Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಕ್ಕರೆಯಲ್ಲಿ ಶೇ.20ರಷ್ಟನ್ನು ಭಾರತದ ಸೆಣಬಿನ ಕಚ್ಚಾ ಪದಾರ್ಥಗಳಿಂದ ತಯಾರಿಸಿದ ಸೆಣಬಿನ ಚೀಲಗಳಲ್ಲಿಯೇ ಕಡ್ಡಾಯವಾಗಿ ಪ್ಯಾಕಿಂಗ್ ಮಾಡಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ನಿಂದ ತಡೆ ಬಿದ್ದಿದೆ. ಕೇಂದ್ರದ ಅಧಿಸೂಚನೆಯನ್ನು ಮುಂದಿನ ವಿಚಾರಣೆವರೆಗೆ ಕೋರ್ಟ್ ತಡೆ ಹಿಡಿದಿದೆ. ಸೌತ್ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಷನ್ – ಕರ್ನಾಟಕ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸೆಣಬಿನ ಚೀಲಗಳಲ್ಲಿ ಸಕ್ಕರೆಯನ್ನು ಪ್ಯಾಕೇಜಿಂಗ್ಗೆ 2022ರ ಜುಲೈ 21ರಂದು ನಡೆದ ಸ್ಥಾಯಿ ಸಲಹಾ ಸಮಿತಿಯ ಸಭೆಯಲ್ಲಿ ವಿನಾಯಿತಿ ನೀಡಲಾಗಿದೆ. ಸೆಣಬಿನ ಚೀಲ ತಯಾರಿಕೆಯಲ್ಲಿ ಬಳಸಲಾಗುವ ಎಣ್ಣೆಯು ಟ್ರೋಮೋಜನಿಕ್ (ಗಡ್ಡೆಜನಕ) ಎಂದು ಕೈಗಾರಿಕಾ ವಿಷಶಾಸ್ತ್ರ ಸಂಶೋಧನಾ ಕೇಂದ್ರ ಅಭಿಪ್ರಾಯಪಟ್ಟಿದೆ. ಸೆಣಬಿನ ಚೀಲಗಳಲ್ಲಿ ಪ್ಯಾಕಿಂಗ್ ಮಾಡುವುದರಿಂದ ಸಕ್ಕರೆಯ ಗುಣಮಟ್ಟ ಹಾಳಾಗುವುದಲ್ಲದೆ, ಅದು ಕಲುಷಿತಗೊಳ್ಳುತ್ತದೆ ಎಂದು ವಿವರಿಸಿದರು. ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಹಾಯಕ ಸಾಲಿಸಿಟರ್ ಜನರಲ್…
ಉತ್ತರಕನ್ನಡ : ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಲ್ಲೆಯ ಕಾರವಾರದ ಸಾಯಿಕಟ್ಟಾದಲ್ಲಿ ಘಟನೆ ನಡೆದಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಯಿಕಟ್ಟಾದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುನಿಂದ ಇರಿದು ಸಹೋದರನನ್ನೇ ಮನೀಶ್ ಕಿರಣ್ ಸಹೋದರ ಕೊಲೆ ಮಾಡಿದ್ದಾನೆ. ಸಂದೇಶ ಪ್ರಭಾಕರ್ ಬರ್ಬರ ಕೊಲೆಯಾಗಿದೆ ಆರೋಪಿ ಮುನಿಷ್ ಕಿರಣನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ : ಕರ್ನಾಟಕದೆಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅನೇಕ ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವಗಳು ಗಮನ ಸೆಳೆಯುತ್ತಿವೆ. ಆದರೆ ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲಾಡಳಿತ ಹೊರಡಿಸಿರುವ ಹೊಸ ಆದೇಶವೊಂದು ಗಣೇಶೋತ್ಸವ ಆಯೋಜಕರನ್ನು ಸಂಕಷ್ಟಕ್ಕೆ ದೂಡಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಆದೇಶಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ. ಹೌದು ಕೋಲಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಡಿಜೆ ಸೌಂಡ್ಸ್ ನಿಷೇಧಿಸಿ ಆದೇಶ ಹೊರಡಿಸಿದೆ. ಇದು