Author: kannadanewsnow05

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ. ಹೌದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದಾರೆ. ಸುಮಾರು 2000 ಪುಟಗಳಷ್ಟು ದೋಷಾರೋಪಣೆ ಪಟ್ಟಿಯನ್ನು ಇದೀಗ ಎಸ್ಐಟಿ ಅಧಿಕಾರಿಗಳು ಸಲ್ಲಿಸಿದ್ದಾರೆ. ಅಲ್ಲದೆ 123 ಸಾಕ್ಷಿಗಳನ್ನು ಸಂಗ್ರಹಿಸಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಪ್ರಕರಣದ ಸಂಪೂರ್ಣ ವರದಿ ಕುರಿತು ಇದೀಗ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೂಡಲೇ ಸ್ಥಳಕ್ಕೆ ಬಿಡದಿ ಠಾಣೆ ಪೋಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.ಈ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲದ್ದರಿಂದ ಇದು ಒಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ಸ್ಪಷ್ಟಪಡಿಸಿದರು. ಇಂಗ್ಲಿಷ್ ಬಳಸಿ ಉರ್ದು ಭಾಷೆಯಲ್ಲಿ ಆಗಸ್ಟ್ 3 ರಂದು ಕಳುಹಿಸಿದ್ದ ಬಾಂಬ್ ಬೆದರಿಕೆ ಸಂದೇಶ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ನಾಳೆ ಭಾನುವಾರ ವಂಡರ್ ಲಾದಲ್ಲಿ 3 ಬಾಂಬ್ ಸ್ಫೋಟಿಸುತ್ತೇವೆ. ಮುಸ್ಲಿಮರ ಮೇಲೆ ದಬ್ಬಾಳಿಕೆ ಮಾಡುವವರಿಗೆ ಶಿಕ್ಷೆಯಾಗಲಿದೆ. ಕನ್ನಡದ ಕಾಫಿರರಿಗೆ ಶಿಕ್ಷೆ ಆಗಲಿದೆ ಎಂದು ಬೆದರಿಕೆ ಸಂದೇಶವನ್ನು ಬಂದಿದೆ. ಮೊಹಮ್ಮದ್ ಇರ್ಫಾನ್ ಜಾದಿ ಎಂಬ ಹೆಸರಿನ ಮೇಲ್ ಐಡಿ ಇಂದ ಬೆದರಿಕೆ ಸಂದೇಶ ಬಂದಿದೆ.ಆಗಸ್ಟ್ 3 ರಂದೆ ಈ ಒಂದು ಇಮೇಲ್ ಸಂದೇಶ ಬಂದಿದ್ದು.ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಕೂಡಲೇ ಪಾರ್ಕ್ ಗೆ ಪೊಲೀಸರು ಭೇಟಿ ನೀಡಿದ್ದು, ಪೊಲೀಸರ…

Read More

ಬೆಳಗಾವಿ : ದೇಶದಾದ್ಯಂತ ಇದೀಗ ಅತ್ಯಾಚಾರ ಪ್ರಕರಣಗಳು ಹಾಗೂ ಲೈಂಗಿಕ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಹಜವಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಒಬ್ಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಈ ಕುರಿತು ಮಹಿಳೆ ಬೆಳಗಾವಿಯ ಖಡೆ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಹೌದು ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದ್ದು, ಬಿಜೆಪಿ ಮುಖಂಡ ನವ ವಿವಾಹಿತೆಗೆ ವಿಷ ಕುಡಿಸಿದ್ದಾನೆ. ಅಲ್ಲದೆ ಈ ಕುರಿತು ಗಂಡ ಹಾಗೂ ಮಾವನ ಮೇಲೆ ಆರೋಪ ಮಾಡಿಸಲು ವಿಷ ಕುಡಿಸಿದ್ದಾನೆ ಎನ್ನಲಾಗುತ್ತಿದೆ.ಪತಿ ಹಾಗೂ ಮಾವನ ವಿರುದ್ಧ ದೂರು ನೀಡಲು ಒತ್ತಡ ಹೇರಿದ್ದಾನೆ. ಗಂಡನ ವಿರುದ್ಧವೆ ಬಿಜೆಪಿ ಮುಖಂಡ ದೂರು ಕೊಡಿಸಿದ್ದ. ಆದರೆ ಇದೀಗ ಮಹಿಳೆ ಬಿಜೆಪಿ ಮುಖಂಡನ ವಿರುದ್ಧವೇ ತಿರುಗಿ ಬಿದ್ದಿದ್ದಾಳೆ. ಬಿಜೆಪಿ ಮುಖಂಡನ ವಿರುದ್ಧವೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ಕೊಟ್ಟಿದ್ದಾಳೆ. ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹಾಗೂ ಪುತ್ರ…

