Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ತಾನೇ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ಇದಂತಹ ಪ್ರಕರಣ ಸುಖಾಂತ್ಯಗೊಂಡಿತ್ತು. ಆದರೆ ಇದೀಗ ಐಪಿಎಸ್ ಅಧಿಕಾರಿ ರೂಪ ವಿರುದ್ಧ ಮಹಿಳಾ ಡಿಐಜಿ ಒಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಹೌದು ಈ ಹಿಂದೆ ಹಿರಿಯ ಅಧಿಕಾರಿಗಳ ಮುಂದೆಯೇ ಸಭೆ ಕೊಠಡಿಯಲ್ಲಿ ಗಲಾಟೆ ಮಾಡಿಕೊಂಡಿದ್ದ ಐಎಸ್ಡಿ ಐಜಿಪಿ ರೂಪಾ ಮೌದ್ಗಿಲ್ ಮತ್ತು ಡಿಐಜಿ ವರ್ತಿಕಾ ಕಟಿಯಾರ್ ಸುದ್ದಿ ಆಗಿದ್ರು. ಈಗ ಒಂದು ಹಂತ ಮುಂದೆ ಹೋಗಿದ್ದು ಐಜಿಪಿ ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ. ರೂಪಾ ಅವರು ನನ್ನ ಕೊಠಡಿಯಲ್ಲಿ ಕೆಳಹಂತದ ಸಿಬ್ಬಂದಿ ಬಳಸಿಕೊಂಡು ದಾಖಲೆ ಕಳವು ಮಾಡಿಸಿದ್ದಾರೆ. ಆ ದಾಖಲೆಗಳನ್ನು ನಕಲಿ ಮಾಡಿ ನನ್ನ ವಿರುದ್ಧ ಷಡ್ಯಂತ್ರ ಹೇರುವ ಸಾಧ್ಯತೆ ಇದೆ. ವಾಟ್ಸಪ್ ಮೂಲಕ ಫೋಟೋ ತೆಗೆಸಿದ್ದಾರೆ, ಕಂಟ್ರೋಲ್ ರೂಮ್ನಿಂದ ಕೀ ತಂದು ಕೊಠಡಿ ತೆರೆಯಲಾಗಿದೆ. ದುರುದ್ದೇಶದಿಂದ…
ಬೆಂಗಳೂರು : ಒಂದು ಕಡೆ ಇಶಾ ಫೌಂಡೇಶನ್ ಶಿವರಾತ್ರಿ ನಿಮಿತ್ಯ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಅಮಿತ್ ಶಾ ಜೊತೆಗೆ ವೇದಿಕೆಯಲ್ಲಿ ಭಾಗವಹಿಸಿದ್ದರಿಂದ ಡಿಕೆ ಶಿವಕುಮಾರ್ ಬಿಜೆಪಿಗೆ ಸೇರುತ್ತಿದ್ದಾರೆ ಎಂಬ ವದಂತಿಗಳು ಹರಡಿದ್ದು ಇನ್ನೊಂದು ಕಡೆ ಬಿಜೆಪಿಯ ಹಲವು ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂದು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕವಾದ ಹೇಳಿಕೆ ನೀಡಿದ್ದು, ಹಲವು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಸಾಕಷ್ಟು ಬಿಜೆಪಿ ಶಾಸಕರು ನಮ್ಮನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಸ್ಪೋಟಕ ವಾದಂತಹ ಹೇಳಿಕೆಯನ್ನು ನೀಡಿದ್ದಾರೆ. ಈ ಬಗ್ಗೆ ನಾನು ನಮ್ಮ ಪಕ್ಷದಲ್ಲಿ ಚರ್ಚೆ ಮಾಡಿದ್ದೇನೆ. ನಮ್ಮ ಸಚಿವರು ಕೂಡ ಸಂಪರ್ಕದ ಬಗ್ಗೆ ಚರ್ಚಿಸಿದ್ದಾರೆ.