Author: kannadanewsnow05

ದಕ್ಷಿಣಕನ್ನಡ : ಕೊರೊನ ನಂತರ ರಾಜ್ಯದಲ್ಲಿ ಹಲವು ಅಪಾಯಕಾರಿ ವೈರಸ್ ಗಳು ಬಂದು ಹೋಗಿವೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ವೈರಸ್ ಹರಡಿದ್ದು ದಕ್ಷಿಣ ಕನ್ನಡದ ಒಂದೇ ಶಾಲೆಯಲ್ಲಿ ಒಟ್ಟು 17 ಮಕ್ಕಳಲ್ಲಿ ಚಿಕನ್ ಪಾಕ್ಸ್ ವೈರಸ್ ಪತ್ತೆಯಾಗಿದೆ. ಚಿಕನ್ ಪಾಕ್ಸ್ ಮಕ್ಕಳಲ್ಲಿ, ಯಾವುದೇ ತೊಂದರೆ ಇಲ್ಲದೇ ಸಂಪೂರ್ಣವಾಗಿ ಗುಣವಾಗುತ್ತದೆ. ಒಮ್ಮೆ ಚಿಕನ್ ಪಾಕ್ಸ್​ನಿಂದ ಬಳಲಿದ ವ್ಯಕ್ತಿ ಜೀವಿತಾವಧಿಯವರೆಗೂ ಅದರ ವಿರುದ್ಧ ರೋಗ ನಿರೋಧಕ ಶಕ್ತಿ ಹೊಂದುತ್ತಾನೆ. ಇದರಿಂದ ಒಮ್ಮೆ ಚಿಕನ್ ಪಾಕ್ಸ್ ಬಂದವರಿಗೆ ಜೀವಿತಾವಧಿಯಲ್ಲಿ ಮತ್ತೊಮ್ಮೆ ಯಾವತ್ತೂ ಬರುವುದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್‌.ಆರ್.ತಿಮ್ಮಯ್ಯ ತಿಳಿಸಿದರು. ಶಾಲಾ ಮಕ್ಕಳಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಭೀತಿ ಬೇಡ ಮುನ್ನೆಚ್ಚರಿಕೆ ಇರಲಿ. ಇದೊಂದು ಸಾಂಕ್ರಾಮಿಕ ಖಾಯಿಲೆಯಾದ್ದರಿಂದ ಯಾವುದೇ ಕಾರಣಕ್ಕೆ ಒಬ್ಬನಿಂದ ಮತ್ತೊಬ್ಬನಿಗೆ ಹರಡದಂತೆ ಜಾಗ್ರತೆ ವಹಿಸುವುದು ಅಗತ್ಯ. ಒಂದು ಬಾರಿ ಚಿಕನ್ ಪಾಕ್ಸ್ ಕಾಣಿಸಿಕೊಂಡರೆ ಗುಣಮುಖರಾಗಲು ಸುಮಾರು 2 ವಾರಗಳ ಸಮಯ ಬೇಕಾಗುತ್ತದೆ ಎಂದರು.

