Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮನವಿ ಮಾಡಿದ್ದು,ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಶ್ರೀ ಎಸ್.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ…
ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಇದೀಗ ಚಲನಚಿತ್ರ ನಟ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರು ಕೂಡ ಎಸ್ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರಿಂದ ಕಲಿಯೋದು ತುಂಬಾ ಇದೆ. ಇಂದಿನ ಯುವ ರಾಜಕಾರಣಿಗಳಿಗೆ ಅವರ ರಾಜಕೀಯ ಜೀವನ ಮಾರ್ಗದರ್ಶನವಾಗಿದೆ.ನಮ್ಮ ದೇಶ ಇಂದು ಒಳ್ಳೆ ನಾಯಕನನ್ನು ನಾವು ಕಳೆದುಕೊಂಡಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಗುರುತಿಸುತ್ತಾರೆಂದರೆ ಅದೆಲ್ಲ ಕ್ರೆಡಿಟ್ ಎಸ್. ಎಂ ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಅಭಿಷೇಕ್ ಅಂಬರೀಶ್ ಅವರು ಸಂತಾಪ ಸೂಚಿಸಿದರು.. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ…
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರವು ಇದೀಗ ಅವರ ಹುಟ್ಟುವದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮಕ್ಕೆ ತಲುಪಿದೆ. ಇವಳೇ ದಾರಿ ಉದ್ದಕ್ಕೂ ಸಹಸ್ರಾರು ಜನರು ಎಸ್ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ಇಂದು ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದಿಂದ ಹೊರಟ ಅವರ ಪಾರ್ಥಿವ ಶರೀರವು, ಬಿಡದಿ ರಾಮನಗರ ಚನ್ನಪಟ್ಟಣದ ಮೂಲಕ ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮಕ್ಕೆ ತಲುಪಿದೆ. ಈ ವೇಳೆ ಸೋಮನಹಳ್ಳಿಯ ಗ್ರಾಮದ ಎಲ್ಲಾ ಜನರು ಎಸ್ಎಮ್ ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ಈಗಾಗಲೇ ಸೋಮನಹಳ್ಳಿ ಗ್ರಾಮದಲ್ಲಿ ಭಾನುಪ್ರಕಾಶ್ ಅವರು ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಲಿದೆ. ಸ್ಥಳದಲ್ಲಿ ಸಚಿವ ಚೆಲುವರಾಯಸ್ವಾಮಿ ಅಂತ್ಯಕ್ರಿಯೆ ಸಕಲ ಸಿದ್ಧತೆ ಪರಿಶೀಲನೆ ಮಾಡಿದರು.
ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಸಮುದ್ರದ ಬಿಸ್ನಲ್ಲಿ ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಮುರುಡೇಶ್ವರ ಪೊಲೀಸರು ಮೊರಾರ್ಜಿ ವಸತಿ ಶಾಲೆಯ ಮುಖ್ಯ ಶಿಕ್ಷಕಿ ಸೇರಿದಂತೆ ಆರು ಜನರ ವಿರುದ್ಧ ಸ್ವಯಂ ಪ್ರೇರಿತ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಹೌದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಗ್ರಾಮದ ವಸತಿ ಶಾಲೆಯ ಶಿಕ್ಷಕರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪೊಲೀಸರಿಂದ ಇದೀಗ ಸುಮೊಟೋ ಕೇಸ್ ದಾಖಲಾಗಿದೆ.ಮೊರಾರ್ಜಿ ವಸತಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ವಿರುದ್ಧ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಮುಖ್ಯ ಶಿಕ್ಷಕಿ ಶಕಲಾ (40) ಶಿಕ್ಷಕರಾದ ಆರು ಸುನಿಲ್ (33) ಎಸ್ ಚೌಡಪ್ಪ (34) ಎಸ್ ವಿಶ್ವನಾಥ್ (27) ಸಿಎನ್ ಶಾರದಮ್ಮ (37) ಹಾಗೂ ಕೆ ನರೇಶ್ (30) ಎನ್ನುವವರ ವಿರುದ್ಧ ಮುರುಡೇಶ್ವರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಹಲವು ಶಿಕ್ಷಕ, ಸಿಬ್ಬಂದಿಗಳನ್ನು ವಜಾ ಕೂಡ ಮಾಡಲಾಗಿದೆ.
