Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಆಕೆ 8 ತಿಂಗಳ ತುಂಬು ಗರ್ಭಿಣಿ ಇದನ್ನು ಲೆಕ್ಕಿಸದೆ ಪತಿಯಾದವನು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದರಿಂದ ಮನನೊಂದು 8 ತಿಂಗಳ ಗರ್ಭಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕನಕಗಿರಿಯಲ್ಲಿ ನಡೆದಿದೆ. ಹೌದು ಮೈಸೂರಿನ ಕನಕಗಿರಿಯಲ್ಲಿ ಚೈತ್ರ @ ಚಿಕ್ಕದೇವಿ (23) ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ ಎಂದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಕನಕಗಿರಿಯ ಶರತರಾಜು ಜೊತೆ ಚೈತ್ರ ಮದುವೆಯಾಗಿದ್ದಳು. ಇನ್ನೂ ಚೈತ್ರಾ ಪತಿ ಶರತ್ ರಾಜ್ ನನ್ನು ವಿದ್ಯಾರಣ್ಯಪುರಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಿರುಕುಳ ತಾಳಲಾರದೆ ಚೈತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪ ಹೇಳಿ ಬಂದಿದ್ದು ಪತಿಯ ಮನೆಯ ವಿರುದ್ಧ ವಿರುದ್ಧ ಚೈತ್ರ ಪೋಷಕರು ದೂರು ಸಲ್ಲಿಸಿದ್ದು, ಘಟನೆ ಕುರಿತಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಇಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಹಂತದ ಯೋಜನೆ ಉದ್ಘಾಟನೆ ಮಾಡಿ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡಿದರು. ಎತ್ತಿನಹೊಳೆ ಯೋಜನೆ ಪೂರ್ಣವಾಗಲಿದೆ ಯಾವುದೇ ಸಂಶಯ ಬೇಡ. ಎರಡನೇ ಹಂತದ ಯೋಜನೆಯ ಕಾಮಗಾರಿ 2026 27ಕ್ಕೆ ಮುಗಿಯಲಿದೆ. ಎತ್ತಿನಹೊಳೆ ಯೋಜನೆ ಬಗ್ಗೆ ಯಾವುದೇ ಅನುಮಾನ ಬೇಡ. ಎತ್ತಿನಹೊಳೆ ಯೋಜನೆ ಕಾಮಗಾರಿಗೆ ನಾನೇ ಭೂಮಿ ಪೂಜೆ ಮಾಡಿದ್ದು. 2014ರಲ್ಲಿ ಚಿಕ್ಕಬಳ್ಳಾಪುರದಲ್ಲಿ ನಾನು ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ್ದೆ. ಇಂದು ನಾನೇ ಆ ಒಂದು ಕಾಮಗಾರಿಯ ಉದ್ಘಾಟನೆ ಮಾಡಿದ್ದು ಸಂತೋಷ ತಂದಿದೆ ಎಂದು ತಿಳಿಸಿದರು. ಈ ಒಂದು ಯೋಜನೆಯು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಹಾಸನ, ರಾಮನಗರ, ಚಿಕ್ಕಮಂಗಳೂರು ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿತ್ತು. 7 ಜಿಲ್ಲೆಗಳಿಗೆ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. 527 ಕೆರೆಗಳಿಗೆ ನೀರು ತುಂಬಿಸುವ ಕುಡಿಯುವ ನೀರಿನ ಯೋಜನೆಯಾಗಿದೆ…
