Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಮುಡಾ ಹಗರಣದ ಸಂಕಷ್ಟದ ನಡುವೆ ಕೂಡ ಕ್ಷಮಿಸಿದ್ದರಾಮಯ್ಯ ಅವರು ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಆಯುಧ ಪೂಜೆ ವಿಜಯದಶಮಿ ಹಾಗೂ ಇಂದು ನಡೆವ ಜಂಬೂ ಸವಾರಿ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳ ಅಲ್ಲಿ ಅವರು ಭಾಗವಹಿಸಲಿದ್ದಾರೆ. ಇಂದು ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ವೈರಿಗಳು ಇರುತ್ತಾರೆ ಹಿತೈಷಿಗಳು ಕೂಡ ಇರುತ್ತಾರೆ, ನನಗೆ ದೇವರ ಆಶೀರ್ವಾದವಿದೆ ಎಂದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ಧರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಡಿನ ಜನರಿಗೆ ದಸರಾ ಹಬ್ಬದ ಶುಭಾಶಯಗಳು ತಿಳಿಸಿದ ಸಿಎಂ ಸಿದ್ದರಾಮಯ್ಯ ಅವರು, ನಾಳೆ ನಡೆಯುವ ಜಂಬೂಸವಾರಿಯಲ್ಲಿ ನಾನು ಭಾಗವಹಿಸುತ್ತೇನೆ. ಸುಧೀರ್ಘವಾಗಿ ಹೆಚ್ಚು ಬಾರಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡುತ್ತಿದ್ದೇನೆ. ನಾಡಿನ ಜನ ಹಾಗೂ ದೇವರ ಆಶೀರ್ವಾದದಿಂದ ಪುಷ್ಪರ್ಚನೆ ಮಾಡುತ್ತಿದ್ದೇನೆ ಎಂದು ತಿಳಿಸಿದರು. ನನ್ನ ಮೇಲೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಸದಾ ಇರುತ್ತದೆ. ಜನರು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಅದಕ್ಕೆ ಇಷ್ಟೊಂದು ಬಾರಿ…
ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಹಳೆ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆದ ವಿಚಾರವಾಗಿ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ಅವರು, ಭಾರತದ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಅಂತವರನ್ನ ಪೂಜಿಸುವ ಬಿಜೆಪಿಯಿಂದ ಏನು ನಿರೀಕ್ಷಿಸಲು ಸಾಧ್ಯ? ಎಂದು ವಾಗ್ದಾಳಿ ನಡೆಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಕಾಂಗ್ರೆಸ್ ಮೊಟ್ಟ ಮೊದಲ ಬಾರಿಗೆ ಒಳ್ಳೆಯ ಕೇಸನ್ನು ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು. ಹಳೆ ಹುಬ್ಬಳ್ಳಿ ಕೇಸ್ ಹಿಂಪಡೆದ ವಿಚಾರವಾಗಿ ಪ್ರಹ್ಲಾದ್ ಜೋಶಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಭಾರತದ ಮೊಟ್ಟ ಮೊದಲ ಭಯೋತ್ಪಾದಕ ನಾಥೂರಾಮ್ ಗೋಡ್ಸೆ. ಗೋಡ್ಸೆಯನ್ನು ಬಿಜೆಪಿ ಪ್ರಹ್ಲಾದ್ ಜೋಶಿ ಪೂಜೆ ಮಾಡುತ್ತಾರೆ. ಇಂಥವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿ : 2022 ರಲ್ಲಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಂತಹ ಗಲಭೆ ಪ್ರಕರಣವನ್ನು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಹಿಂಪಡೆದ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷ ಹಾಗೂ ರಾಹುಲ್ ಗಾಂಧಿಯವರ ಬ್ಯಾಟರಿ ಡೌನ್ ಆಗಿದೆ ಎಂದು ವ್ಯಂಗ್ಯವಾಡಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪರ ಜೀವಿ ಪಕ್ಷ. ಬೇರೆಯವರ ಬಲದ ಮೇಲೆ ಕಾಂಗ್ರೆಸ್ನವರು ಬದುಕುತ್ತಾರೆ. ಕಾಂಗ್ರೆಸ್ ಕುರುಡು ಪಾರ್ಟಿ ಆಗಿದೆ. ಮುಂದೆ ಹೋಗಬೇಕಾದರೆ ಬೇರೆಯವರು ಹೆಗಲು ಕೊಡಬೇಕಾಗಿದೆ ಹೀಗಾಗಿ ಕಾಂಗ್ರೆಸ್ ಪಕ್ಷದವರಿಗೆ ಕೆಲವರು ಹೆಗಲು ಕೊಡುತ್ತಿದ್ದಾರೆ. ದೇಶದಲ್ಲಿ ಇವಿಎಂ ವ್ಯವಸ್ಥೆ ಬಂದಿರೋದು ಕಾಂಗ್ರೆಸ್ ಆಡಳಿತ. ಸಮಸ್ಯೆ ಆಗಿದೆ ಅಂದ್ರೆ ರಾಹುಲ್ ಗಾಂಧಿ ಬ್ಯಾಟರಿ ಡೌನ್ ಆಗಿದೆ ಅಂತ ಅರ್ಥ ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಬ್ಯಾಟರಿ ಡೌನ್ ಆಗಿದೆ. ಕಾಂಗ್ರೆಸ್ ಪಾರ್ಟಿ ಬ್ಯಾಟರಿ ಫೇಲ್ ಆಗಿದೆ ಅದು ಚಾರ್ಜ್…
ಬೆಂಗಳೂರು : ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ ಕಳೆದ ಬಾರಿಯೇ ಈ ವಿಷಯ ಪ್ರಸ್ತಾಪ ಮಾಡಿದ್ದೆ. ಕರ್ನಾಟಕದ ಸೇರಿ ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅಂತ ಹೇಳಿದ್ದೆ. ಹೊರತು ಪ್ರತ್ಯೇಕ ದಕ್ಷಿಣ ಭಾರತ ನನ್ನ ಕೂಗಲ್ಲ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಈ ಕೂಗು ಇತ್ತು. ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೆಂಗಳೂರಿನಲ್ಲಿ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದ್ದು, ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ಅನ್ಯಾಯ ಅಂತ ಹೇಳಿದ್ದೆ. ನಿನ್ನೆ ಕೇಂದ್ರ ಸರ್ಕಾರ ತೆರಿಗೆ ಹಣ ಬಿಡುಗಡೆ ಮಾಡಿದೆ. ದಕ್ಷಿಣ ಭಾರತಕ್ಕೆ 28, 152 ಕೋಟಿ ರೂಪಾಯಿ ನೀಡಿದ್ದಾರೆ.ಉತ್ತರ ಪ್ರದೇಶಕ್ಕೆ ಮಾತ್ರ 32,000 ಕೋಟಿ ಕೊಟ್ಟಿದ್ದಾರೆ. ಪದೇ ಪದೇ ಕೆಣಕುವ ಪ್ರಯತ್ನ ನಡೆಯುತ್ತಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲವಿದೆ ಆದರೆ ಅವರು…
ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತಹ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 43 ಪ್ರಕರಣಗಳನ್ನು ಸಂಪುಟ ಹಿಂಪಡೆದಿತ್ತು. ಈ ಒಂದು 43 ಕೇಸ್ ಗಳಲ್ಲಿ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಕೂಡ ಒಂದಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆಗೆ ಮುಂದಾಗಿದೆಯಾ ಎಂಬ ಅನುಮಾನ ಮೂಡುತ್ತಿದೆ. ಹೌದು ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 16.4.2022 ರಂದು ಹಳೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಗಲಭೆ ಪ್ರಕರಣ ನಡೆದಿದೆ. 43 ಕೇಸ್ ಪ್ರಕರಣಗಳನ್ನು ಪಡೆದಿದೆ. ಆ ಒಂದು 43 ಪ್ರಕರಣಗಳಲ್ಲಿ ಹುಬ್ಬಳ್ಳಿಯ ಗಲಭೆ ಕೇಸ್ ಕೂಡ ಒಂದಾಗಿದೆ. ಹುಬ್ಬಳ್ಳಿಯ ಹಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಗಲಭೆ ನಡೆದಿತ್ತು. ಪ್ರಕರಣ ಹಿನ್ನೆಲೆ? ಮಸೀದಿ ಮೇಲೆ ಭಗವಾಧ್ವಜ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕೆ ಏಪ್ರಿಲ್ 16, 2022ರಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಗಲಭೆ ನಡೆದಿತ್ತು. ಸಾವಿರಾರು ಮುಸ್ಲಿಮರು ಪೊಲೀಸ್ ಠಾಣೆ ಮುಂದೆ ಸೇರಿ…
