Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ಬಿ ನಾಗೇಂದ್ರ ಅವರು ನಿನ್ನೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಳಿಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾದರು. ಇನ್ನು ನಾಗೇಂದ್ರ ಅವರ ಮೇಲೆ 18 ಕೇಸ್ಗಳಿದ್ದು, ಇದರಿಂದ ಹೊರಬರುವ ಬದಲು ಚುನಾವಣಾ ಕಣ ಎನ್ನುವುದೆಲ್ಲ ಸುಳ್ಳು ಎಂದು ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ.ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು 18 ಅಲ್ಲ 100 ಕೇಸ್ ಹಾಕಿಸಿಕೊಂಡರು ಮುಖ್ಯಮಂತ್ರಿ ಆಗುತ್ತಾರೆ. ಮುಂದೆ ನಮಗೂ ಒಳ್ಳೆ ಭವಿಷ್ಯವಿದೆ. ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿ ಕೆಲಸ ಮಾಡಿಕೊಂಡು ಹೋದರೆ ಮುಖ್ಯಮಂತ್ರಿ ಯಾಕೆ ಆಗಬಾರದು ಎಂದು ಪ್ರಶ್ನಿಸಿದರು. ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ವಿಚಾರಣೆಯ ವೇಳೆ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಹೇಳಲು ಮಕ್ಕಳ ಹಾಕಿದ್ದಾರೆ ಎಂಬ ಗಂಭೀರವಾದ ಆರೋಪ…
ಬೆಂಗಳೂರು : ಈಗಾಗಲೇ ಬೆಂಗಳೂರಿನ ಜನರು ಮಳೆಯ ಹೊಡೆತಕ್ಕೆ ಸಂಪೂರ್ಣವಾಗಿ ನಲುಗಿ ಹೋಗಿದ್ದಾರೆ. ಇದೀಗ ಇಂದು ಮಳೆ ನಿಂತಿದ್ದ ಕಾರಣ ಜನರು ಸ್ವಲ್ಪ ಸುಧಾರಿಸಿಕೊಂಡಿದ್ದು ಇದೀಗ ಮತ್ತೆ ರಾಜ್ಯದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯ ಆಗುವ ಮುನ್ಸೂಚನೆ ಕುರಿತು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಮಾತನಾಡಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅ.21ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ 7 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು,…
ಬಾಗಲಕೋಟೆ : ಬಾಗಲಕೋಟೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದೀಗ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿ ದೇವಸ್ಥಾನ ಕೂಡ ಭಾರಿ ಮಳೆಯಿಂದಾಗಿ ಜಲಾವೃತವಾಗಿದೆ. ಹೌದು ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನಕ್ಕೆ ನೀರು ನುಗ್ಗಿದೆ. ಬಾದಾಮಿ ಸಮೀಪದ ಬನಶಂಕರಿ ದೇವಸ್ಥಾನದ ಆವರಣ ಸಂಪೂರ್ಣವಾಗಿ ಜಲಾವೃತವಾಗಿದೆ. ಆದರೂ ಸಹ ಭಕ್ತರು ನೀರಿನಲ್ಲಿ ನಡೆದುಕೊಂಡು ಹೋಗಿ ದೇವಿಯ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಡಿ ಅಧಿಕಾರಿಗಳು ಸಿಎಂ ಮತ್ತು ಡಿಸಿಎಂ ಹೆಸರು ಹೇಳುವಂತೆ ಒತ್ತಡ ಹಾಕಿದ್ದರು ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ತನಿಖಾ ಸಂಸ್ಥೆ ಆಗಿರಲಿ ಒಂದು ಪಕ್ಷದ ಪರ ಕೆಲಸ ಮಾಡಬಾರದು. ಇಡಿ, ಸಿಬಿಐ, ಐಟಿ ಯಾವುದೇ ಆಗಲಿ ಬೇಧ ಭಾವ ಇಲ್ಲದೆ ಕೆಲಸ ಮಾಡಬೇಕು. ನನ್ನ ಮತ್ತು ಡಿಸಿಎಂ ಹೆಸರು ಹೇಳುವಂತೆ ಒತ್ತಾಯ ಮಾಡಿದ್ದಾರಂತೆ ಇಡೀ ಒತ್ತಾಯಿಸಿದ ಬಗ್ಗೆ ಶಾಸಕ ನಾಗೇಂದ್ರ ಅವರೇ ಹೇಳಿದ್ದಾರೆ ಎಂದು ಅವರು ತಿಳಿಸಿದರು. ಶಾಸಕ ನಾಗೇಂದ್ರ ಹೇಳಿದ್ದೇನು? ವಾಲ್ಮೀಕಿ ನಿಗಮದ ಹಗರಣದಲ್ಲಿ ನನ್ನಿಂದ ಯಾವುದೇ ತಪ್ಪು ನಡೆದಿಲ್ಲ. ಆದರೂ, ನನ್ನನ್ನು ಬಂಧಿಸಿದ್ದರು. ಅಲ್ಲದೆ ಈ ಒಂದು ಪ್ರಕರಣದಲ್ಲಿ ಸಿಎಂ, ಡಿಸಿಎಂ…
ಹೆಚ್ಚುತ್ತಿದೆ ‘ಆನ್ ಲೈನ್ ಟ್ರೇಡಿಂಗ್’ ವಂಚನೆ : ಸ್ನೇಹಿತೆಯ ಮಾತನ್ನು ನಂಬಿ 1 ಕೋಟಿಗೂ ಅಧಿಕ ಹಣ ಕಳೆದುಕೊಂಡ ವ್ಯಕ್ತಿ!