ಬೆಂಗಳೂರು : ಕೇರಳ ಸಿನಿಮಾ ಇಂಡಸ್ಟ್ರಿಯಲ್ಲಿ ನಟಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದ ಕೂಡಲೇ ಅಲ್ಲಿನ ಹೇಮಾ ಸಮಿತಿ ಮಾದರಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಕೂಡ ಅಂಥ ಒಂದು ಸಮಿತಿ ರಚನೆ ಮಾಡಬೇಕು ಎಂದು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲ ನಟ ನಟಿಯರು ಮನವಿ ಸಲ್ಲಿಸಿದರು. ಈ ಒಂದು ವಿಚಾರವಾಗಿ ಕನ್ನಡದ ಹಿರಿಯ ಖ್ಯಾತ ನಟ ರಮೇಶರವಿಂದ ಪ್ರತಿಕ್ರಿಯೆ ನೀಡಿದ್ದು, ನಾನು ಆಕ್ಟಿವಿಸ್ಟ್ ಅಲ್ಲ ಆದರೂ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನ್ಯಾಯ ಆಗಿರೋರಿಗೆ ನ್ಯಾಯ ಸಿಗಬೇಕು. ನಾನು ಆಕ್ಟಿವಿಸ್ ಅಲ್ಲ ಆದ್ರೂ ಬೆಂಬಲ ಕೊಡುತ್ತೇನೆ ಎಂದು ಕಮಿಟಿ ರಚನೆ ವಿಚಾರಕ್ಕೆ ರಮೇಶ್ ಅರವಿಂದ್ ಹೇಳಿಕೆ ನೀಡಿದ್ದಾರೆ. ಸಮಾಜದಲ್ಲಿ ಎಲ್ಲೇ ಕಿರುಕುಳ ನಡೆದರು ಅದು ತಪ್ಪು. ನಾನು ಸದ್ಯ ಆಕ್ಟಿವ್ಸ್ಟ್ ಅಲ್ಲ ಆದರೂ ಬೆಂಬಲ ಕೊಡುತ್ತೇನೆ ಎಂದು ಅವರು ಬೆಂಬಲ ಸೂಚಿಸಿದರು. ಸಿನಿಮಾ ಅನ್ನೋದು ದೊಡ್ಡ ಸಾಗರ. ಇದರಲ್ಲಿ ನಾವೆಲ್ಲರೂ ಒಂದೇ ಫ್ಯಾಮಿಲಿ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಕನ್ನಡ ಚಿತ್ರರಂಗದ ಹಲವಾರು ಕಲಾವಿದರು ಅವರನ್ನು ಭೇಟಿ ಮಾಡಿದ್ದರು. ಇದೀಗ ಮೊದಲ ಬಾರಿಗೆ ನಟ ಪ್ರೇಮ್ ಅವರು ದರ್ಶನ್ ಅವರ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ್ದು, ದರ್ಶನ್ ಸಾಯಿಸಿದ್ದಾರೆ ಅನ್ನೋದು ಎಲ್ಲೂ ಪ್ರೂವ್ ಆಗಿಲ್ಲ ಅಲ್ವಾ? ಎಂದು ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಮಾಡಿದ್ದು ಒಳ್ಳೆಯ ಕೆಲಸ ಅಲ್ಲ.ಈ ಪ್ರಕರಣದಿಂದ ದರ್ಶನ್ ಬೇಗ ಆಚೆ ಬರಲಿ ಎಂದಿದ್ದಾರೆ. ಅವರು ಕಾಮನ್ ಮ್ಯಾನ್ ಅಲ್ಲ. ಇಂಡಸ್ಟ್ರಿಗೆ ದರ್ಶನ್ (Darshan) ಅವರ ಕಾಂಟ್ರಿಬ್ಯೂಷನ್ ತುಂಬಾ ಇದೆ. ಅವರ ಮೇಲೆ ನಿರ್ಮಾಪಕರು ಕೋಟಿಗಟ್ಟಲೇ ಬಂಡವಾಳ ಹೂಡಿದ್ದಾರೆ. ಕನ್ನಡ ಇಂಡಸ್ಟ್ರಿಯಲ್ಲಿ ಇರುವ ಕೆಲವೇ ಸೂಪರ್ ಸ್ಟಾರ್ಗಳಲ್ಲಿ ದರ್ಶನ್ ಕೂಡ ಒಬ್ಬರು ಸೂಪರ್ ಸ್ಟಾರ್. ಹಾಗಾಗಿ ಚಿತ್ರರಂಗಕ್ಕೆ ಕೊಡುಗೆ ಬೇಕಿದೆ ಎಂದರು. ನಮಗೂ ಆ…
