Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲಿ ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು.ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ… ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು. ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ ವೇಳೆ ಸಹೋದರ ಹಾಗು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹಾಜರಿದ್ದರು.
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ ಬಿಜೆಪಿ ಡಿಕೆ ಶಿವಕುಮಾರ್ ಅವರು, ಕರ್ನಾಟಕದ ಪರ ಧ್ವನಿ ಎತ್ತದ ಚಿತ್ರರಂಗದ ಕೆಲವು ನಟ ನಟಿಯರ ನಟ್ಟು ಬೋಟ್ ಟೈಟ್ ಮಾಡಬೇಕಾಗಿದೆ ಎಂದು ಹೇಳಿಕೆ ನೀಡಿದರು ಇದೇ ವಿಚಾರವಾಗಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೌದು ಚಿತ್ರತಂಗದವರ ನಟ್ಟು ಬೋಲ್ ಟೈಟ್ ಮಾಡಲೇಬೇಕು ಎಂದು ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಚಿತ್ರನಟರ ನಟ್ಟು ಬೋಲ್ಟ್ ಟೈಟ್ ಮಾಡಬೇಕೆಂಬ ಹೇಳಿಕೆ ವಿಚಾರವಾಗಿ ಕನ್ನಡ ಚಿತ್ರರಂಗದ ಕೆಲ ವಿಧಾನದಲ್ಲಿ ಧಿಮಾಕು ಹೆಚ್ಚಾಗಿದೆ ಅಂತವರಿಗೆ ಸರ್ಕಾರ ನಟ್ಟು ಬೋಲ್ಟ್ ಟೈಟ್ ಮಾಡಲೇಬೇಕು ಯಾರು ಕರೆಕ್ಟ್ ಇರುತ್ತಾರೋ ಅವರಿಗೆ ಅದು ಎಫೆಕ್ಟ್ ಆಗುವುದಿಲ್ಲ. ಡಿಸಿಎಂ ಡಿಕೆ ಶಿವಕುಮಾರ್ ಯಾವುದನ್ನು ಸುಮ್ಮನೆ ಹೇಳುವುದಿಲ್ಲ. ಏನಾದರೂ ಡಿಕೆ ಶಿವಕುಮಾರ್ ಹೇಳಿದ್ದಾರೆ ಅಂದರೆ ಅದು 100 ಪರ್ಸೆಂಟ್ ಸರಿ ಇರುತ್ತದೆ ಎಂದರು. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ ಸುಮ್ಮನೆ ಧರಣಿ ಮಾಡುತ್ತಾರೆ. ಡಿಸಿಎಂ ಡಿಕೆ…
GOOD NEWS : ಯಜಮಾನಿಯರಿಗೆ ಸಿಹಿಸುದ್ದಿ : 2 ತಿಂಗಳ ‘ಗೃಹಲಕ್ಷ್ಮಿ’ ಬಾಕಿ ಹಣ ಶೀಘ್ರ ಖಾತೆಗೆ : ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಕಳೆದ ಎರಡು ತಿಂಗಳಿನಿಂದ ಗ್ರಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬಂದಿಲ್ಲ ಎಂದು ರಾಜ್ಯದ ಮಹಿಳೆಯರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದೀಗ ಇದೇ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಶೀಘ್ರ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ಹಾಕುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ವಿಳಂಬ ಆಗಿರುವ ಕುರಿತು ಹಣ ಹಾಕೋದು ಸ್ವಲ್ಪ ವಿಳಂಬವಾಗಿತ್ತು. ಈಗ ಎಲ್ಲವೂ ಸರಿಯಾಗಿದೆ. ಬಾಕಿ ಇರುವ ಎರಡು ತಿಂಗಳ ಹಣವನ್ನು ಈಗ ಬ್ಯಾಂಕ್ ಖಾತೆಗೆ ಹಾಕುತ್ತೇವೆ. ಯಾವುದೇ ಫಿಲ್ಟರ್ ನಾವು ಮಾಡುತ್ತಿಲ್ಲ ಎಲ್ಲರಿಗೂ ಕೂಡ ಹಣ ಸಿಗುತ್ತದೆ. ಯಾವುದೇ ಗೊಂದಲ ಬೇಡ ಗ್ಯಾರಂಟಿಗಳನ್ನು ಮುಂದುವರಿಸುತ್ತೇವೆ.