Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮನೆಯ ಮುಂದಿನ ಮರ ಕಡಿಬೇಡ ಎಂದ ವ್ಯಕ್ತಿಯ ಮೇಲೆ ಮಚ್ಚಿನಿಂದ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಗೌಡ ಎಂಬಾತ ಹಲ್ಲೆ ನಡೆಸಿ ಗೂಂಡಾ ವರ್ತನೆ ತೋರಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಶ್ರೀನಿವಾಸನಗರದಲ್ಲಿ ಈ ಒಂದು ಘಟನೆ ನಡೆದಿದೆ. ಬಿಎಂಟಿಸಿ ನೌಕರ ಸುರೇಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಗೌಡನಿಂದ ಹಲ್ಲೆ ನಡೆದಿದೆ. ಬೆಂಗಳೂರಿನ ಸುಂಕದಕಟ್ಟೆಯ ಶ್ರೀನಿವಾಸನಗರದಲ್ಲಿ ಈ ಒಂದು ಕೃತ್ಯ ನಡೆದಿದೆ. ಮನೆ ಮುಂದೆ ಕಾರು ಹೋಗಲು ಜಾಗವಿಲ್ಲವೆಂದು ಮರ ಕಡಿಯಲು ಯತ್ನಿಸಲಾಗಿದೆ. ಮರವಿದ್ದರೆ ನೆರಳು ಕೊಡುತ್ತದೆ ಕಡಿಬೇಡಿ ಎಂದಿದ್ದ ಎದುರು ಮನೆಯ ಸುರೇಶ್. ಸಿಟ್ಟಿಗೆದ್ದು ನೀನ್ಯಾರು ನನ್ನನ್ನು ಪ್ರಶ್ನಿಸಲು ಎಂದು ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಗೌಡ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಮಚ್ಚಿನಿಂದ ಹಲ್ಲಿಗೆ ಒಳಗಾದ ಬಿಎಂಟಿಸಿ ನೌಕರ ಸುರೇಶ್ ಕೈ ಮತ್ತು ಕಿವಿ ಭಾಗದಲ್ಲಿ ಗಾಯಗಳಾಗಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಘಟನೆ ಸಂಭಂದ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಿ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆಯಿತು. ಇದರ ಬೆನ್ನಲ್ಲೇ, ಪಶು ಸಂಗೋಪನ ಇಲಾಖೆ ಸಚಿವ ಕೆ ವೆಂಕಟೇಶ್ ಸುದ್ದಿಗೋಷ್ಠಿ ನಡೆಸಿ, ನಂದಿನ ಹಾಲಿನ ಪರಿಷ್ಕೃತ ದರ ಏಪ್ರಿಲ್ 1 ರಿಂದ ಅನ್ವಯ ಆಗಲಿದೆ ಎಂದು ವಿಕಾಸಸೌಧದಲ್ಲಿ ಪಶು ಸಂಗೋಪನ ಸಚಿವ ಕೆ ವೆಂಕಟೇಶ್ ಅವರು ಸ್ಪಷ್ಟನೆ ನೀಡಿದರು. ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಪಶು ಸಂಗೋಪನ ಇಲಾಖೆ ಸಚಿವ ಕೆ ವೆಂಕಟೇಶ್ ಅವರು ಏಪ್ರಿಲ್ 1ರಿಂದ ನಂದಿನಿ ಹಾಲಿನ ಪರಿಷ್ಕೃತ ದರ ಅನ್ವಯ ಆಗಲಿದೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚೆ ಮಾಡಿ ಕ್ಯಾಬಿನೆಟ್ ನಲ್ಲಿ ಈ ಕುರಿತು ತೀರ್ಮಾನ ಆಗಿದೆ. 4 ರೂಪಾಯಿ ರೈತರಿಗೆ ಕೊಡಬೇಕು ಅಂತಾನು ಕೂಡ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು. ಹಾಲಿನ ದರ ಹೆಚ್ಚಳ…
