Author: kannadanewsnow05

ಬೆಂಗಳೂರು : ರಾಜ್ಯ ಸರ್ಕಾರದ ಒಂದೇ ಒಂದು ಆದೇಶಕ್ಕೆ 22 ಕೋಟಿ ರೂಪಾಯಿ ವಾಪಸ್ ವರ್ಷ ಗಟ್ಟಲ್ಲಿ ಬಾಕಿ ಇದ್ದ 22 ಕೋಟಿ ಹಣ ಸರ್ಕಾರದ ಇದೀಗ ಜಮಯಾಗಿದೆ. SBI ಬ್ಯಾಂಕ್ ನಿಂದ 9.67 ಕೋಟಿ ಸರ್ಕಾರದ ಖಜಾನೆಗೆ ಜಮೆಯಾಗಿದೆ ಹಾಗೂ ಪಿಎನ್‌ಬಿ ಇಂದ ಒಂದು ವರ್ಷದ ಬಡ್ಡಿ ಸಮೇತ 13.9 ಕೋಟಿ ಹಣ ಜಮೆ ಆಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸರ್ಕಾರಕ್ಕೆ ಬರಬೇಕಿದ್ದ ಹಣ ಇದೀಗ ಪಾವತಿಯಾಗಿದೆ. ಕಳ್ಳಾಟ ಆಡುತ್ತಿದ್ದ SBI ಮತ್ತು PNB ಎರಡು ಬ್ಯಾಂಕ್ಗಳಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿತ್ತು. ಅಗಸ್ಟ್ ನಲ್ಲಿ ಎಸ್ ಬಿ ಐ ಹಾಗೂ ಪಿ ಎನ್ ಬಿ ವಿರುದ್ಧ ನಿರ್ಧಾರ ಕೈಗೊಂಡಿತ್ತು. ಎರಡು ಬ್ಯಾಂಗಳಲ್ಲಿದ್ದ ಸರ್ಕಾರದ ಎಲ್ಲಾ ಖಾತೆ ಕ್ಲೋಸ್ ಮಾಡಲು ನಿರ್ಧರಿಸಿತ್ತು. ಸರ್ಕಾರದ ನಿರ್ಧಾರಕ್ಕೆ ಕಂಗೆಟ್ಟು ಇದೀಗ ಬ್ಯಾಂಕುಗಳು ಹಣ ವಾಪಸ್ ನೀಡಿವೆ ಎಂದು ತಿಳಿದುಬಂದಿದೆ. ಈ ಹಿಂದೆ ಮಾಡಿದ್ದ ಎರಡು ಪ್ರತ್ಯೇಕ ನಿಶ್ಚಿತ ಠೇವಣಿಗಳನ್ನು ಹಿಂದಿರುಗಿಸದಿರುವ ಹಿನ್ನೆಲೆಯಲ್ಲಿ ಭಾರತೀಯ…

Read More

ಹಾವೇರಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗ ಸಂಕಷ್ಟ ಎದುರಾಗಿದ್ದು, ಇದರ ಮಧ್ಯ, ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಸಿಎಂ ಕುರ್ಚಿಯಲ್ಲಿ ಸದ್ಯ ಟಗರು ಕುಳಿತಿದೆ, ಅದನ್ನು ಕೆಳಗಿಳಿಸೋದು ಬಹಳ ಕಷ್ಟ ಎಂದು ತಿಳಿಸಿದ್ದಾರೆ. ಹಾವೇರಿಯಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೂ ಸಿಎಂ ಆಗುವ ಆಸೆ ಇದೆ ಎಂಬ ಆರ್.ವಿ ದೇಶಪಾಂಡೆ ಹೇಳಿಕೆ ವಿಚಾರವಾಗಿ ಜಮೀರ್ ಟಾಂಗ್ ನೀಡಿದ್ದು, ಸಿಎಂ ಆಗುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಸದ್ಯ ಕುರ್ಚಿ ಕಾಲಿ ಇಲ್ಲ. ಸಿಎಂ ಕುರ್ಚಿಯಲ್ಲಿ ನಮ್ಮ ಟಗರು ಕುಳಿತುಕೊಂಡಿದೆ. ಕುರ್ಚಿಯಿಂದ ಟಗರು ಇಳಿಸುವುದು ಬಹಳ ಕಷ್ಟ. ಟಗರು ಕೊಂಬು ಮುರಿಯಲು ಸಾಧ್ಯವಿಲ್ಲ. ಟಗರು ಟಗರೆ ಎಂದು ಹಾವೇರಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು.