ಆದರೆ ನಾನು ಯಾವುದನ್ನು ಬಹಿರಂಗ ಮಾಡುವುದಿಲ್ಲ.ಬಿಜೆಪಿ ಒಡೆದ ಮನೆಯಾಗಿದ್ದು, ಕಾಂಗ್ರೆಸ್ ಒಗ್ಗಟ್ಟಿನ ಮನೆಯಾಗಿದೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ…
ಚಿಕ್ಕಬಳ್ಳಾಪುರ : ಒಡವೆ ಅಡವಿಟ್ಟುಕೊಂಡು ಮಾವನಿಗೆ ಅಳಿಯ ಸಾಲ ನೀಡಿದ್ದ, ಆದರೆ ಸಾಲ ಹಿಂದಿರುಗಿಸಲು ವಿಳಂಬವಾಗಿದ್ದಕ್ಕೆ ಮಾವನಾಗೆ ಕಲ್ಲಿನಿಂದ ಹೊಡೆದು ಆತನ ಮೇಲೆ ಕಾರು ಹತ್ತಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ, ಮಾವ ಶ್ರೀನಿವಾಸನನ್ನು ಹತ್ಯೆಗೈದಿದ್ದ ಅಳಿಯ ಬಾಲಕೃಷ್ಣ ಅರೆಸ್ಟ್ ಆಗಿದ್ದಾನೆ. ಹೌದು ಕೊಲೆಯಾದ ಶ್ರೀನಿವಾಸ್ ಮಗಳನ್ನ ಬಾಲಕೃಷ್ಣ ಮದುವೆಯಾಗಿದ್ದ. ಪತ್ನಿಯ ಒಡವೆ ಅಡವಿಟ್ಟು 4. 50 ಲಕ್ಷ ಸಾಲ ನೀಡಿದ್ದ.ಕೊಲೆಯಾದ ಶ್ರೀನಿವಾಸಗೆ ಆರೋಪಿ ಬಾಲಕೃಷ್ಣ ಸಾಲ ನೀಡಿದ್ದ. ಸಾಲ ಹಿಂದಿರುಗಿಸದ ಕಾರಣ ಒಡವೆ ಬಿಡಿಸಿಕೊಳ್ಳಲು ಆಗಿರಲಿಲ್ಲ. ಪತ್ನಿ ಹರ್ಷಿತಾಗೆ ಗೊತ್ತಾಗದೆ ಮಾವನಿಗೆ ಆರೋಪಿ ಹಣ ನೀಡಿದ್ದ. ಇದೇ ವಿಚಾರಕ್ಕೆ ಶ್ರೀನಿವಾಸ್ ಮತ್ತು ಬಾಲಕೃಷ್ಣ ನಡುವೆ ಜಗಳವಾಗಿತ್ತು. ಈ ವೇಳೆ ಕಲ್ಲಿನಿಂದ ಶ್ರೀನಿವಾಸ್ಗೆ ಬಾಲಕೃಷ್ಣ ಹೊಡೆದಿದ್ದ. ನೆಲಕ್ಕೆ ಬಿದ್ದ ಶ್ರೀನಿವಾಸ್ ಮೇಲೆ ಕಾರು ಹತ್ತಿಸಿ ಪರಾರಿಯಾಗಿದ್ದ. ಫೆಬ್ರವರಿ 28ರಂದು ಮಾವ ಶ್ರೀನಿವಾಸ್ನನ್ನು ಬಾಲಕೃಷ್ಣ ಕೊಲೆ ಮಾಡಿದ್ದ. ಇದೀಗ ಆರೋಪಿ…
ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆಯನ್ನು ಖಂಡಿಸಿ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದವು. ಇದೆ ವೇಳೆ 7, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಹಾಗಾಗಿ ಕರ್ನಾಟಕ ಬಂದ್ ಸದ್ಯಕ್ಕೆ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾರ್ಚ್ 22ಕ್ಕೆ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಬಂದ್ಗೆ ಬೆಂಬಲ ಕೊಡಲು ಕರವೇ ಅಧ್ಯಕ್ಷ ನಾರಾಯಣಗೌಡ ಬಣ ಸೇರಿದಂತೆ ಹಲವು ಕನ್ನಡ ಸಂಘಟನೆಗಳು ಹಿಂದೇಟು ಹಾಕಿವೆ.ಕೇವಲ ನೈತಿಕ ಬೆಂಬಲ ನೀಡುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ತಿಳಿಸಿವೆ. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಮಾತುಗಳು ಕೇಳಿಬಂದ ಹಿನ್ನೆಲೆ ಬಂದ್ ಗೆ ಕರೆ ನೀಡಿರುವ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ . ಸಭೆಯಲ್ಲಿ ಬಂದ್ ದಿನಾಂಕ ಬದಲಾಗುವ ಸಾಧ್ಯತೆ…
ಕೊಪ್ಪಳ : ಚಲಿಸುತ್ತಿದ್ದ KSRTC ಬಸ್ಸಿನ ಟೈಯರ್ ಏಕಾಏಕಿ ಸ್ಪೋಟಗೊಂಡಿದೆ. ಆದರೆ ಈ ವೇಳೆ ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಿದೆ. ಈ ಘಟನೆಗೆ ಕೆಲವೇ ನಿಮಿಷ ಮುನ್ನ ಇದೇ ರಸ್ತೆಯಲ್ಲಿ ಸಚಿವ ಶಿವರಾಜ ತಂಗಡಗಿ ಹಾಗೂ ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್ ತೆರಳಿದ್ದರು ಎನ್ನಲಾಗಿದೆ. ಗಂಗಾವತಿ ಸಾರಿಗೆ ಘಟಕಕ್ಕೆ ಸೇರಿದ ಬಸ್ ಕೊಪ್ಪಳದಿಂದ ಗಂಗಾವತಿಯತ್ತ ಸಂಚರಿಸುತ್ತಿದ್ದಾಗ ಮುಂದಿನ ಚಕ್ರ ಸ್ಫೋಟಗೊಂಡಿದೆ. ಚಾಲಕ ಮಂಜುನಾಥ ಗಾಣಿಗೇರ ತಕ್ಷಣ ಬಸ್ಸನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಪರಿಣಾಮ ಬಸ್ ಸುಮಾರು 100 ಮೀಟರ್ಗೂ ಹೆಚ್ಚು ತೆವಳಿಕೊಂಡು ಹೋಗಿ ನಿಂತಿದೆ. ಆದರೆ ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
BIG NEWS : ರಾಜ್ಯದಲ್ಲಿ ‘ಹಕ್ಕಿಜ್ವರ’ ಭೀತಿ : ಚಿಕನ್ ಗೆ ಡೋಂಟ್ ಕೇರ್ ಎನ್ನುತ್ತಿರುವ ಜನ, ಮಟನ್ ಗೆ ಫುಲ್ ಡಿಮ್ಯಾಂಡ್
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ಜನರು ಯಾವುದಕ್ಕೂ ಹೆದರದೆ ಚಿಕನ್ ಖರೀದಿಗೆ ಮುಗಿಬಿದ್ದಿದ್ದು ಇನ್ನೂ ಚಿಕ್ಕಬಳ್ಳಾಪುರದಲ್ಲಿ ಚಿಕನ್ ಕಡೆ ಮುಖ ಮಾಡದ ಜನರು, ಮಟನ್ ಖರೀದಿಯಲ್ಲಿ ತೊಡಗಿದ್ದಾರೆ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ 20 ರೂಪಾಯಿ ಚಿಕನ್ ರೇಟ್ ಕಡಿಮೆಯಾಗಿದ್ದು, ಮಟನ್ ಗೆ ಫುಲ್ ಡಿಮ್ಯಾಂಡ್ ಆಗಿದ್ದು ಮಟನ್ ಗೆ ಕೆಜಿಗೆ ರೂ.50 ಏರಿಕೆಯಾಗಿದೆ. ಹೌದು ಹಕ್ಕಿಜ್ವರ ಭೀತಿ ಹಿನ್ನೆಲೆ ಚಿಕನ್ ಬದಲು ಮಟನ್ ಗೆ ಮೊರೆ ಹೋದ ಜನರು. ಮಾಂಸ ಪ್ರೀಯರಿಂದ ಚಿಕನ್ ಬದಲು ಇದೀಗ ಮಟನ್ ಖರೀದಿ ಭರಾಟೆ ಜೋರಾಗಿದೆ. ಚಿಕನ್ ಬಗ್ಗೆ ಕೇಳಿದರೆ ಬೆಚ್ಚಿ ಬೀಳುತ್ತಿದ್ದಾರೆ ಚಿಕ್ಕಬಳ್ಳಾಪುರ ಜನತೆ. ಚಿಕನ್ ರೇಟ್ 20 ರೂ. ಇಳಿಕೆಯಾಗಿದ್ದು, ಅದೇ ರೀತಿಯಾಗಿ ಮಟನ್ ಬಲೆ ರೂ.50 ಏರಿಕೆಯಾಗಿದೆ. ಪ್ರತಿ ಕೆಜಿ ಚಿಕನ್ ಗೆ 20 ರೂಪಾಯಿ ಆಗಿದ್ದು ಪ್ರತಿ ಕೆಜಿ ಮಟನ್ ಗೆ ರೂ. 50 ಏರಿಕೆಯಾಗಿದೆ. ನಾಟಿ ಕೋಳಿಗಳನಂತು ಯಾರು ಕೂಡ ಕೇಳುತ್ತಿಲ್ಲ ಚಿಕನ್…
ಬೆಂಗಳೂರು : ಬೆಂಗಳೂರಲ್ಲಿ ಜನಸಂಖ್ಯೆ ಹೆಚ್ಚಾದಂತೆಲ್ಲ ಇದೀಗ ಸಂಚಾರ ದಟ್ಟಣೆ ಕೂಡ ಹೆಚ್ಚಾಗುತ್ತಿದೆ. ಕಂಪನಿಗಳಿಗೆ, ಸರ್ಕಾರಿ ಕಚೇರಿಗಳಿಗೆ ತೆರಳುವ ವೇಳೆ ಹಲವು ಬೈಕ್ ಸವಾರರು ಸಂಚಾರ ನಿಯಮ ಉಲ್ಲಂಘಿಸಿದ್ದಾರೆ. ಅದರಲ್ಲೂ ಇ ಕಾಮರ್ಸ್ ಬೈಕ್ ಸವಾರರಿಂದ ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಇದೀಗ ಪ್ರಕರಣ ದಾಖಲಾಗಿವೆ. ಹೌದು ಇ-ಕಾಮರ್ಸ್ ಬೈಕ್ ಸವಾರರಿಂದ ಸಂಚಾರ ನಿಯಮ ಉಲ್ಲಂಘನೆಯಾಗಿದ್ದು, ಫುಟ್ಪಾತ್ ನಲ್ಲಿ ಚಾಲನೆ 79 ಕೇಸ್, ನೋ ಎಂಟ್ರಿ 389 ಕೇಸ್, ಒನ್ ವೇ ಸಂಚಾರ 354 ಕೇಸ್, ನೋ ಪಾರ್ಕಿಂಗ್ 98 ಕೇಸ್, ಸಂಚಾರಕ್ಕೆ ಅಡಚಣೆ 148 ಕೇಸ್, ಹೆಲ್ಮೆಟ್ ರಹಿತ ಚಾಲನೆ ಮಾಡಿದ 582 ಜನರ ವಿರುದ್ಧ ಇದೀಗ ಕೇಸ್ ದಾಖಲಾಗಿದೆ. ಎಲೆಕ್ಟ್ರಿಕ್ ಬೈಕ್ ಗಳಿಂದಲೇ ಸಂಚಾರ ನಿಯಮ ಉಲ್ಲಂಘನೆ ಆಗಿದೆ ಎಂದು ತಿಳಿದುಬಂದಿದೆ.
