Author: kannadanewsnow05

ಬೆಂಗಳೂರು : ಬೆಂಗಳೂರಿನ ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲು ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ವಾಯುಪಡೆ ವಶದಲ್ಲಿರುವ 444.12 ಎಕರೆ ಅರಣ್ಯ ಭೂಮಿಯನ್ನು ನಿಯಮಾನುಸಾರ ಮರು ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಾಯುಪಡೆಗೆ 1987ರಲ್ಲಿ ಮಂಜೂರು ಮಾಡಲಾಗಿದ್ದ 570 ಎಕರೆ ಭೂಮಿಯ ಪೈಕಿ ಅರಣ್ಯ ಎಂದು ಅಧಿಸೂಚನೆ ಆಗಿರುವ 452 ಎಕರೆ ಮಂಜೂರಾತಿ ರದ್ದುಪಡಿಸಿ, 2017ರಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಭಾರತೀಯ ವಾಯು ಪಡೆ ಮಾ.1ರಂದು ಎಫ್.ಸಿ. (ಅರಣ್ಯ ತೀರುವಳಿ) ಅನುಮತಿ ಪಡೆಯದೆ ಅಕ್ರಮವಾಗಿ ನಿರ್ಮಾಣ ಕಾಮಗಾರಿ ಆರಂಭಿಸಿತ್ತು. ಇದನ್ನು ತಡೆಯಲಾಗಿದೆ ಎಂದು ಅರಣ್ಯಾಧಿಕಾರಿಗಳು ಇಂದು ತಿಳಿಸಿದ ಹಿನ್ನೆಲೆಯಲ್ಲಿ ಅರಣ್ಯ ಸಚಿವರು ಈ ಸೂಚನೆ ನೀಡಿದ್ದಾರೆ. ಸರ್ಕಾರದ 2017ರ ಆದೇಶದನ್ವಯ ಮ್ಯುಟೇಷನ್ ಆಗಿದ್ದು, ಪ್ರಸ್ತುತ ಈ ಜಮೀನಿನ ಪಹಣಿಯಲ್ಲಿ ಮೀಸಲು ಅರಣ್ಯ ಎಂದು ನಮೂದಾಗಿದೆ. ಅರಣ್ಯ ಇಲಾಖೆ ಈ ವಿಷಯವನ್ನು ವಾಯುಪಡೆಯ ಅಧಿಕಾರಿಗಳ ಗಮನಕ್ಕೆ ತಂದು ಸದರಿ…

Read More

ಕಲಬುರ್ಗಿ : ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಕೆಲ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೆ, ಇನ್ನು ಕೆಲವರು ಡಿಕೆ ಶಿವಕುಮಾರ್ ಸಿಎಂ ಅಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ ಇದರ ಮಧ್ಯ ಬಿಜೆಪಿಯ ಮಾಜಿ ಸಚಿವ ಗೋವಿಂದ ಕಾರಜೋಳ ರಾಜ್ಯದಲ್ಲಿ ದಲಿತ ಸಿಎಂ ಆಗುವ ಸಮಯ ಬಂದಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಕಲ್ಬುರ್ಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತ ಸಿಎಂ ಆಗುವ ಸಮಯ ಬಂದಿದೆ. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು. ಸಿದ್ದರಾಮಯ್ಯ ದಲಿತರು ಸಿಎಂ ಆಗಲು ಸಹಕಾರ ನೀಡಬೇಕು. ಮಲ್ಲಿಕಾರ್ಜುನ ಖರ್ಗೆ ಮನಸ್ಸು ಮಾಡಿದರೆ ರಾಜ್ಯದಲ್ಲಿ ದಲಿತರು ಸಿಎಂ ಆಗಬಹುದು ಎಂದು ಕಲ್ಬುರ್ಗಿಯಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.