Read More

ದಕ್ಷಿಣಕನ್ನಡ : 2014ರಲ್ಲಿ ಗೋದ್ರಾ ಗಲಭೆ ಮಾಡಿದವರೇ ಭಾರತದ ಪ್ರಧಾನಿ ಆದರು. ಆಗ ನಾನು ರಾಯಚೂರಿನಲ್ಲಿ ಜಿಲ್ಲಾಧಿಕಾರಿ ಆಗಿದ್ದೆ. ನಂತರ, 2019ರ ಚುನಾವಣೆಯಲ್ಲಿ ನಾನು ದಕ್ಷಿಣ ಕನ್ನಡ ಡಿಸಿಯಾಗಿದ್ದೆ. ಆಗ ಲೋಕಸಭಾ ಚುನಾವಣೆ ನಡೆದು ಮತ್ತೆ ಬಿಜೆಪಿಗೆ ಹೆಚ್ಚು ಮತಗಳು ಬಿದ್ದು, ಅವರೇ ಪ್ರಧಾನಿಯಾದರು ಎಂದು ತಮಿಳುನಾಡು ಸಂಸದ ಸಸಿಕಾಂತ್ ಸೇಂಥಿಲ್ ತಿಳಿಸಿದರು. ಇಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಮಂಗಳವಾರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಗುಟ್ಟನ್ನು ಇದೀಗ ಹಂಚಿಕೊಂಡಿದ್ದಾರೆ. ಹೆಂಡತಿಯ ಒಂದೇ ಒಂದು ಮಾತಿಗೆ ಸಸಿಕಾಂತ್ ಸೆಂಥಿಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮೋದಿ ಪ್ರಧಾನಿಯಾದ ಬಳಿಕ ಕಾಶ್ಮೀರದ ಆರ್ಟಿಕಲ್ 370 ತೆಗೆದು ಹಾಕಿದರು. ಅದರ ಜೊತೆಗೆ ಇಡೀ ಕಾಶ್ಮೀರದಲ್ಲಿ ಆರ್ಮಿ ಹಾಕಿ ಗೃಹಬಂಧನ ಮಾಡಿದ್ದರು. ಆಗ ನಾನು‌ ಇವತ್ತು ಕಾಶ್ಮೀರಕ್ಕೆ ಆದ ಪರಿಸ್ಥಿತಿ ನಾಳೆ ಮಂಗಳೂರಿಗೂ ಆಗಬಹುದು ಅಂದುಕೊಂಡೆ. ಇದೇ ಹೊತ್ತಲ್ಲಿ ನನ್ನ ಪತ್ನಿ ಮಂಗಳೂರಿಗೆ ಬಂದಳು. ನಾವು…

Read More

ಬೆಂಗಳೂರು : ಬೈಕ್ ಮೇಲೆ ಮೂವರು ಕುಳಿತುಕೊಂಡು ತ್ರಿಬಲ್ ರೈಡ್ ಮಾಡುವಾಗ ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲಿದ್ದ ಮೂವರು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಮಧ್ಯ ಕುಳಿತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಬಿಜಿಎಸ್ ಮೇಲ್ಸೇತುವೆಯ ಜಾಮೀಯ ಮಸೀದಿ ಎದುರು ನಡೆದಿದೆ. ಮೃತನನ್ನು ಜೆ.ಜೆ.ನಗರದ ರಾಯಪುರ ನಿವಾಸಿ ಮೊಹಮ್ಮದ್ ನೌಹಿದು‌ರ್ ರೆಹಮಾನ್(19) ಎಂದು ತಿಳಿದುಬಂದಿದೆ. ಸವಾರ ಮೊಹಮ್ಮದ್ ಶೋಯೆಬ್ ಉಲ್ಲಾಖಾನ್ ಮತ್ತು ಹಿಂಬದಿ ಸವಾರ ಅಮೀರ್ ಫಸಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂವರು ಯುವಕರು ಜೆ.ಜೆ.ನಗರದ ರಾಯಪುರ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.ಆಗಸ್ಟ್ 31 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಿ.ಟಿ.ಮಾರ್ಕೆಟ್ ಕಡೆಯಿಂದ ಜೆ. ಜೆ.ನಗರದ ಕಡೆಗೆ ಬೈಕ್‌ನಲ್ಲಿ ತ್ರಿಪಲ್ ರೈಡಿಂಗ್ ಹೊರಟ್ಟಿದ್ದರು. ಮಾರ್ಗದ ಬಿಜಿಎಸ್ ಮೇಲೇತುವೆಯಲ್ಲಿ ಬರುವಾಗ, ಬೈಕ್ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಆಟೋರಿಕ್ಷಾಗೆ ಡಿಕ್ಕಿಯಾದ ಪರಿಣಾಮ ಮೂವರು ಅತಿವೇಗದ ಚಾಲನೆ ತ್ರಿಪಲ್ ರೈಡಿಂಗ್ ವೇಳೆ ಮೊಹಮ್ಮದ್ ಶೋಯೆಬ್…

