Author: kannadanewsnow05

ಬೆಂಗಳೂರು: ಡಿ.13: ನಗರದ ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳಲ್ಲಿ ಇಂದು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು. ವಲಯ ಆಯುಕ್ತರುಗಳ ಹಾಗೂ ವಲಯ ಜಂಟಿ ಆಯುಕ್ತರ ನಿರ್ದೇಶನದ ಮೇರೆಗೆ ಇಂದು ವಿವಿಧ ಸ್ಥಳಗಳಲ್ಲಿ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ನಾಗರೀಕರ ಓಡಾಟಕ್ಕೆ ಸಮಸ್ಯೆಯಾಗುತ್ತಿರುವುದನ್ನು ಗಮನಿಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.ಪಾದಚಾರಿ ಮಾರ್ಗದಲ್ಲಿರುವ ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಅಕ್ರಮವಾಗಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪಾಲಿಕೆಯಿಂದ ನಿರಂತರವಾಗಿ ನಡೆಸಲಾಗುತ್ತಿದೆ. ಇಂದು ಪಾಲಿಕೆ ದಕ್ಷಿಣ ವಲಯದ ಚೋಳರಪಾಳ್ಯ ವ್ಯಾಪ್ತಿಯಲ್ಲಿನ ಮಾಗಡಿ ಮುಖ್ಯರಸ್ತೆ ಹಾಗೂ ಬೊಮ್ಮನಹಳ್ಳಿ ವಲಯದ ಜಂಬೂ ಸವಾರಿ ದಿಣ್ಣೆ ಮುಖ್ಯರಸ್ತೆಯಲ್ಲಿನ ಪಾದಚಾರಿ ಮಾರ್ಗ ಒತ್ತುವರಿಗಳನ್ನು ತೆರವುಗೊಳಿಸಲಾಗಿರುತ್ತದೆ.ಪಾದಚಾರಿ ಮಾರ್ಗಗಳಲ್ಲಿ ಹಾಕಲಾಗಿದ್ದ ಜಾಹೀರಾತು ಫಲಕಗಳು, ಬೆಂಚುಗಳು, ಶಾಶ್ವತ ಪೆಟ್ಟಿಗೆಗಳನ್ನು ತೆರವುಗೊಳಿಸಿ ಪಾದಚಾರಿಗಳ ಓಡಾಟಕ್ಕೆ ಸುಗಮಗೊಳಿಸಲಾಯಿತು. ತೆರವುಗೊಳಿಸಿದ ವಸ್ತುಗಳನ್ನು ಪಾಲಿಕೆ ವಶಕ್ಕೆ ಪಡೆದು ಮತ್ತೆ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡದಂತೆ ಕಟ್ಟೆಚ್ಚರಿಕೆಗಳನ್ನು ನೀಡಲಾಯಿತು. ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಹೂಳು ತೆರವು…