Read More

ಬೆಂಗಳೂರು : ಕರೆದ ಹಸಿರು ಪುಟಾಣಿಯಲ್ಲಿ ಇದೀಗ ಅಪಾಯಕಾರಿ ಅಂಶ ಪತ್ತೆಯಾಗಿದೆ ಬಟಾಣಿಗಳಲ್ಲಿ ಪತ್ತೆಯಾಗಿದ್ದು ಬಟಾಣಿಯಲ್ಲಿ ಆರೋಗ್ಯಕ್ಕೆ ಹಾನಿಕಾರ ಉಂಟಾಗಲಿದೆ ಟಾಟಾ ಬಣ್ಣದಿಂದ ಆ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಸಿರು ಬಟಾಣಿಯಿಂದ ದೇಹಕ್ಕೆ ಹಾನಿಕರ ಎಂದು ಇದೀಗ ವರದಿಯಲ್ಲಿ ಬಯಲಾಗಿದೆ. ಹೌದು ಕರಿದ ಹಸಿರು ಬಟಾಣಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ಬಟಾಣಿಯಲ್ಲಿ ಕಲರ್ ಬಳಕೆ ಆರೋಗ್ಯಕ್ಕೆ ಹಾನಿಕಾರಕ ಟಾರ್ಟಾಜಿನ್ ಬಣ್ಣದಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಹಸಿರು ಬಟಾಣಿ ಡೇಂಜರ್ ಎಂದು ವರದಿಯಲ್ಲಿ ಬಯಲಾಗಿದೆ. 96 ಮಾದರಿಯಲ್ಲಿ 64 ಮಾದರಿ ಅಸುರಕ್ಷಿತ ಎಂದು ವರದಿಯಲ್ಲಿ ತಿಳಿದು ಬಂದಿದೆ, ಲ್ಯಾಬರೋಟರಿ ಪರೀಕ್ಷೆಯಲ್ಲಿ ವರದಿ ಬಂದಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಕುರಿತು ಮಾಹಿತಿ ಬಂದಿದೆ. ಈ ಕುರಿತು ಕೃತಕ ಬಣ್ಣ ಪತ್ತೆಗೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಔಷಧ ಗುಣಮಟ್ಟ ಇಲಾಖೆ ಅಧಿಕಾರಿಗಳು ಕರಿದ ಹಸಿರು ಬಟಾಣಿಗಳ 96 ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಿದ್ದು, ಅವುಗಳಲ್ಲಿ 64…

Read More

ಬೆಳಗಾವಿ : ಕುಡಿದು ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದರಿಂದ ಮನನೊಂದ ಪತ್ನಿ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಹೌದು ಬೆಳಗಾವಿಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಕೃಷ್ಣ ನದಿಗೆ ಹಾರಿ ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ತಾಯಿ ಶಾರದ ಹಾಗೂ ಮಕ್ಕಳಾದ ಅಮೃತ, ಆದರ್ಶ ಸಾವನಪ್ಪಿದ್ದಾರೆ. ಆದರೆ ಘಟನೆಯಲ್ಲಿ ಅನುಷ್ಕಾ ಡಾಲೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಪತಿ ಅಶೋಕ್ ಡಾಲೆ ಕಿರುಕುಳಕ್ಕೆ ಬೇಸತ್ತು ತಾಯಿ ಶಾರದಾ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿತ್ಯ ಕುಡಿದು ಬಂದು ಪತಿ ಅಶೋಕ್ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಪತ್ನಿ ಶಾರದ ಋಷಿ ಹೋಗಿದ್ದಳು ಈ ವೇಳೆ ಚಿಂಚಲಿ ಗ್ರಾಮದ ಹೊರವಲಯದಲ್ಲಿರುವ ಕೃಷ್ಣಾ ನದಿಗೆ ತನ್ನ ಮೂವರು ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ದುರಾದೃಷ್ಟ ಘಟನೆಯಲ್ಲಿ ತಾಯಿ ಇಬ್ಬರು…

