Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಐಸಿರಿ (14) ಎಂದು ತಿಳಿದುಬಂದಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ICSC) ಶಾಲೆಯಲ್ಲಿ ಐಸಿರಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ಕೆಲ ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಈಕೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ.ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಅಕಾಲಿಕ ನಿಧನಕ್ಕೆ ಸಹ್ಯಾದ್ರಿ ಶಾಲಾ ಶಿಕ್ಷಣ ಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.
ಮೈಸೂರು : ಕಳೆದ ಕೆಲವು ದಿನಗಳಷ್ಟೇ ಹಿಂದೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅಗ್ನಿ ಅವಘಡ ಸಂಭವಿಸಿತ್ತು. ಇದೀಗ ಮೈಸೂರಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು ಆಕಸ್ಮಿಕ ಬೆಂಕಿಯಿಂದಾಗಿ ಹತ್ತರಿಂದ ಹನ್ನೆರಡು ಬಾಯ್ಲರ್ ಗಳು ಹೊತ್ತಿ ಉರಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು ಮೈಸೂರಲ್ಲಿ ಕೆಮಿಕಲ್ ಬಾಯ್ಲರ್ ವೇಸ್ಟ್ ಗೆ ಅಕಸ್ಮಿಕ ಬೆಂಕಿ ತಗುಲಿಕೊಂಡಿದೆ. ಈ ವೇಳೆ ಬೆಂಕಿಯ ತೀವ್ರತೆಗೆ ಬಾಯ್ಲರ್ ಗಳು ಧಗ ಧಗನೇ ಹೊತ್ತಿ ಉರಿದಿವೆ. ಸುಮಾರು 10ರಿಂದ 12 ಬಾಯ್ಲರ್ ಗಳು ಸುಟ್ಟು ಭಸ್ಮವಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದಿಬ್ಬಣ ಆಗಮಿಸಿ, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.
ವಿಜಯನಗರ : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಕುರಿತಂತೆ ಇತ್ತೀಚಿಗೆ ಹಲವು ಕೈ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಇನ್ನು ಇದೇ ವಿಚಾರವಾಗಿ ಸಚಿವ ಜಮೀರ್ ಅಹಮದ್ ಖಾನ್ ಪ್ರತಿಕ್ರಿಯೆ ನೀಡಿದು ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ ಅವರನ್ನು ಮುಟ್ಟೋಕಾಗುತ್ತಾ ಅಕಸ್ಮಾತ ಒಂದು ವೇಳೆ ಮುಟ್ಟಿದರು ಅವರು ಸುಟ್ಟು ಬಸವ ಮಾಡುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು. ವಿಜಯನಗರ ಜಿಲ್ಲೆಯ ಹಂಪಿ ಎಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,ಸಿದ್ದರಾಮಯ್ಯ ಬೆಂಕಿ ಇದ್ದಂತೆ ಯಾರು ಮುಟ್ಟೋಕಾಗಲ್ಲ ಒಂದು ವೇಳೆ ಮುಟ್ಟಿದರೆ ಭಸ್ಮವಾಗುತ್ತಾರೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಮುಟ್ಟಲು ಸಾಧ್ಯ ಏನ್ರೀ? ಒಂದು ವೇಳೆ ಮುಟ್ಟಿದರೆ ಸುಟ್ಟು ಭಸ್ಮವಾಗುತ್ತಾರೆ.ಸಿಎಂ ಸ್ಥಾನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಸಚಿವ ಜಮೀರ್ ಅಹ್ಮದ್ ತಿಳಿಸಿದರು ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸದ್ಯಕ್ಕೆ ಇದ್ದಾರೆ. ಎಲ್ಲಾ ಸಮುದಾಯದವರಿಗೂ…
ಬೆಂಗಳೂರು : ರಾಜ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ 5 ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲೂ ಮಹಿಳೆಯರಿಗೆ ಎಂದೆ ಶಕ್ತಿ ಯೋಜನೆ ಜಾರಿ ಮಾಡಿದ್ದು, ಈ ಒಂದು ಶಕ್ತಿ ಯೋಜನೆಯಿಂದ ಈಗಾಗಲೇ ರಾಜ್ಯದ ಎಲ್ಲಾ ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ. ಇದೆ ಯೋಜನೆ ಅಡಿಯಲ್ಲಿ ಇದೀಗ ರಾಜ್ಯ ಸರ್ಕಾರ ಮತ್ತೊಂದು ಚಿಂತನೆ ನಡೆಸಿದ್ದು, ಡಯಾಲಿಸಿಸ್ ಇರುವ ಪುರುಷರಿಗೂ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಹೌದು ರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಪುರುಷರು ಡಯಾಲಿಸಿಸ್ಗಾಗಿ ವಾರಕ್ಕೊಮ್ಮೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೆ ಹೋಗಬೇಕಿದೆ. ಹೀಗಾಗಿ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪುರುಷರಿಗೂ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ನಿತ್ಯ ಪುರುಷರು ಸಾರಿಗೆ ಬಸ್ ಬಳಕೆ ಮಾಡುತ್ತಾರೆ. ಇದರಲ್ಲಿ ಅನೇಕ…
ರಾಂಚಿ : ಮಹಾಕುಂಭ ಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಸಂಸದೆ ಮಹುವಾ ಮಾಜಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಅವರ ಕುಟುಂಬ ಸದಸ್ಯರು ಕೂಡ ಗಾಯಗೊಂಡಿದ್ದಾರೆ. ಅವರ ಕಾರು ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ. ಅವರನ್ನು ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದೆ. ಜೆಎಂಎಂನ ರಾಜ್ಯಸಭಾ ಸಂಸದೆ ಮಹುವಾ ಮಾಜಿಮಹಾ ಕುಂಭ ಮೇಳದಲ್ಲಿ ಸ್ನಾನ ಮಾಡಿ ಪ್ರಯಾಗ್ರಾಜ್ನಿಂದ ಹಿಂತಿರುಗುತ್ತಿದ್ದರು l. ಈ ಸಮಯದಲ್ಲಿ ಅವರ ಮಗ ಮತ್ತು ಸೊಸೆ ಕೂಡ ಅವರೊಂದಿಗೆ ಇದ್ದರು. ರಾಷ್ಟ್ರೀಯ ಹೆದ್ದಾರಿ-39ರ ಲತೇಹಾರ್ನ ಹೊಟ್ವಾಗ್ ಗ್ರಾಮದಲ್ಲಿ ಅವರ ಕಾರು, ನಿಲ್ಲಿಸಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ.ಅಪಘಾತದ ಬಳಿಕ ತಕ್ಷಣ ಅವರನ್ನು ರಾಂಚಿಯ ಆರ್ಕಿಡ್ ವೈದ್ಯಕೀಯ ಕೇಂದ್ರದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಸಭಾ ಸದಸ್ಯೆಯಾಗಿರುವ ಮಹುವಾ ಎಡ ಮಣಿಕಟ್ಟಿನಲ್ಲಿ ಮೂಳೆ ಮುರಿತ ಉಂಟಾಗಿದ್ದು, ಪಕ್ಕೆಲುಬುಗಳಿಗೆ ಸ್ವಲ್ಪ ಹಾನಿಯಾಗಿದೆ. ನಾವು ಪ್ರಯಾಗರಾಜ್ನ…
ಕೊಡಗು : ಶಿವರಾತ್ರಿ ದಿನದಂದೇ ಕೊಡಗು ಜಿಲ್ಲೆಯಲ್ಲಿ ಘೋರವಾದಂತಹ ಘಟನೆ ಸಂಭವಿಸಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗಲೇ ಹೆಜ್ಜೇನು ದಾಳಿ ಮಾಡಿದೆ. ಹೆಜ್ಜೇನು ದಾಳಿಯಿಂದ ಲೋಹಿತ್ (30) ಎನ್ನುವ ಯುವಕ ಸಾವನಪ್ಪಿದ್ದಾನೆ. ಪೋದ್ದಮಾನಿ ಗ್ರಾಮದ ಬಳಿ ಕಾಫಿ ಕೊಯ್ಲು ಮಾಡುವಾಗ ಹೆಜ್ಜೆನು ದಾಳಿಯಿಂದ ಈ ದುರಂತ ಸಂಭವಿಸಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪೋದ್ದಮಾನಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಹೆಜ್ಜೆನು ದಾಳಿಯ ವೇಳೆ ಲೋಹಿತ್ ಶರ್ಟ್ ಬಿಚ್ಚಿಕೊಂಡು ಓಡಿದ. ಏಕಾಏಕಿ ನೂರಾರು ಹೆಜ್ಜೆನುಗಳು ದಾಳಿ ಮಾಡಿ ಗಾಯಗೊಳಿಸಿವೆ ಹೀಗಾಗಿ ಚಿಕಿತ್ಸೆ ಫಲಿಸದೆ ಲೋಹಿತ್ ಸಾವನಪ್ಪಿದ್ದಾನೆ
ಕಲಬುರ್ಗಿ : ಕಳೆದ ಹಲೋ ತಿಂಗಳ ಹಿಂದೆ ಬಳ್ಳಾರಿ ಬೆಳಗಾವಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಬಾಣಂತಿಯರ ಸಾವು ಪ್ರಕರಣ ಇಡೀ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕಲ್ಬುರ್ಗಿಯ ಪ್ರತಿಷ್ಠಿತ ESI ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿಯೋರ್ವಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೌದು ಕಲಬುರ್ಗಿya ESI ಆಸ್ಪತ್ರೆಯಲ್ಲಿ ಬಾಣಂತಿ ಶಿಲ್ಪ (32) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೋನಸನಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ.ಸೋಮವಾರ ಹೆರಿಗೆಗೆ ಎಂದು ಇಎಸ್ಐ ಆಸ್ಪತ್ರೆಗೆ ಶಿಲ್ಪ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ ನಂತರ ಶಿಲ್ಪಗೆ ನಿರಂತರವಾಗಿ ರಕ್ತ ನೀಡಲಾಗಿತ್ತು. ಆದರೂ ಸಹ ಚಿಕಿತ್ಸೆ ಫಲಿಸದೇ ಇದೀಗ ಲೋ ಬಿಪಿ ಯಿಂದಾಗಿ ಶಿಲ್ಪಾ ಸಾವನ್ನಪ್ಪಿದ್ದರೆ.