ಕೊಪ್ಪಳ : ಸರ್ಕಾರದ ಖಜಾನೆ ತುಂಬಲು ರಾಜ್ಯದ ಜನತೆ ಸರ್ಕಾರಕ್ಕೆ ಸಹಕಾರ ನೀಡಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ನಾಡಿನ ಸಂಪತ್ತನ್ನು ವಾಮ ಮಾರ್ಗದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪ್ರತಿನಿತ್ಯವು ಗ್ಯಾರಂಟಿಗಳ ಭಜನೆ ಮಾಡುತ್ತಿದೆ. ಬೇರೆ ಏನನ್ನು ಕಾಂಗ್ರೆಸ್ ಸರ್ಕಾರದಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ಕೆಕೆಆರ್ಡಿಬಿಗೆ 5,000 ಕೋಟಿ ಕೊಡುತ್ತೇವೆ ಅಂತ ಹೇಳಿದ್ರು. ಇದುವರೆಗೂ ರಾಜ್ಯ ಸರ್ಕಾರ ನಯಾ ಪೈಸೆ ಹಣ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ನಾಡಿನ ಜನ ಸರ್ಕಾರದ ಖಜಾನೆ ತುಂಬಿಸಲು ಸಹಕಾರ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ. ಹಾಗಾದರೆ ಜನರ ತೆರಿಗೆ ಹಣ ಎಲ್ಲಿಗೆ ಹೋಗುತ್ತಿದೆ?ನಾಡಿನ ಸಂಪತ್ತು ವಾಮ ಮಾರ್ಗದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್…
ಬಳ್ಳಾರಿ : ರಾಜ್ಯದಲ್ಲಿ ಇದೀಗ ಹಕ್ಕಿಜ್ವರದಿಂದ ಜನರು ಭೀತಿಗೆ ಒಳಗಾಗಿದ್ದು ಇದೀಗ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕುರೇಕುಪ್ಪದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬೆನ್ನಲ್ಲೇ ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮದ ಕೋಳಿ ಫಾರಂವೊಂದರಲ್ಲಿ ಒಂದೇ ವಾರದಲ್ಲಿ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಹೌದು ಕಳೆದ ಒಂದು ವಾರದಲ್ಲಿ ಒಂದೇ ಕೋಳಿ ಫಾರಂನಲ್ಲಿ ಸುಮಾರು 8,000ಕ್ಕೂ ಅಧಿಕ ಕೋಳಿಗಳು ಸಾವನ್ನಪ್ಪಿದ್ದು ಹಕ್ಕಿಜ್ವರದಿಂದ ಸಾವನ್ನಪ್ಪಿರಬಹುದು ಎಂದು ಇದೀಗ ಶಂಕೆ ವ್ಯಕ್ತಪಡಿಸಲಾಗಿದೆ.ರವಿ ಎಂಬವರಿಗೆ ಸೇರಿದ ಫಾರಂನಲ್ಲಿ ಮೊದಲು 15 ಸಾವಿರ ಕೋಳಿಗಳಿದ್ದವು. ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಇದೀಗ 7 ಸಾವಿರ ಕೋಳಿಗಳು ಮಾತ್ರ ಉಳಿದಿವೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕೋಳಿಗಳು ಸಾಯುವ ಸಾಧ್ಯತೆಗಳಿವೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟ ಕೋಳಿಗಳ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಅದನ್ನು ಭೋಪಾಲ್ನಲ್ಲಿರುವ ರಾಷ್ಟ್ರೀಯ ಉನ್ನತ ಭದ್ರತಾ ಪ್ರಾಣಿ ರೋಗಗಳ ಸಂಸ್ಥೆಗೆ ರವಾನಿಸಿ ಪರೀಕ್ಷೆ ಮಾಡಿಸಲಾಗುತ್ತದೆ. ಮಂಗಳವಾರದ ವೇಳೆಗೆ ವರದಿ ಬರಬಹುದು.…
ಬೆಂಗಳೂರು : ನಿನ್ನೆ ನಡೆದ 16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು, ಮೇಕೆದಾಟು ಪಾದಯಾತ್ರೆಯ ವೇಳೆ ಚಿತ್ರರಂಗದ ಯಾವ ಕಲಾವಿದರು, ನಿರ್ಮಾಪಕ, ನಿರ್ದೇಶಕರು ಬೆಂಬಲ ನೀಡಲಿಲ್ಲ. ನಿಮ್ಮ ಕಾರ್ಯಕ್ರಮಕ್ಕೆ ನೀವೇ ಬರೆದಿದ್ದರೆ ಹೇಗೆ? ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎಂಬುದು ನಮಗೆ ಗೊತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಆರ್ ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ ಎಂದು ವಾಗ್ದಾಳಿ ನಡೆಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಕಿಡಿ ಕಾರಿರುವ ಅಶೋಕ್ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ.ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು…













