Author: kannadanewsnow05

ಶಿವಮೊಗ್ಗ : ಬೀದಿ ನಾಯಿಯೊಂದು ಮಹಿಳೆಯ ಮೇಲೆ ದಾಳಿ ಮಾಡಿ ಗಾಯಗೋಳಿಸಿತ್ತು. ಆದರೆ ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಹೊಸನಗರ ಪಟ್ಟಣದಲ್ಲಿ ವಾಸವಾಗಿದ್ದ ಗೇರುಪುರ ಮೂಲದ ದಿ. ಪ್ರಸನ್ನ ಎಂಬವರ ಪತ್ನಿ ಸಂಗೀತ ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಹೊಸನಗರ ತಾಲೂಕಿನ ಗೇರುಪುರ ಮೂಲದ ಸಂಗೀತ (38) ಎಂದು ಗುರುತಿಸಲಾಗಿದೆ. ಹೊಸನಗರ ಪಟ್ಟಣದಲ್ಲಿ ವಾಸವಾಗಿದ್ದ ಸಂಗೀತ ಅವರು ಜುಲೈ 14 ರಂದು ನಾಯಿ ಕಡಿತಕ್ಕೊಳಗಾಗಿದ್ದರು. ಹೊಸನಗರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

Read More

ಶಿವಮೊಗ್ಗ : ಇಡೀ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಚಂದ್ರಶೇಖರನ್ ತಪ್ಪಿತಸ್ಥರಲ್ಲ, ಹಣ ತಿಂದಿಲ್ಲ ಎಂದು ತನಿಖಾಧಿಕಾರಿ ಸ್ಪಷ್ಟನೆ ನೀಡಿದರು. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ನಿಗಮದ ಮಾಜಿ ವ್ಯವಸ್ಥಾಪಕ ಚಂದ್ರಶೇಖರನ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡುಬಂದಿಲ್ಲ. ಅವರು ತಪ್ಪಿತಸ್ಥರು ಎಂದು ಆರೋಪಪಟ್ಟಿಯಲ್ಲೂ ಉಲ್ಲೇಖಿಸಿಲ್ಲ ಎಂದು ಸಿಐಡಿ ವಿಶೇಷ ತನಿಖಾ ತಂಡ ಸ್ಪಷ್ಟಪಡಿಸಿದೆ. ತನಿಖಾ ತಂಡ 300 ಪುಟಗಳ ಆರೋಪಪಟ್ಟಿಯನ್ನು ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದೆ. ಸತ್ತವರ ಹೆಸರನ್ನು ಆರೋಪಪಟ್ಟಿಯಲ್ಲಿ ಸೇರಿಸಸುವುದು ಅಸಾಧ್ಯ. ಈ ಹಗರಣದಲ್ಲಿ ಎಂಟು ಪ್ರಕರಣ ದಾಖಲಾಗಿವೆ. ಆರೋಪ ಪಟ್ಟಿಯಲ್ಲಿ ಎಲ್ಲಿಯೂ ಅವರು ತಪ್ಪಿತಸ್ಥರು ಎಂದು ಉಲ್ಲೇಖಿಸಿಲ್ಲ ಎಂಬುದಾಗಿ ಪ್ರಕರಣದ ತನಿಖಾಧಿಕಾರಿ ರಫೀಕ್ ತಿಳಿಸಿದ್ದಾರೆ. ಇನ್ನು ಈ…

