Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಿಎಂ ಬದಲಾವಣೆ ಕುರಿತಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸಚಿವರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.ಈ ವಿಷಯವಾಗಿ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಸಭೆ ನಡೆಸಿದ ಸಚಿವರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದು, ಮುಖ್ಯಮಂತ್ರಿ ಹುದ್ದೆ ಖಾಲಿ ಇದೆ ಅಂತ ನಿಮಗೆ ಯಾರು ಹೇಳಿದ್ದು? ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು. ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಸಚಿವರಿಗೆ ಎಚ್ಚರಿಕೆ ನೀಡಿದ ಅವರು, ಪ್ರತ್ಯೇಕ ಸಭೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಹುಟ್ಟು ಹಾಕುತ್ತಿದ್ದೀರಿ. ಇಷ್ಟಕ್ಕೂ ಮುಖ್ಯಮಂತ್ರಿ ಹುದ್ದೆ ಖಾಲಿ ಇದೆ ಎಂದು ಹೇಳಿದ್ದು ಯಾರು? ನಾನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಸಂಪುಟ ಸದಸ್ಯರಿಗೆ ಸಿದ್ದರಾಮಯ್ಯ ನೀಡಿದ ಸ್ಪಷ್ಟ ಸಂದೇಶ. ಸಭೆಯಲ್ಲಿ ಕೆಲ ಸಚಿವರು ಹಾಗೂ ನಾಯಕರ ವರ್ತನೆ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕಿದ ಅವರು, ಸಿಎಂ ಬದಲಾವಣೆ ಚರ್ಚೆ ಹುಟ್ಟು ಹಾಕುವಂತೆ…
ವಿಜಯಪುರ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ಮಹಿಳೆಯೊಬ್ಬರು ಊರಿಗೆ ಹೋಳಿಗೆ ಊಟ ಬಡಿಸುವ ಮೂಲಕ ರಾಜ್ಯದ ಗಮನಸೆಳೆದಿದ್ದರು. ಇದೀಗ ವಿಜಯಪುರದಲ್ಲಿ ಗೃಹಲಕ್ಷ್ಮಿ ಹಣದಿಂದ ಗ್ರಾಮದ ದೇವತೆಗೆ ನವರಾತ್ರಿಯ ನಿಮಿತ್ಯ ದೇವಿ ಮೂರ್ತಿಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ. ಹೌದು ಈ ಒಂದು ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಹೂವಿನಹಳ್ಳಿ ಗ್ರಾಮದ ಭಾಗಮ್ಮ ಗುರುಶಾಂತಗೌಡ ಬಿರಾದಾರ ದಂಪತಿ ತಮಗೆ ಬಂದ 12 ತಿಂಗಳ ಗೃಹಲಕ್ಷ್ಮಿ ಹಣದಿಂದ ನವರಾತ್ರಿ ನಿಮಿತ್ತ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ ದೇವಿ ಮೂರ್ತಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದಾರೆ. ವಿಷಯ ತಿಳಿದು ಶಾಸಕ ಅಶೋಕ್ ಮನಗೂಳಿ ದಂಪತಿಗಳಿಬ್ಬರನ್ನು ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಪಾಲಿಸಿದೆ. ಪಂಚ ಗ್ಯಾರಂಟಿ ಯೋಜನೆಯ ಲಾಭವನ್ನು ರಾಜ್ಯದ 1.60…
