Author: kannadanewsnow05

ಬೆಳಗಾವಿ : ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಅಭಿವೃದ್ಧಿ ಕಾರ್ಯಗಳಿಗೂ ಕೂಡ ಸರ್ಕಾರದ ಬಳಿ ಯಾವುದೇ ಹಣದ ಕೊರತೆ ಇಲ್ಲ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್ ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಎಪಿಎಲ್ ಕಾರ್ಡಿಗೆ ಮೊದಲು 15 ಕೆಜಿ ಅಕ್ಕಿ ಕೊಡುತ್ತಿದ್ದೆವು. ಅವರು ತೆಗೆದುಕೊಳ್ಳುತ್ತಾ ಇರಲಿಲ್ಲ ಹೀಗಾಗಿ ಅದನ್ನ ನಿಲ್ಲಿಸಿದೆವು ಡಿಮ್ಯಾಂಡ್ ಬಂದರೆ ಮತ್ತೆ ಅಕ್ಕಿ ಕೊಡುತ್ತೇವೆ ಒಂದು ವರ್ಷದಿಂದ ಅಕ್ಕಿ ತೆಗೆದುಕೊಳ್ಳುವವರನ್ನು ಸಸ್ಪೆಂಡ್ ಮಾಡಿದ್ದೇವೆ ಎಂದು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿಕೆ ನೀಡಿದರು.

Read More

ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು ಗಂಗಾವತಿ ಶಾಸಕ ಜನಾರ್ಧನರೆಡ್ಡಿ ಪುತ್ರನಿಗೂ ಇದೀಗ ಭೂ ಕಬಳಿಕೆ ಆರೋಪ ಕೇಳಿ ಬಂದಿದೆ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ವಿರುದ್ಧ ಈ ಒಂದು ಭೂ ಕಬಳಿಕೆ ಆರೋಪ ಕೇಳಿ ಬಂದಿದ್ದು100 ಕೋಟಿ ಮೌಲ್ಯದ ಸುಮಾರು 9 ಎಕರೆ ಭೂಮಿ ಕಬಳಿಸಿದ ಆರೋಪ ಕೇಳಿ ಬಂದಿದೆ. ಹೌದು ಕಿರೀಟಿ ರೆಡ್ಡಿ ಹಾಗೂ ಸಹವರ್ತಿಗಳಿಂದ ಭೂಮಿ ಕಬಳಸಿರುವ ಆರೋಪ ಕೇಳಿ ಬಂದಿದೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಹ ಸಲ್ಲಿಕೆಯಾಗಿದ್ದು, ಬಳ್ಳಾರಿಯ ಗೋವರ್ಧನ ಎಂಬುವವರು ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಸಿಐಡಿ ಅಥವಾ ಎಸ್ಐಟಿ ತನಿಖೆಗೆ ವಹಿಸುವಂತೆ ಗೋವರ್ಧನ್ ಮನವಿ ಮಾಡಿದ್ದಾರೆ. ಈ ಸಂಬಂಧ ಸರ್ಕಾರಕ್ಕೆ ಧಾರವಾಡ ಹೈಕೋರ್ಟ್ ಪೀಠ ನೋಟಿಸ್ ನೀಡಿದೆ. 2005ರಲ್ಲಿ ಕಿರಿಟಿ ಸಹವರ್ತಿಗಳಾದ ಮಂಜುನಾಥ್ ಹಾಗೂ ಬಿ ಸೀನ ಭೂಮಿ…