ಸಾರ್ವಜನಿಕರ ಆಕ್ಷೇಪಕ್ಕೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಏಕಾಏಕಿ ಡಿಜೆ ಸೌಂಡ್ಸ್ ನಿಷೇಧಿಸಿರುವುದರಿಂದ ಅಪಾರ ನಷ್ಟವಾಗುತ್ತಿದೆ ಎಂದು ಡಿಜೆ ಮಾಲೀಕರು ಕೂಡ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಇದೆ ವೇಳೆ ಡಿಜೆ ಮಾಲೀಕರು ಅಸಮಾಧಾನ ಹೊರ ಹಾಕಿದ್ದು, ಈಗಾಗಲೇ ಅಡ್ವಾನ್ಸ್ ತೆಗೆದುಕೊಂಡಿದ್ದೇವೆ. ಈಗ ಬ್ಯಾನ್ ಮಾಡಿದ್ದಾರೆ. ಜಿಲ್ಲಾಡಳಿತದ ನಿರ್ಧಾರದಿಂದ ನಾವು ನಷ್ಟ ಅನುಭವಿಸುವಂತಾಗಿದೆ. ನಿಭಂದನೆಗಳನ್ನು ಹಾಕಿ ಅನುಮತಿ ಕೊಡಿ. ಅದರ ಬದಲು ನಿಷೇಧ ಹೇರಬೇಡಿ ಎಂದು ಡಿಜೆ ಮಾಲೀಕರು ಮನವಿ…
ರಾಯಚೂರು : ಕಳೆದ ಎರಡು ದಿನಗಳ ಹಿಂದೆ ಶಿಕ್ಷಕರ ದಿನಾಚರಣೆ ದಿನದಂದಲೇ ರಾಯಚೂರಿನಲ್ಲಿ ಭೀಕರ ಅಪಘಾತ ಒಂದು ಸಂಭವಿಸಿತ್ತು. ಶಾಲಾ ಬಸ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15 ಮಕ್ಕಳಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ನಡೆದಿತ್ತು. ಇದೀಗ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಗಂಭೀರವಾಗಿ ಗಾಯಗೊಂಡ ಎಲ್ಲ 15 ಮಕ್ಕಳಿಗೆ ಚೆಕ್ ವಿತರಣೆ ಮಾಡಲಾಯಿತು. ಕೆ ಎಸ್ ಆರ್ ಟಿ ಸಿ ಸಂಸ್ಥೆ ನೀಡಿದ್ದ ಚೆಕ್ ವಿತರಿಸಿದ ಶಾಸಕ ದದ್ದಲ್, ಗಂಭೀರವಾಗಿ ಗಾಯಕೊಂಡ ಮೂರು ಮಕ್ಕಳಿಗೆ 3 ಲಕ್ಷ ಚೆಕ್ ವಿತರಣೆ ಮಾಡಲಾಯಿತು. ಕೈ ಕಾಲುಗಳಿಗೆ ಗಾಯವಾಗಿರುವ 10 ಮಕ್ಕಳಿಗೆ ತಲಾ 1 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು. ಇನ್ನು ಸಣ್ಣ ಪುಟ್ಟ ಗಾಯಗೊಂಡ 50,000 ನೀಡಲಾಯಿತು. ಗಾಯಗೊಂಡ ಎಲ್ಲಾ ಮಕ್ಕಳ ಆಸ್ಪತ್ರೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಮಾಹಿತಿ ನೀಡಿದರು.…
ದಕ್ಷಿಣಕನ್ನಡ : ಇಂದು ಎಲ್ಲೆಡೆ ಗಣೇಶ ಚತುರ್ಥಿಯ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ಗೆ ಕಾರು ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಬಳಿ ಈ ಒಂದು ಅಪಘಾತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ನವ ವಿವಾಹಿತ ಮಾನಸ ಸಾವನ್ನಪ್ಪಿದ್ದಾಳೆ.ಇನ್ನೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪತಿ ಅನೀಶ್ ಕೃಷ್ಣ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ನವ ದಂಪತಿಗಳಾದ ಅನಿಶ್ ಕೃಷ್ಣ ಮತ್ತು ಮಾನಸ ತೆರ್ನ ಸಮೀಪದ ಒಡ್ಯಾlದಗಯಾ ನಿವಾಸಿಗಳು ಎಂದು ತಿಳಿದುಬಂದಿದೆ.ಕಳೆದ ಎರಡು ದಿನಗಳ ಹಿಂದೆ ಅಂದರೆ ಸೆಪ್ಟೆಂಬರ್ 5 ರಂದು ದಯಂತಡ್ಕ ದೇಗುಲದಲ್ಲಿ ಅನಿಶ್ ಕೃಷ್ಣ ಮತ್ತು ಮಾನಸ ಮದುವೆಯಾಗಿತ್ತು.
