Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ನಿನ್ನೆ ಒಂದೇ ದಿನದಲ್ಲಿ ಸುಮಾರು 7 ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಬಾರ್, ಕಿರಾಣಿ ಅಂಗಡಿ, ಮೆಡಿಕಲ್ ಶಾಪ್ ನಲ್ಲಿ ಕಳ್ಳತನ ನಡೆದಿದೆ. ಸುಮಾರು 7 ಕಡೆ ಕಳ್ಳತನ ನಡೆದಿದೆ ಅಂಗಡಿಗಳ ಶೆಟರ್ ಮುರಿದು ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ದೋಚಿದ್ದಾರೆ. ಸುರಪುರ ಪಟ್ಟಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಲೇ ಇವೆ.ಕುಂಬಾರಪೇಟೆ, ಹಸನಾಪುರ ಗಾಂಧಿವೃತ್ತ ಸೇರಿದಂತೆ ಹಲವಡೆ ಕಳ್ಳತನ ನಡೆದಿದೆ. ಕಳೆದ ಮೂರು ತಿಂಗಳ ಹಿಂದೆ ದೇವಾಪುರ ಗ್ರಾಮದಲ್ಲೂ ಮನೆ ಕಳ್ಳನ ನಡೆದಿತ್ತು.ಅಲ್ಲದೇ ಎರಡು ತಿಂಗಳ ಹಿಂದೆ ಸುರಪುರದ ಗಾಂಧಿ ವ್ರತದಲ್ಲಿ ಮತ್ತೊಮ್ಮೆ ಕಳ್ಳತನ ಆಗಿತ್ತು. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: “ನಾಡು, ನುಡಿ, ನೆಲ, ಜಲದ ಹೋರಾಟಕ್ಕೆ ಚಿತ್ರರಂಗದ ಸಹಕಾರ, ಬೆಂಬಲ, ಬದ್ಧತೆ ಇರಬೇಕು. ಆದರೆ ಮೇಕೆದಾಟು ಹೋರಾಟಕ್ಕೆ ಚಿತ್ರರಂಗದಿಂದ ಸರಿಯಾದ ಸಹಕಾರ ಸಿಗದೇ ಹೋದದ್ದರ ಬಗ್ಗೆ ನೋವು ಮತ್ತು ಸಿಟ್ಟು ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇರವಾಗಿ ಹೇಳಿದರು.ವಿಧಾನಸೌಧದ ಮುಂಭಾಗದಲ್ಲಿ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ನನಗೆ ಸಿನಿಮಾರಂಗದವರ ಮೇಲೆ ಕೋಪ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ, ನಟರ ಮೇಲೆ ಸಿಟ್ಟಿದೆ. ನಾವು ಕಷ್ಟ ಕಾಲದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ದೊರಕಿಸಲು “ನಮ್ಮ ನೀರು, ನಮ್ಮ ಹಕ್ಕು ಎಂದು ಮೇಕೆದಾಟು ಪಾದಯಾತ್ರೆ ಮಾಡಿದೆವು. ಕೋವಿಡ್ ಸಮಯದಲ್ಲಿ ನಾನು, ಸಿದ್ದರಾಮಯ್ಯ ಅವರು ಸುಮಾರು 150 ಕಿ.ಮೀ ಪಾದಯಾತ್ರೆ ಮಾಡಿದೆವು. ನಾವು ನಮ್ಮ ಸ್ವಂತಕ್ಕಾಗಿ ಈ ಹೋರಾಟ ಮಾಡಲಿಲ್ಲ. ರಾಜ್ಯದ ಹಿತಕ್ಕಾಗಿ ನಡೆದೆವು. ಆದರೆ ಖುದ್ದು ಆಹ್ವಾನ ಕೊಟ್ಟರೂ ಒಂದಿಬ್ಬರನ್ನು ಹೊರತುಪಡಿಸಿ ಚಿತ್ರರಂಗದವರು ತಿರುಗಿ ನೋಡಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.…
BREAKING : ರಾಯಚೂರಲ್ಲಿ ಹಕ್ಕಿಗಳ ನಿಗೂಢ ಸಾವು ಕೇಸ್ : ವರದಿಯಲ್ಲಿ ನೆಗೆಟಿವ್ ಎಂದು ಉಲ್ಲೇಖ, ನಿಟ್ಟುಸಿರು ಬಿಟ್ಟ ಜನ!
