Author: kannadanewsnow05

ಗದಗ : ಕೋರ್ಟ್ ಹಾಗೂ ಇತರೆ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಹಣವನ್ನು ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಒಟ್ಟು ಆರು ಜನರನ್ನು ಗದಗ ಪೊಲೀಸರು ಬಂಧಿಸಿದ್ದಾರೆ. ಹೌದು ತಿಪ್ಪೇಸ್ವಾಮಿ ಎಂಬಾತ ಹೊಸದುರ್ಗ ಕ್ಷೇತ್ರದಿಂದ ಜೆಡಿಎಸ್ (JDS) ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ವ್ಯಕ್ತಿ ಈ ವಂಚನೆಯಲ್ಲಿ ಭಾಗಿಯಾಗಿರೋದು ಬಯಲಾಗಿದೆ. ಅಲ್ಲದೆ ಗದಗ್ ಜಿಲ್ಲೆಯ ಸುಮಾರು 35ಕ್ಕೂ ಹೆಚ್ಚು ಯುವಕರಿಂದ ಲಕ್ಷ ಲಕ್ಷ ಹಣ ಪಡೆದು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಈ ಒಂದು ಪ್ರಕರಣದಲ್ಲಿ ತಿಪ್ಪೇಸ್ವಾಮಿ ಅಲ್ಲದೆ ಇನ್ನೂ 9 ಜನರು ಭಾಗಿ ಆಗಿದ್ದು, ಇದೀಗ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.ಈ ಖದೀಮರು ಬಡವರನ್ನು ವಂಚಿಸಿ ಅವರ ಹಣದಲ್ಲಿ ಐಶಾರಾಮಿ ಕಾರುಗಳನ್ನು ಖರೀದಿ ಮಾಡಿ ಮಸ್ತ್ ಮಜಾ ಮಾಡ್ತಾಯಿದ್ದರು. ಸದ್ಯ ಈ ಗ್ಯಾಂಗ್ ಅನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.…

Read More

ಬೆಂಗಳೂರು : ನಿನ್ನೆ ರಾಜಧಾನಿ ಬೆಂಗಳೂರುನಲ್ಲಿ ಭೀಕರ ವರುಣನ ಆರ್ಭಟಕ್ಕೆ ಬೆಂಗಳೂರಿನ ಜನತೆ ಸಂಪೂರ್ಣವಾಗಿ ನಲುಗಿ ಹೋಗಿದ್ದಾರೆ. ಅದರಲ್ಲೂ ಬೆಂಗಳೂರು ನಗರದ ಆರ್ ಆರ್ ನಗರದಲ್ಲಿ ರಸ್ತೆಗಳು ಸಂಪೂರ್ಣವಾಗಿ ಕೆರೆ ಅಂತಾಗಿದ್ದು ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ನಿನ್ನೆ ರಾತ್ರಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ವರುಣನ ಅಬ್ಬರಕ್ಕೆ ರಾಜಧಾನಿ ಬೆಂಗಳೂರು ಅಲ್ಲೋಲ ಕಲ್ಲೋಲವಾಗಿದೆ.ರಸ್ತೆ ಜಲಾವೃತಗೊಂಡು ಟ್ರಾಫಿಕ್ ಜಾಮ್ ನಿಂದಾಗಿ ಜನ ಜೀವನ ಸಂಪೂರ್ಣವಾಗಿ ಆಸ್ತವೆಸ್ತವಾಗಿದೆ. ಅದರಲ್ಲೂ ಬೆಂಗಳೂರಿನ ಮಳೆಯಿಂದ ರಸ್ತೆ ಸಂಪೂರ್ಣವಾಗಿ ಕೆಸರು ಗದ್ದೆಯಂತೆ ಆಗಿದೆ.ಆರ್ ಆರ್ ನಗರದ ಕೆರೆ ಕೋಡಿ ರಸ್ತೆಯಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಸಂಪೂರ್ಣ ಕೆಸರುಗದ್ದೆಯಾಗಿ ರಸ್ತೆ ಬದಲಾಗಿದೆ ಗುಂಡಿ ರಸ್ತೆಯಲ್ಲಿ ಟ್ರ್ಯಾಕ್ ಕಾರು ಚಾಲಕರು ಪರದಾಟ ನಡೆಸುತ್ತಿದ್ದಾರೆ.