ಯಾವುದೇ ಕಾರಣಕ್ಕೂ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು ಈ ವೇಳೆ ರಾಜ ಭವನವನ್ನು ಪ್ರವೇಶಿಸಿದ ಕೂಡಲೇ ಪೊಲೀಸರು ಕನ್ನಡ ಪರ ಹೋರಾಟಗಾರ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ರಾಜ ಭವನಕ್ಕೆ ಕನ್ನಡಪರ ಹೋರಾಟಗಾರರಿಂದ ಮುತ್ತಿಗೆ ಯತ್ನಿಸಲಾಯಿತು. ಕನ್ನಡ ಪರ ಹೋರಾಟಗಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ಈ ವೇಳೆ ಮನವಿ ಕೊಡಲು ಬಂದಿದ್ದೇವೆ ಹೊರತು ಪ್ರತಿಭಟಿಸಲು ಅಲ್ಲವೆಂದು ವಿರೋಧ ವ್ಯಕ್ತಪಡಿಸಿದರು. ರಾಜಭವನಕ್ಕೆ ಪ್ರವೇಶ ಮಾಡುತ್ತಿದ್ದಂತೆ ಪ್ರತಿಭಟನಾಕಾರರು ವಶಕ್ಕೆ ಪಡೆಯಲಾಯಿತು. ರಾಜಭವನದ ಬಳಿ 2 ಕೆಎಸ್ಆರ್ಪಿ ತುಕಡಿ ಎರಡು ಬಿಎಂಟಿಸಿ ಬಸ್ ನಿಯೋಜನೆ ಮಾಡಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಇದೀಗ ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯಪಾಲರಾದಂತಹ ಥಾವರ್ ಚಂದ್ ಗೆಹ್ಲೊಟ್ ಅವರು, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿದರು. ಈ ವೇಳೆ ರಾಜ್ಯ ಸರ್ಕಾರ ಜಿಎಸ್ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು.ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಯ್ ಉದಯ ಆಗಿದೆ ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ತಿಳಿಸಿದರು. ಉತ್ತಮ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಇದೀಗ ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯಪಾಲರಾದಂತಹ ಥಾವರ್ ಚಂದ್ ಗೆಹ್ಲೊಟ್ ಅವರು, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿದರು ಈ ವೇಳೆ ರಾಜ್ಯ ಸರ್ಕಾರ ಜಿಎಸ್ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು. ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ ಎಂದು ತಿಳಿಸಿದರು. ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವರದಿಯಾಗುತ್ತಿದೆ ರಾಜ್ಯದಲ್ಲಿ ಉತ್ತಮವಳಿಯಾಗಿದ್ದರಿಂದ ಉತ್ತಮ ಬೆಳೆ ಬಂದಿದೆ. ರಾಜ…
