Subscribe to Updates
Get the latest creative news from FooBar about art, design and business.
Author: kannadanewsnow05
ಮನೆಯ ಮಗನಂತೆ ನನ್ನ ನೋಡುತ್ತಿದ್ದರು : ಎಸ್.ಎಂ ಕೃಷ್ಣ ಕುರಿತು ಮಾತನಾಡುತ್ತಲೆ, ಕಂಬನಿ ಮಿಡಿದ ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಸ್ಎಂ ಕೃಷ್ಣ ಅವರು ನನ್ನನ್ನು ಮಗನಂತೆ ಕಾಣುತ್ತಿದ್ದರು. ಅವರ ಮನೆಯ ಮಕ್ಕಳಂತೆ ನನ್ನನ್ನು ಕಂಡಿದ್ದಾರೆ ಎಂದು ಅವರ ಕುರಿತು ಮಾತನಾಡುತ್ತಲೇ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ, ಡಿಸಿಎಂ ಡಿಕೆ ಶಿವಕುಮಾರ್, ನನ್ನ ರಾಜಕಾರಣದ ಮೊದಲ ಗುರು. ಅವರ ಮತ್ತು ನನ್ನ ಒಡನಾಟದ ಇತಿಹಾಸವನ್ನು ಈಗ ನಾನು ಹೇಳುವುದಿಲ್ಲ. ನಾನು ಏನಾದ್ರೂ ತಪ್ಪು ಮಾಡಿದರೆ ಬಹಳ ನೊಂದು ಮಾತನಾಡುತ್ತಿದ್ದರು ಎಂದು ತಿಳಿಸಿದರು. ಬೇರೆಯವರಿಗೂ ನನಗೂ ಬಹಳ ವ್ಯತ್ಯಾಸವಿದೆ. ನಾನು ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ.ಇವತ್ತು ಬೆಳಗ್ಗೆ 3 ಗಂಟೆಗೆ ಪುತ್ರಿ ಕರೆ ಮಾಡಿ ವಿಚಾರ ತಿಳಿಸಿದಳು. ನಮ್ಮ ಕುಟುಂಬಕ್ಕೆ ಇದು ದೊಡ್ಡ ಆಘಾತ. ನಾನು ಅವರ ಕುಟಂಬದ ಒಬ್ಬ ಸದಸ್ಯ. ರಾಜಕಾರಣದಲ್ಲಿ ನಾನು ಬೆಳೆದಿದ್ದು, ಅವರು ನನ್ನನ್ನು ಬೆಳೆಸಿದ್ದು ದೊಡ್ಡ ಇತಿಹಾಸವಿದೆ ಎಂದರು.
ಬೆಂಗಳೂರು : ನಿನ್ನೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ಆರಂಭವಾಗಿದ್ದು, ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಕ್ಫ್, ಮುಡಾ ಹಗರಣ ಹಾಗೂ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ವಿಷಯವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಿದವು. ಇದರ ಬೆನ್ನಲ್ಲೇ ಕಳೆದ ಬಿಜೆಪಿ ಅವಧಿಯಲ್ಲಿ ಎಷ್ಟು ಬಾಣಂತಿಯರು ಸಾವನಪ್ಪಿದ್ದಾರೆ ಎನ್ನುವುದನ್ನು ಸಿಎಂ ಕಚೇರಿ ಮಾಹಿತಿ ಬಹಿರಂಗಗೊಳಿಸಿದೆ. ಹೌದು ಕಳೆದ 5 ವರ್ಷಗಳಲ್ಲಿ ಕರ್ನಾಟಕದಲ್ಲಿ 3,364 ಬಾಣಂತಿಯರು ಸಾವಿಗೀಡಾಗಿರುವುದಾಗಿ ಸಿಎಂ ಕಚೇರಿ ಮಾಹಿತಿ ನೀಡಿದೆ. ಈ ಸಂಬಂಧ ಅಂಕಿಅಂಶ ನೀಡಿರುವ ಮುಖ್ಯಮಂತ್ರಿಗಳ ಕಚೇರಿ 2019-20ರಿಂದ 2024-25 ನವೆಂಬರ್ವರೆಗೆ ರಾಜ್ಯದಲ್ಲಿ ಒಟ್ಟು 3,364 ಬಾಣಂತಿಯರು ಮೃತಪಟ್ಟಿರುವುದು ವರದಿಯಾಗಿದೆ ಎಂದು ತಿಳಿಸಿದೆ. ಸದನದಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಲು ಪ್ರತಿಪಕ್ಷಗಳು ಮುಂದಾಗಿವೆ. ಈ ಮಧ್ಯೆ ಮುಖ್ಯಮಂತ್ರಿ ಕಚೇರಿ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿನ ಬಾಣಂತಿಯರ ಸಾವುಗಳ ಅಂಕಿಅಂಶ ನೀಡಿದೆ. ಆ ಮೂಲಕ ಬಿಜೆಪಿ ಅವಧಿಯಲ್ಲೂ ಬಾಣಂತಿಯರ ಸಾವು ಹೆಚ್ಚಿರುವ ಬಗ್ಗೆ ಅಂಕಿಅಂಶ ಬಹಿರಂಗ ಪಡಿಸಿದೆ. ಅದರಂತೆ 2019-20ರಲ್ಲಿ ರಾಜ್ಯದಲ್ಲಿ ಒಟ್ಟು 662…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಇದೇ ವೇಳೆ ನಾಳೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ. ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ನಾಳೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ…
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅಧ್ಯಕ್ಷತೆಯಲ್ಲಿ ಕಾರ್ಯ ಕಲಾಪಗಳ ಸಲಹಾ ಸಮಿತಿಯ ತುರ್ತು ಸಭೆ ನಡೆಸಲಾಗುತ್ತಿದೆ. ಹೌದು ಸುವರ್ಣ ಸೌಧದಲ್ಲಿ ಸ್ಪೀಕರ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಸಲಾಗುತ್ತಿದೆ. ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ಅಧ್ಯಕ್ಷತೆಯಲ್ಲಿ ಈ ಒಂದು ಸಭೆ ನಡೆಸಲಾಗುತ್ತಿದೆ. ಮೀಟಿಂಗ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್, ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಸೇರಿದಂತೆ ಬಿಎಸಿ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ಯದ ಸರ್ಕಾರಿ ರಜೆ ಇರುತ್ತದೆ. ಅಲ್ಲದೆ ನಾಳೆ ಬೆಳಿಗ್ಗೆ 8 ಗಂಟೆವರೆಗೆ ಅಂತಿಮ ದರ್ಶನ ಕೆ ವ್ಯವಸ್ಥೆ ಮಾಡಲಾಗಿದೆ. ಅದಾದ ನಂತರ ಅವರ ಹುಟ್ಟೂರಿಗೆ ಪಾರ್ಥಿವ ಶರೀರ ಸ್ಥಳಾಂತರಿಸಲಾಗುತ್ತದೆ. ಅಲ್ಲಿನ ಸ್ಥಳೀಯ ಜನರಿಗೆ 12 ರಿಂದ 3 ಗಂಟೆಯವರೆಗೆ ಮಂಡ್ಯ ಮದ್ದೂರು ಸುತ್ತಮುತ್ತಲಿನ ಅವರ ಅಭಿಮಾನಿಗಳಿಗೆ, ಅಂತಿಮ ನಮನ ಸಲ್ಲಿಸೋಕೆ ಅವಕಾಶ ಇರುತ್ತದೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.
