Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 8 ಮಂದಿಗೆ ಪೊಲೀಸರು ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಅಭಿಷೇಕ ಅಂಬರೀಶ್, ರಾಕ್ ಲೈನ್ ವೆಂಕಟೇಶ್,ವಿ ಹರಿಕೃಷ್ಣನಿಗೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದ್ದು ಸದ್ಯ ನಾಲ್ವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇನ್ನು ನಾಲ್ವರು ಸೆಲಬ್ರೆಟಿಗಳಿಗೆ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದು, ನಟ ಡಾಲಿ ಧನಂಜಯ್, ಚಿಕ್ಕಣ್ಣ, ನೀನಾಸಂ ಸತೀಶ್ ಮತ್ತು ನಿರ್ದೇಶಕ ತರುಣ ಸುಧೀರ್ಗೆ ನೋಟಿಸ್ ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಓರಿಯನ್ ಮಾಲ್ ನಲ್ಲಿ ಕಾಟೇರ ಸೆಲೆಬ್ರಿಟಿ ಶೋ ಇತ್ತು ಅದರ ಎದುರುಗಡೆ ಇರುವಂತಹ ರೆಸ್ಟೋಬರ್ ನಲ್ಲಿ ಸೇರಿ ಸೆಲೆಬ್ರೇಶನ್ ಮಾಡುತ್ತಾರೆ. ಒಂದು ಗುಂಟೆಗೆ ಸಬ್ ಇನ್ಸ್ಪೆಕ್ಟರ್ ಬಾರಿಗೆ ಭೇಟಿ ನೀಡಿ ಮಧ್ಯ ಸರಬರಾಜು ಮಾಡುವುದು ನಿಲ್ಲಿಸಬೇಕೆಂದು ಹೇಳುತ್ತಾರೆ ಆದರೆ ಇವರು ಮೂರು ಗಂಟೆ ನಂತರ ಕೂಡ ಪಾರ್ಟಿ ಮಾಡುತ್ತಾರೆ ನಂತರ ಬಾರ್ನ ಮಾಲೀಕ ಹಾಗೂ ಕ್ಯಾಶಿಯರ್ ವಿರುದ್ಧ…
ಬೆಂಗಳೂರು : ಉಡುಪಿ ಅಷ್ಟಮಠ ಪರ್ಯಾಯ ಮಹೋತ್ಸವಕ್ಕೆ ತಡೆಕೋರಿ ಪಿಐಎಲ್ ಸಲ್ಲಿಕೆಯಾಗಿದ್ದು ಪುತ್ತಿಗೆ ಮಠದ ಶ್ರೀ ಸುಗುನೆಂದ್ರರಿಗೆ ಪರ್ಯಾಯ ನೀಡದಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿ ಸಿಜೆ ಪ್ರಸನ್ನ ಬಿ ವರಾಳೆ ಹಾಗೂ ನ್ಯಾ ಕೃಷ್ಣ ದೀಕ್ಷಿತ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಗುರುರಾಜ್ ಜೀವನ್ ರಾವ್ ಎನ್ನುವವರು ಪುತ್ತಿಗೆ ಮಠದ ಶ್ರೀ ಸುಗುನೆಂದ್ರರಿಗೆ ಪರ್ಯಾಯ ಪೀಠ ಏರದಂತೆ ಅನುಮತಿ ನೀಡದಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ. ವಿದೇಶದಲ್ಲಿ ಜ್ಞಾನ ಪ್ರಸಾರ ಮಾಡಿದರೆ ತಪ್ಪೇನು? ಓ ನನ್ನ ಚೇತನ ಹಾಗೂ ನೀ ಕೇತನ ಕವಿತೆ ಎನ್ನುವ ರಾಷ್ಟ್ರಕವಿ ಕುವೆಂಪುರವರ ಕವಿತೆಯನ್ನು ಹೈಕೋರ್ಟ್ ಉಲ್ಲೇಖಿಸಿದೆ. ಮನೆ ಕಟ್ಟಿ ಕೂರುವುದಕ್ಕಿಂತ ಹೊರಗೆ ಓಡಾಡುವುದು ಲೇಸು ಧಾರ್ಮಿಕ ಆಚರಣೆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಹೇಳಿ ಗುರುರಾಜ್ ಜೀವನ್ ರಾವ್ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿ ಸಿಜೆ ಪ್ರಸನ್ನ ಬಿ ವರಾಳೆ ಹಾಗೂ ನ್ಯಾ ಕೃಷ್ಣ ದೀಕ್ಷಿತ…
ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ 14 ಆರೋಪಿಗಳ ಪೈಕಿ 12 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದು ವಿಚಾರಣೆಯನ್ನು JMFC ಕೋರ್ಟ್ ಫೆಬ್ರುವರಿ 7ಕ್ಕೆ ಮುಂದೂಡಿದೆ. ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗಾಗಿ 12 ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದರು. 14 ಆರೋಪಿಗಳ ಪೈಕಿ 12 ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು. ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಹಿಂದೂ ಪೀಠಕಾಗಿ ಆಗ್ರಹಿಸಿ ಗೊರಿಗಳನ್ನು ಧ್ವಂಸ ಮಾಡಿದ್ದರು. ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ದತ್ತ ಪೀಠ ಹೋರಾಟಗಾರರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮಗಳೂರು JMFC…