Read More

ಚೈನ್ನೈ : ಮರು ವಿಂಗಡಣೆಯಿಂದ ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಸರ್ವಪಕ್ಷಗಳ ತುರ್ತು ಸಭೆ ಕರೆದಿದ್ದು, ಈ ಒಂದು ಸಭೆಗೆ ಬಿಜೆಪಿ ಗೈರಾಗಿದೆ ಎಂದು ತಿಳಿದುಬಂದಿದೆ. ಸಿಎಂ ಸ್ಟಾಲನ್ ನೇತೃತ್ವದಲ್ಲಿ ಇದೀಗ ಸರ್ವ ಪಕ್ಷ ಸಭೆ ನಡೆಯುತ್ತಿದ್ದು, ಚೆನ್ನೈನಲ್ಲಿ ಸರ್ವಪಕ್ಷಗಳ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸ್ಟಾಲಿನ್ ತಮಿಳುನಾಡಿನ ಸರ್ವಪಕ್ಷಗಳ ಸಭೆಗೆ ಬಿಜೆಪಿ ಗೈರಾಗಿದೆ. ಸರ್ವಪಕ್ಷಗಳ ಸಭೆಯಲ್ಲಿ ನಟ ಕಮಲ್ ಹಾಸನ್ ಭಾಗವಹಿಸಿದ್ದಾರೆ. ಕ್ಷೇತ್ರಮರು ವಿಂಗಡಣೆಯಲ್ಲಿ 8 ಕ್ಷೇತ್ರಗಳನ್ನು ಕಳೆದುಕೊಳ್ಳುವ ಭೀತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಟಾಲಿನ್ ಸರ್ವ ಪಕ್ಷಗಳ ಸಭೆಗೆ ಆಹ್ವಾನಿಸಿದ್ದಾರೆ.

Read More

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ಬಂಧಿಸಲ್ಪಟ್ಟಿರುವ ನಟಿ ರನ್ಯಾ ರಾವ್ ಅವರ ಮನೆಯಲ್ಲಿಯೂ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸೋಮವಾರ ರಾತ್ರಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆದ ಬಳಿಕ ಅವರು ವಾಸವಿದ್ದ ನಗರದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಫ್ಲ್ಯಾಟ್‌ನಲ್ಲಿ ಡಿಆರ್​ಐ ಅಧಿಕಾರಿಗಳ ತಂಡ ಶೋಧ ನಡೆಸಿದ್ದು, ಈ ವೇಳೆ 2.06 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ 2.67 ಕೋಟಿ ರೂ. ನಗದು ಸೇರಿದಂತೆ ಕೆಲ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು‌ ತಿಳಿಸಿವೆ. ರನ್ಯಾ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ರನ್ಯಾ ಬಂಧನ ಬಳಿಕ ಆಕೆ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್ ನಲ್ಲಿರುವ ಫ್ಲಾಟ್ ಅನ್ನು ಅಧಿಕಾರಿಗಳ. ಪರಿಶೀಲನೇ ನಡೆಸಿದ್ದಾರೆ ಮೊನ್ನೆ ಸಹ ರಾತ್ರಿ ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 3 ದೊಡ್ಡ ಪೆಟ್ಟಿಗೆಯನ್ನು ಅಧಿಕಾರಿಗಳು ತೆಗೆದುಕೊಂಡು ಹೋದರು ಎಂದು…

Read More

ಹಾವೇರಿ : ಪ್ರೀತಿಸಿದ ಹುಡುಗಿ ಮತ್ತೊಬ್ಬನ ಜೊತೆಗೆ ಸಂಪರ್ಕ ಇಟ್ಟುಕೊಂಡಿದ್ದಕ್ಕೆ ಯುವಕನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದ್ದು, ಕಳೆದ ಜನೆವರಿ 26 ರಂದು ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಶಶಿಧರ್ ಬೈರಾಪುರ (23) ಎಂದು ತಿಳಿದುಬಂದಿದೆ. ಮೊಬೈಲ್ ನಲ್ಲಿ ಯುವತಿ ಜೊತೆಗಿದ್ದ ಫೋಟೋ ಪತ್ತೆ ಆಗಿದ್ದು, ಈ ಹಿನ್ನೆಲೆ ಶಶಿಧರ ಸಾವಿಗೆ ಯುವತಿ ಪ್ರಚೋದನೆ ನೀಡಿದ್ದಾಳೆ ಎಂದು ಯುವತಿಯ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಪ್ರೀತಿಯ ನಾಟಕವಾಡಿ ಶಶಿಧರ್ ತಲೆ ಕೆಡಿಸಿದ ಪ್ರಿಯತಮೆ ಆತ್ಮಹತ್ಯೆಗೆ ಪ್ರೇರೇಪಿಸಿದ್ದಾಳೆ. ಜನವರಿ 26 ರಂದು ಶಶಿಧರ ಆತ್ಮಕ್ಕೆ ಶರಣಾಗಿದ್ದಾನೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಶಶಿಧರ್ ಪೋಷಕರು ದೂರು ದಾಖಲಿಸಿದ್ದಾರೆ. ಮೃತ ಶಶಿಧರ ತಾಯಿ ಹುಲಿಗೆಮ್ಮ ಅವರು ದೂರು ದಾಖಲಿಸಿದ್ದಾರೆ. ಮೊದಲು ಶಶಿಧರ್ ಆತ್ಮಹತ್ಯೆನಲ್ಲಿ ಯುಡಿಆರ್ ದಾಖಲಾಗಿತ್ತು. ಶಶಿಧರ್ ಮೊಬೈಲ್ ಪರಿಶೀಲಿಸಿದಾಗ ಪ್ರೀತಿಯ ವಿಚಾರ ಬಯಲಾಗಿದೆ. ಮೊಬೈಲಲ್ಲಿ ಇವತ್ತಿಗೆ ಫೋಟೋ ಮತ್ತು ವಿಡಿಯೋಗಳು ಪತ್ತೆಯಾಗಿವೆ. ಸಾವಿಗೆ…

