Author: kannadanewsnow05

ವಿಜಯಪುರ : ಕಳೆದ ಕೆಲವು ದಿನಗಳ ಹಿಂದೆ ವಿಜಯಪುರದ ಮದಿನಾನ ನಗರದ ಬಳಿ ಭೀಮಾ ತೀರದ ಹಂತಕ ಭಾಗಪ ಹರಿಜನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದಿತ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರದ 2ನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿಗಳಾದ ಪ್ರಕಾಶ್ ಮೇಲಿನಕೇರಿ ಅಲಿಯಾಸ್ ಪಿಂಟ್ಯಾ, ರಾಹುಲ್ ತಳಕೇರಿ, ಮಣಿಕಂಠ ಬೆನಕಪ್ಪ ಹಾಗೂ ಸುದೀಪ್ ಕಾಂಬಳೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರದ 2ನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣ ಹಿನ್ನೆಲೆ ಫೆಬ್ರವರಿ 11 ರಂದು ರಾತ್ರಿ ವಿಜಯಪುರ ನಗರದ ಮದೀನಾ ನಗರದ ಬಾಡಿಗೆ ಮನೆಯಲ್ಲಿದ್ದ ಭೀಮಾತೀರದ ಹಂತಕ ಬಾಗಪ್ಪ ಹರಿಜನನ್ನು ಪ್ರಕಾಶ ಅಲಿಯಾಸ್​ ಪಿಂಟ್ಯಾ, ರಾಹುಲ ಭೀಮಾಶಂಕರ ತಳಕೇರಿ, ಸುದೀಪ ಕಾಂಬಳೆ ಹಾಗೂ ಮಣಿಕಂಠ ಅಲಿಯಾಸ್​ ಗದಿಗೆಪ್ಪ ಶಂಕ್ರಪ್ಪ ಬೆನಕೊಪ್ಪ ಭಾಗಪ್ಪನನ್ನು ಕೊಡಲಿ ಮತ್ತು ತಲ್ವಾರ್​​ನಿಂದ ಕೊಚ್ಚಿ…

Read More

ಕೊಪ್ಪಳ : ಪೊಲೀಸರ ಸೋಗಿನಲ್ಲಿ ಬಂದ ವಂಚಕರನ್ನು ಅರಿಯದೇ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ. ಬಂಗಾರದ ಚೈನ್ ಅನ್ನು ಭದ್ರವಾಗಿ ಕಟ್ಟಿಕೊಡುತ್ತೇವೆಂದು ಮಹಿಳೆಗೆ ಕಲ್ಲು ಕಟ್ಟಿಕೊಟ್ಟು ಯಾಮಾರಿಸಲಾಗಿದೆ.ಮಹಿಳೆ ಕೂಡಲೇ ಕುಕನೂರು ಪೋಲಿಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಹೌದು ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ನಿವಾಸಿ ಸುಮಾ ಅಲಬೂರ ಎಂಬವರ ಒಂದೂವರೆ ತೊಲೆಯ ಬಂಗಾರದ ಸರವನ್ನು ಪೊಲೀಸರ ಸೋಗಿನಲ್ಲಿ ಕಳ್ಳರು ಕದ್ದು ಪರಾರಿಯಾಗಿದ್ದಾರೆ.ಇಬ್ಬರು ಬಂದು, ತಾವು ಪೊಲೀಸ್‌ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾರೆ. ಪಟ್ಟಣದಲ್ಲಿ ಕಳ್ಳತನದ ಹಾವಳಿ ಹೆಚ್ಚಾಗಿದೆ. ಆಭರಣ ಮೈಮೇಲೆ ಧರಿಸಿ ಓಡಾಡಬೇಡಿ. ಹೀಗೆ ಓಡಾಡಿದರೆ ಯಾರಾದರೂ ಕಳ್ಳರು ಕದ್ದು ಪರಾರಿಯಾಗುತ್ತಾರೆ ಎಂದು ಹೇಳಿದ್ದಾರೆ. ಈ ವೇಳೆ ಮಹಿಳೆ ಇಬ್ಬರೂ ಕಳ್ಳರ ಮೈ ಮೇಲೆ ಪೊಲೀಸ್ ಸಮವಸ್ತ್ರ ಇಲ್ಲದಿರುವುದನ್ನು ನೋಡಿ ಪ್ರಶ್ನಿಸಿದ್ದಾಳೆ. ಆಗ ಸಮವಸ್ತ್ರದಲ್ಲಿ ಬಂದರೆ ಕಳ್ಳರು ಸಿಗಲ್ಲ ಎಂದು ಮಹಿಳೆಗೆ ತಿಳಿಸಿದ್ದಾರೆ.ಪಕ್ಕದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಇದೇ ರೀತಿ ಹೇಳಿ ಆತ ಬಿಚ್ಚಿಕೊಟ್ಟ…

Read More

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿದ್ದ ಮಾತ್ರಕ್ಕೆ ಅವರಿಗೆ ಏನು ಕಿರೀಟ ಇರಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಡಿಕೆ ಶಿವಕುಮಾರ್ ಅವರ ಕುರಿತು ಹೇಳಿಕೆ ನೀಡಿದ್ದರು. ಇದೇ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ ರವರು ಕೆ ಎನ್ ರಾಜಣ್ಣ ಅವರ ಹೇಳಿಕೆಗೆ ತಿರುಗೇಟು ನೀಡಿದ್ದು, ಕೆಪಿಸಿಸಿ ಅಧ್ಯಕ್ಷರಿಗೆ ಕೊಂಬು ಇರುತ್ತೋ ಇಲ್ಲವೋ ಎನ್ನುವುದು ಹೈಕಮಾಂಡ್ ಗೆ ಗೊತ್ತಿರುತ್ತದೆ ಎಂದು ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿ ಎನ್ನುವ ಭಾವನೆ ಎಲ್ಲರಿಗೂ ಇದೆ. ಕೆ ಎನ್ ರಾಜಣ್ಣಗೆ ಡಿಕೆ ಶಿವಕುಮಾರ್ ಮೇಲೆ ಪ್ರೀತಿ ಇದೆ. ಅದಕ್ಕೆ ಅವರು ಹಾಗೆ ಮಾತನಾಡುತ್ತಾರೆ. ಕಲ್ಲಿಗೆ ಏಟು ಬಿದ್ದಾಗಲೇ ಶಿಲೆ ಆಗುವುದು. ಅವರು ತಟ್ಟುತ್ತಿದ್ದಾರೆ ತಟ್ಟಲಿ. ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಕೊಂಬು ಇದೆಯೋ ಇಲ್ಲವೋ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೋ ಇಲ್ವೋ ಮುಖ್ಯಮಂತ್ರಿ AICC ಅಧ್ಯಕ್ಷರು, ರಾಜ್ಯ ಉಸ್ತುವಾರಿಗಳನ್ನ ಕೇಳಿ.…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪಿಜಿಯಲ್ಲಿ ವಾಸವಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹನುಮಂತ ನಗರದ ಪಿಜಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ವಿದ್ಯಾರ್ಥಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಆದಿತ್ಯಾ ಸಿಂಗ್ (19) ಎಂದು ತಿಳಿದುಬಂದಿದೆ. ಆದಿತ್ಯ ಸಿಂಗ್ ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 1st ಸೆಮಿಸ್ಟರ್ ಒದುತ್ತಿದ್ದನು. ಈತ ಮೂಲತಃ ಉತ್ತರಪ್ರದೇಶ ರಾಜ್ಯದವನಾಗಿದ್ದು, ಬೆಂಗಳೂರಿನಲ್ಲಿ ಅಭ್ಯಾಸ ಮಾಡುತ್ತಿದ್ದನು. ಆದರೆ, ಈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲಿಯೇ ಹನುಮಂತನರದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಹನುಮಂತನಗರ ಠಾಣೆ ಪೊಲೀಸರು ಪಿಜಿಗೆ ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ಮೃತದೇಹದ ಪೋಸ್ಟ್ ಮಾರ್ಟಂ ಬಳಿಕ ಪೋಷಕರಿಗೆ ಶವ ಹಸ್ತಾಂತರಿಸಲಾಗಿದೆ 2ನೇ ಪ್ರಕರಣ ಕಳೆದ ತಿಂಗಳು ಅಂದರೆ ಜ.18ರಂದು ಇದೇ ಬಿಎಂಎಸ್ ಕಾಲೇಜಿನ ಬಹುಮಹಡಿ…