Read More

ಬಾಗಲಕೋಟೆ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಂಟನೂರು ಕ್ರಾಸ್ ಬಳಿ ಒಂದು ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಂಟನೂರು ಕ್ರಾಸ್ ಬಳಿ ಬೆಳಿಗ್ಗೆ ಲಾರಿ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿ ಮಲ್ಲಿಕಾರ್ಜುನ್ ಗುರಿಕಾರ್ (22) ರೇವಣಸಿದ್ದಪ್ಪ ಕಡೆಮನಿ (20) ಹಾಗೂ ಸುರೇಶ್ ಕೊಣ್ಣೂರ್ (33) ಎನ್ನುವವರು ಸಾವನಪ್ಪಿದ್ದಾರೆ ಇನ್ನು ಅಪಘಾತದಲ್ಲಿ ರಮೇಶ್ ಮಾದರ್ ಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿ ರಭಸಕ್ಕೆ ಲಾರಿ ಮತ್ತು ಸಿಮೆಂಟ್ ತುಂಬಿದ ಟ್ಯಾಂಕರ್ ನಜ್ಗುಗುಜ್ಜಾಗಿದೆ. ಘಟನಾ ಸ್ಥಳಕೆ ಎಸ್ಪಿ ಸಿದ್ಧಾರ್ಥ ಗೋಯಲ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಪುರ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇಂಡಿಗೋ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ವಾಟಳ್ ನಾಗರಾಜ್ ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದಾಗ ಮಾರ್ಗಮಧ್ಯೆ ಪೊಲೀಸರು ವಾಟಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದರು. ಬಾಗಲೂರು ಸಮೀಪ ಕಾರು ಅಡ್ಡಗಟ್ಟಿ ಪೋಲೀಸರು ಅವಶ್ಯಕ ಪಡೆದಿದ್ದಾರೆ ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಅಪಾರ ಸಂಖ್ಯೆಯ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಇಂದು ಕೆಂಪೇಗೌಡ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು ಆದರೆ ಬಾಗಲೂರು ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡ ಬಳಿಕ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು ಪ್ರಿಯತಮೆಯ ಮನೆಯಲ್ಲಿಯೇ ಪ್ರಿಯಕರ ಒಬ್ಬ ಬೆಂಕಿಗೆ ಬಲಿಯಾಗಿದ್ದಾನೆ. 27 ವರ್ಷದ ಗಗನ್ ಶಂಕರ್ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪತ್ನಿಯಿದ್ದರು ಕೂಡ ಗಗನ ಶಂಕರ್ ಮತ್ತೊಬ್ಬಳನ್ನು ಪ್ರೀತಿಸುತ್ತಿದ್ದ. ಸೋಫಾ ಕೊಡಿಸುವ ವಿಚಾರಕ್ಕೆ ಪ್ರಿಯತಮೆ ಕಿರಿಕ್ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಗಲಾಟೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಗಗನ ಶಂಕರ್ ಬೆಂಕಿ ಹಚ್ಚಿಕೊಂಡಿದ್ದಾನೆ. ತಕ್ಷಣಕ್ಕೆ ಬೆಂಕಿ ಆರಿಸಿ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಚಿಕಿತ್ಸೆ ಫಲಕರಿಯಾಗದೆ ಗಗನ ಶಂಕರ್ ಸಾವನಪ್ಪಿದ್ದಾನೆ. ಆಸ್ಪತ್ರೆಯಲ್ಲಿ ಗಗನ ಶಂಕರ್ ಸಾವನ್ನಪಿದ್ದಾನೆ. ಪ್ರಿಯತಮೆ ಹಾಗೂ ಆಕೆಯ ಗಂಡನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾ ರೆ ಎನ್ನುವ ಆರೋಪ ಕೇಳಿ ಬಂದಿದೆ. ಮೃತನ ಪೋಷಕರು ಗುಡಿಬಂಡೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Read More

