Subscribe to Updates
Get the latest creative news from FooBar about art, design and business.
Author: kannadanewsnow05
ಶ್ರೀನಗರ : ಇಂದು ಸಂಜೆಯಷ್ಟೇ ಪಾಕಿಸ್ತಾನ ಹಾಗೂ ಭಾರತ ಕದನ ವಿರಾಮ ಘೋಷಿಸಿತ್ತು. ಇದೀಗ ಮತ್ತೆ ಪಾಕಿಸ್ತಾನ ಗಡಿಯಲ್ಲಿ ಬಾಲ ಬಿಚ್ಚಿದ್ದು ಜಮ್ಮು ಕಾಶ್ಮೀರದ ಗಡಿ ಭಾಗದಲ್ಲಿ ಮತ್ತೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ. ಹೌದು ಜಮ್ಮು ಕಾಶ್ಮೀರ ರಾಜಧಾನಿ ಶ್ರೀ ನಗರದಲ್ಲಿ 4-5 ಬಾರಿ ಸ್ಪೋಟ ಕೇಳಿಸಿದ್ದು, ಶ್ರೀನಗರದಲ್ಲಿ ಬ್ಲಾಕ್ ಔಟ್ ಮಾಡಲಾಗಿದೆ. ಎಲ್ ಓ ಸಿ ನಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಮತ್ತೆ ಗುಂಡಿನ ದಾಳಿ ನಡೆಸಿದೆ. ಕದನ ವಿರಾಮ ಜಾರಿಯಾದ 3 ಗಂಟೆಗಳಲ್ಲಿ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದೆ. ಅಲ್ಲದೆ ಶ್ರೀನಗರದಲ್ಲಿ 11 ಡ್ರೋನ್ ಗಳಿಂದ ದಾಳಿ ಮಾಡಿದೆ. ಶ್ರೀನಗರದತ್ತ 50ಕ್ಕೂ ಹೆಚ್ಚು ಪಾಕಿಸ್ತಾನ್ ಡ್ರೋನ್ ಗಳು ನುಗ್ಗಿ ಬಂದಿವೆ. ಸೇನಾ ನೆಲೆಗಳನ್ನೇ ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸುತ್ತಿದೆ. ಕಾಶ್ಮೀರ, ರಾಜಸ್ಥಾನ್, ಗುಜರಾತ್ ಪಂಜಾಬ್ ಗಳನ್ನು ಪಾಕಿಸ್ತಾನ ಟಾರ್ಗೆಟ್ ಮಾಡಿದೆ. ಆದರೆ ಭಾರತ ತಕ್ಕ ಪ್ರತ್ಯುತ್ತರ ನೀಡಿದ್ದು, 50ಕ್ಕೂ…
ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ. ಈ ಒಂದು ಕದನ ವಿರಾಮ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು,ಕದನ ವಿರಾಮದ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಮೊದಲಿಗೆ ಸಿಎಂ ಹೇಳಿದರು. ಆಗ ಪಕ್ಕದಲ್ಲೇ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು, ಕದನ ವಿರಾಮ ಘೋಷಣೆ ಆಗಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಿದರು. ಆಗ ಮಾತನಾಡಿದ ಸಿದ್ದರಾಮಯ್ಯ, ಕದನ ವಿರಾಮವನ್ನು ಸ್ವಾಗತಿಸಿದರು. ಯುದ್ಧ ವಿರಾಮ ಘೋಷಣೆಯಾಗಿದೆ ಅಂತ ಸರ್ಕಾರವೇನೂ ಕೈಕಟ್ಟಿ ಕೂರೋದಿಲ್ಲ, ಭಯೋತ್ಪಾದನೆಯನ್ನು ಮೂಲೋತ್ಪಾಟನೆ ಮಾಡುವುದು ನಮ್ಮ ಗುರಿ ಎಂದು ಹೇಳಿದರು. ಕರ್ನಾಟಕದಲ್ಲಿದ್ದ ಎಲ್ಲ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸಲಾಗಿದೆ ಎಂದು ಹೇಳಿದರು. ಅದರೆ ಮೈಸೂರಲ್ಲಿ 6ವರ್ಷದೊಳಗಿನ ಮೂರು ಮಕ್ಕಳು ಉಳಿದುಕೊಂಡು ಬಿಟ್ಟಿವೆ, ಅವರ ತಂದೆ ಪಾಕಿಸ್ತಾನಿ…
ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ಹೆಚ್ಚಾದ ಹಿನ್ನಲೆ ಐಪಿಎಲ್ ಸೀಸನ್ 18 ಅನ್ನು ಒಂದು ವಾರದ ಮಟ್ಟಿಗೆ ಮುಂದೂಡಲಾಗಿತ್ತು. ಇಂದು ಪಾಕಿಸ್ತಾನ ಮತ್ತು ಭಾರತ ಕದನ ವಿರಾಮ ಘೋಷಿಸಿದೆ. ಹಾಗಾಗಿ ಇದೀಗ ಮೂರು ನಗರಗಳಲ್ಲಿ ಮುಂದಿನ ಪಂದ್ಯಗಳನ್ನು ನಡೆಸಲು ಪ್ಲಾನ್ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸೇನಾ ಕಾರ್ಯಾಚರಣೆಗೆ ತಾತ್ಕಾಲಿಕ ಕದನವಿರಾಮ ಘೋಷಣೆಯಾಗಿದೆ. ಇದರಿಂದ ಅರ್ಧಕ್ಕೆ ನಿಂತಿದ್ದ ಐಪಿಎಲ್ 2025ರ ಎರಡನೇ ಹಂತ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ. ಆದರೆ, ವಿದೇಶಿ ಆಟಗಾರರ ಆಗಮನ ಮತ್ತು ಗಡಿಯಲ್ಲಿನ ಉದ್ವಿಗ್ನತೆಯಿಂದಾಗಿ ಲೀಗ್ನ ತಕ್ಷಣದ ಆರಂಭ ಅನುಮಾನದಲ್ಲಿದೆ. ಬಿಸಿಸಿಐ ಸರ್ಕಾರದೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ. ಅದರಂತೆ ಇದೀಗ ಮುಂದಿನ ಪಂದ್ಯಕ್ಕೆ ಬಿಸಿಸಿಐ ಮೂರು ಮೈದಾನಗಳನ್ನು ಸೂಚಿಸಿದ್ದು, ಉಳಿದ 16 ಪಂದ್ಯಗಳು ಅಲ್ಲೇ ನಡೆಸಲು ಚಿಂತನೆ ನಡೆಸಲಾಗಿದೆ. ಉತ್ತರ ಭಾರತದಲ್ಲಿ ಯುದ್ಧದ ಭೀತಿ ಹೆಚ್ಚಿರುವ ಹಿನ್ನಲೆ ಮುಂದಿನ ಪಂದ್ಯಾಟವನ್ನು ದಕ್ಷಿಣ ಭಾರತದ ನಗರಗಳಾದ…
ನವದೆಹಲಿ : ಪಹಲ್ಗಾಂ ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಈಗಾಗಲೇ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿ ಅನೇಕ ಉಗ್ರರನ್ನು ಹತ್ಯೆಗೈದಿದೆ. ಇದೀಗ ಇಂದು ಸಂಜೆ 5 ಗಂಟೆಯಿಂದಲೇ ಪಾಕಿಸ್ತಾನ ಭಾರತಕ್ಕೆ ಕರೆ ಮಾಡಿ ಕದನ ವಿರಾಮಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಇದರ ಮಧ್ಯ 2019ರಲ್ಲಿ ನಡೆದ ಪುಲ್ವಾಮ ದಾಳಿಯ ಕುರಿತು ಪಾಕಿಸ್ತಾನದ ವಾಯುಪಡೆಯ ಮುಖ್ಯಸ್ಥ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಪುಲ್ವಾಮಾ ಭಯೋತ್ಪಾದಕ ದಾಳಿ ನಮ್ಮ ಯುದ್ಧ ತಂತ್ರದ ಭಾಗ ಎಂದು ಇದೀಗ ಪಾಕಿಸ್ತಾನ ಒಪ್ಪಿಕೊಂಡಿದೆ. ಪಾಕಿಸ್ತಾನ ಇದೀಗ ತನ್ನ ಹಳೆಯ ಪುಲ್ವಾಮಾ ಭಯೋತ್ಪಾದಕ ದಾಳಿ ಕೃತ್ಯವನ್ನ ಒಪ್ಪಿಕೊಂಡಿದೆ. ಪುಲ್ವಾಮಾ ದಾಳಿ ತನ್ನದೇ ಕೃತ್ಯ ಎಂದು ಪಾಕ್ ವಾಯು ಪಡೆಯ ಮುಖ್ಯಸ್ಥ ಸುದ್ದಿಗೋಷ್ಠಿಯಲ್ಲಿ ಒಪ್ಪಿಕೊಂಡಿರುವ ವಿಡಿಯೋ ಹರಿದಾಡುತ್ತಿದೆ. ಪುಲ್ವಾಮಾದಲ್ಲಿ ಸ್ಟಾಟರ್ಜಿಕ್ ಬ್ರಿಲಿಯನ್ಸ್ ತೋರಿಸಿದ್ದೇವೆ ಅಂದರೆ ಆ ಭಯೋತ್ಪಾದಕ ದಾಳಿ ನಮ್ಮ ಯುದ್ಧತಂತ್ರದ ಪ್ರತಿಭೆಯ ಭಾಗ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ…