ರಾಮನಗರ : ಚಿಕ್ಕ ಮಕ್ಕಳನ್ನು ಪೋಷಕರಾದವರು ಹೊರಗಡೆ ಬಿಡಲೆಬಾರದು. ಅಕಸ್ಮಾತ್ ಅವರನ್ನು ಹೊರಗಡೆ ಬಿಟ್ಟರೆ ಅವರ ರಕ್ಷಣೆ ಮಾಡಲೇಬೇಕು. ಇಲ್ಲವಾದರೆ ಅನಾಹುತ ಸಂಭಾವಿಸುವ ಸಾಧ್ಯತೆ ಇರುತ್ತದೆ. ಇದೀಗ ಕನಕಪುರದಲ್ಲಿ ಘೋರ ದುರಂತವೊಂದು ನಡೆದಿದ್ದು, ಮನೆಯ ಮುಂದೆ ಅಥವಾಡುತ್ತಿದ್ದ 3ವರ್ಷದ ಮಗು ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ. ಹೌದು ಮನೆ ಮುಂದೆ ಆಡುತ್ತಿದ್ದ 3 ವರ್ಷದ ಬಾಲಕ, ಗ್ರಾಮದ ಸಿಂಧು ಮತ್ತು ಶ್ರೀನಿವಾಸ್ ಪುತ್ರ ಪ್ರದ್ವಿನ್ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ಅಡಕೆ ಹಳ್ಳ ಗ್ರಾಮದಲ್ಲಿ ಸಂಭವಿಸಿದೆ.ಹೆರಿಗೆಗೆಂದು ಸಿಂಧು ತವರು ಮನೆಗೆ ಬಂದಿದ್ದು, 2ನೇ ಮಗು ವಿನ ನಿರೀಕ್ಷೆಯಲ್ಲಿರುವಾಗ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಪಿಜಿಯಲ್ಲಿ ಯುವತಿಯ ಭೀಕರ ಕೊಲೆಗೆ ಸಂಬಂಧಪಟ್ಟಂತೆ, ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಉದ್ದಿಮೆ ಪರವಾನಗಿ ಪಡೆದು ನಡೆಯುತ್ತಿರುವ ಪೇಯಿಂಗ್ ಗೆಸ್ಟ್ ಸಂಖ್ಯೆಗಿಂತ (ಪಿಜಿ) ಹೆಚ್ಚು ಅನಧಿಕೃತ ಪಿಜಿಗಳು ಕಾರ್ಯಾಚರಣೆ ನಡೆಸುತ್ತಿವೆ. ಹಾಗಾಗಿ ಬಿಬಿಎಂಪಿ ಅನಧಿಕೃತ ಪಿಜಿಗಳಿಗೆ ಬೀಗ ಜಡಿದು ಇನ್ನು ಅಧಿಕೃತ ಪಿಜಿಗಳಿಗೆ ಮಾರ್ಗಸೂಚಿ ಪಾಲಿಸುವುದು ಕಡ್ಡಾಯ ಎಂದು ಖಡಕ್ ಸೂಚನೆ ನೀಡಿದೆ. ಬಿಬಿಎಂಪಿ ಕಾಯ್ದೆ ಪ್ರಕಾರ ನಗರದಲ್ಲಿ ಪಿಜಿಗಳನ್ನು ನಡೆಸಲು ಪಾಲಿಕೆಯಿಂದ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ, ಆದರೆ ನಗರದಲ್ಲಿ ಉದ್ದಿಮೆ ಪರವಾನಗಿ ಪಡೆಯದೆ ನಡೆಯುತ್ತಿರುವ ಪಿಜಿಗಳ ಸಂಖ್ಯೆಯೇ ಹೆಚ್ಚಾಗಿರುವುದು ಇದೀಗ ಬೆಳಕಿಗೆ ಬಂದಿದೆ.ಒಟ್ಟು 2,193 ಪಿಜಿಗಳು ಬಿಬಿಎಂಪಿ ಪರವಾನಗಿ ಪಡೆದು ನಡೆಸುತ್ತಿದ್ದರೆ 2,320 ಪಿಜಿಗಳು ಯಾವುದೇ ಅನುಮತಿ ಪಡೆಯದೇ ನಡೆಸಲಾಗುತ್ತಿದೆ. ಈ ಪೈಕಿ ಬೆಂಗಳೂರಿನ ಹೊರ ವಲಯಗಳಾದ ಬೊಮ್ಮನಹಳ್ಳಿ, ಮಹದೇವಪುರ, ಯಲಹಂಕ ವಲಯ, ಪೂರ್ವ ವಲಯದಲ್ಲಿ ಅತ್ಯಧಿಕ ಸಂಖ್ಯೆಯ ಅನಧಿಕೃತ ಪಿಜಿಗಳಿವೆ. ಮಾರ್ಗಸೂಚಿ ಬಿಡುಗಡೆ: ನಗರದಲ್ಲಿರುವ ಎಲ್ಲ ಪಿಜಿಗಳಿಗೆ ಬಿಬಿಎಂಪಿ…
ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಮುಡಾ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯ ಸಂಕಷ್ಟ ಎದುರಿಸುತ್ತಿದ್ದರೆ, ಇನ್ನೊಂದೆಡೆ ಕೆಆರ್ಡಿಎಲ್ ಕಾಮಗಾರಿಗಳಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಆ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಿಕೊಂಡ ಆರೋಪವಿದೆ. ಹೀಗಾಗಿ ಸಿಬಿಐ ತನಿಖೆಗೆ ವಹಿಸುವಂತೆ ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ, ನನಗೆ ಬಂದಿರುವ ಮಾಹಿತಿ ಪ್ರಕಾರ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಶಾಸಕ ಅಜಯ್ ಸಿಂಗ್ ಕೆಆರ್ಡಿಎಲ್ ಕಾಮಗಾರಿಗಳಿಗೆ ಬಿಡುಗಡೆಯಾದ ಹಣದಲ್ಲಿ ಶೇ.40ರಷ್ಟು ಕಮಿಷನ್ ತೆಗೆದು ಕೊಂಡಿದ್ದಾರೆ. ಇದರಲ್ಲಿ ಸುಮಾರು 500 ಕೋಟಿ ರು. ಹಣವನ್ನು ತೆಲಂಗಾಣ ಚುನಾವಣೆಗೆ ನೀಡಿರುವ ಆರೋಪವಿದೆ ಎಂದು ಹೇಳಿದರು. ಕೆಆರ್ಡಿಎಲ್ ಅಧಿಕಾರಿಗಳನ್ನು ಕೇಳಿದರೆ ಹಣ ಇಲ್ಲ. ಒತ್ತಡ ಹಾಕಿ ಕೆಲಸ ಆಗಿದೆ ಎಂದು ತಿಳಿಸಿ ಹಣ ಪಡೆದಿದ್ದಾರೆ. ಶಾಸಕರು ಕ್ರಿಯಾ ಯೋಜನೆ ಇಲ್ಲದೆ ಬಿಲ್ ಮಾಡಿ ಕೊಂಡಿದ್ದಾಗಿ ತಿಳಿಸುತ್ತಾರೆ. ಈ ಹಗರಣದ ಬಗ್ಗೆ ತನಿಖೆಯಾಗಬೇಕು. ಕ್ಲೀನ್ ಚಿಟ್ ನೀಡುವ ಎಸ್ಐಟಿ…
ಬೆಂಗಳೂರು : ಪ್ರವಾಸಿಗರನ್ನು ಆಕರ್ಷಿಸಲು ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸದೇ ಹೋದಲ್ಲಿ ವಯನಾಡಿನಲ್ಲಾದ ಭೂ-ಕುಸಿತದಂತಹ ದುರ್ಘಟನೆ ನಂದಿ ಬೆಟ್ಟದಲ್ಲೂ ನಡೆಯುವ ಸಂಭವವಿದೆ ಎಂದು ಪರಿಸರವಾದಿಗಳು ಮತ್ತು ಭೂ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದು, ಈ ಕುರಿತಂತೆ ಅವರು ರಾಜ್ಯ ಸರ್ಕಾರವನ್ನು ಕೂಡ ಎಚ್ಚರಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ನಂದಿ ಬೆಟ್ಟದಲ್ಲಿ ಈಗಾಗಲೇ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.ಇದೀಗ ರೋಪ್ ವೇ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಅದಕ್ಕಾಗಿ ಯಂತ್ರಗಳನ್ನು ಬಳಸಲಾಗುತ್ತಿದೆ. ಇದರಿಂದ ನೈಸರ್ಗಿ ಕತೆಗೆ ಧಕ್ಕೆಯಾಗುತ್ತಿದೆ. ಇದುತೀವ್ರ ಆಪತ್ತು ತಂದೊಡ್ಡುವ ಸಾಧ್ಯತೆಗಳಿದ್ದು, ವಯನಾ ಡಿನಲ್ಲಾದಂತೆ ಭೂಕುಸಿತ ದಂತಹ ದುರಂತ ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಸರ್ಕಾರ ಈ ಬಗ್ಗೆ ಎಚ್ಚರವಹಿಸಬೇಕು ಎಂದರು. ಹಿರಿಯ ಪರಿಸರ ತಜ್ಞ ಡಾ. ಎ.ಎನ್. ಯಲ್ಲಪ್ಪ ರೆಡ್ಡಿ ಮಾತನಾಡಿ, ನಂದಿ ಬೆಟ್ಟವನ್ನು ಈಗಿರುವ ರೀತಿಯಲ್ಲೇ ಸಂರಕ್ಷಿಸಬೇಕು. ಪರಿಸರಕ್ಕೆ ಮಾರಕವಾಗುವಂತಹ ಕಾಮ ಗಾರಿ ನಿಲ್ಲಿಸಬೇಕು. ಪಂಚ ನದಿಗಳಾದ ಅರ್ಕಾ ವತಿ, ಪಾಲಾರ್, ಪೆನ್ನಾರ್, ದಕ್ಷಿಣ ಪೆನ್ನಾರ್ ಮತ್ತು ಚಿತ್ರಾವತಿ ನದಿಗಳ ಉಗಮ…
