Subscribe to Updates
Get the latest creative news from FooBar about art, design and business.
Author: kannadanewsnow05
ವಿಜಯಪುರ : ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ನೀಡಿದ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರದಲ್ಲಿ ರಸ್ತೆ ತಡೆದು ಶಾಸಕ ಬಚನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಹಾಗೂ ಅಪಾರ ಅಭಿಮಾನಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೌದು ನಿನ್ನೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಫೆಬ್ರವರಿ 10ರಂದು ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಸ್ವಪಕ್ಷದ ನಾಯಕರ ವಿರುದ್ಧವೆ ಗಂಭೀರವಾದ ಆರೋಪ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಉತ್ತರಿಸುವಂತೆ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೋಟಿಸ್ ಗೆ ಉತ್ತರ ನೀಡಿರಲಿಲ್ಲ. ಹೀಗಾಗಿ ಕೇಂದ್ರೀಯ ಶಿಸ್ತು ಸಮಿತಿ 6 ವರ್ಷಗಳ ಕಾಲ ಯತ್ನಾಳರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶಿಸಿದ್ದಾರೆ. ಯತ್ನಾಳ ಅವರ ಉಚ್ಚಾಟನೆ ಮಾಹಿತಿ ತಿಳಿಯುತ್ತಿದ್ದಂತೆ ಇತ್ತ ವಿಜಯಪುರದಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು,…
ಬೆಂಗಳೂರು : ಧರ್ಮಸ್ಥಳ ಠಾಣೆ ಪಿಎಸ್ಐ ಕಿಶೋರ್ ಕುಟುಂಬದ ವಿರುದ್ಧ ಪತ್ನಿ ವರ್ಷಾ ಇದೀಗ ವರದಕ್ಷಿಣೆ ಕಿರುಕುಳ ಕುರಿತು ಗಂಭೀರ ಆರೋಪ ಮಾಡಿದ್ದು, ಧರ್ಮಸ್ಥಳ ಠಾಣೆ ಪಿಎಸ್ಐ ಕಿಶೋರ್ ಪತ್ನಿ ವರ್ಷ ಈ ಕುರಿತು ಹೇಳಿಕೆ ನೀಡಿದ್ದಾರೆ. ಪತಿ ಕಿಶೋರ್, ಅತ್ತೆ, ಮಾವ ಮತ್ತು ಮೈದುನ ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ನಿಶ್ಚಿತಾರ್ಥ ಆದಾಗಿನಿಂದಲೂ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ನಾನು ಒಬ್ಬಳೇ ಮಗಳೆಂದು ನನ್ನ ಅಪ್ಪ ಅಮ್ಮ ಸಾಕಷ್ಟು ಹಣ ನೀಡಿದ್ದರು. ಅಪ್ಪ ಅಮ್ಮನ ಮರ್ಯಾದೆ ಹೆದರಿ ಒಂದು ವರ್ಷದಿಂದ ಎಲ್ಲಾ ವನ್ನು ಸಹಿಸಿಕೊಂಡಿದ್ದೆ ಮನೆಯ ಕೊಠಡಿಯಲ್ಲಿ ಕೂಡಿಹಾಕಿ ಲಟ್ಟಣಿಗೆಯಿಂದ ಹಲ್ಲೆ ಮಾಡಿದ್ದರು. ದಿಂಬಿನಿಂದ ಉಸಿರುಗುಟ್ಟಿಸಿ ನನ್ನನ್ನು ಕೊಲೆಗೈಯಲು ಪ್ರಯತ್ನಿಸಿದ್ದರು.ಜೀವ ಉಳಿಸಿಕೊಳ್ಳುವ ಸಲುವಾಗಿ ನಾನು ಪೋಷಕರಿಗೆ ವಿಷಯ ತಿಳಿಸಿದ್ದೆ. ಅನಂತರ ಧರ್ಮಸ್ಥಳದಿಂದ ಬೆಂಗಳೂರಿಗೆ ಬಂದು ದೂರು ನೀಡಿದ್ದೇನೆ. ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ದೇಹದ ಹಲವು ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿದೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಪದೇ ಪದೇ…
