Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಅಂತಿಮ ದರ್ಶನಕ್ಕೆ ಎಂದು ಬಂದಿದ್ದ ವ್ಯಕ್ತಿಯೊಬ್ಬ ಸ್ನೇಹಿತನಿಂದಲೇ ಕೊಲೆಯಾಗಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್ ನಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಸ್ನೇಹಿತ ಶರತ್ ಗೆ ಚಾಕು ಇರಿದು ಆಟೋ ಚಾಲಕ ಶರತ್ ಎಂಬಾತ ಕೊಂದಿದ್ದಾನೆ. ಅಂಜನಪ್ಪ ಗಾರ್ಡನ್ ನಲ್ಲಿ ಅವರಿಬ್ಬರೂ ಸಾವಿನ ಮನೆಗೆ ಬಂದಿದ್ದರು. ಅಂತಿಮ ದರ್ಶನ ಪಡೆದು ಮುಂಜಾನೆ ತೆಳುವಾಗ ಶರತ್ ಬೈದಿದ್ದಾನೆ. ಯಾಕೆ ಬೈತಿಯಾ ಎಂದು ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸ್ನೇಹಿತ ಗೆ ಆಟೋ ಚಾಲಕ ಶರತ್ ಚಾಕುವಿನಿಂದ ತನ್ನ ಸ್ನೇಹಿತ ಶರತ್ ಗೆ ಇರಿದಿದ್ದಾನೆ. ಗಾಯಳು ಶರತ್ ನನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಶರತ್ ಮೃತಪಟ್ಟಿದ್ದಾನೆ.ಇದೀಗ ಆಟೋ ಚಾಲಕ ಪರರೋಯಾಗಿದ್ದು, ಪೊಲೀಸರು ಆತನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.ಕಾಟನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಈಗಾಗಲೇ ಅವರು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 29ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ಇದರ ಮಧ್ಯ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ ಎದೆಗುಂದಬೇಡಿ ಎಂದು ಶಾಸಕರು ಒಕ್ಕೋರೋಲಿನ ಬೆಂಬಲ ನೀಡಿ ನೈತಿಕ ಸ್ಥೈರ್ಯ ತುಂಬಿದರು. ಹೌದು ಇಂದು ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಸಿಎಂ ಸಿದ್ದರಾಮಯ್ಯಗೆ ಒಕ್ಕೋರಲ ಬೆಂಬಲ ಸೂಚಿಸಿದರು. CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ನೈತಿಕ ಸ್ಥೈರ್ಯ ತುಂಬಿದರು.ಈ ವೇಳೆ ಸಿಎಂ ಸಿದ್ದರಾಮಯ ಅವರು ಬೆಂಬಲ ನೀಡಿದ ಸಚಿವರಿಗೆ, ಶಾಸಕರಿಗೆ ನನ್ನ ಪರವಾಗಿ ನೀವು ಹೋರಾಡುತ್ತಿದ್ದೀರಿ ನಿಮಗೆಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ಇಂದು ನಟಿ ರಚಿತಾ ರಾಮ್ ಅವರು ಭೇಟಿ ಮಾಡಿದರು. ಈ ವೇಳೆ ನಟ ದರ್ಶನವರು ನಾನು ಆರಾಮಾಗಿ ಇದ್ದೇನೆ ಎಂದು ತಿಳಿಸಿದ್ದು, ಈ ವೇಳೆ ಕೆಲ ಹೊತ್ತು ಸಿನಿಮಾ ರಂಗದ ಕುರಿತು ದರ್ಶನ್ ಹಾಗೂ ರಚಿತಾ ರಾಮ್ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಜೈಲಿನಲ್ಲಿ ನಟ ದರ್ಶನ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜನನ್ನು ರಾಜನ ರೀತಿ ನೋಡೋಕೆ ಇಷ್ಟ. ದರ್ಶನ್ ರನ್ನು ನೋಡಿದ ಕೂಡಲೇ ನಾವು ಭಾವುಕರಾದ್ವಿ.ಅವರನ್ನು ಈ ರೀತಿ ನೋಡಕ್ಕೆ ನನಗೆ ಇಷ್ಟ ಇರಲಿಲ್ಲ ಸಿನೆಮಾ ರಂಗಕ್ಕೆ ನನ್ನನ್ನು ಪರಿಚಯಿಸಿದ್ದು ದರ್ಶನ ಸರ್. ಅವರ ಬ್ಯಾನರ್ ಇಂದಾನೆ ನಾನು ರಚಿತಾ ರಾಮ್ ಆಗಿದ್ದು. ಇಲ್ಲ ಅಂದಿದ್ರೆ ಬಿಂದ್ಯಾ ರಾಮ್ ಆಗಿಯೇ ಉಳಿಯುತ್ತಿದ್ದೆ ಎಂದರು. ದರ್ಶನ್ ಸರ್ ತುಂಬಾ ಆರೋಗ್ಯವಾಗಿದ್ದಾರೆ. ಅವರನ್ನು ಈ ರೀತಿ ನೋಡೋದಕ್ಕೆ ತುಂಬಾ…