Read More

ಬೆಳಗಾವಿ : ಎಪಿಎಲ್ ಕಾರ್ಡ್‌ಗೆ ಮೊದಲು 15‌‌ ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಆದರೆ, ಅವರು ತೆಗೆದುಕೊಳ್ಳುತ್ತಿರಲಿಲ್ಲ. ಹೀಗಾಗಿ ಅದನ್ನು ನಿಲ್ಲಿಸಿದ್ದೆವು‌. ಬೇಡಿಕೆ ಬಂದರೆ APL ಪಡಿತರ ಚೀಟಿದಾರರಿಗೂ ಅಕ್ಕಿ‌ ಕೊಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೊಸ ಬಿಪಿಎಲ್ ಕಾರ್ಡ್ ಕಳೆದ ತಿಂಗಳು 30 ರಿಂದ ಅರ್ಜಿ ಹಾಕಲು ಅವಕಾಶ ಕೊಟ್ಟಿದ್ದೇವೆ. ಸಂಬಂಧಿಸಿದ ತಹಶೀಲ್ದಾರ್ ಅವರಿಗೆ ಅರ್ಜಿ ಹಾಕಿದರೆ ಅರ್ಹರಿಗೆ ಹೊಸ ಕಾರ್ಡ್ ಕೊಡಲು ತೀರ್ಮಾನಿಸಿದ್ದೇವೆ. ಈಗಾಗಲೇ 10 ಲಕ್ಷ ಅನರ್ಹರನ್ನು ಎಪಿಎಲ್‌ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದರು. ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಅಭಿವೃದ್ಧಿ ಕಾರ್ಯಗಳಿಗೂ ಕೂಡ ಸರ್ಕಾರದ ಬಳಿ ಯಾವುದೇ ಹಣದ ಕೊರತೆ ಇಲ್ಲ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್ ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ…

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿಯನ್ನು ಧ್ವಂಸ ಮಾಡಲಾಗಿದೆ ಎಂದು ವರದಿಯಾಗಿದೆ. ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ನಾಮಫಲಕ ಧ್ವಂಸ ಮಾಡಲಾಗಿದೆ. ಲೇಔಟ್ ನಿರ್ಮಾಣ ವೇಳೆ ಸಮಾಧಿಗೆ ಧಕ್ಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ನಟ ದರ್ಶನ್​​ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣ 2024ರ ಜೂನ್​​ ತಿಂಗಳಿನಲ್ಲಿ ರೇಣುಕಾಸ್ವಾಮಿಯನ್ನು ನಟ ದರ್ಶನ್ ಅಂಡ್‌ ಗ್ಯಾಂಗ್‌ ಕೊಲೆ ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಸದ್ಯ ರೇಣುಕಾಸ್ವಾಮಿ ಹತ್ಯೆ ಕೇಸ್​​ ವಿಚಾರವಾಗಿ ಪ್ರಮುಖ ಆರೋಪಿಗಳಾದ ನಟ ದರ್ಶನ್​​, ಪವಿತ್ರಾ ಸೇರಿ ಗ್ಯಾಂಗ್​​ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಖೈದಿಯಾಗಿ ಇದ್ದಾರೆ. ಇನ್ನೂ ನಾಳೆ ಡೆವಿಲ್ ಸಿನಿಮಾ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ದರ್ಶನ್‌ ಅವರನ್ನು ನೋಡಲು ಕಾಯುತ್ತಿದ್ದಾರೆ. ಈಗಾಗಲೇ ಅಭಿಮಾನಿಗಳು ಸಿನಿಮಾದ ಪ್ರಚಾರವನ್ನು ಅದ್ದೂರಿಯಾಗಿ ಆಗಮಿಸಲಿದ್ದು, ನಾಳೆ ಖುದ್ದು ದರ್ಶನ್ ಪತ್ನಿ ವಿಜಯಲಕ್ಸಮಿಯವರು ಅಭಿಮಾನಿಗಳ ಜೊತೆಗೆ ನರ್ತಕಿ ಸಿನಿಮಾ ಮಂದಿರದಲ್ಲಿ ನೋಡಲಿದ್ದಾರೆ ಎನ್ನಲಾಗಿದೆ. ಇನ್ನೂ ಜೈಲಿನಲ್ಲಿ ದರ್ಶನ್‌ ತಮ್ಮ ಸಹಚರರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪಕ್ಕೆ ದರ್ಶನ್ ಪತ್ನಿ ಆರೋಪವನ್ನು…