Read More

ಕಲಬುರ್ಗಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಮೊದಲು ನಟ ದರ್ಶನವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು.ಈ ವೇಳೆ ಅವರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಬಳಿಕ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ್ದರು. ಇದೀಗ ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲೂ ಕೂಡ ಕೈದಿಗಳು ಮೊಬೈಲ್ ಗುಟ್ಕಾ ಸೇರಿದಂತೆ ಮಾದಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಕಮಿಷನರ್ ಡಾ. ಶರಣಪ್ಪ ನೇತೃತ್ವದಲ್ಲಿ ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಗಿದೆ. ಹೌದು ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಗಿದೆ. ಕಲಬುರ್ಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ. ಡಿಸಿಪಿ ಕನ್ನಿಕಾ ಹಾಗೂ 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎರಡು ಮೊಬೈಲ್, ಗುಟ್ಕಾ ಪ್ಯಾಕೆಟ್ ಹಾಗೂ 2 ಕಬ್ಬಿಣದ ರಾಡ್ ಗಳನ್ನು ಪೋಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಕಮಿಷನರ್…

Read More

ಬಸವಕಲ್ಯಾಣ : ಕೆಲವು ದಿನಗಳ ಹಿಂದೆ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ನಾಪತ್ತೆಯಾಗಿ ಬಳಿಕ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ನಡೆದಿತ್ತು. ಇದೀಗ ಬೀದರ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗಾರ ಅವರ ಆಪ್ತ ಸಂಜುಕುಮಾರ್ ಸುಗರೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಸಂಜುಕುಮಾರ್ ಶಾಸಕ ಶರಣು ಸಲಗಾರ್ ಪರಮಾಪ್ತ ಎಂದೇ ಹೇಳಲಾಗುತ್ತಿದೆ. ನಿನ್ನೆ ಬೆಳಿಗ್ಗೆ ಸಂಜುಕುಮಾರ್ ಅವರು, ಬಸವಕಲ್ಯಾಣದ ಜೈಶಂಕರ ಕಾಲೋನಿಯ ತಮ್ಮ‌ ನಿವಾಸದಿಂದ‌ ತೆರಳಿದ್ದಾರೆ ಎನ್ನಲಾಗಿದ್ದು, ಇದುವರೆಗೂ ಇವರ ಸುಳಿವು ಇನ್ನೂ ಸಿಕ್ಕಿಲ್ಲ.‌ ಹೀಗಾಗಿ ಸಹಜವಾಗಿ ಕುಟುಂಬಸ್ಥರು ಆತಂಕದಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಎರಡು ಫೋನ್ ಗಳು ಮನೆಯಲ್ಲಿ ಇಟ್ಟಿದ್ದಾರೆ. ಇವರು ಮನೆಯಿಂದ ಒಬ್ಬರೇ ಹೋಗುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಈ ಸಂಬಂಧ ಸುಗರೆ ಪುತ್ರ‌ ಬಸವಕಲ್ಯಾಣ ನಗರ ಠಾಣೆಗೆ ದೂರು ನೀಡಿದ್ದು, ತಂದೆಯ ಪತ್ತೆಗೆ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸುಗರೆ ಪತ್ತೆಗಾಗಿ ವಿಶೇಷ ತಂಡ ರಚಿಸಿ‌…

Read More

ಬೆಂಗಳೂರು : ಉದ್ಯಮಿ ವಿಜಯ್ ತಾತಾಗೆ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ಕುಮಾರಸ್ವಾಮಿ ಅವರು ಹೈಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಹೌದು ಉದ್ಯಮಿ ವಿಜಯ್ ತಾತಾಗೆ ಎಚ್ ಡಿ ಕುಮಾರಸ್ವಾಮಿ ಅವರು 50 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದರು.ಅಲ್ಲದೆ ಬೆದರಿಕೆ ಕೂಡ ಹಾಕಿದ್ದರು. ಈ ಒಂದು ಪ್ರಕರಣದಲ್ಲಿ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಕೂಡ ಬೆಂಗಳೂರಿನ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಇದೀಗ ಹೆಚ್‍ಡಿ ಕುಮಾರಸ್ವಾಮಿ ಜಾಮೀನು ನೀಡಿ ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿದೆ. ಇದಾದ ಬಳಿಕ ಎಂಎಲ್ಸಿ ರಮೇಶ್ ಗೌಡ ಅವರೇ ನನಗೆ 100 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ವಿಜಯ್…