ರಾಯಚೂರು : ಕಳೆದ ಕೆಲವು ದಿನಗಳ ಹಿಂದೆ ಆಂಧ್ರಪ್ರದೇಶ ತೆಲಂಗಾಣದಲ್ಲಿ ಹಕ್ಕಿಜ್ವರದಿಂದ ಅನೇಕ ಪಕ್ಷಿಗಳು ಸಾವನ್ನಪ್ಪುತ್ತಿದ್ದು ಇದೀಗ ಈ ಒಂದು ಹಕ್ಕಿಜ್ವರ ರಾಜ್ಯಕ್ಕೂ ಕಾಲಿಟ್ಟಿದ್ದು, ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ವಿವಿಧ ಪ್ರಭೇದದ ಪಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಯೋಗಾಲಯ ವರದಿಯಲ್ಲಿ ನೆಗೆಟಿವ್ ಅಂಶ ಎಂದು ವರದಿ ಬಂದಿದೆ. ಹೌದು ಮಾನ್ವಿಯಲ್ಲಿ ಹಕ್ಕಿಗಳ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಯೋಗಾಲಯದ ವರದಿಯಲ್ಲಿ ಹಕ್ಕಿಜ್ವರ ಅಂಶ ನೆಗೆಟಿವ್ ಎಂದು ತಿಳಿದು ಬಂದಿದೆ. ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವಡೆ ಹಕ್ಕಿಗಳ ನಿಗೂಢ ಸಾವಾಗಿದೆ. ಬೆಳ್ಳಕ್ಕಿ ಸೇರಿದಂತೆ ವಿವಿಧ ಪ್ರಭೇದ 30ಕ್ಕೂ ಹೆಚ್ಚು ಪಕ್ಷಿಗಳು ಸಾವನ್ನಪ್ಪಿದ್ದವು. ಪಕ್ಷಿಯ ಕಳೆಬರ ಪ್ರಯೋಗಾಲಕ್ಕೆ ಕಳುಹಿಸಿದ ಪಶು ವೈದ್ಯಾಧಿಕಾರಿಗಳು ಪ್ರಯೋಗಾಲದ ವರದಿಯಲ್ಲಿ ನೆಗೆಟಿವ್ ಅಂಶ ಎಂಬುವುದು ಉಲ್ಲೇಖವಾಗಿದೆ ನ್ಯೂಕ್ಯಾಟಲ್ ಡಿಸೀಸ್ ವೈರಸ್, ಎವಿಎನ್ ಇನ್ಫಾವೆಂಜಾ ಟೆಸ್ಟ್ ನಡೆಸಲಾಗಿದ್ದು, RTPCR ಹಾಗು LEF ನಡೆದ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಬೆಂಗಳೂರಿನ ಪ್ರಯೋಗಾಲಯದಲ್ಲಿ ವರದಿಯಲ್ಲಿ ಈ ಕುರಿತು ಉಲ್ಲೇಖಿಸಲಾಗಿದೆ.…
ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಎನ್ನುವ ಸುಳಿವನ್ನು ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂಬುದಾಗಿ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದಂತ ಅವರು, ಬಿಜೆಪಿಯವರಿಗೆ ಬೆಂಗಳೂರಿನ ಅಭಿವೃದ್ಧಿ ಬೇಕಾಗಿಲ್ಲ. ಅವರಿಗೆ ವೋಟ್ ಮಾತ್ರವೇ ಬೇಕಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಅವರು ವಿರೋಧಿಸುತ್ತಿದ್ದಾರೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು.ಬಿಬಿಎಂಪಿ ಚುನಾವಣೆ ಮೇಯಲ್ಲಿ 100% ಆಗಲಿದೆ. ಗ್ರೇಟರ್ ಬೆಂಗಳೂರು ಆದರೇ ವಾರ್ಡ್ ಜಾಸ್ತಿ ಆಗಬಹುದು. 2 ರಿಂದ 3 ಪಾಲಿಕೆ ಆಗಬಹುದು. ಈಗಿನ ಬೆಂಗಳೂರನ್ನು ಒಬ್ಬ ಮೇಯರ್, ಕಮೀಷನರ್ ಆಡಳಿತ ಮಾಡಲು ಸಾಧ್ಯವಿಲ್ಲ ಎಂದರು. ಬಿಬಿಎಂಪಿಗೆ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ಗ್ರೇಟರ್ ಬೆಂಗಳೂರಿಗೆ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯ ಸಂಸದೀಯ ಸಮಿತಿ ವರದಿ ನೀಡಿದೆ. ಅದರ ಆಧಾರವಾಗಿ ವಿಧಾನಮಂಡಲದಲ್ಲಿ ಮಸೂದೆ ಮಂಡಿಸಲಾಗುವುದು. ಅಂಗೀಕಾರಗೊಂಡ ಬಳಿಕ ರಾಜ್ಯಪಾಲರ ಅನುಮೋದನೆ ನೀಡಬೇಕಿದೆ. ನಂತರ ಅದರ ಆಧಾರದ ಮೇಲೆ ಚುನಾವಣೆ ನಡೆಯಲಿದೆ ಎಂದರು. ಗ್ರೇಟರ್…
ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯನ್ನು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯನ್ನು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ ಹೌಸಿಂಗ್ ಬೋರ್ಡ್ ನಿವಾಸಿಯಾದ ನಗ್ಮಾಗೆ 8 ವರ್ಷದ ಮಗನಿದ್ದಾನೆ. ಒಂದು ವರ್ಷದ ಹಿಂದೆ ನಗ್ಮಾ ಮೊದಲ ಗಂಡನನ್ನು ಬಿಟ್ಟಿದ್ದಳು. ಬಳಿಕ ಸೈಯದ್ ನನ್ನು ಪ್ರೀತಿಸಿ ಎರಡನೇ ಮದುವೆ ಆಗಿದ್ದಾಳೆ. ಆದರೆ ಈಗ ಈ ಪಾಪಿ ಪತಿ ಪತ್ನಿಯ ಜೀವ ತೆಗೆದಿರುವ ಆರೋಪ ಕೇಳಿ ಬಂದಿದೆ.ಎಂಟು ತಿಂಗಳ ಗರ್ಭಿಣಿ ಆಗಿರುವ ನಗ್ಮಾಳನ್ನು ನೇಣು ಬಿಗಿದು 8 ವರ್ಷದ ಮಗನ ಕಣ್ಣೆದುರೇ ಹತ್ಯೆಗೈದಿದ್ದಾನೆ. ಈತ ನಶೆಮುಕ್ತ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ. ಗರ್ಭಿಣಿಯಾದ ಪತ್ನಿಯನ್ನು ನೋಡಿ ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದನಂತೆ. ಅಲ್ಲದೇ ಹಣ…
ತುಮಕೂರು : ಇತ್ತೀಚಿಗೆ ಕಾಡು ತೊರೆದು ನಾಡಿಗೆ ಕಾಡು ಪ್ರಾಣಿಗಳು ಲಗ್ಗೆ ಇಡುತ್ತಿವೆ. ಇದರಿಂದ ವನ್ಯಜೀವಿ ಮನುಷ್ಯನ ನಡುವೆ ಸಂಘರ್ಷ ನಡೆಯುತ್ತಿವೆ. ಇದೀಗ ರಾತ್ರಿ ಮನೆ ಮುಂದೆ ಹಾಕಲಾಗಿದ್ದ ತೆಂಗಿನಕಾಯಿ ರಾಶಿಯಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆಯೊಂದು ದಾಳಿ ನಡೆಸಿ ಹೊತ್ತೊಯ್ದಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತೊರೆಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನೇಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊರೆಮಾವಿನಹಳ್ಳಿ ಗ್ರಾಮದ ಕಲ್ಲೇಶ್ವರಸ್ವಾಮಿ ದೇವಾಲಯದ ಸಮೀಪವಿರುವ ಶಂಕರಪ್ಪ ಎಂಬುವರ ಮನೆ ಮುಂದೆ ತೆಂಗಿನ ಕಾಯಿ ರಾಶಿ ಹಾಕಲಾಗಿತ್ತು.ಈ ತೆಂಗಿನ ರಾಶಿ ಪಕ್ಕದಲ್ಲೇ ಇವರು ಸಾಕಿದ್ದ ನಾಯಿ ಮಲಗಿತ್ತು. ಮಧ್ಯರಾತ್ರಿ ಇದನ್ನು ಹೊಂಚು ಹಾಕಿರುವ ಚಿರತೆ ನಿಧಾನವಾಗಿ ಸದ್ದುಗದ್ದಲ ಇಲ್ಲದೆ ಮೆಲ್ಲನೆ ಹೋಗಿ ನಾಯಿ ಮೇಲೆ ದಾಳಿ ಮಾಡಿ ಹೊತ್ತುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ನುಗ್ಗಿ ಮನೆ ಮುಂದೆ ಮಲಗಿದ್ದ ನಾಯಿಯನ್ನು ಹೊತ್ತುಕೊಂಡು ಹೋಗಿರುವುದರಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ…