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಆಳಂದ್ ಪಟ್ಟಣದಲ್ಲಿರುವ ಲಾಡ್ಲೆ ಮಾಶಾಕ್ ದರ್ಗಾದಲ್ಲಿರುವಂತಹ ರಾಘವ ಚೈತನ್ಯ ಶಿವಲಿಂಗ ಪೂಜೆಗಾಗಿ ನಿನ್ನೆ ಹಿಂದೂ ಸಂಘಟನೆಗಳು ಕಲಬುರ್ಗಿ ಹೈಕೋರ್ಟಿಗೆ ಅನುಮತಿ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದವು.ನಿನ್ನೆ ಹೈಕೋರ್ಟ್ ಪೀಠ ಹಲವು ಷರತ್ತುಗಳನ್ನು ವಿಧಿಸಿ ಶಿವಲಿಂಗ ಪೂಜೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇದೀಗ ಆಳಂದ್ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ 144 ಜಾರಿ ಮಾಡಲಾಗಿದೆ. ಹೌದು ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ಶ್ರೀರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಹಿಂದೂಗಳಿಗೆ ಹೈಕೋರ್ಟ್ ಅವಕಾಶ ನೀಡಿದೆ. ಹೀಗಾಗಿ ಇಂದಿನ ಮಹಾ ಶಿವರಾತ್ರಿಯ ದಿನದಂದು ಶಿವಲಿಂಕಕ್ಕೆ ವಿಶೇಷ ಪೂಜೆ ಸಲ್ಲಿಸಲು ಶಿವಭಕ್ತರು ಮುಂದಾಗಿದ್ದಾರೆ. ಹೀಗಾಗಿ ಶಿವಲಿಂಗೆಕ್ಕೆ ವಿಶೇಷ ಪೂಜೆ ಸಲ್ಲಿಸಲು ಹಿಂದೂಪರ ಸಂಘಟನೆಗಳು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸದ್ಯ ಕಲಬುರಗಿಯ ಆಳಂದ ಪಟ್ಟಣದಲ್ಲಿ 144 ಅನ್ವಯ ನಿಷೇದಾಜ್ಞೆ ಜಾರಿ ಮಾಡಲಾಗಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಇಂದು ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯವರೆಗೆ ಶಿವಲಿಂಗ ಪೂಜೆಗೆ ಅವಕಾಶ ಇದೆ.
ಚಿಕ್ಕಬಳ್ಳಾಪುರ : ಇಂದು ಎಲ್ಲೆಡೆ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಮಹಾಶಿವರಾತ್ರಿಯ ಅಂಗವಾಗಿ ಚಿಕ್ಕಬಳ್ಳಾಪುರದಲ್ಲಿರುವ ಆದಿಯೋಗಿ ಶಿವನ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶಿವನ ದರ್ಶನ ಪಡೆಯುತ್ತಿದ್ದಾರೆ ಆದರೆ ಇದೆ ಆದಿಯೋಗಿ ದರ್ಶನ ಪಡೆದು ಹಿಂದಿರುಗುವಾಗ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಹೌದು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬ್ರಿಡ್ಜ್ ಬಳಿ ದುರ್ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೇಪಾಳ ಮೂಲದ ಸುನಿಲ್ ಬಿಸ್ತೂರಿ ಹಾಗೂ ಕುಜಲ್ ಭಂಡಾರಿ ಮೃತ ಯುವಕರು ಎಂದು ತಿಳಿದು ಬಂದಿದೆ. ಮೃತ ಯುವಕರು ಬೆಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಈ ಇಬ್ಬರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬೈಕ್ ನಲ್ಲಿದ್ದ ಸುನಿಲ್ ಬಿಸ್ತೋರಿ ಹಾಗೂ ಕುಜಲ್ ಭಂಡಾರಿ ದುರ್ಮರಣ ಹೊಂದಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ…
ಬೆಂಗಳೂರು : ಅತಿ ವೇಗವಾಗಿ ತೆರಳುವಾಗ ಆಯತಪ್ಪಿ ಬಿದ್ದು ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಬೆಂಗಳೂರಿನ ಜೆಪಿ ಪಾರ್ಕ್ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ತಡರಾತ್ರಿ 1.30 ರ ಸುಮಾರಿಗೆ ಬೈಕ್ ಸವಾರ ಅರುಣ್ (30) ಸಾವನಪ್ಪಿದ ಬೈಕ್ ಸವಾರ ಎಂದು ತಿಳಿದುಬಂದಿದೆ. ಅಪಘಾತದ ಬಳಿಕ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಅರುಣ್ ಕೊನೆಯುಸಿರೆಳಿದಿದ್ದಾನೆ.