Read More

ಬೆಳಗಾವಿ : ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಸಹ ಇದುವರೆಗೂ ರಾಜ್ಯದ ಹಲವು ಕಡೆಗಳಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮುಂದುವರಿಯುತ್ತಲೇ ಇದೆ ಇದೀಗ ಬೆಳಗಾವಿಯಲ್ಲಿ ಬಡ್ಡಿ ದಂಧೆಕೋರನೊಬ್ಬ ಯುವಕನೊಬ್ಬನನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ನೀಡಿರುವ ಘಟನೆ ವರದಿಯಾಗಿದೆ. ಹೌದು ಬಡ್ಡಿ ಹಣಕ್ಕಾಗಿ ಯುವಕನನ್ನು ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಬೆಳಗಾವಿಯ ಸದಾಶಿವನಗರದ ನಿವಾಸಿ ವಿಶ್ವಜೀತ್ ಎನ್ನುವ ಯುವಕ ಕಿಡ್ನಾಪ್ ಆಗಿದ್ದಾನೆ. 2 ಲಕ್ಷ ಹಣವನ್ನು ವಿಶ್ವಜೀತ ಸಾಲದ ರೂಪದಲ್ಲಿ ಹಣ ಪಡೆದಿದ್ದ ಡ್ಯಾನಿ ಬೀಡಕರ್ ಎಂಬಾತನ ಬಳಿ 2 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದ. ಸಾಲದ ಅಸಲು ತೀರಿಸಿದ ಬಳಿಕವು ಬಡ್ಡಿ ಹಣಕ್ಕಾಗಿ ಡ್ಯಾನಿ ಕಿರುಕುಳ ನೀಡುತ್ತಿದ್ದ. ಈ ವೇಳೆ ಟೀ ಕುಡಿದು ಬರೋಣ ಬಾ ಎಂದು ವಿಶ್ವಜೀತ್ ನನ್ನು ಕರೆದೋಯ್ದಿದ್ದಾನೆ. ಬಳಿಕ ಹಣ ಕೊಡುವವರೆಗೂ ಬಿಡಲ್ಲ ಎಂದು ಕೂಡಿಹಾಕಿ ಚಿತ್ರಹಿಂಸೆ ಕೊಟ್ಟಿದ್ದಾನೆ. ಸಂತಿಬಸ್ತವಾಡ ಗ್ರಾಮದ ಫಾರ್ಮ್ ಹೌಸ್ ನಲ್ಲಿ…