ಬೆಂಗಳೂರು : ವಿಕಾಸಸೌಧದ ಮುಂದೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಭವನ ನಿರ್ಮಾಣ ಮಾಡಲಾಗುತ್ತದೆ. ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಸಂಪುಟ ಸಭೆಯ ಬಳಿಕ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿಕೆ ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಾರು 28 ಎಕರೆ 8 ಗುಂಟೆ ಜಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ ಡಾ. ಅಂಬೇಡ್ಕರ್ ಜೀವನ ಚರಿತ್ರೆ ಬಗ್ಗೆ ಸ್ಪೂರ್ತಿ ಸೌಧ ನಿರ್ಮಾಣ ಮಾಡಲಾಗುವುದು. ಈ ಹಿಂದೆಯೂ ಸ್ಪೂರ್ತಿ ಸೌಧ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿತ್ತು. ಪರಿಷ್ಕೃತ ಅಂದಾಜು ಮಾಡಿ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 1994 ರಲ್ಲಿ ಮೈಸೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಮೈಸೂರಿನಲ್ಲಿ ಡಾ. ಅಂಬೇಡ್ಕರ್ ಭವನದ ಕಟ್ಟಡ ಪೂರ್ಣ ಆಗಿರಲಿಲ್ಲ. 23 ಕೋಟಿ ರೂಪಾಯಿ ಪರಿಷ್ಕೃತ ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಿದೆ. ನಮ್ಮ ಅವಧಿಯಲ್ಲಿ ಅಂಬೇಡ್ಕರ್ ಭವನ ಕಟ್ಟಡ ಪೂರ್ಣ ಮಾಡುತ್ತೇವೆ. ಹಿಂದಿನ ಸರ್ಕಾರ ಕಟ್ಟಡ…
ಬೆಂಗಳೂರು : ಯುಪಿಐ ಮುಖಾಂತರ 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ರಾಜ್ಯ ಮಾಹಿತಿ ಹಕ್ಕುಗಳ ಆಯೋಗದ ಆಯುಕ್ತರು ಒಬ್ಬರು ರೆಡ್ ಅಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಹೌದು ರಾಜ್ಯ ಮಾಹಿತಿಯ ಹಕ್ಕು ಆಯೋಗದ ಆಯುಕ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಆಯುಕ್ತ ರವೀಂದ್ರ ಗುರುನಾಥ ಢಣಕಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯುಪಿಐ ಮುಖಾಂತರ 1 ಲಕ್ಷ ರೂಪಾಯಿ ಲಂಚ ಸ್ಪೀಕರುಸುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ. ಸದ್ಯ ಅಧಿಕಾರಿಗಳು ಭ್ರಷ್ಟಾಚಾರ ತಡೆ ಕಾಯಿದೆ ಆಡಿ ಆಯುಕ್ತ ರವೀಂದ್ರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಪೊಲೀಸರಿಂದ ರವೀಂದ್ರ ಗುರುನಾಥ ಢಣಕಪ್ಪ ವಿಚಾರಣೆ ನಡೆಯುತ್ತಿದೆ.
