆನಪು ಅಚ್ಚಳಿಯದೆ ಉಳಿದಿದೆ.ಇದೆ ವೇಳೆ ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದೆ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಸ್ಮಾರಕಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ,ಅಪ್ಪು ನಮ್ಮಲ್ಲಿ ಒಬ್ಬರಾಗಿ ಜೀವಿಸುತ್ತಿದ್ದಾರೆ. ಅಪ್ಪುನ ಅಷ್ಟು ಬೇಗ ಮರೆಯೋಕೆ ಆಗಲ್ಲ. ಶೂಟಿಂಗ್ ಹೋದರೂ ಎಲ್ಲೇ ಇದ್ದರೂ ಪುನೀತ್ ನೆನಪಾಗುತ್ತಲೇ ಇರುತ್ತಾನೆ. ಅಪ್ಪು ನಮ್ಮ ನಡುವೆಯೇ ಇದ್ದಾನೆ, ಎಲ್ಲೂ ಹೋಗಿಲ್ಲ. ನಮ್ಮಲ್ಲಿ ಒಬ್ಬರಾಗಿ ಜೀವಿಸುತ್ತಿದ್ದಾರೆ. ನಾನು ಈ ಜಾಗಕ್ಕೆ ಬರಬೇಕು ಅಂತ ಏನೂ ಇಲ್ಲ. ಈ ಜಾಗದಲ್ಲಿ ಒಂದು ಪಾಸಿಟಿವ್ ವೈಬ್ ಇದೆ ಎಂದಿದ್ದಾರೆ. 2021 ಅಕ್ಟೋಬರ್ 29ರಂದು ಹೃದಯಾಘಾತದಿಂದ ಅಪ್ಪು ನಿಧನರಾದರು. ಪುನೀತ್…














