Author: kannadanewsnow05

ಮೈಸೂರು : ಸಿಎಂ ಸಿದ್ದರಾಮಯ್ಯ ಯಾವತ್ತೂ ಭ್ರಷ್ಟಾಚಾರ ಮಾಡಿದವರಲ್ಲ. ಸೇಮ ಸಿದ್ದರಾಮಯ್ಯ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಊರನ್ನೇ ಲೂಟಿ ಮಾಡಿದವರು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ತಾಯೂರು ಗೇಟ್ ನಲ್ಲಿ ಸಚಿವ ಡಾ. ಎಚ್ ಸಿ ಮಹದೇವಪ್ಪ ಆಕ್ರೋಶ ಹೊರಹಾಕಿದರು. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ತಾಯೂರು ಗೇಟ್ ಬಳಿ ಮಾತನಾಡಿದ ಅವರು, ಕೆಲವರು ಸೂರ್ಯನಿಗೆ ಉಗಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಸೂರ್ಯನಿಗೆ ಉಗುಳು ತಗುವುದಿಲ್ಲ ಸೂರ್ಯನಿಗೆ ಅಪಮಾನ ಮಾಡುವ ಕೆಲಸ ಮಾಡಲಾಗುತ್ತಿದೆ. ಕೆಲವರು ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ಧ್ವನಿ ಅಡಗಿದರೆ ಶೋಷಿತರ ಧ್ವನಿ ಅಡಗುತ್ತದೆ. ಹೀಗಾಗಿ ಸಿದ್ದರಾಮಯ್ಯ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಊರನ್ನೆ ಲೂಟಿ ಮಾಡಿದವರು ಪ್ರಾಮಾಣಿಕತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ ಹೇಳಿ ಎಂದು ಮಹದೇವಪ್ಪ ಆಕ್ರೋಶ ಹೊರಹಾಕಿದರು.

Read More

ಬೀದರ್ : ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೋಬ್ಬ ಮನೆಗೆ ಬಣ್ಣ ಹಚ್ಚುವ ವೇಳೆ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೀದರ್ ನಗರದ ವಿದ್ಯಾನಗರದಲ್ಲಿ ನಡೆದಿದೆ. ಆದರೆ ಕುಟುಂಬಸ್ಥರು ಇದು ಅಸಹಜ ಸಾವಲ್ಲ ಕೊಲೆ ಆಗಿದೆ ಎಂದು ಆರೋಪಿಸುತ್ತಿದ್ದಾರೆ. ಹೌದು ವಿದ್ಯಾನಗರದ ವಿದ್ಯಾನಂದ ಸ್ವಾಮಿ ಎಂಬುವವರ ಮನೆಗೆ ಬಣ್ಣ ಹಚ್ಚುವ ವೇಳೆ ದುರ್ಘಟನೆ ನಡೆದಿದ್ದು. ಮಂದಕನಳ್ಳಿ ಗ್ರಾಮದ ಇಮ್ಯಾನುವೆಲ್ (23) ಬಣ್ಣ ಹಚ್ಚುವ ವೇಳೆ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಗುತ್ತಿಗೆದಾರ, ಮನೆ ಮಾಲೀಕ, ಇಂಜನೀಯರ್‌ಗಳೆ ಸಾವಿಗೆ ಕಾರಣ ಎಂದು ಗ್ರಾಮಸ್ಥರ ಆಕ್ರೋಶ ವ್ತಕ್ತಪಡಿಸಿದ್ದಾರೆ. ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಯುವಕನ ಶವದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೆಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಗಾಂಧಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2015 ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ಹೌದು ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಕರ್ನಾಟಕ ಲೋಕಾಯುಕ್ತದ ಎಸ್‌ಐಟಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಪ್ರಕರಣದ ಎರಡನೇ ಆರೋಪಿಯಾಗಿರುವ ಕುಮಾರಸ್ವಾಮಿ, ಪ್ರಕರಣದ ಸಂಬಂಧಿಸಿದ ದಾಖಲೆಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಎಸ್‌ಐಟಿ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಆರೋಪಿಗಳ ಪರ ವಕೀಲರಿಗೆ ಸೂಚಿಸಿದ ನ್ಯಾಯಾಲಯ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿತು.

