Author: kannadanewsnow05

ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ DRI ಅಧಿಕಾರಿಗಳು ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾ ರಾವ್ ಹಾಗೂ ಆಕೆಯ ಸ್ನೇಹಿತ ತರುಣ್ ರಾಜುನನ್ನು ಅರೆಸ್ಟ್ ಮಾಡಿದ್ದರು. ಇದೀಗ ಮತ್ತೊಂದು ಆರೋಪಿಯನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಹೀಗಾಗಿ ಬಂಧಿತರ ಸಂಖ್ಯೆ 3ಕ್ಕೆ ಏರಿದೆ. ಆರೋಪಿಯನ್ನು ಬಂಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ಆರೋಪಿಯನ್ನು ಮಾರ್ಚ್‌ 29ರ ವರೆಗೆ ಡಿಆರ್‌ಐ ಕಸ್ಟಡಿಗೆ ನೀಡಿ ಆದೇಶಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡಿಕೊಂಡು ಬಂದಿದ್ದ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಹಾಗೂ ತರುಣ್ ರಾಜು ಅವರನ್ನು ಡಿಆರ್‌ಐ ಅಧಿಕಾರಿಗಳು ಈ ಹಿಂದೆ ಬಂಧಿಸಿದ್ದರು. ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ತಕರಾರು ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತಕರಾರು ಅರ್ಜಿ ವಿಚಾರಣೆ ಅಂತ್ಯವಾಗಿದ್ದು ಏಪ್ರಿಲ್ 3ಕ್ಕೆ ಆದೇಶ ಕಾಯ್ದಿರಿಸಿ ಕೋರ್ಟ್ ಅದೇಶಿಸಿದೆ. ಹೌದು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ಅಂತ್ಯವಾಗಿದೆ. ಏಪ್ರಿಲ್ 3ಕ್ಕೆ ತಕರಾರು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 3 ರಂದೇ ತೀರ್ಪು ಪ್ರಕಟಿಸಲಿದೆ.

Read More

ಬೆಳಗಾವಿ : ಕಳೆದ ವರ್ಷ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿಹಾಕಿ ಬಟ್ಟೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಘಟನೆ ಇಡೀ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬೆಳಗಾವಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು ಅಳಿಯನೊಬ್ಬ ರಸ್ತೆಯಲ್ಲೇ ಅತ್ತೆಯ ಬಟ್ಟೆ ಹರಿದು, ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.ಅಳಿಯ ಭೈರು ಮೇತ್ರಿ‌ ಹಾಗೂ ಕುಟುಂಬಸ್ಥರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹೌದು ಪಾಪಿ ಅಳಿಯನೊಬ್ಬ ಕ್ಷುಲ್ಲಕ ಕಾರಣಕ್ಕೆ ಅತ್ತೆಯ ಬಟ್ಟೆ ಹರಿದು, ಬೆತ್ತಲೆಗೊಳಿಸಿ ರಸ್ತೆಯಲ್ಲಢ ಸಾರ್ವಜನಿಕವಾಗಿ ಹಲ್ಲೆಗೈದ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ನಡೆದಿದೆ. 12 ದಿನಗಳ ಹಿಂದೆಯಷ್ಟೇ ಮಹಿಳೆಯ ಮಗಳಿಗೆ ಹೆರಿಗೆಯಾಗಿತ್ತು. ಆದರೆ ಪತ್ನಿಯನ್ನು ಮನೆಗೆ ಕಳುಹಿಸಿಕೊಡುವಂತೆ ಪತಿ ಒತ್ತಾಯಿಸಿದ್ದಾನೆ. ಈ ವೇಳೆ ಅತ್ತೆ, 4 ತಿಂಗಳ ಬಳಿಕ ಕಳುಹಿಸ್ತೇವೆ ಎಂದು ಹೇಳಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಹರಿದ ನೈಟಿಯಲ್ಲೇ ಮಹಿಳೆ ಕಮಿಷನರ್​ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ದೂರಿನಲ್ಲಿ, ನನ್ನ ಅಳಿಯ ಹಾಗೂ ಆತನ ಕುಟುಂಬಸ್ಥರು ನನ್ನ…