ಬೆಂಗಳೂರು : ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡಲಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್ ಭಾಷಣ ಮಾಡಲಿದ್ದಾರೆ. ಮಾರ್ಚ್ 4 ರಿಂದ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.ನಂತರ ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 21 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಭಾಷಣ ಮಾಡಲಿದ್ದಾರೆ. ವಿವಿಧ ವಿಧೇಯಕಗಳ ಬಗ್ಗೆ ಸರ್ಕಾರದ ಧೋರಣೆ ಖಂಡಿಸಿ ಪತ್ರ ಬರೆದಿರುವ ರಾಜ್ಯಪಾಲರು ಅಧಿವೇಶನದಲ್ಲಿ ಸರ್ಕಾರದ ಬಗ್ಗೆ ಯಾವ ರೀತಿ ಮಾತನಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಮಾ.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದು, ಗ್ಯಾರಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್ ಮಂಡಿಸಲಿದ್ದಾರೆ. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ. ಅಧಿವೇಶನದಲ್ಲಿ ಗ್ಯಾರಂಟಿಗಳ ಹಣ ಬಿಡುಗಡೆ…
ಉಡುಪಿ : ಸದ್ಯ ರಾಜ್ಯ ಕಾರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು, ಶಿವರಾತ್ರಿ ಅಂಗವಾಗಿ ಅಮಿತ್ ಶಾ ಭಾಗಿಯಾದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಭಾಗಿಯಾಗಿರುವ ಕುರಿತು ಭಾರಿ ಚರ್ಚೆಗೆ ಕಾರಣವಾಗಿದೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಇಂದು ಉಡುಪಿ ಜಿಲ್ಲಾ ಪ್ರವಾಸಕ್ಕೆ ತೆರಳುವ ಡಿಸಿಎಂ ಡಿಕೆ ಶಿವಕುಮಾರ್ ವಿವಿಧ ಕಾರ್ಯಕ್ರಮಗಳಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗಿಯಾಗಲಿದ್ದಾರೆ.ಕಾಪು ಹಳೆ ಮಾರಿಗುಡಿ ಬ್ರಹ್ಮಕಲಶೋತ್ಸವದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.ಬಳಿಕ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಬಳಿಕ ಕಾರ್ಕಳದ ಕಾಂಗ್ರೆಸ್ ಕುಟುಂಬದಲ್ಲಿ ಡಿಕೆ ಶಿವಕುಮಾರ್ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಕೊಪ್ಪಳ : ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಗೆ SCP/TSP ಹಣ ಬಳಕೆ ಮಾಡುತ್ತಿದೆ ಎಂದು ಈಗಾಗಲೇ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮಾರ್ಚ್ 5 ರಂದು ಪ್ರತಿಭಟನೆ ಹಮ್ಮಿಕೊಂಡಿದೆ ಇದರ ಬೆನ್ನಲ್ಲೆ ಸಚಿವ ಶಿವರಾಜ್ ತಂಗಡಗಿ ಗ್ಯಾರೆಂಟಿ ಯೋಜನೆಗಳಿಗೆ ಈ ಹಣ ಬಳಸಿದರೆ ತಪ್ಪೇನು? ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗೆ ಅನುದಾನ ಬಳಸುವುದರಲ್ಲಿ ತಪ್ಪೇನು? ಈ ಕುರಿತು ಸದನದಲ್ಲಿ ಕೇಳಲಿ ಉತ್ತರಿಸುತ್ತೇವೆ. ಗ್ಯಾರಂಟಿಗಳಿಗೆ ಎಸ್ಸಿಇಪಿ-ಟಿಎಸ್ಪಿ ಅನುದಾನ ವರ್ಗಾವಣೆ ಆರೋಪ ವಿಚಾರವಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಬೇಡ ಎಂದು ಬಿಜೆಪಿಯವರು ಹೇಳಲಿ. ಬಿಜೆಪಿಗರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಎಂದು ಎಂದು ವಾಗ್ದಾಳಿ ಮಾಡಿದ್ದಾರೆ. ಅನುದಾನ ಬಳಕೆ ಮಾಡಿದ್ದೀವಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಈ ಬಗ್ಗೆ ಸದನದಲ್ಲಿ ಅವರು ಕೇಳಲಿ. ನಾವು ಉತ್ತರ ಕೊಡಲು ಸಿದ್ದರಾಗಿದ್ದೇವೆ. ಗ್ಯಾರಂಟಿ ಯೋಜನೆ ಬೇಡ ಎಂದು ಬಿಜೆಪಿಯವರು ಹೇಳಲಿ. ಅವರಿಗೆ ಬಡವರ ಬಗ್ಗೆ ಕಾಳಜಿ…
ಬೆಂಗಳೂರು : ಇತ್ತೀಚಿಗೆ ಹೃದಯಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಕಾರಿನಲ್ಲಿ ಮಲಗಿಕೊಂಡಿದ್ದಾಗಲೇ ಉದ್ಯಮಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯ ಮಾನಸ್ ಆಸ್ಪತ್ರೆಯ ಬಳಿ ನಡೆದಿದೆ. ಹೌದು ಕೋಡಿಗೆಹಳ್ಳಿಯ ಮಾನಸ್ ಆಸ್ಪತ್ರೆಯ ಬಳಿ ಕಾರಿನಲ್ಲಿ ಉದ್ಯಮಿ ಅಶ್ವಿನ್ ಕುಮಾರ್ (42) ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಹೃದಯಘಾತದಿಂದ ಉದ್ಯಮಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ನಿನ್ನೆ ಬೆಳಿಗ್ಗೆ ಕೆಲಸದ ನಿಮಿತ್ಯ ಉದ್ಯಮಿ ಅಶ್ವಿನ್ ಕುಮಾರ್ ತೆರಳಿದ್ದರು. ಹಲವು ಬಾರಿ ಕರೆ ಮಾಡಿದರು ಅಶ್ವಿನ್ ಕುಮಾರ್ ಸಂಪರ್ಕಕ್ಕೆ ಸಿಗದೇ ಕಾರಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಲೊಕೇಶನ್ ಪರಿಶೀಲನೆ ವೇಳೆ ಮಾನಸ ಆಸ್ಪತ್ರೆಯ ಬಳಿ ಇರುವುದು ಪತ್ತೆಯಾಗಿದೆ. ಸ್ಥಳಕ್ಕೆ ತೆರಳಿದಾಗ ರಸ್ತೆ ಬದಿ ತನ್ನದೇ ಕಾರಿನಲ್ಲಿ ಉದ್ಯಮಿ ಶವವಾಗಿ ಪತ್ತೆಯಾಗಿದ್ದಾರೆ.ಡೋರ್ ಲಾಕ್ ಮಾಡಿಕೊಂಡು ಮಲಗಿರುವ ಸ್ಥಿತಿಯಲ್ಲಿದ್ದ ಉದ್ಯಮಿ ಪತ್ತೆಯಾಗಿದ್ದಾರೆ. ಕೂಡಲೇ ಕಾರಿನ ಗ್ಲಾಸ್ ಒಡೆದು ಪಕ್ಕದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉದ್ಯಮಿ ಅಶ್ವಿನ್ ಕುಮಾರ್ ಮೃತಪಟ್ಟಿರುವ ಬಗ್ಗೆ ವೈದ್ಯರು ಖಚಿತಪಡಿಸಿದ್ದಾರೆ. ಹೃದಯಾಘಾತದಿಂದ ಮೃತಪಟ್ಟ ಬಗ್ಗೆ…













