Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಳೆದ ಫೆಬ್ರವರಿ 26ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ಖಾಸಗಿ ಡೆಂಟಲ್ ಕಾಲೇಜಿನ ಬಿ.ಡಿ.ಎಸ್. ವಿದ್ಯಾರ್ಥಿನಿ ಬೆಳಗಾವಿ ಮೂಲದ ಕೃತಿಕಾ ನಿಡೋಣಿ (21) ಎಂದು ತಿಳಿದುಬಂದಿದೆ.ಕಳೆದ ಫೆಬ್ರವರಿ 26 ರಂದು ರಾತ್ರಿ 7 ಗಂಟೆ ಸುಮಾರಿಗೆ ಯಾರಿಗೋ ಫೋನ್ ಮಾಡಿ ತಾನು ಸಾಯುತ್ತೇನೆ ಎಂದು ಕೃತಿಕಾ ಸಾಯುವ ಮೊದಲು ಹೇಳುತ್ತಿದ್ದಳು ಎನ್ನಲಾಗಿದೆ. ರಾತ್ರಿ 7.10ರಿಂದ 7.30ರ ಅವಧಿಯಲ್ಲಿ ವಸತಿ ನಿಲಯದ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ನಿನ್ನೆ ತಾನೆ ಇಡ್ಲಿಯಲ್ಲಿ ಆರೋಗ್ಯದ ಮೇಲೆ ಮರಣಾಂತಿಕ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಹುಣಿಸಿ ರಾಜ್ಯ ಸರ್ಕಾರ ಆದೇಶ ನೀಡಿತು ಇದೀಗ ಟ್ಯಾಟು ಹಾಕಿಸಿಕೊಳ್ಳುವುದರಿಂದ ಎಚ್ಐವಿ ಹಾಗೂ ಚರ್ಮದ ಕ್ಯಾನ್ಸರ್ ಆಗುವ ಆತಂಕದಿಂದ ಇದೀಗ ರಾಜ್ಯ ಸರ್ಕಾರ ರಾಜ್ಯದಲ್ಲಿ ಟ್ಯಾಟೂ ನಿಷೇಧ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಹೌದು ಟ್ಯಾಟು ಪ್ರಿಯರಿಗೆ ಇದೀಗ ರಾಣಿ ಸರಕಾರ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಟ್ಯಾಟೂನಿಂದ ಎಚ್ಐವಿ ಚರ್ಮದ ಕ್ಯಾನ್ಸರ್ ಆಗುವ ಸಂಭವವಿದೆ ಎನ್ನಲಾಗಿದ್ದು, ಟ್ಯಾಟು ಪ್ರಿಯರಿಗೂ ಆರೋಗ್ಯ ಇಲಾಖೆ ಇದೀಗ ಶಾಕ್ ನೀಡಿದೆ. ಟ್ಯಾಟೂ ಕಡಿವಾಣಕ್ಕೆ ಇದೀಗ ರಾಜ್ಯ ಸರ್ಕಾರ ಕಾನೂನು ಜಾರಿ ಮಾಡಲು ಚಿಂತೆನೇ ನಡೆಸಿದೆ. ಹೊಸ ಕಾನೂನು ರಚನೆಗೆ ರಾಜ್ಯ ಸರ್ಕಾರ ಇದ್ದಾಗ ಮುಂದಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಟ್ಯಾಟುಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೊಸ ಕಾನೂನು ತರಲು ಆರೋಗ್ಯ ಇಲಾಖೆ ಇದೀಗ ಮುಂದಾಗಿದ್ದು, ಟ್ಯಾಟೂ ಕಡಿವಾಣಕ್ಕೆ ಕಾನೂನು ತರಲು ಸರ್ಕಾರಕ್ಕೆ…
ಯಾದಗಿರಿ : ಕುಡಿದ ಮತ್ತಿನಲ್ಲಿ ರಾಂಗ್ ಸೈಡ್ ಬಂದು ಸಾರಿಗೆ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾಳನೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ತಾಳಿಕೋಟೆಯಿಂದ ಹುಣಸಗಿ ಮಾರ್ಗವಾಗಿ ಬಸ್ ಶಹಾಪುರಕ್ಕೆ ಹೊರಟಿತ್ತು. ಪ್ರಯಾಣಿಕರು ಇಳಿಯುತ್ತಿದ್ದರಿಂದ ಮಾಳನೂರಿನಲ್ಲಿ ಬಸ್ ಅನ್ನು ನಿಲ್ಲಿಸಲಾಗಿತ್ತು. ಈ ವೇಳೆ ಕುಡಿದ ಮತ್ತಿನಲ್ಲಿ ಬೈಕ್ ನಲ್ಲಿ ಸವಾರ ಮದನಪ್ಪ ರಾಂಗ್ ಸೈಡ್ ಬಂದಿದ್ದಾನೆ. ಅಶ್ಲೀಲ ಪದಗಳಿಂದ ನಿಂದಿಸಿ ಕಂಡಕ್ಟರ್ ಕಪಾಳಕ್ಕೆ ಬೈಕ್ ಸವಾರ ಹೊಡೆದಿದ್ದಾನೆ. ಗ್ರಾಮದ ಮದನಪ್ಪ ಎಂಬಾತನಿಂದ ಸಾರಿಗೆ ಸಿಬ್ಬಂದಿಗಳ ಮೇಲೆ ಇದೀಗ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಚಾಲಕ ಮತ್ತು ಕಂಡಕ್ಟರ್ ಗೆ ಹುಣಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಆರೋಪಿಯ ಮದನಪ್ಪ ವಿರುದ್ಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕೊಪ್ಪಳ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ರೆಸಾರ್ಟ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನುಕೊಪ್ಪಳ ನಿವಾಸಿ ಶಾಮಿಯಾನ ಕೆಲಸ ಮಾಡುತ್ತಿದ್ದ ಹಳೇಬಂಡಿ ಹರ್ಲಾಪುರದ ವಸೀಮ್ (28) ಎಂದು ತಿಳಿದುಬಂದಿದೆ. ಕಳೆದ ಬುಧವಾರ ವಸೀಂ ವೈಯಕ್ತಿಕ ಕೆಲಸಕ್ಕೆ ಪಟ್ಟಣಕ್ಕೆ ಆಗಮಿಸಿ ಕಲಕೇರಿ ರಸ್ತೆಯಲ್ಲಿನ ಜಂಗಲ್ ರೆಸಾರ್ಟ್ ನಲ್ಲಿ ರೂಂ ಪಡೆದ್ದಾನೆ. ಜೀವನದಲ್ಲಿ ಜಿಗುಪ್ಸೆ ಕಾರಣ ಬಟ್ಟೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರಕನ್ನಡ : ಪ್ರೀತಿಸಿ ಮದುವೆಯಾಗಿದ್ದ ಮಗಳ ನಡೆಗೆ ಕೋಪಗೊಂಡಿದ್ದ ತಂದೆಯೊಬ್ಬ ಮಗಳು ಹಾಗು ಅಳಿಯನಿಗೆ ಚಾಕು ಇರಿದು ಹತ್ಯೆಗೆ ಯತ್ನಾಸಿದ್ದಾನೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ರಂಗಾಪುರದಲ್ಲಿ ನಡೆದಿದೆ. ಬದನಗೋಡಿನ ಯುವತಿ ಪೋಷಕರಿಗೆ ತಿಳಿಸದೇ ರಂಗಾಪುರದ ಯುವಕನೊಂದಿಗೆ ಕಳೆದ ಮೂರು ತಿಂಗಳ ಹಿಂದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಳು. ಅನ್ಯ ಜಾತಿಯ ಯುವಕ ಎಂದು ಶಂಕರ ಕಮ್ಮಾರ ವಿರೋಧ ವ್ಯಕ್ತಪಡಿಸಿದ್ದ. ಆದರೆ, ಯುವಕನ ಮನೆಗೆ ಮಗಳನ್ನು ನೋಡುವ ನೆಪದಲ್ಲಿ ಬಂದು, ನಿಮ್ಮ ಮದುವೆಗೆ ಸಾಕ್ಷಿ ಹಾಕಿದವರ ಹೆಸರು ಹೇಳುವಂತೆ ಮಗಳ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಗಳು ಹೆಸರು ಹೇಳದೇ ಇದ್ದುದಕ್ಕೆ ಹತ್ಯೆಗೆ ಯತ್ನಿಸಿದ್ದಾನೆ. ತಡೆಯಲು ಬಂದ ಅಳಿಯನಿಗೂ ಎದೆ ಹಾಗೂ ಕೈಗೆ ಚಾಕುವಿನಿಂದ ಇರಿದಿದ್ದಾನೆ.ನಂತರ ಅಲ್ಲಿಂದ ತಪ್ಪಿಸಿಕೊಂಡು ತನ್ನೂರಿಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಹಲ್ಲೆಗೆ ಒಳಗಾದ ಇಬ್ಬರೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಮೂವರೂ ಬದುಕುಳಿದಿದ್ದು, ಇರಿತಕ್ಕೊಳಗಾದ ಇಬ್ಬರೂ…