Read More

ಹಾಸನ : ಲೋಕಸಭೆ ಚುನಾವಣೆಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ವಕೀಲ ಡಿ. ದೇವರಾಜೇಗೌಡ ಪುತ್ರ ಡಿ. ಚರಣ್, ಹಾಸನದ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೇಯಸ್ ಪಟೇಲ್ ಅವರಿಗೆ ನೋಟಿಸ್ ನೀಡಿದೆ. ಹೌದು ಹಾಸನ ಸಂಸದ ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ವಕೀಲ ಡಿ ದೇವರಾಜೆಗೌಡ ಪುತ್ರ ಡಿ. ಚರಣ್ ಅರ್ಜಿ ಸಲ್ಲಿಸಿರುವ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಗೆ ಹೈಕೋರ್ಟ್ ನೋಟಿಸ್ ನೀಡಿದೆ. ನಾಮಪತ್ರ ಕ್ರಮಬದ್ಧವಾಗಿಲ್ಲವೆಂದು ಆಯ್ಕೆ ಅಸಿಂಧು ಘೋಷಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು. ಸಂಸದರಾಗಿ ಶ್ರೇಯಸ್ ಎಂ ಪಟೇಲ್ ಆಯ್ಕೆ ಅಸಿಂಧುಗೊಳಿಸುವಂತೆ ಮನವಿ ಮಾಡಲಾಗಿತ್ತು. ಹಿಂದಿನ 5 ವರ್ಷಗಳ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿಲ್ಲ. ಪ್ರಮಾಣ ಪತ್ರದಲ್ಲಿ ಸಂಪೂರ್ಣವಾದ ಮಾಹಿತಿ ನೀಡಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದರು. ಇದೀಗ…

Read More

ಬೆಂಗಳೂರು : ಮಳೆ ಹೆಚ್ಚಾಗಿದ್ದರಿಂದ ಇದೀಗ ರಾಜ್ಯದಲ್ಲಿ ಡೆಂಗ್ಯೂ ಆರ್ಭಟಿಸುತ್ತಿದೆ. ಸದ್ಯ ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಪ್ರಕರಣಗಳು 23,163 ಏರಿಕೆ ಆಗಿದೆ.ಇನ್ನೂ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು 10 ಸಾವಿರ ಗಡಿ ದಾಟಿದೆ. ಹೌದು ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 199 ಡೆಂಗ್ಯೂ ಪ್ರಕರಣಗಳು ಪತ್ತೆ ಆಗಿದ್ದು, 1182 ಸಕ್ರಿಯ ಪ್ರಕರಣಗಳಿವೆ.ಇಡಿ ದೇಶದಲ್ಲೇ ಡೆಂಗ್ಯೂ ಪ್ರಕರಣಗಳು ಹೆಚ್ಚು ಇರುವ ಸಿಟಿಗಳಲ್ಲಿ ಬೆಂಗಳೂರು ಕೂಡಾ ಒಂದಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯ ಟೆನ್ಷನ್​ಗೆ ಕಾರಣವಾಗಿದೆ. ಸಾವಿರಾರು ಗಡಿದಾಟಿ ಡೆಂಗ್ಯೂ ಪ್ರಕರಣ ಮುನ್ನುಗುತ್ತಿದೆ. ಈ ಮಧ್ಯೆ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ ​​​ಸೋಂಕು ಪತ್ತೆಯಾಗಿದೆ. ಝೀಕಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.

