Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಇವತ್ತು ನಟ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿದೆ. ಹೌದು ಪರಪ್ಪನ ಅಗ್ರಹಾರ ಜೈಲಿನ ಸ್ಪೆಷಲ್ ಬ್ಯಾರಕ್ ನ ಹೊರಗಡೆ ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜ್ ಸೇರಿದಂತೆ ಮತ್ತೊಬ್ಬ ವ್ಯಕ್ತಿಯ ಜೊತೆ ದರ್ಶನ್ ಅವರು ಚೇರ್ ಮೇಲೆ ಕುಳಿತುಕೊಂಡು ಒಂದು ಕೈಯಲ್ಲಿ ಕಾಫಿ ಇನ್ನೊಂದು ಕೈಯಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ಸ್ಪೆಷಲ್ ಬ್ಯಾರಕ್ ನಿಂದ ದರ್ಶನ್ ರೌಡಿಗಳ ಜೊತೆಗೆ ಆಚೆ ಕುಳಿತಿರುವ ಫೋಟೋ ಇದೀಗ ವೈರಲ್ ಆಗಿದೆ.ರೇಣುಕಾ ಸ್ವಾಮಿ ಕೊಲೆ ಪ್ರಕರಣದ 11ನೆ ಆರೋಪಿ ನಾಗರಾಜ್, ವಿಲ್ಸನ್ ಗಾರ್ಡನ್ ನಾಗ ಹಾಗೂ ಮತ್ತೊಬ್ಬರ ಜೊತೆ ದರ್ಶನ್ ಕಾಫಿ ಕುಡಿಯುತ್ತಿದ್ದಾರೆ ಎನ್ನುವ ಫೋಟೋ ಇದೀಗ ವೈರಲ್ ಆಗಿದೆ. ಎರಡು ದಿನಗಳ ಹಿಂದೆ ಜೈಲಿನ ಮೇಲೆ ಸಿಸಿಬಿ…
ಬೆಳಗಾವಿ : ರಾಜ್ಯದಲ್ಲಿ ಒಂದು ಕಡೆ ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ.ಅದಲ್ಲದೆ ರಾಜ್ಯಪಾಲರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ. ಆದರೂ ಕೂಡ ಸಂಪುಟದ ಎಲ್ಲಾ ಸಚಿವರು, ಶಾಸಕರುಗಳು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತು ಆತ್ಮಸ್ಥೈರ್ಯ ತುಂಬಿದ್ದಾರೆ. ಆದರೆ ಕಾಂಗ್ರೆಸ್ ಜಾರಿ ಮಾಡಿರುವ ಗೃಹಲಕ್ಷ್ಮಿ ಯೋಜನೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಅಜ್ಜಿಯೊಬ್ಬರು ಸಿಎಂ ಸಿದ್ದರಾಮಯ್ಯ ಅವರು ರಾಜಕೀಯವಾಗಿ ಇನ್ನು ಎತ್ತರಕ್ಕೆ ಬೆಳೆಯಲಿ ಎಂದು ಆಶೀರ್ವದಿಸಿ ಮುತ್ತೈದೆಯರಿಗೆ ಉಡಿ ತುಂಬಿ ಹೋಳಿಗೆ ಊಟ ಹಾಕಿಸಿರುವ ಘಟನೆ ನಡೆದಿದೆ. ಹೌದು ಬೆಳಗಾವಿ ಜಿಲ್ಲೆಯ ಸುಟ್ಟಟ್ಟಿ ಗ್ರಾಮದ ವೃದ್ಧೆ ಅಕ್ಕಾತಾಯಿ ಲಂಗೋಟಿ ಗ್ರಾಮದೇವತೆಯ ದೇವಸ್ಥಾನದಲ್ಲಿ 25 ಸುಮಂಗಲಿಯರಿಗೆ ಉಡಿ ತುಂಬುವ ಕಾರ್ಯಕ್ರಮದ ಜೊತೆಗೆ ಹೋಳಿಗೆ ಊಟವನ್ನು ಹಾಕಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಳಿತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ…
