Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಬಿ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಇಡಿ ಅಧಿಕಾರಿಗಳು ನನ್ನ ಮೇಲೆ ಯಾವುದೇ ಕೇಸ್ ದಾಖಲಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯ ದ್ವೇಷಕ್ಕಾಗಿ ಸಿಬಿಐ, ಇ.ಡಿ.ಯನ್ನು ದುರ್ಬಳಕೆ ಮಾಡಿಕೊಂಡರು. ಯಾರ್ಯಾರ ಮೇಲೆ ಕೇಸು ಹಾಕಿದ್ದಾರೆ ಎಂಬುದನ್ನು ನೀವೂ ನೋಡಿದ್ದೀರಿ. ಅಂದಾಗ ಮಹಿಳೆಯೊಬ್ಬರು ನಿಮ್ಮ ಮೇಲು ಇಡಿ ಕೇಸ್ ದಾಖಲಿಸಿದೆ ಅಂದಾಗ ಸಿಎಂ ಸಿದ್ದರಾಮಯ್ಯ ಇಲ್ಲಮ್ಮ ನನ್ನ ಮೇಲೆ ಕೇಸು ಹಾಕಿಲ್ಲ. ನಾಗೇಂದ್ರ ಏನು ಹೇಳಿದರು ಎಂದು ಕೇಳಿದ್ರಲ್ಲ. ಸರ್ಕಾರ ಅಸ್ಥಿರಗೊಳಿಸಲು ಇ.ಡಿ. ದುರ್ಬಳಕೆ ಮಾಡಿಕೊಳ್ತಿದಾರೆ. ನನ್ನ ಮೇಲೆ ಕೇಸು ಹಾಕಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಸುಳ್ಳು ಹೇಳಲ್ಲ. ಕೊಟ್ಟ ಮಾತು ಮರೆಯಲ್ಲ. ನಮ್ಮ ಸರ್ಕಾರ ಎಲ್ಲಾ ಭರವಸೆ ಈಡೇರಿಸುವ ಕೆಲಸ ಮಾಡುತ್ತಿದೆ.…
ಬೆಂಗಳೂರು: ದಮ್ಮು, ತಾಕತ್ತಿನ ಬಿಜೆಪಿಯವರಿಗೆ ನನ್ನ ಸವಾಲು, ಎಲ್ಲ ತನಿಖಾ ಏಜೆನ್ಸಿಗಳನ್ನು ಕಳುಹಿಸಲಿ, ಎಲ್ಲಿ ಬೇಕಾದರೂ ರೈಡ್ ಮಾಡಿಸಲಿ, ನಮ್ಮ ಕುಟುಂಬದ 50 ಸಾವಿರ ಕೋಟಿ ರೂ.ಗಳ ಆಸ್ತಿಯನ್ನು ಹುಡುಕಿಕೊಡಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಮಾಡಿರುವ ಅವರು, ಫೇಕ್ ಫ್ಯಾಕ್ಟರಿಯನ್ನು ಸ್ಥಾಪಿಸಿ ಸುಳ್ಳುಗಳ ವ್ಯಾಪಾರಕ್ಕೆ ಹೆಸರುವಾಸಿಯಾಗಿರುವ ಬಿಜೆಪಿ ಹಾಗೂ ಅದರ ನಾಯಕರು ಬಹಳ ಹಿಂದಿನಿಂದಲೂ ನಮ್ಮ ಕುಟುಂಬದ ಮೇಲೆ ₹50,000 ಕೋಟಿ ಆಸ್ತಿಯ ಆರೋಪ ಮಾಡುತ್ತಿದ್ದಾರೆ, ಹೀಗೆ ಆರೋಪ ಮಾಡಿದ್ದ ಬಿಜೆಪಿಯ ಕೆಲ ಪುಡಿ ಮುಖಂಡರಿಗೆ ಲೀಗಲ್ ನೋಟಿಸ್ ಕಳಿಸಿದ್ದೆ, ಆದರೆ ಇದುವರೆಗೂ ಅವರ್ಯಾರೂ 50,000 ಕೋಟಿಯ ಅಸ್ತಿಯನ್ನು ತೋರಿಸದಿರುವುದು ನನಗೆ ನಿರಾಸೆಯನ್ನುಂಟುಮಾಡಿದೆ. ಕಳೆದ ಹನ್ನೊಂದು ವರ್ಷ ವರ್ಷದಿಂದ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ, ಸೋಕಾಲ್ಡ್ ಶಕ್ತಿಮಾನ್ ಪ್ರಧಾನಿ ಇದ್ದಾರೆ, ಐಟಿ, ಇಡಿ, ಸಿಬಿಐಗಳಿಗೆ ಇವರ ಕೈನಲ್ಲೇ ಇದ್ದಾವೆ, ಹೀಗಿದ್ದೂ ಇದುವರೆಗೂ ನಮ್ಮ…
