Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗಲಿದೆ ಎಂದು ತಿಳಿದುಬಂದಿದೆ. ಐಟಿ, ಜಿಎಸ್ ಟಿ ಇರುವ 10 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಇದೀಗ ಬೀದಿಬದಿ ಅಂಗಡಿ ವ್ಯಾಪಾರಗಳಿಗೂ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಹೌದು ಬ್ಯಾಂಕ್ ವಹಿವಾಟು ಆಧಾರದಲ್ಲಿ ಬೀದಿ ಬದಿಯ ವ್ಯಾಪಾರಿಗಳ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗಳಾಗಿ ಬದಲಾವಣೆ ಮಾಡಲಾಗಿದೆ. ಸದ್ಯ ಬಿಪಿಎಲ್ ಕಾರ್ಡ್ ಇದ್ದಿದ್ದನ್ನು ಎಪಿಎಲ್ ಆಗಿ ಬದಲಾವಣೆ ಮಾಡಲಾಗಿದೆ. ಎಪಿಎಲ್ ಆಗಿ ಬದಲಾವಣೆಯಾಗಿದ್ದಕೆ ಇದೀಗ ವ್ಯಾಪಾರಿಗಳು ಅಸಮಾಧಾನ ಹೊರಹಾಕಿದ್ದಾರೆ. ನಮ್ಮದು ದಿನಾಲೂ ನಡೆಯುವ ವ್ಯವಹಾರ ಇರುವ ಕಾರಣ ಹೆಚ್ಚಿಗೆ ಹಣ ಟ್ರಾನ್ಸ್ಆಕ್ಷನ್ ಆಗಿದೆ. ಆದರೆ ನಮಗೆ ಲಾಭದಲ್ಲಿ ಅಗಲಿ ಅಥವಾ ಆದಾಯದಲ್ಲಿ ಅಗಲಿ ಯಾವುದೇ ರೀತಿಯ ಹೆಚ್ಚಳವಿಲ್ಲ. ವಹಿವಾಟು ಆಧಾರದ ಮೇಲೆ ಬದಲಾವಣೆ ಮಾಡಬಾರದು ಎಂದು ವ್ಯಾಪಾರಗಳು ಅಗ್ರಹಿಸಿದ್ದಾರೆ.
ಧಾರವಾಡ : ಬಿಜೆಪಿ ಆಪರೇಷನ್ ಕಮಲ ಮಾಡಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿದೆ ಎಂದು ಶಾಸಕ ಗಣಿಗ ರವಿ ಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ಸಿನ ಶಾಸಕರನ್ನು ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯನವರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಚನೆಗೆ ಕೆಲ ಶಾಸಕರನ್ನೇ ಸಿದ್ದರಾಮಯ್ಯನವರೇ ಕಳುಹಿಸಿದ್ದರು. ಕಳೆದ ಬಾರಿ ಬಿಜೆಪಿ ಸರ್ಕಾರ ರಚನೆ ಮಾಡೋವಾಗ ಶಾಸಕರನ್ನು ಕಳುಹಿಸಿದ್ದೆ ಕಾಂಗ್ರೆಸ್.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮುಂದುವರೆಯಬಾರದು ಎನ್ನುವ ಕಾರಣಕ್ಕೆ ಸಿದ್ದರಾಮಯ್ಯನವರೇ ಕೆಲ ಶಾಸಕರನ್ನು ಕಳುಹಿಸಿದ್ದರು. ಹೀಗಾಗಿ ನಾವು ಸರ್ಕಾರ ರಚನೆ ಮಾಡಿದ್ದೆವು. ಈ ಬಾರಿ ಅವರಿಗೆ ಬಹುಮತ ಇದೆ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. 100 ಕೋಟಿ ಅಲ್ಲ, 500 ಕೋಟಿ ಬಗ್ಗೆ ಮಾತಾಡಲಿ. ದಾಖಲೆ ಇದ್ದರೆ ಕೊಡಿ…
ಬೆಂಗಳೂರು : ಕೋವಿಡ್ ವೇಳೆ ಪಿಎಂ ಕೇರ್ಸ್ ಫಂಡ್ ನಿಂದ ಬಂದ ವೆಂಟಿಲೇಟರ್ ಕೂಡ ಗುಣಮಟ್ಟದಲ್ಲ. ಅನೇಕ ಕಡೆಗೆ ಈ ವೆಂಟಿಲೇಟರ್ ಬಳಕೆ ಮಾಡಲು ಆಗದೆ ಹಾಗೆ ಇಡಲಾಗಿದೆ. ಪಿಎಂ ಕೇರ್ಸ್ ಫಂಡ್ ಹೇಗೆ ದುರ್ಬಳಕೆ ಆಗಿದೆ ಎಂಬುದು ದೊಡ್ಡ ವಿಷಯ. ಪಿಎಂ ಕೇರ್ಸ್ ಫಂಡ್ ನಲ್ಲೂ ಕೂಡ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಎಲ್ಲದರ ಬಗ್ಗೆಯೂ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕಿದೆ ಎಂದು ಬೆಂಗಳೂರಲ್ಲಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಕೋವಿಡ್ ವೇಳೆ ವೆಂಟಿಲೇಟರ್ ಖರೀದಿಯಲ್ಲೂ ಅವ್ಯವಹಾರ ನಡೆದಿದೆ. ನ್ಯಾ ಮೈಕಲ್ ಡಿ ಕುನಹ ನೀಡಿರುವ ವರದಿಯಲ್ಲಿ ಹಲವು ಅಂಶಗಳು ಬಹಿರಂಗವಾಗಿವೆ. ಈ ವರದಿಯಲ್ಲಿ ಗಾಬರಿ ಹುಟ್ಟಿಸುವಂತಹ ಅಂಶಗಳು ದಾಖಲಾಗಿವೆ. ಬಿಜೆಪಿ ಸರ್ಕಾರ ಯಾವ ರೀತಿ ಲೂಟಿ ಮಾಡಿದೆ ಅನ್ನೋದು ಎದ್ದು ಕಾಣುತ್ತದೆ. ವರದಿಯ ಅಂಶಗಳು ತಾರ್ಕಿಕ ಅಂತ್ಯ ಕಾಣಬೇಕು ಎನ್ನುವುದು ನಮ್ಮ ಉದ್ದೇಶ. ಅಂದಿನ ಸಚಿವರು ಸಿಎಂ ಒಪ್ಪಿಗೆ ಇಲ್ಲದೆ ಇಂತಹ ನಿರ್ಧಾರಗಳು ಆಗಲ್ಲ. ತಪ್ಪು ಮಾಡಿದವರಿಗೆ ತಕ್ಕ…
ಚಿತ್ರದುರ್ಗ : ಚಾಲಕನ ಒಂದು ನಿರ್ಲಕ್ಷ್ಯದಿಂದ ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಒಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದ್ದ ಪರಿಣಾಮ, ಬಸ್ ನಲ್ಲಿದ್ದ ಸುಮಾರು 10 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ. ಇಂದು ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಐಮಂಗಲ ಬಳಿ ಪಲ್ಟಿಯಾಗಿ ಸುಮಾರು 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷದಿಂದ ಬಸ್ ಡಿವೈಡರ್ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದ ಕುರಿತಂತೆ ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಮೀನು ಹಿಡಿಯಲು ತಂದೆ ಇಬ್ಬರು ಮಕ್ಕಳು ನದಿಗೆ ತೆರಳಿದ್ದಾರೆ. ಆದರೆ ಮಗನೋಬ್ಬ ನೀರಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ತೆರಳಿದ್ದ ತಂದೆ ಹಾಗೂ ಇನ್ನೊಬ್ಬ ಮಗ ಕೂಡ ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ಘಟಪ್ರಭಾ ನದಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಲಕ್ಷ್ಮಣ ರಾಮ (49), ರಮೇಶ (15) ಹಾಗೂ ಯಲ್ಲಪ್ಪ (13) ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ. ಮೀನು ಹಿಡಿಯಲು ಬಲೆ ಹಾಕಲು ತಂದೆ ಮತ್ತು ಮಕ್ಕಳು ನದಿಗೆ ಇಳಿದಿದ್ದರು. ಈ ವೇಳೆ ಓರ್ವ ಪುತ್ರ ನೀರಿನಲ್ಲಿ ಮುಳುಗಿದ್ದಾನೆ.ಆತನನ್ನು ರಕ್ಷಿಸಲು ಹೋಗಿದ್ದ ತಂದೆ ಹಾಗೂ ಮತ್ತೊಬ್ಬ ಮಗ ಸಹ ನೀರು ಪಾಲಾಗಿ ಮೃತಪಟ್ಟಿದ್ದಾರೆ. ನದಿಯಲ್ಲಿ ಮೂವರಿಗಾಗಿ ಸದ್ಯ ಎನ್ ಡಿ ಆರ್ ಎಫ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದು, ಯಮಕನಮರಡಿ…
ಕಲಬುರ್ಗಿ : ರಾಜ್ಯದಲ್ಲಿ ಮತ್ತೊಂದು ಬಿಚ್ಚಿ ಬಿಡಿಸುವ ಘಟನೆ ನಡೆದಿದ್ದು, ಕಲಬುರ್ಗಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆಯು ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ನರೋಣ ಪಟ್ಟಣದಲ್ಲಿ ನಡೆದಿದೆ. ಹೌದು ನರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಕಲಬುರ್ಗಿ ಜಿಲ್ಲೆಯ ಆಳ ತಾಲೂಕಿನ ನರೋಣದ ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಗೋರಕ್ ನಾಥ ಚೌವ್ಹಾಣ (65) ಎನ್ನುವ ವೃದ್ಧ ಈ ನೀಚ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ಗೌರವತ್ನಾಥ್ ನನ್ನು ಪೊಲೀಸರು ಸದ್ಯ ಬಂಧಿಸಿದ್ದಾರೆ. ಘಟನೆ ಕುರಿತಂತೆ ಪೋಕ್ಸೋ ಕಾಯ್ದೆಯಡಿ ನರೋಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಇತ್ತೀಚಿಗೆ ಎಲ್ಲೆಡೆ ಬೀದಿ ನಾಯಿಗಳ ಹಾಗೂ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗಿದೆ. ಇದೀಗ ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದೆ ಪರಿಣಾಮ ಮಗುವಿನ ಎಡಗಣ್ಣಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ತುಮಕೂರು ತಾಲೂಕಿನ ಹೆಗ್ಗೆರೆಯಲ್ಲಿ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ನಾಯಿ ದಾಳಿ ಮಾಡಿದೆ. ಹನಿಜಾ ಕಾನಂ ಎನ್ನುವ ಎರಡು ವರ್ಷದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಮಗುವಿನ ಕಣ್ಣು, ತಲೆ ಭಾಗಕ್ಕೆ ಬೀದಿ ನಾಯಿ ಕಚ್ಚಿದೆ. ಹೆಣ್ಣು ಮಗುವಿಗೆ ಎಡಗಣ್ಣಿಗೆ ಗಂಭೀರವಾದ ಗಾಯವಾಗಿದೆ. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳ ಹಾವಳಿಗೆ ಹೆಗ್ಗೆರೆ ಗ್ರಾಮಸ್ಥರು ರೋಸಿ ಹೋಗಿದ್ದಾರೆ. ಅಧಿಕಾರಿಗಳಿಗೆ ಎಷ್ಟೇ ಹೇಳಿದರೂ ಕೂಡ ಬೀದಿ ನಾಯಿಗಳ ನಿಯಂತ್ರಣಕ್ಕೆ ಯಾವುದೇ…
ಶಿವಮೊಗ್ಗ : 2024-25 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಡಿಯಲ್ಲಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರ 2.24 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿದಲು ಆದೇಶಿಸಿದ್ದು, ಸಾಮಾನ್ಯ ಭತ್ತ ರೂ.2300/- ಎ ಗ್ರೇಡ್ ಭತ್ತ ರೂ.2320/- ದರವನ್ನು ನಿಗಧಿ ಮಾಡಿದೆ. ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನ.15 ರಿಂದ ಭತ್ತ ಮಾರಾಟ ಮಾಡಲು ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಶಿವಮೊಗ್ಗ ಜಿಲ್ಲಾ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ರಾಜ್ಯ ಸಹಕಾರ ಮಾರಾಟ ಮಹಾಮಂಡಳ(ನಿ) ವನ್ನು ಸಂಗ್ರಹಣಾ ಏಜೆಸ್ಸಿಗಳಾಗಿ ನೇಮಿಸಲಾಗಿದೆ.