Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಜಾರಿ ನಿರ್ದೇಶನಾಲಯ (ED) ನೋಟಿಸ್ ನೀಡಿದೆಯಾ ಎಂಬ ಸುದ್ದಿ ಹರಿದಾಡುತ್ತಿದೆ.ಆದರೆ ಇದಕ್ಕೆ ಸಿಎಂ ಕಛೇರಿ ಸ್ಪಷ್ಟನೇ ನೀಡಿದ್ದು ಇದೆಲ್ಲ ಸುಳ್ಳು ಎಂದು ತಿಳಿಸಿದೆ. ಹೌದು ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಇಡಿ ನೋಟಿಸ್ ನೀಡಲಾಗಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿ ಸ್ಪಷ್ಟನೆಯನ್ನು ನೀಡಿದೆ. ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಬಂಧನ ಆಗಿದೆ. ಅವರನ್ನು ಇಡಿ ಬಂಧನಕ್ಕೆ ಒಳಪಡಿಸಿತ್ತು. ಅಲ್ಲದೆ, ನಿಗಮದ ಇತರ ಅಧಿಕಾರಿಗಳನ್ನು ಕೂಡಾ ಬಂಧನ ಮಾಡಲಾಗಿದೆ. ಅಲ್ಲದೆ ನಿಗಮದ ಇತರ ಅಧಿಕಾರಿಗಳ ಬಂಧನವೂ ಆಗಿದೆ. ಇದೀಗ ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೂ ಇಡಿ ನೋಟಿಸ್ ನೀಡಿದೆ ಎಂಬ…
ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನವರು ಜೈಲು ಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಪತ್ನಿ ವಿಜಯಲಕ್ಷ್ಮಿ ನಟ ದರ್ಶನ ಅವರನ್ನು ಭೇಟಿ ಮಾಡಿದ್ದರು. ಇದೀಗ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ದರ್ಶನ್ ಸಹೋದರ ತೂಗುದೀಪ ಅವರೊಂದಿಗೆ ವಿಜಯಲಕ್ಷ್ಮಿ ಮತ್ತೊಮ್ಮೆ ದರ್ಶನವರನ್ನು ಭೇಟಿ ಮಾಡಿದ್ದಾರೆ. ಹೌದು ಚಾರ್ಜ್ಶೀಟ್ ಸಲ್ಲಿಕೆಯ ಬಳಿಕ ಇಂದು ದರ್ಶನ್ ಭೇಟಿಗೆ ದಿನಕರ್ ತೂಗುದೀಪ್ ಜೊತೆ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ, ಹೈ ಸೆಕ್ಯೂರಿಟಿ ಸೆಲ್ನಿಂದ ಹೊರಬಂದ ಆರೋಪಿ ದರ್ಶನ್ ಪತ್ನಿ ಮತ್ತು ಸಹೋದರನನ್ನು ನೋಡಿ ಭಾವುಕರಾಗಿದ್ದಾರೆ. ಜೈಲಿನ ಒಳಗಡೆ ಹೋಗುವುದಕ್ಕೂ ಮುಂಚೆ ವಿಜಯಲಕ್ಷ್ಮಿ ಅವರ ಬ್ಯಾಗ್ ಗಳನ್ನು ಪೊಲೀಸ್ ಸಿಬ್ಬಂದಿ ಚೆಕ್ ಮಾಡಿ ಒಳಗೆ ಬಿಟ್ಟರು. ಇನ್ನೂ ಈ ವೇಳೆ, ಬಳ್ಳಾರಿ ಸೆಂಟ್ರಲ್ ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಸಹೋದರ ಮತ್ತು ಪತ್ನಿಯ ಜೊತೆ ದರ್ಶನ್ ಮಾತನಾಡಲು ಅರ್ಧ ಗಂಟೆ ಕಾಲಾವಕಾಶ ನೀಡಲಾಗಿದ್ದು, ಕಾನೂನು ಸಮರದ ಬಗ್ಗೆ ಚರ್ಚೆ ನಡೆಸಿದ್ದಾರೆ…
ರಾಯಚೂರು : ಹಳ್ಳ ದಾಟುತ್ತಿದ್ದ ವೇಳೆ ಮಳೆಯ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಸಿಬ್ಬಂದಿಯ ಮೃತ ದೇಹ ಇದೀಗ ಪತ್ತೆಯಾಗಿದೆ. ಮೃತನನ್ನು ರಾಯಚೂರು ತಾಲೂಕಿನ ಫತ್ತೆಪುರ ಗ್ರಾಮದ HDFC ಬ್ಯಾಂಕ್ ಸಿಬ್ಬಂದಿ ಬಸವರಾಜು (33) ಎಂದು ತಿಳಿದುಬಂದಿದೆ. ಕಳೆದ ಸೆಪ್ಟೆಂಬರ್ 3ರಂದು ರಾತ್ರಿ ಹಳ್ಳ ದಾಟುತ್ತಿದ್ದಾಗ ಬಸವರಾಜು ಕೊಚ್ಚಿ ಹೋಗಿದ್ದ. ಭಾರಿ ಮಳೆಯಿಂದಾಗಿ ಹೆಚ್ಚಿನ ನೀರಿನ ರಭಸದಿಂದ ಬಸವರಾಜು ಕೊಚ್ಚಿ ಹೋಗಿದ್ದ, ರಾಯಚೂರು ತಾಲೂಕಿನ ಫತ್ತೆಪುರ ಗ್ರಾಮದಿಂದ ಒಂದುವರೆ ಕಿಲೋಮೀಟರ್ ದೂರದಲ್ಲಿ ಇದೀಗ ಬಸವರಾಜುವಿನ ಮೃತ ದೇಹ ಪತ್ತೆಯಾಗಿದೆ. ಎನ್ ಡಿ ಆರ್ ಎಫ್, ಅಗ್ನಿಶಾಮಕದಳ ಪೊಲೀಸರ ಹುಡುಕಾಟ ವೇಳೆ ಪತ್ತೆಯಾಗಿದೆ. ಈ ಕುರಿತು ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಗಳ ವಿರುದ್ಧ ಇತ್ತೀಚಿಗೆ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ದರ್ಶನ್ ಅವರ ಕೊಲೆ ಪ್ರಕರಣದ ಕುರಿತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ನನಗೆ ತೊಂದರೆ ಬಂದಾಗ ಮತ್ತೊಬ್ಬರ ಹೆಗಲ ಮೇಲೆ ಗನ್ ಇಡುವ ಬದಲು,ನೇರವಾಗಿ ಮಾತಾಡಿ ಫೇಸ್ ಮಾಡಿದ್ದೇನೆ ಎಂದು ತಿಳಿಸಿದರು. ಕಳೆದ ಕೆಲವು ತಿಂಗಳುಗಳ ಹಿಂದೆ ಮಂಡ್ಯದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ನಟ ದರ್ಶನ್ ಅವರು ಪರೋಕ್ಷವಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ಹಲವು ಪದಗಳನ್ನು ಬಳಕೆ ಮಾಡಿದ್ದರು. ನಿರ್ಮಾಪಕ ಉಮಾಪತಿ ಗೌಡ ಕೂಡ ದರ್ಶನ ವಿರುದ್ಧ ಆಕ್ರೋಶ ಹೊರ ಹಾಕಿದ್ದರು ಆದರೆ ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ ಜೈಲು ಪಾಲಾಗಿರುವ ವಿಚಾರವಾಗಿ ಮಾತನಾಡಿ,ಮಾನವೀಯತೆ ದೃಷ್ಟಿಯಿಂದ ನೋಡುವುದಾದರೆ ಖಂಡಿತ ನಡೆದಿರುವ ಘಟನೆ ದೊಡ್ಡ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ವಿರುದ್ಧ ಈಗಾಗಲೇ ಪೊಲೀಸರು ನ್ಯಾಯಾಲಯಕ್ಕೆ ಸುಮಾರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದೀಗ ಚಾರ್ಜ್ ಶೀಟ್ ನಲ್ಲಿ ರೇಣುಕಸ್ವಾಮಿಯ ಕೊಲೆ ಯಾವ ರೀತಿ ಆಗಿದೆ ಎಂಬುದರ ಕುರಿತು ಸಂಪೂರ್ಣವಾದ ವಿವರ ಇಲ್ಲಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿವರ ಕುರಿತಂತೆ ಜೂನ್ 9ರಂದು ಅಪರಿಚಿತ ದೇಹ ಪತ್ತೆಯಾಗಿರುವ ಕುರಿತು ದೂರು ದಾಖಲಾಗುತ್ತದೆ. ಜೂನ್ 10ರಂದು ಪೊಲೀಸರ ಮುಂದೆ ನಾಲ್ವರು ಶರಣಾಗಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸರ ಮುಂದೆ ನಾಲ್ವರು ಆರೋಪಿಗಳು ಶರಣಾಗಿದ್ದರು. ರಾಘವೇಂದ್ರ ಕಾರ್ತಿಕ್ ಕೇಶವಮೂರ್ತಿ ನಿಖಿಲ್ ನಾಯಕ್ ಪೊಲೀಸರಿಗೆ ಶರಣಾಗಿದ್ದರು. ಹಣಕಾಸಿನ ವಿಷಯಕ್ಕೆ ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಮೃತನ ಹೆಸರು ಬಳಸಿದ ಆಯುಧ, ವಾಹನಗಳ ಹೆಸರಿನಲ್ಲಿ ಗೊಂದಲದ ಹೇಳಿಕೆ ನೀಡಿದ್ದಾರೆ. ಅಲ್ಲದೆ ಪ್ರತ್ಯೇಕ ವಿಚಾರಣೆಯಲ್ಲಿ ಒಂದೊಂದು ರೀತಿಯ ಹೇಳಿಕೆ ನೀಡಿದ್ದರು. ಗೊಂದಲಕಾರಿ ವ್ಯತಿರಿಕ್ತ ಹೇಳಿಕೆ…
ಮಂಗಳೂರು : ನಡು ರಸ್ತೆಯಲ್ಲೇ ಚಲಿಸುತ್ತಿದ್ದ BMW ಕಾರೊಂದು ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಸುರತ್ಕಲ್ ಎನ್ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ. ಹೌದು ಬಿಎಂಡಬ್ಲ್ಯೂ ಕಂಪನಿಯ ಕಾರು ಸುಟ್ಟು ಕರಕಲಾದ ಕಾರು ಎಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು. ಎನ್ಐಟಿಕೆಯ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಬೆಂಕಿ ಅವಘಡದಲ್ಲಿ ಯಾರಿಗೂ ಅಪಾಯವಾಗಿಲ್ಲ. ಕೂಡಲೇ ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರು.
ಮೈಸೂರು : ಬೇಲಿಯೇ ಎದ್ದು ಹೊಲ ಮೆಯ್ದಂತೆ ಎಂಬ ಗಾದೆಯಂತೆ, ಮೈಸೂರಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ದರೋಡೆಕೋರರಿಗೆ ಸಾಥ್ ನೀಡುತ್ತಿದ್ದ ಹೆಡ್ಕಾನ್ಸ್ಟೇಬಲ್ ನನ್ನು ಇದೀಗ ಬಂಧಿಸಲಾದೆ. ಹೌದು ಮನೆಗಳ್ಳರಿಗೆ ಸಾಥ್ ನೀಡಿದ್ದ ಮೈಸೂರಿನ ಅಶೋಕಪುರಂ ಠಾಣೆ ಹೆಡ್ಕಾನ್ಸ್ಟೇಬಲ್ ರಾಜು ಎಂಬಾತನನ್ನು ಬಂಧಿಸಲಾಗಿದೆ. ಕದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಮೈಸೂರಿನ ಮಂಡಿ ಠಾಣೆ ಪೊಲೀಸರು ಹೆಡ್ಕಾನ್ಸ್ಟೇಬಲ್ ರಾಜು ಸೇರಿದಂತೆ ಕಳ್ಳರಾದ ನಜರುಲ್ಲಾ ಬಾಬು ಹಾಗೂ ಅಲೀಂ ಎಂಬ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಮೈಸೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳವು ಮಾಡಿದ್ದ ನಜರುಲ್ಲಾ ಬಾಬು, ಅಲೀಂ. ಸುಮಾರು 400 ಗ್ರಾಂ ಚಿನ್ನಾಭರಣ ಕದ್ದಿದ್ದರು. ಜೊತೆಗೆ ಕದ್ದಿದ್ದ 400 ಗ್ರಾಂ ಚಿನ್ನದಲ್ಲಿ 300 ಗ್ರಾಂನ್ನು ಹೆಚ್ಸಿ ರಾಜುಗೆ ನೀಡಿದ್ದರು.ಉಳಿದ 100 ಗ್ರಾಂ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದರು. ಬಳಿಕ ನಜರುಲ್ಲಾ ಬಾಬು, ಅಲೀಂನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.ವಿಚಾರಣೆ ವೇಳೆ ಹೆಡ್ಕಾನ್ಸ್ಟೇಬಲ್ ರಾಜು ಬಗ್ಗೆ ಕಳ್ಳರು ಬಾಯ್ಬಿಟ್ಟಿದ್ದು, ಈ ಹಿನ್ನಲೆ…
ಹುಬ್ಬಳ್ಳಿ : ಕಳೆದ ಜುಲೈ 15 ರಂದು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ವ್ಯಾಪ್ತಿಯ ಶ್ರೀ ಭುವನೇಶ್ವರಿ ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನ ಆಗಿತ್ತು. ಸಹಜವಾಗಿ ಹುಬ್ಬಳ್ಳಿಯ ಜನತೆ ಈ ಒಂದು ಕಳ್ಳತನದಿಂದ ಭಯ ಭೀತರಾಗಿದ್ದರು.ಇದೀಗ ಕೇಶ್ವಾಪುರ ಪೊಲೀಸರು ಕಳ್ಳತನ ನಡೆದ ದಿನದಿಂದ 45 ದಿನಗಳ ಒಳಗೆ ಪ್ರಕರಣ ಭೇದಿಸಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದು, ಜುಲೈ 15 ರಂದು ಶ್ರೀ ಭುವನೇಶ್ವರಿ ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನ ಆಗಿತ್ತು. ಇದರಿಂದ ಹುಬ್ಬಳ್ಳಿ ಮಂದಿ ಕಂಗಾಲಾಗಿದ್ದರು. ಇದೀಗ ಪೊಲೀಸರು ಕಳ್ಳತನ ಮಾಡಿ 45 ದಿನಗಳೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಖದೀಮರಿಂದ ಬರೋಬ್ಬರಿ 77 ಲಕ್ಷ ಮೌಲ್ಯದ 780 ಗ್ರಾಂ ಚಿನ್ನ, 24 ಕೆಜಿ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ಗ್ಯಾಸ್ ಕಟ್ಟರ್ನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫರಾನ್ ಶೇಖ್, ಮುಖೇಶ್, ಫಾತೀಮಾ ಶೇಖ್, ಅಫ್ತಾಬ್ ಅಹ್ಮದ್ ಶೇಖ್ ಹಾಗೂ ತಲತ್ ಶೇಖ್ ಎಂಬ ಐವರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ.…
ಬೆಂಗಳೂರು : ಕೇರಳದ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಹೊರ ತಂದ ಹೇಮಾ ಸಮಿತಿ ವರದಿ ಸದ್ದು ಮಾಡುತ್ತಿದ್ದು ಇದೀಗ ಅದೇ ಮಾದರಿಯ ಸಮಿತಿಯನ್ನು ಕರ್ನಾಟಕದಲ್ಲಿ ಕೂಡ ಸ್ಥಾಪನೆ ಮಾಡಬೇಕು ಎಂದು ಚಿತ್ರರಂಗದ ನಟ ನಟಿಯರು ಒತ್ತಾಯಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರತಿಕ್ರಿಯೆ ನೀಡಿದ್ದು, ಕೇರಳದ ಹೇಮಾ ಮಾದರಿಯಲ್ಲಿ ಕರ್ನಾಟಕದಲ್ಲೂ ಸಮಿತಿ ರಚನೆ ಮಾಡಿ ಎಂದು, ಈಗಾಗಲೇ ನನ್ನನ್ನು ಚಿತ್ರರಂಗದ ಹಲವು ನಟ ನಟಿಯರು ಭೇಟಿಯಾಗಿ ಮನವಿ ಮಾಡಿದ್ದಾರೆ. ಈ ಕುರಿತಂತೆ ನಾವು ಸಮಿತಿ ರಚನೆ ಮಾಡುವುದರ ಬಗ್ಗೆ ಪರಿಶೀಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದರ ಮಧ್ಯ ಮಾಧ್ಯಮದ ಸಂದರ್ಶನ ವೇಳೆ ಶೂಟಿಂಗ್ ವೇಳೆ ತಮಗೆ ಆದಂತ ಅನುಭವದ ಕುರಿತು ನಟಿ ರಾಧಿಕಾ ಕುಮಾರಸ್ವಾಮಿ ಹಂಚಿಕೊಂಡಿದ್ದು, ನಾನು ಶೂಟಿಂಗ್ ನಲ್ಲಿದ್ದಾಗ ಸ್ಟಾರ್ಟಿಂಗ್ಸ್ ಹರಿದು ಹೋಗಿತ್ತು. ಸ್ಟಾಕಿಂಗ್ಸ್ ಹರಿದು ಹೋಗಿದೆ ಬೇರೆ ಕೊಡಿ ಅಂತ ಕೇಳಿದ್ದೆ. ಆಗ…
ಬೆಂಗಳೂರು : ನಾನು ಶಾಸಕನಾಗಿ ಮೊದಲು ಹೋದಾಗ ಒಂದು ವಿಷಯ ಗೊತ್ತಾಯ್ತು. ಶಿಕ್ಷಣ ಇಲ್ಲದೆ ರಾಜಕಾರಣಿ ಆಗಬಾರದು ಎಂಬುದು. ಆಗ ದೊಡ್ಡ ರಾಜಕಾರಣಿಗಳು ಇದ್ರು. ರಾಮಕೃಷ್ಣ ಹೆಗಡೆಯಂತಹ ರಾಜಕಾರಣಿ ಇದ್ರು. ಆಗಲೇ ಶಿಕ್ಷಣದ ಮಹತ್ವ ಅರಿವಿಗೆ ಬಂತು. ನಾನು ತಡವಾಗಿಯಾದ್ರೂ ಗ್ರಾಜ್ಯುಯೆಟ್ ಮಾಡಿಕೊಂಡೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆಯುತ್ತಿರುವ ಶಿಕ್ಷಕರ ದಿನಾಚರಣೆ ಹಾಗೂ ದಿ.ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಂದೆ, ತಾಯಿ ಮಾತನ್ನೂ ಕೇಳದ ಮಕ್ಕಳು ಶಿಕ್ಷಕರು ಹೇಳಿಕೊಟ್ಟಿದನ್ನ ಕಲಿಯುತ್ತಾರೆ. ನಾನು ಸರಿಯಾದ ಶಿಕ್ಷಣ ಇಲ್ಲದ ವಿದ್ಯಾರ್ಥಿ. ಶಿಕ್ಷಣದ ಬೆಲೆ ಏನು ಅಂತಾ ನನಗೆ ಅರಿವಿದೆ. ತುಂಬಾ ತಡವಾಗಿ ಗ್ಯಾಜ್ಯುಯೇಟ್ ಪಡೆದಿದ್ದೇನೆ ಎಂದರು. ಅಕ್ಷರ ಕಲಿಸುವ ಶಿಕ್ಷಕರು ಸೈನಿಕರು. ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಕಳುಹಿಸುತ್ತಾರೆ. ನಾವ್ಯಾರೂ ವಿದ್ಯೆ ಕಲಿಸಿದ ಗುರುಗಳನ್ನು ಮರೆಯಲು ಸಾಧ್ಯವಿಲ್ಲ. ರಾಜಕಾರಣಿಗಳನ್ನು ಜನರು ಬೇಗ…