ಬೆಂಗಳೂರು : ಈಗಾಗಲೇ ಬೆಂಗಳೂರಿನ ಜನರು ಮಳೆಯ ಹೊಡೆತಕ್ಕೆ ಸಂಪೂರ್ಣವಾಗಿ ನಲುಗಿ ಹೋಗಿದ್ದಾರೆ. ಇದೀಗ ಇಂದು ಮಳೆ ನಿಂತಿದ್ದ ಕಾರಣ ಜನರು ಸ್ವಲ್ಪ ಸುಧಾರಿಸಿಕೊಂಡಿದ್ದು ಇದೀಗ ಮತ್ತೆ ರಾಜ್ಯದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯ ಆಗುವ ಮುನ್ಸೂಚನೆ ಕುರಿತು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಮಾತನಾಡಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅ.21ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ 7 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು,…
ಕಲಬುರ್ಗಿ : ಇತ್ತೀಚಿಗೆ ಕಲಬುರ್ಗಿ ಜೈಲಿನಲ್ಲಿ ಕೈದಿಗಳು ಗುಟ್ಕಾ ಸಿಗರೇಟ್ ಸರಿದಂತೆ ಮಾದಕ ವಸ್ತುಗಳನ್ನು ಬಳಸುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಕಮಿಷನರ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಇದೀಗ ಜೈಲಿನ ವಿರುದ್ಧ ಮತ್ತೊಂದು ಗಂಭೀರವಾದ ಆರೋಪ ಕೇಳಿ ಬಂದಿದ್ದು, ಜೈಲಿನಲ್ಲಿರುವ ಉಗ್ರನೊಬ್ಬ ಸಹಕೈದಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಹನಿ ಟ್ರ್ಯಾಪ್ ಮಾಡಿರುವ ಆರೋಪ ಕೇಳಿ ಬಂದಿದೆ. ಹೌದು ಭಯೋತ್ಪಾದನೆ ಪ್ರಕರಣದ ವಿಚಾರಣಾಧೀನ ಕೈದಿ ಜುಲ್ಫಿಕರ್ ಹಾಗೂ ಶಿವಮೊಗ್ಗದ ರೌಡಿ ಶೀಟರ್ ಬಚ್ಚನ್ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.ಕೆಲ ಕೈದಿಗಳನ್ನು ವಿಡಿಯೊ ಕಾಲ್ ನೆಪದಲ್ಲಿ ಹನಿ ಟ್ರ್ಯಾಪ್ಗೆ ಕೆಡವಿ, ಅವರಿಗೆ ಹಣದ ಬೇಡಿಕೆ ಇರಿಸುತ್ತಿದ್ದಾರೆ. ಕೈದಿಗಳಿಂದ ಹಣ ಪಡೆದ ಕೆಲ ಜೈಲು ಸಿಬ್ಬಂದಿಯ ದೃಶ್ಯಗಳನ್ನೂ ವಿಡಿಯೊ ಮಾಡಿಕೊಂಡು ಅವರಿಗೂ ಬೆದರಿಕೆ ಹಾಕುತ್ತಿದ್ದಾರೆ. ಈ ಕುರಿತಾಗಿ ಜೈಲಿನ ಕೈದಿಯೊಬ್ಬರ ಫೋನ್ ಕರೆಯ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ಭಯೋತ್ಪಾದನೆ ಪ್ರಕರಣದ ವಿಚಾರಣಾಧೀನ ಕೈದಿ ಜುಲ್ಫಿಕರ್ ಹಾಗೂ ಶಿವಮೊಗ್ಗದ ರೌಡಿ ಶೀಟರ್ ಬಚ್ಚನ್, ಕೊಲೆ ಪ್ರಕರಣದ ಸಜಾ ಕೈದಿ ಸಾಗರ ಶಿವಪ್ಪ…