Read More

ನವದೆಹಲಿ : ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಇಂದಿನ ಮಕ್ಕಳು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಡುಗೆ ಎಣ್ಣೆಯನ್ನು ಕಡಿಮೆ ಬಳಸುವುದರಿಂದ ಬೊಜ್ಜನ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದ್ದರು. ಇದೀಗ ವರದಿಯೊಂದರ ಪ್ರಕಾರ ಮುಂದಿನ 25 ವರ್ಷಗಳಲ್ಲಿ 44 ಕೋಟಿ ಭಾರತೀಯರಿಗೆ ಬೊಜ್ಜಿನ ಆತಂಕ ಎದುರಾಗಲಿದೆ ಎಂದು ತಿಳಿದುಬಂದಿದೆ. ಹೌದು ಮುಂದಿನ 25 ವರ್ಷಗಳಲ್ಲಿಭಾರತದಲ್ಲಿ ಬರೋಬ್ಬರಿ 44 ಕೋಟಿ ಜನರು ಬೊಜ್ಜಿನ ಸಮಸ್ಯೆಗೆ ತುತ್ತಾಗಬಹುದು. ಈ ಕ ಬೊಜ್ಜು ಸಮಸ್ಯೆಯಲ್ಲಿ ಚೀನಾವನ್ನು ಮೂಲಕ ಬೊ ಭಾರತ ಮೀರಿಸಲಿದೆ ಎಂದು ‘ದಿ ಲ್ಯಾನ್ಸೆಟ್’ ವರದಿಯು ತನ್ನ ಜಾಗತಿಕ ವಿಶ್ಲೇಷಣೆಯಲ್ಲಿ ಬಹಿರಂಗಪಡಿಸಿದೆ. 2050ರ ವೇಳೆಗೆ ಭಾರತದಲ್ಲಿ 21.8 ಕೋಟಿ ಪುರುಷರು ಮತ್ತು 23.1 ಕೋಟಿ ಮಹಿಳೆಯರು ಸೇರಿದಂತೆ ಒಟ್ಟು 44.9 ಕೋಟಿ ಜನರು ಬೊಜ್ಜಿನ ಸಮಸ್ಯೆಗೆ ತುತ್ತಾಗಲಿದ್ದು, ಒಟ್ಟಾರೆ ಜನಸಂಖ್ಯೆಯ ಸುಮಾರು ಮೂರನೇ ಒಂದು ಭಾಗದಷ್ಟು ಜನರು ಅಧಿಕ ತೂಕ ಮತ್ತು ಬೊಜ್ಜಿನ ಸಮಸ್ಯೆ ಎದುರಿಸಲಿದ್ದಾರೆ. ಈ ಮೂಲಕ,…

Read More

ಚಾಮರಾಜನಗರ : ಜಿಲ್ಲೆಯ ಬಂಡೀಪುರದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು 24ಗಂಟೆಯೊಳಗೆ ಭೇದಿಸಿರುವ ಪೊಲೀಸರು ವಿಜಯಪುರದ ತೋಟದ ಮನೆಯೊಂದರಲ್ಲಿ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡುವ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ತಲೆಮರೆಸಿಕೊಂಡಿರುವ ಮೂವರ ಪತ್ತೆಗೆ ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳಾದ ಕೋಲಾರದ ಮಲ್ಲಿಕಾರ್ಜುನ(30), ಯಾದಗಿರಿಯ ಈರಣ್ಣ(32), ಸಿದ್ದರಾಮಯ್ಯ(40), ವಿಜಯಪುರದ ವಿಶ್ವನಾಥ(30) ಅವರನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಬಾಗಲಕೋಟೆಯ ಪುನೀತಾ, ಸ್ನೇಹಿತ್, ಭೀಮನಗೌಡ ಬಂಧನಕ್ಕಾಗಿ ತನಿಖೆ ಮುಂದುವರೆದಿದೆ ಎಂದು ತಿಳಿಸಿದರು. ಪ್ರಕರಣ ಹಿನ್ನೆಲೆ? ಮಾರ್ಚ್ 3 ರಂದು ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿತ್ತು. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್​ ಕಂಟ್ರಿ ಕ್ಲಬ್ ರೆಸಾರ್ಟ್​​ನಲ್ಲೇ ಇವೆ. ರೆಸಾರ್ಟ್​ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಕಾರಿನಲ್ಲಿ ಬಂಡೀಪುರ ಮಂಗಲ ರಸ್ತೆಯವರೆಗೆ ಹೋದವರು, ಅಲ್ಲಿಂದ ನಾಪತ್ತೆಯಾಗಿದ್ದಾರೆ. ಇನ್ನು, ಕುಟುಂಬ ನಾಪತ್ತೆಯಾದ ವಿಚಾರ ತಿಳಿದು…

Read More