Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ಮೇಲಾಧಿಕಾರಿಗಳ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಕಂ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ನಡೆದಿದೆ. ಹೌದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನಲ್ಲಿ ತಮ್ಮ ಮನೆಯಲ್ಲಿ ತಡರಾತ್ರಿ ಚಾಲಕ ಕಂ ಕಂಡಕ್ಟರ್ ಶ್ರೀಶೈಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬೀಳಗಿ ಹನಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 2022 ರಲ್ಲಿ ಮೇಲಾಧಿಕಾರಿಗಳ ಕಿರುಕುಳದ ಬಗ್ಗೆ ಶ್ರೀಶೈಲ್ ಮಾತನಾಡಿದರು ಅಲ್ಲದೆ ಮೇಲಾಧಿಕಾರಿಗಳ ಕಿರುಕುಳದ ಕುರಿತು ಶ್ರೀಶೈಲ ವಿಡಿಯೋ ಕೂಡ ಮಾಡಿದ್ದ ಹಳೆ ವಿಡಿಯೋ ಕೂಡ ವೈರಲ್ ಆಗಿತ್ತು.
ಬಾಗಲಕೋಟೆ : ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಉಳಿಯುತ್ತಾರೋ ಇಲ್ವೋ ಗೊತ್ತಿಲ್ಲ. ಅಕಸ್ಮಾತ್ ತೀರ್ಪಿನಲ್ಲಿ ಸಿದ್ದರಾಮಯ್ಯನವರದ್ದೇ ತಪ್ಪಿದೆ ಎಂದು ಎಫ್ಐಆರ್ ದಾಖಲಾದರೆ ರಾಜೀನಾಮೆ ಕೊಡಬಹುದು, ಕೊಡಬೇಕಾಗಬಹುದು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದರು.. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರದ್ದೇ ತಪ್ಪಿದೆ ಎಂದು ಎಫ್ಐಆರ್ ದಾಖಲಾದರೆ ರಾಜೀನಾಮೆ ಕೊಡಬಹುದು, ಕೊಡಬೇಕಾಗಬಹುದು. ಆ ಸಂದರ್ಭದಲ್ಲಿ ಏನಾಗಬಹುದು. ಸಿದ್ದರಾಮಯ್ಯ ಅಪೇಕ್ಷೆ ಪಡುವಂತಹ ವ್ಯಕ್ತಿ ಸಿಎಂ ಆಗ್ತಾರಾ? ಸಿದ್ದರಾಮಯ್ಯ ಇಷ್ಟಪಡುವ ವ್ಯಕ್ತಿ ಸಿಎಂ ಆಗಲು ಬಿಡ್ತಾರಾ? ಕಾಂಗ್ರೆಸ್ನ ಡಿಕೆಶಿ, ಎಂಬಿ ಪಾಟಿಲ್ ಉಳಿದಂತೆ ಎಲ್ಲ ಪ್ರಮುಖರು ಅವರಿಗೆ ಅವಕಾಶ ಕೊಡಲಿಲ್ಲ ಅಂದರೆ ಸರ್ಕಾರ ಎಷ್ಟರಮಟ್ಟಿಗೆ ಇರುತ್ತೆ ಇರೋದಿಲ್ಲ, ಅದು ಜಡ್ಜ್ಮೆಂಟ್ ಮೇಲೆ ತೀರ್ಮಾನ ಆಗುತ್ತದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಖುರ್ಚಿ ಮೇಲೆ ಬಹಳಷ್ಟು ಜನರ ಕಣ್ಣಿದೆ. ಆದರೆ ಸಿಎಂ ಖುರ್ಚಿ ಮೇಲೆ ಟವೆಲ್ ಹಾಸ್ತಾ ಇದಾರೆ ಎಂಬ ಪದ ನಾನು ಬಳಸುವುದಿಲ್ಲ. ಆದರೆ ಬಹಳ ಜನಕ್ಕೆ (ಸಿಎಂ) ಅದರ…
