Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಕೇವಲ ಒಂದು ಹುಡುಗಿಗೋಸ್ಕರ ಅಪ್ರಾಪ್ತರ ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಬಡಿಗೆ, ಕಲ್ಲುತೂರಾಟ ನಡೆಸಿ ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿರುವ ಘಟನೆ ಕಲಬುರ್ಗಿ ನಗರದ ಸಂಗಮೇಶ್ವರ ಕಾಲೋನಿ ಬಳಿ ನಡೆದಿದೆ. ಕುಡಿದ ಮತ್ತಿನಲ್ಲಿ ಈ ಒಂದು ಗ್ಯಾಂಗ್ ವಾರ್ ನಡೆದಿದ್ದು, ಘಟನೆಯನ್ನು ಕಂಡು ಕಲ್ಬುರ್ಗಿ ನಗರದ ಜನತೆ ಬೆಚ್ಚಿಬಿದ್ದಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಆರ್.ಜಿ ನಗರ ಠಾಣೆಯ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಒಂದು ಗ್ಯಾಂಗ್ ವಾರ್ ನಡೆದಿದ್ದು, ಎರಡು ಗ್ಯಾಂಗ್ಗಳಲ್ಲಿ ಬಹುತೇಕ ವಿದ್ಯಾರ್ಥಿಗಳೇ ಇದ್ದರೂ ಎನ್ನಲಾಗಿದೆ. ಹುಡುಗಿಯ ವಿಷಯದ ಕುರಿತಂತೆ ಈ ಒಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದೆ ಎನ್ನಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಹುಡುಗಿಯೊಬ್ಬಳಿಗೆ ಒಂದು ಗುಂಪಿನವರು ಮೆಸೇಜ್ ಕಳಿಸಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಕುಡಿದ ನಶೆಯಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.…
ಬೆಳಗಾವಿ : ಬೆಳಗಾವಿಯ ವಿಕಾಸ ಸೌಧದಲ್ಲಿ ಒಂದೆಡೆ ಅಧಿವೇಶನ ನಡೆಯುತ್ತಿದ್ದರೆ, ಇನ್ನೊಂದು ಕಡೆ 2A ಮೀಸಲಾತಿಗೆ ಸಂಬಂಧ ಪಟ್ಟಂತೆ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿಯಲ್ಲಿ ನಡೆದ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ಇಂದು ರಾಜ್ಯಾದ್ಯಂತ ರಸ್ತೆ ತಡೆ ನಡೆಸಿ ಹೋರಾಟ ಕೈಗೊಳ್ಳುವಂತೆ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ಇನ್ನು ಮುಂದೆ ಚೆನ್ನಮ್ಮನಂತೆ ಕ್ರಾಂತಿಯ ಹೋರಾಟ ನಡೆಸುತ್ತೇವೆ. ನಿಮ್ಮ ನಿಮ್ಮ ಊರುಗಳಲ್ಲಿ ರಸ್ತೆ ತಡೆದು ಹೋರಾಟ ನಡೆಸಿ, ಇದುವರೆಗೂ ಲಿಂಗಾಯಿತ ವಿರೋಧಿ ಮುಖ್ಯಮಂತ್ರಿ ಎಂದು ಹೇಳುತ್ತಿದ್ದರು. ನಾವು ಹಾಗೆ ಅಂದುಕೊಂಡಿರಲಿಲ್ಲ. ಆದರೆ, ಈಗ ಆ ರೀತಿ ಅನಿಸುತ್ತಿದೆ. ಪಂಚಮಸಾಲಿ ಪ್ರತಿಭಟನೆಯಲ್ಲಿ ಪೊಲೀಸರೇ ಸಿವಿಲ್ ಡ್ರೆಸ್ ಧರಿಸಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು. ಹಲ್ಲೆ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡು…
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಎರಡು ಮಕ್ಕಳನ್ನು ತಾಯೊಬ್ಬಳು ಉಸಿರುಗಟ್ಟಿಸಿ ಕೊಂದು ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌಫು ಬೆಂಗಳೂರಲ್ಲಿ ಮಕ್ಕಳ ಕೊಂದು ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ, ಕುಸುಮ (35) ಆತ್ಮಹತ್ಯೆಗೆ ಶರಣಾದ ತಾಯಿ ಎಂದು ತಿಳಿದುಬಂದಿದೆ. ಕೋಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಕುಸುಮ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. 