Read More

ಬೆಂಗಳೂರು : ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಅಧಿಕಾರಿಗಳು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಹೌದು ರಾಜ್ಯರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ ಶೀಟ್‌ ಅನ್ನು ಎಸ್‌ಐಟಿ ನ್ಯಾಯಾಲಯಕ್ಕೆ ಸಲ್ಲಿಸಿದೆ. ತಂದೆ ಮಗನ ವಿರುದ್ಧ ದಾಖಲಾದ ಮೊದಲ ಕೇಸ್‌ಗೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಇದಾಗಿದ್ದು, 2000 ಕ್ಕೂ ಅಧಿಕ ಪುಟವಿದೆ. 123 ಸಾಕ್ಷ್ಯಗಳು ಸಿಕ್ಕಿವೆ ಎನ್ನಲಾಗಿದೆ. ಚಾರ್ಜ್ ಶೀಟ್ ಸಲ್ಲಿಕೆ ವೇಳೆ ಸುಮಾರು 2 ಸಾವಿರ ಪುಟಗಳನ್ನು ಒಳಗೊಂಡಿದ್ದು, 123 ಸಾಕ್ಷ್ಯಗಳನ್ನು ಸಂಗ್ರಹಿಸಿ ಮಾಡಲಾಗಿದೆ ಎನ್ನಲಾಗಿದೆ. ಸದ್ಯ 42 ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಮುಂದೆ ನ್ಯಾಯಾಲಯದಲ್ಲಿ ವಾದ ನಡೆಯಲಿದ್ದು, ಆ ಬಳಿಕ ತೀರ್ಪು ಬರಲಿದೆ. ಇದೀಗ ಅಪ್ಪ ಮಗನ ವಿರುದ್ಧ 2144…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಿಗಮದ ಮಾಜಿ ಎಂ.ಡಿ. ಪದ್ಮನಾಭ್​ ಮತ್ತು ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಅವರನ್ನು 7 ದಿನಗಳ ಕಾಲ ED ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಆಗಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಿಗಮದ ಅದೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಮೊದಲು ಎಸ್ಐಟಿಗೆ ವಹಿಸಿತ್ತು. ಅದಾದ ಬಳಿಕ ಇಡಿ ಈ ಒಂದು ಪ್ರಕರಣದಲ್ಲಿ ಎಂಟ್ರಿ ಕೊಟ್ಟಿತ್ತು. ಬಳಿಕ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದರು. ಎಂ.ಜಿ.ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್‌ನಲ್ಲಿ‌ ನಿಗಮದ 94.73 ಕೋಟಿ 18 ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿತ್ತು. ಈ ಜಾಡು ಬೆನ್ನತ್ತಿದ್ದಾಗ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಹಾಗೂ…

Read More

ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಚರ್ಚಿಸಿದರು. ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾವು ಈ ನೆಲದ ಕಾನೂನಿನ ಮೇಲೆ ನಂಬಿಕೆ ಇಟ್ಟಿದ್ದೇವೆ ಎಂದು ತಿಳಿಸಿದರು. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಸಭೆ ನಡೆಸಿದರು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹೈಕಮಾಂಡ್ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ಹೈಕಮಾಂಡ್ಗೆ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದೇನೆ. ನಮಗೆ ಕೋರ್ಟ್ ನಲ್ಲಿ ನಂಬಿಕೆ ಇದೆ ರಾಜ್ಯಪಾಲರ ನಡೆಸಂವಿಧಾನಿಕವಾಗಿದೆ ಎಂದು ಹೈಕಮಾಂಡ್ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಇನ್ನು ಈ ಒಂದು ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎ ಐ…

Read More

ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೈಕಮಾಂಡ್ ಅವರನ್ನು ಭೇಟಿಯಾಗಿ ಹಲವು ವಿಷಯಗಳನ್ನು ಚರ್ಚಿಸಿದರು. ಈ ಸಭೆ ಬಳಿಕ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಗ್ಯಾರೆಂಟಿಗಳನ್ನು ನೀಡುತ್ತಿರುವುದನ್ನು ವಿಪಕ್ಷಗಳು ಸಹಿಸುತ್ತಿಲ್ಲ ಹಾಗಾಗಿ ಈ ರೀತಿ ಬಿಜೆಪಿ ದಾಳಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ರಾಜ್ಯಪಾಲರು ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ ಗ್ಯಾರಂಟಿಗಳ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ನೀಡುವುದನ್ನು ವಿಪಕ್ಷಗಳು ಸಹಿಸುತ್ತಿಲ್ಲ. ಕಳೆದ ಒಂದು ವರ್ಷದಿಂದ ಗ್ಯಾರಂಟಿಗಳ ಮೇಲೆ ದಾಳಿ ನಡೆಯುತ್ತಿದೆ. ಎಸ್ ಸಿ ಎಸ್ ಟಿ ಒ ಬಿ ಸಿ ಸಮುದಾಯಕ್ಕೆ ಗ್ಯಾರಂಟಿ ನೀಡುವುದನ್ನು ಬಿಜೆಪಿಗರು ಸಹಿಸುತ್ತಿಲ್ಲ.ಇದು ಸಿಎಂ ಡಿಸಿಎಂ ಮೇಲಿನ ದಾಳಿಯಲ್ಲ. ಗ್ಯಾರಂಟಿಗಳ ಮೇಲಿನ ದಾಳಿ. ಕೇಂದ್ರ ಅಥವಾ ಬಿಜೆಪಿ ಏನೇ ಮಾಡಿದರು ಗ್ಯಾರಂಟಿ ನಿಲ್ಲಿಸಲ್ಲ ಮುಂದುವರಿಸುತ್ತೇವೆ. ಜನತಾ ನ್ಯಾಯಾಲಯದಲ್ಲಿ…

Read More

ಬೆಂಗಳೂರು : ಮುಡಾ ಹಗರಣದಿಂದ ಈಗಾಗಲೇ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ಇದೀಗ ಬೃಹತ್ ಕೈಗಾರಿಕಾ ಸಚಿವರಾಗಿರುವಂತಹ ಎಂಬಿ ಪಾಟೀಲ್ ವಿರುದ್ಧ ಕೂಡ ಇದೀಗ ಕೆ ಐ ಎ ಡಿ ಬಿ ಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ಕುರಿತು ಸಚಿವ ಎಂಬಿ ಪಾಟೀಲ್ ಇದೀಗ ಸ್ಪಷ್ಟನೆ ನೀಡಿದ್ದಾರೆ. ಕೆಐಎಡಿಬಿಯಲ್ಲಿ ಸಿ.ಎ ನಿವೇಶನಗಳ ಹಂಚಿಕೆಗೆ ಕೈಗೊಂಡ ಪಾರದರ್ಶಕ ಕ್ರಮಗಳ ಬಗ್ಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಸಿಎ ನಿವೇಶನಗಳನ್ನು ಅತ್ಯಂತ ಪಾರದರ್ಶಕ ವ್ಯವಸ್ಥೆ ಮೂಲಕ ನಿಯಮಾನುಸಾರ ಹಂಚಿಕೆ ಮಾಡಲಾಗುತ್ತಿದೆ. ನಾಗರಿಕ ಸೌಲಭ್ಯದ (CA) ನಿವೇಶನಗಳನ್ನು ಅರ್ಹ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗಿದೆ. ಇದರಲ್ಲಿ ಯಾವ ಅಕ್ರಮವೂ ಆಗಿಲ್ಲ. ನನ್ನ ವಿರುದ್ಧ ಈಗ ನೀಡಿರುವ ದೂರು ತುಂಬಾ ಹಳೆಯದ್ದು ಎಂದು ಬೆಂಗಳೂರಿನಲ್ಲಿ ಕೈಗಾರಿಕಾ ಇಲಾಖೆಯ ಸಚಿವ ಎಂಬಿ ಪಾಟೀಲ್ ಹೇಳಿಕೆ ನೀಡಿದರು ದಿನಾಂಕ ಬದಲಿಸಿ ನನ್ನ…

Read More

ಬೆಂಗಳೂರು : ಪ್ರಾಂಶುಪಾಲರು ಬೈದರು ಎಂಬ ಒಂದೇ ಒಂದು ಸಣ್ಣ ವಿಚಾರಕ್ಕೆ ವಿದ್ಯಾರ್ಥಿಯು ಮನನೊಂದು ಶಾಲಾ ಕಟ್ಟಡದಿಂದ ಜಿಗಿದಿರುವ ಘಟನೆ ಬೆಂಗಳೂರಿನ ಬಾಪೂಜಿ ನಗರದ A 1ಫಹಾದ್ ಶಾಲೆಯಲ್ಲಿ ಘಟನೆ ನಡೆದಿದೆ. ಬಾಪುಜಿನಗರದ ಶಾಲೆಯಲ್ಲಿ ನಡೆದ ಘಟನೆಯಾಗಿದ್ದು, ಶಾಲಾ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಗಾಯಾಳು ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Read More

