Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಾಟೆ ಹಾಗೂ ಆಯೋಜಕರ ಮೇಲೆ ತೀವ್ರ ಹಲ್ಲೆ ನಡೆದಿರುವ ಘಟನೆ ಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿ ಗಣೇಶ್ ಉತ್ಸವದ ಆಯೋಜಕ ಚಂದನ್ ಮೇಲೆ ಧನುಷ್ ಮತ್ತು ಶತಾಬ್ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಜವಳಿ ಅಂಗಡಿ ಮುಂದೆ ಜೋರಾಗಿ ತಮಟೆ ಭಾರಿಸಲು ಹೇಳಿದ್ದೀಯಾ ಬೇಕಂತಲೇ ಜೋರಾಗಿ ತಮಟೆ ಬಾರಿಸಲು ಹೇಳಿದ್ದೀಯಾ ಎಂದು ಹಲ್ಲೆ ಮಾಡಿದ್ದಾರೆ.ಸೋಮವಾರ ನಡೆದ ಚಂದ್ರನ್ ಮೇಲೆ ಹಲ್ಲೆ ಕೇಸ್ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯ ಸಂಬಂಧ ಟಿ ದಾಸರಹಳ್ಳಿ ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸಂಗೊಳ್ಳಿ ರಾಯಣ್ಣನಿಗೆ ಮತ್ತು ಸಿದ್ದರಾಮಯ್ಯನವರಿಗೆ ಎತ್ತಣದೆತ್ತಣ ಸಂಬಂಧ? ಸಂಗೊಳ್ಳಿ ರಾಯಣ್ಣನ ಹೆಸರು ಹೇಳಲೂ ಸಿದ್ದರಾಮಯ್ಯನವರಿಗೆ ನೈತಿಕತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದರು. ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಒಬ್ಬ ಮಹಾನ್ ಸೈನಿಕ. ನಮ್ಮ ರಾಜ್ಯದ ಉಳಿವಿಗಾಗಿ, ಕಿತ್ತೂರು ಕರ್ನಾಟಕದ ಉಳಿವಿಗೆ, ಕಿತ್ತೂರು ರಾಣಿ ಚನ್ನಮ್ಮನ ದಂಡನಾಯಕನಾಗಿ ಕೆಲಸ ಮಾಡಿದ್ದವರು. ಸಂಗೊಳ್ಳಿ ರಾಯಣ್ಣ 14 ನಿವೇಶನ ಪಡೆದಿರಲಿಲ್ಲ. 3 ಎಕರೆ 16 ಗುಂಟೆ ಜಮೀನು ತೆಗೆದುಕೊಂಡಿಲ್ಲ. ಏನೇನೂ ಆಸೆ ಇಲ್ಲದೆ, ಸ್ವಾರ್ಥ ಇಲ್ಲದೆ ರಾಜ್ಯಕ್ಕೋಸ್ಕರ ನಿಸ್ವಾರ್ಥ ಹೋರಾಟ ಮಾಡಿ ಬಲಿದಾನ ಮಾಡಿ, ನಾಡಿಗೆ ಕೀರ್ತಿ ತಂದ ವ್ಯಕ್ತಿ ಸಂಗೊಳ್ಳಿ ರಾಯಣ್ಣ ಎಂದು ವಿಶ್ಲೇಷಿಸಿದರು. ಸಿದ್ದರಾಮಯ್ಯನವರು ತಮ್ಮ ಹೇಳಿಕೆ ಸಂಬಂಧ ನಾಡಿನ ಕ್ಷಮೆ ಕೇಳಬೇಕು. ಸಿದ್ದರಾಮಯ್ಯರಂತೆ ಸಂಗೊಳ್ಳಿ ರಾಯಣ್ಣ ಹತ್ತಾರು ಸೈಟ್ ಪಡೆದಿರಲಿಲ್ಲ. ಒಂದೆಕರೆ ಜಮೀನನ್ನೂ ತೆಗೆದುಕೊಂಡಿಲ್ಲ. ಸಂಗೊಳ್ಳಿ ರಾಯಣ್ಣನ ವಂಶಸ್ಥರು…
ಬೆಂಗಳೂರು : ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಸತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ ಬೆದರಿಕೆ ಹಾಕಿದೆ. ರಾಹುಲ್ ಗಾಂಧಿ ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ…
‘ಸಿಎಂ’ ಕುರ್ಚಿ ಉಳಿಸಿಕೊಳ್ಳಲು, ‘AICC’ ಅಧ್ಯಕ್ಷರನ್ನ ಓಲೈಸಲು ಕ.ಕ. ಭಾಗದಲ್ಲಿ ಸಂಪುಟ ಸಭೆಯ ನಾಟಕ : ಬಿವೈ ವಿಜಯೇಂದ್ರ