Read More

ನವದೆಹಲಿ : ದೇಶಾದ್ಯಂತ ಹಲವಾರು ಬಳಕೆದಾರರಿಗೆ ಅಪ್ಲಿಕೇಶನ್‌ಗಳಾದ್ಯಂತ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳು ಸ್ಥಗಿತಗೊಂಡಿವೆ. ಡೌನ್‌ಡೆಕ್ಟರ್ ಪ್ರಕಾರ, ಸಂಜೆ 7:50 ರ ಹೊತ್ತಿಗೆ UPI ಸ್ನ್ಯಾಗ್‌ಗೆ ಸಂಬಂಧಿಸಿದಂತೆ 2,750 ದೂರುಗಳು ಬಂದಿವೆ. ವೆಬ್‌ಸೈಟ್ ಪ್ರಕಾರ Google Pay ಬಳಕೆದಾರರಿಂದ 296 ದೂರುಗಳು ಬಂದಿವೆ.ಅದೇ ರೀತಿ, Paytm ಅಪ್ಲಿಕೇಶನ್‌ಗೆ ಸಂಬಂಧಿಸಿದಂತೆ 119 ದೂರುಗಳು ಬಂದಿದ್ದರೆ, 376 ಬಳಕೆದಾರರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ಲಾಟ್‌ಫಾರ್ಮ್‌ನಲ್ಲಿನ ಸ್ಥಗಿತದ ಬಗ್ಗೆ ದೂರು ನೀಡಿದ್ದಾರೆ. ಹೆಚ್ಚಿನ SBI ಬಳಕೆದಾರರು ಹಣ ವರ್ಗಾವಣೆ ಮತ್ತು ಆನ್‌ಲೈನ್ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಬಗ್ಗೆ ದೂರು ನೀಡಿದ್ದಾರೆ. “ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು UPI ಡೌನ್‌ಟೈಮ್ ಅನ್ನು ಅನುಭವಿಸಿದ್ದೇನೆ. ಬ್ಯಾಂಕ್‌ಗಳು ಅಥವಾ ಗೇಟ್‌ವೇಗಳಲ್ಲ, ಆದರೆ @UPI_NPCI ಸ್ವತಃ btw, ಅಪ್‌ಟೈಮ್ ಫೆಬ್ರವರಿಯಲ್ಲಿ 100% ಆಗಿತ್ತು” ಎಂದು X ಬಳಕೆದಾರರು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು X ನಲ್ಲಿ ಪೋಸ್ಟ್ ಮಾಡಿದ್ದಾರೆ, “ಇದು…

Read More

ಬೆಂಗಳೂರು : ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗಿದ್ದು, ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಆದೇಶಿಸಿದೆ. ಇದೇ ವಿಚಾರವಾಗಿ ಟ್ವೀಟ್ ಮೂಲಕ ಕಾಂಗ್ರೆಸ್ ಯತ್ನಾಳ್ ಉಚ್ಚಾಟನೆಯನ್ನು ವ್ಯಂಗ್ಯವಾಡಿದೆ. ಟ್ವೀಟ್ ನಲ್ಲಿ ಈಗ ‘ಸಂತೋಷ’ ವಾಯಿತೇ? ಆ ಜೀ ಈ ಜೀ ಗಳ ಮಾತುಕೇಳಿ ರಾಜಕೀಯ ಜೀವನ ಹಾಳು ಮಾಡಿಕೊಂಡ ಯತ್ನಾಳ್ ಎಂದು ಉಚ್ಚಾಟನೆ ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದೆ. ಭ್ರಷ್ಟ ಅಪ್ಪ ಮಕ್ಕಳ ಸೂಟ್ ಕೇಸ್ ರಾಜಕೀಯಕ್ಕೆ ಬಗ್ಗಿದ ಬಿಜೆಪಿ ಹೈಕಮಾಂಡ್, ನಾಗಪುರದ ಬಿಜೆಪಿಯನ್ನು ಸೋಲಿಸಿದ ಕರ್ನಾಟಕ ಬಿಜೆಪಿ, ಇಂದು ಇಲಿಯಾದ ಯತ್ನಾಳ್ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. https://twitter.com/INCKarnataka/status/1904889346333040896?t=GFb0l9JyufMeG47941-Jqw&s=19