ಬೆಂಗಳೂರು : ತನ್ನ ಗೆಳತಿಯನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಹರಿಯಾಣ ಮೂಲದ ನಕ್ಸಲನ್ನು ಇದೀಗ ಕೇಂದ್ರ ಅಪರಾಧ ವಿಭಾಗ (CCB) ಎಟಿಸಿ ತಂಡ ಬಂಧಿಸಿದೆ. ಹರಿಯಾಣ ಮೂಲದ ಅನಿರುದ್ದ್ ಬಂಧಿತ ನಕ್ಸಲ್ ಎಂದು ತಿಳಿದುಬಂದಿದೆ. ಪೊಲೀಸ್ ಆಯುಕ್ತರು ಹೇಳಿದ್ದೇನು? ಪ್ರಕರಣ ಸಂಬಂಧ, ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ, ಹರಿಯಾಣ ಮೂಲದ ಅನಿರುದ್ದ ರಾಜನ್ ಖಾಸಗಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದನು. ಈತ ನಿಷೇಧಿತ ಎಡಪಂಥಿಯ ಸಂಘಟನೆಯ ಸಂಪರ್ಕ ಹೊಂದಿದ್ದಾನೆ. ಆ ಸಂಘಟನೆಗಳ ಜೊತೆಗೆ ಈತ ಕಾರ್ಯ ನಿರ್ವಹಿಸುತ್ತಿದ್ದನು. ಸದ್ಯ ಆತನನ್ನ ಬಂಧಿಸಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನ 15 ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದೇವೆ. ಸದ್ಯ ಆತನ ಕಾರ್ಯ ಚಟುವಟಿಕೆ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಹೇಳಿದರು. ನಕ್ಸಲ್ ಹಿನ್ನೆಲೆ? ಅನಿರುದ್ದ್ ನಿಷೇಧಿತ ಸಿಪಿಐ(ಎಂ) ನಕ್ಸಲ್ ಸಂಘಟನೆಯಲ್ಲಿ ಇದ್ದನು. ಅನಿರುದ್ದ್ ನಿಷೇಧಿತ ಬರಹಗಳನ್ನ ಬರೆದು ಪೋಸ್ಟ್ ಮಾಡುತ್ತಿದ್ದನು. ಈತನಿಗಾಗಿ ಪೊಲೀಸ್ ಮತ್ತು ನಕ್ಸಲ್ ನಿಗ್ರಹ ತಂಡ ಬಲೆ…
ಬೆಂಗಳೂರು : ರಾಜ್ಯದಲ್ಲಿ ಎಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಕೆಲವೆಡೆ ನಡೆದ ಭೀಕರ ಅಪಘಾತದಲ್ಲಿ ಸುಮಾರು 12 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.ವಿಜಯಪುರ, ಬಾಗಲಕೋಟೆ, ರಾಮನಗರ, ಮಂಗಳೂರಿನಲ್ಲಿ ರಸ್ತೆ ಅಪಘಾತಗಳು ಸಂಭವಿಸಿವೆ. ಮೃತರ ಕುಟುಂಬಸ್ಥರ ಪಾಲಿಗೆ ಕಾರಳ ದಿನವಾಗಿದೆ ಎಂದರು ತಪ್ಪಾಗಲಾರದು. ಬಾಗಲಕೋಟೆ ಬಾಗಲಕೋಟೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಬಾಗಲಕೋಟೆ ಬಿವಿವಿಯ ಶ್ರುತಿ ಒಂದಕುದರಿ (32), ಡೆಂಟಲ್ ಕಾಲೇಜ್ ಉಪನ್ಯಾಸಕಿ, ರಜನಿ ಒಂದಕುದರಿ (34), ಸಾಪ್ಟವೇರ್ ಇಂಜಿನಿಯರ್ ಅಭಿಷೇಕ್ ದೋತ್ರಿ (20) ಮೃತರು ಎಂದು ತಿಳಿದುಬಂದಿದೆ. ಸ್ಕೂಟಿಯಲ್ಲಿದ್ದ ಮಹಿಳೆಯರು ಡಿವೈಡರ್ ಕ್ರಾಸ್ ಮಾಡಿ ಅಡ್ಡ ಬಂದು ವೇಗವಾಗಿ ಹೊರಟಿದ್ದ ಯಮಹಾ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ಗಳು ಪೀಸ್ ಪೀಸ್ ಆಗಿವೆ. ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಬೈಕ್ ವ್ಹೀಲಿಂಗ್ ಹುಚ್ಚಾಟಕ್ಕೆ ನಾಲ್ವರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ…