ಬೆಳಗಾವಿ : ಇಂದಿನ ಆಧುನಿಕ ಕಾಲದಲ್ಲಿ ಮೊಬೈಲ್, ಕಂಪ್ಯೂಟರ್ ಇಲ್ಲದೆ ಜೀವನವೇ ಇಲ್ಲ ಎನ್ನುವಂತಹ ಮನಸ್ಥಿತಿಯಲ್ಲಿ ನಾವೆಲ್ಲರೂ ಇದ್ದೇವೆ. ಆದರೆ ಇದನ್ನೇ ದುರುಪಯೋಗ ಮಾಡಿಕೊಂಡು ಅಡ್ಡ ದಾರಿ ಹಿಡಿಯುವವರು ಇದ್ದಾರೆ. ಇದೀಗ ಬೆಳಗಾವಿಯಲ್ಲಿ ಬೆತ್ತಲೆ ಗ್ಯಾಂಗ್ ಒಂದು ಆಕ್ಟಿವ್ ಆಗಿದ್ದು ಮಹಿಳೆಯರು ಮತ್ತು ಯುವತಿಯರೆ ಈ ಒಂದು ಗ್ಯಾಂಗಿಗೆ ಟಾರ್ಗೆಟ್ ಆಗಿದ್ದಾರೆ. ಹೌದು ಈ ಒಂದು ಗ್ಯಾಂಗ್ ಬೆಳಗಾವಿಯಲ್ಲಿ ಆಕ್ಟಿವ್ ಆಗಿದ್ದು, ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆಯಿಂದ ಕರೆ ಮಾಡುತ್ತಿದ್ದೇವೆ ಅಂತ ವಿಡಿಯೋ ಕಾಲ್ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೃತ್ಯ ಹೇಗೆ ನಡೆಯುತ್ತೆ? ಇನ್ನೂ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾತನಾಡಿ, ಹೊಸ ಮಾದರಿಯ ಸೈಬರ್ ಕ್ರೈಮ್ ಬೆಳಕಿಗೆ ಬಂದಿದೆ. ಮಹಿಳೆಯರಿಗೆ ಮೇಲ್, ಮೆಸೇಜ್, ಕರೆ ಅಥವಾ ವಾಟ್ಸಪ್ ಮೂಲಕ…
ಬೆಳಗಾವಿ : ಒಂದು ಕಡೆ ಮುಡಾ ಹಗರಣದಿಂದ ಹೇಗೆ ಪಾರಾಗಬೇಕು ಎಂದು ತಲೆಕೆಡಿಸಿಕೊಂಡಿರುವ ಸಿದ್ದರಾಮಯ್ಯ, ಇನ್ನೊಂದಡೆ ಉಳಿದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಿಎಂ ಕುರ್ಚಿಯ ಮೇಲೆ ಕಣ್ಣು ಬಿದ್ದಿದೆ. ಇದರ ಮಧ್ಯ ಹಲವು ಸಚಿವರು ಈಗಾಗಲೇ ನಾನು ಸಿಎಂ ಆಗುತ್ತೇನೆ ಎಂಬ ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇನ್ನು ಈ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ, ಮಾಧ್ಯಮಗಳೊಂದಿಗೆ ಮಾತನಾಡಿ, 2028 ರಲ್ಲಿ ತಾವು ಈ ಹಿಂದೆ ಸಿಎಂ ಆಗುವ ಹೇಳಿಕೆ ನೀಡಿದ್ದೀರಿ ಎಂದು ಮಾಧ್ಯಮದ ಪ್ರಶ್ನೆ ಉತ್ತರಿಸಿದವರು ಅದಕ್ಕೆ ಇನ್ನೂ ಟೈಮ್ ಇದೆ. ಇನ್ನು ನಾಲ್ಕು ವರ್ಷ ಎಲ್ಲಾ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಬೆಂಬಲಿಗರು ಕಾಯಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಮುನ್ಸೂಚನೆ ನೀಡಿದ್ರಾ ಎಂದು ಪ್ರಶ್ನೆ ಉದ್ಭವಿಸಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪರ ಪೋಸ್ಟರ್ ಅಭಿಯಾನ ಆರಂಭಿಸಲಾಗಿದೆ ಎನ್ನುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಅಗಲಿ ಎಂದು ಸ್ವಾಭಾವಿಕವಾಗಿ ಹೇಳುತ್ತಾರೆ ಅದನ್ನು ಸೀರಿಯಸ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ಯಾರೋ…