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ ಮಾಡಿ ಸಂಪುಟದಲ್ಲಿ ಅನುಮೋದನೆ ದೊರೆಯಿತು. ಇದರ ಬೆನ್ನಲ್ಲೆ ಇದೀಗ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ವಿದ್ಯುತ್ ದರ ಪ್ರತಿ ಯುನಿಟ್ ಗೆ 36 ಪೈಸೆ ಏರಿಕೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಘೋಷಣೆ ಮಾಡಿದೆ. ಹೌದು ನಂದಿನಿ ಹಾಲಿನ ದರ ಏರಿಕೆ ಬೆನ್ನೆಲೆ ವಿದ್ಯುತ್ ತರ ಏರಿಕೆ ಶಾಕ್ ಎದುರಾಗಿದ್ದು, ಇದೀಗ KERC ಪ್ರತಿ ಯುನಿಟ್ ಗೆ 36 ಪೈಸೆ ಏರಿಕೆಯ ಬಗ್ಗೆ ಅಧಿಕೃತ ಘೋಷಣೆ ಆಗಿದೆ. ಮೂರು ವರ್ಷಗಳ ವಿದ್ಯುತ್ ದರ ಇದೀಗ ಘೋಷಣೆ ಆಗಿದೆ. ಪ್ರತಿ ಯುನಿಟ್ ಗೆ 36 ಪೈಸೆ ಹೆಚ್ಚಿಸಿ ಕೆಇಆರ್ಸಿ ದರ ಘೋಷಿಸಿದೆ. ಈ ಹಿಂದೇನೆ ಹಲವು ಬಾರಿ ದರ ಏರಿಕೆಗೆ ಎಸ್ಕಾಂಗಳಿಂದ ವಿದ್ಯುತ್ ದರ ಏರಿಕೆ ಕುರಿತಂತೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಇಂದು…
ಬೆಂಗಳೂರು : ಈ ಹಿಂದೆ ಬಿಜೆಪಿ ಸರ್ಕಾರ 700 ಕೋಟಿ ರೂಪಾಯಿ ರೈತರ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿತ್ತು. ಅದನ್ನು ನಾವು ಬಿಡುಗಡೆ ಮಾಡಿದ್ದೇವೆ. ಈಗ ಏನೋ 600 ಕೋಟಿ ರೂಪಾಯಿ ಬಾಕಿ ಇದೆ ಅಂತ ಕೇಳಿದ್ದೇನೆ. ಆದಷ್ಟು ಬೇಗ ಬಾಕಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು. ಬೆಂಗಳೂರಿನ ವಿಕಾಸಸೌಧದಲ್ಲಿ ಮಾತನಾಡಿದ ಅವರು, ರೈತರಿಗೆ ಸರ್ಕಾರದಿಂದ ಹಾಲಿನ ಪ್ರೋತ್ಸಾಹ ಧನ ನೀಡುವ ವಿಚಾರವಾಗಿ ಸಹಕಾರ ಇಲಾಖೆಯ ಸಚಿವ ಕೆ ರಾಜಣ್ಣ ಕೂಡಾ ಉತ್ತರ ನೀಡಿದ್ದಾರೆ ಪ್ರತಿ ಬಾರಿ ಪ್ರೋತ್ಸಾಹ ದರ ನೀಡಲು ಪ್ರಿಂಟಿಂಗ್ ಮಷೀನ್ ಏನಾದರೂ ಇದೆಯಾ? ಸರ್ಕಾರದ ಬಳಿ ಹಣ ಪ್ರಿಂಟ್ ಮಾಡುವ ಮಷೀನ್ ಇದೆಯಾ? ಎಂದು ಉಡಾಫೆಯ ಉತ್ತರ ನೀಡಿದರು. ಪ್ರೋತ್ಸಾಹ ಧನ ಹೆಚ್ಚಳ ಮಾಡಿದರೆ ನಿಮ್ಮ ತೆರಿಗೆ ಹಣವೇ ಹೋಗುತ್ತದೆ. ಬಿಜೆಪಿ ಸರ್ಕಾರ 700 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿತ್ತು. ಅದನ್ನು ನಾವು ಬಿಡುಗಡೆ ಮಾಡಿದ್ದೇವೆ. ಈಗ ಏನೋ…
ಬೆಂಗಳೂರು : ಮನೆಯ ಮುಂದಿನ ಮರ ಕಡಿಬೇಡ ಎಂದ ವ್ಯಕ್ತಿಯ ಮೇಲೆ ಮಚ್ಚಿನಿಂದ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಗೌಡ ಎಂಬಾತ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಶ್ರೀನಿವಾಸನಗರದಲ್ಲಿ ಈ ಒಂದು ಘಟನೆ ನಡೆದಿದೆ. ಬಿಎಂಟಿಸಿ ನೌಕರ ಸುರೇಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಗೌಡನಿಂದ ಹಲ್ಲೆ ನಡೆದಿದೆ. ಬೆಂಗಳೂರಿನ ಸುಂಕದಕಟ್ಟೆಯ ಶ್ರೀನಿವಾಸನಗರದಲ್ಲಿ ಈ ಒಂದು ಕೃತ್ಯ ನಡೆದಿದೆ. ಮನೆ ಮುಂದೆ ಕಾರು ಹೋಗಲು ಜಾಗವಿಲ್ಲವೆಂದು ಮರ ಕಡಿಯಲು ಯತ್ನಿಸಲಾಗಿದೆ. ಮರವಿದ್ದರೆ ನೆರಳು ಕೊಡುತ್ತದೆ ಕಡಿಬೇಡಿ ಎಂದಿದ್ದ ಎದುರು