ಬೆಂಗಳೂರು : ಈಗಾಗಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಬಿಸಿ ಊಟ ಹಾಗೂ ವಾರಕ್ಕೆ ಆರು ದಿನ ಮೊಟ್ಟೆ ವಿತರಿಸುವ ಯೋಜನೆ ಜಾರಿ ಮಾಡಿದೆ.ಇದೀಗ ಎಲ್ಲಾ ಸರ್ಕಾರಿ ಮಕ್ಕಳಿಗೆ ಸರ್ಕಾರ ಸಿಹಿ ಸುದ್ದಿ ಒಂದು ನೀಡಿದ್ದು, ಉಚಿತವಾಗಿ ಟ್ಯೂಷನ್ ಹೇಳಿ ಕೊಡುವ ಯೋಜನೆ ಜಾರಿ ಮಾಡುವ ಚಿಂತನೆ ನಡೆಸುತ್ತಿದೆ. ಹೌದು ಈಗಾಗಲೆ ಶೈಕ್ಷಣಿಕ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಅಲ್ಲದೆ ಪಠ್ಯಕ್ರಮ ವಿಚಾರದಲ್ಲಿ ಹಲವು ವಿಷಯಗಳು ಮಕ್ಕಳಿಗೆ ಕಬ್ಬಿಣದ ಕಡಲೆಯಂತಾಗಿವೆ. ಖಾಸಗಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುವ ಪೋಷಕರೇನೋ ದುಡ್ಡು ಕೊಟ್ಟು ಪ್ರೈವೇಟ್ ಟ್ಯೂಷನ್ ತರಗತಿಗೆ ಕಳುಹಿಸುತ್ತಾರೆ. ಆದರೆ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ರಾಜ್ಯ ಸರ್ಕಾರ ಫ್ರೀ ಟ್ಯೂಷನ್ ಯೋಜನೆ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ವಿದ್ಯಾರ್ಥಿ ಯಾವ ತರಗತಿಯ ವಿಷಯದಲ್ಲಿ ಹಿಂದೆ ಇದ್ದಾನೆ ಎಂದು ಅರ್ಥ ಮಾಡಿಕೊಂಡು ಸ್ಪೆಷಲ್ ಟ್ಯೂಷನ್ಗೆ ಕಳುಹಿಸುತ್ತಿದ್ದಾರೆ. ಈಗ ಈ ಭಾಗ್ಯ ಸರ್ಕಾರಿ ಶಾಲೆಗಳ ಮಕ್ಕಳಿಗೂ ಬರುತ್ತಿದೆ. ಮುಂಜಾನೆ…
ಶಿವಮೊಗ್ಗ : ಬಿಗ್ ಬಾಸ್ ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ಮಹಿಳಾ ಆಯೋಗಕ್ಕೆ ಪತ್ರದ ಮೂಲಕ ವಕೀಲೆಯೊಬ್ಬರು ಕಳೆದ ವಾರ ದೂರು ನೀಡಿದ್ದರು.ಇದರ ಬೆನ್ನಲ್ಲೆ ಬಿಗ್ ಬಾಸ್ ವಿರುದ್ಧ ಶಿವಮೊಗ್ಗ ಜಿಲ್ಲೆಯ ಸಾಗರದ ಜೆಎಂಎಫ್ಸಿ ನ್ಯಾಯಾಲಯ ಇಂದು ತುರ್ತು ನೋಟಿಸ್ ಜಾರಿಗೊಳಿಸಿದೆ. ಹೌದು ಬಿಗ್ ಬಾಸ್ 11ರ ಸೀಸನ್ನಲ್ಲಿ ಅಪರಾಧ ಹಿನ್ನೆಲೆ ಇದ್ದವರನ್ನ ಸ್ಪರ್ಧಿಯಾಗಿ ಸೇರಿಸಿಕೊಳ್ಳಲಾಗಿದೆ. ಇವರ ಮೇಲೆ ಅನೇಕ ಪ್ರಕರಣಗಳಿವೆ. ಇಂತಹವರನ್ನು ಪ್ರತಿನಿತ್ಯ ಕೋಟ್ಯಂತರ ಮಂದಿ ವೀಕ್ಷಿಸುತ್ತಿದ್ದಾರೆ. ಇದು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಿದೆ ಎಂದು ಆರೋಪಿಸಿ ಬಿಗ್ ಬಾಸ್ ರಿಯಾಲಿಟಿ ಶೋ ಪ್ರಸಾರ ನಿಲ್ಲಿಸಬೇಕೆಂದು ಸಾಗರ ವಕೀಲ ಕೆ.ಎಲ್.ಭೋಸರಾಜ್ ಎಂಬುವರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಧೀಶರಾದ ಚಾಂದಿನಿ ಜಿ.ಯು. ಅವರು ಸಿವಿಲ್ ಕಾರ್ಯವಿಧಾನದ ಕೋಡ್ ಕಾಯಿದೆ ಅಡಿಯಲ್ಲಿ ವಾಹಿನಿಯ ನಿರ್ಮಾಪಕ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದಾರೆ. ಮುಂದಿನ ವಿಚಾರಣೆ ಅಕ್ಟೋಬರ್ 28ರಂದು ನಡೆಯಲಿದೆ.
ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ವಿಚಾರವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ. ಇಂದು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಪಂಚಮಸಾಲಿ ಸಮುದಾಯದ ಮುಖಂಡರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಈಗಾಗಲೇ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವಾರು ಬಾರಿ ಪ್ರತಿಭಟನೆ ಹೋರಾಟ ನಡೆದಿದೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಸಭೆ ಮಾಡಿ ಒಂದು ನಿರ್ಧಾರಕ್ಕೆ ಬರಲಿಲ್ಲವೆಂದರೆ ವಿಧಾನಸೌಧದ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಿದ್ರಾಮಯ್ಯನವರು ಇಂದು ಸಭೆ ಕರೆದಿದ್ದಾರೆ.
ಮಂಗಳೂರು : ಹಿಂದೂ ಧರ್ಮದ ಬಿಲ್ಲವ ಸಮುದಾಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸರು ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಮುಖಂಡ ಸಚಿನ್ ವಲಳಂಬೆ ದೂರಿನಡಿ ಎಫ್ಐಆರ್ ದಾಖಲಾಗಿದೆ. ಬಿಎನ್ಎಸ್ 79 ಸೆಕ್ಷನ್ ನಡಿ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.ದೂರು ನೀಡಿದರೂ ಪ್ರಕರಣ ದಾಖಲಿಸದ ಹಿನ್ನೆಲೆ ನಾಳೆ ಪ್ರತಿಭಟನೆಗೆ ಹಿಂಜಾವೇ ಕರೆ ನೀಡಿತ್ತು. ಹಿಂಜಾವೇ ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ. ಪ್ರಕರಣ ಹಿನ್ನೆಲೆ ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ದೂರವಾಣಿ ಮುಖಾಂತರ ಮಾತನಾಡುವಾಗ ಈ ಒಂದು ಹೇಳಿಕೆ ನೀಡಿದ್ದು ಅಧಿಕಾರಿಯ ಈ ಹೇಳಿಕೆಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ. ದೂರವಾಣಿಯಲ್ಲಿ ಮಾತನಾಡುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ…