ಬೆಂಗಳೂರು : ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚಿನಲ್ಲಿ ವಿದ್ಯಾರ್ಥಿನಿಯರು ಮುದ್ರ ಪಾಲಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ವಿದ್ಯಾರ್ಥಿನಿಯರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಸಂತಾಪ ಸೂಚಿಸಿರುವ ಅವರು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ. ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ…
ಚಾಮರಾಜನಗರ : ನಿನ್ನೆ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಶಾಸಕ ಎಸ್ ಜಯಣ್ಣ ಅವರು ಕೂಡ ಹೃದಯಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ತೆರಳಿ ಜಯಣ್ಣ ಅವರ ಅಂತಿಮ ದರ್ಶನ ಪಡೆದರು. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಎಸ್ ಜಯಣ್ಣನಿನ್ನೆ ನಿಧನರಾಗಿದ್ದಾರೆ.ಹಾಗಾಗಿ ಇಂದು ಸಿಎಂ ಸಿದ್ದರಾಮಯ್ಯ ಮಾಜಿ ಶಾಸಕ ಎಸ್ ಜಯಣ್ಣ ಅವರ ಅಂತಿಮ ದರ್ಶನ ಪಡೆದರು. ಕೊಳ್ಳೇಗಾಲದ ಮಹದೇಶ್ವರ ಬಡಾವಣೆಯಲ್ಲಿರುವ ಜಯಣ್ಣ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ವೇಳೆ ಆಪ್ತ ಹಾಗೂ ಗೆಳೆಯನನ್ನು ನೋಡಿ ಸಿಎಂ ಸಿದ್ದರಾಮಯ್ಯ ಭಾವುಕರಾದರು.
BREAKING : ಸೋಮನಹಳ್ಳಿಯತ್ತ SM ಕೃಷ್ಣ ಪಾರ್ಥಿವ ಶರೀರ : ಅಂತ್ಯಕ್ರಿಯೆ ಸ್ಥಳಕ್ಕೆ ಡಿಸಿಎಂ ಡಿಕೆಶಿ ಅಳಿಯ, ಪುತ್ರ ಭೇಟಿ
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹೃದಯಾಘಾತದಿಂದ ಸಾವನಪ್ಪಿದ್ದು, ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಈ ಹಿನ್ನೆಲೆಯಲ್ಲಿ ಇದೀಗ ಅವರ ಪಾರ್ಥಿವ ಶರೀರ ಚನ್ನಪಟ್ಟಣದಿಂದ ತೆರಳಿ ಮದ್ದೂರಿಗೆ ಆಗಮಿಸಲಿದ್ದು, ಈಗಾಗಲೇ ಸೋಮನಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಮಧ್ಯ ಅಂತ್ಯಕ್ರಿಯ ಸ್ಥಳದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಅಂತ್ಯಕ್ರಿಯ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅಳಿಯ ಹಾಗೂ ಪುತ್ರ ಭೇಟಿ ನೀಡಿದ್ದಾರೆ. ಅಳಿಯ ಅಮರ್ತ್ಯ ಹಾಗೂ ಆಕಾಶ್ ಕೆಂಪೇಗೌಡ ಭೇಟಿ ನೀಡಿದ್ದಾರೆ. ಮದ್ದೂರಿನ ಸೋಮನಹಳ್ಳಿಯಲ್ಲಿ ಇರುವಂತಹ ಸ್ಥಳಕ್ಕೆ ಇಬ್ಬರು ಆಗಮಿಸಿದ್ದಾರೆ. ಅಂತ್ಯಕ್ರಿಯೆ ಸಕಲ ಸಿದ್ಧತೆಗಳನ್ನು ಎಲ್ಲವನ್ನೂ ಕೂಡ ಪರಿಶೀಲನೆ ಮಾಡಿದ್ದಾರೆ.
ಉತ್ತರಕನ್ನಡ : ನಿನ್ನೆ ಮುರುಡೇಶ್ವರ ಬೀಚ್ನಲ್ಲಿ ಪ್ರವಾಸಕ್ಕೆ ಎಂದು ಬಂದಿದ್ದ 7 ಜನ ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದರು.ಈ ವೇಳೆ ಕೂಡಲೇ ಬೀಚ್ ಬಳಿ ಇದ್ದ ಲೈಫ್ ಗಾಡ್ಸ್ ಸಿಬ್ಬಂದಿಗಳು ಮೂವರನ್ನು ರಕ್ಷಿಸಿದ್ದು ಓರ್ವ ವಿದ್ಯಾರ್ಥಿನಿ ಸಾವನಪ್ಪಿದ್ದಳು. ನಿನ್ನೆಯಿಂದ ಉಳಿದ ಮೂವರು ವಿದ್ಯಾರ್ಥಿನಿಯರ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿತ್ತು, ಇದೀಗ ಉಳಿದ ಮೂವರ ವಿದ್ಯಾರ್ಥಿನಿಯರ ಶವ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಹೌದು ಬೋಟ್ ಮೂಲಕ ಕೊಚ್ಚಿ ಹೋಗಿದ್ದ ಉಳಿದ ಮೂವರ ವಿದ್ಯಾರ್ಥಿನಿಯರ ಶವಗಳನ್ನು ಕರಾವಳಿ ಕಾವಲು ಪಡೆ ಹೊರತೆಗೆದಿದೆ. ನೆನ್ನೆ ವಿದ್ಯಾರ್ಥಿನಿ ಶ್ರಾವಂತಿಯ ಶವ ಮಾತ್ರ ಪತ್ತೆಯಾಗಿತ್ತು.