ಮನೆಯ ಸುರೇಶ್. ಸಿಟ್ಟಿಗೆದ್ದು ನೀನ್ಯಾರು ನನ್ನನ್ನು ಪ್ರಶ್ನಿಸಲು ಎಂದು ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಗೌಡ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಮಚ್ಚಿನಿಂದ ಹಲ್ಲಿಗೆ ಒಳಗಾದ ಬಿಎಂಟಿಸಿ ನೌಕರ ಸುರೇಶ್ ಕೈ ಮತ್ತು ಕಿವಿ ಭಾಗದಲ್ಲಿ ಗಾಯಗಳಾಗಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಘಟನೆ ಸಂಭಂದ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಿ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆಯಿತು. ಇದರ ಬೆನ್ನಲ್ಲೇ, ಪಶು ಸಂಗೋಪನ ಇಲಾಖೆ ಸಚಿವ ಕೆ ವೆಂಕಟೇಶ್ ಸುದ್ದಿಗೋಷ್ಠಿ ನಡೆಸಿ, ನಂದಿನ ಹಾಲಿನ ಪರಿಷ್ಕೃತ ದರ ಏಪ್ರಿಲ್ 1 ರಿಂದ ಅನ್ವಯ ಆಗಲಿದೆ ಎಂದು ವಿಕಾಸಸೌಧದಲ್ಲಿ ಪಶು ಸಂಗೋಪನ ಸಚಿವ ಕೆ ವೆಂಕಟೇಶ್ ಅವರು ಸ್ಪಷ್ಟನೆ ನೀಡಿದರು. ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಪಶು ಸಂಗೋಪನ ಇಲಾಖೆ ಸಚಿವ ಕೆ ವೆಂಕಟೇಶ್ ಅವರು ಏಪ್ರಿಲ್ 1ರಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯ ಆಗಲಿದೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಾಡಿ ಕ್ಯಾಬಿನೆಟ್ ನಲ್ಲಿ ಈ ಕುರಿತು ತೀರ್ಮಾನ ಆಗಿದೆ. 4 ರೂಪಾಯಿ ರೈತರಿಗೆ ಕೊಡಬೇಕು ಅಂತಾನು ಕೂಡ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು. ಹಾಲಿನ ದರ ಹೆಚ್ಚಳ…
ಬೆಂಗಳೂರು : ವಿಕಾಸಸೌಧದ ಮುಂದೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಭವನ ನಿರ್ಮಾಣ ಮಾಡಲಾಗುತ್ತದೆ. ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಸಂಪುಟ ಸಭೆಯ ಬಳಿಕ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿಕೆ ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು 28 ಎಕರೆ 8 ಗುಂಟೆ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ ಡಾ. ಅಂಬೇಡ್ಕರ್ ಜೀವನ ಚರಿತ್ರೆ ಬಗ್ಗೆ ಸ್ಪೂರ್ತಿ ಸೌಧ ನಿರ್ಮಾಣ ಮಾಡಲಾಗುವುದು. ಈ ಹಿಂದೆಯೂ ಸ್ಪೂರ್ತಿ ಸೌಧ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿತ್ತು. ಪರಿಷ್ಕೃತ ಅಂದಾಜು ಮಾಡಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 1994 ರಲ್ಲಿ ಮೈಸೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಮೈಸೂರಿನಲ್ಲಿ ಡಾ. ಅಂಬೇಡ್ಕರ್ ಭವನದ ಕಟ್ಟಡ ಪೂರ್ಣ ಆಗಿರಲಿಲ್ಲ. 23 ಕೋಟಿ ರೂಪಾಯಿ ಪರಿಷ್ಕೃತ ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಿದೆ. ನಮ್ಮ ಅವಧಿಯಲ್ಲಿ ಅಂಬೇಡ್ಕರ್ ಭವನ ಕಟ್ಟಡ ಪೂರ್ಣ ಮಾಡುತ್ತೇವೆ. ಹಿಂದಿನ ಸರ್ಕಾರ ಕಟ್ಟಡ…