ಬೆಂಗಳೂರು : ಶಿವರಾತ್ರಿಯ ನಿಮಿತ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಕೊಯಮತ್ತೂರಿನ ಇಶಾ ಫೌಂಡೇಶನ್ ನ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗಿದ್ದು , ಆಧ್ಯಾತ್ಮಿಕ ಲೋಕದಲ್ಲಿ ಮಿಂದೆದ್ದು ಪುನೀತರಾಗಿದ್ದಾರೆ. ಈ ನಡುವೆ ತಮ್ಮ ಬಾಲ್ಯದ ನೆನಪನ್ನು ಪೋಸ್ಟ್ ಮೂಲಕ ಬಿಚ್ಚಿಟ್ಟಿದ್ದಾರೆ. ಸಾಮಾಜಿಕ ಜಾಲತಾಣ ಟ್ವೀಟ್ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ.ಸದ್ಗುರು ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಈ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಅನಿಸಿತು. ನನ್ನ ಹೆಸರಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ. ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಮೊದಲು ಹೆಣ್ಮಕ್ಕಳಿಗೆ ಕೆಂಪಮ್ಮ ಅಂತ ಹೆಸರಿಡುತ್ತಾರೆ. ಗಂಡು ಮಕ್ಕಳಿಗೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಅದು ಪದ್ದತಿ. ಶಿವಾಲ್ದಪ್ಪನಿಗೆ ನನ್ನ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ನನಗೆ ಮೊದಲು ಕೆಂಪರಾಜ್ ಅಂತ…
ಹುಬ್ಬಳ್ಳಿ : ಚಲಿಸುತ್ತಿದ್ದ ಸಾರಿಗೆ ಬಸ್ ನ ಪಾಟಾ ಕಟ್ ಆಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಳಿ ನಡೆದಿದೆ. ತಾಲೂಕಿನ ಬ್ಯಾಹಟ್ಟಿ ಬಳಿ ಬಸ್ ಚಲಿಸುತ್ತಿರುವಾಗಲೇ ಬಸ್ಸಿನ ಪಾಟಾ ಕಟ್ ಆಗಿದೆ. ಕೂಡಲೇ ಬಸ್ ಅನ್ನು ಚಾಲಕ ಎಷ್ಟೇ ನಿಯಂತ್ರಣಕ್ಕೆ ತರಬೇಕೆಂದರು ಸಾಧ್ಯವಾಗಿಲ್ಲ. ತಕ್ಷಣ ಬಸ್ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಸುಮಾರು 15 ಪ್ರಯಾಣಿಕರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಇನ್ನು ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗ್ರಾಮೀಣ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಕೊಪ್ಪಳ : ತಾಯಿ ಹೆಸರಲ್ಲಿ ಇರುವ ಆಸ್ತಿಯನ್ನು ಪುತ್ರನ ಹೆಸರಲ್ಲಿ ಮಾಡಿಕೊಡುವಂತೆ ಒತ್ತಾಯಿಸಿ ಪಂಚಾಯತಿ ಕಚೇರಿಯಲ್ಲೇ ಮಹಿಳಾ PDO ಅಧಿಕಾರಿ ಮೇಲೆ ಗ್ರಾಂ ಪಂಚಾಯತ್ ಸದಸ್ಯೆ ಹಾಗು ಆಕೆಯ ಮಗ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಹೌದು ಈ ಒಂದು ಘಟನೆ ನಡೆದಿದ್ದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮಾಗೇರಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.