Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಧಿಕಾರಿಗಳು ಇದುವರೆಗೂ ನಡೆಸಿದ ತನಿಖೆ ಕುರಿತಂತೆ ಸಮಗ್ರ ವರದಿಯನ್ನು ತಯಾರಿಸಿದ್ದು ಇದೀಗ ಮೈಸೂರು ಲೋಕಾಯುಕ್ತ ಎಸ್.ಪಿ ಟಿ ಉದೇಶರವರು, ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಹೌದು ಮುಡಾ ಹಗರಣ ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಕೆಯಾಗಿದ್ದು, ಐಜಿಪಿ ಸುಬ್ರಮಣ್ಯೇಶ್ವರ ರಾವ್ ಗೆ ಮುಡಾ ಹಗರಣದ ಅಂತಿಮ ತನಿಖಾ ವರದಿಯನ್ನು ಸಲ್ಲಿಸಲಾಗಿದೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ರವರು ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ.
ಬೆಂಗಳೂರು : ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಇದೀಗ ಮೆಟ್ರೋ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಡಿಸುತ್ತಿದ್ದು, ದರ ಏರಿಕೆ ಬೆನ್ನಲ್ಲೆ ಇದೀಗ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ ಎಂದು ತಿಳಿದುಬಂದಿದೆ. ಹೌದು 2017ರ ಜೂನ್ ಬಳಿಕ ಇದೇ ಮೊದಲ ಸಲ ಪ್ರಯಾಣ ದರ ಏರಿಸಿರುವ ಬೆಂಗಳೂರು ಮೆಟ್ರೊ ರೈಲು ನಿಗಮವು ರಿಯಾಯಿತಿ ರಹಿತ ದರದಲ್ಲಿ ಸರಾಸರಿ ಶೇ 51.55ರಷ್ಟು ಹಾಗೂ ರಿಯಾಯಿತಿ ಸಹಿತ ದರದಲ್ಲಿ ಶೇ 45-46 ರಷ್ಟು ಏರಿಕೆ ಮಾಡಿರುವುದಾಗಿ ತಿಳಿಸಿದೆ.ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್ನಲ್ಲಿ ಇರಬೇಕು ಎಂದು ನಿಗಮದ ಅಧಕಾರಿಗಳು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ಇದ್ದಾಗ ಕಾರ್ಡ್ನ ಉಳಿತಾಯ ಮಿತಿ 50 ಇದ್ದದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಪರಿಷ್ಕೃತ ದರ ಪಟ್ಟಿ ಫೆಬ್ರುವರಿ 9ರಿಂದ ಜಾರಿಗೆ ಬಂದಿದೆ. ನಂತರದ ಸತತ ಎರಡು ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಕುಸಿದಿದೆ.ಫೆಬ್ರುವರಿ…
BREAKING : ರಾಜ್ಯದಲ್ಲಿ ಮತ್ತೊಂದು ದರೋಡೆಗೆ ಯತ್ನ : ಉಡುಪಿಯಲ್ಲಿ ATM ಕಳ್ಳತನಕ್ಕೆ ಯತ್ನಿಸಿದ ಮುಸುಕುಧಾರಿ ಗ್ಯಾಂಗ್!
ಉಡುಪಿ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದರೋಡೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಬೀದರ್ನಲ್ಲಿ ಹಾಡ ಹಗಲೇ ಎಟಿಎಂ ಗೆ ಹಣ ತುಂಬ ಸಿಬ್ಬಂದಿಯನ್ನು ಕೊಲೆ ಮಾಡಿ 80 ಲಕ್ಷಕ್ಕೂ ಹಣ ದೋಚಿದ್ಫು, ಮಂಗಳೂರಿನಲ್ಲಿ ಸಹ ದರೋಡೆ ಪ್ರಕರಣ ನಡೆದಿತ್ತು. ಇದೀಗ ಉಡುಪಿ ಜಿಲ್ಲೆಯಲ್ಲೂ ಕೂಡ ಎಟಿಎಂ ಕಳ್ಳತನಕ್ಕೆ ಮುಸುಕುಧಾರಿ ಗ್ಯಾಂಗ್ ಯತ್ನಿಸಿದೆ. ಹೌದು ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಉದ್ಯಾವರದಲ್ಲಿ ಈ ಘಟನೆ ನಡೆದಿದ್ದು, ಕೆನರಾ ಬ್ಯಾಂಕಿನ ಎಟಿಎಂ ಬಾಕ್ಸ್ ಒಡೆಯಲು ಮುಸುಕುದಾರಿ ಮೂವರು ವ್ಯಕ್ತಿಗಳು ಯತ್ನಿಸಿದ್ದಾರೆ. ಮಷೀನ್ ಒಳಗಿಂದ ಸೈರನ್ ಕೂಗುತ್ತಿದ್ದಂತೆ ಕೂಡಲೇ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಇದೀಗ ಬಲೆ ಬೀಸಿದ್ದಾರೆ.