ಬೆಂಗಳೂರು : ಇತ್ತೀಚೆಗೆ ನಡೆದ T20 ವಿಶ್ವಕಪ್ನಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿತ್ತು. ಇದೀಗ ಪ್ರೋ ಕಬಡ್ಡಿ ಪಂದ್ಯಾವಳಿಗೆ ಕರ್ನಾಟಕ ಹಾಲು ಮಹಾಮಂಡಳದ ನಂದಿನಿ ಬ್ರ್ಯಾಂಡ್ ಸೆಂಟ್ರಲ್ ಪ್ರಾಯೋಜಕತ್ವ ವಹಿಸಲು ಮುಂದಾಗಿದೆ. ಹೌದು ಇಂಡಿಯನ್ ಸೂಪರ್ ಲೀಗ್ ಪುಟ್ಬಾಲ್ನ 11ನೇ ಸೀಸನ್ ಸೆ.13 ರಿಂದ ಆರಂಭವಾಗಲಿದೆ. ಪಂದ್ಯದಲ್ಲಿ 13 ತಂಡಗಳು ಸ್ಪರ್ಧಿಸಲಿವೆ. ಈ ಪಂದ್ಯಾವಳಿ ಕೋಲ್ಕತ್ತಾ, ದೆಹಲಿ, ಕೇರಳ ಸೇರಿದಂತೆ ಹಲವೆಡೆ ನಡೆಯಲಿದೆ. ಜೊತೆಗೆ ಪ್ರೋ ಕಬಡ್ಡಿ ಪಂದ್ಯಾವಳಿಯ ಸೆಂಟ್ರಲ್ ಸ್ಪಾನ್ಪರ್ಶಿಪ್ ಸಹ ಪಡೆಯಲು ಕೆಎಂಎಫ್ ಮುಂದಾಗಿದೆ. ಈ ಎರಡು ಪಂದ್ಯಾವಳಿಗಳ ಸೆಂಟ್ರಲ್ ಟೈಟಲ್, ಎಲ್ಇಡಿ ಬೋರ್ಡ್ಗಳು, ಪ್ರೆಸೆಂಟೇಶನ್ ಬ್ಯಾಕ್ಡ್ರಾಪ್ಗಳು ಸೇರಿ ವಿವಿಧ ರೀತಿಯಲ್ಲಿ ಪ್ರಾಯೋಜಕತ್ವದ ಗುರಿಯನ್ನು ಕೆಎಂಎಫ್ ಹೊಂದಿದೆ. ಜೊತೆಗೆ ನಂದಿನಿ ಮೊಸರು, ಬೆಣ್ಣೆ ಮತ್ತು ತುಪ್ಪ ಸೇರಿದಂತೆ ಡೈರಿ ಉತ್ಪನ್ನಗಳನ್ನು ದೆಹಲಿ ಮಾರುಕಟ್ಟೆಯಲ್ಲಿ ಮುಂದಿನ ತಿಂಗಳಿನಿಂದ ಪರಿಚಯಿಸಲು ಸಿದ್ಧವಾಗಿದೆ ಎನ್ನಲಾಗಿದೆ. ಪ್ರೋ ಕಬಡ್ಡಿ ಜೊತೆಗೆ ಇಂಡಿಯನ್ ಸೂಪರ್ ಲೀಗ್…
ಧಾರವಾಡ : ಧಾರವಾಡ ಕೆಐಎಡಿಬಿಯಲ್ಲಿ ನಕಲಿ ರೈತರ ಖಾತೆಗಳನ್ನು ಸೃಷ್ಟಿಸಿ, 30 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಹೌದು ಕೆಐಎಡಿಬಿ ಡಬಲ್ ಪೇಮೆಂಟ್ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ವಿಶೇಷ ಭೂಸ್ವಾಧೀನಾಧಿಕಾರಿ ವಿ.ಡಿ. ಸಜ್ಜನ್ ಹಾಗೂ ಕೆಐಎಡಿಬಿಯಲ್ಲಿ ಏಜೆಂಟ್ ಆಗಿ ಕೆಲಸ ಮಾಡ್ತಿದ್ದ ಅಶ್ಫಾಕ್ ದುಂಡಸಿ ಇಬ್ಬರನ್ನು ಇಡಿ ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆ ಈ ಇಬ್ಬರು ಧಾರವಾಡ ಜಿಲ್ಲಾ ಕಾರಾಗೃಹದಲ್ಲಿದ್ದರು. ಇತ್ತೀಚೆಗೆ ಕೆಐಎಡಿಬಿ ಕಚೇರಿ ಮೇಲೆ ದಾಳಿ ಮಾಡಿದ್ದ ಇಡಿ ತಂಡ, ಅನೇಕ ದಾಖಲೆ ಪತ್ರ ವಶಕ್ಕೆ ಪಡೆದು ಪರಿಶೀಲನೆ ನಡೆಸಿತ್ತು. ಅದರಂತೆ ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಕರೆದೊಯ್ಯಲಾಗಿದೆ.