ಬೆಂಗಳೂರು : ಯುಪಿಐ ಮುಖಾಂತರ 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ರಾಜ್ಯ ಮಾಹಿತಿ ಹಕ್ಕುಗಳ ಆಯೋಗದ ಆಯುಕ್ತರು ಒಬ್ಬರು ರೆಡ್ ಅಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಹೌದು ರಾಜ್ಯ ಮಾಹಿತಿಯ ಹಕ್ಕು ಆಯೋಗದ ಆಯುಕ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಆಯುಕ್ತ ರವೀಂದ್ರ ಗುರುನಾಥ ಢಣಕಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯುಪಿಐ ಮುಖಾಂತರ 1 ಲಕ್ಷ ರೂಪಾಯಿ ಲಂಚ ಸ್ಪೀಕರುಸುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ. ಸದ್ಯ ಅಧಿಕಾರಿಗಳು ಭ್ರಷ್ಟಾಚಾರ ತಡೆ ಕಾಯಿದೆ ಆಡಿ ಆಯುಕ್ತ ರವೀಂದ್ರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸರಿಂದ ರವೀಂದ್ರ ಗುರುನಾಥ ಢಣಕಪ್ಪ ವಿಚಾರಣೆ ನಡೆಯುತ್ತಿದೆ.
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ನಾಲ್ಕು ರೂಪಾಯಿ ಏರಿಕೆ ಮಾಡಿ ಸಂಪುಟದಲ್ಲಿ ಅನುಮೋದನೆ ದೊರೆಯಿತು. ಇದರ ಬೆನ್ನಲ್ಲೆ ಇದೀಗ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ವಿದ್ಯುತ್ ದರ ಏರಿಕೆ ಮಾಡಿ ಇಂದು ಸಂಜೆ ಕೆಇಆರ್ಸಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ನಂದಿನಿ ಹಾಲಿನ ದರ ಏರಿಕೆ ಬೆನ್ನೆಲೆ ವಿದ್ಯುತ್ ತರ ಏರಿಕೆ ಶಾಕ್ ಎದುರಾಗಿದ್ದು, ಸಂಜೆ 4:30ಕ್ಕೆ ವಿದ್ಯುತ್ ದರ ಏರಿಕೆಯ ಬಗ್ಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂರು ವರ್ಷಗಳ ವಿದ್ಯುತ್ ದರ ಇಂದೇ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರತಿ ಯುನಿಟ್ ಗೆ 36 ಪೈಸೆ ಹೆಚ್ಚಿಸಿ ಕೆಇಆರ್ಸಿ ದರ ಘೋಷಿಸಲಿದೆ. ದರ ಏರಿಕೆಗೆ ಎಸ್ಕಾಂಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಇಂದು ಅಧಿಕೃತವಾಗಿ ವಿದ್ಯುತ್ ದರ ಕೆಇಆರ್ಸಿ ಘೋಷಣೆ ಮಾಡಲಿದೆ ಏಪ್ರಿಲ್ 1ರಿಂದ…
ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಿಲುಕಿದಂತಹ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಇದೀಗ ವಜಾಗೊಂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಈ ಕುರಿತು ಆದೇಶ ಹೊರಡಿಸಿದೆ. ಹೌದು ದುಬೈ ನಿಂದ ಅಕ್ರಮವಾಗಿ ಸುಮಾರು 14 ಕೋಟಿಗೂ ಅಧಿಕ ಅಕ್ರಮ ಚಿನ ಸಾಗಾಣಿ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣ ಸಂಬಂಧ ಅವರು ಜಾಮಿನ್ ಕೋರಿ ಅರ್ಜಿ ಸಲ್ಲಿಸಿದರು. ಇದೀಗ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯವು ರನ್ಯಾ ರಾವ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.