ರಾಯಚೂರು : ರಾಯಚೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ ಪಲ್ಟಿಯಾಗಿ ಕಂಡಕ್ಟರ್ ಮೃತಪಟ್ಟು, 20 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸುಗೂರು ಬಳಿ ನಡೆದಿದೆ. ಮೃತರನ್ನು ಲಿಂಗಸುಗೂರು ತಾಲೂಕಿನ ಬಸವರಾಜ್ ( 36 ) ಎಂದು ಗುರುತಿಸಲಾಗಿದೆ.ಅಂಜಳ ಗ್ರಾಮದಿಂದ ಅಂಚೇಸುಗೂರಿನ ಕೆನಾಲ್ ಸೇತುವೆ ದಾಟುವ ವೇಳೆ ಬಸ್‌ ಪಲ್ಟಿಯಾಗಿದೆ. ಬಸ್ ನಲ್ಲಿ 39 ಜನ ಪ್ರಯಾಣಿಕರಿದ್ದು, 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಸ್‌ ಚಾಲಕ ಗಂಭೀರ ಗಾಯಗೊಂಡಿದ್ದು, ರಾಯಚೂರಿನ ರಿಮ್ಸ್ ಗೆ ರವಾನೆ ಮಾಡಲಾಗಿದೆ. ಬಸ್ ಪಲ್ಟಿಯಾಗಿ ಕೆಲ ಹೊತ್ತಾದರೂ ಆಂಬ್ಯುಲೆನ್ಸ್ ಬಾರದ ಕಾರಣ ಟಂಟಂ, ಬೈಕ್‌ ಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ಸೌಲಭ್ಯ ಒದಗಿಸುವ ಸಂಬಂಧ ರಾಜ್ಯ ಸರಕಾರದ ಹೊರಡಿಸಿದ್ದ ಅಧಿಸೂಚನೆಗೆ ಇಂದು ಬೆಳಗ್ಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಹಿಂಪಡೆದಿದೆ. ತಡೆಯಾಜ್ಞೆ ಹಿಂಪಡೆಯುವಂತೆ ರಾಜ್ಯ ಸರಕಾರ ಮಾಡಿದ ಮನವಿಯನ್ನು ಪರಿಗಣಿಸಿ ಸರಕಾರ ಆದೇಶವನ್ನು ಮಾರ್ಪಾಡು ಮಾಡಿದೆ. ತಡೆಯಾಜ್ಞೆ ನೀಡಿದ ಕೆಲವೇ ಗಂಟೆಗಳ ಬಳಿಕ ಹೈಕೋರ್ಟ್ ತನ್ನ ಆದೇಶವನ್ನು ಹಿಂಪಡೆದಿದ್ದು, ಬಳಿಕ ಡಿಸೆಂಬರ್ 9 ರಂದು ವಿಚಾರಣೆ ಮುಂದೂಡಿದೆ. ಇಂದು ಬೆಳಿಗ್ಗೆ ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿತ್ತು. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.…

Read More

ಬೆಳಗಾವಿ : 2025ರಲ್ಲಿ 13,000 ಸೈಬರ್ ಕೇಸ್ ದಾಖಲಾಗಿದ್ದು, ಸದ್ಯಕ್ಕೆ 2025 ರಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ. ವಂಚನೆ ಪ್ರಕರಣ ತಡೆಯಲು ಸರ್ಕಾರ, ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ, ಬಿಜೆಪಿ ಸದಸ್ಯ ಸಿಮೆಂಟ್ ಮಂಜು ಅವರು ಕೇಳಿದ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿ, ಕಳೆದ ನಾಲ್ಕು ವರ್ಷಗಳಲ್ಲಿ ಕರ್ನಾಟಕದಲ್ಲಿ 52,000 ಸೈಬರ್ ವಂಚನೆ ಪ್ರಕರಣಗಳು ನಡೆದಿವೆ. ತಡೆಗಟ್ಟಲು ಕಾನೂನಿಗೆ ಬದಲಾವಣೆ ತರಲಾಗಿದೆ. ಆದರೆ, ಇಂಡಿಯಾ ಗೇಮಿಂಗ್ ಫೆಡರೇಶನ್ ಕಾನೂನಿಗೆ ತಡೆ ತಂದಿದ್ದಾರೆ. ಇದೀಗ ಸುಪ್ರೀಂ ಕೋರ್ಟ್​ನಲ್ಲಿ ಪ್ರಕರಣ ವಿಚಾರಣೆಯ ಹಂತದಲ್ಲಿದೆ ಎಂದು ವಿವರಿಸಿದರು. ಸೈಬರ್ ಅಪರಾಧ ಜಾಸ್ತಿಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಕರ್ನಾಟಕದಲ್ಲಿ 52,000 ಪ್ರಕರಣಗಳು ವರದಿಯಾಗಿವೆ. 2023ರಲ್ಲಿ 22,250 ಪ್ರಕರಣ ದಾಖಲಾಗಿದ್ದು, 6,159 ಪತ್ತೆ ಹಚ್ಚಲಾಗಿದೆ. ಸುಮಾರು 880 ಕೋಟಿ ರೂ. ವಂಚನೆ ಆಗಿದೆ. ಈ ಪೈಕಿ 177 ಕೋಟಿ ರೂ.ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.