ಉತ್ತಕಕನ್ನಡ : ಝೆರಾಕ್ಸ್ ಅಂಗಡಿಗೆ ಒಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯಿಂದ, ಅಕ್ಕಪಕ್ಕದ ಅಂಗಡಿ ಮುಗ್ಗಟ್ಟುಗಳು ಹಾಗೂ ಮನೆಗಳಿಗೂ ಬೆಂಕಿ ಆವರಿಸಿಕೊಂಡು ಧಗ ಧಗನೆ ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಉಪನೋಂದಣಿ ಕಚೇರಿ ಬಳಿ ಈ ಅಗ್ನಿ ಅವಘಡ ಸಂಭವಿಸಿದೆ. ಹಳಿಯಾಳ ಪಟ್ಟಣದ ಉಪನೋಂದಣಿ ಕಚೇರಿ ಬಳಿ ಇರುವಂತಹ ರವಿ ಝೆರಾಕ್ಸ್ ಸೆಂಟರ್ನಲ್ಲಿ ಕಾಣಿಸಿಕೊಂಡ ಬೆಂಕಿ ಹಬ್ಬಿ ಅಕ್ಕ ಪಕ್ಕದ ಅಂಗಡಿಗಳು ಹಾಗೂ ಮನೆಗೂ ಹಾನಿ ಬೆಂಕಿ ಹಬ್ಬಿದೆ. ಗದಿಗೆಪ್ಪ ಖಾನಾವಳಿ, ಆರ್ಎನ್ಎಸ್ ಎಲೆಕ್ಟ್ರಿಕಲ್ಸ್, ಅಪ್ಪು ಜ್ಯುವೆಲ್ಲರಿ ಹಾಗೂ ಮನೆಯೊಂದಕ್ಕೆ ಬೆಂಕಿ ತಗುಲಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಇಲಾಖೆ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೇ ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿಗಳು ಹರಸಾಹಸ ಪಟ್ಟರು.ದುರ್ಘಟನೆಯಿಂದ ಈವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಳಿಯಾಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದಾವಣಗೆರೆ : ಬಿಜೆಪಿ ಪಕ್ಷದ ಕೆಲವು ನಾಯಕರು 1000 ಸಾವಿರ ಕೋಟಿ ಹಣ ಸಂಗ್ರಹಿಸಿಟ್ಟುಕೊಂಡಿದ್ದು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು.ಈ ಹಿನ್ನೆಲೆ ಶಾಸಕ ಯತ್ನಾಳ್ ವಿರುದ್ಧ ದಾವಣಗೆರೆ ಜಿಲ್ಲೆಯ ಗಾಂಧಿ ನಗರದಲ್ಲಿ FIR ದಾಖಲಾಗಿದೆ. ಈ ಮೊದಲು ಕೆಪಿಸಿಸಿ ಜನರಲ್ ಸೆಕ್ರೆಟರಿ ಮನೋಹರ್ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ವರ್ಗಾವಣೆಗೊಂಡು ಅಕ್ಟೋಬರ್ 14 ಕ್ಕೆ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಹೈಗ್ರೌಂಡ್ಸ್ ಠಾಣೆಯಿಂದ ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆಗೊಂಡಿದೆ. ಸೆಪ್ಟೆಂಬರ್ 26 ರಂದು ದಾವಣಗೆರೆ ಜಿ ಎಂಐಟಿ ಗೆಸ್ಟ್ ಹೌಸ್ ನಲ್ಲಿ ನೀಡಿರುವ ಹೇಳಿಕೆ ಆಧರಿಸಿ ಕೆಪಿಸಿಸಿ ಜನರಲ್ ಸೆಕ್ರೆಟರಿ ಮನೋಹರ್ ದೂರು ನೀಡಿದ್ದಾರೆ. ರಾಜ್ಯದ ನಮ್ಮ ಪಕ್ಷದ ನಾಯಕರು ರೂ.1,000 ಕೋಟಿಯನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ. ಆ ಹಣ ಬಳಸಿ ರಾಜ್ಯ ಸರ್ಕಾರವನ್ನು ಪತನಗೊಳಿಸಿ,…