Read More

ಬೆಂಗಳೂರು : ಸೈಬರ್ ಕ್ರೈಂ ಪ್ರಕರಣದ ತನಿಖೆ‌ ಕೈಗೊಳ್ಳಲು ಇಬ್ಬರು ಪೊಲೀಸ್ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಮಧುಸೂದನ್ ಬಿ.ಎಸ್. ಎಂಬವರ ಕಂಪನಿಯ ವೆಬ್‌ಸೈಟ್ ಹ್ಯಾಕ್ ಮಾಡಿ, ಆರ್ಥಿಕ‌ ನಷ್ಟವುಂಟು ಮಾಡಲಾಗಿತ್ತು. ಕೆಲಸದಿಂದ ತೆಗೆದು ಹಾಕಿದ ಸಿಟ್ಟಿಗೆ ಕಂಪನಿಯ ಮಾಜಿ ಉದ್ಯೋಗಿಯೊಬ್ಬನಿಂದ ಕೃತ್ಯ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿ, ಈಶಾನ್ಯ ವಿಭಾಗದ ಸಿಇಎನ್ ಠಾಣೆಗೆ ಮಧುಸೂಧನ್ ದೂರು ನೀಡಿದ್ದರು. ಆದರೆ ಅನುಮಾನಿತ ಆರೋಪಿಯನ್ನು ವಿಚಾರಣೆ ನಡೆಸಿ ಪ್ರಕರಣದ ತನಿಖೆ ಕೈಗೊಳ್ಳಲು ಪ್ರತಿಯಾಗಿ 4 ಲಕ್ಷ ರೂ. ಲಂಚಕ್ಕೆ ಆರೋಪಿಗಳು ಬೇಡಿಕೆಯಿಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರಿಗೆ ಮಧುಸೂದನ್ ದೂರು ನೀಡಿದ್ದರು.ಇ ಹಿನ್ನೆಲೆ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಬೆಂಗಳೂರು ಈಶಾನ್ಯ ವಿಭಾಗದ ಸಿಇಎನ್ ಠಾಣೆಯ ಎಸಿಪಿ ತನ್ವೀರ್ ಎಸ್. ಆರ್. ಹಾಗೂ ಎಎಸ್ಐ ಕೃಷ್ಣಮೂರ್ತಿ ಅವರನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

Read More

ವಿಜಯಪುರ : ಸ್ವಪಕ್ಷದ ನಾಯಕರ ವಿರುದ್ಧವೇ ಇಲ್ಲಸಲ್ಲದ ಆರೋಪ ಮಾಡಿದ್ದು ಅಲ್ಲದೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿರುವ ನೋಟಿಸ್ ಗೂ ಉತ್ತರಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶಿಸಿದೆ. ಶಾಸಕ ಯತ್ನಾಳರನ್ನು ಹುಚ್ಚಾಟಿಸಿದ ಬೆನ್ನಲ್ಲೇ ಇದೀಗ ಅವರ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದ್ದು, ವಿಜಯಪುರ ಬಿಜೆಪಿ ನಗರ ಮೋರ್ಚಾ ಉಪಾಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಹೌದು ಬಿಜೆಪಿ ನಗರ ಓಬಿಸಿ ಮೋರ್ಚ ಉಪಾಧ್ಯಕ್ಷ ರಾಜೀನಾಮೆ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಭೀಮು ಮಾಶಾಳ ಇದೀಗ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ ಹೂಗಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ವಾಟ್ಸಪ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದು, ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದೆ. ಬಿಜೆಪಿ ವಿಜಯಪುರ ನಗರ ಓಬಿಸಿ ಮೂರ್ಛೆ ಉಪಾಧ್ಯಕ್ಷ ಭೀಮು ಮಾಶಾಳ ರಾಜೀನಾಮೆ ಸಲ್ಲಿಸಿದ್ದಾರೆ.