Read More

ಬೆಳಗಾವಿ : ವಿಧಾನಸಭೆಯಲ್ಲಿ ಮಾಜಿ ಸಿಎಂ ದಿವಂಗತ ಎಸ್. ಎಂ. ಕೃಷ್ಣ ಅವರಿಗೆ ತಾವು ಸಂತಾಪ ಸೂಚಿಸಿ ನಿನ್ನೆ ಮಾತನಾಡುವಾಗ ವಡ್ಡ ಪದ ಬಳಸಿದ್ದರಿಂದ ಯಾರಿಗಾದರೂ ನೋವಾಗಿದ್ದಾರೆ ವಿಷಾದ ವ್ಯಕ್ತಪಡಿಸುವುದಾಗಿ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಭೋವಿ ಸಮುದಾಯದ ಬಗ್ಗೆ ತಮಗೆ ಅಪಾರ ಗೌರವವಿದೆ. ನನ್ನನ್ನು ನಾನೇ ಟೀಕೆ ಮಾಡಿಕೊಳ್ಳುವ ಬರದಲ್ಲಿ ಆ ಪದ ಬಳಸಿದ್ದೇಯೇ ಹೊರತು ಯಾರಿಗೂ ನೋವು ಉಂಟು ಮಾಡುವ ಉದ್ದೇಶದಿಂದ ಅಲ್ಲ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ : ಒಂದು ದೇಶ ಒಂದು ಚುನಾವಣೆ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ ಕೇಂದ್ರ ಸರ್ಕಾರ ಹೊಂದಿದೆ. ಟಿಎಂಸಿ, ಡಿಎಂಕೆ, ಎಸ್ ಪಿ, ಕಮ್ಯುನಿಷ್ಟ್ ಸೇರಿದಂತೆ ಪ್ರಾದೇಶಿಕ ಪಕ್ಷಗಳಿಂದ ಇಂಡಿಯಾ ಒಕ್ಕೂಟದ ಸಂಖ್ಯಾಬಲ ಹೆಚ್ಚಾಗಿದೆ. ಹೀಗಾಗಿ ಈ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಬೆಳಗ್ಗೆ ಪ್ರತಿಕ್ರಿಯೆ ನೀಡಿದರು.ಕೇಂದ್ರ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆಗೆ ಅನುಮೋದನೆ ನೀಡಿರುವ ಬಗ್ಗೆ ಕೇಳಿದಾಗ, “ಒಂದು ದೇಶ ಒಂದು ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ಸಂಸತ್ತಿನಲ್ಲಿ ಅನುಮೋದನೆ ಪಡೆಯಲು ಕೇಂದ್ರ ಎನ್ ಡಿಎ ಸರ್ಕಾರಕ್ಕೆ ಸರಿಯಾದ ಸಂಖ್ಯಾಬಲವಿಲ್ಲ.ಮೂರನೇ ಎರಡು ಸಂಖ್ಯಾಬಲ ಬೇಕಾಗಿದ್ದು, ಅದನ್ನು ಹೇಗೆ ಸಾಧಿಸುತ್ತಾರೋ ಗೊತ್ತಿಲ್ಲ. ಕೆಲವು ರಾಜ್ಯಗಳಲ್ಲಿ ಈಗಷ್ಟೇ ಚುನಾವಣೆಯಾಗಿದೆ, ಮತ್ತೆ ಕೆಲವು ಕಡೆಗಳಲ್ಲಿ ಚುನಾವಣೆಯಾಗಿ ಎರಡು, ಮೂರು ವರ್ಷಗಳಾಗಿವೆ. ಇವುಗಳನ್ನು ಹೇಗೆ ಮಾಡುತ್ತಾರೆ ಗೊತ್ತಿಲ್ಲ. ಇದು ಕಷ್ಟಕರವಾದ ಪ್ರಕ್ರಿಯೆ.…

Read More

ಬೆಳಗಾವಿ : ಪ್ರವಾಸಕ್ಕೆ ತೆರಳಿದ್ದ ವೇಳೆ ಭಟ್ಕಳ ತಾಲೂಕು ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟಿರುವುದು ವಿಷಾದದ ಸಂಗತಿ. ಹಾಗೆಂದು ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಜೀವಹಾನಿ ಆದಲ್ಲಿ, ನಾವು ಜವಾಬ್ದಾರರಲ್ಲ ಎಂದು ಕೈಚೆಲ್ಲಲು ನಮ್ಮ ಸರ್ಕಾರ ಸಿದ್ದವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಸ್ಪಷ್ಟಪಡಿಸಿದರು. ಶುಕ್ರವಾರ ವಿಧಾನಸಭೆ ಶೂನ್ಯ ವೇಳೆ ಚರ್ಚೆಯಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಮುರುಡೇಶ್ವರದಲ್ಲಿ ದುರಂತ ಸಾವಿಗೀಡಾದ ವಿದ್ಯಾರ್ಥಿನಿಯರ ಪ್ರಕರಣವನ್ನು ಉಲ್ಲೇಖಿಸಿದ್ದರು. ಹೆಚ್ಚಿನ ಜನ ಪ್ರವಾಸಕ್ಕೆ ಆಗಮಿಸುವ ಸ್ಥಳದಲ್ಲಿ ಮತ್ತಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು ಎಂದು ಅಭಿಪ್ರಾಯಪಟ್ಟರು. ತಮ್ಮದೇ ಕ್ಷೇತ್ರದ ವಿದ್ಯಾರ್ಥಿನಿಯರ ದುರಂತ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿದರು. ಈ ವೇಳೆ ಶಾಸಕ ಸಮೃದ್ಧಿ ಮಂಜುನಾಥ್ ಅವರಿಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಮುಳಬಾಗಿಲು ತಾಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರನ್ನು ಶಿಕ್ಷಕರು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಕರೆದುಕೊಂಡು ಹೋಗಿದ್ದಾರೆ. ಮಕ್ಕಳ ಜೊತೆ ಏಳು ಜನ ಶಿಕ್ಷಕರೂ ಪ್ರವಾಸಕ್ಕೆ ತೆರಳಿದ್ದಾರೆ. ಪ್ರವಾಸದ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಹೈಕೋರ್ಟ್ ಇದೀಗ ಜಾಮೀನು ನೀಡಿದೆ. ಹೌದು ರೇಣುಕಾ ಸ್ವಾಮಿ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಇದೀಗ ಜಾಮೀನು ನೀಡಿದೆ. ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಇದೀಗ ಹೈಕೋರ್ಟ್ ಜಾಮೀನು ನೀಡಿದೆ.ಕಳೆದ ಆರು ತಿಂಗಳಿನಿಂದ ನಡೆದ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿದ್ದರು. ಇತ್ತೀಚಿಗೆ ಬೆನ್ನು ನೋವಿನ ಸಮಸ್ಯೆ ತಿಳಿಸಿ, ಬಳ್ಳಾರಿ ಜಿಲ್ಲೆ ಬಿಡುಗಡೆಯಾಗಿದ್ದರು. ಇತ್ತೀಚಿಗೆ ನಡೆದ ಒಂದು ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಎಸ್ ಎಸ್ ವಿಶ್ವಶಿತ್ ಶೆಟ್ಟಿ ಅವರು ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.

Read More

ಹೈದ್ರಾಬಾದ್ : ಸಂಧ್ಯಾ ಥಿಯೇಟರ್ ಬಳಿ ಪುಷ್ಪ 2 ಸಿನಿಮಾ ವೀಕ್ಷಣೆ ಮಾಡಲು ಬಂದಿದ್ದ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಒಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈದರಾಬಾದ್ ನ ಚಿಕ್ಕಡಪಲ್ಲಿಯಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಸೋಮವಾರದವರೆಗೆ ಸ್ಪಂದಿಸದಂತೆ ಅರ್ಜಿ ಸಲ್ಲಿಸಲಾಗಿದೆ. ಸದ್ಯ ಪೋಲೀಸರು ಅಲ್ಲು ಅರ್ಜುನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯಕೀಯ ಪರೀಕ್ಷೆ ನಡೆಯಲಿದೆ ಬಳಿಕ ಅಲ್ಲಿಂದ ನೇರವಾಗಿ ಕೋರ್ಟಿಗೆ ಪೊಲೀಸರು ಅವರನ್ನು ಹಾಜರುಪಡಿಸಲಿದ್ದಾರೆ.

Read More

ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಪುಷ್ಪ -2 ಸಿನಿಮಾ ರಿಲೀಸ್ ಆದ ದಿನದಂದು ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತಕ್ಕೆ ಮಹಿಳೆಯೊಬ್ಬರು ಸಾವನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಆದರೆ ಅರೆಸ್ಟ್ ಮಾಡುವ ವೇಳೆ ಅಲ್ಲು ಅರ್ಜುನ್ ನಿವಾಸದಲ್ಲಿ ಭಾರಿ ಹೈಡ್ರಾಮ ನಡೆದಿದೆ. ಹೌದು ನಟ ಅಲ್ಲು ಅರ್ಜುನ್ ಬಂಧನದ ವೇಳೆ ಹೈಡ್ರಾಮಾ ನಡೆಯಿತು ಹೈದರಾಬಾದ್ ನಲ್ಲಿರುವ ಅಲ್ಲು ಅರ್ಜುನ್ ಮಾಸದಲ್ಲಿ ಭಾರಿ ಹೈಡ್ರಾಮಾ ನಡೆದಿದೆ ಈ ವೇಳೆ ಪೊಲೀಸರು ಬೆಡ್ರೂಮ್ನಲ್ಲಿಯೇ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ ಬೆಳಗ್ಗೆ 11:45ಕ್ಕೆ ಪೊಲೀಸರು ಅಲ್ಲು ಅರ್ಜುನ್ ನಿವಾಸಕ್ಕೆ ಬಂದಿದ್ದರು ಮಧ್ಯಾಹ್ನ 12 ಗಂಟೆಗೆ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ. ಚಿಕ್ಕಡಪಲ್ಲಿ ಠಾಣೆ ಪೋಲಿಸರು ನಟ ಅಲ್ಲು ಅರ್ಜುನ್ ಅವರನ್ನು ಸದ್ಯ ಅರೆಸ್ಟ್ ಮಾಡಿದ್ದಾರೆ.ಅವರ ವಿರುದ್ಧ ಜಾಮೀನು ರಹಿತ ಕೆಎಸ್ ಕೂಡ ದಾಖಲಾಗಿದೆ ಈ ಒಂದು ಪ್ರಕರಣದಲ್ಲಿ 5 ರಿಂದ 10 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.…