ದಾವಣಗೆರೆ: ಕಳೆದ ಮೂರು ತಿಂಗಳಿನಿಂದ ಸರಿಯಾಗಿ ಸಂಬಳ ಬಂದಿಲ್ಲವೆಂದು ಮನನೊಂದು ಅಂಗನವಾಡಿ ಸಹಾಯಕಿಯೊಬ್ಬಳು ಸಾಲ ತೀರಿಸಲು ಹಣ ಇಲ್ಲದ್ದರಿಂದ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೆಟಿಜೆ ನಗರದ ಡಾಂಗೇ ಪಾರ್ಕ್ ಆವರಣದ ಅಂಗನವಾಡಿ ಕೇಂದ್ರ ಸಹಾಯಕಿ ಭಾರತಿ ಆ್ಯಸಿಡ್ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ ಎಂದು ತಿಳಿದುಬಂದಿದೆ. ಪತಿ ಆಟೋ ರಿಕ್ಷಾ ಚಾಲನೆ ಮಾಡುತ್ತಿದ್ದು, ಅಂಗನವಾಡಿ ನೌಕರಿ ಮಾಡಿ ಬರುವ ವೇತನದಲ್ಲಿ ಭಾರತಿ ಪುಟ್ಟ ಕುಟುಂಬ ಕಟ್ಟಿಕೊಂಡು ಜೀವನ ನಡೆಸುತ್ತಿದ್ದಾರೆ. ಕಳೆದ 3 ತಿಂಗಳಿನಿಂದ ಅಂಗನವಾಡಿ ವೇತನ ಬಾರದೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದ ದಿಕ್ಕೇ ತೋಚದಂತಾಗಿ ಆ್ಯಸಿಡ್ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪತಿ, ಮಕ್ಕಳು, ನೆರೆಹೊರೆಯವರು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಕಳೆದ ಆರು ದಿನಗಳಿಂದ ಮುಷ್ಕರದಲ್ಲಿ ತೊಡಗಿದ್ದ ಗ್ರಾಮ ಪಂಚಾಯತಿಗಳ ನೌಕರರ ಪ್ರತಿನಿಧಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪರಿಣಾಮ ತಕ್ಷಣ ಮುಷ್ಕರ ಹಿಂಪಡೆದು ಕಚೇರಿ ಕಾರ್ಯಗಳಲ್ಲಿ ತೊಡಗುವುದಾಗಿ ನೌಕರರ ಸಂಘದ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಗುರುವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯ್ತಿಗಳ ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಸೇರಿ ಸುಮಾರು 300ಕ್ಕೂ ಹೆಚ್ಚು ಮಂದಿ ಪ್ರತಿನಿಧಿಗಳು ಭಾಗವಹಿಸಿ ವಿವಿಧ ಬೇಡಿಕೆಗಳನ್ನು ಸಚಿವರ ಮುಂದೆ ಪ್ರಸ್ತಾಪಿಸಿದರು. ಮೂರು ಗಂಟೆ ನಡೆದ ಸಭೆಯಲ್ಲಿ 75ಕ್ಕೂ ಹೆಚ್ಚು ಬೇಡಿಕೆಗಳನ್ನು ಪ್ರಿಯಾಂಕ್ ಖರ್ಗೆ ಆಲಿಸಿದರು. ಬಳಿಕ ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸುತ್ತೇವೆ. ಜತೆಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬಡ್ತಿ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವುದಾಗಿ…
ಹುಬ್ಬಳ್ಳಿ : ನನಗೆ ಡೈವೋರ್ಸ್ ಆಗಿದೆ ಬಾಳು ಕೊಡುತ್ತೇನೆಂದು ವಂಚಿಸಿದ, ನಿವೃತ್ತ ರೈಲ್ವೆ ನೌಕರನಿಗೆ ಬಿತ್ತು ಧರ್ಮದೇಟು!