ನವದೆಹಲಿ : ಕೊನೆಗೂ ಪಾಕಿಸ್ತಾನ ಕದನ ವಿರಾಮವನ್ನು ಘೋಷಿಸಿದೆ. ಪಲ್ಗಾಂ ನಲ್ಲಿ ನಡೆದ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಮೇಲೆ ಕ್ಷಿಪಣಿ ದಾಳಿ ಮಾಡಿತ್ತು. ಹೀಗಾಗಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಾಕಿಸ್ತಾನದ ಮೇಲೆ ನಿರಂತರವಾಗಿ ಭಾರತ ದಾಳಿ ನಡೆಸಿದ್ದು ಇದೀಗ ಪಾಕಿಸ್ತಾನ ಕೊನೆಗೂ ಕದನ ವಿರಾಮ ಘೋಷಿಸಿದೆ. ಈ ಕುರಿತು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಧಾರ್ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾವು ಕದನ ವಿರಾಮಕ್ಕೆ ಸಿದ್ದರಿದ್ದೇವೆ ಎಂದು ತಿಳಿಸಿದ್ದಾರೆ.ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸಿದೆ ಎಂದು ಬರೆದುಕೊಂಡಿದ್ದಾರೆ. https://twitter.com/MIshaqDar50/status/1921175494633943541?t=MsqHt3Ee-DPS19hFLtEsvw&s=19
ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಲ್ಲೂ ಮಾಕ್ ಡ್ರಿಲ್ ನಡೆಸುವಂತೆ ಸೂಚನೆ ನೀಡಿತ್ತು. ಅದರಂತೆ ರಾಜ್ಯದಲ್ಲಿ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಸಲಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಿಲ್ಲೆಗಳಲ್ಲೂ ಮಾಕ್ ಡ್ರಿಲ್ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಾಕ್ ಡ್ರಿಲ್ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಡೆಸಿದ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಡಿಸಿ, ಎಸ್ ಪಿ, ಪೊಲೀಸ್ ಆಯುಕ್ತರ ಜೊತೆಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಅಗತ್ಯ ವಸ್ತುಗಳ ಅದರ ಹೆಚ್ಚಳ ಆಗದಂತೆ ಅಧಿಕಾರಿಗಳು ನಿಗ ವಹಿಸಬೇಕು. ಅಕ್ರಮ ದಾಸ್ತಾನು ಕಾಳಸಂತೆಯ ಮೇಲೆ ನಿರಂತರವಾಗಿ ನಿಗಾವಹಿಸಬೇಕು. ಯುದ್ಧದ ಪರಿಸ್ಥಿತಿ ತಿಳಿಯಾಗುವವರೆಗೂ…
ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇದೀಗ ದೆಹಲಿಯ ಏರ್ ಪೋರ್ಟ್ ನಲ್ಲಿ 60 ದೇಶೀಯ ವಿಮಾನಗಳ ಹಾರಾಟ ಸ್ಥಗಿತಗೊಳಿಸಿ ಆದೇಶಿಸಲಾಗಿದೆ. ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ವಿಮಾನ ಹಾರಾಟ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಇದೀಗ ದೆಹಲಿಯ ಏರ್ಪೋರ್ಟ್ ನಲ್ಲಿ 60 ದೇಶೀಯ ವಿಮಾನಗಳ ಹಾರಾಟ ಬಂದ್ ಗೆ ಆದೇಶ ಲಾಗಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು ಈ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಬಂದ್ ಗೆ ಆದೇಶ ನೀಡಲಾಗಿದೆ.