Read More

ಬೆಂಗಳೂರು : ಈ ಬಾರಿ ಗಣೇಶ ಹಬ್ಬ ಅದ್ದೂರಿಯಾಗಿ ಆಚರಿಸಲು ಬಿಬಿಎಂಪಿ ಬೆಂಗಳೂರಿನ ಜನರಿಗೆ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ. ಆದರೆ ಪಿಒಪಿ ಗಣೇಶನ ಮೂರ್ತಿ ಗಳಿಗೆ ನಿರ್ಬಂಧ ಹೇರಲಾಗಿದೆ. ಹೌದು ಗೌರಿ ಗಣೇಶ ಹಬ್ಬದ ಹಿನ್ನಲೆಯಲ್ಲಿ ಇಂದು ಬಿಬಿಎಂಪಿ ಸಭೆ ನಡೆಸಿದ್ದು, ಬೆಂಗಳೂರು ಜಿಲ್ಲಾಧಿಕಾರಿ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಇಲಾಖೆ, ವಾಯು ಮಾಲಿನ್ಯ ಮಂಡಳಿ ಹಿರಿಯ ಅಧಿಕಾರಿಗಳು ಚರ್ಚಿಸಿ ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ ಹೇರಿದ್ದಾರೆ. ಈ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ​​ ತುಷಾರ್ ಗಿರಿನಾಥ್, ‘ಗಣೇಶನ ಪ್ರತಿಷ್ಠಾಪನೆ ಮಾಡುವವರಿಗೆ ಯಾವುದೇ ನಿರ್ಬಂಧವಿಲ್ಲ. 24 ಗಂಟೆಯೊಳಗೆ ಅನುಮತಿ ಕೊಡಲು ಆಯಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಆದರೆ ಯಾವುದೇ ಕಾರಣಕ್ಕೂ ಪಿಒಪಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು. ಇನ್ನು ಈಗಾಗಲೇ ಪಿಒಪಿ ಗಣೇಶಗಳನ್ನ ಸೀಜ್ ಮಾಡಲಾಗಿದೆ. ಕಳೆದ ಬಾರಿ 5 ಅಡಿ ಗಣೇಶ ಮೂರ್ತಿಗಷ್ಟೇ…

Read More

ಬೆಂಗಳೂರು : ಲಾರಿ ಡಿಕ್ಕಿಯಾಗಿ ರಸ್ತೆಯಲ್ಲಿ ತೆರಳುತ್ತಿದ್ದ 11 ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹಾರೋಕ್ಯಾತನಹಳ್ಳಿ ಎಂಬಲ್ಲಿ ನಡೆದಿದೆ. ರಸ್ತೆಯಲ್ಲಿ ತನ್ನ ಪಾಡಿಗೆ ತಾನು ತೆರಳುತ್ತಿದ್ದ ಬಾಲಕ ಶಕೀಲ್ (11) ಮೃತಪಟ್ಟಿದ್ದಾನೆ. ಮೃತ ಬಾಲಕ ಪಶ್ಚಿಮ ಬಂಗಾಳ ಮೂಲದವನೆಂದು ಎಂದು ಹೇಳಲಾಗುತ್ತಿದೆ. ಗುಲಾಮ್ ನೂರ್ ಹಾಗೂ ಹಂಗೀನಾ ದಂಪತಿಯ ಮೂರನೇ ಪುತ್ರ ಶಕೀಲ್ ಎಂದು ಹೇಳಲಾಗುತ್ತಿದೆ. ಹಾರೋಕ್ಯಾತನಹಳ್ಳಿಯಲ್ಲಿ ಕೂಲಿ ಕೆಲಸ ಮಾಡಿ ದಂಪತಿಗಳು ಜೀವನ. ಸಾಗಿಸುತ್ತಿದ್ದರು. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ.ಮೃತ ಬಾಲಕನ ಪೋಷಕರ ಆಕ್ರಂದನ ಇದೀಗ ಮುಗಿಲು ಮುಟ್ಟಿದೆ.ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ : ಸಾಮಾಜಿಕ ಜಾಲತಾಣಗಳನ್ನು ಎಷ್ಟು ಕಡಿಮೆ ಬಳಸುತ್ತೇವೆಯೋ ಅಷ್ಟೇ ಒಳ್ಳೆಯದು. ಅತಿಯಾದರೆ ಅಮೃತವು ವಿಷ ಎಂಬಂತೆ ಇದೀಗ ಪತ್ನಿಯ ರೀಲ್ಸ್ ಹುಚ್ಚಾಟಕ್ಕೆ ಬೇಸತ್ತ ಪತಿಯೊಬ್ಬ, ಕತ್ತಿಯಿಂದ ಪತ್ನಿಯ ಕತ್ತುಹಿಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೌದು ರೀಲ್ಸ್ ಹುಚ್ಚಾಟಕ್ಕೆ ಬೇಸತ್ತು ಹೆಂಡತಿಯನ್ನು ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕತ್ತಿಯಿಂದ ಕಡಿದು ಪತ್ನಿಯ ಕೊಲೆಗೈದ ಪತಿ ಕಿರಣ್ ಉಪಾಧ್ಯಾಯ, ಪತ್ನಿ ಜಯಶ್ರೀ (28) ಹತ್ಯೆಯಾಗಿದೆ. ಹತ್ಯೆ ಮಾಡಿ ಮನೆಯಲ್ಲಿದ್ದ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ನಟ ದರ್ಶನ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಹೀಟ್ ಸಲ್ಲಿಸಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ನಟ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ. ಹೈದರಾಬಾದ್ ನಿಂದ FSL ವರದಿ ಬಂದ ತಕ್ಷಣ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.ರೇಣುಕಾ ಸ್ವಾಮಿ ಕೊಲೆ ಕೇಸಿನ ವರದಿ ಸಿಕ್ಕಿದೆ ಎಂದು ತಿಳಿಸಿದರು. ರೇಣುಕಾ ಸ್ವಾಮಿ ಕೊಲೆ ಕೇಸಿನ ವರದಿ ಸಿಕ್ಕಿದೆ. ಬೆಂಗಳೂರು ಎಫ್ ಎಸ್ ಎಲ್ ನಿಂದ ವರದಿ ಬಂದಿದೆ. ಇದೀಗ ಹೈದರಾಬಾದ್ ನಿಂದ ಎಪಿಎಸ್ಎಲ್ ವರದಿ ಬರಬೇಕಿದೆ. ಹಾಗಾಗಿ ಅದು ಬಂದ ತಕ್ಷಣ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಮಾಹಿತಿ ನೀಡಿದರು.