ತುಮಕೂರು : ತುಮಕೂರಿನಲ್ಲಿ ಘೋರವಾದ ದುರಂತ ಸಂಭವಿಸಿದ್ದು, ವಸತಿ ನಿಲಯದ ವಿದ್ಯಾರ್ಥಿಗಳು ಉಪಹಾರ ಸೇವಿಸಿ ಸುಮಾರು 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ಎಂಬ ಗ್ರಾಮದಲ್ಲಿ ವಸತಿ ನಿಲಯದಲ್ಲಿ ಇಂದು ಬೆಳಿಗ್ಗೆ ಉಪಹಾರ ಮಾಡಲಾಗಿತ್ತು. ಈ ವೇಳೆ ಉಪಹಾರ ಸೇವಿಸಿದ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇಧಿ ಕಾಣಿಸಿಕೊಂಡಿದೆ.ಫುಡ್ ಪಾಯಿಸನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಲಕ್ಕನಹಳ್ಳಿಯ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಈ ಒಂದು ಘಟನೆ ಸಂಭವಿಸಿದೆ. ತಕ್ಷಣ ಅವರನ್ನು ಶಿರಾ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿರಾ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆಸ್ಪತ್ರೆಗೆ THO ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಜಯಪುರ : ಭೀಮಾತೀರದಲ್ಲಿ ಇದೀಗ ಮತ್ತೆ ನೆತ್ತರು ಹರಿದಿದ್ದು, ಚಂದಪ್ಪ ಹರಿಜನ್ ಪಕ್ಕಾ ಬಲಗೈ ಬಂಟ ಎನಿಸಿಕೊಂಡಿದ್ದ ಭಾಗಪ್ಪ ಹರಿಜನನ್ನು ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ತಡರಾತ್ರಿ ದುಷ್ಕರ್ಮಿಗಳು ಗುಪ್ತಾಂಗ ಕಟ್ ಮಾಡಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಒಂದು ಕೊಲೆ ಸಂಬಂಧಿಸಿದಂತೆ ಭಾಗಪ್ಪ ಹರಿಜನ್ ಪತ್ರಯರು ಪಿಂಟ್ಯಾನೇ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾನೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಯನ್ನು ಪಿಂಟ್ಯಾ ಹತ್ಯೆ ಮಾಡಿದ್ದಾನೆ ಎಂದು ಪುತ್ರಿಯರಾದ ಗಂಗೂಬಾಯಿ ಹಾಗೂ ಇಂದ್ರಬಾಯಿ ಹೇಳಿಕೆ ನೀಡಿದ್ದಾರೆ. ಹತ್ಯೆ ಬಗ್ಗೆ ಪಿಂಟ್ಯಾ ಸ್ಟೇಟಸ್ ಅಲ್ಲಿ ಹಾಕಿಕೊಂಡಿದ್ದ. ಸಹೋದರನ ಆತ್ಮಕ್ಕೆ ಶಾಂತಿ ಸಿಗ್ತು ಅಂತ ಸ್ಟೇಟಸ್ ಹಾಕಿಕೊಂಡಿದ್ದ. ನಮ್ಮ ತಂದೆಯನ್ನು ಪಂಟ್ಯಾ ಸೇರಿ ಇತರರು ಕೊಲೆ ಮಾಡಿದ್ದಾರೆ ನಮ್ಮ ತಂದೆಯ ಹತ್ಯೆಗೆ ನ್ಯಾಯ ಸಿಗಲೇಬೇಕು ಎಂದು ಪುತ್ರಿಯರಾದ ಗಂಗೂಬಾಯಿ ಮತ್ತು ಇಂದಿರಾಬಾಯಿ ಹೇಳಿಕೆ ನೀಡಿದರು
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮಿನಿ ಟೆಂಪೋ ಬ್ರೇಕ್ ಆಗಿ ಪಲ್ಟಿಯಾದ ಪರಿಣಾಮ ಟೆಂಪೋನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಾಳ ಮುಳ್ಳೂರಲ್ಲಿ ನಡೆದಿದೆ. ಮೃತನನ್ನು ಮಹಾರಾಷ್ಟ್ರ ಮೂಲದ ಜಿತೇಂದರ್ (38) ಎಂದು ಗುರುತಿಸಲಾಗಿದೆ. ನಾಲ್ವರು ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿಯ ರಾಜ(37), ಆದಿತ್ಯ (20) ಭದ್ರಾವತಿಯ ಬಾಬು (55), ಶಾಬಾಸ್ (25) ಗಂಭೀರ ಗಾಯಗೊಂಡವರು. ಗಾಯಾಳುಗಳನ್ನು ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ವಾಹನದಲ್ಲಿದ್ದ ಪ್ರಯಾಣಿಕರೆಲ್ಲಾ ಜಾತ್ರಾ ವ್ಯಾಪಾರಿಗಳಾಗಿದ್ದು, ಕಳಸ ಜಾತ್ರೆ ಮುಗಿಸಿ ಮಂದಾರ್ತಿ ಜಾತ್ರೆಗೆ ಪ್ರಯಾಣಿಸುತ್ತಿದ್ದ ವೇಳೆ ಮಾಳ ಮುಳ್ಳೂರು ಘಾಟಿ ಕೆಳಗೆ ಪೆಟ್ರೋಲ್ ಬಂಕ್ ಬಳಿ ಬ್ರೇಕ್ ವೈಫಲ್ಯಕ್ಕೊಳಗಾಗಿ ವಾಹನ ಪಲ್ಟಿಯಾಗಿದೆ. ಅಪಘಾತದ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಕುರಿತಂತೆ ಭಾರಿ ಚರ್ಚೆ ನಡೆಯುತ್ತಿತ್ತು. ಇದೀಗ ಈ ಒಂದು ವಿಚಾರಕ್ಕೆ ಪುಷ್ಟೀಕರಣ ನೀಡುವಂತೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸುಳಿವು ನೀಡಿದ್ದು ಕಳೆದ ಹಲವು ದಿನಗಳಿಂದ ಬೇರೆ ರಾಜ್ಯಗಳಲ್ಲಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಲಾಗಿದ್ದು, ಮುಂದಿನ 8 ದಿನದಲ್ಲಿ ರಾಜ್ಯಗಳ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಕ್ರಿಯೆ ಮುಗಿಯಲಿದೆ ಎಂದು ಸುಳಿವು ನೀಡಿದ್ದಾರೆ. ಕಲ್ಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಡಿಸ್ಸಾದಲ್ಲಿ ಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಪಿಸಿಸಿ ಅಧ್ಯಕ್ಷರಾಗಿದ್ದಾರೆ. ಬೇರೆ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಅಧ್ಯಕ್ಷರ ಬದಲಾವಣೆ ಆಗುತ್ತದೆ. ಈ ಬಗ್ಗೆ ನಿರ್ದಿಷ್ಟವಾಗಿ ನಾನು ಹೇಳಲು ಆಗುವುದಿಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದೇವೆ. ಒಂದೆರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುತ್ತೇವೆ 8 ದಿನಗಳಲ್ಲಿ…
ಮುಂಬೈ : ಉಸಿರಾಟ ಅಥವಾ ಜೀರ್ಣಾಂಗ ವ್ಯೂಹದ ಸೋಂಕಿನಿಂದ ಉಂಟಾಗುವ ಗಿಲೈನ್-ಬ್ಯಾರೆ ಸಿಂಡ್ರೋಮ್ (ಜಿಬಿಎಸ್) ಎಂಬ ವ್ಯಾಧಿಯಿಂದ ಮಹಾರಾಷ್ಟ್ರದ ಪುಣೆಯಲ್ಲಿ 100ಕ್ಕೂ ಹೆಚ್ಚು ಮಂದಿ ಬಳಲುತ್ತಿದ್ದಾರೆ. ಈ ಸೋಂಕಿಗೆ ಕಳೆದ ಜನವರಿ 28 ರಂದು ಸೋಲಾಪುರದಲ್ಲಿ ಒಬ್ಬ ವ್ಯಕ್ತಿ ಬಿಳಿಯಾಗಿದ್ದರು ಇದೀಗ ಮುಂಬೈನಲ್ಲಿ ಮತ್ತೊರ್ವ ವ್ಯಕ್ತಿ ಸಾವನಪ್ಪಿದ್ದಾರೆ. ಹೌದು ಮಹಾರಾಷ್ಟ್ರದಲ್ಲಿ ಕಳೆದ ಹಲವು ದಿನಗಳಿಂದ ಹಲವಾರು ಜನರು ಈ ಒಂದು ಜಿಬಿಎಸ್ ವೈರಸ್ ನಿಂದ ಬಳಲುತ್ತಿದ್ದಾರೆ. ಕಳೆದ ಜನವರಿ 28ರಂದು ಸೊಲ್ಲಾಪುರದಲ್ಲಿ ಇದೆ ಬಿಜಿಎಸ್ ವೈರಸ್ ನಿಂದಾಗಿ ಮೊದಲ ಪ್ರಾಣ ಹೋಗಿದ್ದು, ಇದೀಗ ಮುಂಬೈನಲ್ಲಿ ಜಿಬಿಎಸ್ ವೈರಸ್ ನಿಂದ ಬಳಲುತ್ತಿದ್ದ 53 ವರ್ಷದ ವ್ಯಕ್ತಿಯೊರ್ವರು ಇದೀಗ ಸಾವನಪ್ಪಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ರೋಗ ಲಕ್ಷಣಗಳು ಕೈ ಕಾಲುಗಳಲ್ಲಿ ಜೋಮು ಹಿಡಿಯುವುದು, ಶಕ್ತಿಹೀನತೆ (ದೌರ್ಬಲ್ಯ) ಮತ್ತು ಪಾರ್ಶ್ವವಾಯು ಮುಂತಾದವು ಜಿಬಿಎಸ್ನಿಂದ ಉಂಟಾಗಬಹುದು. ಈ ಲಕ್ಷಣಗಳು ಕಾಲುಗಳಿಂದ ಪ್ರಾರಂಭವಾಗಿ ದೇಹದ ಮೇಲ್ಭಾಗಕ್ಕೆ ವಿಸ್ತರಿಸುತ್ತದೆ. ವಾಕರಿಕೆ, ವಾಂತಿ, ಹೊಟ್ಟೆನೋವು, ಅತಿಸಾರ ಆರಂಭಿಕ ಲಕ್ಷಣಗಳಾಗಿದ್ದು, ಗಂಭೀರ…