ಹಲ್ಲೆಗೆ ಒಳಗಾದಂತ ಮಹಿಳಾ ಅಧಿಕಾರಿಯನ್ನು ಪಿಡಿಒ ರತ್ನಮ್ಮ ಗುಂಡಣ್ಣನವರ ಎಂದು ತಿಳಿದುಬಂದಿದೆ. ಇನ್ನು ಹಲ್ಲೆ ಮಾಡಿದವರನ್ನು ಗ್ರಾಮ ಪಂಚಾಯಿತಿ ಸದಸ್ಯೆ ಶಾಂತಮ್ಮ ಬಂಡಿವಂಡರ, ಪುತ್ರ ಭೀಮೇಶ್ ಎನ್ನಲಾಗಿದೆ. ತಾಯಿ ಹೆಸರಲ್ಲಿ ಇದ್ದ ಆಸ್ತಿಯನ್ನು ಪುತ್ರನ ಹೆಸರಿಗೆ ಮಾಡಿಕೊಡುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಮಂಡ್ಯ : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಸಹ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಾಟ ತಪ್ಪಿಲ್ಲ. ಇದೀಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಹಳ್ಳಿ ಎಂಬ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮಳವಳ್ಳಿ ತಾಲೂಕಿನ ಸಾಹಳ್ಳಿ ಗ್ರಾಮದಲ್ಲಿ ಸಾಲದ ಹೊರೆ ತಾಳಲಾರದೆ ರೈತ ಸುಬ್ಬೇಗೌಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.3 ಎಕರೆ ಜಮೀನು ಹೊಂದಿದ್ದ ಸುಬ್ಬೇಗೌಡ ವ್ಯವಸಾಯಕ್ಕಾಗಿ ಬ್ಯಾಂಕ್, ಸಹಕಾರ ಸಂಘ ಹಾಗೂ ಖಾಸಗಿಯಾಗಿ ಸುಮಾರು 5 ಲಕ್ಷ ಸಾಲ ಮಾಡಿದ್ದರು. ಈ ಹಿನ್ನೆಲೆ ಸಾಲದ ಹೊರೆಯಿಂದ ಮನನೊಂದಿದ್ದ ಸುಬ್ಬೇಗೌಡ ಸೋಮವಾರ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು.ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಂಡಿಘಡ : ಮಹಿಳೆಯೊಬ್ಬಳು ಹೆತ್ತ ತಾಯಿಯ ತೊಡೆಗೆ ಕಚ್ಚಿ ಮನಬಂದಂತೆ ಥಳಿಸಿ ಚಿತ್ರಹಿಂಸೆ ನೀಡಿರುವಂತಹ ಬೆಚ್ಚಿ ಬೀಳಿಸೋ ಘಟನೆ ಹರಿಯಾಣದಲ್ಲಿ ನಡೆದಿದ್ದು, ಸದ್ಯ ಇದರ ವಿಡಿಯೋ ವೈರಲ್ ಆಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬಳು ತನ್ನ ತಾಯಿಗೆ ಪ್ರಾಣಿಗಳ ಮೇಲೆ ಹಲ್ಲೆ ಮಾಡುವಂತೆ ಥಳಿಸುತ್ತಿರುವುದು ಕಂಡುಬಂದಿದೆ. ಇಷ್ಟಕ್ಕೆ ಸುಮ್ಮನಿರದೆ ತಾಯಿಯ ತೊಡೆಗೆ ಕಚ್ಚಿ ಚಿತ್ರಹಿಂಸೆ ನೀಡುತ್ತಿರುವುದು ಸಹ ವಿಡಿಯೋದಲ್ಲಿ ಕಂಡುಬಂದಿದೆ. ಸಂತ್ರಸ್ತೆ ಅಳುತ್ತಾ ತನಗೆ ಹೊಡೆಯಬೇಡ ಎಂದು ಮಗಳಲ್ಲಿ ಪರಿಪರಿಯಾಗಿ ಕೇಳಿಕೊಂಡಿದ್ದಾಳೆ. ಮಹಿಳೆ ತನ್ನ ತಾಯಿಗೆ ಮನಬಂದಂತೆ ಹೊಡೆಯುವುದು, ಕೂದಲನ್ನು ಎಳೆದಾಡುವುದು, ಕಾಲಿನಿಂದ ಒದೆಯುವುದು ಮಾತ್ರವಲ್ಲದೇ ಹಲ್ಲಿನಿಂದ ಕಚ್ಚುವುದು ಕಾಣಿಸಿಕೊಂಡಿದೆ. ಈ ಒಂದು ಘಟನೆ ಹರಿಯಾಣದಲ್ಲಿ ನಡೆದಿದ್ದು, ತಾಯೆ ಮೇಲೆ ಮಗಳು ಈ ರೀತಿ ಹಲ್ಲೆ ಮಾಡಿ ಚಿತ್ರಹಿಂಸೆ ನೀಡುತ್ತಿದ್ದರು ಸಹ ಸಹಾಯಕ್ಕೆ ಬರದೇ ವಿಡಿಯೋ ಮಾಡಿಕೊಳ್ಳುತ್ತಿದ್ದರು. I ಕುರಿತು ನೆಟ್ಟಿಗರು ಮಹಿಳೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಪೊಲೀಸರು ಮಹಿಳೆಯ…