ಮೈಸೂರು : ದುಷ್ಟ ಶಕ್ತಿಗಳ ಎದುರು ಸತ್ಯದ ಜಯ ಎಂಬ ಕಾಂಗ್ರೆಸ್ ಪತ್ರಿಕಾ ಜಾಹಿರಾತು ವಿಚಾರವಾಗಿ ಮೈಸೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದು, ದುಷ್ಠ ಶಕ್ತಿಗಳು ಯಾರು ಎಂಬುದನ್ನು ಸರ್ಕಾರ ತೀರ್ಮಾನ ಮಾಡಲ್ಲ, ಜನರು ತೀರ್ಮಾನ ಮಾಡುತ್ತಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರು ಸರ್ಕಾರದ ಹಣ, ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ಯಾರು ಭಷ್ಟಾಚಾರವನ್ನೇ ಉದ್ಯಮ ಮಾಡಿಕೊಂಡಿದ್ದಾರೆ. ವರ್ಗಾವಣೆಗೂ ದುಡ್ಡು, ಕೆಲಸ ಕೊಡಿಸಲಿಕ್ಕೂ ದುಡ್ಡು. ಎಲ್ಲರದಲ್ಲೂ ದುಡ್ಡು ತಗೋಳ್ತಾರೆ, ಅಂತವರು ಯಾವ ದೃಷ್ಟರ ಬಗ್ಗೆ ಮಾತನಾಡುತ್ತಾರೆ ಅವರಿಗೆ ಅವರೇ ಪ್ರಶ್ನೆ ಹಾಕಿಕೊಳ್ಳಬೇಕು. ಇಂತಹ ಜಾಹೀರಾತಿಗೆ ಸರ್ಕಾರದ ಹಣ ಬಳಕೆ ಮಾಡಿಕೊಂಡು ಅವರ ಮುಖಕ್ಕೆ ಅವರೇ ಮಸಿ ಬಳೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಮೈಸೂರಿನ ಮುಡಾ ಹಗರಣದಲ್ಲಿ ಸ್ವತಃ ಸಿಎಂ ಧರ್ಮಪತ್ನಿ ಸೈಟ್ ವಾಪಸ್ ಮಾಡಿದರು. ಯಾಕೆ ವಾಪಸ್ ಮಾಡಿದ್ರು, ತಪ್ಪು ಮಾಡಿದ್ರಿ ಅದಕ್ಕೆ ವಾಪಾಸ್ ನೀಡಿದ್ರಿ. ವಾಲ್ಮೀಕಿ ನಿಗಮದಲ್ಲಿ ಹಗರಣ ಆಗಿರೋದರ…
ಬೆಂಗಳೂರು : ಮುಂದಿನ ತಿಂಗಳು ನವೆಂಬರ್ 1ಕ್ಕೆ ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸುವ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಾರ್ಖಾನೆಗಳು, ಐಟಿಬಿಟಿ ಕಚೇರಿಗಳಲ್ಲಿ ಕನ್ನಡ ಬಾವುಟ ಹಾರಿಸುವುದು ಕಡ್ಡಾಯವೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ನವೆಂಬರ್ 1ರಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದರು. ಹೆದರಿಸಿದರೆ ಕಾನೂನು ಕ್ರಮ ಬೆಂಗಳೂರಿನಲ್ಲಿ ಎಲ್ಲರೂ ರಾಜೋತ್ಸವ ಆಚರಣೆ ಮಾಡುತ್ತಾರೆ. ರಾಜ್ಯೋತ್ಸವ ಆಚರಣೆಗೆ ಯಾವ ಕನ್ನಡ ಸಂಘಟನೆಗಳು ಕೂಡ ಒತ್ತಡ ಹೇರಬಾರದು. ಸರ್ಕಾರವೇ ಆದೇಶಿಸಿದೆ. ಅದರಂತೆ ರಾಜೋತ್ಸವ ಆಚರಣೆ ಮಾಡುತ್ತಾರೆ. ಆಚರಣೆ ಮಾಡದ ಸಂಸ್ಥೆ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು…
ವಿಜಯನಗರ : ಯುವಕ ಯುವತಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ನದಿಯ ಬಳಿ ಈ ಒಂದು ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ನದಿ ತೀರದಲ್ಲಿ ಯುವಕ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ಹಗ್ಗದಲ್ಲಿ ಯುವಕ ಮತ್ತು ಯುವತಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಮೃತ ಯುವಕ ಮತ್ತು ಯುವತಿಯ ಗುರುತು ಪತ್ತೆಯಾಗಿಲ್ಲ.ಆದರೆ ಯುವಕನ ಮೊಬೈಲ್ ಸಿಕ್ಕಿದ್ದು, ಮೊಬೈಲ್ ಸ್ವಿಚ್ ಆಫ್ ಆಗಿದೆ. ನಿನ್ನೆ ಮೈಲಾರ ಲಿಂಗೇಶ್ವರ ದೇವರ ದರ್ಶನಕ್ಕೆ ಯುವತಿ ಮತ್ತು ಯುವಕ ಇಬ್ಬರು ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹೊಳಲು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.