ಇದೀಗ ದೀಕ್ಷಾ (15) ಲಾವಣ್ಯ (15) ಮತ್ತು ವಂದನ (15)ಮೃತ ದೇಹಗಳನ್ನು ಇದೀಗ ಕರಾವಳಿ ಕಾವಲು ಪಡೆ ಹೊರ ತೆಗೆದಿದೆ. ನಿನ್ನೆ ಮುರುಡೇಶ್ವರ ಬೀಚ್ ನಲ್ಲಿ 7 ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಮೂರು ವಿದ್ಯಾರ್ಥಿಯರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿಗಳು ರಕ್ಷಿಸಿದ್ದರು.ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಡೇಶ್ವರ ಬೀಚ್ನಲ್ಲಿ ಈ ಒಂದು ಘಟನೆ ನಡೆದಿತ್ತು.…
ರಾಯಚೂರು : ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಎನ್ನದೆ ಎಲ್ಲರ ಮೇಲು ನಾಯಿಗಳು ದಾಳಿ ಮಾಡುತ್ತಿವೆ. ಇದೀಗ ರಾಯಚೂರಿನಲ್ಲಿ ಬೀದಿ ನಾಯಿಗಳು ದಾಳಿ ಮಾಡಿದಾಗ ಅವುಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ಯುವತಿ ಒಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ನಡೆದಿದೆ. ರಾಯಚೂರಿನ ಬಡ್ಡಿಪೇಟೆಯಲ್ಲಿ ಈ ಒಂದು ಘಟನೆ ನಡೆದಿದ್ದು ಕೋಮಾ ಸ್ಥಿತಿ ತಲುಪಿದೆ ಯುವತಿಯನ್ನು ಮಹಾದೇವಿ (20) ಎಂದು ತಿಳಿದುಬಂದಿದೆ.ಇಂದು ದೇವಾಲಯಕ್ಕೆ ಹೋಗುವ ವೇಳೆ ನಾಯಿಗಳು ದಾಳಿ ಮಾಡಿವೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಳ್ಳಾರಿಯಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರೆಫರ್ ಮಾಡಿದ್ದಾರೆ. ಆದರೆ ತೀವ್ರ ಬಡತನವಿರುವ ಕಾರಣ ಪುನಃ ರಾಯಚೂರು ಜಿಲ್ಲಾಸ್ಪತ್ರೆಗೆ ಕರೆತರಲಾಯಿತು ಎಂದು ಪಾಲಕರು ತಿಳಿಸಿದ್ದಾರೆ. ತನ್ನದಲ್ಲದ ತಪ್ಪಿಗೆ ಬೀದಿ ನಾಯಿಗಳ ದಾಳಿಗೆ ಚಿಂತಾಜನಕ ಸ್ಥಿತಿಗೆ ತಲುಪಿದ್ದು,…
ಮಡಿಕೇರಿ : ಸಾಮಾನ್ಯವಾಗಿ ವಾಹನ ಇರಲಿ ಬೈಕ್ ಇರಲಿ ಮೊಬೈಲ್ ಬಳಸುವುದು ಅಪಘಾತಕ್ಕೆ ಎಡೆ ಮಾಡಿಕೊಡುತ್ತದೆ ಎಂದು ಪೊಲೀಸರು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಲೇ ಇರುತ್ತಾರೆ ಆದರೆ ಇದೀಗ ಕೊಡಗಿನಲ್ಲಿ ಪ್ರಯಾಣಿಕರನ್ನು ಹೊತ್ತಂತಹ ಕೆಎಸ್ಆರ್ಟಿಸಿ ಚಾಲಕ ಒಬ್ಬ ಬಸ್ ಚಾಲನೆ ಮಾಡುತ್ತಲೇ ಮೊಬೈಲ್ ಬಳಸಿರುವ ವಿಡಿಯೋ ವೈರಲ್ ಆಗಿದ್ದು, ಸದ್ಯ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಆದಂತ ಚಾಲಕನನ್ನು ವೇಣುಗೋಪಾಲ್ ಎಂದು ತಿಳಿದುಬಂದಿದೆ. ಈತ ಪುತ್ತೂರು ಡಿಪೋ ಬಸ್ ಚಾಲಕ ಮೊಬೈಲ್ ಬಳಸುತ್ತಾ ಚಾಲನೆ ಮಾಡಿದ್ದಾರೆ. ಚಾಲಕ ವೇಣುಗೋಪಾಲ್ ಬಸ್ ಚಾಲನೆ ಮಾಡುತ್ತ ಮೊಬೈಲ್ ಬಳಕೆ ಮಾಡುತ್ತಿರುವ ವಿಡಿಯೋವನ್ನು ಪ್ರಯಾಣಿಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಬಸ್ ಮಡಿಕೇರಿಯಿಂದ ಬಿರುನಾಣಿಗೆ ಹೋಗುತ್ತಿತ್ತು. ಚಾಲಕ ಮೊಬೈಲ್ ಬಳಕೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೊಬೈಲ್ ಬಳಕೆ ಮಾಡುತ್ತಿರುವುದನ್ನು ನಿರ್ವಾಹಕ ರೂಪೇಶ್ ವಿಡಿಯೋ ಮಾಡಿದ್ದಾನೆ. ಈ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದ್ದು, ವೇಣುಗೋಪಾಲ್ ಡಿಪೋ ಬಳಿ ಕೋವಿ ತಂದು ಗಾಳಿಯಲ್ಲಿ…











