Author: kannadanewsnow05

ಬೆಂಗಳೂರು : ಇದೆ 25 ಹಾಗೂ 26 ರಂದು ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಭಾನುವಾರ ಮತ್ತು ಸೋಮವಾರ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವಿವರವನ್ನೂ ಪೊಲೀಸರು ನೀಡಿದ್ದಾರೆ. ಬೆಂಗಳೂರು ನಗರ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಆ.25 ಹಾಗೂ 26 ರಂದು ಲಕ್ಷಾಂತರ ಭಕ್ತಾದಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ ಹೆಚ್ಚಿನ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸ್ ಪ್ರಕಟಣೆ ಉಲ್ಲೇಖಿಸಿದೆ. ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್‌ನಿಂದ ವಿಜಯನಗರ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್ ಕಡೆ ಹೋಗುವಂತಹ ವಾಹನಗಳು ಸೋಪ್ ಫ್ಯಾಕ್ಟರಿ ಜಂಕ್ಷನ್‌ನಲ್ಲಿ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಮುಂದುವರೆದು 10ನೇ ಕ್ರಾಸ್‌ನಲ್ಲಿ ಅಥವಾ ಕೇತಮಾರನಹಳ್ಳಿ…

Read More

ಬಾಗಲಕೋಟೆ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಶಾಸಕ ಆನಂದ್ ನ್ಯಾಮಗೌಡ ಶೀಘ್ರದಲ್ಲಿ ಬಿಜೆಪಿಯ ಮಾಜಿ ಸಿಎಂ ಅಶ್ಲೀಲ ವಿಡಿಯೋ ಬಿಡುಗಡೆಯಾಗಲಿದೆ ಎಂದು ಹೊಸ ಬಾಂಬ್ ಸಿಡಿಸದರು. ಮಾಜಿ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಈ ಒಂದು ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಮಾಜಿ ಸಿಎಂ ಒಬ್ಬರ ಅಶ್ಲೀಲ ಸಿಡಿ ಬಿಡುಗಡೆಯಾಗುವುದಿದೆ. ಇವತ್ತು ಒಂದು ಹೊಸ ಸುದ್ದಿ ಬಂದಿದೆ. ರಾಜ್ಯದ ಮಾಜಿ ಸಿಎಂ ಅವರ ಅಶ್ಲೀಲ ಸಿಡಿ ಬರುವುದಿದೆ. ಆ ಅಶ್ಲೀಲ ಸಿಡಿ ಭಾರತೀಯ ಜನತಾ ಪಕ್ಷದ ನಾಯಕನದ್ದೇ ಆಗಿದೆ. ಆ ಮಾಜಿ ಸಿಎಂ ಅಶ್ಲೀಲ ಸಿಡಿ ಶೀಘ್ರ ಬಿಡುಗಡೆಯಾಗುತ್ತದೆ ಎಂದು ಕಾಂಗ್ರೆಸ್ ಮಾಡಿ ಶಾಸಕ ಆನಂದನೆಗಳು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು…

Read More

ಶಿವಮೊಗ್ಗ : ಆನ್ಲೈನ್ನಲ್ಲಿ ಬರುವಂತಹ ಆಪ್ ಗಳನ್ನು ನಂಬಿ ಅನೇಕ ಜನರು ಸಾವಿರಾರು ರೂಪಾಯಿಗಳನ್ನು ಹಾಕಿ ಕೈ ಸುಟ್ಟುಕೊಂಡಿರುವಂತಹ ಉದಾಹರಣೆಗಳು ನಮ್ಮ ಮುಂದೆ ಇವೆ. ಅದರಂತೆ ಇದೀಗ ಶಿವಮೊಗ್ಗದಲ್ಲಿ ಯುವಕನೊಬ್ಬ ಆನ್ಲೈನ್ ಆಪ್ ಅನ್ನು ನಂಬಿ ಹಣ ಡಬಲ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ಹಣ ಹೂಡಿಕೆ ಮಾಡಿದ್ದಾನೆ.ಆದರೆ ಮರಳಿ ಹಣ ಬಾರದೆ ಇರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಆನ್ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕನೊಬ್ಬ ಹಣ ಕಳೆದುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪೇಪರ್ ಟೌನ್ ಲೇಔಟ್ ನಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡಿದ್ದಕ್ಕೆ ನೊಂದು ಪ್ರದೀಪ್ (27) ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆನ್ಲೈನ್ ನಲ್ಲಿ ಹಣ ಹಾಕಿದರೆ ಡಬಲ್ ಆಗುತ್ತೆ ಎಂದು ನಂಬಿ ಸುಮಾರು ಕಡೆ ಸಾಲ ಮಾಡಿ ಪ್ರದೀಪ್ 91 ಸಾವಿರ ರೂಪಾಯಿಗಳನ್ನು ಹೂಡಿಕೆ ಮಾಡಿದ್ದ. ಆದರೆ ಹಣ ವಾಪಸ್ ಬಾರದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.…