ಬೆಂಗಳೂರು : ವಿಧಾನಸಭೆಯಲ್ಲಿ ಗುತ್ತಿಗೆದಾರರೊಂದಿಗೆ ಸಿಎಂ ಡಿಸಿಎಂ ಸಭೆ ನಡೆಸಲಿದ್ದಾರೆ. ಸರ್ಕಾರಕ್ಕೆ ಮಗ್ಗುಲ ಮುಳ್ಳಾದ ರಾಜ್ಯ ಗುತ್ತಿಗೆದಾರರ ಸಂಘವು ಇದೀಗ ಕಮಿಷನ್ ನಿಲ್ಲಿಸಿ ಬಾಕಿ ಬಿಲ್ ಪಾವತಿ ಮಾಡಿ, ಅಕಸ್ಮಾತ್ ಬಿಲ್ ಪಾವತಿಸದಿದ್ದರೆ ಹೈಕಮಾಂಡ್ಗೆ ದೂರು ಕೊಡುತ್ತೇವೆ ಎಂದು ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ಗುತ್ತಿಗೆದಾರರ ಎಚ್ಚರಿಕೆ ಬೆನ್ನಲ್ಲೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಗೆ ಶಿವಕುಮಾರ್ ಸಭೆ ಕರೆದಿದ್ದಾರೆ. ಹಾಗಾಗಿ ವಿಧಾನಸಭೆಯಲ್ಲಿ ಗುತ್ತಿಗೆದಾರರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಲಿದ್ದಾರೆ. ನಿನ್ನೆ ತಾನೆ ರಾಜ್ಯ ಗುತ್ತಿಗೆದಾರರ ಸಂಘವು ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರವಾದ ಆರೋಪ ಮಾಡಿತ್ತು ಈ ಹಿಂದಿನ ಬಿಜೆಪಿ ಸರ್ಕಾರ ಕೇವಲ 40% ಮಾತ್ರ ಕಮಿಷನ್ ಕೇಳುತ್ತಿದ್ದರೆ ಈಗಿದಿಕ ಕಾಂಗ್ರೆಸ್ ಅದಕ್ಕಿಂತಲೂ ಹೆಚ್ಚಿನ ಕಮಿಷನ್ ಕೇಳುತ್ತಿದೆ ಎಂದು ಗಂಭೀರವಾದ ಆರೋಪ ರಾಜ್ಯ ಗುತ್ತಿಗೆದಾರರ ಸಂಘ ಮಾಡಿತು ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತರಾತುರಿಯಲ್ಲಿ ಸಭೆ ಕರೆದಿದ್ದಾರೆ.
ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು ಈ ನೆಲೆಯಲ್ಲಿ ಇದೀಗ ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಅಧಿವೇಶನದ ಕುರಿತು ಭಾಷಣ ಮಾಡಲಿದ್ದಾರೆ. ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬೀಳಲು ಪಕ್ಷಗಳು ತುದಿಗಾಲಲ್ಲಿ ನಿಂತಿದ್ದು, ಇದೆ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಗ್ಯಾರಂಟಿಗಳಿಂದ ಕಾಂಗ್ರೆಸ್ ಬಿಕ್ಷಾ ಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವವನ್ನು ದಮನ ಮಾಡುತ್ತಿದೆ. ಈಗ ರಾಜ್ಯಪಾಲರ ಹಲವು ಅಧಿಕಾರ ಮೊಟಕು ಮಾಡುತ್ತಿದೆ. ರಾಜ್ಯಪಾಲರಿಗೆ ಕಾಂಗ್ರೆಸ್ ಸರ್ಕಾರ ಅಪಮಾನ ಮಾಡುತ್ತಿದೆ.