Author: kannadanewsnow05

ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ KSRTC ಬಸ್ ಟಿಕೆಟ್ ಹಾಗೂ ಮೆಟ್ರೋ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಇದೀಗ ವಿದ್ಯುತ್ ಸ್ಮಾರ್ಟ್ ಮೀಟರ್ ಕಡ್ಡಾಯವಾಗಿ ಅಳವಡಿಸಬೇಕು ಇಂದು ಇಂಧನ ಇಲಾಖೆ ಸಚಿವ ಕೆ ಜೆ ಚಾರ್ಜ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಹೌದು ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೊಸ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಿದ್ದೇವೆ. ಈ ವರ್ಷ 56 ಸಬ್ ಸ್ಟೇಷನ್ ಖರೀದಿ ಮಾಡಿದ್ದೇವೆ. ಮುಂದಿನ ವರ್ಷ 100 ಸಬ್ ಸ್ಟೇಷನ್ ಖರೀದಿ ಮಾಡುತ್ತೇವೆ. ತೆಲಂಗಾಣ ಕರ್ನಾಟಕ ಬಿಟ್ಟರೆ ಎಲ್ಲಾ ಕಡೆಗೆ ಸ್ಮಾರ್ಟ್ ಮೀಟರ್ ಇದೆ. ಸ್ಮಾರ್ಟ್ ಮೀಟರ್ ಅಳವಡಿಕೆಗೆ 900 ರೂಪಾಯಿಗೆ ಸಬ್ಸಿಡಿ ಕೊಡ್ತಿದ್ದೇವೆ. ಮನೆ ಮನೆಗೆ ಹೋಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಬೇಕು ಎಂದರು. ಹೊಸದಾಗಿ ವಿದ್ಯುತ್ ಕನೆಕ್ಷನ್ ಪಡೆಯುವವರಿಗೆ ಹಾಗು ಟೆಂಪರ್ವರಿಯಾಗಿ ಪಡೆಯುವವರಿಗೆ ಸ್ಮಾರ್ಟ್ ಮೀಟರ್ ಕಡ್ಡಾಯ. ಪರಮನೆಂಟ್ ವೇಳೆ ಅದೇ ಮೀಟರ್ ಹಾಕ್ತಾರೆ.…

Read More

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಕೂಸು ಗ್ರೇಟರ್ ಬೆಂಗಳೂರು ವಿಧೇಯಕವನ್ನು ಇದೀಗ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಬಿಜೆಪಿ ಜೆಡಿಎಸ್ ವಿರೋಧದ ನಡೆಯು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಈ ಒಂದು ವಿಜಯದ ಬಿಲ್ ಪಾಸ್ ಮಾಡಿತು. ಆದರೆ ರಾಜ್ಯಪಾಲರು ಅಂಕಿತ ಹಾಕದೆ ಇದನ್ನು ವಾಪಸ್ ಕಳುಹಿಸಿದ್ದಾರೆ. ಹೌದು ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಈ ಒಂದು ವಿಧೇಯಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಬಿಜೆಪಿ ಜೆಡಿಎಸ್ ಪಕ್ಷೇತರ ನಡುವೆ ಬಿಲ್ ಪಾಸ್ ಮಾಡಿಕೊಂಡಿದ್ದ ರಾಜ್ಯ ಸರ್ಕಾರ, ಇದೀಗ ಬಿಬಿಎಂಪಿ ವಿಭಜನೆ ಮಾಡುವ ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ವಾಪಸ್ ಕಳುಹಿಸಿದ್ದಾರೆ.

Read More

ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂದು ಬಿಜೆಪಿ ಶಿಸ್ತು ಸಮಿತಿಯು ಇತ್ತೀಚಿಗೆ ಶಾಸಕರಾದಂತಹ ಎಸ್ ಟಿ ಸೋಮಶೇಖರ ಹಾಗೂ ಶಿವರಾಂ ಹೆಬ್ಬಾರ್ ಅವರಿಗೆ ನೋಟಿಸ್ ನೀಡಿತ್ತು. ಈ ಒಂದು ನೋಟಿಸ್ ನೀಡಿದ ವಿಚಾರವಾಗಿ ಶಾಸಕ ಶಿವರಾಂ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ರಾಜ್ಯದ 224 ಶಾಸಕರ ಪೈಕಿ ನಾನು ಒಬ್ಬನಾಗಿದ್ದೇನೆ ಎಂದು ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಯಾವುದೇ ಭಯ ಇಲ್ಲ. ಹೈಕಮಾಂಡ್ ಹೇಳಿರುವ ಗಡುವಿನ ಒಳಗೆ ಉತ್ತರ ನೀಡುತ್ತೇನೆ. ಪಾಪ ಅಮಾಯಕ ಬಿಪಿ ಹರೀಶ್ ಗು ನೋಟಿಸ್ ಕೊಟ್ಟಿದ್ದಾರೆ. ಯಾರನ್ನೋ ರಕ್ಷಿಸಲು ಇನ್ಯಾರಿಗೋ ನೋಟಿಸ್ ಕೊಟ್ಟಿದ್ದಾರೆ ಜಿಲೇಬಿ ತಿನ್ನುವವರೇ ಬೇರೆ, ಜೈಲಿಗೆ ಹೋಗುವವರೇ ಬೇರೆ ಎಂದು ತಿಳಿಸಿದರು. ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ರಾಜ್ಯದ 224 ಶಾಸಕರ ಪೈಕಿ ನಾನು ಒಬ್ಬ. ನಾನು ಬಿಜೆಪಿ ಶಾಸಕನಷ್ಟೇ ಅಲ್ಲ ಸರ್ಕಾರದ ಭಾಗವು…

Read More

ಬೆಂಗಳೂರು : ಇದೇ ಮಾರ್ಚ್ 31 ರಂದು ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಇದೀಗ ಕೆ ಎಸ್ ಆರ್ ಟಿ ಸಿ ಸಂಸ್ಥೆಯಿಂದ ಎರಡು ಸಾವಿರಕ್ಕೂ ಅಧಿಕ ಬಸ್ಗಳ ಕಾರ್ಯಾಚರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಇದೀಗ ಸಿಹಿ ಸುದ್ದಿ ನೀಡಿದೆ. ಯುಗಾದಿ ಹಬ್ಬ ಹಿನ್ನೆಲೆ ಮಾರ್ಚ್ 28 ರಿಂದ 30ರವರೆಗೆ ಎರಡು ದಿನಗಳ ಕಾಲ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಹೌದು ಮಾರ್ಚ್ 28ರಿಂದ 30 ವರೆಗೆ 2000 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ಕಾರ್ಯಾಚರಣೆ ನಡೆಸಲಿವೆ. ಯುಗಾದಿ ಹಬ್ಬದ ನಿಮಿತ್ಯವಾಗಿ ಹೆಚ್ಚುವರಿ ಬಸ್ ಬಿಡಲಾಗಿದ್ದು, ಮೆಜೆಸ್ಟಿಕ್ನಿಂದ ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಂತಿನಗರ, ಸ್ಯಾಟಲೈಟ್, ಪೀಣ್ಯ ಬಸವ ನಿಲ್ದಾಣದಿಂದ ಕೆ ಎಸ್ ಆರ್ ಟಿ ಸಿ ಬಸ್ ಸಂಚರಿಸಲಿವೆ. ಯುಗಾದಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಇದೀಗ ಬಸ್ ವ್ಯವಸ್ಥೆ ಮಾಡಲಾಗಿದೆ. ಕೆಎಸ್ಆರ್ಟಿಸಿ ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್…

Read More

ಬೆಳಗಾವಿ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲೋನಿಯಲ್ಲಿ ವಿದ್ಯಾರ್ಥಿನಿ ದೀಪಿಕಾ ಬಡಿಗೇರ್ ಫೇಲ್ ಅಗುವ ಆತಂಕದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಾ.25ರಂದು ಎಸ್‌ಎಸ್ ಎಲ್ ಸಿ ಪರೀಕ್ಷೆ ಬರೆದು ಬಂದಿದ್ದ ದೀಪಿಕಾ ಕಡಿಮೆ ಅಂಕ ಬರಬಹುದು ಎಂಬ ಆತಂಕದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.ದೀಪಿಕ ಸಾವಿನಿಂದ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು, ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಇನ್ಸ್ಟಾಗ್ರಾಮ್ ನಲ್ಲಿ ಲಾಂಗ್ ಹಿಡಿದು ಸಾರ್ವಜನಿಕವಾಗಿ ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಆರೋಪಿಗಳಾದಂತಹ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದಂತಹ ರಜತ್ ಕಿಶನ್ ಹಾಗೂ ವಿನಯ್ ಗೌಡನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೌದು ಆರೋಪಿಗಳಾದ ರಜತ್ ವಿನಯನನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಇದೀಗ ಕೋರ್ಟಿಗೆ ಕರೆದುಕೊಂಡು ಹೋಗಿದ್ದಾರೆ. ಆರೋಪಿಗಳನ್ನು ಬಸವೇಶ್ವರನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ಪೊಲೀಸರು ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Read More