ಪ್ರತಿ ಎಕರೆಗೆ 25 ಕ್ವಿಂಟಾಲ್ನAತೆ ಗರಿಷ್ಠ 40 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಎ.ಪಿ.ಎಂ.ಸಿ ಆವರಣದಲ್ಲಿರುವ ಖರೀದಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿಸಲಾಗುತ್ತಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡ ಸಂದರ್ಭದಲ್ಲಿ ಅಗತ್ಯವಿದ್ದ ತಾಲೂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು. ಭತ್ತವನ್ನು ದಿ: 01-01-2025 ರಿಂದ…
ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸವಗಳಲ್ಲಿ ಉಚಿತ ಪ್ರಯಾಣದ ಕುರಿತು ಸುಳಿವು ನೀಡಿದ್ದರು. ಆದರೆ ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿ, ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ ಪ್ರಯಾಣ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎ ದು ಸ್ಪಷ್ಟಪಡಿಸಿದರು. ಸದ್ಯ ಯೋಜನೆಯ ಅಡಿ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿದೆ ಎಂದರು. ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ. ನಿನ್ನೆ ನಡೆದ ಸಂವಾದದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಈ ವಿಷಯ ಹೇಳಿದ್ದಾರೆ. ಈ ಕುರಿತಂತೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದಾಗ ಕೇಳುತ್ತೇನೆ.ಆದರೆ ಪುರುಷರಿಗೆ ಉಚಿತ ಪ್ರಯಾಣದ ಬಗ್ಗೆ ಯಾವ ಪ್ರಸ್ತಾವನೆಯೂ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಸಾರಿಗೆ…
ಮೈಸೂರು : ಮುಡಾ ತನಿಖೆಯಲ್ಲಿ ಮತ್ತೊಂದು ಸ್ಫೋಟಕ ವಿಚಾರ ಬಹಿರಂಗವಾಗಿದ್ದು, ಸಿಎಂ ಸಿದ್ದರಾಮಯ್ಯ ಬಳಿಕ ಇಬ್ಬರು ಪ್ರಭಾವಿ ಸಚಿವರ ವಿರುದ್ಧವು ಕೂಡ ಅಕ್ರಮದ ಆರೋಪ ಕೇಳಿ ಬರುತ್ತಿದೆ. 50:50 ಅನುಪಾತದಲ್ಲಿ ಸೈಟ್ ಹಂಚಿಕೆಯ ವೇಳೆ ಪ್ರಭಾವ ಬೀರಲಾಗಿದೆ ಎನ್ನುವ ಸ್ಫೋಟಕ ವಿಚಾರ ಇದೀಗ ಬಹಿರಂಗವಾಗಿದೆ. ಹೌದು ಸಿಎಂ ಸಿದ್ದರಾಮಯ್ಯ ಬಳಿಕ ಇಬ್ಬರು ಪ್ರಮುಖ ಸಚಿವರಿಂದಲೇ ಅಕ್ರಮಕ್ಕೆ ಸಹಕಾರ ನೀಡಲಾಗಿದೆ ಎಂದು ಇಡಿ ವಿಚಾರಣೆಯಲ್ಲಿ ಅಧಿಕಾರಿಗಳು ಆರೋಪ ಮಾಡಿದ್ದಾರೆ. ಈ ಹಿಂದೆ ಮಮುಡಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾತ್ರ ಅಲ್ಲ ಇಬ್ಬರು ಸಚಿವರು ವಿರುದ್ಧ ಕೂಡ ಅಕ್ರಮ ಸೈಟ್ ಹಂಚಿಕೆಯಲ್ಲಿ ಸಹಕಾರ ನೀಡಿರುವ ಆರೋಪ ಕೇಳಿ ಬಂದಿದೆ. ಇದೀಗ ಇಡಿ ಮಾಜಿ ಅಧಿಕಾರಿಗಳ ಹೇಳಿಕೆಯನ್ನು ಬೆನ್ನುತ್ತಿದ್ದು, ಕೆಲವು ದಾಖಲೆ ಪರಿಶೀಲನೆ ನಡೆಸಿ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.