ಮೈಸೂರು : ಇಂದು ನಾಡಿನಾದ್ಯಂತ ದಸರಾ ಹಾಗೂ ಆಯುಧ ಪೂಜಾ ಸಂಭ್ರಮದ ಮನೆ ಮಾಡಿದ್ದು ಅದರಲ್ಲೂ ವಿಶೇಷವಾಗಿ ಮೈಸೂರು ಅರಮನೆಯಲ್ಲಿ ಯದುವೀರ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಲಿದ್ದಾರೆ.ಇದರ ಮಧ್ಯ ಮೈಸೂರು ಅರಮನೆಯಲ್ಲಿ ತ್ರಿಶಿಕಾ ಕುಮಾರಿ ಒಡೆಯರ್ ಅವರು ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದು, ದಸರಾ ಹಬ್ಬ ಹಾಗೂ ಆಯುಧ ಪೂಜೆಯ ಸಂಭ್ರಮ ಇಮ್ಮಡಿಯಾಗಿದೆ. ಹೌದು ಮೈಸೂರು ರಾಜಪರಿವಾರಕ್ಕೆ ಹೊಸ ಅತಿಥಿಯ ಆಗಮನವಾಗಿದ್ದು, ದಸರಾ ಸಂಭ್ರಮದಲ್ಲಿದ್ದ ರಾಜವಂಶಸ್ಥರಿಗೆ ಮತ್ತೊಂದು ಡಬಲ್ ಸಂಭ್ರಮ ಎಂದೇ ಹೇಳಬಹುದು. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪತ್ನಿ ತ್ರಿಷಿಕಾ ಕುಮಾರಿ ಅವರು ಎರಡನೇ ಪುತ್ರನಿಗೆ ಜನ್ಮ ನೀಡಿದ್ದಾರೆ.ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಶಿಕಾ ಕುಮಾರಿಗೆ ಗಂಡು ಮಗು ಜನನವಾಗಿದೆ. ಯುವರಾಣಿ ತ್ರಿಶಿಕಾ ಕುಮಾರಿ ಒಡೆಯರ್ ಅವರು ಇನ್ನೊಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮೈಸೂರು ಅರಮನೆಗೂ ಮೈಸೂರಿನ ಜನತೆಗೂ ದಸರಾ ಹಬ್ಬದ ಸಂಭ್ರಮ ಇದರಿಂದ ದುಪ್ಪಟ್ಟಾಗಿದೆ. ನವರಾತ್ರಿಯ ಆರಂಭದ ಪೂಜಾ ಕಾರ್ಯಕ್ರಮಗಳಲ್ಲಿ ಕೃಷಿಕ ಅವರು…
ಬೆಂಗಳೂರು : ಸಾಮಾನ್ಯವಾಗಿ ಪಾರಿವಾಳಗಳು ಕಾಳು ಕಡಿಗಳನ್ನು ಹುಡುಕಿಕೊಂಡು ಹೋಗುತ್ತವೆ.ಆದರೆ ಬೆಂಗಳೂರಿನ ವಿವಿ ಪುರಂ ರಸ್ತೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾರಿವಾಳಗಳು ವಾಸ ಮಾಡುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳಿಗೆ ತೀವ್ರ ಸಂಕಷ್ಟ ಎದುರಾಗಿದೆ.ಉಸಿರಾಟದ ತೊಂದರೆ ಹಾಗೂ ಅಸ್ತಮಾ ಕಾಯಿಲೆಗಳು ಎದುರಾಗುತ್ತಿರುವ ಹಿನ್ನಲೆಯಲ್ಲಿ ಜನರು ಭೀತಿಯಿಂದ ಓಡಾಡುತ್ತಿದ್ದಾರೆ. ಹೌದು ವಿವಿ ಪುರಂ ನಿವಾಸಿಗಳಿಗೆ ಪಾರಿವಾಳಗಳಿಂದ ಸಂಕಷ್ಟ ಎದುರಾಗಿದೆ.ಅನೇಕರು ಕಾಳು ಹಾಕುತ್ತಿರುವುದರಿಂದ ಸಾವಿರಾರು ಪಾರಿಗಳು ವಾಸ ಮಾಡುತ್ತಿವೆ. ಮನೆಗಳ ಬಳಿ ಪಕ್ಷಿಗಳ ಪುಕ್ಕ ಹಿಕ್ಕೆಯಿಂದ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ಅಕ್ಕಪಕ್ಕದ ಮನೆಗಳಿಗೆ ಪಾರಿವಾಳಗಳಿಂದ ಇದೀಗ ಸಮಸ್ಯೆ ಎದುರಾಗಿದೆ. ಪಾರಿವಾಳಗಳ ಹಿಕ್ಕಿನಿಂದ ಅಸ್ತಮಾ ಹಾಗೂ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ. ಸ್ಥಳೀಯ ನಿವಾಸಿಗಳಾದ ವೆಂಕಟೇಶ್ ಅವರು, ಈ ಕುರಿತು ಈಗಾಗಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಸಹ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ನಮಗೆ ಪಾರಿವಾಳ ಪುಕ್ಕಗಳು ಹಾಗೂ ಹಿಕ್ಕೆಯಿಂದ ನಮಗೆ ಉಸಿರಾಟದ ತೊಂದರೆ ಉಂಟಾಗುತ್ತಿದ್ದು. ಅನೇಕ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರು…