Read More

ಬೆಂಗಳೂರು : ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪಾನಿಪುರಿ ವ್ಯಾಪಾರಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಸರ್ವೇಶ್ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕೊಲೆಯಾದ ಸರ್ವೇಶ್, ವರ್ಷದ ಹಿಂದೆ ಪತ್ನಿ ಮತ್ತು ಮಗನ ಜೊತೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕೋನಪ್ಪನ ಅಗ್ರಹಾರ ಪುರಸಭೆಯ ಬಳಿ ಪಾನಿಪುರಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದ್ರೆ, ಕುಡಿತದ ಚಟದಿಂದ ಈತ ಬಲಿಯಾಗಿದ್ದಾನೆ. ಆರೋಪಿಗಳು ಪಾರ್ಕಿಂಗ್ ಟೈಲ್ಸ್​ನಿಂದ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಸರ್ವೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಸರ್ವೇಶ್ ನನ್ನು ಕೊಲೆಗೈದ ಆರೋಪಿಗಳನ್ನು ಜಾರ್ಖಂಡ್‌ನ ರಾಹುಲ್ ಕುಮಾರ್ (27), ಸಹದೇವ್ ತುರಿ (45) ಎಂದು ಹೇಳಲಾಗುತ್ತಿದೆ. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

Read More

ಬೆಂಗಳೂರು : ಬೆಂಗಳೂರು ನಗರದಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಶಾಲಾ ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿತ್ತು. ಆದರೆ ನಾಳೆ ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಹಾಗೂ ಅಂಗನವಾಡಿಗಳಿಗೆ ಯಾವುದೇ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಗದೀಶ್ ಅವರು, ಬೆಂಗಳೂರು ನಗರ ಜಿಲ್ಲೆಯ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಇಲ್ಲ. ಬೆಂಗಳೂರಿನಲ್ಲಿ ನಾಳೆ ವ್ಯಾಪಕ ಮಳೆ ಯಾಗುವ ಬಗ್ಗೆ ಮುನ್ಸೂಚನೆ ಇಲ್ಲ. ಹಾಗಾಗಿ ನಾಳೆ ಶಾಲಾ ಕಾಲೇಜು ಹಾಗು ಅಂಗನವಾಡಿಗಳಿಗೆ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Read More

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚುವಂತೆ ತಾವು ಹೇಳಿದ್ದಾಗಿ ನಕಲಿ ಆಡಿಯೊವನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಇದರಿಂದ ನನ್ನ ಘನತೆಗೆ ಧಕ್ಕೆಯುಂಟಾಗುತ್ತಿದೆ ಎಂದು ಶಾಸಕ ಶಿವಲಿಂಗೇಗೌಡ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ನಕಲಿ ಆಡಿಯೊ ಹರಿ ಬಿಡುವ ಮೂಲಕ ತಮ್ಮ ಗೌರವಕ್ಕೆ ಚ್ಯುತಿ ಉಂಟು ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚುನಾವಣೆ ನಡೆದು ಆರು ತಿಂಗಳು ಆಗಿದೆ. ಯಾವ ಉದ್ದೇಶದಿಂದ ನಕಲಿ ಆಡಿಯೊ ಜಾಲತಾಣದಲ್ಲಿ ಹರಿಬಿಡಲಾಗಿದೆ? ಯಾರು ಈ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಮಾತನಾಡಿರುವುದೇ ಒಂದು. ಅದಕ್ಕೆ ಸಂಬಂಧವಿಲ್ಲದ ಮತ್ತೊಂದು ಆಡಿಯೊವನ್ನು ಸೇರಿಸಲಾಗಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇನೆ ಎಂದಿದ್ದಾರೆ.

Read More

ಬೆಂಗಳೂರು : ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಆರು ತಿಂಗಳಿನಿಂದ ಪಡಿತರ ಪಡೆಯದ 2,75,667, ಆದಾಯ ತೆರಿಗೆ ಪಾವತಿ ಮಾಡುವ 98,485, ಆದಾಯ ಮಿತಿ ಹೆಚ್ಚಿರುವ 10,09,478 ಪಡಿತರ ಚೀಟಿಗಳು ಸೇರಿವೆ ಎಂದರು. 2023-24ನೆ ಸಾಲಿನಲ್ಲಿ ಹೊಸ ಪಡಿತರ ಚೀಟಿ ಕೋರಿ 2,95,986 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 2,30,549 ಅರ್ಹ ಅರ್ಜಿಗಳಿದ್ದವು. 1,48,533 ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಿದ್ದೇವೆ. 65,437 ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. 82,016 ವಿತರಣೆಗೆ ಬಾಕಿಯಿವೆ.…