Read More

ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರು ಡ್ರಗ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ನೈಜರಿಯಾ ಮೂಲದ ಒಬಿಜೆಸಿ ಚಿಗೋಜೈ ದಾವಿ, ಸನಿ ಸಾದಿಕ್, ಬೆಂಗಳೂರಿನ ಮೊಹಮ್ಮದ್ ಮುಸ್ತಫಾ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಆರೋಪಿಗಳಿಂದ 4.20 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಬಾಗಲೂರು, ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದರು. ಪರಿಚಯಸ್ಥರು, ವಿದ್ಯಾರ್ಥಿಗಳು IT-BT ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಬಾಗಲೂರು ವ್ಯಾಪ್ತಿಯಲ್ಲಿ 1 ಕೆಜಿ 20 ಗ್ರಾಂ MDMA, ಅಶೋಕನಗರದಲ್ಲಿ 2 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಸೀಜ್ ಮಾಡಿದ್ದಾರೆ. ಒಟ್ಟು 4.20 ಕೋಟಿ ಮೌಲ್ಯದ ಡ್ರಗ್ ಸೀಜ್ ಮಾಡಿದ್ದಾರೆ.

Read More

ಗುಜರಾತ್ : ದೆಹಲಿಯಲ್ಲಿ ಈ ಹಿಂದೆ ನಿರ್ಭಯಾ ಮೇಲೆ ಅತ್ಯಾಚಾರ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಗುಜರಾತ್ ನಲ್ಲಿ ಅದೇ ರೀತಿಯಲ್ಲಿ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಘಟನೆ ವರದಿಯಾಗಿದೆ. ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಖಾಸಗಿ ಭಾಗಕ್ಕೆ ರಾಡ್ ಸೇರಿಸಿ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಸದ್ಯ ಆರೋಪಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಯಾದಗಿರಿ : ಯಾದಗಿರಿಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ಸರ್ಕ್ಯೂಟ್‌ನಿಂದ ಕಾಟನ್ ಮಿಲ್‌ನಲ್ಲಿ ಬೆಂಕಿ ಹೊತ್ತಿಕೊಂಡು 1 ಕೋಟಿ ರೂ. ಮೌಲ್ಯದ 60 ಟನ್‌ಗೂ ಅಧಿಕ ಕಾಟನ್ ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪುರ ಸಮೀಪದಲ್ಲಿ ನಡೆದಿದೆ. ಕಾಟನ್ ಮಿಲ್‌ನಲ್ಲಿ ಕೆಲ ಯಂತ್ರಗಳು ಸುಟ್ಟು ಹೋಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ, ಭೇಟಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಒಂದು ಮಿಲ್ ಸಾಹೇಲ್‌ಗೆ ಎಂಬುವವರಿಗೆ ಸೇರಿದ್ದ ಸಾದ್ಯಪುರ ಗ್ರಾಮದ ಸಮೀಪದ ಶ್ರೀ ಲಕ್ಷ್ಮಿ ಬಾಲಾಜಿ ಕಾಟನ್ ಮಿಲ್‌ನಲ್ಲಿ ವಿದ್ಯುತ್ ಶಾರ್ಟ್ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಬೆಂಕಿ ಕೆನ್ನಾಲಿಗೆಗೆ ಧಗಧಗನೆ ಕಾಟನ್ ಹೊತ್ತಿ ಉರಿದಿದ್ದು, 1 ಕೋಟಿ ರೂ. ಮೌಲ್ಯದ 60 ಟನ್‌ಗೂ ಅಧಿಕ ಕಾಟನ್ ಬೆಂಕಿಗಾಹುತಿಯಾಗಿದೆ.

Read More

ಬೆಂಗಳೂರು : ಲೈಂಗಿಕ ಸಮಸ್ಯೆಗೆ ಪರಿಹಾರ ನೀಡೋದಾಗಿ ಟೆಕ್ಕಿಗೆ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಲ್ಲಿ ನಕಲಿ ಗುರೂಜಿಯನ್ನು ಜ್ಞಾನ ಭಾರತಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ವಿಜಯ್ ಚಿತ್ತೋಡಿಯ ಎಂದು ತಿಳಿದುಬಂದಿದೆ. ವಿಜಯ್ ಸಹಚರ ಮನೋಜ್ ಸಿಂಗ್ ಚಿತ್ತೋಡಿಯ ಸಹ ಕೂಡ ಇದೀಗ ಅರೆಸ್ಟ್ ಆಗಿದ್ದಾನೆ. ಬಂಧಿತ ಆರೋಪಿಗಳು ಮೂಲತಃ ಗುಜರಾತ್ ಮೂಲದವರು ಎಂದು ತಿಳಿದುಬಂದಿದೆ.ತುಮಕೂರು ಸೇರಿದಂತೆ ಒಟ್ಟು 8 ಕಡೆ ಟೆಂಟ್ ಗಳನ್ನು ಹೊಂದಿದ್ದರು. ವೈದ್ಯಕೀಯ ಸಮಸ್ಯೆಗಳಿಗೆ ಪರಿಹಾರ ಕೊಡೋದಾಗಿ ಹೇಳಿ ವಂಚನೆ ಎಸಗಿದ್ದಾರೆ. ಲೈಂಗಿಕ ಸಮಸ್ಯೆ ಎಂದು ಹೋಗಿದ್ದೆ ಟೆಕ್ಕಿಗೆ 40 ಲಕ್ಷ ವಂಚನೆ ಮಾಡಿದ್ದಾರೆ. ನಂತರ ಇವರೆಲ್ಲರೂ ಸಹ ನಕಲಿ ಸ್ವಾಮೀಜಿ ಎಂದು ಗೊತ್ತಾಗಿದೆ. ಈ ಕುರಿತು ಜ್ಞಾನ ಭಾರತಿ ಠಾಣೆಗೆ ಟೆಕ್ಕಿ ದೂರು ನೀಡಿದ್ದಾರೆ. ತೆಲಂಗಾಣ ಮೆಹಬೂಬ್ ನಗರದಲ್ಲಿ ವಿಜಯ್ ನನ್ನ ಅರೆಸ್ಟ್ ಮಾಡಿದ್ದಾರೆ. ಸೈಬರಾಬಾದ್ ನಲ್ಲಿ ಮನೋಜ್ ನನ್ನ ಬಂಧಿಸಲಾಗಿದೆ. 40 ಲಕ್ಷದಲ್ಲಿ 19.5 ಲಕ್ಷ ಹಣವನ್ನು ವಶಕ್ಕೆ ಪಡೆದಿದ್ದಾರೆ. ಒಂದು ಟಿಟಿ ವಾಹನ…

Read More

ಬೆಳಗಾವಿ : ಧರ್ಮಸ್ಥಳ ವಿರುದ್ಧ ಷಡ್ಯಂತರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ನವೆಂಬರ್ 21ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಪ್ರಾಥಮಿಕ ತನಿಕ ವರದಿ ಸಲ್ಲಿಸಿತ್ತು ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಧರ್ಮಸ್ಥಳ ಪ್ರಕರಣದ ಚಾರ್ಜ್ ಶೀಟ್ ನಾನು ನೋಡಿಲ್ಲ ಎಂದು ತಿಳಿಸಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆಗಿರುವ ವಿಚಾರವಾಗಿ ಎಸ್ ಐ ಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿದ್ದೀರಿ. ಈಗ ಷಡ್ಯಂತರ ನಡೆಸಿದ ಆರು ಆರೋಪಿಗಳು ಶಾಮೀಲು ಆಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಧರ್ಮಸ್ಥಳದ ಚಾರ್ಜ್ ಶೀಟ್ ನಾನು ಇದುವರೆಗೂ ನೋಡಿಲ್ಲ ಎಂದು ತಿಳಿಸಿದರು. CLP ಸಭೆಯಲ್ಲಿ ಏನೆಲ್ಲಾ ವಿಷಯಗಳ ಬಗ್ಗೆ ಚರ್ಚೆ ಆಯ್ತು ಎಂದು ಕೇಳಿದಾಗ ಎಲ್ಲವನ್ನು ನಿಮಗೆ ಹೇಳಲು ಆಗುತ್ತಾ ಎಂದು ಪ್ರಶ್ನಿಸಿದರು.