Read More

ವಿಜಯಪುರ : ಕರ್ನಾಟಕ ರಾಜ್ಯ ರಾಜಕಾರಣದ ಇತಿಹಾಸವನ್ನು ತಿರುಗಿ ನೋಡಿದಾಗ ಹಲವು ರಾಜಕಾರಣಿಗಳು ಈ ಒಂದು ಸಿಡಿ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರು ಯಾರೆಂದು ಎಲ್ಲರಿಗೂ ಗೊತ್ತಿರುವ ವಿಷಯವೇ. ಹಾಗಾಗಿ ಅವರ ಹೆಸರು ಹೇಳುವ ಅವಶ್ಯಕತೆ ಇಲ್ಲ. ಆದರೆ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಮುಸ್ಲಿಂ ಮುಖಂಡರು ನಿಮ್ಮ ಸಿಡಿ ಕೂಡ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿದ್ದಾರೆ. ಹೌದು ನಾಳೆ ವಿಜಯಪುರದಲ್ಲಿ ‘ವಕ್ಫ್​ ಹಠಾವೋ ದೇಶ ಬಚಾವೋ’ ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಮುಸ್ಲಿಂ ಮುಖಂಡರು, ನಿಮ್ಮ ರಾಜಕಾರಣ ಏನು ಇದೆಯೋ ಅದನ್ನು ಮಾಡಿಕೊಂಡು ಹೋಗಿ. ಇಲ್ಲದಿದ್ದರೆ ನವೆಂಬರ್ 6ರಂದು ನಿಮ್ಮ ಸಿಡಿ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಖಡಕ್​ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಇಂದು ಮುಸ್ಲಿಂ ಮುಖಂಡರಾದ ಎಸ್ ಎಸ್ ಖಾದ್ರಿ ಅವರು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ತಿ…ಮುಚ್ಚಿಕೊಂಡು ರಾಜಕಾರಣ ಮಾಡಬೇಕು. ಇಲ್ಲದಿದ್ದರೆ ನವೆಂಬರ್…

Read More

ಉಡುಪಿ : ಮದರಸ ಹಾಸ್ಟೆಲ್​ನಲ್ಲಿ ರಾತ್ರಿ ವೇಳೆ ಬಾತ್​ರೂಂನಲ್ಲಿ ಮದರಸಾ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉಡುಪಿ ಜಿಲ್ಲೆಯ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ರಂಗನಕೆರೆಯಲ್ಲಿ ನಡೆದಿದೆ. ಹೌದು ಸಿದ್ದಾಪುರ ಮೂಲದ ರಿಹಾನ್ ಬೇಗಮ್ ಎನ್ನುವವರ ಪುತ್ರ ಮಹಮ್ಮದ್ ಜಹೀದ್ (12) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ತಿಳಿಬಂದಿದೆ.ಮೃತ ಮಹಮ್ಮದ್ ಜಹೀದ್​​ ಕಳೆದ ನಾಲ್ಕು ತಿಂಗಳಿಂದ ಮದರಸ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ. ಹೇರಾಡಿ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ. ರಜೆಯಲ್ಲಿ ಮನೆಗೆ ತೆರಳಿದ್ದ ಜಹೀದ್ ರಜೆ ಮುಗಿಸಿ ಹಾಸ್ಟೆಲ್​ ಮರಳಿದ್ದ. ರಾತ್ರಿ ವೇಳೆ ಮದರಸ ಹಾಸ್ಟೆಲ್ ಬಾತ್ರೂಮಿನಲ್ಲಿ ನೇಣಿಗೆ ಶರಣಾಗಿದ್ದಾನೆ.ಸದ್ಯ ಮಗನ ಸಾವಿನ ಕುರಿತು ತಾಯಿ ರಿಹಾನ ಬೇಗಂ ಸಂಶಯ ವ್ಯಕ್ತಪಡಿಸಿದ್ದಾರೆ.ಘಟನೆ ಕುರಿತಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಜೊತೆ ಸಭೆ ನಡೆಸಿ ಒಂದು ತೀರ್ಮಾನಕ್ಕೆ ಬರದೇ ಹೋದರೆ, ಮುಂಬರುವ ದಿನಗಳಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಅಕ್ಟೋಬರ್ 15ಕ್ಕೆ ಬನ್ನಿ ಮಾತನಾಡೋಣ ಎಂದು ದಿನಾಂಕ ಕೊಟ್ಟಿದ್ದರು.ಆದರೆ, ಕಳೆದ ಮೂರು ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ನಮಗೆ ಮಾಹಿತಿ ನೀಡಿದ್ದು, 15ರಂದು ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ.‌ ಈ ವೇಳೆ ಮತ್ತೊಂದು ದಿನಾಂಕ ನೀಡುವಂತೆ ಕೇಳಿದ್ದೆವು. ಆದರೆ, ಇದುವರೆಗೂ ಯಾವುದೇ ದಿನಾಂಕ ಕೊಡದೆ ವಿಳಂಬ ಮಾಡುತ್ತಿದ್ದಾರೆ. ಆದರೆ ನಮ್ಮ ವಕೀಲರು ಅವರು ದಿನಾಂಕ ಕೊಡಲಿ ಬಿಡಲಿ ಅಕ್ಟೋಬರ್ 18ರಂದು ದೆಹಲಿಗೆ ಹೋಗೋಣ ಅಲ್ಲಿ ಎಲ್ಲಿ ಯಾವ ಸ್ಥಳದಲ್ಲಿ ಭೇಟಿಯಾಗುತ್ತಾರೆ ನೋಡೋಣ ಒಂದು ವೇಳೆ ಭೇಟಿಯಾದಗದೆ ಹೋದರೆ…