Read More

ಬೆಂಗಳೂರು : ಸಂಸಾರದಲ್ಲಿ ಸಹಜವಾಗಿ ಗಂಡ ಕುಡಿದು ಬಂದು ಹೆಂಡತಿಗೆ ಕಿರುಕುಳ ನೀಡುವುದನ್ನ ನೋಡುತ್ತೇವೆ. ಇದರಿಂದ ಬೇಸತ್ತ ಮಹಿಳೆಯರು ಗಂಡನ ಚಟ ಬಿಡಿಸಲು ಏನೇನು ಹರಸಾಹಸ ಮಾಡುತ್ತಾರೆ. ಆದರೆ ಬೆಂಗಳೂರಿನಲ್ಲಿ ಇದರ ತದ್ವಿರುದ್ಧವಾಗಿ ಹೆಂಡತಿಯ ಕುಡಿತದ ಚಟಕ್ಕೆ ಬೇಸತ್ತು ಗಂಡ ರಿಹ್ಯಾಬ್ ಕೇಂದ್ರಕ್ಕೆ ಸೇರಿಸಿದ್ದಾನೆ. ಆದರೆ ಆತನ ದುರಾದೃಷ್ಟವೋ ಏನೋ ಎಂಬಂತೆ, ಹೆಂಡತಿ ಅಲ್ಲಿನ ಸಿಬ್ಬಂದಿಯೊಂದಿಗೆ ಪರಾರಿಯಾಗಿದ್ದಾಳೆ. ಹೌದು ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ಪತ್ನಿಯನ್ನ ರಿಹ್ಯಾಬ್​​ ಕೇಂದ್ರಕ್ಕೆ ಪತಿ ಸೇರಿಸಿದ್ದ. ಆದರೆ, ರಿಹ್ಯಾಬ್​​ ಕೇಂದ್ರದ ಕೆಲಸಗಾರನ ಜೊತೆಯೇ ಹೆಂಡತಿ ಪರಾರಿಯಾಗಿದ್ದಾಳೆ. ಹೌದು, ಈ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಕೆಲಸ ಮಾಡುತ್ತಿದ್ದ ಸುನೀಲ್ ಎಂಬಾತನ ಜೊತೆ ಪರಾರಿಯಾಗಿದ್ದಾರೆ ಎಂದು ಪತಿ ಗಂಗರಾಜು ಆರೋಪಿಸಿದ್ದು, ನನ್ನ ಪತ್ನಿಯನ್ನು ಹುಡುಕಿ ಕೊಡಿ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನೆಲಮಂಗಲ ತಾಲ್ಲೂಕಿನ ದಿಣ್ಣೆಪಾಳ್ಯ ಗ್ರಾಮದ ದಂಪತಿಯಾದ ಇವರು, 13 ವರ್ಷಗಳ ಹಿಂದೆ ಮದುವೆಯಾಗಿದ್ದ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥ…