Read More

ಚಿತ್ರದುರ್ಗ : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿ ತಾಲೂಕಿನಲ್ಲಿ ನಡೆದಿದೆ. ಬ್ಯಾಡರಹಳ್ಳಿ ನಿವಾಸಿ ಮೀನಾಕ್ಷಮ್ಮ (63) ಮೃತಪಟ್ಟ ವೃದ್ಧೆ ಎಂದು ತಿಳಿದುಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಈ ಒಂದು ಅವಘಡ ನಡೆದಿದೆ. ಮನೆ ಗೋಡೆ ಕುಸಿದು ಮೀನಾಕ್ಷಮ್ಮ ಗಾಯಗೊಂಡಿದ್ದರು. ಕೂಡಲೇ ಅವರನ್ನ ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೀನಾಕ್ಷಮ್ಮ ಸಾವನಪ್ಪಿದ್ದಾರೆ ಎನ್ನಲಾಗಿದೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇದೇ ಅಕ್ಟೋಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಕಂಬಳಕ್ಕೆ ಅನುಮತಿ ನೀಡಬಾರದು ಎಂದು ಹೈಕೋರ್ಟಿಗೆ ಪೆಟಾ (People for the Ethical Treatment of Animals) ಅರ್ಜಿ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಇಂದು ಪೆಟಾ ಪರವಾಗಿ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು. ಈ ವೇಳೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯ ಪೀಠವು ಕೊನೆಯ ಹಂತದಲ್ಲಿ ಅರ್ಜಿ ವಿಚಾರಣೆಗೆ ಕೋರುತ್ತಿರುವುದೇಕೆ, ಇಷ್ಟು ವಿಳಂಬವೇಕೆ ಎಂದು ಪ್ರಶ್ನಿಸಿತು. ಇದಕ್ಕೆ ಅರ್ಜಿದಾರರ ಪರ ವಕೀಲರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜುಲೈನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅದಕ್ಕೆ ಇನ್ನು ವಿಚಾರಣೆ ನಿಗದಿಪಡಿಸಿಲ್ಲ.ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವಾರು ಕೋಣಗಳನ್ನು ಬೆಂಗಳೂರಿಗೆ ದೊಡ್ಡ ವಾಹನಗಳಲ್ಲಿ ಸಾಗಿಸಲಾಗುತ್ತಿದೆ ಎಂದರು. ಬಳಿಕ ಪೀಠ ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿಗೊಳಿಸಿತು.

Read More

ಬೆಂಗಳೂರು : ನಮ್ಮ ಸರ್ಕಾರ ಎಲ್ಲಾ ಸಮಾಜ ಹಾಗೂ ಎಲ್ಲಾ ಸಮುದಾಯದ ಪರ ನಿಲ್ಲುತ್ತದೆ. ಜನರಿಗೆ ಅನುಕೂಲವಾಗಲಿ ಎಂದು ಗ್ಯಾರಂಟಿ ಯೋಜನೆ ತಂದಿದೆ. ಚುನಾವಣೆಯ ವೇಳೆ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಾವು ರಾಜಕಾರಣ ಮಾಡುತ್ತಿರುವುದು ಭಾವನೆಯ ಮೇಲೆ ಅಲ್ಲ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಟೌನ್ ಹಾಲ್ ನಲ್ಲಿ ಅರ್ಚಕರ ಬೃಹತ್ ಸಮಾವೇಶ ನಡೆಯುತ್ತಿದ್ದು ಈ ಒಂದು ಸಮಾವೇಶದಲ್ಲಿ ಮಾತನಾಡಿದ ಅವರು ಗೃಹ ಸಚಿವ ಜಿ ಪರಮೇಶ್ವರ್ ಅವರು ಗಣಪತಿಯನ್ನು ನೆನಪಿಸಿಕೊಂಡಿದ್ದಾರೆ. ಜೋರು ಮಳೆ ಬರುತ್ತಿದ್ದರು ಕೂಡ ಚಳ್ಳಕೆರೆಯಿಂದ ಓಡೋಡಿ ಬಂದೆ.ಈ ದೇಶಕ್ಕೆ ಆಸ್ತಿ ಅಂದರೆ ನಮ್ಮ ಸಂಸ್ಕೃತಿ. ದೇವರಿಗೆ ಪೂಜೆ ಸಲ್ಲಿಸುವ ಭಾಗ್ಯ ಅರ್ಚಕರಿಗೆ ಕೊಟ್ಟಿದ್ದಾನೆ ಎಂದು ಅರ್ಚಕರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ನಾವು ಕಲ್ಲಿನಲ್ಲೇ ದೇವರನ್ನು ಕಾಣುತ್ತೇವೆ. ಪೂಜಿಸಲು ಜಾತಿ ಬೇಕಾಗಿಲ್ಲ. ಧರ್ಮದಲ್ಲಿ ಯಾರನ್ನು ಟೀಕಿಸಬಾರದು ಎಂದು ಹೇಳುತ್ತಾರೆ. ಮುಜರಾಯಿ ಇಲಾಖೆಯ ಸಚಿವರು ಅನೇಕ…

Read More