Read More

ಬೆಂಗಳೂರು : ಇತ್ತೀಚ್ಚಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಪೊಲೀಸರು ಅಕ್ರಮಕ್ಕೆ ಭಾರತಕ್ಕೆ ನುಸುಳಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದರು.ಈ ವಿಚಾರವಾಗಿ ಪ್ರಿಯಾಂಕ ಖರ್ಗೆ ಅವರು ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದು, ನಿಮಗೆ ಅಲ್ಲಿ ಬಾರ್ಡರ್ ಮೆಂಟೇನ್ ಮಾಡೋಕೆ ಆಗ್ತಿಲ್ಲ, ನಮಗೆ ಇಲ್ಲಿ ಪಾಠ ಮಾಡ್ತೀರಾ? ಎಂದು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆದ ವಿಚಾರವಾಗಿ, ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಭಯೋತ್ಪಾಕ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರಿಯಾಂಕ್ ಖರ್ಗೆ 10 ವರ್ಷದಿಂದ ಅವರದೇ ಸರ್ಕಾರ ಇತ್ತಲ್ವಾ? ಭಯೋತ್ಪಾದನೆ ನಿರ್ಮೂಲನೆಗೆ ಏನು ಮಾಡಿದ್ದಾರೆ? ಬೆಂಗಳೂರಿಗೆ ಪಾಕಿಸ್ತಾನಿಗಳು ಬರ್ತಾರೆ ಅಂದ್ರೆ, ಅವ್ರು ಎಲ್ಲಿಂದ ಬರ್ತಾರೆ? ನಿಮಗೆ ಅಲ್ಲಿ ಬಾರ್ಡರ್ ಮೆಂಟೇನ್ ಮಾಡೋಕೆ ಆಗ್ತಿಲ್ಲ. ನಮಗೆ ಇಲ್ಲಿ ಪಾಠ ಮಾಡ್ತೀರಾ? ಎಂದು ತಿರುಗೇಟು ನೀಡಿದ್ದಾರೆ.

Read More

ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬಳಿಕ, ವಾದ ಪ್ರತಿವಾದ ಆಲಿಸಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತು. ನಟ ದರ್ಶನ್ ಜಾಮೀನು ಅರ್ಜಿ ವಜಾ ಆದ ವಿಷಯ ತಿಳಿಯುತ್ತಿದ್ದಂತೆ ವಿಜಯಲಕ್ಷ್ಮಿ ಅವರು ಕಣ್ಣೀರು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಅತಿಯಾ ಜಾಮಿನ್ ಅರ್ಜಿ ವಜಾ ಆದ ಬೆನ್ನಲ್ಲೇ ಪ್ರತಿ ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದಾರೆ. ಬಳ್ಳಾರಿ ಖಾಸಗಿ ಹೋಟೆಲಲ್ಲಿ ತಂಗಿದ್ದ ಪ್ರತಿಮೆ ಜಯಲಕ್ಷ್ಮಿ ಕಾನೂನು ಹೋರಾಟದ ಬಗ್ಗೆ ವಕೀಲರ ಜೊತೆಗೆ ಚರ್ಚಿಸುತ್ತಿದ್ದಾರೆ. ಪ್ರತಿ ಬಾರಿ ನಟ ದರ್ಶನ್ ಅವರನ್ನು ಭೇಟಿ ಮಾಡಲು ವಿಜಯಲಕ್ಷ್ಮಿ ಅವರು ಜೈಲಿಗೆ ಆಗಮಿಸುತ್ತಿದ್ದರು. ಆದರೆ ಇವತ್ತು ಜೈಲಿಗೆ ಆಗಮಿಸದೆ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು. ದರ್ಶನ್ ಅವರನ್ನು ಭೇಟಿಯಾಗಲು ನಟ ಧನ್ವೀರ್ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದರು. ಇತ್ತ ದರ್ಶನ್ ಜಾಮೀನು ಅರ್ಜಿ ವಜಾ…

Read More