ಹುಬ್ಬಳ್ಳಿ : ಬಡವರಿಗಾಗಿಯೇ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಉಚಿತವಾಗಿ ಅಕ್ಕಿಯನ್ನು ನೀಡುತ್ತಿದೆ. ಆದರೆ ಕೆಲವರು ಸರ್ಕಾರದಿಂದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಪಡೆದು ಅದನ್ನು ಮಾರಾಟ ಮಾಡುತ್ತಿದ್ದಾರೆ. ಈಗ ಹುಬ್ಬಳ್ಳಿಯಲ್ಲಿ ಕೆಲ ಮಹಿಳೆಯರು ಸರ್ಕಾರದ ಅನ್ನಭಾಗ್ಯ ಯೋಜನೆ ಅಡಿ ಅಕ್ಕಿಯನ್ನು ಪಡೆದು ಮಾರುಕಟ್ಟೆಯಲ್ಲಿ ಮಾರಾಟ ಮಾಡುವಾಗ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಹಳೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು 50 ಕೆಜಿ ಅಕ್ಕಿ ಮಾರಾಟ ಮಾಡಲು ಮಹಿಳೆಯರು ಮರುಕಟ್ಟೆಗೆ ಬಂದಿದ್ದರು. ಈ ವೇಳೆ ಅಧಿಕಾರಗಳ ಕೈಗೆ ಮಹಿಳೆಯರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳ ಜೊತೆಗೆ ಮಹಿಳೆಯರು ತೀವ್ರ ವಾಗ್ವಾದ ನಡೆಸಿದರು. ಹುಬ್ಬಳ್ಳಿಯಲ್ಲಿ ಬಡವರ ಅಕ್ಕಿಗೆ ದಂಧೆಕೋರರು ಕನ್ನ ಹಾಕಿದ್ದಾರೆ. ಈ ವೇಳೆ ಅಧಿಕಾರಿಗಳು 500 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ಸೀಜ್ ಮಾಡಿದ್ದಾರೆ. ಹಳೆ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ…

Read More

ಬೆಂಗಳೂರು : ಇತ್ತೀಚಿಗೆ ಪ್ಲಾಸ್ಟಿಕ್ ನಲ್ಲಿ ತಯಾರಿಸಿದ ಇಡ್ಲಿ ಆರೋಗ್ಯಕ್ಕೆ ಹಾನಿಕಾರಕ ಎಂದು ರಾಜ್ಯದಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡಲಾಗಿತ್ತು. ಬಳಿಕ ಬೆಲ್ಲದಲ್ಲಿ ಕೂಡ ಹಲವು ಹಾನಿಕಾರಕ ಅಂಶಗಳು ಪತ್ತೆಯಾಗಿತ್ತು. ಇದೀಗ ಆಹಾರ ಪ್ರೀಯರಿಗೆ ಬಿಗ್ ಶಾಕ್ ಎದುರಾಗಿದ್ದು, ಅದರಲ್ಲೂ ಪನ್ನೀರ್ ಇಷ್ಟಪಡುವವರು ಈ ಸುದ್ದಿಯನ್ನು ಓದಲೇಬೇಕು. ಹೌದು ಇತ್ತೀಚಿಗೆ ಪನ್ನೀರ್ ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್​ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಪನ್ನೀರ್​ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವುದು ದೃಢವಾಗಿದೆ. ಆ ಮೂಲಕ ಪನ್ನೀರ್​​​​​ ಪ್ರಿಯರಿಗೆ ಆಹಾರ ಇಲಾಖೆ ಶಾಕ್​ ನೀಡಿದೆ. ಉಳಿದ ಸ್ಯಾಂಪಲ್​​ಗಳ ವರದಿಗಾಗಿ ಆಹಾರ ಇಲಾಖೆ ಕಾಯುತ್ತಿದೆ. ಬೆಂಗಳೂರು ಸೇರಿ ಹಲವೆಡೆ ಆಹಾರ ಇಲಾಖೆ ಪನ್ನೀರ್​ ಸ್ಯಾಂಪಲ್ ಸಂಗ್ರಹಿಸಿ ಟೆಸ್ಟ್​ಗೆ ಕಳುಹಿಸಿತ್ತು. ಆಹಾರ ಗುಣಮಟ್ಟ ಇಲಾಖೆಯಿಂದ ಪನೀರ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಇದೀಗ ಲ್ಯಾಬ್ ರಿಪೋರ್ಟ್ ಆಹಾರ ಇಲಾಖೆ ಕೈಸೇರಿದೆ. ವರದಿಯಲ್ಲಿ ಅಸುರಕ್ಷಿತ ಅಂಶ ಇರೋದು ಪತ್ತೆ ಆಗಿದೆ. ಹೀಗಾಗಿ ಪನ್ನೀರ್​​​​​ ಪ್ರಿಯರಿಗೆ ಶಾಕ್​…