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಇನ್ನು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು.ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಇಂದು ಲೋಕಾಯುಕ್ತ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಇದೀಗ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಅಂತ್ಯವಾಗಿದೆ. ವಿಚಾರಣೆ ಅಂತ್ಯವಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಸಮನ್ಸ್ ಕೊಟ್ಟಿದ್ದರು. ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿದ್ದರಿಂದ ಬರಲಿಕ್ಕೆ ಆಗಲಿಲ್ಲ. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಅವರು ತಿಳಿಸಿದರು. ಕೆಲವು ದಾಖಲೆಗಳನ್ನು ಕೇಳಿದ್ದಾರೆ, ಕೊಡುತ್ತೇನೆ ಅಂತ ಹೇಳಿದ್ದೇನೆ. ಎರಡು ಮೂರು ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.ವಿಚಾರಣೆ ನಡೆಸಲು ಮತ್ತೆ ನೋಟಿಸ್ ಕೊಡುವುದಾಗಿ ಹೇಳಿದ್ದಾರೆ. ಲೋಕಾಯುಕ್ತ ಪೊಲೀಸರಿಗಿಂತ ಸಿಬಿಐ ಅಧಿಕಾರಿಗಳೇ ಪರವಾಗಿಲ್ಲಾ ಎಂದು ಅವರು ಇದೆ ವೇಳೆ ತಿಳಿಸಿದರು. ಏನೇನೋ ಪ್ರಶ್ನೆಗಳನ್ನು ಕೇಳಿ ಹಿಂಸೆ ಕೊಡುತ್ತಿದ್ದಾರೆ. ಸಿಬಿಐ ಅಧಿಕಾರಿಗಳು…
ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮಣ ವರ್ಗಾವಣೆ ಆಗಿದೆ ಎಂದು ಡೆತ್ ನೋಟ್ ಬರೆದಿಟ್ಟು ನಿಗಮದ ಅಧಿಕ ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಅಧಿಕಾರಿಗಳು ಶಿವಮೊಗ್ಗ ನ್ಯಾಯಾಲಯಕ್ಕೆ ಸುಮಾರು 300 ಪುಟಗಳಷ್ಟು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕ್ಷಕ ಚಂದ್ರಶೇಖರ್ ಅವರು ಅವ್ಯವಹಾರದ ಕುರಿತು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಆತ್ಮಹತ್ಯೆ ಕುರಿತು ಚಂದ್ರಶೇಖರನ್ ಗೆ ಅಧಿಕಾರಿಗಳದ ಪದ್ಮನಾಭ ಮತ್ತು ಪರಶುರಾಮ್ ಅವರಿಂದ ಒತ್ತಡ ಇತ್ತು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಪದ್ಮನಾಭ ಹಾಗೂ ಪರಶುರಾಮ್ ಒತ್ತಡದಿಂದ ಒತ್ತಡದಿಂದ ಮನನೊಂದು ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೋರ್ಟ್ ಗೆ ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 300 ಪುಟಗಳ ಚಾರ್ಜ್ ಶೀಟ್ ಅನ್ನು ಅಧಿಕಾರಿಗಳು ಶಿವಮೊಗ್ಗ ಕೋರ್ಟಿಗೆ ಸಲ್ಲಿಸಿದ್ದಾರೆ. ಇನ್ನು ಈ ಪ್ರಕರಣದ ಕುರಿತಂತೆ ಶಾಸಕ ಬಿ…