ಹುಬ್ಬಳ್ಳಿ : ಇತ್ತೀಚಿಗೆ ಸಮಾಜದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ವಂಚನೆ, ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ಹುಬ್ಬಳ್ಳಿಯಲ್ಲಿ ನಿವೃತ್ತ ರೈಲ್ವೆ ನೌಕರ ನೊಬ್ಬ ಮಹಿಳೆಗೆ ನನಗೆ ವಿಚ್ಛೇದನವಾಗಿದೆ ನಿನಗೆ ಬಾಳು ಎಂದು ಹೇಳಿ ಮಹಿಳೆಯ ಹತ್ತಿರ ಹಣ ಪೀಕಿ ವಂಚನೆ ಎಸಗಿದ್ದಾನೆ. ಇದೀಗ ಮಹಿಳೆ ಆತನಿಗೆ ಧರ್ಮದೇಟು ನೀಡಿರುವ ಘಟನೆ ನಡೆದಿದೆ. ವಿಚ್ಛೇದನವಾಗಿದೆ ಎಂದು ನಂಬಿಸಿ ಮೋಸ ಮಾಡಿದ್ದವನಿಗೆ ಮಹಿಳೆ ಧರ್ಮದೇಟು ನೀಡಿದ್ದಾಳೆ. ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ನಿವೃತ್ತ ರೈಲ್ವೆ ನೌಕರ ರಾಮಯ್ಯ (71) ಗೆ ರಾಧಿಕಾ ಎನ್ನುವ ಮಹಿಳೆ ಗೂಸಾ ಕೊಟ್ಟಿರುವ ಘಟನೆ ನಡೆದಿದೆ. ನನಗೆ ವಿಚ್ಛೇದನವಾಗಿದೆ ನಿನಗೆ ಬಾಳು ಕೊಡುತ್ತೇನೆ ಎಂದು ನಂಬಿಸಿ ವಂಚನೆ ಎಸಗಿದ್ದಾನೆ. ನಾಗಪುರ ಮೂಲದ ರಾಧಿಕಾಳನ್ನು ರಾಮಯ್ಯ ನಂಬಿಸಿ ಹಣ ಪಡೆದಿದ್ದ. ಇಂದು ಹುಬ್ಬಳ್ಳಿಗೆ ಬಂದಿದ್ದ ರಾಧಿಕಾ ಹಾಗೆ ಮತ್ತೆ ಹಣ ನೀಡುವಂತೆ ಕಿರುಕುಳ ನೀಡಿದ್ದಾನೆ. ಹಾಗಾಗಿ ವಂಚಕ ರಾಮಯ್ಯನಿಗೆ ನಡು ರಸ್ತೆಯಲ್ಲೇ ರಾಧಿಕ ರಾಮಯ್ಯಗೆ ಧರ್ಮದೇಟು ನೀಡಿದ್ದಾಳೆ. ಬಳಿಕ ರಾಮಯ್ಯನನ್ನು ರಾಧಿಕಾ…
ಯಾದಗಿರಿ : ಯಾದಗಿರಿಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಸುರಪುರದ ಬಳಿ ನಡೆದಿದೆ. ಹೌದು ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೇ ಕೆಂಭಾವಿ ಸಮೀಪ ಸುರಪುರ ಹುನಗುಂದ ಹೆದ್ದಾರಿಯಲ್ಲಿ ಈ ಒಂದು ಅಪಘಾತ ನಡೆದಿದೆ. ವೀರಪ್ಪ ಮೊದನೂರು (30) ಶರಣಪ್ಪ ಪರಸನಹಳ್ಳಿ (28) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದ್ದು ಸ್ಥಳಕ್ಕೆ ಕೆಂಭಾವಿ ಪಟ್ಟಣದ PSI ಅಶೋಕ್ ಕಾಂಬಳೆ ಭೇಟಿ ನೀಡಿ ಪರಿಶೀಲನೇ ನಡೆಸುತ್ತಿದ್ದಾರೆ. ಘಟನೆ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