Read More

ಹೈದ್ರಾಬಾದ್ : ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಈಗಾಗಲೇ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ಡಿಸೆಂಬರ್ 4 ರ ರಾತ್ರಿ ದುರಂತ ಘಟನೆ ನಡೆದಿದ್ದು, 35 ವರ್ಷದ ಮಹಿಳೆ ಪ್ರಾಣ ಕಳೆದುಕೊಂಡಿದ್ದರು. ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ನಗರ ಪೊಲೀಸರು ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಥಿಯೇಟರ್ ಆಡಳಿತ ಮಂಡಳಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಸೆಕ್ಷನ್ 105 ಮತ್ತು 118 (1) ಅಡಿಯಲ್ಲಿ ಚಿಕ್ಕಡ್ಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಭಾಗವಾಗಿ, ಹೈದರಾಬಾದ್ ಪೊಲೀಸರು ಚಿತ್ರಮಂದಿರದ ಸಹ ಮಾಲೀಕ, ಹಿರಿಯ ವ್ಯವಸ್ಥಾಪಕ ಮತ್ತು ಕೆಳಗಿನ ಬಾಲ್ಕನಿ ಉಸ್ತುವಾರಿ ಎಂಬ ಮೂವರು ವ್ಯಕ್ತಿಗಳನ್ನು ಬಂಧಿಸುವ ಬಗ್ಗೆ ಈ ಹಿಂದೆ ಘೋಷಿಸಿದ್ದರು. ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ ಬಳಿಕ, ಅಲ್ಲು ಅರ್ಜುನ್ ಅವರನ್ನು ಉಸ್ಮಾನಿ ಆಸ್ಪತ್ರೆಗೆ ಪೊಲೀಸರು ಕರೆದು ತಂದಿದ್ದಾರೆ.…

Read More

ಬೆಳಗಾವಿ : ಅರ್ಹ ಬಿಪಿಎಲ್ ಕಾರ್ಡ್ಗಳ ರದ್ದು ಮಾಡಿರುವ ವಿಚಾರವಾಗಿ ವಿಪಕ್ಷ ಬಿಜೆಪಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿತ್ತು. ತಕ್ಷಣ ಅರ್ಹರ ಬೀಪಲ್ ಕಾರ್ಡ್ ರದ್ದು ಮಾಡದೇ, ಅನರ್ಹರು ಹೊಂದಿದ್ದ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ಗಳಾಗಿ ಪರಿಷ್ಕರಣೆ ಮಾಡಿತು. ಈ ವಿಚಾರವಾಗಿ ವಿಧಾನಸಭೆಯಲ್ಲಿ ಸರ್ಕಾರ ಯಾವುದೇ ಅರ್ಹ ಬಿಪಿಎಲ್​ ಕುಟುಂಬದವರ ಪಡಿತರ ಚೀಟಿ ರದ್ದು ಪಡಿಸಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಹೆಚ್​. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್​ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ 2017ರಲ್ಲಿ ಮಾನದಂಡಗಳನ್ನು ರೂಪಿಸಲಾಗಿದೆ. ಇದರ ಅನ್ವಯ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿ, ನಿಗಮ, ಸ್ವಾಯತ್ತ ಸಂಸ್ಥೆಗಳ ನೌಕರರು ಬಿಪಿಎಲ್ ಕಾರ್ಡ ಪಡೆಯುವಂತಿಲ್ಲ. ಇದರೊಂದಿಗೆ ಆದಾಯ ತೆರಿಗೆ, ಸೇವಾ ತೆರಿಗೆ, ಜಿಎಸ್‌ಟಿ,…

Read More

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರು, ಎಫ್-4 ಸಂತೇಕಡೂರು ಎಫ್-8 ಗಣಿದಾಳು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಡಿ.14 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಅದೇ ರೀತಿ ಹೊಳಲೂರು 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.14 ಮತ್ತು 15 ರಂದು* ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊಳಲೂರು,…

Read More