ಹುಬ್ಬಳ್ಳಿ : ಕಳೆದ ಕೆಲವು ತಿಂಗಳುಗಳ ಹಿಂದೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ್ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಡೀ ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಇದೀಗ ನೇಹಾಳಂತೆ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಅಪ್ರಾಪ್ತ ಬಾಲಕಿಯು ಶಾಲೆಗೆ ಹೋಗುವಾಗ ಆರೋಪಿ ಅಬ್ಬಾಸ್ ಸ್ನೇಹ ಮಾಡಿಕೊಂಡಿದ್ದಾನೆ. ನಂತರ ಕೆಲ ಬಾರಿ ಗಾರ್ಡನ್ಗೂ ಕರೆದುಕೊಂಡು ಹೋಗಿದ್ದಾನೆ. ಜೂನ್ 22 ರಂದು ಶಾಲೆಯಿಂದ ಮನೆಗೆ ಬಿಡುವುದಾಗಿ ಹೇಳಿ ರೇವಡಿಹಾಳ ಬ್ರಿಡ್ಜ್ ಹತ್ತಿರ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಾಸಿದ್ದಾನೆ ಎಂದು ಬಾಲಕಿಯ ಪೋಷಕರು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಆಗಸ್ಟ್ 18ರಂದು ಬಾಲಕಿ ಮನೆ ಬಳಿ ಬಂದು ಅಬ್ಬಾಸ್ ಗಲಾಟೆ ಮಾಡಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ಎಳೆದಾಡಿದ್ದಾನೆ. ಈ ವೇಳೆ ಬಾಲಕಿ ಪೋಷಕರಿಗೆ ಬೆದರಿಕೆ ಹಾಕಿದ್ದಾನೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿ ಅಬ್ಬಾಸ್ ನ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ರೈಲಿನಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಇಂದು ನಟಿ ರಚಿತಾರಾಮ್ ಅವರು ಆಗಮಿಸಿದ್ದಾರೆ. ಹೌದು ಬೆಂಗಳೂರಿನ ಪರಪ್ಪನ ಅಗ್ರಹಾರ ಜಿಲ್ಲೆನಲ್ಲಿ ನಟ ದರ್ಶನ್ ಅವರು ಕಳೆದ ಎರಡು ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿದ್ದಾರೆ. ಈ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪುತ್ರ ಹಾಗೂ ಸಹೋದರ ಸೇರಿದಂತೆ ಚಿತ್ರರಂಗದ ಹಲವು ನಟ ನಟಿಯರು ನಟ ದರ್ಶನ್ ಅವರನ್ನು ಇತ್ತೀಚಿಗೆ ಭೇಟಿ ಮಾಡಿದ್ದರು. ಇದೀಗ ನಟಿ ರಚಿತಾ ರಾಮ್ ಅವರು ಕೂಡ ನಟ ದರ್ಶನ್ ಅವರನ್ನು ಭೇಟಿ ಮಾಡಲು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ದರ್ಶನ್ ಆಪ್ತಟ ಸಚ್ಚಿದಾನಂದ ಜೊತೆಗೆ ನಟಿ ರಚಿತಾ ರಾಮ್ ಆಗಮಿಸಿದ್ದಾರೆ. ಅಲ್ಲದೆ ಕಂಠೀರವ ಸ್ಟುಡಿಯೋ ಮಾಜಿ ಅಧ್ಯಕ್ಷ ರುದ್ರೇಶ್ ಸಹ ಈ ವೇಳೆ ದರ್ಶನ ಅವರನ್ನು ಭೇಟಿ ಮಾಡಲು ಜೈಲಿಗೆ ಬಂದಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಕರಣದ A1 ಆರೋಪಿ ಪವಿತ್ರ ಗೌಡ ಅವರ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಹೆಚ್ 55 ಕೋರ್ಟ್ ಆಗಸ್ಟ್ 27ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಳೆದ ಎರಡು ತಿಂಗಳಿನಿಂದ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳು ಜೈಲಿನಲ್ಲಿದ್ದಾರೆ. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರ ಗೌಡ ಅವರು ಇತ್ತೀಚೆಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯವು ಆಗಸ್ಟ್ 27ಕ್ಕೆ ಅರ್ಜಿ ವಿಚಾರಣೆ ಮಂದೂಡಿ ನ್ಯಾಯಾಧೀಶ ಜೈ ಶಂಕರ್ ಆದೇಶ ಹೊರಡಿಸಿದ್ದಾರೆ. ಇದೆ ವೇಳೆ ಎಸ್ ಪಿ ಪಿ ಪವಿತ್ರ ಗೌಡ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದು, ಜಾಮೀನು ನೀಡಿದಂತೆ ಎಸ್ ಟಿ ಪಿ ಆಕ್ಷೇಪಣೆ ಸಲ್ಲಿಸಿದೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಗುರುವಾರ ದರ್ಶನ್ರ ಅಭಿಮಾನಿಯೊಬ್ಬ ಕೊರಳಿಗೆ ದರ್ಶನ್ ಹಾಕಿಕೊಂಡು ಜೈಲಿನ ಬಳಿ ಬಂದು ದರ್ಶನ್ ಅನ್ನು ಬಿಡುಗಡೆ ಮಾಡುವಂತೆ ಗಲಾಟೆ ಮಾಡಿದ್ದಾನೆ. ಹೌದು ಪರಪ್ಪನ ಅಗ್ರಹಾರ ಜೈಲಿನ ಬಳಿ ನಟ ದರ್ಶನ್ ಅಭಿಮಾನಿ ಗಲಾಟೆ ಮಾಡಿದ್ದು, ಜೈಲಿನಿಂದ ದರ್ಶನ್ ಬಿಡುಗಡೆ ಮಾಡುವಂತೆ ಅಭಿಮಾನಿ ಒಬ್ಬ ಆಗ್ರಹಿಸಿದ್ದಾನೆ. ಕೊಲೆ ಆರೋಪಿ ನಟ ದರ್ಶನ್ ಫೋಟೋ ಹಿಡಿದು ರವಿಕುಮಾರ್ ಎಂಬ ಅಭಿಮಾನಿ ಪರಪ್ಪನ ಅಗ್ರಹಾರ ಜೈಲಿನ ಬಳಿ ಬಂದಿದ್ದ. ರವಿಕುಮಾರ್ ಕರುನಾಡ ಯುವ ಸೇನೆ ಅಧ್ಯಕ್ಷನಾಗಿದ್ದು, ಕೊಲೆ ಆರೋಪಿ ದರ್ಶನ್ ಬಿಡುಗಡೆ ಮಾಡುವಂತೆ ಉರುಳು ಸೇವೆ ಮಾಡುತ್ತಿದ್ದ ಎನ್ನಲಾಗುತ್ತಿದೆ. ಉರುಳು ಸೇವೆ ಮಾಡಲು ಮುಂದಾದಾಗ ಪೊಲೀಸರು ರವಿಕುಮಾರ್ ನನ್ನ ಅಡ್ಡಗಟ್ಟಿದ್ದಾರೆ. ಈ ವೇಳೆ ರವಿಕುಮಾರ್ ಜೈಲಿನ ಬಳಿಯೆ ತೆಂಗಿನಕಾಯಿ ಕೂಡ ಒಡೆಯಲು ಮುಂದಾಗಿದ್ದು, ಪೊಲೀಸರು ಆತನನ್ನು ತಡೆದಿದ್ದಾರೆ. ದರ್ಶನ್ ಯಾವುದೇ ತಪ್ಪು ಮಾಡಿಲ್ಲ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾನೆ.ರವಿಕುಮಾರ್ ನಾನು…
ಬೆಳಗಾವಿ : ಇಡೀ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು. ಲೈಂಗಿಕ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು. ಅದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಡೆಸಿದರು ಈ ಒಂದು ಅತ್ಯಾಚಾರ ಘಟನೆಗಳು ನಿಲ್ಲುತ್ತಿಲ್ಲ. ಇದೀಗ ರಾಜ್ಯದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ 10 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಹೌದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.10 ರೂಪಾಯಿ ಚಾಕ್ಲೆಟ್ ಆಸೆ ತೋರಿಸಿ ವೃದ್ಧನು ಬಾಲಕಿಯ ಖಾಸಗಿ ಅಂಗಗಳನ್ನು ಮುಟ್ಟಿ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯೂ ಪೋಷಕರಿಗೆ ತಿಳಿಸಿದ್ದಾಳೆ. ಆಗಸ್ಟ್ 18ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ವೃದ್ಧನನ್ನು ಬಂಧಿಸಿದ್ದಾರೆ.