Read More

ಹುಬ್ಬಳ್ಳಿ : ಕಳೆದ ಕೆಲವು ದಿನಗಳ ಹಿಂದೆ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅವರು ಬಿಜೆಪಿ ಅವರು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿ ಖರೀದಿಸುತ್ತಿದ್ದಾರೆ ಎಂದು ಸ್ಪೋಟಕ ವಾದಂತಹ ಆರೋಪ ಮಾಡಿದ್ದರು. ಇದಾದ ಬಳಿಕ ಇದೀಗ ಸಚಿವ ಎನ್.ಎಸ್ ಬೋಸರಾಜ್ ಅವರು, ನಮ್ಮ ಪಕ್ಷದ 9 ಜನರನ್ನು ಸಂಪರ್ಕಿಸಿದ್ದು, ಈ ಮೂಲಕ ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಂಪರ್ಕಿಸಿದ 24 ಗಂಟೆಯಲ್ಲಿ ನನಗೆ ಮಾಹಿತಿ ಬಂತು. ಉತ್ತರ ಕರ್ನಾಟಕದವರು ಸೇರಿ ಕೆಲವರನ್ನು ಸಂಪರ್ಕಿಸಿದ್ದರು. ಆಪರೇಷನ್ ಕಮಲದ ಮೊದಲ ಪ್ರಯೋಗ ಬಯಲಾಯಿತು.ನಮ್ಮವರಿಗೆ 100 ಕೋಟಿ ಅಥವಾ 50 ಕೋಟಿ ಆಮಿಷ ಇರಬಹುದು. ಆದರೆ ಆಫರ್ ಮಾಡಿದ್ದಂತು ನಿಜ ಎಂದು ಸಚಿವ ಬೋಸರಾಜ್ ಸ್ಪೋಟಕವಾದಂತ ಹೇಳಿಕೆ ನೀಡಿದ್ದಾರೆ. ಉತ್ತರ ಕರ್ನಾಟಕದ 6ರಿಂದ 7 ಜನ ಇದ್ದಾರೆ. ಸರ್ಕಾರದ ವಿರುದ್ಧ ಕುಮಾರಸ್ವಾಮಿ, ದೇವೇಗೌಡರು ಕುತಂತ್ರ ನಡೆಸಿದ್ದಾರೆ. ಅಮಿತ್ ಶಾ ಗೆ ಇಬ್ಬರು…

Read More

ಬೀದರ್ : ನಾಪತ್ತೆಯಾಗಿದ್ದ ಯುವತಿಯು ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಬೀದರ್ ನಲ್ಲಿ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಗುಣತೀರ್ಥವಾಡಿ ಗ್ರಾಮದ ಬಳಿ ನಿನ್ನೆ ಯುವತಿಯ ಶವ ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮದ ಯುವತಿ ಎಂದು ಹೇಳಲಾಗುತ್ತಿದ್ದು, ರೇಪ್ ಮಾಡಿ ಕೊಲೆ ಮಾಡಿದ್ದಾರೆ ಎಂದು ಪಾಲಕರು ಆರೋಪಿಸುತ್ತಿದ್ದಾರೆ. ಇನ್ನು ಹಲವಾರು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ನಮಗೆ ನ್ಯಾಯ ಬೇಕು ಎಂದು ಧರಣಿ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸ್ ಸರು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಇದರ ಮಧ್ಯ ಮತ್ತೊಂದು ಆಘಾತಕಾರಿ ವಿಷಯ ಬಹಿರಂಗವಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ. ಹೌದು ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಬಂದಿದ್ದು, 2001 ರಲ್ಲೇ ದೇವನೂರು ಬಡಾವಣೆ ನಿರ್ಮಾಣವಾಗಿದೆ ಎಂದು ಖುದ್ದು ಸಿಎಂ ಪತ್ನಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ. ಇದೀಗ ಆ ಸೈಟ್ ಕೊಟ್ಟಿರುವುದು ನಿಯಮ ಬಾಹಿರ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಬಂದಿದೆ. 50:50 ಅನುಪಾತ 2009 ರಲ್ಲಿ ಜಾರಿಗೆ ಬಂದಿದೆ. 2009 ಕ್ಕಿಂತ ಹಿಂದಿನ ಹಳೆ ಬಡಾವಣೆಗಳಿಗೆ 50:50 ಅನುಪಾತ ಅನ್ವಯವಾಗುವುದಿಲ್ಲ. ಆದರೆ ಪ್ರಾಧಿಕಾರ 2009 ಹಿಂದಿನ ಬಡಾವಣೆಗಳ ಬದಲಿ ನಿವೇಶನಗಳಿಗಾಗಿ ಮಂಜೂರಾತಿಗಾಗಿ 50:50 ಅನುಪಾತ ಕೈಗೊಂಡಿರುವುದು ಕಾನೂನು ಬಾಹಿರ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ‌ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅಮಾನತು ಆದೇಶದಲ್ಲೇ ರಾಜ್ಯ…