6 ವರ್ಷದ ಮಗು ಹಾಗೂ 7 ವರ್ಷದ ಮಗಳನ್ನು ಕುಸುಮ ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಪತಿಯೊಂದುಗೆ ಜಗಳ ಮಾಡಿಕೊಂಡು, ಮನನೊಂದ ಕುಸುಮ ಡೆತ್ ನೋಟ್ ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ ಎಂದು ಬರೆದಿಟ್ಟು ನೇಣು ಬಿಗಿದು ಕೊಂಡು ಇದೀಗ ತಾನು ಆತ್ಮಹತ್ಯೆಕೊಂಡು ಇಬ್ಬರು ಮಕ್ಕಳನ್ನು ಕೊಂದಿದ್ದಾಳೆ.…
ಹಾಸನ : ಬ್ಯಾಂಕ್ ನಲ್ಲಿ ಹಾಗೂ ಇತರೆ ವೈಯಕ್ತಿಕ ಕೈ ಸಾಲ ಮಾಡಿಕೊಂಡಂತಹ ದಂಪತಿಗಳು ಸಾಲ ತೀರಿಸಲಾಗದೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಆಲೂರಿನಲ್ಲಿ ನಡೆದಿದೆ. ಹೌದು ಸಾಲಭಾದೆಗೆ ಮನನೊಂದು ರೈತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದಂಪತಿಗಳನ್ನ ನಟೇಶ್ ಹಾಗೂ ಚಿನ್ನಮ್ಮ ಎಂದು ತಿಳಿದುಬಂದಿದೆ. ಬ್ಯಾಂಕ್ ಹಾಗೂ ಕೈ ಸಾಲವನ್ನು ನಟೇಶ್ ಹಾಗು ದಂಪತಿ ಸಾಲ ಮಾಡಿಕೊಂಡಿದ್ದರು.ಸಾಲ ತೀರಿಸಲಾಗಿದೆ ನಟೇಶ್ ಮತ್ತು ಚಿನ್ನಮ್ಮ ದಂಪತಿ ಪರದಾಡುತ್ತಿದ್ದರು. ಸಾಲದ ಹಣ ವಾಪಸ್ ಗೆ ಸಾಲ ಕೊಟ್ಟವರು ಒತ್ತಾಯಿಸುತ್ತಿದ್ದರು. ಇದರಿಂದ ಬೇಸತ್ತು ಬಾವಿಗೆ ಹಾರಿ ನಟೇಶ್ ಮತ್ತು ಚಿನ್ನಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ತಮ್ಮ ಜಮೀನಿನಲ್ಲಿರುವ ಬಾವಿಗೆ ಹಾರಿ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಡರಾತ್ರಿ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ಬೆಂಗಳೂರು : ಬೆಂಗಳೂರಿನ ಬಿಎಂಟಿಸಿ ಮಹಿಳಾ ಪ್ರಯಾಣಿಕರ ಜೊತೆಗೆ ಕಂಡಕ್ಟರ್ ಗಳು ಆಗಾಗ ಕಿರಿಕಿರಿ ಮಾಡಿಕೊಳ್ಳುತ್ತಿದ್ದರು. ಇದಕ್ಕೆ ಕಾರಣ ಏನೆಂದರೆ ಆಧಾರ್ ಕಾರ್ಡ್ನಲ್ಲಿ ಇಂಗ್ಲಿಷ್ ಜೊತೆಗೆ ಕನ್ನಡ ಬಿಟ್ಟು ಬೇರೆ ಭಾಷೆ ಪ್ರಿಂಟ್ ಆಗಿದ್ದರೆ, ಅಂತಹ ಮಹಿಳೆಯರಿಗೆ ಬಿಎಂಟಿಸಿ ಕಂಡಕ್ಟರ್ಗಳು ಶಕ್ತಿ ಯೋಜನೆಯ ಟಿಕೆಟ್ ನೀಡುತ್ತಿರಲಿಲ್ಲ. ಇದೀಗ ರಾಜ್ಯ ಸರ್ಕಾರ ಅದಕ್ಕೀಗ ಬಿಎಂಟಿಸಿ ಬ್ರೇಕ್ ಹಾಕಿದ್ದು, ಆಧಾರ್ ಕಾರ್ಡ್ ಯಾವ ಭಾಷೆಯಲ್ಲಿದ್ದರೂ ಪರವಾಗಿಲ್ಲ, ವಿಳಾಸ ಕರ್ನಾಟಕದಾಗಿದ್ದರೆ ಸಾಕು ಎಂದು ಆದೇಶ ಹೊರಡಿಸಿದೆ. ಹೌದು ಇಷ್ಟು ದಿನಗಳ ಕಾಲ ಬಿಎಂಟಿಸಿಯಲ್ಲಿ ಸಂಚರಿಸುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಇದೊಂದು ತಲೆನೋವು ಆಗಿ ಪ್ರಣಮಿಸಿತ್ತು. ಕಂಡಕ್ಟರ್ಗಳ ಜೊತೆಗೆ ಮಹಿಳಾ ಪ್ರಯಾಣಿಕರು ಕಿರಿಕ್ ಮಾಡಿಕೊಳ್ಳುತ್ತಿದ್ದರು. ಆದರೂ ಕಂಡಕ್ಟರ್ಗಳು ಆಧಾರ್ ಕಾರ್ಡ್ ನಲ್ಲಿ ಇಂಗ್ಲಿಷ್ ನಲ್ಲಿ ಅಡ್ರೆಸ್ ಇದೆ ಟಿಕೆಟ್ ನೀಡಲ್ಲ ಎಂದು ಮಹಿಳೆಯರೊಂದಿಗೆ ವಾಗ್ವಾದಕ್ಕೆ ಇಳಿಯುತ್ತಿದ್ದರು. ಆದರೆ ಇದೀಗ ರಾಜ್ಯ ಸರ್ಕಾರ ಅದಕ್ಕೆಲ್ಲ ಬ್ರೇಕ್ ಹಾಕಿದ್ದು, ಯಾವ ಭಾಷೆಯಲ್ಲಿದ್ದರೂ ಸರಿ ಟಿಕೆಟ್ ನೀಡಿ ಎಂದು ಆದೇಶ ಹೊರಡಿಸಿದೆ. ದೇಶದ…
BREAKING : ‘KPSC’ ಇಂದ ಮತ್ತೊಂದು ಎಡವಟ್ಟು : ‘PDO’ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಆಗಿರುವ ಫೋಟೋ ವೈರಲ್!
ಧಾರವಾಡ : ಕಳೆದ ಡಿಸೆಂಬರ್ 8ರಂದು ನಡೆದ ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಕೂಡ ಅಕ್ರಮ ನಡೆದಿದೆ ಎನ್ನುವ ಆರೋಪ ಇದೀಗ ಕೇಳಿ ಬರುತ್ತಿದೆ. ಧಾರವಾಡದಲ್ಲಿ ಪ್ರಶ್ನೆ ಪತ್ರಿಕೆಗಳ ಮೇಲಿನ ಸೀಲ್ ಓಪನ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಪರೀಕ್ಷೆಗೊ ಮುನ್ನ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿರುವ ಫೋಟೋ ಇದೀಗ ವೈರಲ್ ಆಗಿದ್ದು, ಕೆಪಿಎಸ್ಸಿಯಿಂದ ಈಗ ಮತ್ತೊಂದು ಮಹಾ ಎಡವಟ್ಟು ಆಗಿದೆ ಎನ್ನಲಾಗಿದೆ. ಹೌದು ಕಳೆದ ಡಿಸೆಂಬರ್ 8ರಂದು ನಡೆದಿದ್ದ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಪ್ಪಿತಸ್ಥರನ್ನು ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರವೂ ವ್ಯಕ್ತವಾಗಿದೆ. ಇದರೊಂದಿಗೆ, ಈ ಸಲವೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕೆಪಿಎಸ್ಸಿ ವಿಫಲವಾಯ್ತಾ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ. ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾನ್ಯವಾಗಿ ಮೂರು ಹಂತದ ಸೀಲ್ ಭದ್ರತೆ ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್ಗೆ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಸುಮಾರು 40 ಪುಟಗಳಷ್ಟು ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆತನ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ FIR ದಾಖಲಾಗಿದೆ. ಹೌದು ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನಡಿ ಅತುಲ್ ಮಡದಿ ನಿಕಿತಾ ಸಿಂಘಾನಿಯ, ನಿಶಾ ಸಿಂಘಾನಿಯಾ, ಅನುರಾಗ್ ಸಿಂಘಾನಿಯಾ ಹಾಗೂ ಸುಶೀಲ್ ಸಿಂಘಾನಿಯಾ ವಿರುದ್ಧ ಮಾರತಹಳ್ಳಿಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತುಲ್ ಸುಭಾಷ್ ಮತ್ತು ನಿಕಿತಾ ಸಿಂಘಾನಿಯ 2019ರಲ್ಲಿ ಮದುವೆಯಾಗಿದ್ದು ಗಂಡು ಮಗು ಇದೆ. ನಿಕಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಸಂಬಂಧಿ ಸುಶೀಲ್ ಸಿಂಘಾನಿಯಾ ಸೇರಿ ಅತುಲ್ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ಪ್ರಕರಣದ ಇತ್ಯರ್ಥಕ್ಕಾಗಿ 3 ಕೋಟಿ ರೂ.ನೀಡಬೇಕೆಂದು ಒತ್ತಾಯ ಮಾಡಿದ್ದರು. ಅಷ್ಟೇ ಅಲ್ಲದೇ ಮಗನ ಭೇಟಿಗೆ ಅವಕಾಶ ನೀಡಲು 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. 3 ಕೋಟಿ ಹಣ…
ಮಂಡ್ಯ : ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ಸಾವನಪ್ಪಿದ್ದರು. ಇಂದು ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅವರ ಹುಟ್ಟೂರಾದ ಸೋಮನಹಳ್ಳಿಗೆ ತಂದು, ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಎಸ್ಎಮ್ ಕೃಷ್ಣ ಅವರ ಮೊಮ್ಮಗ ಅಮರ್ತ್ಯ ಅವರು ತಾತನ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು. ಈ ಒಂದು ಅಂತ್ಯಕ್ರಿಯೆಯಲ್ಲಿ ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದು, ಅಂತ್ಯಕ್ರಿಯೆಗೆ ಸುಮಾರು 15 ಜನ ಸ್ವಾಮೀಜಿಗಳು ವೇದ ಮಂತ್ರಗಳ ಪಠಣ ಮಾಡಿದ್ದಾರೆ. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ, ಒಕ್ಕಲಿಗ ಸಂಪ್ರದಾಯದಂತೆ ಎಸ್ ಎಂ ಕೃಷ್ಣ ಅವರ ಚಿತೆಗೆ ಅವರ ಪ್ರೀತಿಯ ಮೊಮ್ಮಗ ಆದಂತಹ ಅಮರ್ತ್ಯ ಅವರು ಅಗ್ನಿಸ್ಪರ್ಶಿಸುವ ಮೂಲಕ ತಾತನ ಚಿತೆಗೆ ಅಗ್ನಿಸ್ಪರ್ಶಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಅಂತ್ಯಕ್ರಿಯೆಗೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್…
ಬೆಂಗಳೂರು : ಕಳೆದ ಹಲವು ದಿನಗಳ ಹಿಂದೆ ತಮಿಳುನಾಡಿನಲ್ಲಿ ಉಂಟಾಗಿದ್ದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲು ಬಿರಿತ್ತು. ಬಳಿಕ ಆ ಒಂದು ಚಂಡಮಾರುತದಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಹಲವರು ಅವಂತರ ಸೃಷ್ಟಿಯಾಗಿತ್ತು. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸಲಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಹೌದು ಬಂಗಾಳ ಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಉದ್ಭವಿಸಿದ್ದು ರಾಜ್ಯದಲ್ಲಿ ನಾಳೆ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಮತ್ತು 18 ಡಿಗ್ರಿ ಇರಲಿದೆ ಎಂದು ಇಲಾಖೆ ಮಾಹಿತಿ…
ಮಂಡ್ಯ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ನಿನ್ನೆ ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದು ಇಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸ್ವಗ್ರಾಮವಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅದಕ್ಕೂ ಮುನ್ನ ಸರ್ಕಾರದಿಂದ ಸಕಲ ಗೌರವಗಳೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮಾಜಿ ಸಿಎಂ SMK ವಿಧಿವಶ ಹಿನ್ನೆಲೆಯಲ್ಲಿ ಸರ್ಕಾರದಿಂದ ಗೌರವ ವಂದನೆ ಸಮರ್ಪಿಸಲಾಯಿತು. ಸರ್ಕಾರದಿಂದ SMKಗೆ ಅಂತಿಮ ಗೌರವ ನಮನ ಸಲ್ಲಿಸಲಾಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರ ಗೀತೆ ನುಡಿಸಿ ಗೌರವ ನಮನ ಸಲ್ಲಿಸಲಾಯಿತು. ಡಿಕೆಶಿಯಿಂದ ಕಣ್ಣೀರ ಬೀಳ್ಕೊಡುಗೆ ಸಕಲ ಸರ್ಕಾರಿ ಗೌರವ ನಮನ ಸಲ್ಲಿಸಿದ ಬಳಿಕ, ಮೂರು ಬಾರಿ ಕುಶಾಲು ತೋಪು ಸಿಡಿಸಿ ಗೌರವ ಸೂಚಿಸಲಾಯಿತು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂತ್ಯಕ್ರಿಯೆಗೊಂಡ ಅಂತಿಮ ನಮ ಸಲ್ಲಿಸಿದರು. ಅವರ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು…