Read More

ಹಾವೇರಿ : ಜಮೀನು ವಿಚಾರವಾಗಿ ಸಂಬಂಧಪಟ್ಟಂತೆ ಗಲಾಟೆ ನಡೆದಿದ್ದು, ಈ ವೇಳೆ ಪಾಪಿ ಮಗನೋಬ್ಬ ನನ್ನ ಚಿಕ್ಕಪ್ಪನ ಮೇಲೆನೇ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹೌದು ಚಿಕ್ಕಪ್ಪನನ್ನೆ ಹತ್ಯೆಗೈಯಲು ಪಾಪಿ ಪುತ್ರನೊಬ್ಬ ಮುಂದಾಗಿದ್ದಾನೆ. ಹಾವೇರಿಯ ಅಕ್ಕಿಪೇಟೆ ಬಳಿ ಎಂಬಿ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ. ಉಳಿವೆಪ್ಪ ಅಕ್ಕಿ (64) ಎನ್ನುವವರ ಮೇಲೆ ಬಸವರಾಜ ಎಂಬಾತನಿಂದ ಹಲ್ಲೆ ನಡೆದಿದೆ.ಮಚ್ಚಿನಿಂದ ಮಾರಣಾಂತಿಕವಾಗಿ ಬಸವರಾಜ್ ತನ್ನ ಚಿಕ್ಕಪ್ಪನ ಮೇಲೆ ಹಲ್ಲೆ ಮಾಡಿದ್ದಾನೆ. ಬಸವರಾಜ ಹಲ್ಲೆ ಮಾಡು ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಘಟನೆ ಸಂಬಂಧ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹಾಗು ಬಿಜೆಪಿ ಸಂಸದ ಸುಧಾಕರ್ ನಡುವೆ ಆಗಾಗ ಮುಸುಕಿನ ಗುದ್ದಾಟ ನಡೆಯುತ್ತಿರುತ್ತೆ. ಕಳೆದ 2024 ಸೆಪ್ಟೆಂಬರ್ ನಲ್ಲಿ ಚಿಕ್ಕಬಳ್ಳಾಪುರ ನಗರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿತ್ತು. ಸುಧಾಕರ್​ ಬೆಂಬಲಿತರೇ ಅಧ್ಯಕ್ಷ-ಉಧ್ಯಾಕ್ಷರಾಗಿ ಆಯ್ಕೆಯಾಗಿದ್ದರು.ಇದಕ್ಕೆ ಅಡ್ಡಮತದಾನ ಮಾಡುವ ಮೂಲಕ ಕಾಂಗ್ರೆಸ್ ಸದಸ್ಯರೇ ಸುಧಾಕರ್ ಬೆಂಬಲಿತರು ಅಧ್ಯಕ್ಷ, ಉಪಾದ್ಯಕ್ಷರಾಗುವಂತೆ ಮಾಡಿದ್ದರು . ಆದರೆ ಇದೀಗ ಅಧ್ಯಕ್ಷ-ಉಪಾದ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದ ಕಾಂಗ್ರೆಸ್​​ನ 6 ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿಗಳ ನ್ಯಾಯಾಲದ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 12 , 2024 ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆದಿತ್ತು. ಆ ಚುನಾವಣೆಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಡಾ ಕೆ ಸುಧಾಕರ್ ಇಬ್ಬರು ಸಹ ಚಿಕ್ಕಬಳ್ಳಾಪುರ ನಗರಸಭೆಯ ಗದ್ದುಗೆ ನಮ್ಮವರೇ ಹಿಡಿಯಬೇಕು ಎಂದು ಪ್ರದೀಪ್ ಈಶ್ವರ್ ಸುಧಾಕರ್ ನಡುವೆ ತೀವ್ರ ಪೈಪೋಟಿ ಇತ್ತು. ಈ ವೇಳೆ ಕಾಂಗ್ರೆಸ್​​ನ 06 ಜನ ಸದಸ್ಯರೇ ಬಿಜೆಪಿ ಅಭ್ಯರ್ಥಿಗಳ…

Read More