ದಕ್ಷಿಣಕನ್ನಡ : ವ್ಯಕ್ತಿಯೊರ್ವ ಮಹಿಳೆಗೆ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕೊಪ್ಪ ಎಂಬಲ್ಲಿ ನಡೆದಿದೆ. ಆರೋಪಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುವ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ದ ಕೇಳಿದೆ. ಈ ಹಿನ್ನೆಲೆ ಸ್ಥಳಕ್ಕೆ ತೆರಳಿದಾಗ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ವಿಟ್ಲ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ BNS 2023 u/s 79 ರಂತೆ ಪ್ರಕರಣ ದಾಖಲಾಗಿದೆ.
ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ಮಧ್ಯ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ಮಧ್ಯ ಇದೀಗ ತೇಹರಿಕ್-ಎ-ತಾಲಿಬಾನ್ ಉಗ್ರರು ಪೇಶಾವರದಲ್ಲಿ ಪಾಕಿಸ್ತಾನದ 9 ಯೋಧರನ್ನು ಹತ್ಯೆಗೈಡಿದ್ದಾರೆ. ಹೌದು ಪೇಶಾವರದಲ್ಲಿ 9 ಪಾಕಿಸ್ತಾನ ಸೈನಿಕರನ್ನು ಹತ್ಯೆ ಗೈಯಲಾಗಿದೆ. ಚೆಕ್ ಪೋಸ್ಟ್ ಮೇಲೆ ಟಿಟಿಪಿ (ತೇಹರಿಕ್-ಎ-ತಾಲಿಬಾನ್) ದಾಳಿ ಮಾಡಿದೆ. ಪೇಶಾವರದ ವಾಯುವ್ಯ ಭಾಗದಲ್ಲಿ ಪಾಕಿಸ್ತಾನಕ್ಕೆ ಶಾಕ್ ನೀಡಿದೆ. ತೆಹರಿಕ್ ಎ ತಾಲಿಬಾನ್ ಪಡೆ ಹತ್ಯೆಗೌಯ್ದಿದೆ. ಈಗಾಗಲೇ ಬಲೂಚ್ ಪಡೆಗಳಿಂದ ಪಾಕಿಸ್ತಾನದ ಮೇಲೆ ದಾಳಿಯಾಗಿದ್ದು, ಇದೀಗ ಟಿಟಿಪಿ ಉಗ್ರರಿಂದ 9 ಪಾಕಿಸ್ತಾನಿ ಯೋಧರ ಹತ್ಯೆಯಾಗಿದೆ.
ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು ಈಗಾಗಲೇ ಭಾರತ ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ಮೂಲಕ ತಿರುಗೇಟು ನೀಡಿದೆ. ಅಲ್ಲದೆ ಈಗಾಗಲೇ ನೂರಕ್ಕೂ ಹೆಚ್ಚು ಉಗ್ರರು ಸಾವನಪ್ಪಿದ್ದು ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರನ್ನು ಸಹ ಆಪರೇಷನ್ ಸಿಂಧೂರ ದಾಳಿಯಲ್ಲಿ ಭಾರತೀಯ ಸೇನೆ ಹತ್ಯೆಗೈದಿದೆ. ಇನ್ನು ಆಪರೇಷನ್ ಸಿಂಧೂರ ಬಗ್ಗೆ ಸ್ಯಾಂಡಲ್ವುಡ್ ಬಾದ್ ಶಾ ಕಿಚ್ಚ ಸುದೀಪ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಆಪರೇಷನ್ ಸಿಂಧೂರ ವಿಚಾರವಾಗಿ, ಕಿಚ್ಚ ಸುದೀಪ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಒಬ್ಬ ಹೆಮ್ಮೆಯ ಭಾರತೀಯನ್ನಾಗಿ ಈ ಪತ್ರವನ್ನು ಬರೆಯುತ್ತಿದ್ದೇನೆ ನಿಮ್ಮ ಮಾತುಗಳು ನನಗೆ ಯಾವಾಗಲೂ ಶಕ್ತಿ. ಭಾರತವು ಯಾವಾಗಲೂ ಎದ್ದೇಳುತ್ತದೆ ಎಂಬ ಧೈರ್ಯಶಾಲಿ ಮತ್ತು ನಿರ್ಣಾಯಕ ಸಂದೇಶವನ್ನು ವಿಶ್ವಕ್ಕೆ ತಿಳಿಸಿದೆ. ಸಂಪೂರ್ಣ ಕನ್ನಡ ಚಿತ್ರರಂಗವು ನಿಮ್ಮೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಬರೆದಿದ್ದಾರೆ. ನಿಮ್ಮ ನಾಯಕತ್ವದಲ್ಲಿ…