ಬೆಳಗಾವಿ : ಒಂದು ಕಡೆ ಮುಡಾ ಹಗರಣದಿಂದ ಹೇಗೆ ಪಾರಾಗಬೇಕು ಎಂದು ತಲೆಕೆಡಿಸಿಕೊಂಡಿರುವ ಸಿದ್ದರಾಮಯ್ಯ, ಇನ್ನೊಂದಡೆ ಉಳಿದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಿಎಂ ಕುರ್ಚಿಯ ಮೇಲೆ ಕಣ್ಣು ಬಿದ್ದಿದೆ. ಇದರ ಮಧ್ಯ ಹಲವು ಸಚಿವರು ಈಗಾಗಲೇ ನಾನು ಸಿಎಂ ಆಗುತ್ತೇನೆ ಎಂಬ ಹೇಳಿಕೆಯನ್ನು ಕೂಡ ನೀಡಿದ್ದಾರೆ. ಇದೀಗ ಸಚಿವ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಪೋಸ್ಟ್ ವೈರಲ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸತೀಶ್ ಜಾರಕಿಹೊಳಿ ಪರ ಅಭಿಯಾನ ಆರಂಭಿಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಪೋಸ್ಟ್ ಕಾಡಿದಾಡುತ್ತಿದೆ ಸಿಎಂ ಸತೀಶ್ ಜಾರಕಿಹೊಳಿ ಅಂತ ಗ್ರೂಪ್ ಕ್ರಿಯೇಟ್ ಮಾಡಲಾಗಿದ್ದು ಪತ್ರಿಕೆಯಲ್ಲಿ ಜಾಹೀರಾತು ನೀಡಿ ಅಭಿಮಾನಿಗಳಿಂದ ಅಭಿನಂದನೆ ಸಲ್ಲಿಸಲಾಗುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದ್ದಾರೆ. ದೆಹಲಿಗೆ…
ಬೀದರ್ : ಅವರು ಸಂಬಂಧದಲ್ಲಿ ಸಹೋದರರು, ಒಬ್ಬರು ಬಿಜೆಪಿಯ ಶಾಸಕರಾದರೆ ಮತ್ತೊಬ್ಬರು ಕಾಂಗ್ರೆಸ್ ನಲ್ಲಿ ಎಂಎಲ್ಸಿ. ಸಹೋದರ ಸಂಬಂಧಿಯಾಗಿರುವಂತಹ ಬಿಜೆಪಿ ಶಾಸಕನಿಗೆ ಕಾಂಗ್ರೆಸ್ ಎಂಎಲ್ಸಿ ಆ ಪಾಕೆಟ್ ಎಂ ಎಲ್ ಎ ಏನಾದ್ರು ಮಾತನಾಡಿದರೆ ನಾಲಿಗೆ ಕಟ್ ಮಾಡುತ್ತೇನೆ ಎಂದು ವೇದಿಕೆ ಮೇಲೆ ಬಹಿರಂಗ ಬೆದರಿಕೆ ಹಾಕಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಹೌದು ಬಿಜೆಪಿ ಶಾಸಕ ಸಿದ್ದು ಪಾಟೀಲ್ ವಿರುದ್ಧ ಸಹೋದರ ಸಂಬಂಧಿ ಕಾಂಗ್ರೆಸ್ ಎಂಎಲ್ಸಿ ಚಂದ್ರಶೇಖರ್ ಪಾಟೀಲ್ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ.ಹುಮನಾಬಾದ್ ಪಟ್ಟಣದಲ್ಲಿ ನಡೆದ ನೂತನ ಕಾಂಗ್ರೆಸ್ ಸಂಸದರು, ಶಾಸಕರ ಸನ್ಮಾನ ಸಮಾರಂಭದಲ್ಲಿ ಮಾತನಾಡುವ ವೇಳೆ ನಾಲಗೆ ಹರಿಬಿಟ್ಟಿರುವ ಘಟನೆ ನಡೆದಿದೆ. ಪಾಕೀಟ್ ಎಂಎಲ್ಎ ಏನಾದ್ರೂ ಅಂದ್ರೆ ನಾಲಗೆ ಕಟ್ ಮಾಡುತ್ತೇನೆ. ನೀವು ಸ್ವಲ್ಪ ಸಮಯ ಕೊಡ್ರಿ. ಅವನಿಗೆ ಗಣೇಶನ ಸೊಂಡಿಲಿನಿಂದ ಬಿಸಾಕುತ್ತೇವೆ ಸ್ವಲ್ಪ ಶಾಂತವಾಗಿರಬೇಕು ಎನ್ನುವ ಮೂಲಕ ಬಹಿರಂಗ ವೇದಿಕೆ ಮೇಲೆಯೇ ಬಿಜೆಪಿ ಶಾಸಕ ಸಿದ್ದು ಪಾಟೀಲ್ ವಿರುದ್ಧ ಬೆದರಿಕೆ ಹಾಕಿದ್ದಾರೆ ಚಂದ್ರಶೇಖರ್ ಪಾಟೀಲ್,…