ಬೆಂಗಳೂರು : ಸದ್ಯ ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ ಭಾರಿ ಚರ್ಚೆ ಆಗುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಈ ಕುರಿತು ಹೈಕೋರ್ಟ್ ವಿಚಾರಣೆ ನಡೆಸಿ ಅರ್ಜಿ ವಿಚಾರಣೆ ಆಗಸ್ಟ್ 29ಕ್ಕೆ ಮುಂದೂಡಿ ಅದೇಶಿಸಿದೆ. ಇದರ ಮಧ್ಯ ಸಚಿವ MB ಪಾಟೀಲ್ ವಿರುದ್ಧ ಕೂಡ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದೆ. ಹೌದು ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಳಿಕ ಇದೀಗ ಬೃಹತ್ ಕೈಗಾರಿಕೆ ಸಚಿವ MP ಪಾಟೀಲ್ ವಿರುದ್ಧವು ಕೂಡ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. KIADB ಭೂಮಿಯನ್ನು ಎಂಬಿ ಪಾಟೀಲರು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಆರೋಪಿಸಿದ್ದು, ಈ ಸಂಬಂಧ ಸಚಿವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಇಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಎಂಬಿ ಪಾಟೀಲ್‌ KIADB ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ನಿಯಮದ ಪ್ರಕಾರ ಆನ್‌ಲೈನ್‌ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಇವರು ಕೈಗಾರಿಕೆ…

Read More

ಹುಬ್ಬಳ್ಳಿ : ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಂತಹ ಹಗರಣಗಳ ಕುರಿತಂತೆ ಸಿಎಂ ಸಿದ್ದರಾಮಯ್ಯನವರೇ ಸ್ವತಃ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕೇಸ್ ಪಟ್ಟಿ ಮಾಡಲು ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೇ ವಿಜಯೇಂದ್ರ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ ವಿಜಯೇಂದ್ರ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಇಲ್ಲದಿದ್ದರೆ ಶಾಸಕರ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಿರಲಿಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವಿ ವಿಜಯೇಂದ್ರ ಹೇಳಿಕೆ ನೀಡಿದರು. ನಿನ್ನೆ ವಿಶ್ವಾಸಕ್ಕೆ ತೆಗೆದುಕೊಂಡಿದ್ದನ್ನ ನೋಡಿದರೆ ಇದು ಸತ್ಯ ಅನಿಸುತ್ತದೆ. ನಾನು ಬಂಡೆಗಲ್ಲಿನಂತೆ ನಿಲ್ಲುತ್ತೇನೆ ಅಂತ ಡಿಸಿಎಂ ಡಿಕೆ ಶಿವಕುಮಾರ್ ಅಂದಿದ್ದರು. ಈ ಒಂದು ಹೇಳಿಕೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮುಡಾದಲ್ಲಿ ಸಾಕಷ್ಟು ಅವ್ಯವಹಾರವಾಗಿದೆ. ಸಿಎಂ ಬದಲಾವಣೆಯ ಕಾಲ ಸನ್ನಿಹಿತವಾಗಿದೆ ಎಂದರು. ಸಿಎಂ ರಾಜೀನಾಮೆ ಕೊಡುತ್ತಾರೆ ಇದರಲ್ಲಿ ಯಾವುದೇ ಅನುಮಾನ ಬೇಡ. ಮುಡ ಹಗರಣ, ವಾಲ್ಮೀಕಿ ಹಗರಣದಲ್ಲೂ ಕೂಡ ಸಿಎಂ ನೇರವಾಗಿ ಭಾಗಿಯಾಗಿದ್ದಾರೆ.…

Read More