ಉಡುಪಿ : ಇತ್ತೀಚಿಗೆ ಹೃದಯಾಘಾತ ಎನ್ನುವುದು ಸಹಜ ಕಾಯಿಲೆ ಎಂಬಂತಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಕೂಡ ಈ ಒಂದು ಹೃದಯಘಾತ ಕಾಯಿಲೆ ಸಾಮಾನ್ಯವಾಗಿದೆ. ದಿಗ ಉಡುಪಿ ಜಿಲ್ಲೆಯ ಪಡುಬಿದರೆಯಲ್ಲಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹಠಾತ್ ಹೃದಯಾಘಾತವಾಗಿದೆ. ತಕ್ಷಣ ಬಸ್ ಅನ್ನೋ ರಸ್ತೆ ಪಕ್ಕ ಇಳಿಜಾರಿಗೆ ಇಳಿಸಿ ಪ್ರಯಾಣಿಕರ ಪ್ರಾಣ ಚಾಲಕ ಕಾಪಾಡಿದ್ದಾನೆ. ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ ನ ಚಾಲ ಕ ಶಂಭು ಎಂಬವರಿಗೆ ಹಠಾತ್ ಎದೆನೋವು ಕಾಣಿಸಿಕೊಂಡು ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗಿಳಿದು ನಿಂತ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಕೂಡಲೇ ಬಸ್ ಚಾಲಕ ಹಾಗೂ ಗಾಯಗೊಂಡಿದ್ದ ಕೆಲ ಪ್ರಯಾಣಿಕರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬೆಂಗಳೂರು : ಶಿವಮೊಗ್ಗ ಜಲಿಯಲ್ಲಿ ನಿನ್ನೆ ಆ ಮರಳು ಮಾಫಿಯಾ ಘಟನಾ ಸ್ಥಳಕ್ಕೆ ತೆರಳಿದ ವೇಳೆ ಗಣಿ ಮತ್ತು ಮಗುವಿಜ್ಞಾನ ಇಲಾಖೆ ಮೇಳಾಧಿಕಾರಿಗೆ ಶಾಸಕ ಸಂಗಮೇಶ್ ಪುತ್ರ ಬಸವೇಶ್ ಬೆದರಿಕೆ ಹಾಗೂ ಅವಾಚೆ ಪದಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನ ಸಚಿವ ಜಿ ಪರಮೇಶ್ವರ್ ಮಹಿಳಾಧಿಕಾರಿಗೆ ಸಂಗಮೇಶ್ ಪುತ್ರ ಬೆದರಿಕೆ ಹಾಕಿದ್ದು ನಿಜವಾದರೆ ಬಸವೇಶ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಈ ಪ್ರಕರಣ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಅಧಿಕಾರಿಗೆ ಸಂಗಮೇಶ್ ಪುತ್ರನಿಂದ ನಿಂದನೆ ಆರೋಪದ ಕುರಿತಾಗಿ ಸಂಗಮೇಶ್ ಪುತ್ರ ಬೆದರಿಕೆ ಹಾಕಿರುವುದು ಗೊತ್ತಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಆದೇಶ ಆಗಿದೆ ಎಂದರು. ಆದಷ್ಟು ಬೇಗ ಪ್ರಕರಣದ ತನಿಖೆಯ ವರದಿ ಬರಲಿದೆ ವರದಿಯ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಉದಯಗಿರಿ ಠಾಣೆ ಕೇಸ್ ವಿಚಾರವಾಗಿಯೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ನಮಗೆ ಸಿಕ್ಕಿರುವಂತಹ ವಿಡಿಯೋವನ್ನು ಆಧರಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಇನ್ನು…