ಬೆಂಗಳೂರು : ರಾಜ್ಯದಲ್ಲಿ ಕಳೆದ ಬಾರಿ ಮಳೆ ಆಗದೆ ರೈತರು ಹಾಗೂ ಜನರು ತೀವ್ರ ಸಂಕಷ್ಟವನ್ನು ಎದುರಿಸಿದ್ದರು. ಆದರೆ ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ ಇದರ ಪರಿಣಾಮ ಅನೇಕ ಕಡೆ ಅವಾಂತರಗಳು ಸೃಷ್ಟಿಯಾಗಿವೆ. ಇದರ ಮಧ್ಯ ಇದೀಗ ಬೆಂಗಳೂರಿನ ಬಿಬಿಎಂಪಿ ಮುಖ್ಯ ಕಚೇರಿಯ ಎದುರುಗಡೆ ಇರುವ ರಸ್ತೆಯೇ ಕುಸಿದಿದೆ. ಹೌದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಕಚೇರಿಯ ಮುಂದಿನ ರಸ್ತೆ ಕುಸಿದಿದೆ. ದೇವಾಂಗ ಹಾಸ್ಟೆಲ್ ಕಡೆಗೆ ಹೋಗುವ ರಸ್ತೆಯಲ್ಲಿ ರಸ್ತೆ ಕುಸಿದಿದೆ. ರಸ್ತೆ ಕುಸಿದಿದ್ದರಿಂದ ಚರಂಡಿ ನೀರು ಹೊರಗೆ ಹರಿಯುತ್ತಿದೆ. ರಸ್ತೆ ಕುಸಿತ ಜಾಗದಲ್ಲಿ ಸದ್ಯ ಟ್ರಾಫಿಕ್ ಪೊಲೀಸರು ಬ್ಯಾರಿಕೆಡ್ ಅಳವಡಿಸಿದ್ದಾರೆ. ಇದರಿಂದ ಸಾರ್ವಜನಿಕರು ಬಿಬಿಎಂಪಿ ನಿರ್ಲಕ್ಷದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಸಹಜವಾಗಿ ರಸ್ತೆ ಚರಂಡಿ ವಿದ್ಯುತ್ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಬಿಬಿಎಂಪಿ ಸಿಲಿಕಾನ್ ಸಿಟಿ ಜನರಿಗೆ ಒದಗಿಸುತ್ತದೆ. ಎಲ್ಲೇ ರಸ್ತೆಗಳಲ್ಲಿ ತೆಗ್ಗು ಗುಂಡಿ ಬಿದ್ದರೂ ಸಹ ಬಿಬಿಎಂಪಿ ಸಿಬ್ಬಂದಿಗಳು ಬಂದು ಸರಿ ಪಡಿಸುತ್ತಿದ್ದರು.…
ಕೋಲಾರ : ನವವಿವಾಹಿತೆ ಒಬ್ಬಳು ಮದುವೆಯಾಗಿ ವರ್ಷ ಕಳೆಯುವಷ್ಟರಲ್ಲಿ ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ನವವಿವಾಹಿತೆಯ ಕುಟುಂಬಸ್ಥರು ಪತಿಯೇ ಇದಕ್ಕೆ ಕಾರಣ ಎಂದು ಆತನ ಮನೆಯ ಮುಂದೇನೆ ಮಗಳ ಅಂತ್ಯಸಂಸ್ಕಾರಕ್ಕೆ ಪ್ರಯತ್ನಿಸಿರುವ ಘಟನೆ ಕೋಲಾರ ತಾಲೂಕಿನ ತೂರಾಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು ಕೋಲಾರ ತಾಲೂಕಿನ ತೂರಾಂಡಹಳ್ಳಿ ಗ್ರಾಮದಲ್ಲಿರುವ ಪತಿ ಉಲ್ಲಾಸ್ ಗೌಡ ಮನೆಯ ಎದುರು ಪತ್ನಿ ಮಾನಸ ಗೌಡ (24) ಅವರ ಶವವನ್ನಿಟ್ಟು ಪ್ರತಿಭಟನೆ ಮಾಡಲಾಗಿದೆ. ಕಳೆದ ಒಂದು ವರ್ಷಗಳ ಹಿಂದೆ ಮಾನಸ ಗೌಡ ಹಾಗೂ ಉಲ್ಲಾಸ್ ಗೌಡ ನಡುವೆ ಕಳೆದ ವರ್ಷ ಅದ್ದೂರಿಯಾಗಿ ಮದುವೆ ನಡೆದಿತ್ತು. ಮದುವೆಯ ಹೊಸತರಲ್ಲಿ ಎಲ್ಲವು ಚೆನ್ನಾಗಿತ್ತು. ಆದರೆ ಸ್ವಲ್ಪ ದಿನ ಕಳೆಯುವಷ್ಟರಲ್ಲಿ ಉಲ್ಲಾಸ್ ಗೌಡನಿಂದ ಮಾನಸಗೆ ವರದಕ್ಷಿಣೆ ಕಿರುಕುಳ ಶುರುವಾಗಿದೆ. ಇದರಿಂದ ಬೇಸತ್ತ ಮಾನಸ ಗೌಡ ಕೆಲವು ದಿನಗಳ ಹಿಂದೆ ತವರು ಮನೆ ಸೇರಿಕೊಂಡಿದ್ದಳು.ಶನಿವಾರ ರಾತ್ರಿ ಡೆತ್ ನೋಟ್ ಬರೆದಿಟ್ಟು ಮಾನಸ ಗೌಡ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ವೇಳೆ ಪತಿ…