ಕಲಬುರ್ಗಿ: ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಅಲ್ಲಾಡುತ್ತಿರುವ ಸಂದರ್ಭದಲ್ಲಿ ಕುರ್ಚಿ ಉಳಿಸಿಕೊಳ್ಳಲು ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎಐಸಿಸಿ) ಅಧ್ಯಕ್ಷರನ್ನು ಓಲೈಸಲು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಚಿವ ಸಂಪುಟ ಸಭೆಯ ನಾಟಕ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಕಲಬುರ್ಗಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿನ್ನೆ ಆಗಿರುವ ಸಚಿವ ಸಂಪುಟ ಸಭೆಯಿಂದ ಈ ಭಾಗದ ಅಭಿವೃದ್ಧಿ ಆಗಲು ಸಾಧ್ಯವಿಲ್ಲ. ಈ ಭಾಗಕ್ಕೆ 5 ಸಾವಿರ ಕೋಟಿ ಕೊಡುತ್ತೇವೆ; ಇಲ್ಲಿ ಶಾಲಾ ಕಾಲೇಜು ಮಾಡುತ್ತೇವೆ. 1,100 ಕೋಟಿಯ ಪ್ಯಾಕೇಜ್ ಕೊಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇದರಲ್ಲಿ ಹೊಸದೇನೂ ಇಲ್ಲ ಎಂದು ಟೀಕಿಸಿದರು. ಒಂದು ವರ್ಷದ ಹಿಂದೆ ಕೂಡ ಇದೇ ಮಾತುಗಳನ್ನು ಹೇಳಿದ್ದರು. ಆದರೆ, ಯಾವುದೇ ಪ್ರಯೋಜನ ಆಗಿಲ್ಲ ಎಂದು ಆಕ್ಷೇಪಿಸಿದರು. ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 1,500 ಕೋಟಿ ಕೊಟ್ಟಿದ್ದರು. ತದನಂತರ ಬಸವರಾಜ ಬೊಮ್ಮಾಯಿಯವರ ಬಿಜೆಪಿ ಸರಕಾರವು 3 ಸಾವಿರ ಕೋಟಿ ಮತ್ತು…
ಬೆಂಗಳೂರು : ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಇದರಿಂದ ತೆರಿಗೆದಾರರ ಹಣ ಉಳಿತಾಯವಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ, ಲೋಕಸಭೆ ಹೀಗೆ ಒಂದೊಂದು ಚುನಾವಣೆ ಒಮ್ಮೊಮ್ಮೆ ನಡೆದಾಗ ನೀತಿ ಸಂಹಿತೆ ಜಾರಿಯಾಗುತ್ತದೆ.ಇದರಿಂದಾಗಿ ಕಾಮಗಾರಿಗಳು ವಿಳಂಬವಾಗಿ ಸರ್ಕಾರ ಯಾವುದೇ ಯೋಜನೆಯನ್ನು ಸರಿಯಾಗಿ ಜಾರಿ ಮಾಡಲು ಸಾಧ್ಯವಾಗುವುದಿಲ್ಲ. ಹೊಸ ಕ್ರಮದಿಂದ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು. ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷಗಳು ಇಂತಹ ಕ್ರಮಕ್ಕೆ ವಿರೋಧ ಮಾಡುವುದು ಸಹಜ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆದರೆ, ಸಮಸ್ಯೆಯಾಗುತ್ತದೆ ಎಂದು ಅವರು ಹೆದರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಮೋದಿಯವರ ಭಯವಿದೆ. ಈ ಕ್ರಮದಿಂದಾಗಿ ಪ್ರಧಾನಿ ಮತ್ತು ಮುಖ್ಯಮಂತ್ರಿಗೆ…
ರಾಮನಗರ : 30 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಬೆಸ್ಕಾಂ AEE ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದಿರುವ ಘಟನೆ ರಾಮನಗರ ತಾಲೂಕಿನ ಬಿಡದಿ ಬೆಸ್ಕಾಂ ಉಪಕಛೆರಿಯಲ್ಲಿ ನಡೆದಿದೆ. ಹೌದು ರಾಮನಗರ ತಾಲೂಕಿನ ಬಿಡದಿ ಬೆಸ್ಕಾಂ ಉಪಕಛೆರಿಯಲ್ಲಿ ಸಹಾಯಕ ಕಾರ್ಯ ಪಾಲಕ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿರುವ ಎನ್ ಪುಟ್ಟಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. 30,000 ಲಂಚ ಸ್ವೀಕರಿಸುವಾಗ ಪುಟ್ಟಸ್ವಾಮಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.ಸದ್ಯ ಪುಟ್ಟಸ್ವಾಮಿಯನ್ನು ವಶಕ್ಕೆ ಪಡೆದು ಸದ್ಯ ಪೋಲೀಸರು ಕಡತ ಪರಿಶೀಲನೆ ಮಾಡುತ್ತಿದ್ದಾರೆ.
ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್ ಸೆಲ್ಗೆ ಟಿವಿ ಸೌಲಭ್ಯ ನೀಡಲಾಗಿದೆ. ಟಿವಿಯಲ್ಲಿ ಕೇವಲ ಒಂದೇ ಒಂದು ಚಾನೆಲ್ ಬರಲಿದೆ. ಇನ್ನು ಖಾಸಗಿ ಚಾನೆಲ್ ನೋಡುವ ಮೂಲಕ ತನ್ನ ಸುದ್ದಿಗಳನ್ನು ತಿಳಿದುಕೊಳ್ಳಬೇಕು ಎಂಬ ನಟನ ಉದ್ದೇಶಕ್ಕೆ ನಿರಾಸೆಯಾಗಿದೆ. ಹೌದು ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪಗೆ ಟಿವಿ ನೋಡುವ ಸೌಲಭ್ಯ ಸಿಕ್ಕಿದೆ. ಹಲವು ದಿನಗಳ ಬೇಡಿಕೆಯ ಬಳಿಕ ಬಳ್ಳಾರಿ ಜೈಲನಲ್ಲಿ ನಟನ ಸೆಲ್ಗೆ ಟಿವಿ ಅಳವಡಿಕೆ ಕಾರ್ಯವು ಯಶಸ್ವಿಯಾಗಿದ್ದು, ಇದರೊಂದಿಗೆ ಮೊದಲ ಬೇಡಿಕೆ ಈಡೇರಿದಂತಾಗಿದೆ. ಆದರೆ ಇನ್ನು ನೀಡಲಾಗಿರುವ ಟಿವಿಯಲ್ಲಿ ಕೇವಲ ದೂರದರ್ಶನ ಚಾನೆಟ್ ಒಂದೇ ಲಭ್ಯವಾಗಲಿದೆ. ಯಾವುದೇ ಖಾಸಗಿ ಚಾನೆಲ್ಗಳ ವೀಕ್ಷಣೆಗೆ ಅವಕಾಶ ನೀಡಿಲ್ಲ. ಟಿವಿ ಬಳಿಕ ದಿಂಬು, ಕುರ್ಚಿ ಬೇಕಂತೆ! ದರ್ಶನ್ಗೆ ಜೈಲಿನಲ್ಲಿ ಬೆನ್ನು ನೋವು ಕಾರಣ ನೀಡಿ ಕೋರ್ಟ್ ನಲ್ಲಿ ಮನವಿ ಮಾಡಿ, ಕುರ್ಚಿಗೆ ಮನವಿ ಮಾಡಿದ್ದರು ಇದಕ್ಕೆ ಕೋರ್ಟ್ ಕೂಡ ಒಪ್ಪಿಕೊಂಡಿತ್ತು ಅದಾದ ಬಳಿಕ ಟಿವಿ ಬೇಡಿಕೆಟ್ಟಿದರು…
ಹಾಸನ : ಜಮೀನು ಮಂಜುರಾತಿಗೆ ಹಾಗೂ ಸ್ಥಳ ಪರಿಶೀಲನೆಗೆ ರೈತರ ಬಳಿ 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಲಂಚ ಸ್ವೀಕರಿಸುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಗ್ರಾಮದಲ್ಲಿ ನಡೆದಿದೆ. ಹೌದು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆತ್ತೂರು ಗ್ರಾಮ ಲೆಕ್ಕಾಧಿಕಾರಿ ಮೋಹನ್ ಕುಮಾರ್ ಇದೀಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆತ್ತೂರು ಗ್ರಾಮ ಲೆಕ್ಕಾಧಿಕಾರಿ ಮೋಹನ್ ಕುಮಾರ ಜಮೀನು ಮಂಜೂರಾತಿ ಮತ್ತು ಸ್ಥಳ ಪರಿಶೀಲನೆಗೆ 25 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. 25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿ ಆರ್ ಮೋಹನ್ ಕುಮಾರ್ ಹಣ ಸ್ವೀಕರಿಸುವಾಗ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಡಿ.ಆರ್ ಮೋಹನ್ ಕುಮಾರ್ ರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಬಾಲು, ಶಿಲ್ಪ ನೇತೃತ್ವದಲ್ಲಿ ಈ ಒಂದು ದಾಳಿ…