Read More

ಹುಬ್ಬಳ್ಳಿ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ ಎಚ್ ಡಿ ಕುಮಾರಸ್ವಾಮಿ ವಿರುದ್ಧವು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಎಂದು ಕಾಂಗ್ರೆಸ್ ಆಗ್ರಹಿಸಿದ ಬೆನ್ನಲ್ಲೆ ಇದೀಗ HD ಕುಮಾರಸ್ವಾಮಿ ಅವರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಮುಗಿಸಲು ಬಿಜೆಪಿಯಿಂದಲೇ ನಡೆಯುತ್ತಿರುವ ಯತ್ನ ಇದು. ಜೆಡಿಎಸ್‌ನ್ನು ಮುಗಿಸಲು ಬಿಜೆಪಿಯಿಂದಲೇ ಪ್ಲ್ಯಾನ್ ನಡೆಯುತ್ತಿದೆ. ಯಾರ್ಯಾರು ನಾಯಕರಿದ್ದಾರೆ ಅವರ ವಿರುದ್ಧ ಪ್ರಾಸಿಕ್ಯೂಷನ್‌ ಕೊಡಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ ಎಂದು ಅವರು ಆರೋಪಿಸಿದರು. ಎಚ್‌ಡಿಕೆಯವರ ಬಳಿ ಗಣಿ ಇಲಾಖೆ ಇದೆ. ಕುಮಾರಸ್ವಾಮಿ ರಾಜೀನಾಮೆ ಕೊಡಬೇಕು. ಕುಮಾರಸ್ವಾಮಿ ಅವರ ತಲೆದಂಡ ರಾಜ್ಯಪಾಲರ ತೀರ್ಮಾನದಿಂದ ಆಗಬಹುದು. ಬಹುಷಃ ಬಿಜೆಪಿಯವರು ಕುಮಾರಸ್ವಾಮಿ ತೆಗೆಯೋದಕ್ಕೆ ಮಾಡಿರೋ ಪ್ಲ್ಯಾನ್ ಮಾಡಿದ್ದಾರೆ. ಮೊದಲೇ ಬಿಜೆಪಿ ಜೆಡಿಎಸ್ ಮುಗಿಸಲು ಪ್ಲ್ಯಾನ್ ಮಾಡಿದ್ದಾರೆ ಅಂತಾ ನನಗೆ ಅನಿಸತ್ತೆ. ಕುಮಾರಸ್ವಾಮಿ ಅವರನ್ನು ತೆಗೆಯುವ ಸನ್ನಿವೇಶಕ್ಕೆ ಬಿಜೆಪಿಯವರು ತೆಗೆದುಕೊಂಡು ಹೋಗುತ್ತಿದ್ದಾರೆ…

Read More