ಹಲವು ಮಸೂದೆಗಳ ವಿಚಾರದಲ್ಲಿ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ. ರಾಜ್ಯಪಾಲರ ಪ್ರಶ್ನೆಗೆ ಸ್ಪಷ್ಟನೆ ಕೊಡದೆ ಬೊಬ್ಬೆ ಹೊಡೆಯುತ್ತಿದ್ದಾರೆ. ಗ್ಯಾರಂಟಿಗಳಿಂದ ಕಾಂಗ್ರೆಸ್ ಬಿಕ್ಷಾ ಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ. ಯಾವ ಮುಖ ಇಟ್ಕೊಂಡು ಸರ್ಕಾರದ ಸಾಧನೆ ಹೇಳಿಕೊಳುತ್ತೀರಿ? ನಾವು ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸುವುದಿಲ್ಲ. ಶಾಸಕರ ಭವನದಿಂದ ವಿಧಾನಸೌಧದ ವರೆಗೆ ಪಾದಯಾತ್ರೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು ಕುಡಿದ ಮತ್ತಿನಲ್ಲಿ ಪತಿ-ಪತ್ನಿಯ ಮೇಲೆ ರಾಡ್ ನಿಂದ ಹಲ್ಲೆ ಮಾಡಿ ಬಳಿಕ ನೇಣು ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಗುಡ್ನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ಮಹಿಲೆಯನ್ನು ನೂಕಲಮ್ಮ ಎಂದು ತಿಳಿದುಬಂದಿದ್ದು, ಒಡಿಶಾ ಮೂಲದ ದಂಪತಿಗಳಾದ ಗೌರಿ ಹಾಗು ಆತನ ಪತ್ನಿ ನೂಕಲಮ್ಮ ಕೃಷ್ಣಾರೆಡ್ಡಿ ಎಂಬುವವರ ಇಟ್ಟಿಗೆ ಕಾರ್ಖಾನೆಯಲ್ಲಿ ಇವರು ಕೆಲಸ ಮಾಡುತ್ತಿದ್ದರು. ಪ್ರತಿದಿನ ಕುಡಿದು ಪತ್ನಿ ಜೊತೆಗೆ ಪತಿ ಗೌರಿ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿ ಕಬ್ಬಿಣದ ರಾಡ್ ಇಂದ ಹೊಡೆದು ನೇಣು ಬಿಗಿದು ಭೀಕರವಾಗಿ ಕೊಲೆ ಮಾಡಿದ್ದಾನೆ.ಇದೀಗ ನೂಕಲಮ್ಮ ಶವವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಡಿಕೆ ಬ್ರದರ್ಸ್ ಹಾಗೂ ಆರ್ ಆರ್ ನಗರದ ಶಾಸಕ ಮುನಿರತ್ನ ನಡುವೆ ಇದೀಗ ತೀವ್ರ ಜಟಾಪಟಿ ಏರ್ಪಟ್ಟಿದ್ದು, ಮಲ್ಲತಹಳ್ಳಿ ಕೆರೆಗೆ ಬಿಡುಗಡೆಯಾದ ಹಣದ ಕುರಿತಾಗಿ ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಇದೀಗ ಅಂಕಿ ಅಂಶಗಳ ಪ್ರತಿಗಳನ್ನು ಹಂಚಿ ಅಭಿಯಾನ ನಡೆಸುತ್ತಿದ್ದಾರೆ. ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಇದೀಗ ಅಭಿಯಾನ ನಡೆಸಿದ್ದಾರೆ. ಲಗ್ಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ, ಕೊಟ್ಟಿಗೆಪಾಳ್ಯ ವಾರ್ಡ್ ಅಧ್ಯಕ್ಷ ಸುಂಕದಕಟ್ಟೆ ನವೀನ್ ಕುಶಾಲ್, ಹರವೇಗೌಡ ಸೇರಿದೆ ಹಲವು ಕಾರ್ಯಕರ್ತರು ಇದೀಗ ಶಾಸಕ ಮುನಿರತ್ನ ವಿರುದ್ಧ ಅಭಿಯಾನ ನಡೆಸುತ್ತಿದ್ದಾರೆ.ಮಲ್ಲತಹಳ್ಳಿ ಕೆರೆಗೆ ಬಿಡುಗಡೆಯಾದ ಹಣದ ಅಂಕಿ ಅಂಶಗಳ ಪ್ರತಿ ವಿತರಣೆ ಮಾಡುತ್ತಿದ್ದಾರೆ. ಅನುದಾನದ ಅಂಕಿ ಅಂಶಗಳ ಪ್ರತಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಇದೀಗ ಹಂಚುತ್ತಿದ್ದಾರೆ. ಮಲ್ಲತಹಳ್ಳಿ ಕೆರೆಯ ಕುವೆಂಪು ಪಾರ್ಕಿನಲ್ಲಿ ಪ್ರತಿಗಳನ್ನು ಹಂಚಿ ಪ್ರತಿಭಟನೆ ಮಾಡುತ್ತಿದ್ದಾರೆ.ಮುನಿರತ್ನ ಕಾಲ್ಗುಣದಿಂದ ಮಲ್ಲತಹಳ್ಳಿ ಕೆರೆಗೆ ಬಂದಿದ್ದು 84 ಕೋಟಿ. ಕೆರೆ ಹಾಳು ಮಾಡಲು…