ಬೆಂಗಳೂರು : ಇತ್ತೀಚಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಅಧಿಕಾರಿಗಳಿಗೆ 15 ದಿನಗಳ ಗಡವು ನೀಡಿದ್ದರು. ಕೂಡಲೆ ಎಚೆತ್ತ ಅಧಿಕಾರಿಗಳು ಹಗಲು ರಾತ್ರಿ ಎನ್ನದೆ ರಸ್ತೆ ಗುಂಡಿಗಳನ್ನು ಮುಚ್ಚಿದರು. ಆದರೆ ಇದೀಗ ತೆರೆದ ಮೋರಿಗೆ ಯುವಕನೊಬ್ಬ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಗವಾರದ ಗೋವಿಂದಪುರದಲ್ಲಿ ಘಟನೆ ನಡೆದಿದೆ. ಹೌದು ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿ ಆಯತಪ್ಪಿ ತೆರೆದ ಮೋರಿಗೆ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಬಿಬಿಎಂಪಿ ನಿರ್ಲಕ್ಷಕ್ಕೆ ಆಸ್ಪತ್ರೆಗೆ ಸೇರಿದ ಯುವಕ ಬಾಯಿ ತೆರೆದಿದ್ದ ಮೋರಿಗೆ ಬಿದ್ದು ಯುವ ಗಂಭೀರವಾಗಿ ಗಾಯಗೊಂಡಿದ್ದಾನೆ. ಚರಂಡಿ ಕಾಮಗಾರಿ ವೇಳೆ ಮುಚ್ಚಳ ಹಾಕದೆ ನಿರ್ಲಕ್ಷ ತೋರಿದ್ದಾರೆ. ಕಾಮಗಾರಿಗಾಗಿ ತೆಗೆದಿದ್ದ ಗುಂಡಿಗೆ ಯುವಕ ಬಿದ್ದಿದ್ದಾನೆ. ಈ ವೇಳೆ ಯುವಕ ಬಿದ್ದ ರಭಸಕ್ಕೆ ಕಬ್ಬಿಣದ ಸರಳ ಚುಚ್ಚಿ ಯುವಕನಿಗೆ ತೀವ್ರವಾದ ಗಾಯವಾಗಿದೆ. ಯುವಕ ಸಯ್ಯದ್ ಜಾವೇದಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ನಾಗವಾರದ ಗೋವಿಂದಪುರದಲ್ಲಿ ಈ ಒಂದು ಘಟನೆ…
ವಿಜಯಪುರ : ಗಣಪತಿ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪರವಾನಿಗೆ ಹೊಂದಿದ್ದ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಯುವಕನನ್ನು ಪ್ರಶಾಂತ್ ಬಿರಾದಾರ ಎಂದು ಗುರುತಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಬರೆದ ಪ್ರಶಾಂತ್ ಬಿರಾದರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಪರವಾನಿಗೆ ಹೊಂದಿದ್ದ ಪಿಸ್ತೂಲ್ ನಿಂದ ಪ್ರಶಾಂತ್ ಗುಂಡು ಹಾರಿಸಿದ್ದಾನೆ. ಗಣೇಶ ವಿಸರ್ಜನೆ ವೇಳೆ ಸಾರ್ವಜನಿಕ ಸ್ಥಳದಲ್ಲಿ ಗಾಳಿಯಲ್ಲಿ ಫೈರಿಂಗ್ ಮಾಡಿದ್ದಾನೆ. ಈ ಸಂದರ್ಭದಲ್ಲಿ ಸ್ಥಳೀಯರು ಗಾಳಿಯಲ್ಲಿ ಗುಂಡು ಹಾರಿಸಿದ ವೇಳೆ ಕೇಕೆ ಹಾಕಿದ್ದಾರೆ. ನಿನ್ನೆ ರಾತ್ರಿ ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಶಾಂತನನ್ನು ಸದ್ಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.