Read More

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಹಿಂದೂ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಮಾಡಿದ ಅಲ್ತಾಫ್ ಬಗ್ಗೆ ಪೊಲೀಸರು ಘಟನೆ ಭಯಾನಕತೆಯನ್ನು ಬಿಚ್ಚಿಟ್ಟಿದ್ದು, ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಕಾರ್ಕಳದಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಹಿಂದೂ ಯುವತಿಯನ್ನು ಕೇವಲ 3 ತಿಂಗಳಲ್ಲಿ ಪುಸಲಾಯಿಸಿದ ಮುಸ್ಲಿಂ ಸಮುದಾಯದ ಯುವಕರಿಬ್ಬರು, ಕಾರಿನಲ್ಲಿ ಪಾರ್ಟಿ ಮಾಡುವುದಾಗಿ ಕರೆದೊಯ್ದು ಬಿಯರ್‌ನಲ್ಲಿ ಡ್ರಗ್ಸ್ ಮಿಶ್ರಣ ಮಾಡಿ ಕೊಟ್ಟು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾರೆ. ಇದರಲ್ಲಿ ಯುವಕ ಅಲ್ತಾಫ್ ಅತ್ಯಾಚಾರ ಮಾಡಿದ್ದು, ಇದು ಗ್ಯಾಂಗ್ ರೇಪ್ ಅಲ್ಲವೆಂದು ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ಅತ್ಯಾಚಾರ ಸಂತ್ರಸ್ತೆಯಾಗಿರುವ ಯುವತಿಗೂ ಅತ್ಯಾಚಾರ ಮಾಡಿದ ಯುವಕನಿಗೂ ಪರಸ್ಪರ ಮೂರು ತಿಂಗಳಿಂದ ಇನ್ ಸ್ಟ್ರಾಗ್ರಾಂ ನಲ್ಲಿ ಪರಿಚಯ ಇತ್ತು. ಆದರೆ, ಸಂತ್ರಸ್ತೆಯ ತಂದೆಯ ಜೊತೆ ಆರೋಪಿಗೆ ಹಲವು ವರ್ಷಗಳ ಪರಿಚಯ…

Read More

ಕೊಪ್ಪಳ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಕರ್ನಾಟಕ ರಾಜ್ಯವನ್ನು ಬಿಟ್ಟು ಹೋಗುವಂತೆ ಅಭಿಯಾನ ಮಾಡಲಾಗುತ್ತದೆ ಎಂದು ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಸಂವಿಧಾನದ ಕೊಲೆ ಆಗುತ್ತಿದೆ. ಅಡ್ಡದಾರಿ ಹಿಡಿದು ಸರ್ಕಾರಕ್ಕೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಲೇ ಇದೆ. ಕಪ್ಪು ಚುಕ್ಕೆ ಇಲ್ಲದ ಸಿಎಂ ಗೆ ಮಾನಸಿಕವಾಗಿ ಕುಗ್ಗಿಸಲು ಬಿಜೆಪಿ ಹೊರಟಿದೆ ಸಿಎಂ ತಪ್ಪು ಮಾಡಿದ್ದರೆ ನಮ್ಮ ಹೈಕಮಾಂಡ್ ಸುಮ್ಮನೆ ಇರುತ್ತಿತ್ತಾ ಅಥವಾ ಕಾನೂನು ಸುಮ್ಮನೆ ಇರುತ್ತಿತ್ತ? ಎಂದು ಕಿಡಿ ಕಾರಿದರು. ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯಗೆ ಯಾವುದೇ ಕಪ್ಪು ಚುಕ್ಕೆ ಇಲ್ಲ.ನಮ್ಮ ಸರ್ಕಾರವನ್ನು ಕುಗ್ಗಿಸುವ ಬಿಜೆಪಿ ತಂತ್ರಕ್ಕೆ ನಾವು ಹೆದರಲ್ಲ. ರಾಜ್ಯಪಾಲ ಗೆಹ್ಲೋಟ್ ಅವರ ನಡೆ ಇಡಿ ರಾಜ್ಯದ…