ಬೆಂಗಳೂರು: ಮಾಜಿ ಸಿಎಂ ಎಸ್. ಎಂ. ಕೃಷ್ಟ ಅವರ ನಿಧನಕ್ಕೆ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ರಾಜ್ಯದ ಧೀಮಂತ ನಾಯಕ ಹಾಗೂ ರಾಜಕೀಯ ಮುತ್ಸದ್ದಿಯಾದ ಅವರು ಬೆಂಗಳೂರು ಭಾರತದ ತಂತ್ರಜ್ಞಾನದ ರಾಜಧಾನಿಯಾಗಿ ಬೆಳೆಯಲು ಅಡಿಪಾಯ ಹಾಕಿದ ಮಹಾನ್ ವ್ಯಕ್ತಿ ಎಂದಿದ್ದಾರೆ. ಅವರ ಜೊತೆ ದಶಕಗಳ ಸ್ನೇಹ ಹೊಂದಿದ್ದ ನಾನು, ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ ಕ್ಷಣಗಳು ಎಂದೆಂದಿಗೂ ಅವಿಸ್ಮರಣೀಯ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ರಾಮಲಿಂಗಾ ರೆಡ್ಡಿ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಎಂದು ತಿಳಿಸಿದರು.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ, ಎಸ್ ಎಂ ಕೃಷ್ಣ ಅವರು ತಡರಾತ್ರಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಅಗಲಿದ ನಾಯಕನಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಎಸ್ಎಮ್ ಕೃಷ್ಣ ಅವರ ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಹಲವು ಗಣ್ಯರು ರಾಜಕೀಯ ನಾಯಕರು ಅವರ ಅಂತಿಮ ದರ್ಶನ ಪಡೆದು ಸಂತಾಪಸೂಚಿಸಿದರು.ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅವರ ಕಾಲಿಗೆ ನಮಿಸಿ ಕಣ್ಣೀರು ಹಾಕಿ ಸಂತಾಪ ಸೂಚಿಸಿದರು. ಏಕೆಂದರೆ ಡಿ ಕೆ ಶಿವಕುಮಾರ್ ಅವರ ರಾಜಕೀಯ ಗುರು ಎಸ್ ಎಂ ಕೃಷ್ಣ ಅವರು ಆಗಿದ್ದರು. ಅವರ ಗರಡಿಯಲ್ಲಿ ಡಿಕೆ ಶಿವಕುಮಾರ್ ಅವರು ರಾಜಕೀಯವಾಗಿ ಬಹು ಎತ್ತರಕ್ಕೆ ಬೆಳೆದಿದ್ದಾರೆ. ಕಾಲಿಗೆ ನಮಸ್ಕರಿಸುವ ವೇಳೆ ಬಿಕ್ಕಿ ಬಿಕ್ಕಿ ಅತ್ತಿರುವ ದೃಶ್ಯ ಕಂಡು ಬಂದಿತು. ಇದೇ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚೆಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು ಶಾಸಕರು ಭಾಗಿಯಾಗಿದ್ದರು. ಈಗಾಗಲೇ ಪ್ರಧಾನ ಮಂತ್ರಿ…
ಕಲಬುರ್ಗಿ : ಯಡ್ರಾಮಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ ಪ್ರಕರಣ ಖಂಡಿಸಿ ಇಂದು ಕಲಬುರಗಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಆಂದೋಲಾ ಸಿದ್ದಲಿಂಗ ಸ್ವಾಮಿಜಿಯವರು, ಕಾಂಗ್ರೆಸ್ ಮುಖಂಡರೇ ಒಂದು ನೆನಪಿರಲಿ, ನಿಮ್ಮ ಮನೆಯ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಆದ್ರೂ ಕಾಂಗ್ರೆಸ್ ಪಕ್ಷ ನಿಮ್ಮ ನೆರವಿಗೆ ಬರಲ್ಲ ಎಂದು ಎಚ್ಚರಿಕೆ ನೀಡಿದರು. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಿರೇಮಠ ಘಟನೆಯೇ ಇದಕ್ಕೆ ಜೀವಂತ ಸಾಕ್ಷಿ. ನೇಹಾ ಹಿರೇಮಠ ತಂದೆ ಕಾಂಗ್ರೆಸ್ನಲ್ಲಿದ್ದವರು ಎಂಬುದು ಗೊತ್ತೇ ಇದೆ. ನಾಳೆ ಆ ಪರಿಸ್ಥಿತಿ ನಿಮಗೂ ಬರಬಹುದು. ಕಾಂಗ್ರೆಸ್ ಮತ ಬ್ಯಾಂಕ್ ಗೆ ಆ ಸಮುದಾಯವನ್ನು ಏನು ಮಾಡಿದರೂ ಸಹಿಸಿಕೊಳ್ಳುತ್ತದೆ ಹೊರತು ನೀವು ನಂಬಿದ ಪಕ್ಷ ನಿಮ್ಮ ಸಹಾಯಕ್ಕೆ ಬರುವುದಿಲ್ಲ. ಕಾಂಗ್ರೆಸ್ ದಲಿತ ಪರ ಅಂತಾ ಮಾತುಮಾತಿಗೆ ಹೇಳ್ತಾರೆ. ನಿಜಕ್ಕೂ ಕಾಂಗ್ರೆಸ್ ದಲಿತ ಪರವಾಗಿ ಯಾವುದೇ ಕಾಳಜಿ ಇಲ್ಲ. ಭಾರತವೂ ಬಾಂಗ್ಲಾ, ಪಾಕಿಸ್ತಾನ ಆಗುತ್ತಿದೆ ಎಂದು ಕೆಲವು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ. ಭಾರತ ಬಾಂಗ್ಲಾ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಂತರ ಜಾಮೀನು ಪಡೆದುಕೊಂಡು ನಟ ದರ್ಶನ್ ಬಿಡುಗಡೆಯಾಗಿದ್ದಾರೆ. ಆದರೆ 6 ವಾರ ಕಳೆದರೂ ಕೂಡ ಅವರು ಬೆನ್ನು ನೋವಿನ ಸಮಸ್ಯೆಗೆ ಸರ್ಜರಿ ಮಾಡಿಸಿಲ್ಲ. ಡಿಸೆಂಬರ್ 11ರಂದು ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದೆ. ಹಾಗಾಗಿ ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಬಳಿಕ ನ್ಯಾಯಮೂರ್ತಿಗಳಾದ ಎಸ್ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದರು. ಈಗಾಗಲೆ ಬೆನ್ನು ನೋವಿನ ಸಮಸ್ಯೆ ತಿಳಿಸಿ ನಟ ದರ್ಶನ್ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 11ರಂದು ಅವರ ಮಧ್ಯಂತ ಜಾಮೀನು ಅವಧಿ ಮುಕ್ತಾಯವಾಗಲಿದೆ. ಹಾಗಾಗಿ ಕಳೆದ 5 ವಾರಗಳಿಂದ ಅವರು ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಯಾವುದೇ ಬೆನ್ನುನೋವಿನ ಶಸ್ತ್ರ ಚಿಕಿತ್ಸೆಗೂ ಕೂಡ ಅವರು ಒಳಗಾಗಿಲ್ಲ. ಹೀಗಾಗಿ ಇದೀಗ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವಿನ ಕಾರಣ ತಿಳಿಸಿ ಬಳ್ಳಾರಿ ಜೈಲಿನಿಂದ ಮಧ್ಯಂತರ ಜಾಮೀನು ಪಡೆದುಕೊಂಡ ನಟ ದರ್ಶನವರು ಬೆಂಗಳೂರಿನ ಬಿ ಜಿ ಎಸ್ ಆಸ್ಪತ್ರೆಗೆ ಸರ್ಜರಿ ಮಾಡಿಸಿಕೊಳ್ಳಲು ದಾಖಲಾಗಿದ್ದರು. ಆದರೆ ಆರು ವಾರಗಳ ಕಳೆದರೂ ಕೂಡ ನಟ ದರ್ಶನ್ ಇದುವರೆಗೂ ಸರ್ಜರಿಗೆ ಒಳಗಾಗಿಲ್ಲ. ಇದೀಗ ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಡಿಸೆಂಬರ್ 11 ರಂದು ನಟ ದರ್ಶನ್ ಅವರಿಗೆ ಸರ್ಜರಿ ಮಾಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು.ಈ ವೇಳೆ ಸರ್ಕಾರದ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಅವರ ಸುದೀರ್ಘವಾಗಿ ವಾದ ಮಂಡಿಸಿದರು. ಪ್ರಸನ್ನಕುಮಾರ್ ವಾದ ಅಂತ್ಯವಾದ ಬಳಿಕ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದು, ದರ್ಶನ್ ನಡವಳಿಕೆ ಪರಿಗಣಿಸಬೇಕು ಎಂದು ಎಸ್ ಪಿ ಪಿ ವಾದಿಸಿದ್ದಾರೆ. ಸರ್ಜರಿಗಾಗಿ ಮಧ್ಯಂತರ ಜಾಮೀನು ಪಡೆದು ಮಾಡಿಸಿಲ್ಲವೆಂದು ವಾದಿಸಿದ್ದಾರೆ.…