Read More

ಗೋವಾ : ಕಳೆದ ಕೆಲವು ದಿನಗಳ ಹಿಂದೆ ಗೋವಾದಲ್ಲಿ ಭೀಕರ ಅಗ್ನಿ ದುರಂತದಲ್ಲಿ 25 ಜನ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ದುರಂತ ಸಂಭವಿಸಿದ್ದ ನೈಟ್ ಕ್ಲಬ್ ನ ಕಟ್ಟಡ ತೆರವುಗೊಳಿಸುವಂತೆ ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶ ಹೊರಡಿಸಿದ್ದಾರೆ. ಗೋವಾ ಮುಖ್ಯಮಂತ್ರಿ, ಪ್ರಮೋದ್ ಸಾವಂತ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಯಾವುದೇ ಕ್ಷಣದಲ್ಲಿ ನೈಟ್ ಕ್ಲಬ್ ಕಟ್ಟಡ ಧ್ವಂಸಗೊಳಿಸುವ ಸಾಧ್ಯತೆ ಇದೆ ಉತ್ತರ ಗೋವಾದ ಅರ್ಪೋರ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ 25 ಜನರು ಮೃತಪಟ್ಟಿದ್ದರು ಕ್ಲಬ್ ನ 14 ಸಿಬ್ಬಂದಿಗಳು 14 ಪ್ರವಾಸಿಗರು ಓರ್ವ ಕನ್ನಡಿಗನು ಸೇರಿದಂತೆ 25 ಜನರು ಸಜೀವ ದಹನಗೊಂಡಿದ್ದರು.

Read More

ಹಾಸನ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಹಾಸನದಲ್ಲಿ ಯುವಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹಂತಕರು ಭೀಕರವಾಗಿ ಕೊಲೆ ಮಾಡಿದ್ದಾರೆ ಬಳಿಕ ಕೊಲೆ ಮಾಡಿದ ನಂತರ ಶವದ ಎದುರು ಸೆಲ್ಫಿ ವಿಡಿಯೋ ಮಾಡಿ ನಾವು ಕೊಲೆ ಮಾಡಿದ್ದೇವೆ ಎಂದು ವಿಡಿಯೋ ಹರಿ ಬಿಟ್ಟಿದ್ದಾರೆ. ಹಾಸನ ಹೊರವಲಯದ ಬೆಟ್ಟಗೌಡನ ಹಳ್ಳಿ ಬಳಿ ಈ ಒಂದು ಘಟನೆ ನಡೆದಿದೆ. ಹಾಸನದಲ್ಲಿ ಈ ಒಂದು ಭೀಕರ ಕೊಲೆ ನಡೆದಿದ್ದು, ಆಟೋ ಚಾಲಕ ಕೀರ್ತಿ ತಲ್ಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ ಕೀರ್ತಿ ಹಾಸನದ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಕೊಲೆಯ ಬಳಿಕ ನೋಡಿ ನಾವು ಇವನನ್ನು ಮರ್ಡರ್ ಮಾಡಿದ್ದೇವೆ. ನಾವೇ ಹೊಡೆದು ಕೊಂಡಿದ್ದೇವೆ ಎಂದು ಯುವಕನ ಶವ ತೋರಿಸಿ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂತಕರು ಅಪ್ಲೋಡ್ ಮಾಡಿದ್ದಾರೆ. ಸದ್ಯಕ್ಕೆ ಪೊಲೀಸರು ವಿಡಿಯೋ ಆದರಿಸಿ ಶವಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಹಾಸನದ ಗ್ರಾಮಾಂತರ…

Read More