ಬೆಂಗಳೂರು : ರಾಜ್ಯದಲ್ಲಿ ಯಾವಾಗ ಮುಡಾ ಪ್ರಕರಣ ಭಾರಿ ಸದ್ದು ಮಾಡಿತೊ, ಅಂದಿನಿಂದಲೂ ಸಿಎಂ ಕುರ್ಚಿಯ ಮೇಲೆ ಸ್ವಪಕ್ಷದ ನಾಯಕರೇ ಕಣ್ಣು ಇಟ್ಟಿದ್ದಾರೆ. ಅಲ್ಲದೆ ಇತ್ತೀಚೆಗೆ ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಸಿದ್ದರಾಮಯ್ಯ ಅನುಮತಿ ನೀಡಿದರೆ ಮುಖ್ಯಮಂತ್ರಿ ಆಗುತ್ತೇನೆ ಎಂಬ ಹೇಳಿಕೆ ನೀಡಿದ್ದರು.ಇದೀಗ ಸಚಿವ ಎಂಬಿ ಪಾಟೀಲ್ ಅವರು ಕೂಡ ನನಗೂ ಸಿಎಂ ಆಗಬೇಕೆಂಬ ಆಸೆ ಇದೆ ಆದರೆ ದುರಾಸೆ ಇಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಲ್ಲದೆ ಸಚಿವ ಶಿವಾನಂದ ಪಾಟೀಲ್ ಕೂಡ MB ಪಾಟೀಲ್ ಸಿಎಂ ಆಗುವ ವಿಚಾರವಾಗಿ, ನಾನು ಹಿರಿಯನಿದ್ದೇನೆ ಒಂದಲ್ಲ ಒಂದು ದಿನ ಸಿಎಂ ಆಗುತ್ತೇನೆ. ಪಕ್ಷದಲ್ಲಿ ಎಂಬಿ ಪಾಟೀಲ್ ಅವರಿಗಿಂತಲೂ ಸೀನಿಯರ್ಸ್ ಇದ್ದಾರೆ ಅವರಿಗೂ ಸಿಎಂ ಆಗುವ ಆಸೆ ಇರುತ್ತೆ ಎಂದು ತಿಳಿಸಿದರು. ಇದಕ್ಕೆ ಎಂ.ಬಿ ಪಾಟೀಲ್, ಶಿವಾನಂದ್ ಪಾಟೀಲ್ ಸಿಎಂ ಆಗಲ್ಲ ಆದರೆ ವಿಜಯಪುರದಿಂದ ಮುಖ್ಯಮಂತ್ರಿ ಆಗುವುದು ನಾನೇ ಎಂದು ತಿರುಗೇಟು ನೀಡಿದ್ದಾರೆ. ಪಕ್ಷದಲ್ಲಿ ನನಗಿಂತಲೂ ಹಿರಿಯರು ಇರಬಹುದು ಆದರೆ…
ಬೀದರ್ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ತುಂಬಿ ಹರಿಯುತ್ತಿದ್ದು, ಇಂದು ಸಚಿವ ಈಶ್ವರ್ ಖಂಡ್ರೆ ನದಿಗೆ ಬಾಗಿನ ಅರ್ಪಿಸಲು ಬಂದಿದ್ದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಆಯಾತಪ್ಪಿ ಮುಗ್ಗರಿಸಿ ಸ್ವಲ್ಪದರಲ್ಲೇ ಜಲಾಶಯಕ್ಕೆ ಬಿಳುವುದರಲ್ಲಿ ಬಚಾವ್ ಆಗಿದ್ದಾರೆ. 7.69 ಸಾಮರ್ಥ್ಯದ ಕಾರಂಜಾ ಜಲಾಶಯ ಈಗಾಗಲೇ ಸುಮಾರು 93ರಷ್ಟು ಭರ್ತಿಯಾಗಿದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಕಾರಂಜಾ ಜಲಾಶಯಕ್ಕೆ ಸಚಿವ ಈಶ್ವರ್ ಖಂಡ್ರೆ ಬಾಗಿನ ಅರ್ಪಿಸಲು ಆಗಮಿಸಿದ್ದರು. ಈ ವೇಳೆ ಜಲಾಶಯಕ್ಕೆ ಪೂಜೆ ಸಲ್ಲಿಸಿದ ಬಳಿಕ ಬಾಗಿನದ ತೆಪ್ಪೆಗೆ ಟೆಂಗು ಹಾಕಲು ಮುಂದಾಗಿದ್ದಾರೆ. ಈ ವೇಳೆ ಕೆಳಗೆ ಕುಳಿತು ನೀರಲ್ಲಿ ಬಿಟ್ಟು ಮೇಲೇಳುವಾಗ ಆಯಾತಪ್ಪಿದ ಸಚಿವರು, ಅದೃಷ್ಟವಶಾತ್ ತಕ್ಷಣಕ್ಕೆ ಹಿಂಬದಿಯಿದ್ದವರು ಕೈಹಿಡಿದರು. ಬಳಿಕ ಸುಧಾರಿಸಿಕೊಂಡ ಸಚಿವರು ಬ್ಯಾಲೆನ್ಸ್ ಮಾಡಿಕೊಂಡರು. ಸಚಿವ ಖಂಡ್ರೆಗೆ ಸಚಿವರಾದ ರಹೀಂ ಖಾನ್, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಸಿದ್ದು ಪಾಟೀಲ್, ಮಾಲಾ ಬಿ ನಾರಾಯಣ, ಎಸ್ಪಿ, ಡಿಸಿ ಸೇರಿ ಹಲವು ಗಣ್ಯರು ಸಾಥ್ ನೀಡಿದರು.
BIG NEWS : ‘ಏನ್ರಿ ಮೀಡಿಯಾ?…ಎಂದಿದ್ದ ದರ್ಶನ್ ಗೆ , ಕೊನೆಗೂ ಬಳ್ಳಾರಿ ಜೈಲಿನಲ್ಲಿ ಟಿವಿ ವ್ಯವಸ್ಥೆ ಮಾಡಿದ ಸಿಬ್ಬಂದಿ!
ಬಳ್ಳಾರಿ : ಒಂದು ಕಾಲದಲ್ಲಿ ಮಾಧ್ಯಮಗಳಿಗೆ ‘ಏನ್ರಿ ಮೀಡಿಯಾ’ ಹಾಗೆ ಹೀಗೆ ಎಂದು ಅಶ್ಲೀಲವಾಗಿ ಪದ ಬಳಸಿದ್ದ, ಕೊಲೆ ಆರೋಪಿ ದರ್ಶನ್ ಗೆ ಕಳೆದ ಕೆಲವು ದಿನಗಳ ಹಿಂದೆ ಟಿವಿ ಬೇಕು ಎಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಇದೀಗ ಜೈಲಧಿಕಾರಿಗಗಳು ದರ್ಶನ್ ಗೆ ಟಿವಿ ವ್ಯವಸ್ಥೆ ಮಾಡಿದ್ದಾರೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಕಳೆದ ಐದು ದಿನಗಳ ಹಿಂದೆ ಟಿವಿಗೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಐದು ದಿನಗಳ ಬಳಿಕ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್ಗೆ ಟಿವಿ ಅಳವಡಿಸಲಾಗಿದೆ. ತಮ್ಮ ಪ್ರಕರಣದ ಅಪ್ಡೇಟ್ ತಿಳಿದುಕೊಳ್ಳಲು ಮತ್ತೆ ‘ಮೀಡಿಯಾ’ ದವರೇ ಬೇಕಾಯ್ತು. ಅಂತೂ ಇಂತೂ ಕೊನೆಗೂ ದರ್ಶನ್ ಸೆಲ್ಗೆ ಟಿವಿ ಬಂದಿದೆ. ಹೈಯರ್ ಕಂಪನಿಯ 32 ಇಂಚಿನ ಟಿವಿಯನ್ನು ದರ್ಶನ್ ಇರುವ ಸೆಲ್ಗೆ ನೀಡಲಾಗಿದೆ. ಸದ್ಯ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ದರ್ಶನ್ ಕೇಳಿದ್ದ ಮೂರು ಬೇಡಿಕೆಗಳು ಈಡೇರಿದಂತಾಗಿದೆ. ಸರ್ಜಿಕಲ್ ಚೇರ್ ಮೊದಲನೆಯದ್ದು. ಫೋನ್ ಕಾಲ್ ಮಾತನಾಡೋಕೆ ಅವಕಾಶ…
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಕೋಲಾರ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಚಿತ್ರೀಕರಿಸಿದ ಆರೋಪದಲ್ಲಿ ಶಾಲೆಯ ಚಿತ್ರಕಲೆ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಕುರಿತಂತೆ ಶಿಕ್ಷಕ ತನ್ನ ಮೇಲೆ ದಾಖಲಾದ ಪ್ರಕರಣವನ್ನು ರದ್ದುಗೊಳಿಸಿ ಎಂದು ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಆದೇಶ ನೀಡಿದೆ. ಅಲ್ಲದೆ, ಪೋಕ್ಸೋ ಕಾಯ್ದೆಯ ಸೆಕ್ಷನ್ 11ರ ಪ್ರಕಾರ ಮಕ್ಕಳ ದೇಹ ಅಥವಾ ದೇಹದ ಯಾವುದೇ ಭಾಗವನ್ನು ಅಸಭ್ಯ ರೀತಿಯಲ್ಲಿ ತೋರಿಸುವುದು ಲೈಂಗಿಕ ಕಿರುಕುಳವಾಗುತ್ತದೆ. ಈ ಕೃತ್ಯವು ಪೋಕ್ಸೋ ಕಾಯ್ದೆಯ ಸೆಕ್ಷನ್ 12ರ ಅಡಿ ಶಿಕ್ಷಾರ್ಹವಾಗಿದೆ. ಮೊಬೈಲ್ನ ಮೆಮೋರಿ ಕಾರ್ಡ್ನಲ್ಲಿರುವ ಚಿತ್ರಗಳನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಅವು ಅರ್ಜಿದಾರನ ಮೇಲಿನ ಆರೋಪಗಳನ್ನು ದೃಢಪಡಿಸುತ್ತವೆ. ಈ ಕೃತ್ಯ ಪೋಕ್ಸೋ ಕಾಯ್ದೆಯ ಸೆಕ್ಷನ್ 12ರ ಅಡಿ ಅಪರಾಧವಾಗಿದೆ. ಪ್ರಕರಣ ಸಂಬಂಧ ದೋಷಾರೋಪ…
ಬೆಂಗಳೂರು : ಮುದ್ದಾದ ಹೆಂಡತಿಯಿದ್ದರು ಸಹ ಆತನಿಗೆ ಬೇರೊಂದು ಮಹಿಳೆಯ ಜೊತೆ ಅನೈತಿಕ ಸಂಬಂಧ ಇತ್ತು. ಅಲ್ಲದೆ ಈ ವಿಷಯವಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ಪತ್ನಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಸದ್ಯ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನ ಅನುಷಾ ಎಂದು ತಿಳಿದುಬಂದಿದೆ. ಇನ್ನೂ ಪತಿ ಶ್ರೀಹರಿ ತನ್ನ ಮೊಬೈಲ್ ನಲ್ಲಿ ನಿತ್ಯ ಅಶ್ಲೀಲ ವೀಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ. ಹೆಂಡತಿಯ ಎದುರಲ್ಲೇ ಇನ್ನೊಂದು ಹುಡುಗಿಯ ಜೊತೆ ಸಲುಗೆಯಿಂದ ಇರೋದಲ್ಲದೆ, ಬೇರೆ ಹೆಂಗಸರ ಜೊತೆ ಇದ್ದಿದ್ದನ್ನು ವಿಡಿಯೋ ಕಾಲ್ ಮಾಡಿಯೂ ತೋರಿಸ್ತಿದ್ದ. ಕೊನೆಗೆ ಗಂಡನ ವಿಪರೀತ ಟಾರ್ಚರ್ನಿಂದ ಬೇಸತ್ತ ಪತ್ನಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2 ದಿನಗಳ ಹಿಂದೆಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅನುಶಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಶನಿವಾರ ಚಿಕಿತ್ಸೆ ಫಲಿಸದೆ ಆಕೆ ಸಾವು ಕಂಡಿದ್ದಾರೆ. ಅನುಶಾ ಪತಿ ಶ್ರೀಹರಿ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ…