Subscribe to Updates
Get the latest creative news from FooBar about art, design and business.
Author: kannadanewsnow05
ಉತ್ತರಕನ್ನಡ : ಕರಾವಳಿ ಭಾಗದಲ್ಲಿ ಅತ್ಯಂತ ದೊಡ್ಡ ಮಟ್ಟದಲ್ಲಿ ಪ್ರವಾಸೋದ್ಯಮ ನೀತಿಯನ್ನು ರೂಪಿಸಿ ಈ ಒಂದು ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಸೂಕ್ತವಾದಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಮುರುಡೇಶ್ವರದ ಆರ್.ಎನ್.ಎಸ್ ಗಾಲ್ಫ್ ಕ್ಲಬ್ ರೆಸಾರ್ಟ್ನಲ್ಲಿ ಆಯೋಜಿಸಿದ್ದ ವಿಶ್ವ ಮೀನುಗಾರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಕರಾವಳಿಯಲ್ಲಿ ಒಂದು ಪೈವ್ ಸ್ಟಾರ್ ಹೊಟೇಲ್ಗಳಿಲ್ಲ. ಆದರೆ ಇದೀಗ ನಮಗೆ ಅವಕಾಶ ಸಿಕ್ಕಿದ್ದು, ನಾವು ಕರಾವಳಿಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ ಎಂದರು. ಈ ಭಾಗದಲ್ಲಿ ಬದುಕಿಗಾಗಿ ಹಲವರು ಹೊರಗಡೆ ಹೋಗುತ್ತಿದ್ದಾರೆ. ಕರಾವಳಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ಉತ್ತೇಜಿಸಲು ಮೂರು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದು, ಸದ್ಯದಲ್ಲಿಯೇ ಹೊಸ ನೀತಿ ಬರಲಿದೆ.ಬೆಲೆ ಏರಿಕೆಯಿಂದ ತತ್ತರಿಸಿದ ಕಾರಣ ಗ್ಯಾರಂಟಿ ನೀಡಿದ್ದೆವು. ಆದರೆ ಬಿಜೆಪಿಯವರಿಗೂ ಕೂಡ ಬೆಲೆ ಏರಿಕೆ ಅರ್ಥ ಆಗಿಲ್ಲ. ಇದೀಗ ಮಹಾರಾಷ್ಟ್ರ ಸೇರಿದಂತೆ ಹಲವೆಡೆ ಗ್ಯಾರಂಟಿ ಹಣ ಘೋಷಣೆ ಮಾಡಿದೆ ಎಂದರು. ಮೀನುಗಾರರ ಬದುಕನ್ನು ಹಸನಾಗಿಸಲು ಸರ್ಕಾರ ಬದ್ಧವಾಗಿದೆ. ಮೀನುಗಾರರು ಮೃತಪಟ್ಟರೆ ಇದೀಗ 8…
ದಕ್ಷಿಣಕನ್ನಡ : ಮಾರುಕಟ್ಟೆಯಲ್ಲಿ ಮೂವರು ಪುಂಡರು ಯುವಕನ ಮೇಲೆ ಪುಂಡಾಟ ಮೆರೆದಿದ್ದು, ಸ್ಟೈಲಿಶ್ ಬಟ್ಟೆ ಧರಿಸಿ ಮಾರುಕಟ್ಟೆಗೆ ಬಂದಿದ್ದ ಯುವಕನನ್ನು ಹಿಡಿದು ದಬ್ಬಳದಿಂದ ಆತನ ಪ್ಯಾಂಟ್ ಹೊಲಿಗೆ ಹಾಕಿದ್ದಾರೆ, ಇದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಹೌದು ಮಾರುಕಟ್ಟೆಯಲ್ಲಿ ಹುಡುಗರು ಪುಂಡಾಟಿಕೆ ಮೆರೆದಿದ್ದು, ಯುವಕನ ಪ್ಯಾಂಟಿಗೆ ದಬ್ಬಳದಿಂದ (ಡಬ್ಬಣ) ಹೋಲಿದಿದ್ದಾರೆ. ಇದರಿಂದ ನೊಂದ ಯುವಕ ಆತ್ಮಹತ್ಯೆಗೆ ಯತ್ನಿಸಿ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಸ್ಟೈಲಿಶ್ ಪ್ಯಾಂಟ್ ಧರಿಸಿ ಯುವಕ ಮಾರುಕಟ್ಟೆಗೆ ಬಂದಿದ್ದ. ಮೂವರು ಯುವಕರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿತ್ತು. ಈ ವೇಳೆ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ, ಪ್ಯಾಂಟನ್ನು ದಬ್ಬಳದಿಂದ ಹೊಲೆದು ವಿಡಿಯೋ ಮಾಡಿದ್ದರು. ಪಣಕಜೆ ನಿವಾಸಿ ಮೊಹಮ್ಮದ್ ಆಯುಬ್ ಎಂಬ ಯುವಕನ ಮೇಲೆ ಶಬ್ಬೀರ್, ಅನಿಶ್ ಪಣಕಜ ಹಾಗೂ ಲಾಯಿಲರಿಂದ ಈ ಒಂದು ಕೃತ್ಯ ನಡೆದಿದೆ.…
ನವದೆಹಲಿ : ಇತ್ತೀಚಿಗೆ ಸೈಬರ್ ಮುಂಚೆನೇ ಡಿಜಿಟಲ್ ಬಂಧನ ಸೇರಿದಂತೆ ಹಲವು ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇವೆ. ಇಷ್ಟು ದಿನ ವೆಡ್ಡಿಂಗ್ ಸೈಬರ್ ಕ್ರೈಂ, ಮ್ಯಾಟ್ರಿಮೋನಿಯಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಪ್ರಕರಣಗಳನ್ನು ನೋಡಿದ್ದೇವೆ ಕೇಳಿದ್ದೇವೆ. ವ್ಯಕ್ತಿ ಸತ್ತ ಮೇಲೂ ಅಂತ್ಯಸಂಸ್ಕಾರದಲ್ಲಿ ಸೈಬರ್ ಕ್ರೈಂ ವಂಚಕರು ಮೋಸ ಎಸಗುವ ಹೊಸ ಹಾದಿಯನ್ನು ಕಂಡುಹಿಡಿದುಕೊಂಡಿದ್ದಾರೆ. ಹೌದು ಇಂದಿನ ವೇಗದ ಜಗತ್ತಿನಲ್ಲಿ ಜನರಿಗೆ ಊಟ ತಿಂಡಿ ಮಾಡಲು ಸಹ ಸಮಯವಿಲ್ಲ. ಇನ್ನು ಮನೆಯ ಪ್ರೀತಿಪಾತ್ರರು ಸತ್ತಾಗ ಅವರ ಅಂತ್ಯಕ್ರಿಯೆಗೆ ಎಲ್ಲಿ ಟೈಮ್ ಇರುತ್ತೆ ಹೇಳಿ? ಹಾಗಾಗಿ ಅಂತ್ಯ ಸಂಸ್ಕಾರಕ್ಕೂ ಕೂಡ ಇದೀಗ ಕೆಲವು ಏಜೆನ್ಸಿಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳನ್ನೇ ದುರುಪಯೋಗಪಡಿಸಿಕೊಂಡು ಕೆಲವು ಸೈಬರ್ ವಂಚಕರು ಅಂತ್ಯಸಂಸ್ಕಾರ ಹೆಸರಿನಲ್ಲಿ ವಂಚನೆ ಎಸಗುವ ಹೊಸ ದಾರಿಯನ್ನು ಕಂಡುಕೊಂಡಿವೆ. ಈ ರೀತಿ ಅಂತ್ಯಸಂಸ್ಕಾರ ನಡೆಸುವ ಹಲವು ಎಜೆನ್ಸಿಗಳ ಜಾಹೀರಾತು, ನಂಬರ್ ಸುಲಭವಾಗಿ ಸಿಗುತ್ತದೆ. ಹೀಗೆ ನೀವು ಆಪ್ತರನ್ನು ಕಳೆದುಕೊಂಡ ನೋವಿನಲ್ಲಿ ಎಜೆನ್ಸಿಗೆ ಕರೆ ಮಾಡಿ ಅಂತ್ಯಸಂಸ್ಕಾರಕ್ಕೆ ನಡೆಸಬೇಕು ಎಂದು ಕೇಳಿಕೊಂಡರೆ…
ಬೆಂಗಳೂರು : ದಾರಿ ಬಿಡುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಕಿರಿಕ್ ಆಗಿದ್ದು, ವಿದ್ಯಾರ್ಥಿಯೋರ್ವನಿಗೆ ಕುತ್ತಿಗೆಗೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರೇಸಿಡೆನ್ಸಿ ವಿಶ್ವವಿದ್ಯಾಲಯದ ಬಳಿ ಈ ಒಂದು ಘಟನೆ ನಡೆದಿದೆ. ದಾರಿ ಬಿಡದಿದ್ದಕ್ಕೆ ಗುರಾಯಿಸಿದ ಅಂತ ಹೇಳಿ ಲಿಖಿತ್ ಗೌಡ ಎಂಬ ವಿದ್ಯಾರ್ಥಿಯ ಮೇಲೆ ಜಯಂತ್ ಮತ್ತು ಮಾದೇಶ ಎನ್ನುವ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ. ವಿಶ್ವವಿದ್ಯಾಲಯ ಹೊರಗಿನ ಬೈಕ್ ಪಾರ್ಕಿಂಗ್ ಬಳಿ ಜಯಂತ ತಂಡ ದಾಳಿ ಮಾಡಿದೆ ಎನ್ನಲಾಗಿದೆ. ಚಾಕುವಿನಿಂದ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಲಿಖಿತ್ ಕುತ್ತಿಗೆಗೆ ಗಂಭೀರವಾದ ಗಾಯಗಳಾಗಿವೆ. ಜಗಳ ಬಿಡಿಸಿ ಗಾಯಾಳುಗಳನ್ನು ತಕ್ಷಣ ಸಹಪಾಠಿಗಳು ಆಸ್ಪತ್ರೆಗೆ ಸೇರಿಸಿದ್ದಾರೆ. ರಾಜನಕುಂಟೆ ಠಾಣೆಯಲ್ಲಿ ಗಾಯಾಳು ಲಿಖಿತ್ ಗೌಡ ದೂರು ದಾಖಲಿಸಿದ್ದಾನೆ ಎಂದು ಹೇಳಲಾಗುತ್ತಿದೆ.
ತುಮಕೂರು : ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ ದಲಿತ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ್ದ 21 ಆರೋಪಿಗಳಿಗೆ ಇದೀಗ ಜೀವಾವಧಿ ಶಿಕ್ಷೆ ಪ್ರಕಟಿಸಿ ತುಮಕೂರಿನ ಮೂರನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಿಂದ ಈ ಒಂದು ತೀರ್ಪು ಪ್ರಕಟಿಸಿ ಆದೇಶ ಹೊರಡಿಸಿದೆ. ಗೋಪಾಲಪುರ ಗ್ರಾಮದ 21 ಅಪರಾಧಿಗಳಿಗೆ ಇದೀಗ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ. ತುಮಕೂರಿನ 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಲಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ. ಜೀವಾವಧಿ ಶಿಕ್ಷೆ ಹಾಗೂ ಅಪರಾಧಿಗಳಿಗೆ ತಲಾ 13, 500 ದಂಡ ವಿಧಿಸಿ ಒಟ್ಟು 2,83,500 ತಂಡ ವಿಧಿಸಿದೆ. ಪ್ರಕರಣ ಹಿನ್ನೆಲೆ? 2010 ಜೂನ್ 28 ರಂದು ಚಿಕ್ಕನಾಯಕನಹಳ್ಳಿ ತಾಲೂಕಿನ…
ನವದೆಹಲಿ : ಗ್ಯಾರಂಟಿ ಯೋಜನೆ ಪರೀಕ್ಷೆ ಬಗ್ಗೆ ಪದೇಪದೇ ಪ್ರತಾಪ್ ಇಸಿರುವ ವಿಚಾರವಾಗಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುಯಾವುದೇ ಕಾರಣಕ್ಕೂ ‘ಗ್ಯಾರಂಟಿ’ ಯೋಜನೆ ನಿಲ್ಲುವುದಿಲ್ಲ, ಪರಿಷ್ಕರಣೆಯು ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆವುದಿಲ್ಲ. ಅಲ್ಲದೇ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಕೂಡ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಇಂದು ದೆಹಲಿಯ ಅಶೋಕ ಹೋಟೆಲ್ ನಲ್ಲಿ ನಂದಿನಿ ಉತ್ಪನ್ನಗಳ ಬಿಡುಗಡೆ ಹಾಗೂ ಮಾರಾಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ಗ್ಯಾರೆಂಟಿ ಯೋಜನೆಗೆ ಬಿಜೆಪಿ ಅವರ ಬಳಿ ದುಡ್ಡು ಕೇಳಿದ್ವಾ? ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಆಹಾರ ಭದ್ರತಾ ಕಾಯ್ದೆ ರಾಜ್ಯಸಭೆಯಲ್ಲಿ ಮಂಡಿಸಿದಾಗ ವಿರೋಧಿಸಿದ್ದರು. ಮುರಳಿ ಮನೋಹರ ಜೋಶಿ ವೋಟ್ ಸೆಕ್ಯೂರಿಟಿ ಆಕ್ಟ್ ಎಂದಿದ್ದರು. ನಾನು ಈ ಹಿಂದೆ ಸಿಎಂ ಆಗಿದ್ದಾಗ 7 ಕೆಜಿ ಅಕ್ಕಿಯನ್ನು ಕೊಡುತ್ತಿದ್ದೆ. ಬಿಎಸ್ ಯಡಿಯೂರಪ್ಪ ಸಿಎಂ ಆದ ಬಳಿಕ 7 ಕೆಜಿಯಿಂದ 5 ಕೆಜಿಗೆ ಇಳಿಸಿದರು. ಅಂದಿನ ಬಿ ಎಸ್ ಯಡಿಯೂರಪ್ಪ ಸಂಪುಟದಲ್ಲಿ…
ಮೈಸೂರು : ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗಾಗಿ ರೂ. 40,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಲ್ ಕಲೆಕ್ಟರ್ ಒಬ್ಬ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೌದು 40 ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗೆ 2 ಲಕ್ಷ ರೂ. ಲಂಚ ಕೇಳಿದ್ದ ದಿನೇಶ್, ಮುಂಗಡವಾಗಿ 40 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಬಲೆಗೆ ಬಿದಿದ್ದಾರೆ. ಎಸ್ಪಿ ಟಿಜೆ ಉದೇಶ್ ಮಾರ್ಗದರ್ಶನದಲ್ಲಿ ಈ ಒಂದು ಕಾರ್ಯಾಚರಣೆ ಮಾಡಿದ್ದು, ಇನ್ಸಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ಟ್ರ್ಯಾಪ್ ಮಾಡಲಾಗಿದೆ. ದಿನೇಶ್ಗೆ ಸಹಕಾರ ನೀಡುತ್ತಿದ್ದ ಮಧ್ಯವರ್ತಿ ಚಂದನ್ ಕೂಡ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು : ತುಪ್ಪದ ವ್ಯಾಪಾರಿಯ ಮೇಲೆ ಮಚ್ಚಿನಿಂದ ದಾಳಿ ಮಾಡಿದ ದುಷ್ಕರ್ಮಿಗಳು ತಲೆಗೆ ಮೆಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಳ್ಳೂರಿನಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಮಧುರೈ ಮೂಲದ ಅಲಗರಾಜ್(31) ಎಂದು ಗುರುತಿಸಲಾಗಿದೆ. ಶರಾವತಿ ಬಾರ್ ಬಳಿ ಅರೆನಗ್ನ ಸ್ಥಿತಿಯಲ್ಲಿ ಅಲಗರಾಜ್ ಶವ ಪತ್ತೆಯಾಗಿದೆ. ಇನ್ನು ಘಟನಾ ಸ್ಥಳದಲ್ಲಿ TVS ಎಕ್ಸೆಲ್ ಬೈಕ್, ಹಾಗೂ ತುಪ್ಪದ ಟಿನ್ ಪತ್ತೆಯಾಗಿದ್ದು, ಚಿಂದಿ ಆಯುವವರು ಮೃತದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರು, ಶ್ವಾನದಳ, ಎಫ್ಎಸ್ಎಲ್ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಳೇ ವೈಷಮ್ಯದ ಹಿನ್ನೆಲೆ ತಲೆಗೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಚಿಕ್ಕಬಳ್ಳಾಪುರ : ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು, ಮಹಿಳೆಯೊಬ್ಬಳು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಮ್ಮನಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ರೂಪಾ (29) ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ರೂಪ ಸುರೇಶ್ ಎನ್ನುವ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಮದುವೆ ವೇಳೆ ರೂಪಾ ಕುಟುಂಬಸ್ಥರು 100 ಗ್ರಾಂ ಒಡವೆ ಸಹಿತ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮದುವೆ ಸಹ ಮಾಡಿಕೊಟ್ಟಿದ್ದರು. ಸುರೇಶ್ ಕೂಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಆದರೆ ಸುರೇಶ್ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ. ಆ ಹಣವನ್ನು ತೆಗೆದುಕೊಂಡು ಬಾ ಎಂದು ಆಕೆಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸಾವಿಗೂ ಮುನ್ನ ರೂಪಾ ಡೆತ್ ನೋಟ್ ಬರೆದಿಟ್ಟು, ಅದರಲ್ಲಿ ನನ್ನ ಸಾವಿಗೆ ಗಂಡ ಸುರೇಶ್, ಮಾವ ನರಸಿಂಹಮೂರ್ತಿ ಅತ್ತೆ ದೇವಮ್ಮ ಕಾರಣ…
BIG NEWS : ರಾಜ್ಯ ಬಿಜೆಪಿಯಲ್ಲಿ ಮುಂದುವರೆದ ‘ಬಣ’ ಬಡಿದಾಟ : ಪ್ರತ್ಯೇಕ ಸಭೆ ನಡೆಸಿ ಬಿವೈವಿಗೆ ಸೆಡ್ಡು ಹೊಡೆದ ನಾಯಕರು
ಬೆಂಗಳೂರು : ಬಿಜೆಪಿಯಲ್ಲಿ ಬಣ ರಾಜಕೀಯ ಇದೀಗ ಮತ್ತೆ ಮುಂದುವರೆದಿದ್ದು, ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಅತೃಪ್ತ ನಾಯಕರು ಭೇಟಿ ನೀಡಿ ಸಭೆ ನಡೆಸಿದ್ದಾರೆ. ಅರವಿಂದ್ ಲಿಂಬಾವಳಿ, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಸೇರಿದಂತೆ ಅತೃಪ್ತ ಬಣದ ನಾಯಕರು ಭೇಟಿ ನೀಡಿ, ವಕ್ಫ್ ಹೋರಾಟದ ಕುರಿತು ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸುಮಾರು 20 ನಿಮಿಷಗಳ ಕಾಲ ಅತೃಪ್ತ ನಾಯಕರು ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರತ್ಯೇಕವಾಗಿ ಸಭೆ ನಡೆಸಿದ್ದಾರೆ ಎನ್ನಲಾಗಿದೆ ಈ ಮೂಲಕ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಈ ನಾಯಕರು ಸೆಡ್ಡು ಹೊಡೆದಿದ್ದಾರೆ. ಭೇಟಿ ಬಳಿ ಒಂದೇ ಕಾರಿನಲ್ಲಿ ನಾಯಕರು ತೆರಳಿದ್ದಾರೆ ಹೀಗಾಗಿ ಅತೃಪ್ತ ನಾಯಕರು ಸಭೆ ಇದೀಗ ತೀವ್ರ ಕುತೂಹಲ ಮೂಡಿಸಿದೆ ಎಂದು ಹೇಳಲಾಗುತ್ತಿದೆ.