Read More

ಚಾಮರಾಜನಗರ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದನೇ ಹಲವು ನಾಯಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿ ಚರ್ಚಿಸಿದರು. ಇನ್ನು ಈ ವಿಚಾರವಾಗಿ ಸಚಿವ ಎಚ್ ಸಿ ಮಹದೇವಪ್ಪ ಅವರು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ ಎಂದು ತಿಳಿಸಿದರು. ಚಾಮರಾಜನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರು 136 ಸೀಟುಗಳನ್ನು ಗೆಲ್ಲಿಸಿರುವುದು ರಾಜೀನಾಮೆ ಕೊಡೋಕ ವಿಜಯೇಂದ್ರ ಕೇಳಿದ್ದಕ್ಕೆ ರಾಜೀನಾಮೆ ಕೊಡೋದಕ್ಕೆ ಜನ ಗೆಲ್ಲಿಸಿದ್ದ? ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ, ಆರ್ ಅಶೋಕ್, ಎಚ್ ಡಿ ಕುಮಾರಸ್ವಾಮಿ, ಜನಾರ್ಧನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಮೇಲೆ ಸಾಕಷ್ಟು ಪ್ರಕರಣಗಳಿವೆ. ಬಿಜೆಪಿ ನಾಯಕರು ಮೊದಲು ತಮ್ಮದೆಲ್ಲವೂ ಶುದ್ಧಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್ ಶಾಸಕರು ಮಂತ್ರಿಗಳು ಸಿಎಂ ಸಿದ್ದರಾಮಯ್ಯ ಪರವಾಗಿ ಇದ್ದಾರೆ. ಸಿಎಂ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ. ಇನ್ನು ಮುಡಾ ಹಗರಣ ವೈಟ್ನರ್ ಬಳಸಿ ದಾಖಲೆ ತಿದ್ದಿರುವ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ…

Read More

ಬೆಂಗಳೂರು : ಇತ್ತೀಚಿಗೆ ಸೋಶಿಯಲ್ ಮೀಡಿಯಾಗಳಲ್ಲಿ ಜನರು ನಮ್ಮನ್ನು ಗುರುತಿಸಲಿ ಎಂದು ಎಂತೆಂತಹ ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಇದೀಗ ಪ್ರೇಮಿಗಳು ಇಬ್ಬರು ಹುಚ್ಚಾಟ ಮೆರೆದಿದ್ದು, ಬೈಕಿನ ಪೆಟ್ರೋಲ್ ಟ್ಯಾಂಕಿನ ಮೇಲೆ ಪ್ರೇಯಸಿಯನ್ನು ಕೂರಿಸಿಕೊಂಡು ಯುವಕನೊಬ್ಬ ಡೆಡ್ಲಿ ರೈಡ್ ನಡೆಸಿರುವಂತಹ ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಬೈಕ್ ಮೇಲೆ ಕೂತು ಪ್ರೇಮಿಗಳ ಹುಚ್ಚಾಟ ಮೆರೆದಿದ್ದಾರೆ. ಯಲಹಂಕದ ರೇವಾ ಕಾಲೇಜ್ ಬಳಿ ಈ ಒಂದು ಘಟನೆ ನಡೆದಿದೆ. ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿ ಜಾಲಿ ರೈಡ್ ಮಾಡಿದ್ದು, ಬೆಂಗಳೂರಿನಲ್ಲಿ ಪ್ರೇಮಿಗಳ ಡೆಡ್ಲಿ ಬೈಕ್ ರೈಡ್ ನಡೆಸಿದ್ದಾರೆ. ತಾವು ಬೈಕ್ ಚಾಲನೆ ಮಾಡುವಾಗ ಮುಂದೆ ಆಗುವಂತಹ ಅನಾಹುತಗಳು ಬಗ್ಗೆ ಆಗಲಿ, ಅಥವಾ ಅಪಘಾತಗಳ ಬಗ್ಗೆ ಆಗಲಿ ಅರಿವು ಇದ್ದರೂ ಕೂಡ ಈ ರೀತಿ ಹುಚ್ಚಾಟಗಳನ್ನು ಮೆರೆಯುತ್ತಿದ್ದಾರೆ. ಅಕ್ಕ ಪಕ್ಕದ ಸವಾರರಿಗೂ ತೊಂದರೆ ಆಗುತ್ತದೆ ಈ ರೀತಿ ಮಾಡಬಾರದು ಎಂಬ ಪರಿಜ್ಞಾನ ಇಲ್ಲದೆ ಈ ರೀತಿ ಯುವ ಸಮೂಹ ಹುಟ್ಟಾಟದಲ್ಲಿ ಮುಳುಗಿದೆ. ಡೆಡ್ಲಿ ರೆಡ್ ಕುರಿತು ಕಾರಿನಲ್ಲಿ ಪ್ರಯಾಣಿಸುತ್ತಿದ್ದ…