Read More

ವಿಜಯಪುರ : ವಿಜಯಪುರ ಜಿಲ್ಲೆಯ ವಿವಿಧ ಪೊಲೀಸ್ ಹಣ ವ್ಯಾಪ್ತಿಯಲ್ಲಿ 10 ಕಂಟ್ರಿ ಪಿಸ್ತೂಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ 24 ಜೀವಂತ ಗುಂಡುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ವಿಜಯಪುರ ತಾಲೂಕಿನ ಹಂಚಿನಾಳ ತಾಂಡದ ಪ್ರಕಾಶ ರಾಥೋಡ್ ಪ್ರಕಾಶ್ ರಾಠೋಡ್ ಬಳಿದ್ದ 1 ಕಂಟ್ರಿ ಸ್ಕೂಲ್ 3 ಜೀವಂತ ಗುಂಡುಗಳು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೆ ಇನ್ನು 9 ಕಂಟ್ರಿ ಪೋಸ್ಟಲ್ ಗಳನ್ನು ಹಾಕಿ ಪಡೆದುಕೊಂಡಿರುವ ಪೊಲೀಸರು ಒಟ್ಟು 24 ಜೀವಂತ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ. 9 ಜನರನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಆಗಾಗ ಸಂಭವಿಸುತ್ತದೆ ಇದೀಗ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಮನೆಯಲ್ಲಿದ್ದ ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು ಅಡುಗೆ ಅನಿಲ ಸೋರಿಕೆಯಾಗಿ ಮನೆಯಲ್ಲಿದ್ದ 6 ಜನರಿಗೆ ಗಾಯಗಳಾಗಿರುವ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊಂದಿಕೊಂಡಿದೆ. ಮನೇಲಿದ್ದ ಮಕ್ಕಳು ಸೇರಿ 6 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳಿಗೆ ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

Read More

ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ. ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ…

Read More

ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಶಾಲೆಯ ಮೇಲೆ ಹೆಜ್ಜೆನು ದಾಳಿ ಮಾಡಿದೆ. ಪ್ರಾರ್ಥನೆ ಮುಗಿಸಿ ಶಾಲೆಯೊಳಗೆ ಹೋಗುವಾಗ ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ಮಾಡಿದೆ. ಶಾಲೆಯ ಸುಮಾರು 15 ಮಕ್ಕಳ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಕಕ್ಕಿಂಜೆ ಆಸ್ಪತ್ರೆಯಲ್ಲಿ ಸದ್ಯಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಜ್ಜೆನು ದಾಳಿ ಹಿನ್ನೆಲೆಯಲ್ಲಿ ಶಿಕ್ಷಕರು ಶಾಲೆಗೆ ರಜೆ ನೀಡಿದ್ದಾರೆ.