ಮಂಗಳೂರು : ಇತ್ತೀಚಿಗೆ ಈ ಆನ್ಲೈನ್ ಟ್ರೇಡಿಂಗ್ ಆಪ್ ಗಳ ಹಾವಳಿ ಹೆಚ್ಚಾಗಿದ್ದು, ಅನೇಕರು ಇಂತಹ ಆನ್ಲೈನ್ ಆಪ್ ಗಳನ್ನು ನಂಬಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಇದೀಗ ಮಂಗಳೂರಿನಲ್ಲಿ ಡೇಟಿಂಗ್ ಆಪ್ ಮೂಲಕ ಪರಿಚಯವಾದ ಮಹಿಳೆಯ ಮಾತನ್ನು ಕೇಳಿ ಆನ್ಲೈನ್ ಟ್ರೇಡಿಂಗ್ ನಲ್ಲಿ ಸುಮಾರು 1 ಕೋಟಿಗೂ ಅಧಿಕ ಹೆಚ್ಚು ಹಣವನ್ನು ಕಳೆದುಕೊಂಡಿರುವ ಘಟನೆ ನಡೆದಿದೆ. ಹೌದು ವ್ಯಕ್ತಿಯೊಬ್ಬರು ಡೇಟಿಂಗ್ ಆಪ್ ಮೂಲಕ ಲೀನಾ ಜೋಸ್ ಎಂಬ ಹೆಸರಿನ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಾರೆ. ಬಳಿಕ ಆಕೆಯ ಬಳಿ ಆನ್ಲೈನ್ ಟ್ರೇಡಿಂಗ್ ಬಗ್ಗೆ ಮಾಹಿತಿ ಪಡೆದುಕೊಂಡು ಹಂತಹಂತವಾಗಿ ಅವರು ಹೇಳಿರುವ ಆನ್ಲೈನ್ ಟ್ರೇಡಿಂಗ್ ಆ್ಯಪ್ ನಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಯುವತಿಯ ಮಾತಿನಂತೆ admiral market forex trading ನಲ್ಲಿ ವ್ಯಕ್ತಿ ಮೊದಲಿಗೆ 50 ಸಾವಿರ ಹಣ ಹೂಡಿಕೆ ಮಾಡಿದ್ದಾರೆ. ಬಳಿಕ 80 ಸಾವಿರ ಲಾಭ ಬಂಧಿರುವುದನ್ನು ತೋರಿಸುತ್ತಿತ್ತು. ಅದಾದ ಬಳಿಕ ಹಣ ವಿತ್ ಡ್ರಾ ಮಾಡಲು ಕಸ್ಟಮರ್ ಕೇರ್ ಬಳಿ…
ಬೆಂಗಳೂರು : ಈಗಾಗಲೇ ಸಿಎಂ ಸಿದ್ದರಾಮಯ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ವಿರೋಧ ಪಕ್ಷದ ನಾಯಕರು ಸರ್ಕಾರದ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ. ಇದರ ಮಧ್ಯ ಮಾಜಿ ಸಚಿವ ರೋಷನ್ ಬೇಗ್ ಅವರು ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿ ಆರೋಪಿಗಳ ಮೇಲಿನ ಕೇಸ್ ಗಳನ್ನು ಕೂಡ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಕೇಸ್ಗಳನ್ನು ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ ಮಾಡಿದ್ದಾರೆ. ಇದಾದ ಬಳಿಕ ಬೆಂಗಳೂರಿನಲ್ಲಿ ಸಮಾಜದ ಜನರು ಬಂದು ನನಗೆ ಮನವಿ ಮಾಡಿದ್ದರು. ನಾನು ಸಮಾಜದ ನಾಯಕರ ಜೊತೆಗೆ ನಾಯಕರನ್ನು ಭೇಟಿ ಮಾಡಿದೆ. ಸುಮಾರು 35 ಜನರು ಜೈಲಿನಲ್ಲಿದ್ದಾರೆ. ನಾವು ಈ ದೇಶದವರು ಇಲ್ಲೇ ಇರುತ್ತೇವೆ. ನಮ್ಮನ್ನು ಸಮುದ್ರಲ್ಲಿ ಹಾಕುತ್ತೀರಾ? ಯುಎಪಿಎ ಕೇಸ್ ದಾಖಲಿಸಿದ್ದರು ಅದನ್ನು ವಾಪಸ್ ಪಡೆಯಲು ದಾರಿಗಳಿದೆ. ದಾರಿ ಇಲ್ಲ ಅಂತಾ ಹತ್ತು ವರ್ಷ ಜೈಲಿನಲ್ಲಿ ಇರಬೇಕಾ?…