Read More

ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ಇದೀಗ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಮೂಲಕ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹೌದು ಮಾಲಿನ್ಯ ನಿಯಂತ್ರಣ ಮಂಡಳಿ ದಾಖಲಿಸಿದ್ದ ಕೇಸ್ ಅನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಸಂಸ್ಥೆಯ ರಮಣಗೌಡ ಪಾಟೀಲ್, ಶಿವಕುಮಾರ್ ಪಾಟೀಲ್ ಗು ಇದೀಗ ಬಿಗ್ ರಿಲೀಸ್ ಸಿಕ್ಕಂತಾಗಿದೆ. ಚಿಂಚೋಳಿಯ ಜಿಎಂಎಫ್‌ಸಿ ಕೋರ್ಟ್ ನಲ್ಲಿ ಈ ಕುರಿತು ದೂರು ದಾಖಲಿಸಲಾಗಿತ್ತು. ಪ್ರಕರಣದ ಹಿನ್ನೆಲೆ? ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನಲೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಸಿದ್ದ ಶ್ರೀ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಆದೇಶ ನೀಡಲಾಗಿತ್ತು . ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಈ ಶುಗರ್ ಫ್ಯಾಕ್ಟರಿ ಬಂದ್​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ…

Read More

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ ಎಂದು ಮೈಸೂರಿನಲ್ಲಿ ಪ್ರಾಧಿಕಾರದ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ಅದೇ ರೀತಿ ಭಕ್ತಾದಿಗಳಿಗೆ ಸೌಲಭ್ಯ ಗಳಿಸಲು ಪ್ರಾಧಿಕಾರವನ್ನು ರಚನೆ ಮಾಡಲಾಗಿದೆ.ದಸರಾ ಸಂದರ್ಭದಲ್ಲಿ ವಿವಿಧ ಭಾಗದಿಂದ ಜನರು ಬರುತ್ತಾರೆ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯ ಒದಗಿಸಬೇಕಿದೆ ಎಂದರು. ಅಲ್ಲದೆ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ. ಚಾಮುಂಡಿ ಬೆಟ್ಟ ಅಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿಯನ್ನು ಅಳವಡಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಅಪರಾಧ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ…

Read More

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ರಾಜಾತಿಥ್ಯ ಪಡೆದುಕೊಂಡ ನಂತರ ಕೋರ್ಟಿನ ಆದೇಶದ ಮೇರೆಗೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದರು. ಇದೀಗ ಜೈಲಿನಲ್ಲಿ ತಮ್ಮ ವಿರುದ್ಧ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ ತಿಳಿದುಕೊಳ್ಳಲು ಟಿವಿ ಬೇಕೇ ಬೇಕು ಎಂದು ಜೈಲಿನ ಸಿಬ್ಬಂದಿ ಬಳಿ ದರ್ಶನ್ ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಈ ಹಿಂದೆ ಆರೋಪಿ ದರ್ಶನ್ ಟಿವಿ ಸಹವಾಸವೇ ಬೇಡ, ಹಾಗೂ ಮಾಧ್ಯಮಗಳ ಕುರಿತು ಅತ್ಯಂತ ತುಚ್ಚವಾಗಿ ಮಾತನಾಡಿದ್ದರು. ಆದರೆ ಇದೀಗ ದರ್ಶನ್ ಗೆ ಟೀವಿ ಬೇಕಾಗಿದೆ. ಈ ವಿಚಾರವಾಗಿ ಜೈಲು ಸಿಬ್ಬಂದಿ ಬಳಿ ಆರೋಪಿ ದರ್ಶನ್ ಮಾಹಿತಿ ಕೇಳುತ್ತಿದ್ದ. ಪ್ರಕರಣದ ಕುರಿತು ಚಾರ್ಜ್ ಶೀಟ್ ಸಲ್ಲಿಕೆ ವಿಚಾರದ ಬಗ್ಗೆ ಜೈಲು ಸಿಬ್ಬಂದಿ ಬಳಿ ನಟ ದರ್ಶನ ಕೇಳಿದ್ದ ಎನ್ನಲಾಗುತ್ತಿದೆ. ಈ ವೇಳೆ ಸಿಬ್ಬಂದಿ ನಿಮಗೆ ಟಿವಿ ಬೇಕಾಗಿದ್ದರೆ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಎಂದು ಕೂಡ…

Read More