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ನಾಲ್ಕು ರೂಪಾಯಿ ಏರಿಕೆ ಮಾಡಿ ಸಂಪುಟದಲ್ಲಿ ಅನುಮೋದನೆ ದೊರೆಯಿತು. ಇದರ ಬೆನ್ನಲ್ಲೆ ಇದೀಗ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ವಿದ್ಯುತ್ ದರ ಏರಿಕೆ ಮಾಡಿ ಇಂದು ಸಂಜೆ ಕೆಇಆರ್ಸಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ನಂದಿನಿ ಹಾಲಿನ ದರ ಏರಿಕೆ ಬೆನ್ನೆಲೆ ವಿದ್ಯುತ್ ತರ ಏರಿಕೆ ಶಾಕ್ ಎದುರಾಗಿದ್ದು, ಸಂಜೆ 4:30ಕ್ಕೆ ವಿದ್ಯುತ್ ದರ ಏರಿಕೆಯ ಬಗ್ಗೆ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂರು ವರ್ಷಗಳ ವಿದ್ಯುತ್ ದರ ಇಂದೇ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರತಿ ಯುನಿಟ್ ಗೆ 36 ಪೈಸೆ ಹೆಚ್ಚಿಸಿ ಕೆಇಆರ್ಸಿ ದರ ಘೋಷಿಸಲಿದೆ. ದರ ಏರಿಕೆಗೆ ಎಸ್ಕಾಂಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಇಂದು ಅಧಿಕೃತವಾಗಿ ವಿದ್ಯುತ್ ದರ ಕೆಇಆರ್ಸಿ ಘೋಷಣೆ ಮಾಡಲಿದೆ ಏಪ್ರಿಲ್ 1ರಿಂದ…
ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಿಲುಕಿದಂತಹ ನಟಿ ರನ್ಯಾ ರಾವ್ ಜಾಮೀನು ಅರ್ಜಿ ಇದೀಗ ವಜಾಗೊಂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಈ ಕುರಿತು ಆದೇಶ ಹೊರಡಿಸಿದೆ. ಹೌದು ದುಬೈ ನಿಂದ ಅಕ್ರಮವಾಗಿ ಸುಮಾರು 14 ಕೋಟಿಗೂ ಅಧಿಕ ಅಕ್ರಮ ಚಿನ ಸಾಗಾಣಿ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣ ಸಂಬಂಧ ಅವರು ಜಾಮಿನ್ ಕೋರಿ ಅರ್ಜಿ ಸಲ್ಲಿಸಿದರು. ಇದೀಗ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯವು ರನ್ಯಾ ರಾವ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು : ಸದಾ ಒಂದಿಲ್ಲೊಂದು ಮಾತನಾಡಿ ವಿವಾದ ಮೈಮೇಲೆ ಎಳೆದುಕೊಳ್ಳುವ ರಕ್ಷಕ್, ಇತ್ತೀಚೆಗೆ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದಾಗ ಚಾಮುಂಡೇಶ್ವರಿ ತಾಯಿ ಬಗ್ಗೆ ಆಡಿದ್ದ ಮಾತೊಂದು ವಿವಾದಕ್ಕೆ ಕಾರಣವಾಗಿತ್ತು. ದೇವರ ಬಗ್ಗೆ ರಕ್ಷಕ್ ಆಡಿದ್ದ ಮಾತಿನ ಬಗ್ಗೆ ಚಾಮುಂಡೇಶ್ವರಿ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ರಕ್ಷಿತ್, ಚಾಮುಂಡಿತಾಯಿ ಭಕ್ತರಿಗೆ ಕ್ಷಮೆ ಕೋರಿದ್ದಾರೆ. ಹೌದು ಭರ್ಜರಿ ಬ್ಯಾಚುಲರ್ಸ್ ಸೀಸನ್ 2ರ ಸ್ಪರ್ಧಿಯಾಗಿರುವ ರಕ್ಷಕ್, ಯುವತಿಯನ್ನು ಇಂಪ್ರೆಸ್ ಮಾಡಲು ಡೈಲಾಗ್ ಹೇಳುತ್ತಾ, ಚಾಮುಂಡಿತಾಯಿಯ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದರು. ಚಾಮುಂಡಿದೇವಿ ಜೀನ್ಸ್ ಹಾಕಿ ಗೋವಾ ಟ್ರಿಪ್ಗೆ ಹೋದಂತಿದೆ ಎಂದೆಲ್ಲ ಮಾತನಾಡಿದ್ದರು. ಇದು ಹಿಂದೂಪರ ಸಂಘಟನೆಗಳು, ಚಾಮುಂಡೇಶ್ವರಿ ದೇವಾಲಯ ಭಕ್ತರನ್ನು ಕೆರಳಿಸಿತ್ತು. ರಕ್ಷಕ್, ಡೈಲಾಗ್ಗೆ ನೆಟ್ಟಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಸಾಮಾಜಿಕ ಜಾಲತಾಣದ ಮೂಲಕ ಚಾಮುಂಡೇಶ್ವರಿ ಭಕ್ತರಿಗೆ ಕ್ಷಮೆ ಕೇಳಿದ್ದಾರೆ ರಕ್ಷಕ್, ನಾನು ನಿಮ್ಮ ರಕ್ಷಕ್ ಬುಲೆಟ್, ಇತ್ತೀಚಿಗೆ ಒಂದು ರಿಯಾಲಿಟಿ ಶೋನಲ್ಲಿ ನಾನು ಒಂದು ಹೆಸರಾಂತ ಚಿತ್ರದ ಡೈಲಾಗನ್ನು ಒಂದು ಸ್ಕಿಟ್ ನಲ್ಲಿ ಹೇಳಿದ್ದೆ,…
ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೆ ಇಬ್ಬರು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ, ರ್ಯಾಪಿಡೋ ಬೈಕ್ ಚಾಲಕ ಹಾಗು ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೀವನ್ ಭೀಮಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ ದ್ವಿಚಕ್ರ ವಾಹನ ಸವಾರರ ಪೈಕಿ ಓರ್ವನ ಗುರುತು ಪತ್ತೆಯಾಗಿದೆ. ಮೃತನನ್ನು ಅಸ್ಸಾಂನ ತಪಾಸ್ ದಾಲಿ (35) ಎಂದು ಪೊಲೀಸರು ಗುರುತಿಸಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಸವಾರನ ಮೊಬೈಲ್ ಫೋನ್ ಸಂಪೂರ್ಣ ಹಾನಿಯಾಗಿದ್ದು, ಗುರುತು ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಬಿಎಂಟಿಸಿ ಬಸ್ ಚಾಲಕ ಮಹೇಶ್ ಎಂಬಾತನನ್ನು ಜೀವನ್ ಭೀಮಾ ನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಿ.ವಿ.ರಾಮನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಬಿಗ್ ಶಾಕ್ ನೀಡಿದ್ದು, ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ಮತ್ತೆ 4 ರೂಪಾಯಿ ಏರಿಕೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ. ಹೌದು ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಏರಿಕೆ ಮಾಡಿ ಇದೀಗ ಸಂಪುಟ ಸಭೆಯಲ್ಲಿ ಇದೀಗ ಅನುಮೋದನೆ ದೊರಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ 4 ರೂ ಏರಿಕೆಗೆ ಅನುಮೋದನೆ ದೊರಕಿದೆ. ಈಗಾಗಲೇ ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಮತ್ತು ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಮತ್ತೆ ನಂದಿನಿ ಹಾಲಿನ ದರ 4 ರೂ ಏರಿಕೆ ಮಾಡಿ ಜಜನರಿಗೆ ಗಾಯದ ಮೇಲೆ ಬರೆ ಎಳೆದಿದೆ.
ವಿಜಯಪುರ : ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್ ಗೆ ಉತ್ತರಿಸಿಲ್ಲ ಹಾಗು ಸ್ವಪಕ್ಷದ ನಾಯಕರ ವಿರುದ್ಧವೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ನಿನ್ನೆ ಬಿಜೆಪಿ ರಾಷ್ಟೀಯ ಶಿಸ್ತು ಸಮಿತಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶಿಸಿದೆ. ಯತ್ನಾಳ್ ಪಕ್ಷದಿಂದ ಉಚ್ಚಾಟನೆ ಆದ ಬೆನ್ನಲ್ಲೇ ವಿಜಯಪುರ ನಗರದಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ನಿನ್ನೆ ಬಿಜೆಪಿಯ ಹಲವು ಮುಖಂಡರು ವಿವಿಧ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.ಅತ್ತ ಅವರನ್ನು ಉಚ್ಚಾಟನೆ ಮಾಡುತ್ತಿದ್ದಂತೆ ಇತ್ತ ಯತ್ನಾಳ್ರನ್ನು ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಅಪಘಾತದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಸಂತೋಷ್ ತಟಗಾರ ಮೃತ ಪದಾಧಿಕಾರಿ. ಸಂತೋಪ್ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.