Read More

ಕೋಲಾರ : ಮನೆಯ ಮುಂದಿನ ರಸ್ತೆಯ ವಿಚಾರಕ್ಕೆ ವ್ಯಕ್ತಿಯ ಮೇಲೆ ಹಾರೆಯಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಮನೆಯ ಮುಂದಿನ ರಸ್ತೆ ವಿಚಾರಕ್ಕೆ ವ್ಯಕ್ತಿ ಒಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹಾರೆಯಿಂದ ಹೊಡೆದು ಮಂಜುನಾಥ್ (38) ಎನ್ನುವ ವ್ಯಕ್ತಿಯೊಬ್ಬರ ಹತ್ಯೆಯಾಗಿದೆ. ಕಣ್ಣೂರು ಗ್ರಾಮದ ಮುನಿವೆಂಕಟಪ್ಪ ಹಾಗೂ ರಾಜೇಶ್ ಎಂಬುವವರು ಮಂಜುನಾಥ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಮಂಜುನಾಥ್ ಹಾಗೂ ಮುನಿ ವೆಂಕಟಪ್ಪ ಕುಟುಂಬದ ನಡುವೆ ಈ ಒಂದು ಗಲಾಟೆ ನಡೆದಿದೆ.ರಸ್ತೆ ವಿವಾದ ವಿಚಾರಕ್ಕೆ ಹಾರಯಿಂದ ಹೊಡೆದು ಮಂಜುನಾಥನನ್ನು ಕೊಲೆ ಮಾಡಿದ್ದಾರೆ. ಕ್ಯಾಸಂಬಳ್ಳಿ ಠಾಣೆ ಪೋಲಿಸರಿಂದ ಮುನಿ ವೆಂಕಟಪ್ಪ ಹಾಗೂ ರಾಜೇಶನ್ನು ಬಂಧಿಸಿದ್ದು, ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಾವಣಗೆರೆ : ಸಾಮಾನ್ಯವಾಗಿ ಬೇಸಿಗೆ ಬಂತೆಂದರೆ ಸಾಕು ಲೋಡ್ ಹೆಡಿಂಗ್ ಕಾಮಗಾರಿ ಅಂತ ಹೆಸರು ಹೇಳಿ ಪದೇ ಪದೇ ಕರೆಂಟ್ ತೆಗೆಯುತ್ತಿದ್ದರು ಆದರೆ ಈ ಬಾರಿ ಎಲ್ಲೂ ಕೂಡ ಹಾಗೆ ಇಲ್ಲ. ರಾಜ್ಯದಲ್ಲಿ ಎಲ್ಲೂ ಲೋಡ್ ಶೆಡ್ಡಿಂಗ್ ಇಲ್ಲ ಎಂದು ಇಂಧನ ಖಾತೆಯ ಸಚಿವ ಕೆಜೆ ಜಾರ್ಜ್ ಅವರು ಸ್ಪಷ್ಟಪಡಿಸಿದರು. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲೂ ಕೂಡ ಲೋಡ್ ಶೆಡ್ಡಿಂಗ್ ಇಲ್ಲ ಕೆಲವು ಕಡೆಗಳಲ್ಲಿ ನಿರ್ವಹಣೆ ಇದ್ದಾಗ ತೊಂದರೆಯಾಗಿರಬಹುದು ಅಷ್ಟೇ. ಅದು ಬಿಟ್ಟು ಎಲ್ಲೂ ಲೋಡ್ ಶೆಡ್ಡಿಂಗ್ ಎನ್ನುವ ಮಾತೇ ಇಲ್ಲ ಎಂದು ಅವರು ತಿಳಿಸಿದರು. ಇನ್ನು ವಿದ್ಯುತ್ ದರ ಏರಿಕೆಯಾಗುತ್ತೆ ಎನ್ನುವುದರ ಕುರಿತು, ವಿದ್ಯುತ್ ದರ ಏರಿಕೆಯಾದ ತಕ್ಷಣ ಗೃಹಜ್ಯೋತಿ ಯೋಜನೆ ನಿಲ್ಲಿಸಲ್ಲ. ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಇಂಧನ ಇಲಾಖೆ ಸಚಿವ ಜಯ ಜಾರ್ಜ್ ಹೇಳಿಕೆ ನೀಡಿದರು.

Read More