ಮೈಸೂರು : ಸಿದ್ದರಾಮಯ್ಯ ಅವರು ಮುಡಾ ಹಗರಣಕ್ಕಾಗಿ ಒನ್ ಮ್ಯಾನ್ ಕಮಿಷನ್ ಮಾಡಿದ್ದಾರೆ. ಒನ್ ಮ್ಯಾನ್ ಕಮಿಷನ್ ಕುಮಾರಕೃಪದಿಂದ ಆಪರೇಟ್ ಆಗ್ತಾ ಇದೆ. ಒನ್ ಮ್ಯಾನ್ ಕಮಿಷನ್ಗಾಗಿಯೇ ಮೇಜು ಖುರ್ಚಿ ಅಂತಾ 1.5 ಕೋಟಿ ಖರ್ಚು ಆಗಿದೆ. ಇನ್ನೂ ರೀಡೂ ವಿಚಾರದಲ್ಲಿ ಕೆಂಪಣ್ಣ ವರದಿ ಬಿಡುಗಡೆಯಾದರೆ, ಸಿದ್ದರಾಮಯ್ಯ ಪಂಚೆ ಶರ್ಟು ಎಲ್ಲ ಮಸಿ ಆಗೋದು ಗ್ಯಾರಂಟಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೆಲಿಕಾಪ್ಟರ್ನಲ್ಲಿ ಬಂದು ಮುಡಾ ಸೈಟಿಗೆ ಸಂಬಂಧಿಸಿದ ಎಲ್ಲ ಫೈಲ್ಗಳನ್ನು ತಗೊಂಡು ಹೋಗಿದ್ದಾರೆ. ಮುಡಾಗೆ ಇಷ್ಟೋದು ಸೆಕ್ಯುರಿಟಿ ಯಾಕೆ? ಮುಡಾಗೆ ಪ್ರತಿ ತಿಂಗಳು 5 ಕೋಟಿ ರೂ. ಸಬಂಳ ಖರ್ಚು ವೆಚ್ಚಕ್ಕೆ ಬೇಕು. ಎರಡು ತಿಂಗಳಿಂದ 10 ಕೋಟಿ ರೂ. ಖರ್ಚಾಗಿದೆ. ಏನೂ ಕೆಲಸ ಮುಡಾದಿಂದ ನಡೆಯುತ್ತಿಲ್ಲ ಎಂದರು. ಇನ್ನೂ ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡಿರುವ ಕುರಿತಂತೆ ಪ್ರತಿಕ್ರಿಯಿಸಿದ ಅವರು,…
ಬೆಳಗಾವಿ : ಇತ್ತೀಚಿಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳು, ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅಲ್ಲದೆ ನಿನ್ನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಗೆ ಮದ್ಯದಲ್ಲಿ ಡ್ರಗ್ಸ್ ಮಿಶ್ರಣ ಮಾಡಿ ಅತ್ಯಾಚಾರ ಮಾಡಿರುವ ಘಟನೆ ವರದಿಯಾಗಿತ್ತು. ಇದೀಗ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಡ್ರಾಪ್ ಕೊಡುವ ನೆಪದಲ್ಲಿ ಕಾಮುಕನೋರ್ವ 12 ವರ್ಷದ ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದಿದೆ. ಸುನೀಲ್ ದೀಪಾಳೆ ಎಂಬಾತ ಇಂತ ಹೇಯ ಕೃತ್ಯ ಎಸಗಿದ್ದು. ಆರೋಪಿಯು ರಾಯಭಾಗ ರೈಲ್ವೆ ಸ್ಟೇಷನ್ ಕೈರಕೋಡಿ ನಿವಾಸಿಯಾಗಿದ್ದಾನೆ ಎನ್ನಲಾಗಿದೆ. ಬಾಲಕಿ ಪಟ್ಟಣದ ಕಂಚರವಾಡಿ ರೋಡ್ ಕಡೆಯಿಂದ ತೆರಳುತ್ತಿದ್ದ ವೇಳೆ ಬೈಕ್ ಮೇಲೆ ಅದೇ ರಸ್ತೆಯಲ್ಲಿ ಬಂದಿದ್ದ ಕಾಮುಕ. ಈ ವೇಳೆ ಬಾಲಕಿ ಒಂಟಿಯಾಗಿರುವುದು ಕಂಡು ಬೈಕ್ ನಿಲ್ಲಿಸಿದ್ದಾನೆ. ಮನೆಯವರಿಗೆ ಡ್ರಾಪ್ ಕೊಡುತ್ತೇನೆ ಬಾ ಎಂದು ಬಾಲಕಿಗೆ…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಮೇಲೆ ಗೃಹ ಲಕ್ಷ್ಮಿ ಗೃಹಜ್ಯೋತಿಯಂತಹ ಜನೋಪಯೋಗಿ ಗ್ಯಾರಂಟಿಗಳನ್ನು ನೀಡಿದ್ದಲ್ಲದೆ ಈಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಮತ್ತೊಂದು ಗ್ಯಾರಂಟಿ ಮಾದರಿಯ ಯೋಜನೆ ಜಾರಿ ಮಾಡಲು ಮುಂದಾಗಿದೆ. ಜನರಿಗೆ ಆರೋಗ್ಯ ಭಾಗ್ಯ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಹೌದು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಗೃಹ ಆರೋಗ್ಯ’ ಯೋಜನೆ ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ. ಮುಂದಿನ ತಿಂಗಳಿನಿಂದ ‘ಗೃಹ ಆರೋಗ್ಯ’ ಯೋಜನೆ ಜಾರಿಯಾಗಲಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಮುಂದಿನ ತಿಂಗಳು ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗೂಂಡುರಾವ್ ತಿಳಿಸಿದ್ದಾರೆ. ಮುಂದಿನ ತಿಂಗಳು ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಆರೋಗ್ಯ ಇಲಾಖೆ…
ಚಾಮರಾಜನಗರ : ಕೆಲವೊಂದು ಸಾವು ಎಷ್ಟು ಅನಿಶ್ಚಿತವಾಗಿರುತ್ತವೆ ಎಂದರೆ ಸಾವಿನಲ್ಲೂ ಕೂಡ ಕೆಲವರು ಒಂದಾಗುತ್ತಾರೆ. ಅಂತಹದ್ದೇ ಘಟನೆ ಇದೀಗ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದ್ದು, ಪತ್ನಿ ಸಾವಿನ ಸುದ್ದಿ ಕೇಳಿ ಪತಿ ಕೂಡ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿ ಈ ಒಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಮಂಗಲ ಗ್ರಾಮದ ಶೇಖರ್ (70) ಹಾಗೂ ಸುಮಿತ್ರಮ್ಮ (65) ಸಾವಿನಲ್ಲೂ ಒಂದಾದ ದಂಪತಿ ಎಂದು ತಿಳಿದುಬಂದಿದೆ.ದಂಪತಿಗಳಿಬ್ಬರು ಕೃಷಿಕರಾಗಿದ್ದು ಮಂಗಲ ಸಮೀಪದ ರಾಮನಗುಡ್ಡ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಸುಮಿತ್ರಮ್ಮಗೆ ಶುಕ್ರವಾರ ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕಾಮಗೆರೆ ಬಳಿ ಇರುವ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸುಮಿತ್ರಮ್ಮ ಶುಕ್ರವಾರ ರಾತ್ರಿ ನಿಧನರಾಗಿದ್ದರು. ಈ ವಿಚಾರ ತಿಳಿದ ಪತಿ ಶೇಖರ್ ಹೃದಯಾಘಾತದಿಂದ ಸಾವನ್ನಪ್ಪಿದರು. ದಂಪತಿ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ತಾನು ನಿರಪರಾಧಿ ತನ್ನನ್ನು ಬಲಿಪಶುವನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ತನಗೆ ಮಾದಕ ವಸ್ತು ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಹೇಮಾ ಕೆಲವು ವರದಿಗಳನ್ನು ಸಹ ತೋರಿಸಿದ್ದಾರೆ. ಹೇಮಾ ಈ ವಿಡಿಯೋ ಬಿಡುಗಡೆ ಮಾಡಿದ ಎರಡು ದಿನಗಳ ನಂತರ ತೆಲಗಿನ ‘ಮಾ’ ಅಸೋಸಿಯೇಷನ್ ಅವರ ಮೇಲಿನ ಅಮಾನತನ್ನು ಹಿಂತೆಗೆದುಕೊಂಡಿದೆ. ಹೌದು ಬೆಂಗಳೂರಿನಲ್ಲಿ ನಡೆದಂತೆ ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ ಜೈಲುವಾಸ ಕೂಡ ಅನುಭವಿಸಿದ್ದರು. ನಂತರ ತಮ್ಮ ಕುರಿತು ನೆಗೆಟಿವ್ ರಿಪೋರ್ಟ್ಸ್ ಬಂದ ನಂತರ ತೆಲಗಿನ ‘ಮಾ’ ಅಸೋಸಿಯೇಷನ್ ಅವರ ಮೇಲಿನ ಅಮಾನತನ್ನು ಹಿಂತೆಗೆದುಕೊಂಡಿದೆ. ಹೀಗಾಗಿ ಮತ್ತೆ ಹೇಮಾ ‘ಮಾ’ ಸದಸ್ಯರಾಗಿ ಮುಂದುವರಿಯಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಇದು ಹೇಮಾಗೆ ದೊಡ್ಡ ನಿರಾಳತೆ ತಂದುಕೊಟ್ಟಿದೆ. ಆದರೆ ಹೇಮಾ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ‘ಮಾ’ ಅಸೋಸಿಯೇಷನ್ ಷರತ್ತು ವಿಧಿಸಿದೆ ಎನ್ನಲಾಗಿದೆ. ಪೊಲೀಸರು ಹೇಮಾಗೆ ಮಾದಕ ವಸ್ತು ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಹೇಳಿದ್ದಾರೆ.…
ಬೆಂಗಳೂರು : ಬೆಂಗಳೂರಿನಲ್ಲಿ ಮಲತಂದೆಯೊಬ್ಬ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ. ಘಟನೆಯಿಂದ ಸಹಜವಾಗಿ ಜನರು ಬೆಚ್ಚಿ ಬಿದ್ದಿದ್ದಾರೆ. ಹೌದು ಬೆಂಗಳೂರಿನ ದಾಸರಹಳ್ಳಿಯಲ್ಲಿ ಡಬಲ್ ಮರ್ಡರ್ ನಡೆದಿದ್ದು, ಮಲತಂದೆಯಿಂದ ಇಬ್ಬರು ಹೆಣ್ಣು ಮಕ್ಕಳ ಬರ್ಬರ ಹತ್ಯೆಯಾಗಿದೆ. ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಣು ಮಕ್ಕಳನ್ನು ತಂದೆ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಉತ್ತರ ಭಾರತ ಮೂಲದ ವ್ಯಕ್ತಿಯಿಂದ ಹೆಣ್ಣು ಮಕ್ಕಳ ಕೊಲೆಯಾಗಿದೆ ಎಂದು ತಿಳಿದುಬಂದಿದೆ. ಕಾವೇರಿ ಲೇಔಟ್ ನ ಮನೆಯಲ್ಲಿ ಕುಟುಂಬ ವಾಸವಿತ್ತು. ಸುಮಾರು 14 ವರ್ಷ ಹಾಗೂ 15 ವರ್ಷದ ಹೆಣ್ಣು ಮಕ್ಕಳ ಹತ್ಯೆ ನಡೆದಿದೆ. ಹೆಣ್ಣು ಮಕ್ಕಳನ್ನು ಕೊಂದ ಮಲತಂದೆ ಆರೋಪಿ ಇದೀಗ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಸುಜಿತ್ ಭೇಟಿ ನೀಡಿದ್ದು, ಅಲ್ಲದೆ ಅಮೃತಹಳ್ಳಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಘಟನೆ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.