ಶಿವಮೊಗ್ಗ : ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್ ಎಂಬ ಸ್ಥಳೀಯ ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆಯು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದ ಘಟನೆ ಯಾಗಿದೆ. ರಾಟ್ ವಿಲರ್ ಜಾತಿಯ ನಾಯಿಯಿಂದ ಪ್ರೇಕ್ಷಕ ಶರತ್ ಎನ್ನುವವರ ಮೇಲೆ ಮನಸೊ ಇಚ್ಛೆ ದಾಳಿ ಮಾಡಿದೆ. ರಾಟ್ ವೀಲರ್ ನಾಯಿ ಪ್ರದರ್ಶನಕ್ಕೆ ಬಂದ ಪ್ರೇಕ್ಷಕ ಶರತ್ ಗೆ ಕೂಡ ಗಂಭೀರವಾದಂತಹ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಗಾಯಾಳು ಶರತ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೆ ವೇಳೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಯೋಜಕರು ಹಿಂದೇಟು ಹಾಕಿದಾಗ ಶರತ್ ಆಯೋಜಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಘಟನೆ ನಡೆದ ನಂತರ ಆಯೋಜಕರ ವಿರುದ್ಧ ಗಾಯಾಳು ಶರತ್ ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 11 ಬಾರಿ…
ಬೆಂಗಳೂರು : ಕೆ ಆರ್ ಎಸ್ ಆಣೆಕಟ್ಟಿಗೆ ದಕ್ಕೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಅಣೆಕಟ್ಟಿನ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಸಿಜೆ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾ. ಕೃಷ್ಣ ದೀಕ್ಷಿತ್ ಅವರಿಂದ ಪೀಠ ಆದೇಶ ಹೊರಡಿಸಿದೆ. ಕೆಆರ್ಎಸ್ ಡ್ಯಾಮ್ ಬಳಿ ಹಲವು ಬಾರಿ ದೊಡ್ಡ ಶಬ್ದ ಕೇಳಿ ಬಂದಿದೆ. ಕೃಷ್ಣರಾಜಸಾಗರ ಅಣೆಕಟ್ಟು ಈಗಾಗಲೇ ಸಂಕಷ್ಟದಲ್ಲಿದೆ. ಅಣೆಕಟ್ಟಿನ ಬಳಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮವಾಗಲಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಕೃಷ್ಣರಾಜಸಾಗರ ಅಣೆಕಟ್ಟಿಗೆ ಐತಿಹಾಸಿಕ ಮೌಲ್ಯವಿದೆ.ಮೈಸೂರು ಮಹಾರಾಜರು ಸರ್ ಎಂ ವಿಶ್ವೇಶ್ವರಯ್ಯರ ಕೊಡುಗೆ ಇದೆ.ಕೆ ಆರ್ ಎಸ್ ಡ್ಯಾಮ್ ನಿರ್ಮಾಣಕ್ಕೆ ಜನರು ರಕ್ತ ಬೆವರು ಹರಿಸಿದ್ದಾರೆ. ತಿತಾ ಶರ್ಮಾ ಅವರ ಸರ್ ಎಂ ವಿಶ್ವೇಶ್ವರಯ್ಯ ಕುರಿತ ಪುಸ್ತಕದಲ್ಲಿ ಉಲ್ಲೇಖವಿದೆ. ಕೆಆರ್ಎಸ್ಗೆ ಧಕ್ಕೆಯಾಗುವ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ ಎಂದು ಕೋರ್ಟ್ ತಿಳಿಸಿದೆ
ಬೆಂಗಳೂರು : ಓಟಿನ ರಾಜಕಾರಣಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿರುವುದು ವಿಷಾದಕರ. ಕಾಶ್ಮೀರ ಕೂಡ ಪಾಕಿಸ್ತಾನಕ್ಕೆ ಸೇರಿದ್ದು ಅಂತ ಕಾಂಗ್ರೆಸ್ನವರು ಹೇಳುತ್ತಾರೆ.ಅಲ್ಲದೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ, ಸಚಿವ ಸಂಪುಟದಿಂದ ಹೊರಗೆ ಇಡಬೇಕು ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಅವರು ಆಕ್ರೋಶ ಹೊರ ಹಾಕಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿರೋಧ ಪಕ್ಷದ ನಾಯಕರು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಅಸಮಾಧಾನ ಹೊರ ಹಾಕಿದ್ದಾರೆ. ಇನ್ನು ಈ ಬಗ್ಗೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು ಸಿಎಂ ಸಿದ್ದರಾಮಯ್ಯ, ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಚಿವ ಸಂಪುಟದಿಂದ ಹೊರಗೆ ಇಡಬೇಕು ಎಂದು ಒತ್ತಾಯಿಸಿದ್ದಾರೆ. ಹೆಬ್ಬಾಳ್ಕರ್ ಆರೂವರೆ ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು. ಹಾಗಾಗಿಯೇ ಬೆಳಗಾವಿ ಅಧಿವೇಶನ ಮಾಡಲಾಗುತ್ತಿದೆ. ಅವರ ಹೇಳಿಕೆ ಬೇರೆಯವರನ್ನು ಕೆರಳಿಸಲಿದೆ…
ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ (ಕರವೇ) ನಾರಾಯಣಗೌಡ ಅವರಿಗೆ ಜಾಮೀನು ಮಂಜೂರು ಆದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಲಿದ್ದಾರೆ. ಆದರೆ ನಾರಾಯಣಗೌಡ ಅವರು ಬಿಡುಗಡೆ ಆಗುತ್ತಿದ್ದಂತೆ ವಶಕ್ಕೆ ಪಡೆಯಲು ಎರಡು ಠಾಣೆಯ ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಹೌದು ಹಳೆ ಪ್ರಕರಣಗಳಲ್ಲಿ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಪೊಲೀಸರು ತಯಾರಿ ನಡೆಸಿದ್ದಾರೆ. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆಯಲು ಸಿದ್ದತೆ ನಡೆಸಿದ್ದಾರೆ. ಕೊರೊನಾ ಸಮಯದಲ್ಲಿ ರಾಷ್ಟ್ರೀಯ ವಿಪ್ಪತ್ತು ನಿರ್ವಹಣ ಕಾಯ್ದೆಯಡಿ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ವಿಚಾರಣಗೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ್ ಜಾರಿಯಾಗಿತ್ತು. ಹೀಗಾಗಿ ಹಲಸೂರ್ ಗೇಟ್ ಠಾಣೆ ಪೊಲೀಸರು ನಾರಾಯಣಗೌಡ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ.
ಮೇಷ ರಾಶಿ ಅಶ್ವಿನಿ ನಕ್ಷತ್ರ ಭರಣಿ ನಕ್ಷತ್ರ ಕೃತಿಕೆ ನಕ್ಷತ್ರದ ಮೊದಲನೇ ಪಾದ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564…
ಬೆಂಗಳೂರು : ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೇ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ವರದಿ ನೀಡುವಂತೆ ಮಾರತಹಳ್ಳಿ ಎಸ್ಪಿ ಪ್ರಿಯದರ್ಶಿನಿ ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀ ದಯಾನಂದ್ ಸೂಚನೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈ ಬಗ್ಗೆ ವರದಿ ನೀಡುವಂತೆ ಮಾರತಹಳ್ಳಿ ಎಸ್ಪಿಗೆ ಪ್ರಿಯದರ್ಶಿನಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸ್ಪಾ ಬಗ್ಗೆ ಸಂಪೂರ್ಣ ಮಾಹಿತಿ ಒಳಗೊಂಡ ವರದಿ ನೀಡುವಂತೆ ಸೂಚಿಸಿದ್ದಾರೆ. ಇತ್ತೀಚಿಗೆ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯಲ್ಲಿರುವ ನಿರ್ವಾಣ ಸ್ಪಾ ಎಂಬ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ ನಡೆಯುತ್ತಿರುವ ಮಾಹಿತಿಯನ್ನು ಆಧರಿಸಿ ಸಿಸಿಬಿ ಮಹಿಳಾ ಸಂರಕ್ಷಣಾ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಸುಮಾರು 40ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು 36 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೇರೆ ರಾಜ ಹಾಗೂ ವಿದೇಶದಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂದೆಡೆಸುತ್ತಿದ್ದ ಸ್ಪಾ ಮಾಲೀಕ ಅನಿಲ್ ಎನ್ನುವವರನ್ನು…
ಗದಗ : ಗದಗ ಜಿಲ್ಲೆಯ ಲಕ್ಷ್ಮಿಶ್ವರ ತಾಲೂಕಿನ ಸುಣಧೂರು ಗ್ರಾಮದಲ್ಲಿ ನೀಲಗಿರಿ ತೋಪಿನಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ 25 ಅಡಿ ಕಟೌಟ್ ಕಟ್ಟುವಾಗ ವಿದ್ಯುತ್ ಶಾಕ್ ತಗೋಲಿ ಮೂವರು ಯುವಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್ ಘಟನೆ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಗದಗಕ್ಕೆ ಹೋದಾಗ ಕುಟುಂಬಸ್ಥರಿಗೆ ಭೇಟಿಯಾಗಿ ಸಾಂತ್ವನ ಹೇಳುತ್ತೇನೆ. ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ. ಘಟನೇ ಹಿನ್ನೆಲೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುಣಧೂರು ಗ್ರಾಮದ ನೀಲಗಿರಿ ತೋಪಿನಲ್ಲಿ ತಡರಾತ್ರಿ ನಟ ಯಶ್ ಅವರ ಹುಟ್ಟು ಹಬ್ಬದ ಅಂಗವಾಗಿ ಸುಮಾರು 25 ಅಡಿ ಕಟೌಟ್ ಅನ್ನು ಕಟ್ಟುವಾಗ ವಿದ್ಯುತ್ ಶಾಕ್ ತಗುಲಿ…