Read More

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. 3,923 ಪುಟಗಳ ಪ್ರಾಥಮಿಕ ವರದಿ ಸಲ್ಲಿಸಿದೆ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ. ಕಳೆದ ನವೆಂಬರ್ 21ರಂದು ಎಸ್ಐಟಿ ವರದಿ ಸಲ್ಲಿಸಿದೆ. ಒಟ್ಟು 6 ಜನರ ವಿರುದ್ಧ ಷಡ್ಯಂತ್ರ ಆರೋಪ ಸಾಬೀತು ಆಗಿದ್ದು ಸದನದಲ್ಲಿ ಇಂದು ಧರ್ಮಸ್ಥಳ ಪ್ರಕರಣದ ಬಗ್ಗೆ ಪ್ರಸ್ತಾಪ ಆಗುವ ಸಾಧ್ಯತೆ ಇದೆ. ಮಾಸ್ಕ್ ಮ್ಯಾನ್ ಚಿನ್ನಯ, ಮಹೇಶ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಟಿ.ಜಯಂತ, ವಿಠಲ್ ಗೌಡ ಹಾಗೂ ಸುಜಾತ ಭಟ್ ವಿರುದ್ಧ ಎಸ್ಐಟಿ ಪ್ರಾಥಮಿಕ ವರದಿ ಸಲ್ಲಿಕೆ ಆಗಿತ್ತು. ಜಿತೇಂದ್ರ ಕುಮಾರ್ ದಯಾಮ ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಪ್ರಾಥಮಿಕ ವರದಿ ಸಲ್ಲಿಕೆ ಮಾಡಿದರು ಜಿತೇಂದ್ರ ಮುಖ್ಯ ತನಿಖಾಧಿಕಾರಿಯಾಗಿದ್ದರು ಮಾಸ್ಕ ಮ್ಯಾನ್ ಚಿನ್ನಯ್ಯ ಹೇಳಿದಂತೆ ಪ್ರಕರಣದ ಕುರಿತು ಏನೆಲ್ಲ ಆಯ್ತು ಅನ್ನುವುದು, ಒಂದಷ್ಟು ಕಡೆ ಮೂಳೆ ಹಾಗೂ ಇತರೆ ಭಾಗಗಳು ಸಿಕ್ಕಿದ್ದವು ಇದರ ಹಿಂದೆ ದೊಡ್ಡ ಷಡ್ಯಂತ್ರ ಇತ್ತು ಎನ್ನುವುದು ತನಿಖೆಯ ಒಂದೊಂದೆ…

Read More

ಬೆಳಗಾವಿ : ಅನುದಾನ ಬಿಡುಗಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಹಣ ಬೇಗ ಬಿಡುಗಡೆ ಮಾಡುವಂತೆ ಶಾಸಕರು ಕೇಳಿದ್ದರು. ನಮ್ಮ ಕಡೆ ಗಮನ ಇರಲಿ ಅಂತ ಎಂಎಲ್‌ಸಿ ಗಳು ಹೇಳಿದ್ದರು . ಬೇಗ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಬೆಳಗಾವಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅನುದಾನ ಬಿಡುಗಡೆ ವಿಚಾರವಾಗಿ ಎಂ ಎಲ್ ಸಿ ಗಳು ಹೇಳಿದ್ದರು ನಮ್ಮ ಕಡೆ ಗಮನ ಇರಲಿ ಅಂತ ಹೇಳಿದ್ದರು ಹಾಗಾಗಿ ಆದಷ್ಟು ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕ್ಯಾಬಿನೆಟ್ ನಲ್ಲಿ ಅನುದಾನದ ಬಗ್ಗೆ ಚರ್ಚೆ ಇದ್ದೇ ಇರುತ್ತದೆ. ಹಾಗಾಗಿ ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

Read More