Read More

ಬೆಂಗಳೂರು : ಸ್ವಪಕ್ಷ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದು ಅಲ್ಲದೆ, ಕಳೆದ ಫೆಬ್ರವರಿ 10ರಂದು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಈ ವಿಚಾರವಾಗಿ ಶಾಸಕ ಯತ್ನಾಳ್ ಸತ್ಯವಂತರಿಗಿದು ಕಾಲವಲ್ಲ ದುಷ್ಟ ಜನರಿಗೆ ಸುಭಿಕ್ಷ ಕಾಲ ಎಂದು ಟ್ವೀಟ್ ಮಾಡಿದ್ದಾರೆ. ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ.’ಸ್ಪೇಡ್ ಅನ್ನು ಕರೆಯುವುದು, ಸ್ಪೇಡ್ ಅನ್ನು ಕರೆಯುವುದು’ ಎಂಬುದಕ್ಕೆ ಪಕ್ಷವು ನನಗೆ ಪ್ರತಿಫಲ ನೀಡಿದೆ. ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ. ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ…

Read More

ಧಾರವಾಡ : ಹುಬ್ಬಳ್ಳಿಯಲ್ಲಿ ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿದ್ದ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿತ್ತು. ಆದರೆ ಈಗ ಕಾಂಗ್ರೆಸ್ ಕಚೇರಿ ನಿರ್ಮಿಸಲು ಅನುಮತಿ ನೀಡಿದ್ದ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತಡೆ ನೀಡಿದೆ. ಹೌದು ಹುಬ್ಬಳ್ಳಿಯ ಕೇಶ್ವಾಪುರ ಸರ್ಕಲ್ ಬಳಿಯ 25ಗುಂಟೆಗಿಂತಲೂ ಅಧಿಕ ಜಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿತ್ತು. ಈ ಜಾಗದಲ್ಲಿ ಕಾಂಗ್ರೆಸ್ ಕಚೇರಿ ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶೇಕಡಾ 5 ರಷ್ಟು ಹಣವನ್ನು ಪಾಲಿಕೆಗೆ ನೀಡಿ, 25ಗುಂಟೆಗಿಂತಲೂ ಅಧಿಕ ಭೂಮಿಯ ಹಕ್ಕುನ್ನು ಪಡೆಯಲು ಕ್ಯಾಬಿನೆಟ್ ತೀರ್ಮಾನ ಮಾಡಿತ್ತು. ಸಂಪುಟದ ಈ ನಿರ್ಧಾರಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು.ಇದನ್ನು ಪ್ರಶ್ನಿಸಿ ಬಿಜೆಪಿ ಸದಸ್ಯರಾದ ಸಂತೋಷ ಚವ್ಹಾಣ್ ಹಾಗೂ ಬೀರಪ್ಪ ನ್ಯಾಯಾಲಯದ ಮೋರೆ ಹೋಗಿದ್ದರು. ವಾದ-ಪ್ರತಿವಾದ ಆಲಿಸಿದ ಕರ್ನಾಟಕ ಹೈಕೋರ್ಟ್​ನ ಧಾರವಾಡ…

Read More

ಬೆಂಗಳೂರು : ಪದೇ ಪದೇ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ಮಾಡುತ್ತಾ ಅಲ್ಲದೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ನೀಡಿದ್ದರು ಸಹ ಅದಕ್ಕೆ ಉತ್ತರ ನೀಡದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲರನ್ನು ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ, ಶಾಸಕ ಯತ್ನಾಳ್ ವಿರುದ್ಧ ಕ್ರಮ ಅನಿವಾರ್ಯ ಎಂದು ತಿಳಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ @BasanagoudaBJP…

Read More