ಚಿತ್ರದುರ್ಗ : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಈ ಒಂದು ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಗಳಾಗಿವೆ. ಇದೀಗ ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಒಬ್ಬರು ಸಾವನಪ್ಪಿದ್ದಾರೆ. ಹೌದು, ಚಿತ್ರದುರ್ಗ ತಾಲೂಕಿನ ಈಚನ ನಾಗೇನಹಳ್ಳಿ ಎಂಬ ಗ್ರಾಮದಲ್ಲಿ ನಿನ್ನೆ ರಾತ್ರಿ ನಿರಂತರವಾಗಿ ಸುರಿದ ಮಳೆಯ ಪರಿಣಾಮ ಮನೆಯ ಗೋಡೆ ಒಂದು ಕುಸಿದು ಬಿದ್ದು ವೃದ್ಧೆ ರಂಗಮ್ಮ (75) ಸಾವನ್ನಪ್ಪಿದ್ದರೆ. ಘಟನೆ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಘಟಪ್ರಭಾ ನದಿ ಬಳಿ ಸೇತುವೆಯ ಮೇಲೆ ನಡೆದಿದೆ. ಘೋಡಗೇರಿ ಗ್ರಾಮದಿಂದ ಪೊಗತ್ಯಾನಟ್ಟಿ ಗ್ರಾಮಕ್ಕೆ ದಂಪತಿ ಬೈಕ್ ಮೇಲೆ ತೆರಳುವಾಗ ನೊಗನಿಹಾಳ ಗ್ರಾಮದ ಬಳಿ ಸೇತುವೆ ದಾಟುವಾಗ ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿದ್ದಾರೆ.ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದ ಸುರೇಶ ಬಡಿಗೇರ (53), ಜಯಶ್ರೀ ಬಡಿಗೇರ(45) ಮೃತ ದಂಪತಿ ಎಂದು ತಿಳಿದುಬಂದಿದೆ. ಘಟಪ್ರಭಾ ನದಿಯಿಂದ ಜಯಶ್ರೀ ಶವ ಹೊರ ತೆಗೆದ ಅಗ್ನಿಶಾಮಕ ದಳ ಸಿಬ್ಬಂದಿ ಜಯಶ್ರೀ ಪತಿ ಸುರೇಶ್ ಗಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಅಲ್ಲದೆ ಸೇತುವೆ ತಡೆಗೋಡೆ ನಿರ್ಮಾಣ ಮಾಡಿ ಎಂದು ಅಧಿಕಾರಿಗಳಿಗೆ ಹಲವು ಬಾರಿ ಸ್ಥಳೀಯರಿಂದ ಹಾಗೂ ಪೊಲೀಸ್ ಇಲಾಖೆಯಿಂದಲೂ ಕೂಡ ಒತ್ತಾಯ ಕೇಳಿಬಂದಿತ್ತು.ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷಕ್ಕೆ ಇದೀಗ ದಂಪತಿಗಳು ಬಲಿಯಾಗಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ : ಶಾಸಕ ಜನಾರ್ದನ ರೆಡ್ಡಿ ಭಯ ಬಿದ್ದು ಕೋಮುವಾದಿ ಪಕ್ಷಕ್ಕೆ ಹೋಗಿದ್ದಾರೆ. ಇಡಿ, ಸಿಬಿಐ ಭಯದಿಂದ ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ದಾರೆ. ಹೊಸ ಪಕ್ಷ ಕಟ್ಟಿದಾಗ ಬಿಜೆಪಿ ವಿರುದ್ಧ ಎಷ್ಟು ಆರೋಪ ಮಾಡಿದ್ದರು ಗೊತ್ತಾ? ರೆಡ್ಡಿ ಸಂಡೂರಿನಲ್ಲಿ ಅರಮನೆ ಮಾಡಿದ್ರು ಕಾಂಗ್ರೆಸ್ ಗೆಲುವು ಫಿಕ್ಸ್ ರೆಡ್ಡಿ ಬಳ್ಳಾರಿಗೆ ಬಂದಿರುವುದು ಪಕ್ಷದ ಮೇಲೆ ಪರಿಣಾಮ ಬೀರಲ್ಲ ಎಂದು ಬಿಜೆಪಿ ವಿರುದ್ಧ ಶಾಸಕನಾಗಿದ್ರೆ ವಾಗ್ದಾಳಿ ನಡೆಸಿದರು. ಬಳ್ಳಾರಿಯಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾನು ಯಾವುದೇ ಹಗರಣ ಮಾಡಿಲ್ಲ. ಇದೆಲ್ಲ ಬಿಜೆಪಿ ಕುತಂತ್ರ ಎಂದು ಬಳ್ಳಾರಿಯಲಿ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಗಂಭೀರವಾದ ಆರೋಪ ಮಾಡಿದರು. ಸರ್ಕಾರವನ್ನು ಅಸ್ಥಿರಗೊಳಿಸಲು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ಸಿಬಿಐ ಇಡಿ ಬಳಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣದಿಂದ ಸಂಪೂರ್ಣವಾಗಿ ಮುಕ್ತನಾಗುತ್ತೇನೆ ಎಂದರು. ಯುಪಿಎ ಸರ್ಕಾರ ಇದ್ದಾಗ ನಾಗೇಂದ್ರ ಜೈಲಿಗೆ ಹೋಗಿದ್ದಾರೆ ಎಂದು ಜನಾರ್ಧನ್ ರೆಡ್ಡಿ ಹೇಳಿಕೆ ವಿಚಾರವಾಗಿ, ಆಗ ಅವರ ಜೊತೆ ಇದ್ದಾಗ ನಾನು ಒಳ್ಳೆಯವನು ಇದ್ದೆ. ಈಗ ಪಕ್ಷ…
ಬೆಂಗಳೂರು : ತಂತ್ರಜ್ಞಾನ ಮತ್ತು ಇತರೆ ಹಲವು ವಿಷಯಗಳಲ್ಲಿ ಭಾರತ ಅದೆಷ್ಟೋ ಮುಂದುವರೆಯುತ್ತಿದೆ. ಆದರೆ ದೇಶದಲ್ಲಿ ಇನ್ನೂ ಕೂಡ ಹಲವಾರು ಜನರು ಹಸಿವಿನಿಂದ ಬಳಲುತ್ತಿದ್ದಾರೆ. ಅದೆಷ್ಟೋ ಹೋಟೆಲ್ಗಳಲ್ಲಿ, ಸಭೆ ಸಮಾರಂಭಗಳಲ್ಲಿ ಆಹಾರವನ್ನು ವೇಸ್ಟ್ ಮಾಡುತ್ತೇವೆ. ಈ ಕಾರಣದಿಂದ ಇದೀಗ ಆಹಾರ ವ್ಯರ್ಥವಾಗದಂತೆ ಹೊಸ ಕಾನೂನು ರಚನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು. ಇಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ವಿಶ್ವ ಆಹಾರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಹೋಟೆಲ್ಗಳು ಮತ್ತು ಮದುವೆ ಮಂಟಪಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಸರ್ಕಾರವು ಕರಡು ನಿಯಮ ರೂಪಿಸಲಿದೆ. ದೇಶದಲ್ಲಿ ವಾರ್ಷಿಕವಾಗಿ 90,000 ಕೋಟಿ ರೂ. ಮೌಲ್ಯದ ಆಹಾರ ವ್ಯರ್ಥವಾಗುತ್ತದೆ. ಭಾರತದಲ್ಲಿ ಸುಮಾರು ಶೇ 70 ರಷ್ಟು ಜನಸಂಖ್ಯೆಯು ಕೃಷಿಯ ಮೇಲೆ ಅವಲಂಬಿತವಾಗಿದೆ. ರಾಗಿಯ ಬಳಕೆಯನ್ನು ಹೆಚ್ಚಿಸಬೇಕು, ಇದು ಆರೋಗ್ಯ ಸುಧಾರಿಸಲು ಉತ್ತಮವಾಗಿದೆ. ಆಹಾರವನ್ನು ವ್ಯರ್ಥ ಮಾಡದಂತೆ ಮಕ್ಕಳಿಗೆ ಕಲಿಸುವುದು ಮತ್ತು ಆಹಾರವನ್ನು ಸರಿಯಾಗಿ ಬಳಸಿಕೊಳ್ಳುವುದರ ಬಗ್ಗೆ ಜಾಗೃತಿ…