ಬೆಂಗಳೂರು : ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿದ್ದು, ಈಗಾಗಲೇ ಸುಮಾರು 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಸೊಳ್ಳೆಗಳ ಹಾವಳಿಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯ ಈಗಾಗಲೇ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಇದೀಗ ಓವಿ ಟ್ರ್ಯಾಪ್ ಅಳವಡಿಸುವ ಮೂಲಕ ಮತ್ತೊಂದು ನೂತನ ಹೆಜ್ಜೆ ಇಟ್ಟಿದೆ. ಹೌದು ಡೆಂಗ್ಯೂ, ಮಲೇರಿಯಾ ರೋಗ ಹರಡುವ ಈಡೀಸ್ ಸೊಳ್ಳೆಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ನಗರದಲ್ಲಿ ಓವಿ ಟ್ರ್ಯಾಪ್ ಬಯೋ ಸಾಧನವನ್ನು ನಗರದಲ್ಲಿ ಅಳವಡಿಸಲು ಮುಂದಾಗಿದೆ. ಪ್ರಾಯೋಗಿಕವಾಗಿ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನು ಮನೆಗಳಿಗೆ ಅಳವಡಿಸಲಾಗಿದೆ. ಏನಿದು ‘ಓವಿ ಟ್ರ್ಯಾಪ್’? ಓವಿ ಟ್ರ್ಯಾಪ್ ಇದೊಂದು ಕುಂಡದ ಆಕಾರದಲ್ಲಿ ಇದ್ದು, ಡೆಂಗ್ಯೂ, ಮಲೇರಿಯಾ ರೋಗ ಹರಡುವ ಈಡೀಸ್ ಸೊಳ್ಳೆಗಳ ನಿಯಂತ್ರಣಕ್ಕಾಗಿ ಈ ನೂತನ ಸಾಧನವನ್ನು ಈಗಾಗಲೇ ಮುಂಬೈ ನಲ್ಲಿ ಉಪಯೋಗಿಸಲಾಗುತ್ತಿದೆ. ಪ್ರಾಯೋಗಿಕ ಓವಿ ಟ್ರ್ಯಾಪ್ ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಓವಿ ಟ್ರ್ಯಾಪ್ ಬಯೋ ಅನ್ನು ಮುಂಬೈನ ಧಾರಾವಿ…
ಬೆಂಗಳೂರು : ಬೆಂಗಳೂರಿನಿಂದ ತಮಿಳುನಾಡಿನವರೆಗೆ ಮೆಟ್ರೋ ನಿರ್ಮಿಸುವ ವಿಚಾರವಾಗಿ ಹೊಸೂರು ಮೆಟ್ರೋ ನಿರ್ಮಾಣಕ್ಕೆ ಇದೀಗ ರಾಜ್ಯ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ.ಬೆಂಗಳೂರಿನಿಂದ ಹೊಸೂರಿನವರೆಗೆ ಮೆಟ್ರೋ ವಿಸ್ತರಿಸದಂತೆ ಹಿರಿಯ ಸಚಿವರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸೂರಿಗೆ ಬೆಂಗಳೂರಿನಿಂದ ಮೆಟ್ರೋ ಬೇಡ ಎಂದು ಹಿರಿಯ ಸಚಿವರು ಸಲಹೆ ನೀಡಿದ್ದಾರೆ ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹಿರಿಯ ಸಚಿವರಿಂದ ಸಲಹೆ ನೀಡಲಾಗಿದೆ. ಹೀಗಾಗಿ ಸದ್ಯ ಬೆಂಗಳೂರಿನಿಂದ ಹೊಸೂರಿನವರೆಗೆ ಮೆಟ್ರೋ ನಿರ್ಮಾಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಅಕಸ್ಮಾತ್ ಬೆಂಗಳೂರಿನಿಂದ ಸೋರಿನವರೆಗೆ ಮೆಟ್ರೋ ರೈಲು ನಿರ್ಮಾಣ ಮಾಡಿದ್ದೆ ಆದಲ್ಲಿ ರಾಜ್ಯದಲ್ಲಿರುವಂತಹ ಕೈಗಾರಿಕಾ ಸಂಸ್ಥೆಗಳಿಗೆ ಹೊಡೆತ ಬೀಳಲಿದೆ. ಹೊಸೂರಿನಲ್ಲಿ ಈಗಾಗಲೇ ಕೈಗಾರಿಕಾ ಕಾರ್ಖಾನೆಗಳು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರಿನ ಜನತೆ ಸಹಜವಾಗಿ ಹೊಸೂರಿಗೆ ಮೆಟ್ರೋ ಮೂಲಕ ಸಂಚರಿಸಿ ಅಲ್ಲಿ ಕಾರ್ಯ ನಿರ್ವಹಿಸಬಹುದು ಹಾಗಾಗಿ ರಾಜ್ಯದಲ್ಲಿ ಕೈಗಾರಿಕರಣ ಸಹಜವಾಗಿ ಕುಂಠಿತಗೊಳ್ಳಲಿದೆ. ಇನ್ನೂ ಹೊಸೂರಲ್ಲಿ ತಮಿಳುನಾಡು ಸರ್ಕಾರದಿಂದ ಏರ್ಪೋರ್ಟ್ ನಿರ್ಮಾಣ ಮಾಡಲಿದ್ದು, ಅದರ ಬೆನ್ನಲ್ಲೆ ಇದೀಗ ಬೆಂಗಳೂರಲ್ಲಿ ಮತ್ತೊಂದು ಏರ್ಪೋರ್ಟ್ ನಿರ್ಮಾಣಕ್ಕೆ ಸರ್ಕಾರ…
ವಿಜಯಪುರ : ಸದ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಯ ವಿಚಾರವಾಗಿ ಸಚಿವರ ನಡುವೆ ಟಾಕ್ ವಾರ್ ಮುಂದುವರೆದಿದ್ದು, ಶಿವಾನಂದ್ ಪಾಟೀಲ್ ಗಿಂತ ನಾನು ಸೀನಿಯರ್ ಎಂದು ಹೇಳಿದ ಎಂಬಿ ಪಾಟೀಲ್ ಹೇಳಿಕೆಗೆ ಸಚಿವ ಶಿವಾನಂದ ಪಾಟೀಲ್ ತಿರುಗೇಟು ನೀಡಿದ್ದು, ಸಿಎಂ ಆಗುವ ಆಸೆ ನನ್ನ ಕನಸು ಮನಸ್ಸಿನಲ್ಲೂ ಇಲ್ಲ. ಪಕ್ಷದಲ್ಲಿ ಹಿರಿಯರಿದ್ದಾರೆ ಅವರ ಸರದಿ ಆದ ಬಳಿಕ ಎಂಬಿ ಪಾಟೀಲ್ ಸರದಿ ಎಂದು ತಿರುಗೇಟು ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂಬಿ ಪಾಟೀಲ್ ಸಿಎಂ ಆದರೆ ನನ್ನ ಅಭ್ಯಂತರ ಇಲ್ಲ. ಪಕ್ಷದಲ್ಲಿ ಎಂಬಿ ಪಾಟೀಲ್ ಗಿಂತ ಹಿರಿಯರು ಪಕ್ಷದಲ್ಲಿ ಇದ್ದಾರೆ. ಹಿರಿಯರ ಸರದಿಯ ಬಳಿಕ ಎಂಬಿ ಪಾಟೀಲ್ ಸರದಿ.ಕೆಲವರು ರಾಜಕಾರಣ ಮಾಡುವುದರಲ್ಲಿ ನಿರತರಾಗಿದ್ದು ನಾನು ಕ್ಷೇತ್ರದ ಅಭಿವೃದ್ಧಿ ಕೆಲಸದ ವಿಚಾರದಲ್ಲಿ ನಿರತನಾಗಿದ್ದೇನೆ ಮೂರು ಇಲಾಖೆಗಳ ಅಭಿವೃದ್ಧಿ ಕೆಲಸದಲ್ಲಿ ನಿರತನಾಗಿದ್ದೇನೆ ಯಾರು ಬೇಕಾದರೂ ಸಿಎಂ ಆಗಲಿ, ನನ್ನ ಅಭ್ಯಂತರ ಇಲ್ಲ ಎಂದು ತಿಳಿಸಿದರು. ಸಿಎಂ ಕುರ್ಚಿ ಅಂತೂ ಖಾಲಿ ಇಲ್ಲ. ನಮಗೆ…
ವಿಜಯಪುರ : ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಎಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಇನ್ನೂ ಮೃತ ಯುವಕನನ್ನು ದೇವೇಂದ್ರ ಬಡಿಗೇರ್ (24) ಎಂದು ತಿಳಿದುಬಂದಿದೆ. ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.