Read More

ಮೈಸೂರು : ಬಾಳೆ ತೋಟದಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಯಾರೋ ಅತ್ಯಾಚಾರವೆಸಗಿ, ಕೊಲೆ ಮಾಡಿ ಬಿಸಾಕಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದ್ದು,ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿಯಲ್ಲಿ ಈ ಒಂದು ಘಟನೆ ಬೆಳಕಿಗೆ ಬಂದಿದೆ. ಗಟ್ಟವಾಡಿ ಗ್ರಾಮದ ಶಶಿಕಲಾ (38) ಮೃತ ಮಹಿಳೆ ಎಂದು ತಿಳಿದುಬಂದಿದೆ. ಇನ್ನೂ ನಂಜುಡಪ್ಪ ಅಲಿಯಾಸ್ ಸಿದ್ದಲಿಂಗ ಎಂಬುವವರ ಬಾಳೆ ತೋಟದಲ್ಲಿ ಶವ ಪತ್ತೆಯಾಗಿದೆ. ಆದರೆ ತೋಟದ ಮಾಲೀಕ ನಂಜುಂಡಪ್ಪ ನಾಪತ್ತೆಯಾಗಿದ್ದಾನೆ. ಈಗಾಗಲೇ ಘಟನಾ ಸ್ಥಳಕ್ಕೆ ನಂಜನಗೂಡು ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಹಿಳೆಯ ಹಿನ್ನೆಲೆ ಹಾಗೂ ಬಾಳೆ ತೋಟದ ಮಾಲೀಕನ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗದಗ : ಇತ್ತೀಚಿಗೆ ಕೊಪ್ಪಳ ಹಾಗೂ ಯಾದಗಿರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ನೀಡಬೇಕಾಗಿದ್ದ ಪೌಷ್ಠಿಕ ಆಹಾರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರುವ ಘಟನೆ ನಡೆದಿತ್ತು. ಇದೀಗ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡಬೇಕಾಗಿದ್ದ ಪೌಷ್ಟಿಕ ಆಹಾರವನ್ನು ಅಲ್ಲಿನ ಸಿಬ್ಬಂದಿಗಳೇ ಕದ್ದು ಸಾಗಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿನ ರೇಷನ್​ ಅನ್ನು ಸಿಬ್ಬಂದಿಗಳು ತೆಗೆದುಕೊಂಡು ಹೋಗುತ್ತಿರುವಾಗ ಸ್ಥಳೀಯರು ಹಿಡಿದಿರುವಂತಹ ಘಟನೆ ನಡೆದಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಐವರು ಅಡುಗೆ ಸಹಾಯಕರಿಂದ ಪೌಷ್ಠಿಕ ಆಹಾರ ಸಾಗಾಟ ಮಾಡಲಾಗುತ್ತಿತ್ತು. 35 ಕೆಜಿ ಅಕ್ಕಿ, ಎರಡು ಕೆಜಿ ಬೇಳೆ, ಹಾಲಿನ ಪುಡಿಯ ಎರಡು ಪ್ಯಾಕೆಟ್, 10 ಕೆಜಿ ಗೋಧಿ ಪ್ಯಾಕೆಟ್ ಸಾಗಾಟ ಮಾಡಲಾಗುತಿತ್ತು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Read More