ಹುಬ್ಬಳ್ಳಿ : ಟಗರು ಟಗರು ಅಂತರಲ್ಲ ಅದು ಸಿಎಂ ಸಿದ್ದರಾಮಯ್ಯರ ಮೇಲೆ ಪ್ರೀತಿ ಅಲ್ಲ. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಳ್ಳೆಯ ಮನುಷ್ಯ. ಭ್ರಷ್ಟಾಚಾರ ಮಾಡಿದವನಲ್ಲ. ದುಡ್ಡು ಮಾಡಬೇಕಿದ್ದರೇ ಈ ಹಿಂದೆ ಅಧಿಕಾರದ ಅವಧಿಯಲ್ಲಿಯೇ ಸಾಕಷ್ಟು ಮಾಡ್ತಿದ್ದರು. ಆದರೆ, ಅಂತಹ ಕಾರ್ಯಕ್ಕೆ ಕೈ ಹಾಕಿಲ್ಲ ಅವರ ಒಳ್ಳೆಯತನವನ್ನು ಹೊಗಳುಭಟ್ಟರು ಹಾಳು ಮಾಡಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ. ಮುಡಾ (ಮೈಸೂರಿನ ನಗಾರಭಿವೃದ್ಧಿ ಪ್ರಾಧಿಕಾರ) ಪ್ರಕರಣ ಈಗ ಕೋರ್ಟ್ನಲ್ಲಿದೆ. ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೆ ಕೋರ್ಟ್ ಮುಂದೆ ಇಡಬೇಕು. ಕೋರ್ಟ್ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದೇ ಕಾಂಗ್ರೆಸ್ ಟೀಕೆ ಮಾಡುವುದೇ ಬಿಜೆಪಿಯವರ ಕೆಲಸವಾಗಿದೆ ಎಂದು ಅವರು ಹೇಳಿದರು. ನೈತಿಕತೆ ಇದ್ದರೆ ಬಿಜೆಪಿ ನಾಯಕರು ರಾಜೀನಾಮೆ ಕೊಡಬೇಕಿತ್ತು. ರಾಜ್ಯದಲ್ಲಿ ವಿರೋಧ ಪಕ್ಷ ವಿರೋಧಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ.…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಮಹದಾಯಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು ಎಂದು ಕಾನೂನು ಸಚಿವ HK ಪಾಟೀಲ್ ತಿಳಿಸಿದರು. ಈ ಕುರಿತು ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ ಮಾಡಲು ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ. ಅಲ್ಲದೆ ಸ್ಥಳೀಯ ಉದ್ಯೋಗಿಗಳಿಗೆ ಕೌಶಲ್ಯತೆ ನೀಡಲು 100 ಕೋಟಿ ವೆಚ್ಚದಲ್ಲಿ ತರಬೇತಿ ನೀಡಲಾಗುತ್ತಿದ್ದು, ನಿಪುಣ ಕರ್ನಾಟಕ ಉಪಕ್ರಮ ಹೆಸರಲ್ಲಿ ತರಬೇತಿ ನೀಡಲು ಸಂಪುಟದಲ್ಲಿ ಇಂದು ಅನುಮೋದನೆ ನೀಡಲಾಯಿತು ಎಂದು ತಿಳಿಸಿದರು. ಅಲ್ಲದೆ ಕರ್ನಾಟಕ ಜೈವಿಕ ತಂತ್ರಜ್ಞಾನ ಅಡಿಯಲ್ಲಿ ಐದು ವರ್ಷಗಳ ಕಾಲ ನಾಲ್ಕು ಕೋಟಿ ವೆಚ್ಚದಲ್ಲಿ ಪ್ರೋತ್ಸಾಹ ದನ ನೀಡಲು ಅನುಮೋದನೆ…